Monday, 23 May 2016

ಸಾವಿರದೊಂದು ಗುರಿಯೆಡೆಗೆ :ತುಳುನಾಡ ದೈವಗಳು -309 ಗಣಪತಿ ಕೋಲ (c)ಡಾ.ಲಕ್ಷ್ಮೀ ಜಿ ಪ್ರಸಾದ


                    

ಕೇರಳದ ದಕ್ಷಿಣ ಭಾಗದಲ್ಲಿ ಕೋಲಂ ತುಳ್ಳಲ್ ಎಂಬ ಆರಾಧನಾ ಸಂಪ್ರದಾಯವಿದೆ .ಇದನ್ನು ಭಗವತಿ ದೇವಾಲಯಗಳಲ್ಲಿ ಮಾಡುತ್ತಾರೆ . ಪಡೆಯಣಿ ಎಂಬ ವೀರ ಆರಾಧನೆಯ ಸಂದರ್ಭದಲ್ಲಿ  ಆಚರಿಸುತ್ತಾರೆ .ಜೊತೆಗೆ ಮನೆಯಲ್ಲಿ ಕೂಡ ಕೆಲವು ದುಷ್ಟ ಶಕ್ತಿಗಳ ನಿವಾರಣೆಗಾಗಿ ಕೂಡ ಮಾಡುತ್ತಾರೆ 
 ಪಡೆ ಎಂದರೆ ಸೈನಿಕ ಕ್ಷಾತ್ರ ವೀರ ಎಂದರ್ಥ .ಇಲ್ಲಿ ವೀರ ಆರಾಧನೆಯೇ ಭೂತಾರಾಧನೆ ಯ ರೀತಿಯಲ್ಲಿ ಅಭಿವ್ಯಕ್ತಿಸುತ್ತಾರೆ .ಇಲ್ಲಿನ ವೀರರು ದೈವತ್ವ ಪಡೆದು ಆರಾಧಿಸಲ್ಪಡುವ ರೀತಿ ಇದು 

ಕೋಲಂ ತುಳ್ಳಲ್ ನಲ್ಲಿ ವಿವಿಧ ಯಕ್ಷಿಗಳು,ದೈವಗಳು  ಆರಾಧನೆ ಪಡೆಯುತ್ತಾರೆ .ಮರುತಯಕ್ಷಿ ,ಅಂತರ್ಯಕ್ಷಿ,ಸುಂದರ ಯಕ್ಷಿ,ಆರಕ್ಕಿ ಯಕ್ಷಿ,ಕಾಲ ಯಕ್ಷಿ,ಮಾಯ ಯಕ್ಷಿ,ಅಂಬರ ಯಕ್ಷಿ ,ಪಕ್ಷಿ ಯಕ್ಷಿ,ಕಾಳಮತಂ,ಪುಲಿಮತನ್,ವಟಿಮದನ್,ರಕ್ತ ಚಾಮುಂಡಿ ಅಪಸ್ಮಾರ ಯಕ್ಷಿ ದೇವತ,ಭೈರವಿ ಕಾಲನ್ ಮಂಗಳ ಭೈರವಿ ಯಕ್ಷಿ ಮೊದಲಾದ ಶಕ್ತಿಗಳಿಗೆ ಆರಾಧನೆ ಇದೆ .ಇದು ಪ್ರಧಾನವಾಗಿ ಕಾಳಿಯ ಆರಾಧನೆ ,ದಾರುಕ ವಧೆಯ ನಂತರವೂ ಶಾಂತವಾಗದ ದೇವಿಯನ್ನು ಕೋಲ ಕುನಿತ್ದು ಶಾಂತವಾಗಿಸಿ ಆರಾಧಿಸುತ್ತಾರೆ

ಲ .ಇಲ್ಲಿ ಅನೇಕ ಯಕ್ಷ ಯಕ್ಷಿಯರ ಗಂಧರ್ವರ ಆರಾಧನೆ ಇದೆ
ಇಲ್ಲಿನ ಯಕ್ಷಿಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್
ಈ ಶಕ್ತಿಗಳ ಜೊತೆ ಒಂದು ವಿಶಿಷ್ಟ ಕೋಲ ಇದೆ .ಅದುವೇ ಗಣಪತಿ ಕೋಲ 

ಗಣಪತಿಯ ಆರಾಧನೆಯನ್ನು ಮೊದಲು ಮಾಡುವ ಸಂಪ್ರದಾಯ ಎಲ್ಲೆಡೆ ಇದೆ .ಯಾವುದೇ ಕೆಲಸದ ಆರಂಭದಲ್ಲಿ ಆರಾಧನೆಯ ಸಂದರ್ಭದಲ್ಲಿ ಕೂಡ ಗಣಪತಿಗೆ ಆರಾಧನೆ ಇರುತ್ತದೆ 

ಅಂತೆಯೇ ಕೋಲಂ ತುಳ್ಳಲ್ ಆರಂಭದಲ್ಲಿ ವಿಘ್ನ ವಿನಾಶಕನ ಪೂಜೆ ಇರುವುದು ಸಹಜ.
ಆದರೆ ಇಲ್ಲಿ ಗಣಪತಿ ಗೆ ಕೋಲ ಕೊಟ್ಟು ಆರಾಧಿಸುತ್ತಾರೆ .ಹಾಗಾಗಿ ಮೊದಲುಕುಣಿಯುವ ಅಭಿವ್ಯಕ್ತಿಸುವ ಕೋಲವನ್ನು ಗಣಪತಿ ಕೋಲ ಎನ್ನುತ್ತಾರೆ ಎಂಬ ಅಭಿಪ್ರಾಯವೂ ಇದೆ.ಆದರೆ  ಕೋಲ ಕಟ್ಟಿಯೇ ಇಲ್ಲಿ ಗಣಪತಿ ಗೆ ಆರಾಧನೆ ಇದೆ .ಬೇರೆ ಯಕ್ಷಿ ಯಾರ ವೇಷ ಭೂಷಣ ಗಳಲ್ಲಿಯೇ ಗಣಪತಿಗೆ ಸಾಂಕೇತಿಕವಾಗಿ ಕೋಲ ಕೊಡುವ ಪದ್ಧತಿಯೂ ಇದೆ .ಬೇರೆ ಬೇರೆ ಯಕ್ಷಿ ಹಾಗೂ ಶಕ್ತಿಗಳು ಕುಣಿದು ಗಣಪತಿಯನ್ನು ಆರಾಧಿಸುತ್ತಾ ಕೋಲ ನೀಡುವ ಪದ್ಧತಿ ಕೂಡ ಇದೆ 

ತುಳುವರಲ್ಲಿ ಗಣಪತಿಯಕುರಿತಾದ ಪರಿಕಲ್ಪನೆ ಪುರಾಣ ಕಥೆಗಿಂತ ತುಸು ಭಿನ್ನವಾಗಿದೆ.ಇಲ್ಲಿ ಗಣಪತಿ ಪಾರ್ವತಿಯ ಮಗನಲ್ಲ . ಈಶ್ವರ ದೇವರಿಗೆ ಹೂ ಕೊಯ್ದು ತರುವ ಹುಡುಗ ಒಂದು ದಿನ ಒಂದು ಕಿಸ್ಕಾರ ಹೂವನ್ನು ಬೆನ್ನು ಹತ್ತುತ್ತಾ ಮಿತ್ತು ಸಿರಿಗಳ ಲೋಕಕ್ಕೆ ಹೋಗುತ್ತಾನೆ ಅಲ್ಲಿ ಕಿರಿಯ ಸಿರಿ ಮೈಸಗೆಯನ್ನು ನೋಡಿ ಅವಳ ಅಪಾರ ಸೌಂದರ್ಯವನ್ನು ನೋಡಿ ಮೂರ್ಚೆ ತಪ್ಪಿ ಬೀಳುತ್ತಾನೆ.ಅವವನನ್ನು ನೀರು ಹಾಕಿ ಎಬ್ಬಿಸಿ ಈ ಕಡೆ ನಾರಾ ಮನುಷ್ಯರು ಬರಬಾರದೆಂದು ಎಚ್ಚರಿಸಿ ಕಳುಹಿಸುತ್ತಾಳೆ ಅವಳು .ತಡವಾಗಿ ಬಂದುದಕ್ಕೆ ಕಾರಣವನ್ನು ಕೇಳಿದಾಗ ಈಶ್ವರ ದೇವರಿಗೆ ಮೈಸಗೆಯ ವಿಚಾರ ತಿಳಿಯುತ್ತದೆ .ಅವಳೆಡೆಗೆ ಹೋಗಿ ಅವಳನ್ನು ತನ್ನೊಂದಿಗೆ ಕರೆತರುತ್ತಾನೆ ಹೀಗೆ ಈಶ್ವರ ದೇವರು ಮತ್ತು ಮೈಸಗೆಗೆ ಹುಟ್ಟುವ ಮಗು ಗಣಪತಿ .ಈತನಿಗೆ ಬಾಮ ಕುಮಾರ ಎಂದು ಹೆಸರು ಇದು ತುಳುವರ ಗಣಪತಿಯ ಪರಿಕಲ್ಪನೆ .

ಆದರೆ ಗಣಪತಿ ಯನ್ನು ಭೂತ ಕಟ್ಟಿ ಆರಾಧಿಸುವ ಪದ್ಧತಿ ಇಲ್ಲ ಆದರೆ ಧೂಮಾವತಿ ರಕ್ತೇಶ್ವರಿ ,ಗುಳಿಗ ,ವಾಲಿ,ಸುಗ್ರೀವ ಮೊದಲಾದ ಪುರಾಣ ಮೂಲ ಶಕ್ತಿಗಳಿಗೆ ಭೂತದ ನೆಲೆಯಲ್ಲಿಕೋಲ ನೀಡಿ ಆರಾಧಿಸುತ್ತಾರೆ .

ಕೋಲದ ರೂಪದಲ್ಲಿಯೇ ದೇವತಾ ಆರಾಧನೆ ಪ್ರಚಲಿತ ವಿರುವ ಪ್ರದೇಶಗಳಲ್ಲಿ ಪುರಾಣ ಮೂಲದ ದೈವ್ತ್ವಗಳನ್ನು ಭೂತದ ನೆಲೆಯಲ್ಲಿಯೇ ಆರಾಧಿಸುವುದು ಸಹಜವೇ ಆಗಿದೆ 
ಅಂತೆ ಇಲ್ಲಿ ಕೂಡ ಗಣಪತಿ ಗೆ ಕೋಲ ನೀ

ಡಿ ಆರಾಧಿಸುವ ಸಂಪ್ರದಾಯ ಬಳಕೆಗೆ ಬಂದಿದೆ
ಈ ಬಗ್ಗೆ ಹೆಚ್ಚ್ಚಿನ ಅಧ್ಯಯನದ ಅಗತ್ಯವಿದೆ 



                  


Sunday, 1 May 2016

ಕೈಬರಹ ಕೆಟ್ಟದಾಗಿ ಇದ್ದರೂ ಲಾಭವಾಗುತ್ತದೆ !-ಡಾ.ಲಕ್ಷ್ಮೀ ಜಿ ಪ್ರಸಾದ



ಕೈಬರಹ ಸುಂದರವಾಗಿದ್ದರೆ ನಮಗೆ ವಿದ್ಯಾರ್ಥಿಗಳಾಗಿದ್ದಾಗ ಒಳ್ಳೆ ಅಂಕಗಳು ಲಭಿಸುತ್ತವೆ ,ಪತ್ರ ಗಿತ್ರ ಬರೆಯಬೇಕಾದರೆ ಅವರ ಸಹಾಯವನ್ನು ಜನರು  ಕೇಳುತ್ತಾರೆ ಹಾಗಾಗಿ ಸುಂದರ ಕೈ ಬರಹ ಇರುವವರಿಗೆ ಸದಾ ಬೇಡಿಕೆ ಇರುತ್ತದೆ !ಒಳ್ಳೆಯ ಸ್ಥಾನಮಾನ ಸಿಗುತ್ತದೆ ,ಆದರೆ ಅಕ್ಷರ ಕೆಟ್ಟದಾಗಿರೋದರಿಂದ ಕೂಡ ಕೆಲವೊಮ್ಮೆ ಬೆನಿಫಿಟ್ ಗಳು ಸಿಗುವುದು ಉಂಟು !ಅದು ಹೇಗೆ ಗೊತ್ತಾ ?ತಿಳಿಯಲು ಕುತೂಹಲ  ಇದ್ದರೆ ಇದನ್ನು ಓದಿ 

ನಿನ್ನೆ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಪ.ಗೋ ಪ್ರಪಂಚ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು .ಪ,ಗೋ ಅವರ ಮಗ ಪದ್ಯಾಣ ರಾಮಚಂದ್ರ ,ಹಾಗೂ ಏಕಮ್ ಪ್ರಕಾಶನದ ರಂಗ ಸ್ವಾಮಿ ಮೂಕನಹಳ್ಳಿ ಯವರು ನನಗೆ ತುಂಬಾ ಆತ್ಮೀಯರೂ ಆಗಿದ್ದು ಕಾರ್ಯಕ್ರಮಕ್ಕೆ ನಾನು ಹೋಗಿದ್ದೆ .ಕಾರ್ಯಕ್ರಮಕ್ಕೆ ಅರ್ಧ ಗಂಟೆ ಮೊದಲೇ ಹೋಗಿದ್ದೆ .ಅಲ್ಲಿ ಹೋದಾಗ ಕೇ ಪಿ ರಾಜಗೋಪಾಲ ಕನ್ಯಾನ ಅಲ್ಲಿಗೆ ಬರುವವರಿದ್ದು ಅವರಿಗೆ ಒಂದು ಅಭಿನಂದನೆ ಕೂಡ ಏರ್ಪಡಿಸಿರುವುದು ತಿಳಿಯಿತು .

ರಾಜಗೋಪಾಲ ಕನ್ಯಾನ ಅವರು ಕಲೆ ಸಾಹಿತ್ಯ ಅಭಿಮಾನಿಯಾಗಿದ್ದು ,1995ರಲ್ಲಿ ಪ.ಗೋ ಅವರುಹೊಸದಿಗಂತ ಪತ್ರಿಕೆಗೆ ಬರೆದ ಆತ್ಮ ಕಥನಾತ್ಮಕ ಅಂಕಣ ಬರಹಗಳನ್ನು ಸಂಗ್ರಹಿಸಿ,ಪಗೋ ಕುರಿತು ವಿಶಿಷ್ಟ ಸೃಷ್ಟಿಗಳ ಲೋಕದಲ್ಲಿ ಎಂಬ ಕೃತಿಯನ್ನು 2005ರಲ್ಲಿ ಬೆಳಕಿಗೆ ತಂದಿದ್ದರು .ಅದಕ್ಕಾಗಿ ಪಗೋ ಮಗ ಪದ್ಯಾಣ ರಾಮಚಂದ್ರ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಇಟ್ಟುಕೊಂಡಿದ್ದರು .ಆದರೆ ಪದ್ಯಾಣ ರಾಮಚಂದ್ರ ಹಾಗೂ ಏಕಮ್ ಪ್ರಕಾಶನದ ರಂಗಸ್ವಾಮಿ ಮೂಕನಹಳ್ಳಿ ಅವರಿಗೆ ರಾಜಗೋಪಾಲ ಕೆಪಿ ಅವರ ಪರಿಚಯವಿರಲಿಲ್ಲ ,ನನಗೆ ರಾಜಗೋಪಾಲ ಕನ್ಯಾನ ತುಂಬಾ ಅತ್ಮೀಯರಾಗಿರುವುದು ಪದ್ಯಾಣ ರಾಮಚಂದ್ರ ಅವರಿಗೆ ಗೊತ್ತಿತ್ತು ಹಾಗಾಗಿ ಅವರ ಪರಿಚಯವನ್ನು ಬರೆದುಕೊಡಲು ತಿಳಿಸಿದರು .ಹಾಗೆ ರಾಜಗೋಪಾಲ ಕನ್ಯಾನ ಅವರ ಸಂಕ್ಷಿಪ್ತ ಪರಿಚಯ ಬರೆದುಕೊಟ್ಟೆ .ಅದನ್ನು ಅವರು ರಂಗ ಸ್ವಾಮಿ ಮೂಕನ ಹಳ್ಳಿ ಅವರಿಗೆ ಕೊಟ್ಟರು 
ಅವರಿಗೆ ಅದನ್ನು ನೋಡುತ್ತಲೇ ತಲೆಬಿಸಿ ಆಯಿತು ಅದನ್ನು ಓದುವುದು ಹೇಗೆ ಅಂತ !ಅಷ್ಟು ಸುಂದರವಾಗಿದೆ ನನ್ನ ಕೈಬರಹ !ಮೊದಲೇ ನನ್ನ ಕೈಬರಹ ಕೆಟ್ಟದಾಗಿದೆ ಅದಕೆ ಸರಿಯಾಗಿ ನಿನ್ನೆ ಕನ್ನಡಕ ತೆಗೆದುಕೊಂಡು ಹೋಗಲು ಮರೆತಿದ್ದೆ.ಬೇರೆ !ಹಾಗಾಗಿ ನನ್ನ ಅಕ್ಷರ ತೀರ ಅಧ್ವಾನವಾಗಿತ್ತು.ಅದನ್ನು ರಂಗಸ್ವಾಮಿ ಯವರಿಗೆ ಬಿಡಿ ನನಗೆ ಕೂಡ ಓದಲು ಕಷ್ಟಕರವೇ ಆಗಿತ್ತು !ಹಾಗಿರುವಾಗ ಅವರ ಅವಸ್ಥೆಯನ್ನು ಎಂತ ಹೇಳುದು !
ಆಗ ಅವರು ಅದನ್ನು ನನಗೆ ಕೊಟ್ಟು "ಕೆಪಿ ರಾಜಗೋಪಾಲ ಕನ್ಯಾನ ಅವರನ್ನು ನೀವೇ ಪರಿಚಯಿಸಿ "ಎಂದು ನನಗೆ ಹೇಳಿನನ್ನ ಕೈಬರಹ ಓದುವ ಗಂಡಾಂತರದಿಂದ ಪಾರಾದರು ! .
ನನಗೆ ತುಂಬಾ ಖುಷಿ ಆಯ್ತು !ಯಾಕೆಂದರೆ ಕೇ ಪಿ ರಾಜಗೋಪಾಲ ಕನ್ಯಾನ ಅವರು ನನಗೆ ತುಂಬಾ ಆತ್ಮೀಯರು ,ನನ್ನ ಸಂಶೋಧನಾ ಕೃತಿಗಳ ಪ್ರಕಟಣೆಗೆ ಭದ್ರವಾದ ಅಡಿಪಾಯ ಹಾಕಿಕೊಟ್ಟವರು ಅವರು .ನಾನು ಹವ್ಯಕ ಭಾಷೆಯಲ್ಲಿ ನಾಟಕ ಬರೆದ ಮೊದಲ ಮಹಿಳೆ ಎಂಬುದನ್ನು ನನಗೆ ತಿಳಿಸಿದವರೂ ಕೂಡ ಅವರೇ .ಎಲ್ಲೋ ಮೂಲೆಯಲ್ಲಿ ಇದ್ದ ನನ್ನ ಸುಬ್ಬಿಇಂಗ್ಲಿಷ್ ಕಲ್ತದು ಎಂಬ ನಾನು ಏಳನೇ ತರಗತಿಯಲ್ಲಿ ಬರೆದಿದ್ದ ನಾಟಕ  ಮಹಿಳೆ ಬರೆದ ಮೊದಲ ನಾಟಕ ,ಆ ಮಹಿಳೆ ನಾನೇ ಎಂಬುದನ್ನು ತಿಳಿಸಿ ಆ ನಾಟಕ ಬೆಳಕಿಗೆ ಬರಲು ಕಾರಣರಾದವರು ಅವರು .ನನ್ನಂತೆ ಅನೇಕರಿಗೆ ಅಪಾರ ಬೆಂಬಲ ನೀಡಿ ಪ್ರೋತ್ಸಾಹಿಸಿದವರು .ನೂರಕ್ಕೂ ಹೆಚ್ಚು ಎಲೆಮರೆಯ ಕಾಯಿಗಳಂತೆ ಇದ್ದ ಪ್ರತಿಭೆಗಳನ್ನು ಹೊರಜಗತ್ತಿಗೆ ಪರಿಚಯಿಸಿದವರು ಅವರು .
ಹಾಗಾಗಿ ಅವರ ಪರಿಚಯವನ್ನು ಸಭೆಗೆ ಮಾಡಿಕೊಡುವುದು ನನಗೆ ಇಷ್ಟದ ವಿಚಾರವೇ ಆಗಿತ್ತು .ನನ್ನ ಕೆಟ್ಟ ಕೈ ಬರಹ ನನಗೆ ಆ ಅವಕಾಶವನ್ನು ತಂದು ಕೊಟ್ಟಿತು !ಈಗ ಗೊತ್ತಾಗಿರಬಹುದು ನಿಮಗೆ  ಅಕ್ಷರ ಚೆನ್ನಗಿಲ್ಲದೆ ಇದ್ರೂ ಲಾಭ ಇದೆ ಅಂತ!