Tuesday 18 March 2014

ಸಾವಿರದೊಂದು ಗುರಿಯೆಡೆಗೆ :ತುಳುನಾಡ ದೈವಗಳು 27 ಮಂಗಳೂರಿನ ಅರಬ್ ಭೂತ © ಡಾ.ಲಕ್ಷ್ಮೀ ಜಿ ಪ್ರಸಾದ

                                   
                          ವಿಜಯ ಕರ್ನಾಟಕದಲ್ಲಿ ಇಂದು (18-03 -201 4 ) ರಂದು ಪ್ರಕಟವಾದ ನನ್ನ  ಲೇಖನ
ತುಳುವರ ಭೂತಾರಾಧನೆಯಲ್ಲಿ ಯಾವುದೇ ಜಾತಿ ಭೇದ  ಇರುವುದಿಲ್ಲ ಅಂತೆಯೇ ಧರ್ಮದ ಗಡಿ ಕೂಡಾ ಇದಕ್ಕಿಲ್ಲ .ಉಲ್ಲಾಳದಲ್ಲಿ ಭೂತ ಮಸೀದಿಗೆ ಭೇಟಿ ಕೊಡುವ ಸಂಪ್ರದಾಯ ಇದೆ. ಅದೇ ರೀತಿ ಕೆಲವೆಡೆ ಭೂತ ಮುಸ್ಲಿಂ ಕ್ರಿಸ್ಚಿ ಯನ್ ವ್ಯಕ್ತಿಗಳನ್ನು ಉದ್ದೇಶಿಸಿ ಕರೆದು ಗೌರವಿಸುವ ಪದ್ಧತಿ ಇದೆ .ತೋಕ್ಕೊಟು  ಸಮೀಪ ಭೂತ “ಅಂತಂತೋನಿ “ಎಂದು ಕರೆಯುವ ಬಗ್ಗೆ ಭೂತ ಕಟ್ಟುವ ಕಲಾವಿದರಾದ ಅಪ್ಪಣ್ಣ  ಅವರು ತಿಳಿಸಿದ್ದಾರ copy rights reserved  © ಡಾ.ಲಕ್ಷ್ಮೀ ಜಿ ಪ್ರಸಾದ
 ಅಂತೆಯೇ ತುಳುನಾಡಿನಲ್ಲಿ ದೈವತ್ವವನ್ನು ಪಡೆದವರೆಲ್ಲ ಹಿಂದುಗಳು, ತುಳುನಾಡಿನವರೇ ಆಗಬೇಕಿಲ್ಲ. .ತುಳುನಾಡಿನಲ್ಲಿ ದೈವತ್ವ ಪಡೆದು ಭೂತ ವಾಗಿ ಆರಾಧಿಸಲ್ಪಡುವುದು ಒಂದು ವಿಶಿಷ್ಟ ಸಂಸ್ಕೃತಿ .ಇಲ್ಲಿ ಭೂತತ್ವವನ್ನು ಪಡೆಯುವುದಕ್ಕೆ ಯಾವುದೇ  ದೇಶ ,ಜಾತಿ ಧರ್ಮದ ಮಿತಿ ಇಲ್ಲ.
 ಕೆಲವು ಹೊರದೇಶದ ಜನರೂ ಇಲ್ಲಿ ಬಂದು ದುರಂತವನ್ನಪ್ಪಿ ದೈವತ್ವಕ್ಕೇರಿ ಆರಾಧಿಸಲ್ಪಡುತ್ತಿದ್ದಾರೆ. ಅರಬ್ಬಿ ಭೂತ ಮತ್ತು ಚೀನೀ ಭೂತಗಳು ಅನ್ಯದೇಶೀಯ ಮೂಲದ ದೈವಗಳಾಗಿವೆ. . ಹೀಗೆ ನಾನಾ ಕಾರಣಗಳಿಂದ ಜೈನರು, ಮುಸ್ಲೀಮರು, ಕ್ರಿಶ್ಚಿಯನ್ನರು, ಅರಬಿಗಳು, ಚೀನಿ ವ್ಯಕ್ತಿಗಳು ಕೂಡ ದೈವತ್ವವನ್ನು ಪಡೆದಿದ್ದಾರೆ copy rights reserved  © ಡಾ.ಲಕ್ಷ್ಮೀ ಜಿ ಪ್ರಸಾದ
 ಭೂತಗಳಾದ ನಂತರ ಇವರು ಮೂಲತಃ ಯಾರಾಗಿದ್ದರು ಹೇಳುವ ವಿಚಾರ ಇಲ್ಲಿ ಬರುವುದೇ ಇಲ್ಲ! ಭೂತವಾದ ನಂತರ ಅವರು ನಮ್ಮನ್ನು ಕಾಯುವ ಶಕ್ತಿಗಳು. ಎಲ್ಲ ಭೂತಗಳು ಸಮಾನರು !.ಎಲ್ಲ ಭೂತಗಳಿಗೂ ಒಂದೇ ರೀತಿಯ ಭಕ್ತಿಯ ನೆಲೆಯಲ್ಲಿ ಆರಾಧನೆ ಇದೆ. ಇದು ನಮ್ಮ ತುಳು ಸಂಸ್ಕೃತಿಯ ವೈಶಿಷ್ಟ್ಯ ,



ತುಳು ನಾಡಿನಲ್ಲಿ ಯಾರಿಗೆ ಹೇಗೆ ಯಾವಾಗ ದೈವತ್ವ ಪ್ರಾಪ್ತಿಯಾಗುತ್ತದೆ ಹೇಳುವುದಕ್ಕೆ ಒಂದು ಸಿದ್ಧ ಸೂತ್ರವಾಗಲಿ ನಿಯಮವಾಗಲಿ ಏನೂ ಇಲ್ಲ .ದುರಂತವನ್ನಪ್ಪಿದ  ಅಸಹಾಯ ಶೂರರು ಮಾತ್ರ ಭೂತಗಳಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ .ಮನುಷ್ಯ ಮೂಲದಿಂದ ಭೂತ ಸ್ಥಿತಿಗೇರಿದವರು ಎಲ್ಲರೂ ಮೂಲತಃ ಸಾತ್ವಿಕರೂ, ಸದ್ಧರ್ಮಿಗಳೂ, ಸಾಧ್ವಿಗಳೂ, ಶೂರರೂ ಎನ್ನುವಂತಿಲ್ಲ. ಅಂಥಹ ಉದಾತ್ತ ಚರಿತರು ವಿರಳವಾಗಿ ಕೆಲವರಿರಬಹುದು. ವಿಶೇಷಗುಣಗಳಿಲ್ಲದ ತೀರಾ ಸಾಮಾನ್ಯರೂ ಬೇರೆಬೇರೆ ಕಾರಣಗಳಿಂದ ದೈವತ್ವವನ್ನು ಪಡೆದಿದ್ದಾರೆ. ಆಕಸ್ಮಿಕ ಮರಣಕ್ಕೆ ಗುರಿಯಾದವರು ದೈವಗಳ ಕಾರಣೀಕಗಳು ಸೇರಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾರೆ. copy rights reserved  © ಡಾ.ಲಕ್ಷ್ಮೀ ಜಿ ಪ್ರಸಾದ ಪ್ರಧಾನ ಭೂತ ಗಳಾದ ಉಲ್ಲಾಕುಳು ಶಿರಾಡಿ ,ಮಲರಾಯಿ ,ಬಬ್ಬರ್ಯ ,ಪಂಜುರ್ಲಿ ,ಮೊದಲಾದ ಭೂತ ಗಳ  ಅನುಗ್ರಹದಿಂದ ಅನೇಕರು ಸೇರಿಗೆ ದೈವಗಳಾಗಿದ್ದಾರೆ.ಅಂತೆಯೇ  ಈ ಭೂತ ಗಳ ಆಗ್ರಹಕ್ಕೆ ತುತ್ತಾಗಿಯೂ ಅನೇಕರಿಗೆ ದೈವತ್ವ ಲಭಿಸಿದೆ .ಮಲರಾಯಿ ದೈವದ ಕೋಪಕ್ಕೆ ತುತ್ತಾಗಿ ದೈವತ್ವ ಹೊಂದಿದ ಭೂತ ಅರಬ್ಬಿ ಭೂತ .

 ಮಂಗಳೂರಿನ ಉರ್ವ ಚಿಲಿಂಬಿಯ ಮಲರಾಯಿ ಧೂಮಾವತಿ ದೈವಸ್ಥಾನದಲ್ಲಿ ಪ್ರಧಾನ ದೈವ ಮಲರಾಯಿಯ ಸೇರಿಗೆಯ ದೈವವಾಗಿ ಅರಬ್ಬಿ ಭೂತ ಆರಾಧನೆ ಪಡೆಯುತ್ತಿದೆ . ಹೆಸರೇ ಸೂಚಿಸುವಂತೆ ಈ ದೈವತದ ಮೂಲ ಒಬ್ಬ ಅರಬ್ ವ್ಯಕ್ತಿ. ಈತನೊಬ್ಬ ಖರ್ಜೂರ ವ್ಯಾಪಾರಿ. ಒಂದು ದಿನ ಖರ್ಜೂರ ಮಾರಾಟ ಮಾಡಿಕೊಂಡು ಚಿಲಿಂಬಿಯ ಬಳಿಗೆ ಬರುತ್ತಾನೆ. ಅಲ್ಲಿ ಒಂದು ನೀರಿನ ಕಟ್ಟ ಇರುತ್ತದೆ. ಅಳಕೆ ಮೇಲ್ಮನೆಗೆ ಸೇರಿದ ಅವಿವಾಹಿತ ಹೆಣ್ಣು ಮಗಳು ತಿಂಗಳ ಸೂತಕ ಸ್ನಾನಕ್ಕೆ ಬಂದವಳು ಕಟ್ಟದ ನೀರಿಗಿಳಿದು ಸ್ನಾನ ಮಾಡುತ್ತಿರುತ್ತಾಳೆ. ಅವಳನ್ನು ನೋಡಿದ ಆ ಅರಬ್ ದೇಶದ ಖರ್ಜೂರ ವ್ಯಾಪಾರಿಯು ಅವಳಲ್ಲಿ ವ್ಯಾಮೋಹಗೊಂಡು ಅವಳ ಮೇಲೆ ಅತ್ಯಾಚಾರಕ್ಕೆ ಮಾಡಲು ಹೋಗುತ್ತಾನೆ. copy rights reserved  © ಡಾ.ಲಕ್ಷ್ಮೀ ಜಿ ಪ್ರಸಾದ ಆಗ ಅವಳು ತನ್ನ ಕುಲದೈವ ಮಲರಾಯಿ ಧೂಮಾವತಿಯಲ್ಲಿ ಮಾನರಕ್ಷಣೆ ಮಾಡುವಂತೆ ಕೇಳಿಕೊಳ್ಳುತ್ತಾಳೆ. ಆಗ ಮಲಾರಾಯಿ ಧೂಮಾವತಿ ದೈವ ಅವಳನ್ನು ಮಾಯ ಮಾಡಿ ಅವಳ ಮಾನರಕ್ಷಣೆ ಮಾಡಿದ್ದಲ್ಲದೆ ತನ್ನ ಸೇರಿಗೆ ದೈವವಾಗಿಸಿ ಆರಾಧನೆ ಹೊಂದುವಂತೆ ಮಾಡುತ್ತದೆ.ಅವಳು ಬ್ರಾಂದಿ (ಬ್ರಾಹ್ಮಣತಿ)ಭೂತವಾಗಿ ಅಲ್ಲಿ ಆರಾಧನೆ ಪಡೆಯುತ್ತಾಳೆ 
  .ಆ ಆರಬ್ ವ್ಯಾಪಾರಿಯನ್ನು ಶಿಕ್ಷಿಸುವ ಸಲುವಾಗಿ ಆತನನ್ನು ಮಾಯ ಮಾಡುತ್ತದೆ ಮಲರಾಯಿ ದೈವ . ದೈವದ ಆಗ್ರಹಕ್ಕೆ ತುತ್ತಾಗಿ ಮಾಯವಾದರೂ ದೈವದ ಸೇರಿಗೆಗೆ ಸೇರಿ ದೈವತ್ತ್ವ ಪಡೆಯುವುದು ತುಳುನಾಡಿನಲ್ಲಿ ಸಾಮಾನ್ಯವಾದ ವಿಚಾರವಾಗಿದೆ. ಅಂತೆಯೇ ಈ ಅರಬ್ ವ್ಯಾಪಾರಿ ಕೂಡ ದೈವತ್ತ್ವವನ್ನು ಪಡೆದು ಅರಬ್ಬಿ ಭೂತ ಎಂಬ ಹೆಸರಿನಲ್ಲಿ ಆರಾಧನೆ ಪಡೆಯುತ್ತಾನೆ. ಮಲರಾಯಿ ಧೂಮಾವತಿ ದೈವಸ್ಥಾನದಲ್ಲಿ ಅರಬ್ಬಿ ಭೂತದ ಕಲ್ಲು ಇದೆ. ಆ ಬ್ರಾಹ್ಮಣ ಹುಡುಗಿ ಸ್ನಾನ ಮಾಡಿದ ನೀರಿನ ಕಟ್ಟ ಈಗ ಕೂಡ ಅಲ್ಲ್ಲಿದೆ ಅವಳ ನೇವಳಡ ಗುರುತು ಎಂಬ ಒಂದು ಗೆರೆ ಅಲ್ಲಿನ ಪಾದೆಕಲ್ಲಿನ ಮೇಲೆ ಇದೆ .ಆ ಅರಬ್ ವ್ಯಾಪಾರಿಯ ಪಾದದ ಗುರುತು ಎಂದು ನಮ್ದಲಾಗುವ ಸಣ್ಣ ಸಣ್ಣ ಗುರುತುಗಳನ್ನ್ನು ಅಲ್ಲಿನ ಸ್ಥಳಿಯರು ತೋರುತ್ತಾರೆ
.              ಬ್ರಾಹ್ಮಣತಿ ಬೂತೋ ಚಿತ್ರ ಕೃಪೆ :ನಮ್ಮ ಸತ್ಯೊಲು
ಅರಬ್ಬಿ ಭೂತಕ್ಕೆ ಒಂದು ಕಲ್ಲು ಹಾಕಿ ಆರಾಧಿಸುತ್ತಾರೆ .ಬ್ರಾಹ್ಮಣತಿ (ಬ್ರಾಂದಿ )ಭೂತಕ್ಕೆ ಒಂದು ಕಟ್ಟೆ  ಇದೆ.ಆ ಕಟ್ಟೆ ಯ ಹತ್ತಿರ  ಈ ಭೂತಕ್ಕೆ ಕೋಲ ನೀಡಿ ಆರಾಧಿಸುತ್ತಾರೆ .ಮಲರಾಯಿ ಧೂಮಾವತಿ ದೈವದ ನೇಮಕ್ಕೆ ಮೊದಲು ಬ್ರಾಹ್ಮಣ ಕನ್ಯೆ(ಬ್ರಾಂದಿ ಭೂತ) ಮತ್ತು ಅರಬ್ಬಿ ಭೂತಕ್ಕೆ ನೇಮ ನೀಡುತ್ತಾರೆ. copy rights reserved  © ಡಾ.ಲಕ್ಷ್ಮೀ ಜಿ ಪ್ರಸಾದ ಅರಬ್ಬಿ ಭೂತವನ್ನು ಬಂಧಿಸಿ ಶಿಕ್ಷಿಸಿ ಮಾಯ ಮಾಡಿದ್ದರ ಸೂಚಕವಾಗಿ ಆತನಿಗೊಂದು ಬೆಳ್ಳಿಯ ಸರಿಗೆಯಬಂಧನ ಇರುತ್ತದೆ. ಅರಬ್ಬಿ ಭೂತಕ್ಕೆ ಒಂದು ಅರಬರ ಟೊಪ್ಪಿಗೆಯನ್ನು ಹೋಲುವ ಟೊಪ್ಪಿಗೆಯ(ಮುಂಡಾಸು ) ಅಲಂಕಾರ ಇರುತ್ತದೆ
.ವಾಸ್ತವಿಕ ನೆಲೆಯಿಂದ ಆಲೋಚಿಸುವುದಾದರೆ ಆ ಅರಬ್ ವ್ಯಾಪಾರಿಯಿಂದ ತಪ್ಪಿಸಿ ಕೊಳ್ಳುವುದಕ್ಕಾಗಿ ನೀರಿನಲ್ಲಿ ಮುಂದೆ ಮುಂದೆ ಸಾಗಿದ ಆ ಕನ್ಯೆ ದುರಂತವನ್ನಪ್ಪಿರಬಹುದು .ಅವಳನ್ನು ಹಿಂಬಾಲಿಸಿದ ಆ ಅರಬ್ ಖರ್ಜೂರ ವ್ಯಾಪಾರಿ ಕೂಡ ದುರಂತವನ್ನಪ್ಪ್ಪಿರಬಹುದು ಅಥವಾ ಆ ಹುಡುಗಿಯ ದುರಂತಕ್ಕೆ ಕಾರಣನಾದ ಅರಬ್ ವ್ಯಾಪಾರಿಯನ್ನು ಊರ ಜನರು ಸೇರಿ ಶಿಕ್ಷಿಸಿರಬಹುದು  .ಆಗ ಆತ ದುರಂತವನ್ನಪ್ಪಿರಬಹುದು .ಕಾಲಾಂತರದಲ್ಲಿ ಅವರಿಬ್ಬರೂ ದೈವತ್ವವನ್ನು ಪಡೆದು ಆರಾಧಿಸಲ್ಪಟ್ಟಿರಬೇಕು copy rights reserved  © ಡಾ.ಲಕ್ಷ್ಮೀ ಜಿ ಪ್ರಸಾದ

                                                   ಅರಬ್ಬಿ ಭೂತ (ಹಳೆಯ ಫೋಟೋ )

Monday 10 March 2014

ಸಾವಿರದೊಂದು ಗುರಿಯೆಡೆಗೆ :ತುಳುನಾಡ ದೈವಗಳು -18 ಅರಮನೆ ಜಟ್ಟಿಗ © ಡಾ.ಲಕ್ಷ್ಮೀ ಜಿ ಪ್ರಸಾದ

                         
© copy rights reserved

ಸುಳ್ಯ ,ಪುತ್ತೂರು ,ಕಾರ್ಕಳ ಉಡುಪಿ ಸರಿದಂತೆ ತುಳುನಾಡಿನಾದ್ಯಂತ ಜಟ್ಟಿ ಭೂತಕ್ಕೆ ಆರಾಧನೆ ಇದೆ .ಅರಮನೆ ಜಟ್ಟಿಗ ,ಕೋಟೆ ಜಟ್ಟಿಗ ,ಬೂಡು ಜಟ್ಟಿಗ ಇತ್ಯಾದಿ ಅನೇಕ ಹೆಸರುಗಳಿವೆ.ಇವೆಲ್ಲ ಒಂದೇ ದೈವ ಜತಿಗನ ಬೇರೆ ಬೇರೆ ಹೆಸರುಗಳೋ ಅಥವಾ ಬೇರೆ ಬೇರೆ ದೈವತಗಳೋ ಎಂಬ ಬಗ್ಗೆ ಇದಮಿಥ್ಹಂ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ .ಹೆಸರೇ ಸೂಚಿಸುವಂತೆ ಈತ ಮೂಲತಃ ಪೈಲ್ವಾನ ,ಕುಸ್ತಿ ಪಟು ಆಗಿರಬೇಕು
ವೀರ ಆರಾಧನೆ ಎಲ್ಲೆಡೆ ಕಂಡು ಬರುವ ವಿದ್ಯಮಾನ.ಹೊನ್ನಾವರ ,ಭಟ್ಕಳ ,ಗೇರುಸೊಪ್ಪೆ ಮೊದಲಾಡೆಗೆ ಜಟ್ಟಿಗನನ್ನು ಆರಾಧಿಸುತ್ತಾರೆ .ಈ ಬಗ್ಗೆ ಡಾ,ರಹಮತ್ ತರಿಕೆರೆ ಅವರು ಗೇರುಸೊಪ್ಪೆ ಬಸದಿಯ ಸಮೀಪವೇ ಬಯಲಿನಲ್ಲಿ ಇರುವ ಅನೇಕ ಜಟ್ಟಿಗನ ಕಲ್ಲುಗಳ ಬಗ್ಗೆ  " ಬುಡಕಟ್ಟು ಜನರಾದ ಗೊಂಡರ ದೈವಗಳು ಈ ಕಲ್ಲುಗಳು" ಎಂದು ಹೇಳಿದ್ದಾರೆ 

"ಗೇರುಸೋಪ್ಪೆಯನ್ನು ಆಳಿದ ಮೆಣಸಿನ ಚೆನ್ನ ಭೈರಾ ದೇವಿಯು ಅರಮನೆ ಕೋಟೆ ಗಳನ್ನು ಕಾಯಲು ದೂರದ ಆಂಧ್ರದ ಗೊಂಡ ಸಮುದಾಯದ ವೀರ ಜಟ್ಟಿಗಳನ್ನು ಕರೆಸಿದಳೆಂದು ಐತಿಹ್ಯವಿದೆ .ಕೋಟೆ ಜಟ್ಟಿ ,ಅರಮನೆ ಜಟ್ಟಿ ಹೆಸರುಗಳು ಇದ ನ್ನು  ದೃಡೀಕರಿಸುತ್ತವೆ.ಅರಮನೆಯ ಜಟ್ಟಿ ಅರಮನೆ ಕಾದವನು ಇರಬಹುದು ,ಕೋಟೆ ಕಾಯುವ ಜಟ್ಟಿ ಕೋಟೆ ಜಟ್ಟಿ ಇರಬಹುದು" ಎಂದು ರಹಮತ್ ತರಿಕೆರೆಯವರು ಅಭಿಪ್ರಾಯ ಪಟ್ಟಿದ್ದಾರೆ .

ಮೆಣಸಿನ ಯುದ್ಧದಲ್ಲಿ ಇವರೆಲ್ಲ ಸ್ವಾಮಿ ನಿಷ್ಠೆಯನ್ನು ಮೆರೆದು ಯುದ್ಧ ಮಾಡಿ ದುರಂತವನ್ನಪ್ಪಿರಬಹುದು .ಇವರ ಸಾಹಸ ಸ್ವಾಮಿ ನಿಷ್ಠೆ ಯಿಂದಾಗಿ ಇವರು ಜನ ಮಾನಸದಲ್ಲಿ ನಿಂತು ಆರಾಧನೆ ಪಡೆದಿರ ಬಹುದು .

ಹಗರಣ (ಒಂದು ದೃಶ್ಯ ಕಾವ್ಯ )ದ ಆರಂಭದಲ್ಲಿ ಜಟ್ಟಿಗರ ಪೂಜೆ ಮಾಡುವ ಸಂಪ್ರದಾಯವಿದೆ.

ಅಲ್ಲಿ ಆರಾಧಿಸಲ್ಪಡುವ ಜಟ್ಟಿಗರೇ ತುಳು ಪರಂಪರೆಯ ಜಟ್ಟಿ ದೈವವಾದರೆ ?ವೀರಾರಾಧನೆಯ ಪ್ರಸರಣ ಇಲ್ಲಿಯವರೆಗೆ ಹಬ್ಬಿ ಇಲ್ಲಿನ ಸಂಸ್ಕೃತಿಯಂತೆ ದೈವಗಳ ನೆಲೆಯಲ್ಲಿ ಆರಾಧಿಸಲ್ಪಟ್ಟಿರುವ ಸಾಧ್ಯತೆ ಇದೆ .

ಆದ್ರೆ ಇಲ್ಲಿ ಪ್ರಚಲಿತವಿರುವ ಐತಿಹ್ಯದ ಪ್ರಕಾರ ಜಟ್ಟಿ ಭೂತ ಮೂಲತಃ ಒಬ್ಬ ತಂತ್ರಿ .ಚೌಂಡಿ ಆರಾಧನೆಯನ್ನು ಮಾಡುವಾಗ ಓರ್ವ ತಂತ್ರಿ ದ್ರೋಹವನ್ನು ಮಾಡುತ್ತಾರೆ .ಆಗ ಕೋಪಗೊಂಡ ಚೌಂಡಿ /ಚಾಮುಂಡಿ ದೈವ ಆತನನ್ನು ಮಾಯ ಮಾಡಿ ಜಟ್ಟಿಗ ಎಂಬ ಹೆಸರಿನಲ್ಲಿ ತನ್ನ ಸೇರಿಗೆಗೆ ಸೇರಿಸಿಕೊಳ್ಳುತ್ತದೆ.

 ಈ ಬಗ್ಗೆ ಶಶಾಂಕ ನೆಲ್ಲಿತ್ತಾಯರು ನೀಡಿದ ಒಂದು ಮದಿಪಿನಲ್ಲೂ ಮಾಹಿತಿ ಇದೆ 
 
ಸ್ವಾಮಿ ಅಪ್ಪೆ ಚೌoಡಿ...........
ಆನಿದ ಕಾಲೋಡ್ ಗಟ್ಟದ ರಾಜ್ಯೋಡ್ ಬೀಮರಾಯೇ ತೋಟದ ಕಾರಂಬಡೆ ಮರತ ಮುದೆಲ್ ಪೊಟ್ಟು ಕಲ್ಲುಡ್ ನಿಲೆಯದ್ ಬೀಮರಾಯೇ ಚೌoಡಿ ಪಂಡುದ್ ಗೋಚರ ಮಲ್ಪಯಿ ದೈವದು ಉಲ್ಲ .
ಅನಿದ ಕಾಲೋಡ್ ನಿನನ್ ನಿಲೆ ಮಲ್ಪರೆ ಬತ್ತಿನ ತಂತ್ರಿಲು ಮೋಸ ಮಲ್ತೆರುಂದು ಪನ್ಪಿನೈಕದ್ ಅರೆನ್ ಮಾಯಾ ಮಲ್ತದು ಜಟ್ಟಿಗರಾಯೆ ಪನ್ಪಿನ ದೈವ ಸಗ್ತಿಯಾದ್ ನಿನ ಮರ್ಗಿಲ್ದ್ ನಂಬೊಂದು ಬರ್ಪಿಲೆಕ್ಕ ಮಲ್ತೊಂದು , ತುಳುನಾಡ ಪಂಚ ವರ್ಣದ ಪುಣ್ಯ ಬೂಮಿಡ್ ಬಡಕಾಯಿ ಅಂಕೋಲಾ ಗಡಿದುರ್ದ್ ತೆಂಕಾಯಿ ರಾಮೆಸರ ಗಡಿ ಮುಟ್ಟ ಜಾಗ್ ಜಾಗೆಡ್ ಸಂಚಾರೋಗ್ ಪಿದದೊಂಡ..

ಇಲ್ಲಿ ಚಾಮುಂಡಿ ದೈವದ ಆರಾಧನೆಯಲ್ಲಿ ದ್ರೋಹ ಮಾಡಿದ ತಂತ್ರಿ ಜಟ್ಟಿಯೂ ಆಗಿದ್ದನೇ?ಎಂಬ ಸಂದೇಹ ಉಂಟಾಗುತ್ತದೆ .ಚಾಮುಂಡಿದೈವದಆಗ್ರಹಕ್ಕೆತುತ್ತಾಗಿಮಾಯವಾಗಿ  ದೈವತ್ವ ಪಡೆದ ತಂತ್ರಿ ಗೆ ಜಟ್ಟಿಗ ಎಂದು ಹೆಸರು ಬರಬೇಕಿದ್ದರೆ ಆತ ಜಟ್ಟಿ ಕೂಡಾ ಆಗಿದ್ದಿರಬೇಕು .

ಇಲ್ಲಿ ಇನ್ನೊಂದು ಸಾಧ್ಯತೆ ಕೂಡ ಇದೆ .ಯಾರೋ ಒಬ್ಬ ಜಟ್ಟಿ ತನ್ನನ್ನು ಪೊರೆದ ರಾಣಿ ಅಥವಾ ರಾಜನಿಗೆ ದ್ರೋಹ ಮಾಡಿದ್ದು ಇದು ಗೊತ್ತಾಗಿ ಆತನನ್ನು ಪರಿವಾರದವರು  ದುರಂತಕ್ಕೀದು ಮಾಡಿರಬಹುದು .ಕಾಲಾಂತರದಲ್ಲಿ ದೈವತ್ವ ಪ್ರಾಪ್ತಿಯಾದಾಗ ಆತ ಚಾಮುಂಡಿ ದೈವಕ್ಕ್ಕೆ ದ್ರೋಹ ಮಾಡಿದ್ದು ಎಂಬ ಪರಿಕಲ್ಪನೆ ಸೇರಿರ ಬಹುದು .

ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆದರೆ ಸ್ಪಷ್ಟ ಮಾಹಿತಿ ತಿಳಿದು ಬರಬಹುದು 

ಜಟ್ಟಿ /ಜಟ್ಟಿಗ /ಅರಮನೆ ಜಟ್ಟಿಗ /ಕೋಟೆ ಜಟ್ಟಿಗ ದೈವದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದವರು ತಿಳಿಸಬೇಕಾಗಿ ವಿನಂತಿ 

ಅರಮನೆ ಜಟ್ಟಿಗನ ಅಪರೂಪದ ಸುಂದರ ಫೋಟೋ ಒದಗಿಸಿದ ಧರ್ಮ ದೈವ ಅಂತರ್ಜಾಲ ಪುಟದ 

ಶ್ರೀ ನಾಗ ರಾಜ ಭಟ್ ಬಂಟ್ವಾಳ ಇವರಿಗೆ ಕೃತಜ್ಞತೆಗಳು.
Please note: copying of this blog article is strictly prohibited .If you like the article then please share it at Facebook
 (  Dont copy my articles and photos)