Friday 30 June 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 403-409 ಪೊನ್ನಂಗಾಲತಮ್ಮೆ ಮತ್ತು ಆರು ಸಹೋದರರು © ಡಾ ಲಕ್ಷ್ಮೀ ಜಿ ಪ್ರಸಾದ

ಕೊಡಗಿನಲ್ಲಿ ಪೊನ್ನಂಗಾಲತಮ್ಮೆ ಮತ್ತು ಆರು ಸಹೋದರ ದೈವಗಳ ಆರಾಧನೆ ಇದೆ .
ಕೇರಳದಲ್ಲಿ ಆರು ಜನ ಸಹೋದರರು ಮತ್ತು ಒಬ್ಬ ತಂಗಿ ಚಿನ್ನದ ಶಂಖದಲ್ಲಿ ಹುಟ್ಟುತ್ತಾರೆ. ಹಿರಿಯವನು ಕಾಂಞರಾಟಪ್ಪ  ಎರಡನೆಯವನು ತಿರುಚಂಬರಪ್ಪ ,ಮೂರನೆಯವನು ಬೇಂದ್ರು ಕೋಲಪ್ಪ ಎಂದೂ, ನಾಲ್ಕನೆಯವನು ಇಗ್ಗುತಪ್ಪ , ಐದನೆಯವನು ಪಾಲೂರಪ್ಪ  ಆರನೆಯವನು ತಿರುನೆಲ್ಲಿ ಪೆಮ್ಮಯ್ಯ ಎಇವರ ತಂಗಿ ತಂಗಮ್ಮ.ಇವರು ಬೇರೆ ಬೇರೆ ನಾಡಿಗೆ ಹೋಗುತ್ತಾ ಕೊಡಗಿಗೆ ಬರ್ತಾರೆ .ಪ್ರಯಾಣದ ವೇಳೆ ಒಂದು ಮಧ್ಯಾಹ್ನ ಎಲ್ಲರಿಗೂ ಹಸಿವೆಯಾಗುತ್ತದೆ.ಆಗ ತಂಗೆಮ್ಮ " ನಾನು ಬೆಂಕಿ ಇಲ್ಲದೆ ಅಡುಗೆ ಮಾಡುತ್ತೇನೆ.ನೀವೆಲ್ಲರೂ ಉಪ್ಪಿಲ್ಲದ ಅಡುಗೆ ಊಟ ಮಾಡಬೇಕು ಎಂದು ಹೇಳುತ್ತಾಳೆ.ಅಂತೆಯೇ ಅವಳು ತನ್ನ ಶಕ್ತಿಯಿಂದ ಬೆಂಕಿ ಇಲ್ಲದೆ ಅಡುಗೆ ಮಾಡುತ್ತಾಳೆ.ಆದರೆ ಅವಳ ಅಣ್ಣ ಪಾಲೂರಪ್ಪನಿಗೆ ಉಪ್ಪಿಲ್ಲದೆ ಊಟ ಮಾಡಲು ಸಾಧ್ಯವಾಗುವುದಿಲ್ಲ. ಅವನು " ಮಳೆಬರುವಾಗ ಹೀಗೆ ಆಲಿ ಕಲ್ಲು ಬೀಳುತ್ತದೆ" ಎಂದು ಹೇಳಿ ಅನ್ನವನ್ನು ಮೇಲೆ ಎಸೆಯುತ್ತಾನೆ.ಆಗ ಕೋಪಿಸಿಕೊಂಡ ತಂಗೆಮ್ಮ ತಾನು ಹಿಡಿದಿದ್ದ ಸೌಟಿನಲ್ಲಿ   ಪಾಲೂರಪ್ಪನ ಕೆನ್ನೆಗೆ ಹೊಡೆಯುತ್ತಾಳೆ.
ಇದರಿಂದ ಕೋಪಗೊಂಡ ಪಾಲೂರಪ್ಪ ಉಪಾಯವಾಗಿ ಅವಳನ್ನು ಸೋಲಿಸಬೇಕೆಂದು ಆಲೋಚಿಸಿ ಒಂದು ವ್ಯೂಹವನ್ನು ಹೆಣೆಯುತ್ತಾನೆ.
ಊಟದ ನಂತರ ಎಲ್ಲರೂ ಎಲೆ ಅಡಕೆ ಹಾಕುತ್ತಾರೆ. ಆಗ ಪಾಲೂರಪ್ಪ ಯಾರದು ಹೆಚ್ಚು ಕೆಂಪಾಗಿದೆ ನೋಡೋಣ ಎಂದು ಕೈಗೆ ಉಗಿದು ಹಿಂದೆ ಎಸೆದು ಮತ್ತೆ ನುಂಗಿದಂತೆ ಅಭಿನಯ ಮಾಡುತ್ತಾನೆ. ಇವನ ಕುಟಿಲವರಿಯದ ತಂಗೆಮ್ಮ ವೀಳ್ಯದೆಲೆ ಯನ್ನು ಕೈಗೆ ಉಗಿದು ಮತ್ತೆ ಅದನ್ನು ಬಾಯಿಗೆ ಹಾಕಿ ನುಂಗುತ್ತಾಳೆ.ಆಗ ಪಾಲೂರಪ್ಪ " ಇವಳು ಎಂಜೆಲು ತಿಂದಿದ್ದಾಳೆ.ಹಾಗೆ ಜಾತಿ ಭ್ರಷ್ಟಳಾದಳು.ಇವಳು ಮುಂದಕ್ಕೆ ನಮ್ಮ ಜೊತೆ ಬರಬಾರದು ಎಂದು ಹೇಳುತ್ತಾನೆ.ಇದರಿಂದ ನೊಂದ ಇಗ್ಗುತಪ್ಪ ತಂಗಿ ತನಗೆ ಕಾಣುವಂತೆ ಇರಲಿ ಎಂದು ಒಂದು ಬಾಣ ಬಿಡುತ್ತಾನೆ .ಅದು ಪೊನ್ನಂಗಾಲ ನದಿಯ ದಡದ ಕಾಡಿನಲ್ಲಿ ಒಂದು ಮಾವಿನ ಮರದ ಮೇಲೆ ಬೀಳುತ್ತದೆ.ತಂಗೆಮ್ಮ ಒಂದು ಕೊಕ್ಕರೆಯ ರೂಪು ತಳೆದು ಅಲ್ಲಿಗೆ ಸಮೀಪದ ಕರ್ತಂಡ ಕುಟುಂಬಕ್ಕೆ ಸೇರಿದ ಗದ್ದೆಯಲ್ಲಿ ಕುಳಿತುಕೊಳ್ಳುತ್ತಾಳೆ.ಅಲ್ಲಿಗೆ ಬಂದಕರ್ತಂಡ ಕುಟುಂಬದ ಹಿರಿಯರೊಬ್ಬರು ಕೊಕ್ಕರೆ ಯ ಮೇಲೆ ತಮ್ಮ ಕೈಯಲ್ಲಿರುವ ಬುಟ್ಟಿಯನ್ನು ಕವುಚಿ ಹಾಕುತ್ತಾರೆ. ಆಗ ಅದು ಕಲ್ಲಾಗಿ ಬದಲಾಗತ್ತದೆ.ಅತನ ಮೇಲೆ ತಂಗೆಮ್ಮ ದೈವ ಬಂದು ನುಡಿ ಕೊಡುತ್ತದೆ. ಪೊನ್ನಂಗಾಲದಲ್ಲಿ ನೆಲೆಸಿದ ಕಾರಣ ಅವಳು ಪೊನ್ನಂಗಾಲತಮ್ಮೆ ಎಂದು ಹೆಸರು ಪಡೆದು ಆರಾಧನೆ ಪಡೆಯುತ್ತಾಳೆ .ಅವಳ ಸಹೋದರರು ಕೂಡ ದೈವಿಕ ಶಕ್ತಿ ಪಡೆದು ಆರಾಧನೆ ಪಡೆಯುತ್ತಾರೆ.

Wednesday 28 June 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ಭೂತಗಳು 401-402ಕಲಿಯಾಟ ಅಜ್ಜಪ್ಪ,ಕಾಟಾಳ ಬೊಲ್ತು,

ಕೊಡವರು ಕೂಡ ಅನೇಕ ಭೂತಗಳ ಆರಾಧನೆಯನ್ನು ಮಾಡುತ್ತಾರೆ.ಕೊಡವರು ಪೊನ್ನಂಗಾಲತಮ್ಮೆ,ಕಲಿಯಾಟ ಅಜ್ಜಪ್ಪ,ಕಾಟಾಳ ಬೊಲ್ತು ಮೊದಲಾದ ದೈವಗಳಿಗೆ ಕೋಲ ಕೊಟ್ಟು ಆರಾಧನೆ ಮಾಡುತ್ತಾರೆ.ದುರಂತ ಮತ್ತು ದೈವತ್ವ ಭೂತಾರಾಧನೆಯಲ್ಲಿ ಕಂಡುಬರುವ ವಿಶಿಷ್ಟ ವಿದ್ಯಮಾನ.
ಕಲಿಯಾಟ ಅಜ್ಜಪ್ಪ ಕೂಡ ಮಾನವ ಮೂಲದ ದೈವವಾಗಿದ್ದು ದುರಂತವನ್ನಪ್ಪ ನಂತರ ದೈವವಾಗಿ ಆರಾಧನೆ ಪಡೆಯುವ ಶಕ್ತಿಯಾಗಿದೆ.
ಈತನ ಮೂಲ ಹೆಸರು ಕಲಿಯಾಟ ಪೊನ್ನಪ್ಪ. ಈತ ಕೊಡವರ ಆರಾಧ್ಯ ದೈವ ಇಗ್ಗುತಪ್ಪನ ಅನುಗ್ರಹದಿಂದ ಜನ್ಮ ಪಡೆದವನು.ಈತನ ತಾಯಿಗೆ ಕನಸಿನಲ್ಲಿ ಇಗ್ಗುತಪ್ಪ ಕಾಣಿಸಿಕೊಂಡು ದೈವಿಕ ಶಕ್ತಿ ಇರುವ ಮಗು ಜನಿಸುತ್ತದೆ ಎಂದು ಅಭಯ ನೀಡಿತೆಂದು ಕಲಿಯಾಟ ಅಜ್ಜಪ್ಪ ಭೂತದ ಹಾಡಿನಲ್ಲಿ ಹೇಳಿದೆ.
ಕಲಿಯಾಟ ಪೊನ್ನಪ್ಪ ಐದು ವರ್ಷ ದ ಮಗುವಾಗಿದ್ದಾಗಲೇ ಹರೆಯದ ವಯಸ್ಸಿನ ಬೆಳವಣಿಗೆ ಹೊಂದಿದ್ದನು ಹತ್ತು ವರ್ಷ ವಾಗುವಾಗುವಷ್ಟರಲ್ಲಿ ಪೂರ್ಣ ಬೆಳವಣಿಗೆ ಹೊಂದುತ್ತಾನೆ.ಅವನು ಹತ್ತು ವಿಶಿಷ್ಟ ಶಕ್ತಿಗಳನ್ನು ಒಲಿಸಿಕೊಂಡಿದ್ದು ಮಾಂತ್ರಿಕ ಶಕ್ತಿಯನ್ನು ಪಡೆದಿದ್ದನು.ಅವನಂತೆಯೇ ಮಾಂತ್ರಿ ಶಕ್ತಿ ಹೊಂದಿದ್ದ ಕಾಟಾಳ ಬೊಲ್ತು ಎಂಬ ಯುವಕನ ಸ್ನೇಹ ಹೊಂದಿದ್ದನು.ಇವರಿಬ್ಬರು ಎಲ್ಲೆಡೆ ಸಂಚರಿಸಿ ತಮ್ಮ ಶಕ್ತಿಯಿಂದ ಜನರ ಮೆಚ್ಚುಗೆ ಪಡೆದಿದ್ದರು.ಇದು ಕಲಿಯಾಟ ಪೊನ್ನಪ್ಪ ನ ತಂದೆಗೆ ಇಷ್ಟವಾಗಲಿಲ್ಲ ಹಾಗಾಗಿ ಇವರು ಮನೆ ಬಿಟ್ಟು ಹೊರಟರು.ಬೇರಡ ಬೇರೆ ಊರು ಸುತ್ತಿ ಕೊನೆಗೆ ಕಾವೇರಿಯಮ್ಮನ ಮಡಿಲಾದ ಕೊಡಗಿನಲ್ಲಿ ನೆಲೆಸುತ್ತಾರೆ.ಒಬ್ಬ ತುಂಡರಸ ಇವರ ಸ್ನೇಹವನ್ನು ಬಯಸಿ ಚಿನ್ನದ ಕಡಗವನ್ನು ಕಳುಹಿಸಿ ಕೊಡುತ್ತಾನೆ. ಕಲಿಯಾಟ ಅಜ್ಜಪ್ಪ ಅವನ ಸ್ನೇಹವನ್ನು ಸ್ವೀಕರಿಸದೆ ಕಡಗವನ್ನು ಹಿಂದೆ ಕಳುಹಿಸುತ್ತಾನೆ. ಇದರಿಂದ ಕೋಪಗೊಂಡ ಅರಸ ತನ್ನ ಸೈನಿಕರ ಮೂಲಕ ಇವರ ಮೇಲೆ ಆಕ್ರಮಣ ಮಾಡಿತ್ತಾನೆ.ಆಗ ಕೊಡಗಿನ ಹಾಲೇರಿ ವಂಶದ ಅರಸ ಕುಟ್ಟಪಾಲೆ ಮಾಯಿಲ ಎಂಬ ಸೇನಾನಾಯಕನ ನೇತೃತ್ವದಲ್ಲಿ ಕಲಿಯಾಟ ಪೊನ್ನಪ್ಪ ನಿಗೆ ಸಹಾಯ ಮಾಡುತ್ತಾನೆ ಜೊತೆಗೆ ತಮ್ಮ ಮಾಂತ್ರಿ ಶಕ್ತಿಯಿಂದ ಇವರು ಪಾರಾಗುತ್ತಾರೆ.
ಮುಂದೆ ಒಂದು ದಿನ ಕುಟ್ಟಿರಿಂಜೆತ್ತಿ ಮೂಲ/ ತರವಾಡು ಮನೆಗೆ ಕಲಿಯಾಟ ಪೊನ್ನಪ್ಪ ಬರುತ್ತಾನೆ. ಆಗ ಆ ತುಂಡರಸ ಕಿಕಾಂಡ ಮನೆಯ ವೃದ್ದ ಮಹಿಳೆಗೆ ಹೇಳಿ ಕೊಟ್ಟು ವಿಷಪ್ರಾಶನ ಮಾಡಿಸುತ್ತಾನೆ.ಇದೇ ಸಮಯದಲ್ಲಿ ಆ ಮಹಿಳೆ ತುಂಡರಸನ ಸೈನಿಕರಿಗೆ ಮಾಹಿತಿ ಕೊಡುತ್ತಾಳೆ. ಅವರು ಪೊನ್ನಪ್ಪ ನ ತಲೆ ಕಡಿಯುತ್ತಾರೆ.ಇದು ತಿಳಿದ ಆತನ ಒಡನಾಡಿ ಕಾಟಾಳ ಬೊಲ್ತು ಕೂಡ ಪ್ರಾಣ ತ್ಯಜಿಸುತ್ತಾನೆ.ಇವರಿಬ್ಬರೂ ದೈವಿಕ ಶಕ್ತಿ ಪಡೆದು ಭೂತಗಳಾಗುತ್ತಾರೆ .ಅ ತುಂಡರಸ ಇವರನ್ನು ಮತ್ರವಾದಿಗಳ ಸಹಾಯದಿಂದ ಒಂದು ಕಲ್ಲಿನಲ್ಲಿ ಕಟ್ಟಿ ಹಾಕುತ್ತಾರೆ ಆಗ ಕುಟ್ಟ ಪಾಲೆ ಮಾಯಿಲ ಅವರನ್ನು ದಿಗ್ಭಂಧನದಿಂದ ಬಿಡಿಸುತ್ತಾನೆ.ಮುಂದೆ ಪೊನ್ನಪ್ಪ ಕಲಿಯಾಟ ಅಜ್ಜಪ್ಪ ಎಂಬ ಹೆಸರಿನ ದೈವವಾಗಿ ಆರಾಧನೆ ಪಡೆಯುತ್ತಾನೆ ಅವನ ಜೊತೆಗೆ ಕಾಟಾಳ ಬೊಲ್ತು ವಿಗೂ ಕೋಲ ನೀಡಿ ಆರಾಧನೆ ಮಾಡುತ್ತಾರೆ.© ಡಾ ಲಕ್ಷ್ಮೀ ಜಿ ಪ್ರಸಾದ
ಮಾಹಿತಿ ಮೂಲ
 ,ವಿಜಯ ಕರ್ನಾಟಕ ಕೊಡಗು ಎಡಿಷನ್ ನಲ್ಲಿ ಪ್ರಕಟವಾದ ಕೊಡವ ಭಾಷೆಯ ಬರಹ ಮತ್ತು ಸ್ನೇಹಿತೆ ವಿದ್ಯಾ ಬಾಯ್ದೆರೆಯಾಗಿ ನೀಡಿದ ಮಾಹಿತಿ

Sunday 4 June 2017

ಸೂಕ್ತವಲ್ಲದ ಲಿಪಿ ಬಳಸಿ ತುಳುಭಾಷೆಯನ್ನು ಹಾಳುಗೆಡವದಿರಿ © ಡಾ ಲಕ್ಷ್ಮೀ ಜಿ ಪ್ರಸಾದ

ಸೂಕ್ತವಲ್ಲದ ಲಿಪಿ ಬಳಸಿ ತುಳುಭಾಷೆಯನ್ನು ಹಾಳುಗೆಡವದಿರಿ © ಡಾ ಲಕ್ಷ್ಮೀ ಜಿ ಪ್ರಸಾದ

ಅನೇಕರು ತಿಗಳಾರಿ/ ತುಳು ಲಿಪಿ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಮೆಸೆಂಜರ್ ಮೂಲಕ ಹೆಚ್ಚಿನ ವರಿಗೆ ಬ್ಲಾಗ್ ಲಿಂಕ್ ಓಪನ್ ಅಗುತ್ತಿಲ್ಲವಂತೆ ಹಾಗಾಗಿ ಬ್ಲಾಗ್ ಬರಹವನ್ನು ಕಾಪಿ ಮಾಡಿ ಹಾಕಿರುವೆ

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ?

ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಹೊರತು ಬೇರೆ ಬೇರೆಯಲ್ಲ © ಡಾ ಲಕ್ಷ್ಮೀ ಜಿ ಪ್ರಸಾದ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ವೆಬ್ ನಲ್ಲಿ ತುಳು ವರ್ಣ ಮಾಲೆಯಲ್ಲಿಯೇ ದೋಷಗಳು ಇಲ್ಲಿ ಇದು ತಿಗಳಾರಿ ಲಿಪಿ ಎಂದು ಹೊರಗಡೆ ಪ್ರಸಿದ್ಧವಾಗಿದೆ ತುಳುನಾಡಿನ ಕೆಲವೆಡೆ ತುಳು ಲಿಪಿ ಎಂದು ಕರೆಯುತ್ತಾರೆ ಎಂಬ ಸತ್ಯವನ್ನು  ಮುಚ್ಚಿಟ್ಡು ತುಳು ಲಿಪಿ ಎಂದು ಮಾತ್ರ ಹೇಳಲಾಗಿದೆ  .

ಅದಿರಲಿ ತಿಗಳಾರಿ ಅಥವಾ ತುಳು ವರ್ಣಮಾಲೆಯಲ್ಲಿ ಹ್ರಸ್ವ ಎ ಒ ಸ್ವರಗಳಿಲ್ಲ ಇಲ್ಲಿ ತಿಗಳಾರಿ / ತುಳು ಲಿಪಿ ಯಲ್ಲಿ ರುವ ದೀರ್ಘ ಏ ಓ ಗಳನ್ನು ಬರೆದು ಅದರ ಕೆಳಗಡೆ ಹ್ರಸ್ವ ಎ ಒ ಎಂದು ಕನ್ನಡ ದಲ್ಲಿ ಬರೆದಿದ್ದಾರೆ ಕಳೆದ ವರ್ಷ ಏಳೆಂಟು ಲಿಪಿ ತಜ್ಞರು ಬಂದು ಏನೋ ವಿಚಾರ ಮಾಡಿದ್ದಾರಂತೆ ಆದರೂ ತುಳು ಅಕಾಡೆಮಿ ವೆಬ್ ನಲ್ಲಿ ಆದ ಇಷ್ಟು ದೊಡ್ಡ ಪ್ರಮಾದವನ್ನೇ ತಿದ್ದಿಲ್ಲ ,ತುಳು ಲಿಪಿ/ ತಿಗಳಾರಿ ಲಿಪಿ ಬಗ್ಗೆ ಒಂದು ಸಾಲಿನ ಮಾಹಿತಿ ಕೂಡಾ ಇಲ್ಲ ಇರುವ ವರ್ಣಮಾಲೆಯಲ್ಲಿ ಇಷ್ಟು ದೊಡ್ಡ ತಪ್ಪು ಯಾರಿಗೆ ಹೇಳೋಣ ? ರಿಜಿಸ್ಟ್ರಾರ್ ಗೆ ಈ ಬಗ್ಗೆ ಪೋನ್ ಮಾಡಿದರೆ ಬರೆದು ತಿಳಿಸಿ ಎಂಬ ಉತ್ತರ ಸಿಕ್ಕಿದೆ.
ಹಾಗಾಗಿ ಈ ಲಿಪಿ ಬಗ್ಗೆ ಮಾಹಿತಿ ಗೆ ಇಲ್ಲಿ ಓದಿ

ತುಳು ಭಾಷೆಯನ್ನು ಅಪಭ್ರಂಶಗೊಳಿಸಿ ವಿರೂಪ ಗೊಳಿಸಬೇಡಿ

ಭಾಷೆಯೊಂದಕ್ಕೆ ಲಿಪಿ ಇರಲೇ ಬೇಕೆಂದೇನೂ ಇಲ್ಲ ಜಗತ್ತಿನ ಹೆಚ್ಚಿನ ಭಾಷೆಗಳಿಗೆ ಸ್ವಂತ ಲಿಪಿಯಿಲ್ಲ ನಮ್ಮ ರಾಷ್ಟ್ರೀಯ ಭಾಷೆ ಹಿಂದಿ ಪ್ರಾಚೀನ ಭಾಷೆ ಸಂಸ್ಕೃತ ಜನಪ್ರಿಯ ಭಾಷೆ ಇಂಗ್ಲಿಷ್ ಗೂ ಸ್ವಂತ ‌ಲಿಪಿಯಿಲ್ಲ ಹಿಂದಿ ಸಂಸ್ಕೃತ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಷೆಗಳಿಗೆ ನಾಗರಿ ಲಿಪಿಯನ್ನು ಬಳಸುತ್ತಾರೆ ಇಂಗ್ಲಿಷ್ ಗೆ ರೋಮ್ ಲಿಪಿ ಬಳಸುತ್ತಾರೆ
ಈ ಹಿಂದೆ ಸಂಸ್ಕೃತ ಬರೆಯಲು ತಿಗಳಾರಿ ಲಿಪಿಯನ್ನು ಬಳಕೆ ಮಾಡುತ್ತಿದ್ದು ಅದನ್ನು  ತುಳುನಾಡಿನಲ್ಲಿ ಯೂ ಸಂಸ್ಕೃತ ದ ವೇದ ಮಂತ್ರಗಳನ್ನು ಬರೆಯಲು  ತುಳುನಾಡಿನ ಹವ್ಯಕ ,ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬಳಕೆ ಮಾಡಿದ್ದಾರೆ  ಜೊತೆಗೆ ಉತ್ತರ ಕನ್ನಡದ ಶಿವಮೊಗ್ಗ ಕೆಳದಿ ತಮಿಳುನಾಡಿನ ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ತುಳು ಬ್ರಾಹ್ಮಣರು ಸಂಸ್ಕೃತ ವೇದ ಮಂತ್ರಗಳನ್ನು ಬರೆಯಲು ಬಳಸಿದ್ದಾರೆ ಇದಕ್ಕೆ ಮೊದಲಿನಿಂದಲೂ ತಿಗಳಾರಿ ಲಿಪಿ ಎಂದು ಕರೆಯುತ್ತಾ ಇದ್ದರು ತುಳು ಲಿಪಿ ಎಂಬ ಹೆಸರೂ ಕೆಲವರು ಬಳಸಿದ್ದಾರೆ   ಆದರೆ ಪ್ರಸ್ತುತ  ತುಳು ಭಾಷೆಯ ಬರವಣಿಗೆಗೆ ಸೂಕ್ತವಾಗಿಲ್ಲ  ಯಾಕೆಂದರೆ ಇದರಲ್ಲಿ ತುಳು ಭಾಷೆಯಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ಇದರಿಂದಾಗಿ ಈ ಲಿಪಿಯಲ್ಲಿ ತುಳು ಭಾಷೆ ಎಂದು ಬರೆಯಲು ಸಾಧ್ಯವೇ ಇಲ್ಲ ಬದಲಿಗೆ ತುಳು ಭಾಷೇ ಎಂದು ಬರೆಯಬೇಕಾಗುತ್ತದೆ ಎಣ್ಣೆ ಬದಲು ಏಣ್ಣೆ ಪೊಣ್ಣು ಬದಲು ಪೋಣ್ಣು ಡೆನ್ನಾನ ಬದಲು ಡೇನ್ನಾನ ಎಡ್ಡೆ ಬದಲು ಏಡ್ಡೆ ತೆನೆ ಬದಲು ತೇನೆ ಕೊರಳು ಬದಲು ಕೋರಳು ಕೊಪ್ಪ ಬದಲು ಕೋಪ್ಪ ಕೊರಗಜ್ಜ ಬದಲು ಕೋರಗಜ್ಜ ಕೆರೆ ಬದಲು ಕೇರೆ  ಬರೆಯಬೇಕಾಗುತ್ತದೆ ಕೆರೆ ಕೇರೆಯಾದಾಗ ಕೆಬಿ ಕೇಬಿಯಾಗಿ,ಕೆಪ್ಪೆ ಕೇಪ್ಪೆಯಾಗಿ ಕೊಡಿ ಕೋಡಿಯಾಗಿ ,ಎರು ಏರು ಅಗಿ ,ಎರ್ಮ್ಮೆ ಏರ್ಮ್ಮೆಯಾಗಿ ಎಣ್ಮೆ ಏಣ್ಮೆಯಾಗಿ ಕೆಸರ್ ಕೇಸರ್ ಆಗಿ ರಾಮೆ ರಾಮೇ ಆಗಿ ಕೃಷ್ಷಪ್ಪೆ ಕೃಷ್ಣಪ್ಪೇ ಆಗಿ , ಪೊಸತು ಪೋಸತು ಪೊರ್ಲು ಬದಲು‌ ಪೋರ್ಲು ಆಗಿ ,ಬೆರ್ಮರ್ ಬೇರ್ಮರ್ ಆಗಿ ,ಪೊಡಿ ಬದಲು ಪೋಡಿಯಾಗಿ ಬೊಂಡ ಬದಲು ಬೋಂಡ ಅಗಿ ಕೊಡೆ ಕೋಡೆಯಾಗಿ ಬೆಲೆ ಬೇಲೆಯಾಗಿ ,ಕೆದು ಕೇದುವಾಗಿ ,ಕೆಮ್ಮು ಕೇಮ್ಮುವಾಗಿ ,ಎಡೆ ಏಡೆಯಾಗಿ ಅರ್ಥ ಅನರ್ಥವಾಗಿಬಿಡುತ್ತದೆ  ಯಾಕೆಂದರೆ ಈ ಲಿಪಿಯಲ್ಲಿ ಹ್ರಸ್ವ ಎ ಒ ಗಳು ಇಲ್ಲ‌ ಹೀಗೆ ಬಳಸಿದರೆ  ತುಳು ಭಾಷೆ ತನ್ನ ಮೂಲ ರೂಪವನ್ನು ಕಳೆದುಕೊಂಡು ಅಪಭ್ರಂಶ ಗೊಳ್ಳುತ್ತದೆ ಹಾಗಾಗಿ ಈಗ ಸಂಸ್ಕೃತ ವೇದ ಮಂತ್ರಗಳ ಬಳಕೆಗಾಗಿ ರೂಪುಗೊಂಡ ತಿಗಳಾರಿ ಲಿಪಿ/ ತುಳುಲಿಪಿ ಯನ್ನು ಪರಿಷ್ಕರಿಸಿ ಕಲಿಸುವ ಬಳಸುವ ಅಗತ್ಯವಿದೆ

ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಮಾತ್ರ ಬಳಕೆಗೆ ತಂದದ್ದಲ್ಲ ಹವ್ಯಕ ಚಿತ್ಪಾವನ ಕರಾಡ ಕೋಟ ಬ್ರಾಹ್ಮಣರು ಉತ್ತರ ಕನ್ನಡ ಶಿವಮೊಗ್ಗ ಕೆಳದಿಯ ಕನ್ನಡ ಬ್ರಾಹ್ಮಣರು,ಮೈಸೂರಿನ ಬೆಂಗಳೂರಿನ‌ಕೆಲವು ಬ್ರಾಹ್ಮಣ ಸಮುದಾಯಗಳು  ತಂಜಾವೂರು ಕಂಚಿಯ  ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ಧರ್ಮಸ್ಥಳ ದಲ್ಲಿ ಸಂಗ್ರಹವಾಗಿರುವ ಒಂದೂವರೆ ಸಾವಿರದಷ್ಟು ತಿಗಳಾರಿ / ತುಳು ಲಿಪಿ ಹಸ್ತಪ್ರತಿ ಗಳಲ್ಲಿ ಅನೇಕ ಹವ್ಯಕ ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬರೆದ ಅವರುಗಳ ಮನೆಯಲ್ಲಿ ಸಿಕ್ಕ ಹಸ್ತಪ್ರತಿ ಗಳಿವೆ ನಮ್ಮ ( ನಾವು ಹವ್ಯಕ ರು) ಮನೆಯಲ್ಲಿಯೂ ಅನೇಕ ತಿಗಳಾರಿ ಲಿಪಿ ಯ ಹಸ್ತಪ್ರತಿ ಗ್ರಂಥಳಿದ್ದು ಇವರಲ್ಲವು ಮಂತ್ರ ಪ್ರಯೋಗಗಳಾಗಿವೆ ಹವ್ಯಕರಲ್ಲಿ ಈ ಲಿಪಿಯಲ್ಲಿ ಹವ್ಯಕ ಭಾಷೆಯಲ್ಲಿ ಪತ್ರ ವ್ಯವಹಾರ ಕಡತ ನಿರ್ವಹಣೆಗಳಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಈ ಲಿಪಿಯಲ್ಲಿ ಬರೆದ ಹವ್ಯಕ ಕನ್ನಡ ದ ಪತ್ರಗಳು ನೂರಕ್ಕಿಂತ ಹೆಚ್ಚು ಇವೆ
ಇನ್ನು ಅದು ಬ್ರಾಹ್ಮಣರು ಬಳಕೆಗೆ ತಂದ ಲಿಪಿ ಎಂಬುದಕ್ಕೆ ಅದರಲ್ಲಿ ಸಿಕ್ಕ ಎಲ್ಲಾ ಕೃತಿಗಳನ್ನು ಬ್ರಾಹ್ಮಣರು ಬರೆದಿದ್ದು ಒಂದೇ ಒಂದು ಕೃತಿ ಬೇರೆಯವರು ಬರೆಯದಿರುವವುದು ಈಗಲೂ ಅದನ್ನು ಹೇಳಿಕೊಟ್ಟವರು ಬ್ರಾಹ್ಮಣರು ಎಂಬ ಆಧಾರವೇ ಸಾಕು
ಲಿಪಿ ರೂಪಿಸಲು ಎಷ್ಟು ಜನ ಇದ್ದಾರೆ ಎಂಬುದು ಮುಖ್ಯವಲ್ಲ ಅದನ್ನು ಯಾರು ಯಾಕೆ ಬಳಸಿದ್ದಾರೆ ಎಂಬುದು ಮುಖ್ಯ ವಾಗುತ್ತದೆ
ಇದರಲ್ಲಿ ತುಳು ಭಾಷೆಯ ಹ್ರಸ್ವ ಎಒ  ಇಲ್ಲ ಇದರಲ್ಲಿ  ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ
ಅಲ್ಲದೆ ತುಳು ಭಾಷೆಯ ಏಳು ಕೃತಿಗಳು ಮಾತ್ರ ಆ ಲಿಪಿ ಯಲ್ಲಿ ಇರುವುದು ಅದರಲ್ಲಿ ಯೂ ಹ್ರಸ್ವ ಎ ಒ ಗಳು ಇಲ್ಲದ ಕಾರಣ ತುಂಬಾ ದೋಷಗಳಿವೆ ತುಳು ಕರ್ಣ ಪರ್ವ ವನ್ನು ಪುಣಿಚಿತ್ತಾಯ ರು ಈ ಹಿಂದೆ ನನಗೆ ಗೌರವ ಪ್ರತಿ ನೀಡಿದ್ದು ಅದರಲ್ಲಿ ಈ ದೋಷಗಳಿರುವುದನ್ನು ಅವರೂ ಹೇಳಿದ್ದಾರೆ
ಲಿಪಿಯೊಂದು ಇದ್ದಕ್ಕಿದ್ದಂತೆ ರೂಪು ಗೊಳ್ಳುವುದಿಲ್ಕ ಇದು ತಮಿಳಿನ ಗ್ರಂಥ ಲಿಪಿಯನ್ನು ಹೋಲುತ್ತಿದ್ದು ಅದರಿಂದ ರೂಪುಗೊಂಡಿದೆ ಗ್ರಂಥ ಲಿಪಿ ತುಳುನಾಡಿನಲ್ಲಿ ಇರಲಿಲ್ಲ ದಕ್ಷಿಣ ಭಾರತದ ್ಲ್ಲಿ ವೇದಾಧ್ಯಯನ ಕೇಂದ್ರ ಇದ್ದದ್ದು ತಮಿಳುನಾಡಿನ ತಂಜಾವೂರು ಮತ್ತು ಕಂಚಿಗಳಲ್ಲಿ
ಅಲ್ಲಿನ ತಮಿಳು ಲಿಪಿಯಲ್ಲಿ ಮುವತ್ತಾರು ಅಕ್ಷರಗಳು ಮಾತ್ರ ಇದ್ದು ಅದು ಸಂಸ್ಕೃತ ವೇದಾ ಮಂತ್ರಗಳ ಬರವಣಿಗೆಗೆ ಸೂಕ್ತ ವಾಗಿರಲಿಲ್ಲ ಹಾಗಾಗಿ ಅವರು ತಮಿಳು ಲಿಪಿ ಯನ್ನು ಪರಿಷ್ಕರಿಸಿ ಸಂಸ್ಕೃತ ಕ್ಕೆ ಸೂಕ್ತ ವಾದ ಗ್ರಂಥ ಲಿಪಿ ರೂಪಿಸಿದರು ಅಲ್ಲಿ ನಾಗರಿ ಲಿಪಿ ಪರಿಚಿತವಾಗಿರಲಿಲ್ಲಅಲ್ಲಿಗೆ ವೇದಾಧ್ಯಯನ ಮಾಡಲು ಹೋದ ದಕ್ಷಿಣ ಕನ್ನಡ ಉತ್ತರ ಕನ್ನಡ ದ  ಬ್ರಾಹ್ಮಣ ರು ಅಲ್ಲಿನ ಗುರುಗಳಿಂದ ಗ್ರಂತ ಲಿಪಿ ಕಲಿತು ವೇದ ಮಂತ್ರಗಳ ನ್ನು ಅದರಲ್ಲಿ ಬರೆದರು ನಂತರ ಕಾಲಾಂತರದಲ್ಲಿ ಅದು ಬದಲಾಗುತ್ತಾ ತಿಗಳಾರಿ ಲಿಪಿ ಆಯಿತು ಹಾಗಾಗಿ ಅದನ್ನು ತಿಗಳರ ಎಂದರೆ ತಮಿಳರ ಆರ್ಯ ಎಂದರೆ ಸಂಸ್ಕೃತ ಲಿಪಿ ಎಂದು ಕರೆದರು ಅದು ಹ್ರಸ್ವ ಗೊಂಡು ತಿಗಳಾರಿ ಅಯಿತು ಇದನ್ನು ಬಳಕೆ ಮಾಡಿದವರಲ್ಲಿ ಕೋಟ ಹವ್ಯಕ ಚಿತ್ಪಾವನ ತುಳು  ಕರಾಡ ಬ್ರಾಹ್ಮಣರು ಶಿವಮೊಗ್ಗ ಕೆಳದಿ ಉತ್ತರ ಕನ್ನಡ ದ ಕನ್ನಡ ಬ್ರಾಹ್ಮಣರು ತಂಜಾವೂರು ಕಂಚಿಯ ಬ್ರಾಹ್ಮಣರು  ಸೇರಿದ್ದಾರೆ ಇವರಲ್ಲಿ ತುಳು ಬ್ರಾಹ್ಮಣರು ಕೇರಳಕ್ಕೆ ದೇವಸ್ಥಾನ ಗಳ ಪೂಜೆಗೆ ಹೋದಾಗ ತಿಗಳಾರಿ ಲಿಪಿ ಅಲ್ಲಿ ಹರಡಿ ಅಲ್ಲಿ ನವರು ಅದನ್ನು ಮಲೆಯಾಳ ಭಾಷೆಗೆ ಸೂಕ್ತ ವಾಗುವಂತೆ ಪರಿಷ್ಕರಿಸಿ ಬಳಸಿದರು ಅವರು ಆರಂಭದಲ್ಲಿ ಅದನ್ನು ತುಲುವನತ್ತಿಲ್ ಎಂದರೆ ತುಲುವರ ಲಿಪಿ ಎಂದು ಕರೆದಿದ್ದು ಅವರು ರೂಪಿಸಿದ ಲಿಪಿ ಯನ್ನು ತುಲು ಮಲೆಯಾಳ ಲಿಪಿ ಎಂದು ಕರೆದು ಕಾಲಾಂತರದಲ್ಲಿ ಮಲೆಯಾಳ ಲಿಪಿ ಎಂದು ಮಾತ್ರ ಹೆಸರು ಉಳಿಯಿತು
ಆದರೆ ಇದು ತುಲು ಭಾಷೆಯ ಲಿಪಿ ಅಲ್ಲ
ಸಂಸ್ಕೃತ ಭಾಷೆಗೆ ಸ್ವಂತ ಲಿಪಿ ಇಲ್ಲ ಉತ್ತರದಲ್ಲಿ ನಾಗರಿ ಲಿಪಿ ತಮಿಳುನಾಡಿನಲ್ಲಿ ಗ್ರಂಥ ಲಿಪಿ ತೆಲುಗರು ತೆಲುಗು ಲಿಪಿ ಯನ್ನು ಸಂಸ್ಕೃತ ಕ್ಕೆ ಬಳಸುತ್ತಾ ಇದ್ದರು
ಅಕಾಡೆಮಿ ಗೆ ಹೇಳಿ ಲಿಪಿ ಯ ಇತಿಹಾಸವನ್ನು ತಿಳಿಸಿ ಪರಿಷ್ಕರಿಸಿ ಬಳಕೆಗೆ ತರುವ ಕೆಲಸ ಆಗಬೇಕಿದೆ ಅಕಾಡೆಮಿ ವೆಬ್ ಹಾಕಿದ ತುಳು ವರ್ಣ ಮಾಲೆ ಚಾರ್ಟ್ ನಲ್ಲಿ ತಪ್ಪಿದೆ ಹಾಗೆ ನೋಡಿದರೆ ವಿದ್ಯಾ ಶ್ರೀ ಅವರು ಪ್ರಕಟಿಸಿದ ವರ್ಣಮಾಲೆ ಸರಿ ಇದೆ .ತಪ್ಪನ್ನು ತಿದ್ದಿ ಪರಿಷ್ಕರಿಸದೆ ಬಳಸಿದರೆ ತುಳು ಭಾಷೆ ಅಪಭ್ರಂಶ ಗೊಂಡು ವಿರೂಪ ಗೊಳ್ಳುತ್ತದೆ

1 ತುಳುನಾಡಿನ ವ್ಯಾಪ್ತಿ ಉಡುಪಿ ಕಾಸರಗೋಡು ದ.ಕ ಜಿಲ್ಲೆ ತಿಗಳಾರಿ ಲಿಪಿ ತಮಿಳುನಾಡಿನ ತಂಜಾವೂರು ಕಂಚಿ ಧರ್ಮ ಪುರ ಕೃಷ್ಣ ಪುರ ಗಳಲ್ಲಿ ಬಳಕೆಇದೆ ಕರ್ನಾಟಕ ದಲ್ಲಿ ಉತ್ತರ ಕನ್ನಡ ಶಿವಮೊಗ್ಗ ಮಲೆನಾಡಿನಲ್ಲಿ ಬಳಕೆ ಇತ್ತು ತುಳು ಭಾಷೆ ಮತ್ತು  ತುಳುವರು ಇಲ್ಲದ ಕಡೆಯೂ ಬಳಕೆಯಲ್ಲಿತ್ತು

2, ಈ ಲಿಪಿಯಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಿಕ್ಕಿದ್ದು ಅವೆಲ್ಲವೂ ಸಂಸ್ಕೃತ ವೇದ ಮಂತ್ರಗಳಾಗಿವೆ  ಕೇವಲ ಏಳು‌ ತುಳು ಕೃತಿಗಳು ಮಾತ್ರ ಈ ಲಿಪಿಯಲ್ಲಿ ಇವೆ

3 ಇದು ತುಳು ಭಾಷೆಗೆ ಸೂಕ್ತ ವಾಗಿಲ್ಲ ಇದರಲ್ಲಿ  ತುಳುವಿನ ಎಲ್ಲ ಅಕ್ಷರಗಳು ಇಲ್ಲ ಇದರಲ್ಲಿ ತುಳುವಿನಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ತುಳುವಿನಲ್ಲಿ ಇಲ್ಲದೆ ಇರುವ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ

4 ಇದು ಸಂಸ್ಕೃತ ವನ್ನು ಬರೆಯಲು ರೂಪುಗೊಂಡ ಲಿಪಿಯಾಗಿದ್ದು ಸಂಸ್ಕೃತ ದ ಎಲ್ಲ ಅಕ್ಷರಗಳು ಇವೆ ಉದಾ ಸಂಸ್ಕೃತ ದಲ್ಲಿ ದೀರ್ಘ ಋ ಇದೆ ಇದರಲ್ಲೂ ಇದೆ ಲೃ ಅನ್ನುವ ವಿಶಿಷ್ಠವಾದ ಅಕ್ಷರ ಸಂಸ್ಕೃತ ದಲ್ಲಿದೆ ಇದರಲ್ಲೂ ಅದು ಇದೆ ಸಂಸ್ಕೃತ ದಲ್ಲಿ ಹ್ರಸ್ವ ಎ ಒ ಗಳು ಇಲ್ಲ ಹಾಗಾಗಿ ಇದರಲ್ಲೂ ಇಲ್ಲ

5 ಇದರಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಂಸ್ಕೃತ ದಲ್ಲಿವೆ ಅವುಗಳಲ್ಲಿ 99 .9% ಶೇಕಡ ವೇದ ಮಂತ್ರಗಳು

6 ಒಂದು ಲಿಪಿ ತನ್ನಿಂದ ತಾನೇ ಸೃಷ್ಟಿ ಯಾಗುವುದಿಲ್ಲ ಬಳಕೆಯಲ್ಲಿರುವ ಒಂದು ಲಿಪಿ ಬದಲಾಗುತ್ತಾ ಕಾಲಾಂತರದಲ್ಲಿ ಇನ್ನೊಂದು ಲಿಪಿ ಯಾಗುತ್ತದೆ ಮೂಲ ಲಿಪಿಗೂ ಹೊಸ ಲಿಪಿಗೂ 50- 60% ವ್ಯತ್ಯಾಸ ಉಂಟಾದಾಗ ಅದನ್ನು ಇನ್ನೊಂದು ಲಿಪಿಯಾಗಿ ಗುರುತಿಸುತ್ತಾರೆ ಆ ಲಿಪಿ ಬೆಳೆದ ಪರಿಸರದಲ್ಲಿ ಅದಕ್ಕೆ ಮೂಲವಾಗಿರುವ ಲಿಪಿ ಇರಲೇ ಬೇಕು ತಿಗಳಾರಿ ಲಿಪಿ ಗೆ ಮೂಲವಾದ ಆರ್ಯ ಎಳತ್ತು /ಗ್ರಂಥ ಲಿಪಿ ತಮಿಳುನಾಡಿನ ಪರಿಸರದಲ್ಲಿ ಪ್ರಚಲಿತವಿದೆ ತುಳುನಾಡಿನಲ್ಲಿ ಇಲ್ಲ

7 ತುಳು ಲಿಪಿಯನ್ನು ವಿದ್ಯಾ ಶ್ರೀ ಅವರಿಗೆ ಹೇಳಿಕೊಟ್ಟ ಲಿಪಿ ತಜ್ಞ ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ, ಬೇರೆ ಬೇರೆಯಲ್ಲ ತಿಗಳಾರಿ ಎಂದು ಬರೆದುಬ್ರಾಕೆಟ್ ಒಳಗೆ ತುಳು ಲಿಪಿ ಎಂದು ಅಥವಾ ತುಳು ಲಿಪಿ ಎಂದು ಬರೆದು ಬ್ರಾಕೆಟ್ ಒಳಗೆ ತಿಗಳಾರಿ ಲಿಪಿ ಎಂದು ಬರೆಯಬೇಕು ಎಂದು ತಿಳಿಸಿದ್ದಾರೆ. (ಅವರು ಹೀಗೆ ಹೇಳಿದ ಬಗ್ಗೆ ದಾಖಲೆ ಇದೆ)ಆದರೆ ಇವರಿಂದ ಲಿಪಿ ಕಲಿತು ಪ್ರಚಾರ ಮಾಡುವ ತರಗತಿ ಮಾಡುವ ವಿದ್ಯಾ ಅವರು‌ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ತಪ್ಪು ಮಾಹಿತಿ ಹರಡುತ್ತಿದ್ದಾರೆ ಜೊತೆಗೆ ಬ್ರಾಹ್ಮಣರು ತುಳು ಲಿಪಿಯನ್ನು ತಿಗಳಾರಿ ಎಂದು ಕರೆದು ಅಡಗಿಸಿ ಇಟ್ಟು ತುಳುವರಿಗೆ ಸಿಗದ ಹಾಗೆ ಮಾಡಿದರು ಎಂದು ಹೇಳುತ್ತಾ ಜನರಲ್ಲಿ ಬ್ರಾಹ್ಮಣ ದ್ವೇಷ ಬಿತ್ತಿ ಸಾಮಾಜಿಕ ಸ್ವಾಸ್ಥ್ಯ ವನ್ನು ಹಾಳುಗೆಡವುತ್ತಾ ಇದ್ದಾರೆ
8 ಲಿಪಿ ತಜ್ಞರಾದ ಡಾ .ಪದ್ಮನಾಭ ಕೇಕುಣ್ಣಾಯ ಅವರು ತುಳುವಿಗೆ ಲಿಪಿ ಇರುವುದಾದರೂ ಅದು ಮೂಲತ ತಿಗಳಾರಿ ಲಿಪಿ ಹೊರಗಡೆ ಅದು ತಿಗಳಾರಿ ಎಂದು ಪ್ರಸಿದ್ದಿ ಪಡೆದಿದೆ ಹಾಗಾಗಿ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ಹೇಳುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ತುಳು ಲಿಪಿ ಎಂದು ಮೊದಲಿಗೆ ಗುರುತಿಸಿದ ಡಾ.ವೆಂಕಟ್ರಟಜ ಪುಣಿಚಿತ್ತಾಯರು ಕೂಡ ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ ಎಂದು ಅವರಿಗೆ ಆತ್ಮೀಯ ರಾಗಿದ್ದ ಡಾ.ಪದ್ಮನಾಭ ಕೇಕುಣ್ಣಾಯ ತಿಳಿಸಿದ್ದಾರೆ.
9 ಲಿಪಿ ತಜ್ಞರಾದ ಡಾ.ಗೀತಾಚಾರ್ಯ ತುಳುವಿಗೆ ಲಿಪಿ ಇರಲಿಲ್ಲ, ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಯನ್ನು ತುಸು ಮಾರ್ಪಡಿಸಿ ತುಳು ಲಿಪಿ ರೂಪಿಸಿದರು ಎಂದು ಹೇಳಿದ್ದಾರೆ
10 ಲಿಪಿ ತಜ್ಞರಾದ ಡಾ.ಗುಂಡಾ ಜೋಯಿಸ್ ಕೆಳದಿ ವೆಂಕಟೇಶ ಜೋಯಿಸ್ ಡಾ.ಪಿವಿ ಕೃಷ್ಣ ಮೂರ್ತಿ ಮೊದಲಾದವರು ಅದು ತಿಗಳಾರಿ ಲಿಪಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ
11  ಇದರಲ್ಲಿ  ಉಳು ಭಾಷೆಯ ಹ್ರಸ್ವ ಎ ಒ ಗಳಿಗೆ ಅಕ್ಷರ ಇಲ್ಲ   ಸಂಸ್ಕೃತ ದಲ್ಲಿ ಮಾತ್ರ ಇರುವ ದೀರ್ಘ ಋ ಇದೆ ಅಲ್ಲದೆ ತುಳುವಿನ ವಿಶಿಷ್ಟ ಉಚ್ಚಾರಣೆ ಗಳಿಗೆ ರೇಖಾ ಸಂಕೇತ ಅಥವಾ ಅಕ್ಷರಗಳು ಇಲ್ಲ
12 ಪ್ರಸ್ತುತ ತಿಗಳಾರಿ ಲಿಪಿಯ ಸುಮಾರು ಹತ್ತು  ಸಾವಿರದ ಹಸ್ತ ಪ್ರತಿಗಳು ಸಿಕ್ಕಿದ್ದು ಇವುಗಳು ತಮಿಳುನಾಡಿನ  ತಂಜಾವೂರು, ಕಂಚಿ ,ಧರ್ಮಪುರಿ,ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ,,ಕಾಸರಗೋಡು ಉಡುಪಿ ದಕ್ಷಿಣ ಕನ್ನಡ ಜಿಲ್ಲೆ, ಕೆಳದಿ ಮೊದಲಾದ ಕಡೆ ಸಿಕ್ಕಿದವುಗಳಾಗಿವೆ ಇವುಗಳಲ್ಲಿ ಏನಿದೆ ಎಂದು ತಿಗಳಾರಿ ಬಲ್ಲವರು ಓದಿದ್ದು .ಇವೆಲ್ಲವೂ ಸಂಸ್ಕೃತ ಭಾಷೆಯಲ್ಲಿಬರೆದ ವೇದ ಮಂತ್ರ ಪುರಾಣ ಕೃತಿಗಳು ಆಗಿವೆ ಎಂದು ತಿಳಿಸಿದ್ದಾರೆ
 13 ತುಳುನಾಡಿನಲ್ಲಿ ಸಿಕ್ಕ ಹಸ್ತ ಪ್ರತಿಗಳು ಸುಮಾರು ಒಂದೂವರೆ ಸಾವಿರ ಇವುಗಳನ್ನು ಕೂಡ ತೆರೆದು ಓದಿದ್ದು ಇವುಗಳಲ್ಲಿ ಏಳು ತುಳು ಭಾಷೆಯ ಕೃತಿಗಳು ,ಒಂದು ಕನ್ನಡ ಭಾಷೆಯ ಜನಪದ ಹಾಡುಗಳು ಬಿಟ್ಟರೆ ಉಳಿದವುಗಳೆಲ್ಲ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಎಂದು ಧರ್ಮಸ್ಥಳದ ಹಸ್ತ ಪ್ರತಿ ಅಧ್ಯಯನ ಕೇಂದ್ರದ ಮುಖ್ಯಸ್ಥ ರಾದ ಡಾ ವಿಘ್ನರಾಜ ಭಟ್ ತಿಳಿಸಿದ್ದಾರೆ
15 ತಿಗಳಾರಿ ಲಿಪಿ ತೀರ ಇತ್ತೀಚಿನ ವರೆಗೂ ಬಳಕೆಯಲ್ಲಿತ್ತು ಹಾಗಾಗಿ ಅದರಲ್ಲಿನ ಹತ್ತು ಸಾವಿರಕ್ಕಿಂತ ಹೆಚ್ಚಿನ ಸಂಸ್ಕೃತ ಹಸ್ತಪ್ರತಿ ಗಳು ಲಭ್ಯವಾಗಿವೆ ಆದರೆ ತುಳು ಭಾಷೆಯ ಕೃತಿಗಳು ಲಭಿಸಿದ್ದು ಕೇವಲ ಏಳು
16 ತುಳುನಾಡಿನಲ್ಲಿ ಈ ಲಿಪಿಯ ಒಂದೂವರೆ ಸಾವಿರದಷ್ಟು ಸಂಸ್ಕೃತ ಹಸ್ತಪ್ರತಿ ಗ್ರಂಥಗಳು ಸಿಕ್ಕಿದೆ ಆದರೆ ತುಳುವಿನದ್ದು ಸಿಕ್ಕಿದ್ದು ಏಳು ಮಾತ್ರ ಒಂದೊಮ್ಮೆ ಇದು ತುಳು ಭಾಷೆ ಬರೆಯಲು ಬಳಕೆಗೆ ಇದ್ದಿದ್ದರೆ  ಲಿಪಿ ಆಗಿರುತ್ತಿದ್ದರೆ ಕೊನೆಯ ಪಕ್ಷ ತುಳುನಾಡಿನಲ್ಲಿ ಸಿಕ್ಕ ಹಸ್ತಪ್ರತಿ ಗಳಲ್ಲಿಯಾದರೂ ಹೆಚ್ಚಿನ ಕೃತಿಗಳು ತುಳುಭಾಷೆಯದು ಆಗಿರುತ್ತಿತ್ತು ,ತಿಗಳಾರಿ ಇತ್ತೀಚಿನ ವರೆಗೂ ಬಳಕೆಯಲ್ಲಿದ್ದ ಕಾರಣ ತುಳುವಿನ  ಎಲ್ಲಾ ಹಸ್ತಪ್ರತಿ ಗಳು ಕಳೆದು ಹೋಗಿರುವ ಸಾಧ್ಯತೆ ಇಲ್ಲ ಹಾಗೆ ಕಳೆದು ಹೋಗುತ್ತಿದ್ದರೆ ಇದೇ ಲಿಪಿಯ ಲ್ಲಿ ಬರೆದ ಸಂಸ್ಕೃತ ವೇದ ಮಂತ್ರಗಳ ಹಸ್ತ ಪ್ರತಿಗಳು  ಕೂಡ ಉಳಿಯುತ್ತಿರಲಿಲ್ಲ ಹಾಗಾಗಿ  ಈ ಲಿಪಿಯಲ್ತುಲಿ ಳುಭಾಷೆಯಲ್ಲಿ ಲಿಖಿತ ಸಾಹಿತ್ಯ ರಚನೆ ಆದದ್ದು ತೀರಾ ತೀರಾ ಕಡಿಮೆ  ಎಂದು ಹೇಳಬಹುದು .ಬನ್ನಂಜೆ ಗೋವಿಂದ ಆಚಾರ್ಯರು ತೌಳವ ಬ್ರಾಹ್ಮಣರು ಇದನ್ನು ಬಳಕೆಗೆ ತಂದ ಕಾರಣ ಇದಕ್ಕೆ  ತುಳು ಲಿಪಿ ಎಂದು ಹೆಸರು ಇದನ್ನು ಬೇರೆಕಡೆ ತಿಗಳಾರಿ ಎಂದು ಕರೆಯುತ್ತಾರೆ. ಇದು ತುಳು ಭಾಷೆಯ ಲಿಪಿ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

17 ಈ ಎಲ್ಲಾ ಆಧಾರಗಳು  ತಿಗಳಾರಿ ಮತ್ತು ತುಲು ಲಿಪಿ ಎರಡೂ ಒಂದೇ ಬೇರೆ ಬೇರೆಯಲ್ಲ  ಎಂದು ಪ್ರೂವ್ ಮಾಡುತ್ತವೆ ಇದು ಮೂಲತ ತಿಗಳಾರಿ ಲಿಪಿ ತುಳುನಾಡಿನ ಕೆಲವೆಡೆ ಮಾತ್ರ ಇದನ್ನು ತುಳು ಲಿಪಿ ಎಂದು ಕರೆದಿದ್ದಾರೆ
18 "ತಿಗಳಾರಿ ಲಿಪಿ ಯನ್ನು ತಮಿಳು ನಾಡಿನ ತಂಜಾವೂರು ಕಂಚಿಗಳಲ್ಲಿ ವೇದಾಧ್ಯಯನ ‌ಮಾಡಲು ಹೋದ ತುಳುನಾಡು ಹಾಗೂ ಮಲೆನಾಡಿನ ಬ್ರಾಹ್ಮಣರು ಕಲಿತು ಬಳಕೆಗೆ ತಂದ ಕಾರಣ ಅದು ತುಳು ನಾಡು ಮಲೆನಾಡಿನ ಪರಿಸರದಲ್ಲಿಯೂ ಹರಡಿತು ,ತುಳುನಾಡಿನ ಕೆಲವೆಡೆ ಅದನ್ನು ತುಳು ಲಿಪಿ ಎಂದು ಕರೆದಿದ್ದಾರೆ "ಎಂದು ಡಾ ವಿಘ್ನರಾಜ ಭಟ್ ಡಾ ವೆಂಕಟೇಶ ಜೋಯಿಸ್ ಡಾ ಗುಂಡಾ ಜೋಯಿಸ್ ಡಾ ದೇವರ ಕೊಂಡಾ ರೆಡ್ಡಿ ಡಾ ಪದ್ಮನಾಭ ಕೇಕುಣ್ಣಾಯ ಡಾ ವೆಂಕಟ್ರಾಜ ಪುಣಿಚಿತ್ತಾಯ ,ಡಾ ಬನ್ನಂಜೆ ಗೋವಿಂದಾಚಾರ್ಯರ ಮೊದಲಾದ ಲಿಪಿ ತಜ್ಞರು, ವಿದ್ವಾಂಸರು ಅಭಿಪ್ರಾಯಪಡುತ್ತಾರೆ
19 ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದದ್ದು ಅಲ್ಲ ತುಳುನಾಡ ಹವ್ಯಕ ಬ್ರಾಹ್ಮಣರು ಕೋಟ ಕರಾಡ ಚಿತ್ಪಾವನ ಬ್ರಾಹ್ಮಣರು, ಶಿವಮೊಗ್ಗ ಉತ್ತರ ಕೆಳದಿ ಯ ಬ್ರಾಹ್ಮಣರು ಈ ಲಿಪಿಯನ್ನು ಬಳಕೆ ಮಾಡುತ್ತಿದ್ದರು ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆ ಮಾಡುತ್ತಿದ್ದರು ತುಳುನಾಡಿನಲ್ಲಿ ಸುಮಾರು ಒಂದೂವರೆ ಸಾವಿರ ಸಂಸ್ಕೃತ ಹಸ್ತ ಪ್ರತಿ ಗಳು ಈ ಲಿಪಿಯಲ್ಲಿ ಸಿಕ್ಕಿದ್ದು ಅದರಲ್ಲಿ ಹವ್ಯಕ ಕೋಟ ಚಿತ್ಪಾವನ ಕರಾಡ ಮರಾಠಿ ಬ್ರಾಹ್ಮಣರು ಬರೆದ ಕೃತಿಗಳು ಇವೆ ಇವುಗಳಲ್ಲಿ ತುಳುಭಾಷೆಯಲ್ಲಿ ಇರುವ ಕೃತಿಗಳು ಕೇವಲ ಏಳು ಮಾತ್ರ .ಈ ಲಿಪಿಯ ಹತ್ತ ಸಾವಿರಕ್ಕಿಂತ ಹೆಚ್ಚು ಹಸ್ತಪ್ರತಿ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಸಿಕ್ಕಿದ್ದು ಇವು ಶಿವಮೊಗ್ಗ ಕೆಳದಿ ರಾಮಚಂದ್ರಾಪುರ ಉತ್ತರ ಕರ್ನಾಟಕ ದ ತುಳುವೇತರ ಬ್ರಾಹ್ಮಣ ರ ಮನೆಯಲ್ಲಿ ಸಿಕ್ಕಿವೆ ಮೈಸೂರು ನಲ್ಲೂ ಬೆಂಗಳೂರಿನಲ್ಲಿ ತಮಿಳುನಾಡಿನ ತಂಜಾವೂರು  ಕಂಚಿ ಯ ತುಳುವರಲ್ಲದ ಇತರ ಬ್ರಾಹ್ಮಣರ ಮನೆಗಳು ಬರೆದಿರುವುದು ಸಿಕ್ಕಿವೆ. ಹವ್ಯಕ ಬ್ರಾಹ್ಮಣರು ಹವ್ಯಕರ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡುತ್ತಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಇಂಥಹ ನೂರಕ್ಕಿಂತ ಹೆಚ್ಚಿನ ಪತ್ರಗಳಿವೆ ಹಾಗಾಗಿ ಇದನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದರು ಎನ್ನುವುದು ಸರಿಯಲ್ಲ

20 ವಿದ್ಯಾ ಶ್ರೀ ಯವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಬೇರೆ ಬೇರೆ ಎಂಬುದಕ್ಕೆ ಆಧಾರವಾಗಿ ದೇವರಾಜ ಸ್ವಾಮಿ ಅವರ ಕೃತಿಯಲ್ಲಿನ ತಿಗಳಾರಿ ಮತ್ತು ತುಳು ವರ್ಣಮಾಲೆ ಚಿತ್ರ ಚಿತ್ರವನ್ನು ಪೇಸ್ ಬುಕ್ ನಲ್ಲಿ ಹಾಕಿದ್ದು ಅದರಲ್ಲಿನ ತಿಗಳಾರಿ ಲಿಪಿಯನ್ನು ವಿದ್ಯಾ ಶ್ರೀ ಅವರು ಹೇಳಿಕೊಡುವ ಲಿಪಿ ಹೋಲುತ್ತದೆ ಹೊರತು ತುಳು ವರ್ಣ ಮಾಲೆಯಲ್ಲಿ ಇರುವ ಹಾಗೆ ಇಲ್ಲ ಅವರು ಅವರು ಹಾಕಿದ ತಿಗಳಾರಿ ಲಿಪಿ ಚಿತ್ರ ದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ   ದೀರ್ಘ ಋ ಇದೆ ವಿದ್ಯಾ ಅವರು ಹೇಳಿಕೊಡುವ ಲಿಪಿ ಯಲ್ಲೂ ಇದೆ ಅವರು ಪ್ರೂಫ್ ಗಾಗಿ ಹಾಕಿದ ತುಳು ವರ್ಣಮಾಲೆಯ ಲ್ಲಿ ದೀರ್ಘ ಋ ಇಲ್ಲ ಅದೇ ರೀತಿಯಲ್ಲಿ ವಿದ್ಯಾ ಶ್ರೀ ಹೇಳಿಕೊಡುವ ಎಲ್ಲಾ ಅಕ್ಷರಗಳು ಅವರೇ ಪ್ರೂಫ್ ಗಾಗಿ ನೀಡಿದ ತಿಗಳಾರಿ ಮತ್ತು ತುಳು ವರ್ಣಮಾಲೆ ಗಳಲ್ಲಿ ತಿಗಳಾರಿ ಲಿಪಿ ಯನ್ನು ಹೋಲುತ್ತವೆ ಇದನ್ನು ಕೇಳಿದಾಗ ನಮ್ಮ ಗುರುಗಳು ತುಳು ಎಂದು ಹೇಳಿದ್ದಾರೆ ಎನ್ನುತ್ತಾರೆ. ಅವರ ಗುರುಗಳಾದ ವಿಘ್ನರಾಜ ಭಟ್ ತಿಗಳಾರಿ ಲಿಪಿ ಮತ್ತು ತುಳು ಎರಡೂ ಒಂದು ಎಂದು ಹೇಳಿದ್ದಾರೆ ಆದರೆ ಇವರು ತಿಗಳಾರಿ ಮತ್ತು ತುಳು ಬೇರೆ ಎಂದು ಹೇಳುತ್ತಿದ್ದಾರೆ
ಇವರು ಹೇಳಿಕೊಡುವ ಲಿಪಿ ತುಳ ವರ್ಣಮಾಲೆ ಬದಲಿಗೆ ತಿಗಳಾರಿ ಲಿಪಿ ಯಂತೆ ಇದೆ ಎಂದಾಗ ಗುರುಗಳು ಹೇಳಿದ್ದಾರೆ ಎಂದು ಹೇಳಿದ್ದಾರೆ
ಯಾವುದೇ ಲಿಪಿಯನ್ನು ಯಾರು ಕೂಡ ಬಳಕೆ ಮಾಡಬಹುದು ಆದರೆ  ಅದು ತಿಗಳಾರಿ ಲಿಪಿ ಎಂಬ ಸತ್ಯವನ್ನು ಮುಚ್ಚಿಟ್ಟು ಅದು ತುಳು ಭಾಷೆಯ ಸ್ವಂತ ಲಿಪಿ ಎಂದು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ ಮತ್ತು ಅದನ್ನು ತುಳು ಭಾಷೆಗೆ ಸೂಕ್ತ ವಾ್ಉವಂತೆ ಪರಿಷ್ಕರಿಸದೆ ಇದ್ದ ಹಾಗೆ ಬಳಸಿ ತುಳು ಭಾಷೆಯನ್ನು ಅಪಭ್ರಂಶ ಗೊಳಿಸುವುದು ಸರಿಯಲ್ಲ  ©ಡಾ.ಲಕ್ಷ್ಮೀ ಜಿ ಪ್ರಸಾದ,ಕನ್ನಡ ಉಪನ್ಯಾಸಕಿ ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆ

(ಲಿಪಿ ತಜ್ಞರಾದ ಜಮದಗ್ನಿ ಅಗ್ನಿ ಹೋತ್ರಿಯವರು ಇದು ತಿಗಳಾರಿ ಲಿಪಿ ಎಂದು ತಿಳಿಸಿ ,ವಿದ್ಯಾ ಅವರು ಹೇಳಿಕೊಡುತ್ತಾ ಇರುವ ತಿಗಳಾರಿ (ತುಳು) ಲಿಪಿಯಲ್ಲಿ ಅನೇಕ ದೋಷಗಳು ಇರುವುದನ್ನು ಗಮನಿಸಿ ಪೇಸ್ ಬುಕ್ ಮೂಲಕ  ವಿದ್ಯಾ ಅವರಿಗೆ  ನೀಡಿದ ಸೂಚನೆಗಳು--
Vidya Shree S Shetty ನಾವು ದಕ್ಷಿಣ ಕನ್ನಡದವರಲ್ಲ ,ತುಳು ಬರುವುದಿಲ್ಲ .ಲಿಪಿಯ ದೃಷ್ಟಿಯಿಂದ ಸಲಹೆಗಳನ್ನು ಕೊಡಬಲ್ಲೆ. ನೀವು ಪ್ರಸ್ತುತ ಹೇಗೆ ಕಲಿಸುತ್ತಿದ್ದೀರೋ ನನಗೆ ತಿಳಿಯದು. ನೀವು ಕಲಿಸುವ chart ಕೊಟ್ಟರೆ ಸಲಹೆ ನೀಡಬಲ್ಲೆ.ಉಕಾರ,ಉಕಾರದ ಕಾಗುಣಿತಕ್ಕೆ special forms ಇದೆ.ಕು,ಗು,ಜು ಇತ್ಯಾದಿಗಳಿಗೆ circle ಕೆಳಗೆ ಬರೆಯಬಾರದು. ಕೆಲವು ಅಕ್ಷರಗಳಾದ ಐ,ಖ,ಙ,ಞ,ಛ,ಟ,ಝ ಇತ್ಯಾದಿಯಲ್ಲಿ ಮಾರ್ಪಾಡು ಬೇಕು. ಇಲ್ಲಿ ಸಂಯುಕ್ತಾಕ್ಷರ ಕನ್ನಡದಂತೆ ಬರೆಯುವುದಿಲ್ಲ. ಎರಡೂ ಒಂದೇ size ಇರಬೇಕು,ಚಿಕ್ಕದು ದೊಡ್ಡದು ಇರಬಾರದು.ಯ,ರ,ಲ,ವ,ಮ ಇವುಗಳಿಗೆ ಸ್ಪೇಸಿಯಲ್ ರೂಪಗಳು ಇವೆ, ವ್ಯಂಜನಕ್ಕೆ ಜೋಡಿಸಿ ಬರೆಯಬೇಕು ಬಿಡಿಸಿ ಬರೆಯಬಾರದು,ಸಾಮಾನ್ಯದ ತರಹ ಬರೆಯಬಾರದು. ವ್ಯಂಜನದ ಹಿಂದೆ ಅನುಸ್ವಾರ ಬಳಸುವುದಿಲ್ಲ,ಮಲಯಾಳದಂತೆ ಅಂದ ಬದಲು ಅನ್ದ ಎಂದೇ ಬರೆಯುತ್ತಾರೆ. ನನಗೆ ತಿಳಿದಿರುವ ಮಟ್ಟಿಗೆ ಪ್ರತ್ಯೇಕ ಅಂಕಿಗಳು ಇಲ್ಲ,ಕನ್ನಡ ಸಂಖ್ಯೆಗಳನ್ನೇ ಬಳಸುತ್ತಾರೆ. ಪ್ರತ್ಯೇಕ ಸಂಖ್ಯೆ ಎನ್ನುವ ಹಸ್ತಪ್ರತಿಗಳ ಲಿಪಿ ಮಲಯಾಳ ಲಿಪಿ. ವ್ಯಂಜನಗಳ ಸಂಯುಕ್ತಾಕ್ಷರ ಬಹಳ ಕ್ಲಿಷ್ಟ ಕನ್ನಡದಂತೆ ಸುಲಭವಲ್ಲ.ಕ್ಕ,ತ್ತ,ತ್ಕ,ದ್ಧ,ತ್ಮ,ಕ್ಷ ,ರ್ಯ,ರ್ವ,ಸ್ಥetc ಗಳಲ್ಲಿ ಎರಡು ಅಕ್ಷರಗಳನ್ನು ಹೊಂದಿಸಿ ಅಕ್ಷರ ಬರೆಯುತ್ತಾರೆ, ಕೆಳಗೆ ಸಾಮಾನ್ಯವಾಗಿ ಬರೆಯುವುದಿಲ್ಲ.ಇ ,ಈ,ಉ ಸ್ವಲ್ಪ ಬೇರೆ ತರಹ ಬರೆಯುತ್ತಾರೆ.ಟ್ ,ತ್ ,ಕ್ ,ನ್ ಇವುಗಳು ವಿಶಿಷ್ಟವಾಗಿ ಬರೆಯುತ್ತಾರೆ,ಹಲಂತವನ್ನು ಸಾಮನ್ಯವಾಗಿ ಹಾಕುವುದಿಲ್ಲ.ಹೀಗೆ ಅನೇಕ ಕಲಿಕೆಯಲ್ಲಿ ಬದಲಾವಣೆಗಳು ಆವಶ್ಯಕ.ನಿಮ್ಮ ಪತ್ರಿಕೆಯ font ನಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಾಲ್ಕೈದು ಹಸ್ತಪ್ರತಿಗಳನ್ನು ಗಮನಿಸಿದರೆ ಸರಿಯಾದ ರೂಪಗಳು ರೂಪಗಳು ಯಾವುವು ಎಂದು ನಮಗೆ ಗೊತ್ತಾಗುವುದು.ನಮ್ಮ ಉದ್ದೇಶ ಇಷ್ಟೇ ಜನರು ಸರಿಯಾಗಿ ಕಲಿಯಲಿ.)

Wednesday 31 May 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 377-384 ಪೂಂಕಣಿ ಭಗವತಿ ಬಪ್ಪಿರಿಯನ್,ಮತ್ತು ಆರು ಸಹೋದರ ದೈವಗಳು © ಡಾ ಲಕ್ಷ್ಮೀ ಜಿ ಪ್ರಸಾದ್

ಪೂಂಕಣಿ ಭಗವತಿ ಮತ್ತು ಆರು ಜನ ಸಹೋದರ ತೆಯ್ಯಂ ಗಳು ಮೂಲತಃ ಬ್ರಾಹ್ಮಣರ ಮಕ್ಕಳು.
ಈ ದೈವದ ಕಥಾನಕವನ್ನು ಕೇಳು ಮಾಸ್ತರ್ ಅಗಲ್ಪಾಡಿ ಅವರು ಹೀಗೆ ನೀಡಿದ್ದಾರೆ.
ಸಪ್ತ ಮಾತೃಕೆಯರಲ್ಲಿ ಒಬ್ಬಳಾದ ಕುಮಾರಿಯು ಕೋಲತ್ತುನಾಡಿನ ದಕ್ಷಿಣ ಭಾಗದ ಗಡಿ ಭಾಗದಲ್ಲಿ ಅರಿಯಾಂಕರ ಎಂಬಲ್ಲಿ ಪ್ರತಿಷ್ಠಿತ ಬ್ರಾಹ್ಮಣ ದಂಪತಿಗಳ ಮಗಳಾಗಿ ಜನಿಸಿದಳು. ಇವಳಿಗೆ ಪೂಂಕಣಿ ಎಂದು ಹೆಸರಿಟ್ಟು ಮುದ್ದಿನಿಂದ ಸಾಕಿದರು .ಇವಳಿಗೆ ಆರು ಜನ ಅಣ್ಣಂದಿರು ಇದ್ದರು.ಪೂಂಕಣಿಗೆ ವಿವಾಹ ವಯಸ್ಸಾಗಲು ವಿವಾಹ ಪ್ರಸ್ತಾಪಗಳು ಬರತೊಡಗಿದವು.ಆಗ ಪೂಂಕಣಿಗೆ ಕೊರಳಿಗೆ ಧರಿಸಲು ಸಾಕಷ್ಟು ಮುತ್ತುಗಳು ಇರಲಿಲ್ಲ. ಹಾಗಾಗಿ ಅವಳು ಮತ್ತು ಆರು ಮಂದಿ ಅಣ್ಣಂದಿರು ಹಡಗಿನಲ್ಲಿ ಮುತ್ತು ತರಲು ಸಮುದ್ರಕ್ಕೆ ಹೋದರು.ಬಿರುಗಾಳಿಗೆ ಸಿಕ್ಕು ಹಳೆಯ ಹಡಗು‌ಮುರಿದು ಹಡಗಿನ ತುಂಡೊಂದನ್ನು ಹಿಡಿದು ತೇಲಿಕೊಂಡು ದಡ ಸೇರಿದರು.ಆಗ ಪೂಂಕಣಿ ಮತ್ತು ಸಹೋದರರು ಬೇರೆ ಬೇರೆಯಾದರು.ಅಣ್ಣಂದಿರನ್ನು ಹುಡುಕುತ್ತಾ ಅಲೆಯುವಾಗ ದೂರದಲ್ಲಿ ಒಂದು ಹಡಗು ಕಾಣಿಸಿತು.ಅದು ಬಪ್ಪಿರಿಯನ್ ಬ್ಯಾರಿಯ ಹಡಗಾಗಿತ್ತು.ತನ್ನ ಸಹೋದರರನ್ನು ಹುಡುಕಲು ಅವನ ಸಹಾಯ ಯಾಚಿಸಿದಳು.ಅವನು ಅದಕ್ಕೆ ಒಪ್ಪದ
 ಅವಳನ್ನು ಹೀಯಾಳಿಸಿದನು .ಆಗ ಅವಳು ಗಂಗಾ ಮಾತೆಯನ್ನು ಪ್ರಾರ್ಥನೆ ಮಾಡಿದಾಗ ತೆರೆಗಳು ಸರಿದು ದಾರಿ ಮಾಡಿಕೊಟ್ಟವು.ಬಪ್ಪಿರಿಯನ್ ನ ಹಡಗು ತಲುಪಿದಾಗ ಅಲ್ಲಿ ತನಕವೂ ದಾರಿ ಆಯಿತು.ಆಗ ಅವಳ ಕಾರಣಿಕ ತಿಳಿದ ಬಪ್ಪಿರಿಯನ್ ಅವಳ ಸಗೋದರರನ್ನು ಹುಡುಕಲು ಸಹಾಯ‌ಮಾಡಿದನು.ಅವರು ಸಿಕ್ಕಿದರಾದರೂ ಅವರೆಲ್ಲರೂ ಸತ್ತು ಹೋಗಿ ಶವಗಳು ಮಾತ್ರ ಸಿಕ್ಕವು.ಪೂಂಕಣಿ ಯು ತನಗನ ಮಂತ್ರ ಶಕ್ತಿ ಯಿಂದ ಅವರನ್ನು ಅಲ್ಲ‌ನೆಲೆಗೊಳಿಸಿದಳು.ಅ ಆರು‌ಮಂದಿ ಅಣ್ಣಂದಿರು ದೈವಗಳಾಗಿ ಅಲ್ಲಿ ನೆಲೆನಿಂತರು.ಹಡಗಿನಲ್ಲಿ ‌ಮುಂದುವರಿದ ಬಪ್ಪಿರಿಯನ್ ಮತ್ತು ಅವನ ಸಂಗಡಿಗರನ್ನು ಕಡಲ್ಗಳ್ಳರು ಕೊಂದು ಹಾಕಿದರು.ಆಗ ಬಪ್ಪಿರಿಯನ್ ಆತ್ಮವನ್ನು ಅವಾಹಿಇಸಿ ಅವನಿಗೆ ಒಂದು ನೆಲೆ ನೀಡಿದಳು.ತನಗನ ಆಪ್ತನನ್ನಾಗಿಸಿದಳು.
ಅವಳು ಮುಂದೆ ಕುಡಲ್ ಕುನ್ನು ಎಂಬ ಬ್ರಾಹ್ಮಣ ರಿಗಿದ್ದ ತೊಂದರೆಗಳನ್ನು ನಿವಾರಿಸಿ ಅಲ್ಲಿ ನೆಲೆಯಾಗಿ ಅವರಿಂದ ಆರಾಧನೆ ಯನ್ನು ಪಡೆದಳು.
ಇಲ್ಲಿ ಬರುವ ಬಪ್ಪಿರಿಯನ್ ‌ಮತ್ತು ಬಬ್ಬರ್ಯ ದೈವ ಒಂದೇ ಇರಬೇಕು ಕಥಾನಕದಲ್ಲಿ ಸಾಮ್ಯತೆ ಇದೆ
ಆದಾರ ಗ್ರಂಥ - ಕೇರಳ ತೆಯ್ಯಂ ಲೇಖಕರು ಕೇಳು ಮಾಸ್ತರ್ ಅಗಲ್ಪಾಡಿ

Monday 8 May 2017

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ? ©©ಡಾ ಲಕ್ಷ್ಮೀ ಜಿ ಪ್ರಸಾದ

ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಹೊರತು ಬೇರೆ ಬೇರೆಯಲ್ಲ © ಡಾ ಲಕ್ಷ್ಮೀ ಜಿ ಪ್ರಸಾದ

ಅನೇಕರು ತಿಗಳಾರಿ/ ತುಳು ಲಿಪಿ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಮೆಸೆಂಜರ್ ಮೂಲಕ ಹೆಚ್ಚಿನ ವರಿಗೆ ಬ್ಲಾಗ್ ಲಿಂಕ್ ಓಪನ್ ಅಗುತ್ತಿಲ್ಲವಂತೆ ಹಾಗಾಗಿ ಬ್ಲಾಗ್ ಬರಹವನ್ನು ಕಾಪಿ ಮಾಡಿ ಹಾಕಿರುವೆ

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ?

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ವೆಬ್ ನಲ್ಲಿ ತುಳು ವರ್ಣ ಮಾಲೆಯಲ್ಲಿಯೇ ದೋಷಗಳು ಇಲ್ಲಿ ಇದು ತಿಗಳಾರಿ ಲಿಪಿ ಎಂದು ಹೊರಗಡೆ ಪ್ರಸಿದ್ಧವಾಗಿದೆ ತುಳುನಾಡಿನ ಕೆಲವೆಡೆ ತುಳು ಲಿಪಿ ಎಂದು ಕರೆಯುತ್ತಾರೆ ಎಂಬ ಸತ್ಯವನ್ನು  ಮುಚ್ಚಿಟ್ಡು ತುಳು ಲಿಪಿ ಎಂದು ಮಾತ್ರ ಹೇಳಲಾಗಿದೆ  .

ಅದಿರಲಿ ತಿಗಳಾರಿ ಅಥವಾ ತುಳು ವರ್ಣಮಾಲೆಯಲ್ಲಿ ಹ್ರಸ್ವ ಎ ಒ ಸ್ವರಗಳಿಲ್ಲ ಇಲ್ಲಿ ತಿಗಳಾರಿ / ತುಳು ಲಿಪಿ ಯಲ್ಲಿ ರುವ ದೀರ್ಘ ಏ ಓ ಗಳನ್ನು ಬರೆದು ಅದರ ಕೆಳಗಡೆ ಹ್ರಸ್ವ ಎ ಒ ಎಂದು ಕನ್ನಡ ದಲ್ಲಿ ಬರೆದಿದ್ದಾರೆ ಕಳೆದ ವರ್ಷ ಏಳೆಂಟು ಲಿಪಿ ತಜ್ಞರು ಬಂದು ಏನೋ ವಿಚಾರ ಮಾಡಿದ್ದಾರಂತೆ ಆದರೂ ತುಳು ಅಕಾಡೆಮಿ ವೆಬ್ ನಲ್ಲಿ ಆದ ಇಷ್ಟು ದೊಡ್ಡ ಪ್ರಮಾದವನ್ನೇ ತಿದ್ದಿಲ್ಲ ,ತುಳು ಲಿಪಿ/ ತಿಗಳಾರಿ ಲಿಪಿ ಬಗ್ಗೆ ಒಂದು ಸಾಲಿನ ಮಾಹಿತಿ ಕೂಡಾ ಇಲ್ಲ ಇರುವ ವರ್ಣಮಾಲೆಯಲ್ಲಿ ಇಷ್ಟು ದೊಡ್ಡ ತಪ್ಪು ಯಾರಿಗೆ ಹೇಳೋಣ ? ರಿಜಿಸ್ಟ್ರಾರ್ ಗೆ ಈ ಬಗ್ಗೆ ಪೋನ್ ಮಾಡಿದರೆ ಬರೆದು ತಿಳಿಸಿ ಎಂಬ ಉತ್ತರ ಸಿಕ್ಕಿದೆ.
ಹಾಗಾಗಿ ಈ ಲಿಪಿ ಬಗ್ಗೆ ಮಾಹಿತಿ ಗೆ ಇಲ್ಲಿ ಓದಿ

ತುಳು ಭಾಷೆಯನ್ನು ಅಪಭ್ರಂಶಗೊಳಿಸಿ ವಿರೂಪ ಗೊಳಿಸಬೇಡಿ

ಭಾಷೆಯೊಂದಕ್ಕೆ ಲಿಪಿ ಇರಲೇ ಬೇಕೆಂದೇನೂ ಇಲ್ಲ ಜಗತ್ತಿನ ಹೆಚ್ಚಿನ ಭಾಷೆಗಳಿಗೆ ಸ್ವಂತ ಲಿಪಿಯಿಲ್ಲ ನಮ್ಮ ರಾಷ್ಟ್ರೀಯ ಭಾಷೆ ಹಿಂದಿ ಪ್ರಾಚೀನ ಭಾಷೆ ಸಂಸ್ಕೃತ ಜನಪ್ರಿಯ ಭಾಷೆ ಇಂಗ್ಲಿಷ್ ಗೂ ಸ್ವಂತ ‌ಲಿಪಿಯಿಲ್ಲ ಹಿಂದಿ ಸಂಸ್ಕೃತ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಷೆಗಳಿಗೆ ನಾಗರಿ ಲಿಪಿಯನ್ನು ಬಳಸುತ್ತಾರೆ ಇಂಗ್ಲಿಷ್ ಗೆ ರೋಮ್ ಲಿಪಿ ಬಳಸುತ್ತಾರೆ
ಈ ಹಿಂದೆ ಸಂಸ್ಕೃತ ಬರೆಯಲು ತಿಗಳಾರಿ ಲಿಪಿಯನ್ನು ಬಳಕೆ ಮಾಡುತ್ತಿದ್ದು ಅದನ್ನು  ತುಳುನಾಡಿನಲ್ಲಿ ಯೂ ಸಂಸ್ಕೃತ ದ ವೇದ ಮಂತ್ರಗಳನ್ನು ಬರೆಯಲು  ತುಳುನಾಡಿನ ಹವ್ಯಕ ,ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬಳಕೆ ಮಾಡಿದ್ದಾರೆ  ಜೊತೆಗೆ ಉತ್ತರ ಕನ್ನಡದ ಶಿವಮೊಗ್ಗ ಕೆಳದಿ ತಮಿಳುನಾಡಿನ ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ತುಳು ಬ್ರಾಹ್ಮಣರು ಸಂಸ್ಕೃತ ವೇದ ಮಂತ್ರಗಳನ್ನು ಬರೆಯಲು ಬಳಸಿದ್ದಾರೆ ಇದಕ್ಕೆ ಮೊದಲಿನಿಂದಲೂ ತಿಗಳಾರಿ ಲಿಪಿ ಎಂದು ಕರೆಯುತ್ತಾ ಇದ್ದರು ತುಳು ಲಿಪಿ ಎಂಬ ಹೆಸರೂ ಕೆಲವರು ಬಳಸಿದ್ದಾರೆ   ಆದರೆ ಪ್ರಸ್ತುತ  ತುಳು ಭಾಷೆಯ ಬರವಣಿಗೆಗೆ ಸೂಕ್ತವಾಗಿಲ್ಲ  ಯಾಕೆಂದರೆ ಇದರಲ್ಲಿ ತುಳು ಭಾಷೆಯಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ಇದರಿಂದಾಗಿ ಈ ಲಿಪಿಯಲ್ಲಿ ತುಳು ಭಾಷೆ ಎಂದು ಬರೆಯಲು ಸಾಧ್ಯವೇ ಇಲ್ಲ ಬದಲಿಗೆ ತುಳು ಭಾಷೇ ಎಂದು ಬರೆಯಬೇಕಾಗುತ್ತದೆ ಎಣ್ಣೆ ಬದಲು ಏಣ್ಣೆ ಪೊಣ್ಣು ಬದಲು ಪೋಣ್ಣು ಡೆನ್ನಾನ ಬದಲು ಡೇನ್ನಾನ ಎಡ್ಡೆ ಬದಲು ಏಡ್ಡೆ ತೆನೆ ಬದಲು ತೇನೆ ಕೊರಳು ಬದಲು ಕೋರಳು ಕೊಪ್ಪ ಬದಲು ಕೋಪ್ಪ ಕೊರಗಜ್ಜ ಬದಲು ಕೋರಗಜ್ಜ ಕೆರೆ ಬದಲು ಕೇರೆ  ಬರೆಯಬೇಕಾಗುತ್ತದೆ ಕೆರೆ ಕೇರೆಯಾದಾಗ ಕೆಬಿ ಕೇಬಿಯಾಗಿ,ಕೆಪ್ಪೆ ಕೇಪ್ಪೆಯಾಗಿ ಕೊಡಿ ಕೋಡಿಯಾಗಿ ,ಎರು ಏರು ಅಗಿ ,ಎರ್ಮ್ಮೆ ಏರ್ಮ್ಮೆಯಾಗಿ ಎಣ್ಮೆ ಏಣ್ಮೆಯಾಗಿ ಕೆಸರ್ ಕೇಸರ್ ಆಗಿ ರಾಮೆ ರಾಮೇ ಆಗಿ ಕೃಷ್ಷಪ್ಪೆ ಕೃಷ್ಣಪ್ಪೇ ಆಗಿ , ಪೊಸತು ಪೋಸತು ಪೊರ್ಲು ಬದಲು‌ ಪೋರ್ಲು ಆಗಿ ,ಬೆರ್ಮರ್ ಬೇರ್ಮರ್ ಆಗಿ ,ಪೊಡಿ ಬದಲು ಪೋಡಿಯಾಗಿ ಬೊಂಡ ಬದಲು ಬೋಂಡ ಅಗಿ ಕೊಡೆ ಕೋಡೆಯಾಗಿ ಬೆಲೆ ಬೇಲೆಯಾಗಿ ,ಕೆದು ಕೇದುವಾಗಿ ,ಕೆಮ್ಮು ಕೇಮ್ಮುವಾಗಿ ,ಎಡೆ ಏಡೆಯಾಗಿ ಅರ್ಥ ಅನರ್ಥವಾಗಿಬಿಡುತ್ತದೆ  ಯಾಕೆಂದರೆ ಈ ಲಿಪಿಯಲ್ಲಿ ಹ್ರಸ್ವ ಎ ಒ ಗಳು ಇಲ್ಲ‌ ಹೀಗೆ ಬಳಸಿದರೆ  ತುಳು ಭಾಷೆ ತನ್ನ ಮೂಲ ರೂಪವನ್ನು ಕಳೆದುಕೊಂಡು ಅಪಭ್ರಂಶ ಗೊಳ್ಳುತ್ತದೆ ಹಾಗಾಗಿ ಈಗ ಸಂಸ್ಕೃತ ವೇದ ಮಂತ್ರಗಳ ಬಳಕೆಗಾಗಿ ರೂಪುಗೊಂಡ ತಿಗಳಾರಿ ಲಿಪಿ/ ತುಳುಲಿಪಿ ಯನ್ನು ಪರಿಷ್ಕರಿಸಿ ಕಲಿಸುವ ಬಳಸುವ ಅಗತ್ಯವಿದೆ

ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಮಾತ್ರ ಬಳಕೆಗೆ ತಂದದ್ದಲ್ಲ ಹವ್ಯಕ ಚಿತ್ಪಾವನ ಕರಾಡ ಕೋಟ ಬ್ರಾಹ್ಮಣರು ಉತ್ತರ ಕನ್ನಡ ಶಿವಮೊಗ್ಗ ಕೆಳದಿಯ ಕನ್ನಡ ಬ್ರಾಹ್ಮಣರು,ಮೈಸೂರಿನ ಬೆಂಗಳೂರಿನ‌ಕೆಲವು ಬ್ರಾಹ್ಮಣ ಸಮುದಾಯಗಳು  ತಂಜಾವೂರು ಕಂಚಿಯ  ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ಧರ್ಮಸ್ಥಳ ದಲ್ಲಿ ಸಂಗ್ರಹವಾಗಿರುವ ಒಂದೂವರೆ ಸಾವಿರದಷ್ಟು ತಿಗಳಾರಿ / ತುಳು ಲಿಪಿ ಹಸ್ತಪ್ರತಿ ಗಳಲ್ಲಿ ಅನೇಕ ಹವ್ಯಕ ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬರೆದ ಅವರುಗಳ ಮನೆಯಲ್ಲಿ ಸಿಕ್ಕ ಹಸ್ತಪ್ರತಿ ಗಳಿವೆ ನಮ್ಮ ( ನಾವು ಹವ್ಯಕ ರು) ಮನೆಯಲ್ಲಿಯೂ ಅನೇಕ ತಿಗಳಾರಿ ಲಿಪಿ ಯ ಹಸ್ತಪ್ರತಿ ಗ್ರಂಥಳಿದ್ದು ಇವರಲ್ಲವು ಮಂತ್ರ ಪ್ರಯೋಗಗಳಾಗಿವೆ ಹವ್ಯಕರಲ್ಲಿ ಈ ಲಿಪಿಯಲ್ಲಿ ಹವ್ಯಕ ಭಾಷೆಯಲ್ಲಿ ಪತ್ರ ವ್ಯವಹಾರ ಕಡತ ನಿರ್ವಹಣೆಗಳಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಈ ಲಿಪಿಯಲ್ಲಿ ಬರೆದ ಹವ್ಯಕ ಕನ್ನಡ ದ ಪತ್ರಗಳು ನೂರಕ್ಕಿಂತ ಹೆಚ್ಚು ಇವೆ
ಇನ್ನು ಅದು ಬ್ರಾಹ್ಮಣರು ಬಳಕೆಗೆ ತಂದ ಲಿಪಿ ಎಂಬುದಕ್ಕೆ ಅದರಲ್ಲಿ ಸಿಕ್ಕ ಎಲ್ಲಾ ಕೃತಿಗಳನ್ನು ಬ್ರಾಹ್ಮಣರು ಬರೆದಿದ್ದು ಒಂದೇ ಒಂದು ಕೃತಿ ಬೇರೆಯವರು ಬರೆಯದಿರುವವುದು ಈಗಲೂ ಅದನ್ನು ಹೇಳಿಕೊಟ್ಟವರು ಬ್ರಾಹ್ಮಣರು ಎಂಬ ಆಧಾರವೇ ಸಾಕು
ಲಿಪಿ ರೂಪಿಸಲು ಎಷ್ಟು ಜನ ಇದ್ದಾರೆ ಎಂಬುದು ಮುಖ್ಯವಲ್ಲ ಅದನ್ನು ಯಾರು ಯಾಕೆ ಬಳಸಿದ್ದಾರೆ ಎಂಬುದು ಮುಖ್ಯ ವಾಗುತ್ತದೆ
ಇದರಲ್ಲಿ ತುಳು ಭಾಷೆಯ ಹ್ರಸ್ವ ಎಒ  ಇಲ್ಲ ಇದರಲ್ಲಿ  ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ
ಅಲ್ಲದೆ ತುಳು ಭಾಷೆಯ ಏಳು ಕೃತಿಗಳು ಮಾತ್ರ ಆ ಲಿಪಿ ಯಲ್ಲಿ ಇರುವುದು ಅದರಲ್ಲಿ ಯೂ ಹ್ರಸ್ವ ಎ ಒ ಗಳು ಇಲ್ಲದ ಕಾರಣ ತುಂಬಾ ದೋಷಗಳಿವೆ ತುಳು ಕರ್ಣ ಪರ್ವ ವನ್ನು ಪುಣಿಚಿತ್ತಾಯ ರು ಈ ಹಿಂದೆ ನನಗೆ ಗೌರವ ಪ್ರತಿ ನೀಡಿದ್ದು ಅದರಲ್ಲಿ ಈ ದೋಷಗಳಿರುವುದನ್ನು ಅವರೂ ಹೇಳಿದ್ದಾರೆ
ಲಿಪಿಯೊಂದು ಇದ್ದಕ್ಕಿದ್ದಂತೆ ರೂಪು ಗೊಳ್ಳುವುದಿಲ್ಕ ಇದು ತಮಿಳಿನ ಗ್ರಂಥ ಲಿಪಿಯನ್ನು ಹೋಲುತ್ತಿದ್ದು ಅದರಿಂದ ರೂಪುಗೊಂಡಿದೆ ಗ್ರಂಥ ಲಿಪಿ ತುಳುನಾಡಿನಲ್ಲಿ ಇರಲಿಲ್ಲ ದಕ್ಷಿಣ ಭಾರತದ ್ಲ್ಲಿ ವೇದಾಧ್ಯಯನ ಕೇಂದ್ರ ಇದ್ದದ್ದು ತಮಿಳುನಾಡಿನ ತಂಜಾವೂರು ಮತ್ತು ಕಂಚಿಗಳಲ್ಲಿ
ಅಲ್ಲಿನ ತಮಿಳು ಲಿಪಿಯಲ್ಲಿ ಮುವತ್ತಾರು ಅಕ್ಷರಗಳು ಮಾತ್ರ ಇದ್ದು ಅದು ಸಂಸ್ಕೃತ ವೇದಾ ಮಂತ್ರಗಳ ಬರವಣಿಗೆಗೆ ಸೂಕ್ತ ವಾಗಿರಲಿಲ್ಲ ಹಾಗಾಗಿ ಅವರು ತಮಿಳು ಲಿಪಿ ಯನ್ನು ಪರಿಷ್ಕರಿಸಿ ಸಂಸ್ಕೃತ ಕ್ಕೆ ಸೂಕ್ತ ವಾದ ಗ್ರಂಥ ಲಿಪಿ ರೂಪಿಸಿದರು ಅಲ್ಲಿ ನಾಗರಿ ಲಿಪಿ ಪರಿಚಿತವಾಗಿರಲಿಲ್ಲಅಲ್ಲಿಗೆ ವೇದಾಧ್ಯಯನ ಮಾಡಲು ಹೋದ ದಕ್ಷಿಣ ಕನ್ನಡ ಉತ್ತರ ಕನ್ನಡ ದ  ಬ್ರಾಹ್ಮಣ ರು ಅಲ್ಲಿನ ಗುರುಗಳಿಂದ ಗ್ರಂತ ಲಿಪಿ ಕಲಿತು ವೇದ ಮಂತ್ರಗಳ ನ್ನು ಅದರಲ್ಲಿ ಬರೆದರು ನಂತರ ಕಾಲಾಂತರದಲ್ಲಿ ಅದು ಬದಲಾಗುತ್ತಾ ತಿಗಳಾರಿ ಲಿಪಿ ಆಯಿತು ಹಾಗಾಗಿ ಅದನ್ನು ತಿಗಳರ ಎಂದರೆ ತಮಿಳರ ಆರ್ಯ ಎಂದರೆ ಸಂಸ್ಕೃತ ಲಿಪಿ ಎಂದು ಕರೆದರು ಅದು ಹ್ರಸ್ವ ಗೊಂಡು ತಿಗಳಾರಿ ಅಯಿತು ಇದನ್ನು ಬಳಕೆ ಮಾಡಿದವರಲ್ಲಿ ಕೋಟ ಹವ್ಯಕ ಚಿತ್ಪಾವನ ತುಳು  ಕರಾಡ ಬ್ರಾಹ್ಮಣರು ಶಿವಮೊಗ್ಗ ಕೆಳದಿ ಉತ್ತರ ಕನ್ನಡ ದ ಕನ್ನಡ ಬ್ರಾಹ್ಮಣರು ತಂಜಾವೂರು ಕಂಚಿಯ ಬ್ರಾಹ್ಮಣರು  ಸೇರಿದ್ದಾರೆ ಇವರಲ್ಲಿ ತುಳು ಬ್ರಾಹ್ಮಣರು ಕೇರಳಕ್ಕೆ ದೇವಸ್ಥಾನ ಗಳ ಪೂಜೆಗೆ ಹೋದಾಗ ತಿಗಳಾರಿ ಲಿಪಿ ಅಲ್ಲಿ ಹರಡಿ ಅಲ್ಲಿ ನವರು ಅದನ್ನು ಮಲೆಯಾಳ ಭಾಷೆಗೆ ಸೂಕ್ತ ವಾಗುವಂತೆ ಪರಿಷ್ಕರಿಸಿ ಬಳಸಿದರು ಅವರು ಆರಂಭದಲ್ಲಿ ಅದನ್ನು ತುಲುವನತ್ತಿಲ್ ಎಂದರೆ ತುಲುವರ ಲಿಪಿ ಎಂದು ಕರೆದಿದ್ದು ಅವರು ರೂಪಿಸಿದ ಲಿಪಿ ಯನ್ನು ತುಲು ಮಲೆಯಾಳ ಲಿಪಿ ಎಂದು ಕರೆದು ಕಾಲಾಂತರದಲ್ಲಿ ಮಲೆಯಾಳ ಲಿಪಿ ಎಂದು ಮಾತ್ರ ಹೆಸರು ಉಳಿಯಿತು
ಆದರೆ ಇದು ತುಲು ಭಾಷೆಯ ಲಿಪಿ ಅಲ್ಲ
ಸಂಸ್ಕೃತ ಭಾಷೆಗೆ ಸ್ವಂತ ಲಿಪಿ ಇಲ್ಲ ಉತ್ತರದಲ್ಲಿ ನಾಗರಿ ಲಿಪಿ ತಮಿಳುನಾಡಿನಲ್ಲಿ ಗ್ರಂಥ ಲಿಪಿ ತೆಲುಗರು ತೆಲುಗು ಲಿಪಿ ಯನ್ನು ಸಂಸ್ಕೃತ ಕ್ಕೆ ಬಳಸುತ್ತಾ ಇದ್ದರು
ಅಕಾಡೆಮಿ ಗೆ ಹೇಳಿ ಲಿಪಿ ಯ ಇತಿಹಾಸವನ್ನು ತಿಳಿಸಿ ಪರಿಷ್ಕರಿಸಿ ಬಳಕೆಗೆ ತರುವ ಕೆಲಸ ಆಗಬೇಕಿದೆ ಅಕಾಡೆಮಿ ವೆಬ್ ಹಾಕಿದ ತುಳು ವರ್ಣ ಮಾಲೆ ಚಾರ್ಟ್ ನಲ್ಲಿ ತಪ್ಪಿದೆ ಹಾಗೆ ನೋಡಿದರೆ ವಿದ್ಯಾ ಶ್ರೀ ಅವರು ಪ್ರಕಟಿಸಿದ ವರ್ಣಮಾಲೆ ಸರಿ ಇದೆ .ತಪ್ಪನ್ನು ತಿದ್ದಿ ಪರಿಷ್ಕರಿಸದೆ ಬಳಸಿದರೆ ತುಳು ಭಾಷೆ ಅಪಭ್ರಂಶ ಗೊಂಡು ವಿರೂಪ ಗೊಳ್ಳುತ್ತದೆ

1 ತುಳುನಾಡಿನ ವ್ಯಾಪ್ತಿ ಉಡುಪಿ ಕಾಸರಗೋಡು ದ.ಕ ಜಿಲ್ಲೆ ತಿಗಳಾರಿ ಲಿಪಿ ತಮಿಳುನಾಡಿನ ತಂಜಾವೂರು ಕಂಚಿ ಧರ್ಮ ಪುರ ಕೃಷ್ಣ ಪುರ ಗಳಲ್ಲಿ ಬಳಕೆಇದೆ ಕರ್ನಾಟಕ ದಲ್ಲಿ ಉತ್ತರ ಕನ್ನಡ ಶಿವಮೊಗ್ಗ ಮಲೆನಾಡಿನಲ್ಲಿ ಬಳಕೆ ಇತ್ತು ತುಳು ಭಾಷೆ ಮತ್ತು  ತುಳುವರು ಇಲ್ಲದ ಕಡೆಯೂ ಬಳಕೆಯಲ್ಲಿತ್ತು
2 ಈ ಲಿಪಿಯಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಿಕ್ಕಿದ್ದು ಅವೆಲ್ಲವೂ ಸಂಸ್ಕೃತ ವೇದ ಮಂತ್ರಗಳು ಆಗಿವೆ  ಆದರೆ ಕೇವಲ ಏಳು‌ ತುಳು ಕೃತಿಗಳು ಮಾತ್ರ ಈ ಲಿಪಿಯಲ್ಲಿ ಇವೆ
3 ಇದು ತುಳು ಭಾಷೆಗೆ ಸೂಕ್ತ ವಾಗಿಲ್ಲ ಇದರಲ್ಲಿ  ತುಳುವಿನ ಎಲ್ಲ ಅಕ್ಷರಗಳು ಇಲ್ಲ ಇದರಲ್ಲಿ ತುಳುವಿನಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ತುಳುವಿನಲ್ಲಿ ಇಲ್ಲದೆ ಇರುವ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ

4 ಇದು ಸಂಸ್ಕೃತ ವನ್ನು ಬರೆಯಲು ರೂಪುಗೊಂಡ ಲಿಪಿಯಾಗಿದ್ದು ಸಂಸ್ಕೃತ ದ ಎಲ್ಲ ಅಕ್ಷರಗಳು ಇವೆ ಉದಾ ಸಂಸ್ಕೃತ ದಲ್ಲಿ ದೀರ್ಘ ಋ ಇದೆ ಇದರಲ್ಲೂ ಇದೆ ಲೃ ಅನ್ನುವ ವಿಶಿಷ್ಠವಾದ ಅಕ್ಷರ ಸಂಸ್ಕೃತ ದಲ್ಲಿದೆ ಇದರಲ್ಲೂ ಅದು ಇದೆ ಸಂಸ್ಕೃತ ದಲ್ಲಿ ಹ್ರಸ್ವ ಎ ಒ ಗಳು ಇಲ್ಲ ಹಾಗಾಗಿ ಇದರಲ್ಲೂ ಇಲ್ಲ

5 ಇದರಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಂಸ್ಕೃತ ದಲ್ಲಿವೆ ಅವುಗಳಲ್ಲಿ 99 .9% ಶೇಕಡ ವೇದ ಮಂತ್ರಗಳು

6 ಒಂದು ಲಿಪಿ ತನ್ನಿಂದ ತಾನೇ ಸೃಷ್ಟಿ ಯಾಗುವುದಿಲ್ಲ ಬಳಕೆಯಲ್ಲಿರುವ ಒಂದು ಲಿಪಿ ಬದಲಾಗುತ್ತಾ ಕಾಲಾಂತರದಲ್ಲಿ ಇನ್ನೊಂದು ಲಿಪಿ ಯಾಗುತ್ತದೆ ಮೂಲ ಲಿಪಿಗೂ ಹೊಸ ಲಿಪಿಗೂ 50- 60% ವ್ಯತ್ಯಾಸ ಉಂಟಾದಾಗ ಅದನ್ನು ಇನ್ನೊಂದು ಲಿಪಿಯಾಗಿ ಗುರುತಿಸುತ್ತಾರೆ ಆ ಲಿಪಿ ಬೆಳೆದ ಪರಿಸರದಲ್ಲಿ ಅದಕ್ಕೆ ಮೂಲವಾಗಿರುವ ಲಿಪಿ ಇರಲೇ ಬೇಕು ತಿಗಳಾರಿ ಲಿಪಿ ಗೆ ಮೂಲವಾದ ಆರ್ಯ ಎಳತ್ತು /ಗ್ರಂಥ ಲಿಪಿ ತಮಿಳುನಾಡಿನ ಪರಿಸರದಲ್ಲಿ ಪ್ರಚಲಿತವಿದೆ ತುಳುನಾಡಿನಲ್ಲಿ ಇಲ್ಲ

7 ತುಳು ಲಿಪಿಯನ್ನು ವಿದ್ಯಾ ಶ್ರೀ ಅವರಿಗೆ ಹೇಳಿಕೊಟ್ಟ ಲಿಪಿ ತಜ್ಞ ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ, ಬೇರೆ ಬೇರೆಯಲ್ಲ ತಿಗಳಾರಿ ಎಂದು ಬರೆದುಬ್ರಾಕೆಟ್ ಒಳಗೆ ತುಳು ಲಿಪಿ ಎಂದು ಅಥವಾ ತುಳು ಲಿಪಿ ಎಂದು ಬರೆದು ಬ್ರಾಕೆಟ್ ಒಳಗೆ ತಿಗಳಾರಿ ಲಿಪಿ ಎಂದು ಬರೆಯಬೇಕು ಎಂದು ತಿಳಿಸಿದ್ದಾರೆ. (ಅವರು ಹೀಗೆ ಹೇಳಿದ ಬಗ್ಗೆ ದಾಖಲೆ ಇದೆ)ಆದರೆ ಇವರಿಂದ ಲಿಪಿ ಕಲಿತು ಪ್ರಚಾರ ಮಾಡುವ ತರಗತಿ ಮಾಡುವ ವಿದ್ಯಾ ಅವರು‌ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ತಪ್ಪು ಮಾಹಿತಿ ಹರಡುತ್ತಿದ್ದಾರೆ ಜೊತೆಗೆ ಬ್ರಾಹ್ಮಣರು ತುಳು ಲಿಪಿಯನ್ನು ತಿಗಳಾರಿ ಎಂದು ಕರೆದು ಅಡಗಿಸಿ ಇಟ್ಟು ತುಳುವರಿಗೆ ಸಿಗದ ಹಾಗೆ ಮಾಡಿದರು ಎಂದು ಹೇಳುತ್ತಾ ಜನರಲ್ಲಿ ಬ್ರಾಹ್ಮಣ ದ್ವೇಷ ಬಿತ್ತಿ ಸಾಮಾಜಿಕ ಸ್ವಾಸ್ಥ್ಯ ವನ್ನು ಹಾಳುಗೆಡವುತ್ತಾ ಇದ್ದಾರೆ
8 ಲಿಪಿ ತಜ್ಞರಾದ ಡಾ .ಪದ್ಮನಾಭ ಕೇಕುಣ್ಣಾಯ ಅವರು ತುಳುವಿಗೆ ಲಿಪಿ ಇರುವುದಾದರೂ ಅದು ಮೂಲತ ತಿಗಳಾರಿ ಲಿಪಿ ಹೊರಗಡೆ ಅದು ತಿಗಳಾರಿ ಎಂದು ಪ್ರಸಿದ್ದಿ ಪಡೆದಿದೆ ಹಾಗಾಗಿ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ಹೇಳುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ತುಳು ಲಿಪಿ ಎಂದು ಮೊದಲಿಗೆ ಗುರುತಿಸಿದ ಡಾ.ವೆಂಕಟ್ರಟಜ ಪುಣಿಚಿತ್ತಾಯರು ಕೂಡ ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ ಎಂದು ಅವರಿಗೆ ಆತ್ಮೀಯ ರಾಗಿದ್ದ ಡಾ.ಪದ್ಮನಾಭ ಕೇಕುಣ್ಣಾಯ ತಿಳಿಸಿದ್ದಾರೆ.
9 ಲಿಪಿ ತಜ್ಞರಾದ ಡಾ.ಗೀತಾಚಾರ್ಯ ತುಳುವಿಗೆ ಲಿಪಿ ಇರಲಿಲ್ಲ, ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಯನ್ನು ತುಸು ಮಾರ್ಪಡಿಸಿ ತುಳು ಲಿಪಿ ರೂಪಿಸಿದರು ಎಂದು ಹೇಳಿದ್ದಾರೆ
10 ಲಿಪಿ ತಜ್ಞರಾದ ಡಾ.ಗುಂಡಾ ಜೋಯಿಸ್ ಕೆಳದಿ ವೆಂಕಟೇಶ ಜೋಯಿಸ್ ಡಾ.ಪಿವಿ ಕೃಷ್ಣ ಮೂರ್ತಿ ಮೊದಲಾದವರು ಅದು ತಿಗಳಾರಿ ಲಿಪಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ
11  ಇದರಲ್ಲಿ  ತುಳು ಭಾಷೆಯ ಹ್ರಸ್ವ ಎ ಒ ಗಳಿಗೆ ಅಕ್ಷರ ಇಲ್ಲ   ಸಂಸ್ಕೃತ ದಲ್ಲಿ ಮಾತ್ರ ಇರುವ ದೀರ್ಘ ಋ ಇದೆ ಅಲ್ಲದೆ ತುಳುವಿನ ವಿಶಿಷ್ಟ ಉಚ್ಚಾರಣೆ ಗಳಿಗೆ ರೇಖಾ ಸಂಕೇತ ಅಥವಾ ಅಕ್ಷರಗಳು ಇಲ್ಲ
12 ಪ್ರಸ್ತುತ ತಿಗಳಾರಿ ಲಿಪಿಯ ಸುಮಾರು ಹತ್ತು  ಸಾವಿರದ ಹಸ್ತ ಪ್ರತಿಗಳು ಸಿಕ್ಕಿದ್ದು ಇವುಗಳು ತಮಿಳುನಾಡಿನ  ತಂಜಾವೂರು, ಕಂಚಿ ,ಧರ್ಮಪುರಿ,ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ,,ಕಾಸರಗೋಡು ಉಡುಪಿ ದಕ್ಷಿಣ ಕನ್ನಡ ಜಿಲ್ಲೆ, ಕೆಳದಿ ಮೊದಲಾದ ಕಡೆ ಸಿಕ್ಕಿದವುಗಳಾಗಿವೆ ಇವುಗಳಲ್ಲಿ ಏನಿದೆ ಎಂದು ತಿಗಳಾರಿ ಬಲ್ಲವರು ಓದಿದ್ದು .ಇವೆಲ್ಲವೂ ಸಂಸ್ಕೃತ ಭಾಷೆಯಲ್ಲಿಬರೆದ ವೇದ ಮಂತ್ರ ಪುರಾಣ ಕೃತಿಗಳು ಆಗಿವೆ ಎಂದು ತಿಳಿಸಿದ್ದಾರೆ
 13 ತುಳುನಾಡಿನಲ್ಲಿ ಸಿಕ್ಕ ಹಸ್ತ ಪ್ರತಿಗಳು ಸುಮಾರು ಒಂದೂವರೆ ಸಾವಿರ ಇವುಗಳನ್ನು ಕೂಡ ತೆರೆದು ಓದಿದ್ದು ಇವುಗಳಲ್ಲಿ ಏಳು ತುಳು ಭಾಷೆಯ ಕೃತಿಗಳು ,ಒಂದು ಕನ್ನಡ ಭಾಷೆಯ ಜನಪದ ಹಾಡುಗಳು ಬಿಟ್ಟರೆ ಉಳಿದವುಗಳೆಲ್ಲ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಎಂದು ಧರ್ಮಸ್ಥಳದ ಹಸ್ತ ಪ್ರತಿ ಅಧ್ಯಯನ ಕೇಂದ್ರದ ಮುಖ್ಯಸ್ಥ ರಾದ ಡಾ ವಿಘ್ನರಾಜ ಭಟ್ ತಿಳಿಸಿದ್ದಾರೆ
15 ತಿಗಳಾರಿ ಲಿಪಿ ತೀರ ಇತ್ತೀಚಿನ ವರೆಗೂ ಬಳಕೆಯಲ್ಲಿತ್ತು ಹಾಗಾಗಿ ಅದರಲ್ಲಿನ ಹತ್ತು ಸಾವಿರಕ್ಕಿಂತ ಹೆಚ್ಚಿನ ಸಂಸ್ಕೃತ ಹಸ್ತಪ್ರತಿ ಗಳು ಲಭ್ಯವಾಗಿವೆ ಆದರೆ ತುಳು ಭಾಷೆಯ ಕೃತಿಗಳು ಲಭಿಸಿದ್ದು ಕೇವಲ ಏಳು
16 ತುಳುನಾಡಿನಲ್ಲಿ ಈ ಲಿಪಿಯ ಒಂದೂವರೆ ಸಾವಿರದಷ್ಟು ಸಂಸ್ಕೃತ ಹಸ್ತಪ್ರತಿ ಗ್ರಂಥಗಳು ಸಿಕ್ಕಿದೆ ಆದರೆ ತುಳುವಿನದ್ದು ಸಿಕ್ಕಿದ್ದು ಏಳು ಮಾತ್ರ ಒಂದೊಮ್ಮೆ ಇದು ತುಳು ಭಾಷೆ ಬರೆಯಲು ಬಳಕೆಗೆ ಇದ್ದಿದ್ದರೆ ಲಿಪಿ ಆಗಿರುತ್ತಿದ್ದರೆ ಕೊನೆಯ ಪಕ್ಷ ತುಳುನಾಡಿನಲ್ಲಿ ಸಿಕ್ಕ ಹಸ್ತಪ್ರತಿ ಗಳಲ್ಲಿಯಾದರೂ ಹೆಚ್ಚಿನ ಕೃತಿಗಳು ತುಳುಭಾಷೆಯದು ಆಗಿರುತ್ತಿತ್ತು ,ತಿಗಳಾರಿ ಇತ್ತೀಚಿನ ವರೆಗೂ ಬಳಕೆಯಲ್ಲಿದ್ದ ಕಾರಣ ತುಳುವಿನ  ಎಲ್ಲಾ ಹಸ್ತಪ್ರತಿ ಗಳು ಕಳೆದು ಹೋಗಿರುವ ಸಾಧ್ಯತೆ ಇಲ್ಲ ಹಾಗೆ ಕಳೆದು ಹೋಗುತ್ತಿದ್ದರೆ ಇದೇ ಲಿಪಿಯ ಲ್ಲಿ ಬರೆದ ಸಂಸ್ಕೃತ ವೇದ ಮಂತ್ರಗಳ ಹಸ್ತ ಪ್ರತಿಗಳು  ಕೂಡ ಉಳಿಯುತ್ತಿರಲಿಲ್ಲ ಹಾಗಾಗಿ  ಈ ಲಿಪಿಯಲ್ತುಲಿ ಳುಭಾಷೆಯಲ್ಲಿ ಲಿಖಿತ ಸಾಹಿತ್ಯ ರಚನೆ ಆದದ್ದು ತೀರಾ ತೀರಾ ಕಡಿಮೆ  ಎಂದು ಹೇಳಬಹುದು .ಬನ್ನಂಜೆ ಗೋವಿಂದ ಆಚಾರ್ಯರು ತೌಳವ ಬ್ರಾಹ್ಮಣರು ಇದನ್ನು ಬಳಕೆಗೆ ತಂದ ಕಾರಣ ಇದಕ್ಕೆ  ತುಳು ಲಿಪಿ ಎಂದು ಹೆಸರು ಇದನ್ನು ಬೇರೆಕಡೆ ತಿಗಳಾರಿ ಎಂದು ಕರೆಯುತ್ತಾರೆ. ಇದು ತುಳು ಭಾಷೆಯ ಲಿಪಿ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

17 ಈ ಎಲ್ಲಾ ಆಧಾರಗಳು  ತಿಗಳಾರಿ ಮತ್ತು ತುಲು ಲಿಪಿ ಎರಡೂ ಒಂದೇ ಬೇರೆ ಬೇರೆಯಲ್ಲ  ಎಂದು ಪ್ರೂವ್ ಮಾಡುತ್ತವೆ ಇದು ಮೂಲತ ತಿಗಳಾರಿ ಲಿಪಿ ತುಳುನಾಡಿನ ಕೆಲವೆಡೆ ಮಾತ್ರ ಇದನ್ನು ತುಳು ಲಿಪಿ ಎಂದು ಕರೆದಿದ್ದಾರೆ
18 "ತಿಗಳಾರಿ ಲಿಪಿ ಯನ್ನು ತಮಿಳು ನಾಡಿನ ತಂಜಾವೂರು ಕಂಚಿಗಳಲ್ಲಿ ವೇದಾಧ್ಯಯನ ‌ಮಾಡಲು ಹೋದ ತುಳುನಾಡು ಹಾಗೂ ಮಲೆನಾಡಿನ ಬ್ರಾಹ್ಮಣರು ಕಲಿತು ಬಳಕೆಗೆ ತಂದ ಕಾರಣ ಅದು ತುಳು ನಾಡು ಮಲೆನಾಡಿನ ಪರಿಸರದಲ್ಲಿಯೂ ಹರಡಿತು ,ತುಳುನಾಡಿನ ಕೆಲವೆಡೆ ಅದನ್ನು ತುಳು ಲಿಪಿ ಎಂದು ಕರೆದಿದ್ದಾರೆ "ಎಂದು ಡಾ ವಿಘ್ನರಾಜ ಭಟ್ ಡಾ ವೆಂಕಟೇಶ ಜೋಯಿಸ್ ಡಾ ಗುಂಡಾ ಜೋಯಿಸ್ ಡಾ ದೇವರ ಕೊಂಡಾ ರೆಡ್ಡಿ ಡಾ ಪದ್ಮನಾಭ ಕೇಕುಣ್ಣಾಯ ಡಾ ವೆಂಕಟ್ರಾಜ ಪುಣಿಚಿತ್ತಾಯ ,ಡಾ ಬನ್ನಂಜೆ ಗೋವಿಂದಾಚಾರ್ಯರ ಮೊದಲಾದ ಲಿಪಿ ತಜ್ಞರು, ವಿದ್ವಾಂಸರು ಅಭಿಪ್ರಾಯಪಡುತ್ತಾರೆ
19 ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದದ್ದು ಅಲ್ಲ ತುಳುನಾಡ ಹವ್ಯಕ ಬ್ರಾಹ್ಮಣರು ಕೋಟ ಕರಾಡ ಚಿತ್ಪಾವನ ಬ್ರಾಹ್ಮಣರು, ಶಿವಮೊಗ್ಗ ಉತ್ತರ ಕೆಳದಿ ಯ ಬ್ರಾಹ್ಮಣರು ಈ ಲಿಪಿಯನ್ನು ಬಳಕೆ ಮಾಡುತ್ತಿದ್ದರು ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆ ಮಾಡುತ್ತಿದ್ದರು ತುಳುನಾಡಿನಲ್ಲಿ ಸುಮಾರು ಒಂದೂವರೆ ಸಾವಿರ ಸಂಸ್ಕೃತ ಹಸ್ತ ಪ್ರತಿ ಗಳು ಈ ಲಿಪಿಯಲ್ಲಿ ಸಿಕ್ಕಿದ್ದು ಅದರಲ್ಲಿ ಹವ್ಯಕ ಕೋಟ ಚಿತ್ಪಾವನ ಕರಾಡ ಮರಾಠಿ ಬ್ರಾಹ್ಮಣರು ಬರೆದ ಕೃತಿಗಳು ಇವೆ ಇವುಗಳಲ್ಲಿ ತುಳುಭಾಷೆಯಲ್ಲಿ ಇರುವ ಕೃತಿಗಳು ಕೇವಲ ಏಳು ಮಾತ್ರ .ಈ ಲಿಪಿಯ ಹತ್ತ ಸಾವಿರಕ್ಕಿಂತ ಹೆಚ್ಚು ಹಸ್ತಪ್ರತಿ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಸಿಕ್ಕಿದ್ದು ಇವು ಶಿವಮೊಗ್ಗ ಕೆಳದಿ ರಾಮಚಂದ್ರಾಪುರ ಉತ್ತರ ಕರ್ನಾಟಕ ದ ತುಳುವೇತರ ಬ್ರಾಹ್ಮಣ ರ ಮನೆಯಲ್ಲಿ ಸಿಕ್ಕಿವೆ ಮೈಸೂರು ನಲ್ಲೂ ಬೆಂಗಳೂರಿನಲ್ಲಿ ತಮಿಳುನಾಡಿನ ತಂಜಾವೂರು  ಕಂಚಿ ಯ ತುಳುವರಲ್ಲದ ಇತರ ಬ್ರಾಹ್ಮಣರ ಮನೆಗಳು ಬರೆದಿರುವುದು ಸಿಕ್ಕಿವೆ. ಹವ್ಯಕ ಬ್ರಾಹ್ಮಣರು ಹವ್ಯಕರ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡುತ್ತಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಇಂಥಹ ನೂರಕ್ಕಿಂತ ಹೆಚ್ಚಿನ ಪತ್ರಗಳಿವೆ ಹಾಗಾಗಿ ಇದನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದರು ಎನ್ನುವುದು ಸರಿಯಲ್ಲ

20 ವಿದ್ಯಾ ಶ್ರೀ ಯವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಬೇರೆ ಬೇರೆ ಎಂಬುದಕ್ಕೆ ಆಧಾರವಾಗಿ ದೇವರಾಜ ಸ್ವಾಮಿ ಅವರ ಕೃತಿಯಲ್ಲಿನ ತಿಗಳಾರಿ ಮತ್ತು ತುಳು ವರ್ಣಮಾಲೆ ಚಿತ್ರ ಚಿತ್ರವನ್ನು ಪೇಸ್ ಬುಕ್ ನಲ್ಲಿ ಹಾಕಿದ್ದು ಅದರಲ್ಲಿನ ತಿಗಳಾರಿ ಲಿಪಿಯನ್ನು ವಿದ್ಯಾ ಶ್ರೀ ಅವರು ಹೇಳಿಕೊಡುವ ಲಿಪಿ ಹೋಲುತ್ತದೆ ಹೊರತು ತುಳು ವರ್ಣ ಮಾಲೆಯಲ್ಲಿ ಇರುವ ಹಾಗೆ ಇಲ್ಲ ಅವರು ಅವರು ಹಾಕಿದ ತಿಗಳಾರಿ ಲಿಪಿ ಚಿತ್ರ ದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ   ದೀರ್ಘ ಋ ಇದೆ ವಿದ್ಯಾ ಅವರು ಹೇಳಿಕೊಡುವ ಲಿಪಿ ಯಲ್ಲೂ ಇದೆ ಅವರು ಪ್ರೂಫ್ ಗಾಗಿ ಹಾಕಿದ ತುಳು ವರ್ಣಮಾಲೆಯ ಲ್ಲಿ ದೀರ್ಘ ಋ ಇಲ್ಲ ಅದೇ ರೀತಿಯಲ್ಲಿ ವಿದ್ಯಾ ಶ್ರೀ ಹೇಳಿಕೊಡುವ ಎಲ್ಲಾ ಅಕ್ಷರಗಳು ಅವರೇ ಪ್ರೂಫ್ ಗಾಗಿ ನೀಡಿದ ತಿಗಳಾರಿ ಮತ್ತು ತುಳು ವರ್ಣಮಾಲೆ ಗಳಲ್ಲಿ ತಿಗಳಾರಿ ಲಿಪಿ ಯನ್ನು ಹೋಲುತ್ತವೆ ಇದನ್ನು ಕೇಳಿದಾಗ ನಮ್ಮ ಗುರುಗಳು ತುಳು ಎಂದು ಹೇಳಿದ್ದಾರೆ ಎನ್ನುತ್ತಾರೆ. ಅವರ ಗುರುಗಳಾದ ವಿಘ್ನರಾಜ ಭಟ್ ತಿಗಳಾರಿ ಲಿಪಿ ಮತ್ತು ತುಳು ಎರಡೂ ಒಂದು ಎಂದು ಹೇಳಿದ್ದಾರೆ ಆದರೆ ಇವರು ತಿಗಳಾರಿ ಮತ್ತು ತುಳು ಬೇರೆ ಎಂದು ಹೇಳುತ್ತಿದ್ದಾರೆ
ಇವರು ಹೇಳಿಕೊಡುವ ಲಿಪಿ ತುಳ ವರ್ಣಮಾಲೆ ಬದಲಿಗೆ ತಿಗಳಾರಿ ಲಿಪಿ ಯಂತೆ ಇದೆ ಎಂದಾಗ ಗುರುಗಳು ಹೇಳಿದ್ದಾರೆ ಎಂದು ಹೇಳಿದ್ದಾರೆ
ಯಾವುದೇ ಲಿಪಿಯನ್ನು ಯಾರು ಕೂಡ ಬಳಕೆ ಮಾಡಬಹುದು ಆದರೆ ಸತ್ಯವನ್ನು ಮುಚ್ಚಿಟ್ಟು ಅದು ತುಳು ಭಾಷೆಯ ಸ್ವಂತ ಲಿಪಿ ಎಂದು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ ©ಡಾ.ಲಕ್ಷ್ಮೀ ಜಿ ಪ್ರಸಾದ

(ಲಿಪಿ ತಜ್ಞರಾದ ಜಮದಗ್ನಿ ಅಗ್ನಿ ಹೋತ್ರಿಯವರು ಇದು ತಿಗಳಾರಿ ಲಿಪಿ ಎಂದು ತಿಳಿಸಿ ,ವಿದ್ಯಾ ಅವರು ಹೇಳಿಕೊಡುತ್ತಾ ಇರುವ ತಿಗಳಾರಿ (ತುಳು) ಲಿಪಿಯಲ್ಲಿ ಅನೇಕ ದೋಷಗಳು ಇರುವುದನ್ನು ಗಮನಿಸಿ ಪೇಸ್ ಬುಕ್ ಮೂಲಕ  ವಿದ್ಯಾ ಅವರಿಗೆ  ನೀಡಿದ ಸೂಚನೆಗಳು--
Vidya Shree S Shetty ನಾವು ದಕ್ಷಿಣ ಕನ್ನಡದವರಲ್ಲ ,ತುಳು ಬರುವುದಿಲ್ಲ .ಲಿಪಿಯ ದೃಷ್ಟಿಯಿಂದ ಸಲಹೆಗಳನ್ನು ಕೊಡಬಲ್ಲೆ. ನೀವು ಪ್ರಸ್ತುತ ಹೇಗೆ ಕಲಿಸುತ್ತಿದ್ದೀರೋ ನನಗೆ ತಿಳಿಯದು. ನೀವು ಕಲಿಸುವ chart ಕೊಟ್ಟರೆ ಸಲಹೆ ನೀಡಬಲ್ಲೆ.ಉಕಾರ,ಉಕಾರದ ಕಾಗುಣಿತಕ್ಕೆ special forms ಇದೆ.ಕು,ಗು,ಜು ಇತ್ಯಾದಿಗಳಿಗೆ circle ಕೆಳಗೆ ಬರೆಯಬಾರದು. ಕೆಲವು ಅಕ್ಷರಗಳಾದ ಐ,ಖ,ಙ,ಞ,ಛ,ಟ,ಝ ಇತ್ಯಾದಿಯಲ್ಲಿ ಮಾರ್ಪಾಡು ಬೇಕು. ಇಲ್ಲಿ ಸಂಯುಕ್ತಾಕ್ಷರ ಕನ್ನಡದಂತೆ ಬರೆಯುವುದಿಲ್ಲ. ಎರಡೂ ಒಂದೇ size ಇರಬೇಕು,ಚಿಕ್ಕದು ದೊಡ್ಡದು ಇರಬಾರದು.ಯ,ರ,ಲ,ವ,ಮ ಇವುಗಳಿಗೆ ಸ್ಪೇಸಿಯಲ್ ರೂಪಗಳು ಇವೆ, ವ್ಯಂಜನಕ್ಕೆ ಜೋಡಿಸಿ ಬರೆಯಬೇಕು ಬಿಡಿಸಿ ಬರೆಯಬಾರದು,ಸಾಮಾನ್ಯದ ತರಹ ಬರೆಯಬಾರದು. ವ್ಯಂಜನದ ಹಿಂದೆ ಅನುಸ್ವಾರ ಬಳಸುವುದಿಲ್ಲ,ಮಲಯಾಳದಂತೆ ಅಂದ ಬದಲು ಅನ್ದ ಎಂದೇ ಬರೆಯುತ್ತಾರೆ. ನನಗೆ ತಿಳಿದಿರುವ ಮಟ್ಟಿಗೆ ಪ್ರತ್ಯೇಕ ಅಂಕಿಗಳು ಇಲ್ಲ,ಕನ್ನಡ ಸಂಖ್ಯೆಗಳನ್ನೇ ಬಳಸುತ್ತಾರೆ. ಪ್ರತ್ಯೇಕ ಸಂಖ್ಯೆ ಎನ್ನುವ ಹಸ್ತಪ್ರತಿಗಳ ಲಿಪಿ ಮಲಯಾಳ ಲಿಪಿ. ವ್ಯಂಜನಗಳ ಸಂಯುಕ್ತಾಕ್ಷರ ಬಹಳ ಕ್ಲಿಷ್ಟ ಕನ್ನಡದಂತೆ ಸುಲಭವಲ್ಲ.ಕ್ಕ,ತ್ತ,ತ್ಕ,ದ್ಧ,ತ್ಮ,ಕ್ಷ ,ರ್ಯ,ರ್ವ,ಸ್ಥetc ಗಳಲ್ಲಿ ಎರಡು ಅಕ್ಷರಗಳನ್ನು ಹೊಂದಿಸಿ ಅಕ್ಷರ ಬರೆಯುತ್ತಾರೆ, ಕೆಳಗೆ ಸಾಮಾನ್ಯವಾಗಿ ಬರೆಯುವುದಿಲ್ಲ.ಇ ,ಈ,ಉ ಸ್ವಲ್ಪ ಬೇರೆ ತರಹ ಬರೆಯುತ್ತಾರೆ.ಟ್ ,ತ್ ,ಕ್ ,ನ್ ಇವುಗಳು ವಿಶಿಷ್ಟವಾಗಿ ಬರೆಯುತ್ತಾರೆ,ಹಲಂತವನ್ನು ಸಾಮನ್ಯವಾಗಿ ಹಾಕುವುದಿಲ್ಲ.ಹೀಗೆ ಅನೇಕ ಕಲಿಕೆಯಲ್ಲಿ ಬದಲಾವಣೆಗಳು ಆವಶ್ಯಕ.ನಿಮ್ಮ ಪತ್ರಿಕೆಯ font ನಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಾಲ್ಕೈದು ಹಸ್ತಪ್ರತಿಗಳನ್ನು ಗಮನಿಸಿದರೆ ಸರಿಯಾದ ರೂಪಗಳು ರೂಪಗಳು ಯಾವುವು ಎಂದು ನಮಗೆ ಗೊತ್ತಾಗುವುದು.ನಮ್ಮ ಉದ್ದೇಶ ಇಷ್ಟೇ ಜನರು ಸರಿಯಾಗಿ ಕಲಿಯಲಿ.)




Friday 5 May 2017

ನನ್ನ ಪ್ರಿಯ ವಾದ ಭೂತಾರಾಧನೆಯ ಅಧ್ಯಯನ ವನ್ನು ಬಿಟ್ಟು ಬಿಡಲೇ ©ಡಾ ಲಕ್ಷ್ಮೀ ಜಿ ಪ್ರಸಾದ

ನನ್ನ ಪ್ರಿಯವಾದ ಭೂತಾರಾಧನಾ ಕ್ಷೇತ್ರವನ್ನು ಬಿಟ್ಟು ಬಿಡಲೇ ?

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಹಾಡು ಹಗಲಿನ ಹೊತ್ತಿನಲ್ಲಿ ಸಸೌಮಾ ಭಟ್ ಎಂಬ ಮುಗ್ಧ ಕಾಲೇಜ್ ಹುಡುಗಿಯನ್ನು ಪುತ್ತೂರು ಕಬಕ ಬಳಿ ದಾರುಣವಾಗಿ ಕೊಚ್ಚಿ ಕೊಲ್ಲಲಾಗಿತ್ತು! ಅದು ನನ್ನನ್ನು ದಿಗಿಲಿಗೀಡು ಮಾಡಿದ ಮೊದಲ ಪ್ರಕರಣ ,(ಆಗಷ್ಟೇ ನಮ್ಮ ಊರಿನಲ್ಲಿ ಹೆಣ್ಣು ಮಕ್ಕಳನ್ನು ಕಾಲೇಜ್ ಗೆ ಕಳುಹಿಸಲು ಆರಂಭ ಮಾಡಿದ್ದರು ,ಈ ಪ್ರಕರಣ ಹೆತ್ತವರನು ತಲ್ಲಣಕ್ಕೆ ಒಳಮಾಡಿತ್ತು ಈ ಪ್ರಕರಣದ ನಂತರ ಅನೇಕ ಹೆತ್ತವರು ತಮ್ಮ ಹೆಣ್ಣು ಮಕ್ಕಳನ್ನು ಹೊರಗೆ ಕಳುಹಿಸಲು ಹಿಂಜರಿದರು ,ಓದನ್ನು ನಿಲ್ಲಿಸಿ ಮದುವೆ ಮಾಡಿದರು!)

ಅಲ್ಲಿಂದ ನಂತರ ಅನೇಕ ಪ್ರಕರಣಗಳು ಇಂಥದ್ದು ನಡೆದವು ,ಉಜಿರೆಯ ಸೌಜನ್ಯ ,ಉಡುಪಿಯ ಕ್ಷಮಾ .ಶಿವಮೊಗ್ಗದ ಹುಡುಗಿ (ಹೆಸರು ನೆನಪಾಗುತ್ತಿಲ್ಲ )ದೆಹಲಿಯ ಹುಡುಗಿ ನಿರ್ಭಯ ,ಮೊನ್ನೆ ಮೊನ್ನಿನ ಕೇರಳದ ಹುಡುಗಿ ಜಿಷಾ ..ಹೀಗೆ ಈ ಪಟ್ಟಿ ಹನುಮಂತನ ಬಾಲದ ಹಾಗೆ ಬೆಳೆಯುತ್ತಲೇ ಹೋಗುತ್ತದೆ .

ಇವರೆಲ್ಲ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾದವರು ,ಇನ್ನು ಅದೃಷ್ಟವಶಾತ್ ಸಾಯದೆ ಉಳಿದ ಅನೇಕರು ಇದ್ದಾರೆ.ಇನ್ನು ಅತ್ಯಾಚಾರ ಯತ್ನ ಕ್ಕೆ ಒಳಗಾದವರು ಲೈಂಗಿಕ ಕಿರುಕುಳಕ್ಕೆ ಒಳಗಾದವರು ಅಸಂಖ್ಯಾತ ಮಂದಿ ಇದ್ದಾರೆ ,

ಅತ್ಯಾಚಾರ ಮಾಡಿ ಕೊಂದವರಿಗೆ ಶಿಕ್ಷೆ ಆಗುದಿಲ್ಲ ಇನ್ನು ಉಳಿದವರಿಗೆ ಏನು ಶಿಕ್ಷೆ ಆಗುತ್ತದೆ ?
ಮೊನ್ನೆ ಬೆಂಗಳೂರಿನಲ್ಲಿ ಅತ್ಯಾಚಾರ ಯತ್ನಿಸಿದ ಒಬ್ಬನ ಮೇಲೆ ಪೋಲಿಸ್ ರು ದುಡ್ಡಿನ ಆಮಿಷಕ್ಕೆ ಒಳಗಾಗಿ ಕೇಸ್ ದಾಖಲಿಸಲಿಲ್ಲ ,ಪಿಜಿ ಮಾಲೀಕ ತನ್ನ ಪಿಜಿ ಹೆಸರು ಹಾಳಾಗುತ್ತದೆ ಎಂಬ ಕಾರಣಕ್ಕೆ ಕೇಸ್ ದಾಖಲಿಸದಂತೆ ಲಂಚ ನೀಡಿದ್ದ !
ಕೇವಲ ಐದು ಸಾವಿರ ಕೊಟ್ಟರೆ ದೂರು ದಾಖಲು ಮಾಡುವುದಿಲ್ಲ ಹಾಗಾದರೆ ಐವತ್ತು ಸಾವಿರ ಕೊಟ್ಟರೆ ದೂರು ದಾಖಲು ಆಗಿದ್ದರೂ ಬಿ ರಿಪೋರ್ಟ್ ಕೊಡಲಾರರೆ?ಆರೋಪಿ ಬಚಾವಾಗಲು ಎಷ್ಟು ಬೇಕಾದರೂ ದುಡ್ಡು ಕೊಡುತ್ತಾನೆ !ದೂರು ಕೊಟ್ಟವರ ಕಡೆಯಿಂದ ದುಡ್ಡು ಬರುವುದಿಲ್ಲ !

ಇತ್ತೀಚಿಗೆ ಈ ರೀತಿಯ ಪ್ರಕರಣಗಳಲ್ಲಿ 42 % ಸುಳ್ಳು ದೂರು ಗಳು ಎಂದು ಓದಿದೆ .ಕೇವಲ ಐದು ಸಾವಿರ ರುಪಾಯಿಗೆ ದೂರು ದಾಖಲು ಮಾಡದೇ ಇರುವಾಗ ಕೊಟ್ಟ ದೂರನ್ನು ಸುಳ್ಳು ಮಾಡುವುದು ಏನು ಕಷ್ಟದ ವಿಚಾರ !
ಹೆಚ್ಚಿನ ಪ್ರಕರಣಗಳಲ್ಲಿ ದೂರು ಕೊಡುವುದೇ ಇಲ್ಲ ಮರ್ಯಾದೆ ಗೆ ಅಂಜಿ !ದೂರು ಕೊಟ್ಟರೂ ಅದನ್ನು ಸುಳ್ಳು ಎಂದು ಹೇಳಲು ಏನೂ ಕಷ್ಟವಿಲ್ಲ ,ಯಾರೂ ಇಲ್ಲದೆ ಹೊತ್ತು ನೋಡಿಕೊಂಡೆ ಇಂಥದ್ದು ಮಾಡುತ್ತಾರೆ ಒಂದೊಮ್ಮೆ ಸಾಕ್ಷಿಗಳು ಇದ್ದರೂ ಸಾಕ್ಷ್ಯ ನುಡಿಯುದಿಲ್ಲ ತಮಗೇಕೆ ಎಂದು !
ಅದಕ್ಕೆ ಸರಿಯಾಗಿ ತಪ್ಪೆಸಗಿದಾತ ಪಾರಾಗುವ ಸಲುವಾಗಿ ದುಡ್ಡನ್ನು ನೀರಿನಂತೆ ಚೆಲ್ಲಲು ಸಿದ್ಧವಾಗಿರುತ್ತಾನೆ !
ಮತ್ತೆ ಅಲ್ಲ್ಲಿ ಬಿ ರಿಪೋರ್ಟ್ ಕೊಟ್ಟು ಸುಳ್ಳು ದೂರು ಎಂದು ಹೇಳಲು ಅಡ್ಡಿ ಏನಿದೆ ?ಶಿಕ್ಷೆಯ ಭಯವೇ ಇಲ್ಲದಿರುವಾಗ ಇಂಥ ಪ್ರಕರಣಗಳು ನಿರಂತರ ನಡೆಯುತ್ತಲೇ ಇರುತ್ತವೆ !ರಾಜಕೀಯ ಪಕ್ಷಗಳು ಇಲ್ಲೆಲ್ಲಾ ರಾಜಕೀಯ ಮಾಡುತ್ತಾ ವೋಟು ರಾಜಕಾರಣ ಮಾಡುತ್ತವೆ ಹೊರತು ಈ ಪಿಡುಗನ್ನು ಸಮೂಲ ಕಿತ್ತು ಹಾಕಬೇಕೆಂಬ ದೃಢತೆ ಯಾರಿಗೂ ಇಲ್ಲ ಯಾಕೆಂದರೆ ಅತ್ಯಾಚಾರಕ್ಕೆ ಒಳಗಾಗುವವರು ,ಕಿರುಕುಳಕ್ಕೆ ಒಳಗಾಗುವವರು ಅವರ ಮಕ್ಕಳಲ್ಲವಲ್ಲ !ಯಾರೋ ಹೆತ್ತವರು ಸಾಕಿದ ಹೆಣ್ಣು ಮಕ್ಕಳಿಗೆ ಏನಾದರೇನಂತೆ !ತಮಗೆ ವೋಟು ಬಂದರೆ ಸಾಕು !ಅಷ್ಟೇ !

ಅದು ಏನೇ ಇರಲಿ !ದೆಹಲಿಯ ನಿರ್ಭಯ ಪ್ರಕರಣ ನಡೆದಾಗಲೇ ನಾನು ಅಂದುಕೊಂಡಿದ್ದೆ ಇನ್ನು ಮುಂದೆ ಭೂತ ಕೋಲ ರೆಕಾರ್ಡ್ ಗಾಗಿ ಎಲ್ಲೆಂದರಲ್ಲಿ ರಾತ್ರಿ ಹಗಲು ಸುತ್ತುವುದನ್ನು ಬಿಡಬೇಕು ಎಂದು ,ಹಾಗಾಗಿ ರಾತ್ರಿ ರೆಕಾರ್ಡಿಂಗ್ ಗೆ ಹೋಗುದನ್ನು ಹೆಚ್ಚುಕಡಿಮೆ ನಿಲ್ಲಿಸಿದ್ದೇನೆ ,ಇನ್ನು ಹಗಲಿನ ಹೊತ್ತಿನಲ್ಲಿ ಹೋಗುವ ಬಗೆಯೂ ಇನ್ನೊಮ್ಮೆ ಆಲೋಚಿಸುವ ಹಾಗೆ ಆಗುತ್ತಿದೆ !

ಕ್ಷೇತ್ರ ಕಾರ್ಯ ಆಧಾರಿತ ತುಳು ಶೋಧನೆಯ ಹಾದಿ ಬಿಟ್ಟು ಬಿಡಲೇ ?ಇಷ್ಟಕ್ಕೂ ನಾನು ಮಾಡಿದ್ದೇನು ಮಹಾ ಇದೆ !ಮಾಡಿದ್ದಕ್ಕೂ ಸಿಕ್ಕ ಮನ್ನಣೆ ಅಷ್ಟರಲ್ಲೇ ಇದೆ !

  ಕಥೆ ಹಾಗೂ ಲೇಖನ ಬರೆಯುವ ಹವ್ಯಾಸ ನನಗೂ ಇತ್ತು .ಆದರೆ ತುಳು ಶೋಧನೆಯಲ್ಲಿ ಮುಳುಗಿ ಇವೆರಡನ್ನು ನಾನು ನಿರ್ಲಕ್ಷಿಸಿದೆ ಬಹುಶ ಇದನ್ನೇ ನಾನು ಮುಂದುವರಿಸಿದ್ದರೆ ಒಳ್ಳೆಯದಿತ್ತೋ ಏನೋ ಎಂದು ನನಗೆ ಇತ್ತೀಚಿಗೆ ಅನಿಸತೊಡಗಿದೆ !ಯಾಕೆಂದರೆ ಕಥೆ ಲೇಖನಗಳನ್ನು ಮನೆಯೊಳಗೇ  ಫ್ಯಾನ್ ಅಡಿಯಲ್ಲಿ ಆರಾಮ ಕೂತು ಬರೆಯಬಹುದು.ಅದಕ್ಕೆ ಖರ್ಚು ಕೂಡ ಇಲ್ಲ ಮೆದುಳನ್ನು ಸ್ವಲ್ಪ ಖರ್ಚು ಮಾಡಿದರೆ ಸಾಕು ! .ಒಂದಷ್ಟು ಮಾಹಿತಿ ಸಂಗ್ರಹಕ್ಕೆ ಗ್ರಂಥಾಲಯಗಳಿಗೆ ಹೋಗಬೇಕಾಗುತ್ತದೆ ಆದರೆ ಅದನು ಹಗಲಿನ ವೇಳೆಯೇ ಮಾಡಬಹುದು !

   ಆದರೆ ಭೂತಾರಾಧನೆ ಕುರಿತಾದ ಕ್ಷೇತ್ರ ಕಾರ್ಯ ಆಧಾರಿತ ಕೆಲಸಕ್ಕೆ ತುಂಬಾ ಖರ್ಚು ಕೂಡ ಇದೆ ಇದು ಸಾಕಷ್ಟು ಪರಿಶ್ರಮವನ್ನು ಕೂಡ ಬೇಡುತ್ತದೆ .ಜೊತೆಗೆ ರಾತ್ರಿ ಹಗಲೆನ್ನದೆ ಅಪರಿಚಿತ ಪ್ರದೇಶಗಳಲ್ಲಿ ಏಕಾಂಗಿಯಾಗಿ ಓಡಾಡುದು ಇಂದಿನ ದಿನಗಳಲ್ಲಿ ಅಪಾಯಕಾರಿಯಾಗಿದೆ .
ಹಾಗಾಗಿ ಅನೇಕ ಬರಿ ಯೋಚಿಸಿದ್ದೇನೆ ಈ ಕ್ಷೇತ್ರವನ್ನು ಬಿಟ್ಟು ಬಿಡಬೇಕು ಎಂದು !ಆದರೂ ಇದು ಒಂದು ಮಾಯೆಯಾಗಿ ಕಾಡುತ್ತಿದೆ ನನ್ನ !ಬಿಡಬೇಕೆಂದರೂ ಬಿಡಲು ಸಾಧ್ಯವಾಗುತ್ತಿಲ್ಲ !
ಒಂದು ಹೊಸ ಭೂತದ ಹೆಸರು ಕೇಳಿದ ತಕ್ಷಣ ಅದರ ಬಗ್ಗೆ ಪೂರ್ಣ ಮಾಹಿತಿ ಸಂಗ್ರಹ ಆಗುವ ತನಕ ಮನಸು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ !

ಇಷ್ಟರ ತನಕ ನಿರಂತರವಾಗಿ ಕೆಲಸ ಮಾಡಿದ ನನಗೆ ಏನೂ ಮಾಡದೇ ಇರಲು ನನ್ನಿಂದ ಸಾಧ್ಯವಾಗಲಾರದು ಅದಕ್ಕಾಗಿ ಕ್ಷೇತ್ರವನ್ನು ಬದಲಾಯಿಸಬೇಕೆನ್ದುಕೊಂಡಿದ್ದೇನೆ
ಮೊನ್ನೆ ಮೇ ಒಂದರಂದು ತಿಗಳಾರಿ -ತುಳು ಲಿಪಿ ಕಲಿಯುವಾಗಲೂ ನನ್ನ ಮನಸಿನಲ್ಲಿ ಇದೇ ವಿಚಾರ ಕೊರೆಯುತ್ತಿತ್ತು .ಇದನ್ನೇ ಸರಿಯಾಗಿ ಕಲಿತು ತಿಗಳಾರಿ -ತುಳು ಲಿಪಿಯಲ್ಲಿರುವ ಕೃತಿಗಳನ್ನು ಲಿಪ್ಯಂತರ ಮಾಡುವ ಹವ್ಯಾಸವನ್ನು ಮಾಡಿಕೊಳ್ಳಲೇ ಎಂದು ಆಲೋಚಿಸುತ್ತ ಇದ್ದೇನೆ
ಒಟ್ಟಿನಲ್ಲಿ ಇಂಥ ಒಂದೊಂದೇ  ಪ್ರಕರಣವನ್ನು ಕೇಳುವಾಗಲೂ ಆತಂಕ ಹೆಚ್ಚಾಗುತ್ತಲೇ ಇದೆ.ನನ್ನ ಪ್ರಿಯವಾದ ಭೂತಾರಾಧನ ಕ್ಷೇತ್ರವನ್ನು ಬಿಟ್ಟು ಬಿಡಲೇ ?ಬಿಟ್ಟು ನಾನು ನೆಮ್ಮದಿಯಿಂದ ಸಂತಸದಿಂದ ಇರಬಲ್ಲನೆ ?ಗೊತ್ತಿಲ್ಲ ಕಾಲಾಯ ತಸ್ಮೈ ನಮಃ
ಇಷ್ಟಕ್ಕೂ ಕ್ಷೇತ್ರಕಾರ್ಯಕ್ಕೆ ಹೋಗದ ಮಾತ್ರಕ್ಕೆ ನಮಗೆ ಭದ್ರತೆ ಇದೆಯಾ ?ಮನೆಯೊಳಗೇ ಬಂದು ಅತ್ಯಾಚಾರ ಮಡಿದ ಪ್ರಕರಣಗಳ ಬಗ್ಗೆ ಕೂಡ ಓದಿದ್ದೇನೆ !ಹಾಗಂತ ತಲೆ ಗಟ್ಟಿ ಇದೆ ಅಂತ ಬಂಡೆಕಲ್ಲಿಗೆ ಹೊಡೆದು ಕೊಳ್ಳುವುದು ಅಪಾಯವಲ್ಲವೇ ?
ನಾನು ಸ್ವಾಭಾವಿಕವಾಗಿಯೇ ಚಿಕ್ಕಂದಿನಿಂದಲೂ ಧೈರ್ಯಸ್ಥೆ ,ಸಾಮನ್ಯಕ್ಕೆಲ್ಲ ಹೆದರುವವಳು ಅಲ್ಲವೇ ಅಲ್ಲ ,ಆದರೂ ಈ ವಿಚಾರದಲ್ಲಿ ಮನಸು ಆತಂಕಕ್ಕೆ ಒಳಗಾಗುತ್ತಿದೆ ಆರು ತಿಂಗಳ ಹಸುಳೆಯಿಂದ ಹಿಡಿದು 80 ವರ್ಷದ ಅಜ್ಜಿ ತನಕದ ಎಲ್ಲ ವಯೋಮಾನದ ಹೆಂಗಸರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಇದಕ್ಕೆಲ್ಲ ಕೊನೆ ಎಂದು ?
ನನ್ನ ಅಧ್ಯಯನದಲ್ಲಿ ಸಿಕ್ಕ ಮಾಹಿತಿಯನ್ನು ನನ್ನ ಬ್ಲಾಗ್ ನಲ್ಲಿ ಹಾಕಿದ್ದೇನೆ ದಯವಿಟ್ಟು ಓದಿ ನಿಮ್ಮ ಅಭಿಪ್ರಾಯ ತಿಳಿಸಿ ನನಗೆ ಅದುವೇ ಭಾಗ್ಯ
http://laxmipras.blogspot.com

Thursday 27 April 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು349 ಕೋರಚ್ಚನ್ ©ಡಾ ಲಕ್ಷ್ಮೀ ಜಿ ಪ್ರಸಾದ

ಕಾಸರಗೋಡು ಸುತ್ತಲಿನ ದೈವಾರಾಧನೆ ಯ ಭಾಷೆ ವೇಷ ಭೂಷಣ ಗಳಲ್ಲಿ ಭಿನ್ನತೆ ಇದೆ .ಆದರೆ ಇದು ಭೂತಾರಾಧನೆಯೇ ಹೊರತು ಬೇರೆ ಆರಾಧನಾ ಪದ್ಧತಿಯಲ್ಲ ಭೂತಾರಾಧನೆಯಲ್ಲಿಯೂ ಪ್ರಾದೇಶಿಕ ವೈವಿಧ್ಯತೆ ಕಾಣಿಸುತ್ತದೆ ಕಾಸರಗೋಡು ಸುತ್ತಲಿನ ಪರಿಸರದ ಭಾಷೆ ಮಲೆಯಾಳ ಹಾಗಾ್ಇ ದೈವಗಳ ಭಾಷೆಯೂ ಮಲೆಯಾಳವೇ ಆಗಿದೆ ಕಥಕ್ಕಳಿ ಹಾಗೂ ಇತರ ಕಲೆಗಳ ಪ್ರಭಾವದಿಂದಾಗಿ ವೇಷ ಭೂಷಣ ದಲ್ಲಿ ಭಿನ್ನತೆಗಳಿವೆ ಆದರೆ ಮೂಲ ಕಥಾನಕ ಗಳಲ ತುಂಬಾ ಸಾಮ್ಯತೆ ಇದೆ .
ದುರಂತ ಮತ್ತು ದೈವತ್ವ ತುಳುನಾಡಿನಲ್ಲಿ ಅಲ್ಲಲ್ಲಿ ಕಮಡುಬರುವ ವಿಶೇಷ ತೆಯಾಗಿದೆ .ಕೋಟಿ ಚೆನ್ನಯರು ನ್ನು ಅನುಸರಿಸಲು ಹೋಗಿ ಸುರಿಯ ಹಾಕಿ ಕೊಂಡ ಮುಸ್ಲಿಮ ಮಕ್ಕಳು ದುರಂತವನ್ನಪ್ಪಿ ನಂತರ ದೈವತ್ವ ಪಡೆದು ಆರಾಧನೆ ಹೊಂದುತ್ತಾರೆ ಅಂತೆಯೇ ಮಂಗಳೂರು ಶಕ್ತಿ ನಗರದ ಸಮೀದ ಜೋಕುಲ ಸ್ಥಾನದಲ್ಲಿ ಜುಮಾದಿ ದೈವಕ್ಕೆ ಕೋಳಿ ಬಲಿಕೊಡುವುದನ್ನು ಅನುಕರಿಸುವ ಇಬ್ಬರು ಮಕ್ಕಳು ಅದೇ ದೈವದ ಸಾನಿಧ್ಧ್ಯದಲ್ಲಿ ದೈವಿಕತೆ ಪಡೆದು ಆರಾಧನೆ ಹೊಂದುತ್ತಾರೆ
ಎರಡು ಮನೆಗಳ ಜನರ ನಡುವಿನ ಜಗಳ ಬಿಡಿಸಲು ಹೋಗಿ ಏಟು ತಿಂದ ಪೋಲೀಸ್ ಓರ್ವ ದೈವತ್ವ ಪಡೆದು ಪೋಲಿಸ್ ತೆಯ್ಯಂ ಆಗಿ ಆರಾಧನೆ ಹೊಂದುತ್ತಾನೆ
ಕೋರಚ್ಚನ್ ತೆಯ್ಯಂ ನ ಹಿನ್ನೆಲೆಯಲ್ಲಿ ಯೂ ಇಂತಹ ಒಂದು ದುರಂತ ಕಥನಕವಿದೆ
ವತನಾಟ್ ಕುಲವನ್ ದೈವವು ಕಂಡನಾರ್ ಕೇಳನ್ ಮೊದಲದ ತೆಯ್ಯಂ ಜೊತೆಗೆ ಕಣ್ಣುಋಉ ಕಡೆಗೆ ಬಂದು ಕೋಟೆಪ್ಪಾರ್ ತರವಾಡಿನಲ್ಲಿ ನೆಲೆಯಾಗುತ್ತದೆ ಅಲ್ಲಿ ಕೋಟೆಪ್ಪಾರ್ ತರವಾಡಿನಲ್ಲಿ ಕುಂಞಿ ಕೋರನ್ ಎಂಬಾತ ಬ ವಯನಾಟ್ ಕುಲವನ್ನು ದೈವದ ಪಾತ್ರಿಯಾಗಿ / ಬೆಳ್ಚಪ್ಪಾಡನಾಡಿ ಭಕ್ತಿಯಿಂದ  ದೈವಂ ಕಟ್ಟು ಉತ್ಸವವನ್ನು ಮಾಡಿ ಆರಾಧಿಸುತ್ತಾ ಇರುತ್ತಾರೆ .ಒಂದು ವರ್ಷ ಆರಾಧನೆ ಯಾಗುವಾಗ ದೈವಾವೇಶ ಬಂದಾಗ ದೈವದ ಕತ್ತಿ ತಾಗಿ ಆತನ ಮರಣ ಉಂಟಾಗುತ್ತದೆ ಆಗ ಕೋಟೆಪ್ಪಾರ್ ಮನೆಗೆ ಸೂತಕ ಬಂದು ತೆಯ್ಯಂ ಕಟ್ಟು ನಿಲ್ಲುವ ಸಂದರ್ಭ ಉಂಟಾಗುತ್ತದೆ ಆಗ ವಯನಾಟ್ ಕುಲವನ್ ತೆಯ್ಯಂ ವೆಳ್ಳಾಟವಾಗುತ್ದಾ ಇದ್ದು ಮನೆ ಮಂದಿ ಏನು‌ಮಾಡಬೇಕೆಂದು ದೈವದಲ್ಲಿ ಅರಿಕೆ ಮಾಡುತ್ತಾರೆ ಆಗ ದೈವ ಕುಂಞಿ ಕೋರನ್ ದೇಹವನ್ನು ತರವಾಡನ ಮನೆಯ ಒಳಗೆ ನಡು ಕೋಣೆಯಲ್ಲಿ ಮಲಗಿಸಲು ಹೇಳುತ್ತದೆ ಅಲ್ಲಿಂದ ದೈವ ಆತನ ಹೆಸರನ್ನು ಕರೆದಾಗ ಆತನಿಗೆ ಜೀವಕಳೆ ಬಂದು ಆತ ಓಗುಡುತ್ತಾನೆ ನಂತರ ದೈವಂಕಟ್ಟು ಮುಂದುವರಿಯುತ್ತದೆ ಉತ್ಸವದ ಕೊನೆಯಲ್ಲಿ ವಯನಾಟ್ ಕುಲವನ್ ದೈವ ಕುಂಞಿ ಕೋರನನ್ನು ತನ್ನ ಸೇಇಗೆಗೆ ಸೇರಿಸಿಕೊಳ್ಳುತ್ತದೆ ಅಲ್ಲಿಂದ ಮುಂದೆ ಆತನಿಗೆ ಅಲ್ಲಿ ಕೋರಚ್ಚನ್ ತೆಯ್ಯಂ ಆಗಿ ಆರಾಧನೆ ಹೊಂದುತ್ತಾನೆ  

ಮಾಹಿತಿ ನೀಡಿದ  ಹಾಗೂ ಫೋಟೋ ಒದಗಿಸಿ ಕೊಟ್ಟ ಮನೋಝ್ ಕುಂಬಳೆ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಗಳು ©ಡಾ ಲಕ್ಷ್ಮೀ ಜಿ ಪ್ರಸಾದ