Tuesday 9 April 2013

ಬ್ಲಾಗ್ ಬರೆಯುವ ನನ್ನ ಕನಸು(MY DREAM OF WRITING BLOG) ಮುರಳೀಧರ ಉಪಾಧ್ಯರಿಗೆ ನಾನು ಸದಾ ಋಣಿ

                          ಬ್ಲಾಗ್  ಬರೆಯುವ ನನ್ನ ಕನಸು
ನನ್ನ ಮಗ ಅರವಿಂದ ಬಹಳ ವಾಚಾಳಿ . ವಯೋ ಸಹಜವಾಗಿ ಎಲ್ಲ ವಿಷಯಗಳ ಬಗ್ಗೆ ವಿಪರೀತ ಕುತೂಹಲ . ಕಂಪ್ಯೂಟರ್  ಬಗ್ಗೆ ಇಂಟರ್ನೆಟ್ ಬಗ್ಗೆಯೂ ಯಾವಾಗಲೂ ಹರಟುತ್ತಾ ಇರುತ್ತಾನೆ. ನನಗೋ  ಕಂಪ್ಯೂಟರ್ ,ಇಂಟರ್ನೆಟ್ ಕುರಿತು  ಒಂದಿನಿತೂ ಗೊತ್ತಿರಲಿಲ್ಲ . ಆದರೆ ಬ್ಲಾಗ್,ಫೇಸ್ ಬುಕ್ ,ಟ್ವಿಟ್ಟರ್ ,ಮೊದಲಾದವುಗಳ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೆ. ಒಮ್ಮೊಮ್ಮೆ  ನನಗು ಬ್ಲಾಗ್ ಬರೆಯ ಬೇಕು ಅನಿಸುತ್ತಿತ್ತು . ಆ ಅನಿಸಿಕೆ ಹೆಚ್ಚು ದೂರ ಸಾಗುತ್ತಿರಲಿಲ್ಲ .ಯಾಕೆಂದರೆ  ನನ್ನ ಕಂಪ್ಯೂಟರ್ ಜ್ಞಾನ ದೊಡ್ಡ ಸೊನ್ನೆ . ಜ಼ೊತೆಗೆ ಇಂಗ್ಲಿಷ್ ಭಾಷೆ ಮೇಲೂ ತೀರ ಏನೂ  ದೊಡ್ಡ ಹಿಡಿತ ಇರಲಿಲ್ಲ. ಬ್ಲಾಗ್  ಫೇಸ್ ಬುಕ್ ಗಳಲ್ಲಿ ಕನ್ನಡ ಬಳಕೆ ಇದೆ ಅಂತ ಗೊತ್ತಿರಲಿಲ್ಲ .
ಕಳೆದ ವರ್ಷ ಸುಮಾರು ಈ ಸಮಯದಲ್ಲಿ ಮಗ ಹಠ ಹಿಡಿದು ನನ್ನ ಮೊಬೈಲ್ ಗೆ ಇಂಟರ್ನೆಟ್  ಸಂಪರ್ಕ ಹಾಕಿಸಿದ . ಯಾವಾಗಲು ಸಂಜೆ ಶಾಲೆಯಿಂದ ಬಂದ  ತಕ್ಷಣ ನನ್ನ ಮೊಬೈಲ್ ತಗೊಂಡು ಏನೋ ಡಬ್ಲ್ಯೂ ಡಬ್ಲ್ಯೂ ಯಫ಼್. ,ಜೋನ್ಸೀನ  ಕಾಳಿ  , ಕ್ರಿಕೆಟ್ ಅದು ಇದು ನೋಡಿ ನಂಗೆ ಹೇಳುತ್ತಿದ್ದ .ನಂಗೆ ಆಸಕ್ತಿ ಇಲ್ಲದಿದ್ದರೂ ಅವನ ಉತ್ಸಾಹಕ್ಕೆ ಭಂಗ ಬರಬಾರದಂತೆ  ಹೂಂಗುಟ್ಟುತಿದ್ದೆ. ಒಂದಿವಸ ನನ್ನ ಹತ್ರ" ಅಮ್ಮ ನೋಡು ಇಂಟರ್ನೆಟ್ ನಲ್ಲಿ ಇಲ್ಲದ  ವಿಚಾರವೇ ಇಲ್ಲ ಎಲ್ಲವು ಇದರಲ್ಲಿ ಸಿಗುತ್ತೆ "ಅಂತ ಹೇಳಿದ. ಯಾವಾಗಲು ಹೂಂಗುತ್ತಿ ಸುಮ್ಮನಾಗುತ್ತಿದ್ದ ನಾನು ಅವನನ್ನು ಸುಮ್ಮನೆ  ಕಿಚಾಯಿಸುವುದಕ್ಕಾಗಿ  "ನಾನು ಸಿಗುತ್ತೇನ ನಿನ್ನ   ಇಂಟರ್ನೆಟ್ ನಲ್ಲಿ ?"(ಸಿಗಲು ಅಸಾಧ್ಯವೆಂದು ತಿಳಿದಿದ್ದೂ ) ಕೇಳಿದೆ .ಒಂದು  ಕ್ಷಣ ವಿಚಲಿತನಾದ ಅವನು  ನಾನು ನೋಡುತ್ತೇನೆ ಎಂದು ಹೇಳಿ ಮೊಬೈಲ್ ತಗೊಂಡು ಏನೋ ಗುರುಟಲು ಆರಂಬಿಸಿದ . ನಾನು ಏನೋ ಸಂಜೆ ತಿಂಡಿ ತಯಾರು ಮಾಡುತ್ತಿದ್ದೆ . ಅಡುಗೆ ಕೋಣೆಗೆ ಓಡಿ ಬಂದ  ಮಗ ಅರವಿಂದ "ಅಮ್ಮಾ ಅಮ್ಮ  ನೋಡು ಇಲ್ಲಿ ನೋಡು ನೀನು ಇದರಲ್ಲಿ ಇದ್ದೀಯ "ಎಂದು ಏನೋ ಸಾಧಿಸಿದ ಗೆಲುವಿನ ಧ್ವನಿಯಲ್ಲಿ ಹೇಳಿದ . ಹೌದು !! ಅವನು ಹೇಳಿದ್ದು ನಿಜ . ಡಾ . ಲಕ್ಷ್ಮಿ ಜಿ ಪ್ರಸಾದ್ ಎಂದು ಗೂಗಲ್ ಸರ್ಚ್ ಗೆ ಹಾಕಿದಾಗ ಅದರಲ್ಲ್ಲಿ ಅಜ್ಜಿ ಭೂತ ಮತ್ತು ಕೂಜಿಲು -ಡಾ . ಲಕ್ಷ್ಮಿ ಜಿ ಪ್ರಸಾದ್  ಎಂದಿತ್ತು .   ಉಡುಪಿ ಗೋವಿಂದ  ಪೈ ಸಂಶೋಧನಾ ಕೇಂದ್ರ ಪ್ರಕಟಿಸುವ "  ತುಳುವ  " ಪತ್ರಿಕೆಯಲ್ಲಿ ಪ್ರಕಟಗೊಂಡ ನನ್ನ  ಲೇಖನವನ್ನು ತಮ್ಮ ಬ್ಲಾಗ್ ನಲ್ಲಿ ಹಾಕಿ  ನನ್ನ ಲೇಖನ ವನ್ನು ಇಂಟರ್ನೆಟ್ ಮೂಲಕವೂ  ಸಿಗುವಂತೆ  ಮಾಡಿದ್ದರು ಹಿರಿಯ ವಿಮರ್ಶಕರಾದ ಉಡುಪಿಯ  ಪೂರ್ಣ ಪ್ರಜ್ಞ ಕಾಲೇಜ್ ಉಪನ್ಯಾಸಕರಾದ  ಸಹೃದಯಿ  ಪ್ರೊ। ಮುರಳೀಧರ ಉಪಾಧ್ಯರು

ಇಲ್ಲಿಂದ ನನ್ನ ಬ್ಲಾಗ್ ಬರೆಯುವ ಕನಸು ಗರಿ ಬಿಚ್ಚಿಕೊಂಡಿತು . ಮೊದಲಿಗೆ  ನುಡಿ ಹಾಗು ಬರಹದ ಮೂಲಕ   ಕನ್ನಡ ಬರೆಯುವುದು ಹೇಗೆ ಎಂದು ತಿಳಿದುಕೊಂಡೆ ಜ಼ೊತೆಗೆ ಮಗನ ಸಹಾಯದಿಂದ   ಮೊಬೈಲ್ ನಲ್ಲಿ  ಇಂಟರ್ನೆಟ್ ಮೂಲಕ ಬೇಕಾದ್ದನ್ನು ಹುಡುಕಲು  ಕಲಿತೆ. ಅದಕ್ಕೆ ಸರಿಯಾಗಿ ನನಗೆ ಬೆಂಗಳೂರಿಗೆ ನಿಯೋಜನೆ ಸಿಕ್ಕಿತು. ತುಂಬಾ ಸಮಯದಿಂದ ನನ್ನ ಪತಿ ಗೋವಿಂದ ಪ್ರಸಾದ್  ಮನೆಗೊಂದು  ಕಂಪ್ಯೂಟರ್ ತರುವ  ಎಂದು ಹೇಳುತ್ತಿದ್ದರು . ಬೇಡ ಎಂದು ನಾನು ಹೇಳುತ್ತಿದ್ದೆ . ಈಗ ನಾನಾಗಿಯೇ ಕಂಪ್ಯೂಟರ್ ತರುವ ಹೇಳಿದೆ . ನಾನು ಹೇಳಿದ ದಿವಸ ಸಂಜೆಯೇ ಮನೆಗೆ  ಲೆನೆವೋ ಕಂಪ್ಯೂಟರ್  ಅನ್ನು ತಂದೇ ಬಿಟ್ಟರು ನಾನೆಲ್ಲಿ ಇನ್ನು ಮನಸ್ಸು ಬದಲಾಯಿಸಿ ಬೇಡ ಅಂತ ಹೇಳಿ ಬಿಟ್ರೆ ಅಂತ !
ಸರಿ; ಅಂತು ಮೊನ್ನೆ ಜನವರಿ 2 4  ಕ್ಕೆ ಮನೆಗೆ ಕಂಪ್ಯೂಟರ್  ತಂದ ತಕ್ಷಣವೇ ಮಗನಲ್ಲಿ ನಂಗೆ ಬ್ಲಾಗ್ ಅಕೌಂಟ್  ತೆರೆದು ಕೊಡು ಎಂದು ಹೇಳಿದೆ . ತಂದೆ ಮಗ ಸೇರಿಕೊಂಡು ಏನೋ ಮಾಡಿಕೊಂಡು ಪೇಚಾಡಿ  ನನ್ನ ಹೆಸರಿನಲ್ಲಿ   ಬ್ಲಾಗ್ ತೆರೆದು ಕೊಟ್ಟರು . ಜೊತೆಗೆ ಕಂಪ್ಯೂಟರ್ ಆನ್  ಆಫ್  ಮಾಡುವುದನ್ನು ಗೂಗಲ್ ಸರ್ಚ್ ಮೂಲಕ ಬ್ಲಾಗ್ ನೋಡಲು  ಬ್ಲಾಗ್ ಗೆ ಪ್ರವೇಶಿಸಿ ಬರೆಯುವುದನ್ನು ಹೇಳಿಕೊಟ್ಟರು . ಮೊದಲಿಗೆ  ನನ್ನ ಕುರಿತಾದ ಸಂಕ್ಷಿಪ್ತ ಮಾಹಿತಿ ಹಾಕಿದೆ . ನಂತರ ನನ್ನಲ್ಲಿರುವ ಕೆಲವು ಅಪರೂಪದ ಭೂತಗಳ ಫೋಟೋ  ಹಾಕಿದೆ .ನೀರು ಇಂಗಿಸ ಬೇಕಾದ ಅನಿವಾರ್ಯತೆಯ ಕುರಿತು ನೆಲ ಜಲ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ಲೇಖನ ಬರೆದೆ .ಸ್ತ್ರೀ  ಸಂವೇದನೆ ಕುರಿತು ಒಂದು ಲೇಖನ ಬರೆದು ಹಾಕಿದೆ . ಈ ನಡುವೆ ಉಡುಪಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೆಶಕರಾದ  ಹೆರಂಜೆ  ಕೃಷ್ಣ ಭಟ್ಟರನ್ನು ಸಂಪರ್ಕಿಸಿ ಮುರಳಿಧರ ಉಪಾಧ್ಯರ ಸಂಪರ್ಕ ಸಂಖ್ಯೆಯನ್ನು ಪಡೆದು  ಅವರನ್ನು ಸಂಪರ್ಕಿಸಿ ಬ್ಲಾಗ್ ಬರೆಯುವ  ನನ್ನ ಆಸಕ್ತಿಯ ಬಗ್ಗೆ ತಿಳಿಸಿದೆ ಅವರು ತುಂಬು ಮನಸಿನಿಂದ ಸೂಕ್ತ ಸಲಹೆ ನೀಡಿದರು . ಅಂತು ಇಂತೂ ಒಂದೆರಡು ಲೇಖನ ಬರೆದು  ಬ್ಲಾಗ್ ಗೆ ಹಾಕಿದ ನಂತರ ಕಂಪ್ಯೂಟರ್  ಬಳಸುವ ನನ್ನ ಅನೇಕ ಸ್ನೇಹಿತರಿಗೆ ಹಾಗು ನನ್ನ ಹಿತೈಷಿಗಳಾದ ಕೆಲವು ವಿದ್ವಾಂಸರಿಗೆ ಮೊಬೈಲ್ ಮೂಲಕ  ನಾನು ಬ್ಲಾಗ್ ಬರೆಯುತ್ತಿರುವುದನ್ನು ತಿಳಿಸಿ ಓದಿ ನೋಡಿ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ಸಲಹೆ ನೀಡುವಂತೆ ವಿನಂತಿ ಮಾಡಿದೆ . ಎಲ್ಲೆರಿಂದ ನನಗೆ ತುಂಬು ಮನದ ಪ್ರೋತ್ಸಾಹ ಸಿಕ್ಕಿತು. ಮುರಳಿಧರ ಉಪಾಧ್ಯರಿಗು ಮೆಸೇಜ್ ಮಾಡಿದ್ದೆ .ಅದೇ ದಿವಸ ನನ್ನ ಬ್ಲಾಗನ್ನು ನೋಡಿ ಅವರು "ನಾನು ನಿಮ್ಮ ಬ್ಲಾಗ್ ನ ಹೊರ ಆವರಣವನ್ನು  ಚಂದ ಮಾಡಿ ಕೊಡಬಲ್ಲೆ .ನಿಮ್ಮ  ಇಮೇಲ್ ಅಡ್ರೆಸ್ ಮತ್ತು ಪಾಸ್ ವರ್ಡ್ ಕೊಡಿ . ನಂತರ ಪಾಸ್  ವರ್ಡ್ ಬದಲಾಯಿಸಿ "ಎಂದು ಮೆಸೇಜ್  ಮಾಡಿದರು.ಇಂತಹ ಸಹೃದಯತೆಯನ್ನು  ಡಾ . ಅಮೃತ ಸೋಮೆಶ್ವರರನ್ನು ಬಿಟ್ಟು  ಬೇರೆ  ಯಾರಲ್ಲೂ  ಆ ತನಕ ಕಂಡಿರಲಿಲ್ಲ ನಾನು. !
{  ಸಂಶೋಧನೆ ,ಸಾಹಿತ್ಯ ಕ್ಷೇತ್ರದಲ್ಲಿ  ಇನ್ನೂ ಅಂಬೆಗಾಲು ಇಡುತ್ತಿರುವ ನನ್ನ ಕುರಿತು ನೀವು ತೋರಿದ  ಪ್ರೀತಿ ಅಭಿಮಾನ ನನ್ನನ್ನು ನಿಬ್ಬೆರಗಾಗಿಸಿ ಮೂಕ ವಿಸ್ಮಿತಳನ್ನಾಗಿಸಿದೆ   ಸರ್ (ಮುರಳೀಧರ  ಉಪಾಧ್ಯ )! ನೀವು ನಿಜವಾಗಿಯೂ ಗ್ರೇಟ್  ಸರ್ !)  ಅವರು ಹೇಳಿದಂತೆ  ಇಮೇಲ್ ಅಡ್ರೆಸ್  ಮತ್ತು ಪಾಸು ವರ್ಡ್  ಮೆಸೇಜ್ ಮಾಡಿ ಆವರ  ಮೊಬೈಲ್ ಗೆ ಕಳುಹಿಸಿದೆ  ಫೆಬ್ರುವರಿ ೨  ರಂದು  ಮಧ್ಯಾಹ್ನ .ಅದೇ ದಿವಸ  ಸಂಜೆ ಅವರು ನನ್ನ ಬ್ಲಾಗ್ ಅನ್ನು ನೇರ್ಪು ಗೊಳಿಸಿ ಬೇರೆ ಬ್ಲಾಗ್ಗಳಿಗೆ ಲಿಂಕ್ ಕೊಟ್ಟು  ಫೀಡ್ ಜೆಟ್ ಅಳವಡಿಸಿ  ಒಂದು ಸುಂದರವಾದ  ಚೌಕಟ್ಟು ಅನ್ನು  ಹಾಕಿ ತುಂಬಾ ಆಕರ್ಷಕವಾಗಿಸಿ  ಕೊಟ್ಟು  ನನಗೆ  ಪಾಸ್ ವರ್ಡ್  ಚೇಂಜ್ ಮಾಡಿ ಎಂದು ಜತನದಿಂದ  ಮೆಸೇಜ್ ಮಾಡಿದರು . ನನ್ನ ಬ್ಲಾಗ್ ತೆರೆದು ನೋಡಿದೆ !!  ರೋಮಾಂಚನವಾಯಿತು ನನಗೆ  ಅಷ್ಟು  ಚಂದ  ಮಾಡಿ ಕೊಟ್ಟಿದ್ದರು.  ಅವರು .ಹೀಗೆ ನನ್ನ ಬ್ಲಾಗ್ ಬರೆಯುವ ಕನಸು ನನಸಾಗಿದೆ ಗೆಳೆಯರೆ !

  ನಾನು   ಬ್ಲಾಗ್ ತೆರದು  75   ದಿವಸಗಳು ಆದವು. ೪೮  ಬರಹಗಳನ್ನು  ನನ್ನ ಬ್ಲಾಗಿನಲ್ಲಿ ಹಾಕಿದ್ದೇನೆ . 2266  ವೀಕ್ಷಕರು ನನ್ನ ಬ್ಲಾಗನ್ನು ಇಣುಕಿ  ನೋಡಿದ್ದಾರೆ  ಅನೇಕರು  ಪ್ರೋತ್ಸಾಹಿಸಿದ್ದಾರೆ . ನನ್ನ ಬ್ಲಾಗನ್ನು  ಕನ್ನಡ ಬ್ಲಾಗ್ ಕೊಂಡಿಗೆ ಜೋಡಿಸಿದ್ದಲ್ಲದೆ  ನನ್ನ ಹೆಚ್ಚು ಕಡಿಮೆ ಎಲ್ಲ ಬರಹ (ಪೋಸ್ಟ್ )ಗಳನ್ನು ತಮ್ಮ  ಬ್ಲಾಗಿನಲ್ಲಿ  ಹಂಚಿಕೊಂಡು  ನನ್ನ ಬ್ಲಾಗ್ ಇಷ್ಟು ಬೇಗನೆ ಪ್ರಸಿದ್ಧಿಗೆ  ಬರುವಂತೆ  ಮಾಡಿದ್ದಾರೆ ಮುರಳೀಧರ ಉಪಾಧ್ಯರು .
ಮುರಳೀಧರ ಉಪಾಧ್ಯರಿಗೆ  ನಾನು ಸದಾ ಋಣಿ.  ಬೆಂಬಲ ನೀಡಿದ  ಓದಿ ಪ್ರೋತ್ಸಾಹಿಸಿದ ಎಲ್ಲರಿಗು ಧನ್ಯವಾದಗಳು



3 comments:

  1. ಮುರಳೀಧರ ಉಪಾಧ್ಯ -Thank u, Dr.Laxmi Prasad. ನನ್ನ ಕಾಲೇಜು ಉಡುಪಿಯ Poornaprajna ಕಾಲೇಜು. ನಾನು ಎಮ್. ಜಿ.ಎಮ್. - ಗೊವಿಂದ ಪೈ ಸಂಶೋಧನ ಕೇಂದ್ರದ ಆಡಳಿತ ಮಂಡಳಿ ಸದಸ್ಯ . ನಿಮ್ಮ ಮಗ ಅರವಿಂದನಿಗೆ ಅಭಿನಂದನೆ , ಶುಭಾಶಯ ತಿಳಿಸಿರಿ -Muraleedhara upadhya -http:// mupadhyahiri.blogspot.in - email-mhupadhya@gmail.com

    ReplyDelete
    Replies
    1. ಓಹ್ ! ನಾನು ಗಮನಿಸಲಿಲ್ಲ ತಪ್ಪನ್ನು ಸರಿಪಡಿಸುತ್ತೇನೆ .ಧನ್ಯವಾದಗಳು ಸರ್

      Delete
  2. ಓಹ್ ! ನಾನು ಗಮನಿಸಲಿಲ್ಲ ತಪ್ಪನ್ನು ಸರಿಪಡಿಸುತ್ತೇನೆ .ಧನ್ಯವಾದಗಳು ಸರ್

    ReplyDelete