Friday 26 January 2018

ಸಾವಿರದೊಂದು ಗುರಿಯೆಡೆಗೆ: ತುಳುನಾಡ ದೈವಗಳು 422 ಕಲಂದನ್ ಮುಕ್ರಿ ದೈವ/ತೆಯ್ಯಂ



ಸಾವಿರದೊಂದು ಗುರಿಯೆಡೆಗೆ: ತುಳುನಾಡ ದೈವಗಳು 422 ಕಲಂದನ್ ಮುಕ್ರಿ ದೈವ/ತೆಯ್ಯಂ


ಕಳೆದ ಒಂದು ವಾರದಿಂದ ಒಂದು ಮುಸ್ಲಿಂ ಸ್ವರೂಪದ ದೈವ ಇಬ್ಬರು ಮುಸ್ಲಿಂ ರೀತಿಯ ವೇಷ ಧರಿಸಿದ ಪಾತ್ರಿಗಳ ಜೊತೆ ಕೋಲಾಟವಾಡುವ ವೀಡಿಯೋ ಹರಿದಾಡುತ್ತಾ ಇತ್ತು.ಅನೇಕರು ಅದನ್ನು ಕಳಹಿಸಿ ಈ ದೈವ ಯಾವುದೆಂದು ಕೇಳಿದ್ದರು. ಆಲಿ ಭೂತ ,ಯೋಗ್ಯೆರ್ ನಂಬೆಡಿ ,ಮುಕ್ರಿ ಪೋಕ್ಕರ್,ಬಪ್ಪುರಿಯನ್  ಸೇರಿದಂತೆ ಅನೇಕ ಮುಸ್ಲಿಂ ತೆಯ್ಯಂ ಗಳಿಗೆ ಆರಾಧನೆ ಇರುವುದು ನನಗೆ ತಿಳಿದಿತ್ತಾದರೂ ಈ ತೆಯ್ಯಂ ಯಾರೆಂದು ಗುರುತಿಸಲು ಆಗಿರಲಿಲ್ಲ.ಕೆಲವರು ಅದನ್ನು ಆಲಿ ಭೂತ ಎಂದು ತಪ್ಪಾಗಿ ಗುರುತಿಸಿದ್ದು ತಿಳಿದು ಅದು ಆಲಿ ಭೂತವಲ್ಲ ಎಂದು ತಿಳಿಸಿದ್ದೆ.ಅದು ಮುಕ್ರಿ ಪೋಕ್ಕೆರ್ ದೈವ ಇರಬಹುದು ಎಂದು ಹೇಳಿದ್ದೆ.ವಾಟ್ಸಪ್ ಗ್ರೂಪೊಂದರಲ್ಲಿ ಚಂದ್ರಹಾಸ ಶೆಟ್ಟಿಯವರು ಅದನ್ನು ಮಾಪಿಳ್ಳೆ ದೈವ ಎಂದು ಗುರುತಿಸಿದ್ದರು‌.ಹಾಗಾಗಿ ನಾನು ಮಾಪಿಳ್ಳೆ ತೆಯ್ಯಂ ಬಗ್ಗೆ ಮಾಹಿತಿ ಸಂಗ್ರಹಕ್ಕಾಗಿ ಕುಂಞಿರಾಮನ್ ಸೇರಿದಂತೆ ಅನೇಕ ಹಿರಿಯರನ್ನು ಸಂಪರ್ಕಿಸಿದೆ‌.ಅದರ ಮಾಹಿತಿ ನೀಡಿದ ಕುಂಞಿರಾಮನ್ ಅವರು ಕಲಂದನ್ ಮುಕ್ರಿ ಎಂಬ ಹೆಸರಿನ ಮುಸ್ಲಿಂ ಮೂಲದ ದೈವಕ್ಕೆ ಆರಾಧನೆ ಇರುವ ಬಗ್ಗೆ ತಿಳಿಸಿದರು.
ಮಾಪ್ಪಿಳ್ಳೆ ತೆಯ್ಯಂ ಬಗ್ಗೆ ಮಾಹಿತಿ ಹುಡುಕುತ್ತಿರುವುದನ್ನು ತಿಳಿದ ಸ್ನೇಹಿತರಾದ ಶ್ಯಾಮ್ ಅವರು ಒಂದು ಮಲೆಯಾಳ ಬರಹವನ್ನು ಕಳಹಿಸಿ ಅದರಲ್ಲಿ ಮಾಪಿಳ್ಳೆ ತೆಯ್ಯಂ ಬಗ್ಗೆ ಮಾಹಿತಿ ಇದೆ ಎಂದು ಅವರ ಸ್ನೇಹಿತರು ಹೇಳಿದ್ದನ್ನು ತಿಳಿಸಿದರು.ನನಗೆ ಮಲೆಯಾಳ ಭಾಷೆ ಅರ್ಥವಾಗುವುದಾದರೂ ಓದಲು ತಿಳಿದಿಲ್ಲ. ಹಾಗಾಗಿ ನಾನು ಅದನ್ನು ಗೂಗಲ್ ಟ್ರಾನ್ಸಲೇಶನ್ ಮೂಲಜ ಇಂಗ್ಲಿಷ್ ಗೆ ಅನುವಾದಿತ ರೂಪ ಪಡೆದೆ.ಆಗ ಅದು ಕಲಂದನ್ ಮುಕ್ರಿ ತೆಯ್ಯಂ ಬಗೆಗಿನ  ಮಲೆಯಾಳ ವಿಕಿಪೀಡಿಯ ಮಾಹಿತಿ ಎಂದು ತಿಳಿಯಿತಾದರೂ ಗೂಗಲ್ ಅನುವಾದದಲ್ಲಿ ಸಾಕಷ್ಟು ಪ್ರಮಾಣದಲ್ಲಿ ತಪ್ಪುಗಳು ಇದ್ದ ಕಾರಣ ಕಥಾನಕ ಪೂರ್ತಿಯಾಗಿ ಅರ್ಥ ಆಗಲಿಲ್ಲ.
ಆಗ ಅದನ್ನು  ಮಲೆಯಾಳ ಬಲ್ಲ ಯುವ ಸಂಶೋಧಕರಾದ ಶಂಕರ್ ಕುಂಜತ್ತೂರಿಗೆ ಕಳಹಿಸಿ ಅನುವಾದ ಮಾಡಿ ಕೊಡಲು ಕೇಳಿದೆ.ಅವರು ಅದರ ಸಂಗ್ರಹ ಅನುವಾದ ಮಾಡಿ ನೀಡಿದರು.
ಈ ದೈವದ/ ತೆಯ್ಯಂ ನ ಸಂಕ್ಷಿಪ್ತ ಕಥಾನಕ ಹೀಗಿದೆ.
ಕಾಸರಗೋಡು ಜಿಲ್ಲೆಯ ಕಂಪಲ್ಲೂರು ಗ್ರಾಮದಲ್ಲಿ ಕಂಪಲ್ಲೂರು ಕೋಟ್ಟಯಿಲ್ ಎಂಬ ಪ್ರಾಚೀನ ತರವಾಡು ಮನೆ ಇದೆ.ಇದು ನಾಯರ್ ಸಮುದಾಯದವರ ತರವಾಡು ಆಗಿದ್ದು ಅವರಿಗೆ ಕೊಡಗಿನಿಂದ ಕಾಸರಗೋಡು ತನಕ ಹದಿನೈದು ಸಾವರ ಎಕರೆಗಳಷ್ಟು ಭೂಮಿ ಇತ್ತು.ಇಲ್ಲಿ ಬೆಳೆ ಬೆಳೆಯುತ್ತಾ ಇದ್ದರು.ಈ ತರವಾಡಿನ ರಕ್ಷಣೆಯನ್ನು ಕರಿಚಾಮುಂಡಿ ದೈವ ಮಾಡುತ್ತಾ ಇತ್ತು.
ಸೈನುದ್ದೀನ್ ಮತ್ತು ಅವರ ಕುಟುಂಬದ ಸದಸ್ಯರು ಈ  ಈ ಪ್ರದೇಶಕ್ಕೆ ಬರುತ್ತಾರೆ.ಆಗ ಈ ಕೋಟ್ಟಯಿಲ್ ತರವಾಡಿನ ನಾಯರ್‌ಗಳು ಅವರಿಗೆ ಸಹಾಯ ಮಾಡುತ್ತಾರೆ. ಅವರ ಧರ್ಮದ ಪಾಲನೆಗಾಗಿ ಒಂದು ಶೆಡ್ ಹಾಕಿ ಪ್ರಾರ್ಥನೆಗೆ ವ್ಯವಸ್ಥೆ ಮಾಡುತ್ತಾರೆ.
ಸೈನುದ್ದೀನ್ ಮತ್ತು ಅವರ ಕುಟುಂಬದವರು ಮತ್ಸ್ಯ ಬೇಟೆಗಾಗಿ ಮತ್ತು ವ್ಯಾಪಾರಕ್ಕಾಗಿ ಪುಲಿಂಗಾಟ್ ನದಿಯನ್ನು ಗೇಣಿಗೆ ಪಡೆಯುತ್ತಾರೆ.ಅವರಿಗೆ ಒಂದು ಮಸೀದಿಯನ್ನು ತರವಾಡಿನ ನಾಯರ್‌ಗಳು ಕಟ್ಟಿಸಿಕೊಡುತ್ತಾರೆ.
ಆ ಮಸೀದಿಯಲ್ಲಿ ಉರೂಸ್ ಗೆ ದಿನ ನಿಶ್ಚಯ ಮಾಡುವ ಮೊದಲೇ ಮಸೀದಿಯ ಮುಖ್ಯಸ್ಥರು ತರವಾಡು ಮನೆಗೆ ಬಂದು ದೈವದಲ್ಲಿ ಉರೂಸ್ ಹಬ್ಬದ ನೇತೃತ್ವ ( ಅಧ್ಯಕ್ಷತೆ)ವಹಿಸುವಂತೆ ಪ್ರಾರ್ಥನೆ ಮಾಡಿ ಅರಶಿನ ಗಂಧ ಪ್ರಸಾದ ಕೊಂಡೊಯ್ಯುತ್ತಾ ಇದ್ದರು.ಈಗಲೂ ಅಲ್ಲಿ ಈ ಪದ್ಧತಿ ಇದೆ.ಅವರು ತರವಾಡಿನ ರಕ್ಷಕ ದೈವ ಕರಿಚಾಮುಂಡಿ ದೈವಕ್ಕೆ ನಿಷ್ಠರಾಗಿ ಗೌರವ ತೋರುತ್ತಿದ್ದರು.ಹಾಗಾಗಿ ಅಲ್ಲಿನ ಮಸೀದಿಯ ಮುಖ್ಯಸ್ಥ ಕಲಂದನ್ ಮುಕ್ರಿಗೆ  ಕರಿ ಚಾಮುಂಡಿ ದೈವ   ಮರಣಾನಂತರ ದೈವತ್ವ ನೀಡಿ ತನ್ನ ಸೇರಿಗೆಗೆ ಸೇರಿಸಿಕೊಳ್ಳುತ್ತದೆ.
ಕಲಂದನ್ ಮುಕ್ರಿ ದೈವವನ್ನು ಹಿಂದು ಪಾತ್ರಿಗಳು ಕಟ್ಟುತ್ತಾರೆ. ಒಂದು  ಬಿಳಿ‌ಲುಂಗಿಯ ಮೇಲೆ ,ಸೊಂಟಕ್ಕೆ ಕಟ್ಟಿದ ಕೆಂಪು ಶಾಲು ,ತಲೆಗೆ ಕೆಂಪು ಬಟ್ಟೆಯ ರುಮಾಲು ಹಾಗೂ ಬಿಳಿಯ ಗಡ್ಡದ  ಮಾನವ ಸಹಜವಾ ಅಲಂಕಾರ ,ವೇಷಭೂಷಣ ಈ ದೈವಕ್ಕೆ ಮಾಡುತ್ತಾರೆ.
ಮಾಹಿತಿ ಮೂಲ : ಮಲೆಯಾಳ ವಿಕಿಪೀಡಿಯ
ಮಾಹಿತಿ ಸಂಗ್ರಹದಲ್ಲಿ ಸಹಾಯ ಮಾಡಿದ ಶ್ಯಾಮ್, ಅನುವಾದ ಮಾಡಿದ ಶಂಕರ್ ಕುಂಜತ್ತೂರು,ಮಾಹಿತಿ ನೀಡಿದ ಕುಂಞಿರಾಮನ್ ಮಾಸ್ತರ್ ಅವರುಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು
ಈ ಬಗ್ಗೆ ಹೆಚ್ಚಿನ ಮಾಹಿತಿ ಇದ್ದವರು ತಿಳಿಸಬೇಕಾಗಿ ಕೋರಿಕೆ
- ಡಾ.ಲಕ್ಷ್ಮೀ ಜಿ ಪ್ರಸಾದ

ಅಜ್ಜಿ ಭೂತ © ಡಾ.ಲಕ್ಷ್ಮೀ ಜಿ ಪ್ರಸಾದ

*ಅಜ್ಜಿ ಬೂತ*🙏

*(ಮಾಯೊದ ಬೊಲ್ಪು💫*)👏

ಸುಳ್ಯ ತಾಲೂಕುದ ಮಡಪ್ಪಾಡಿ, ಕಂದ್ರಪ್ಪಾಡಿ, ವಾಲ್ತಾಜೆ ಇಂಚಿತ್ತಿನ ಪ್ರದೇಸೊಡು ಬಾರೀ ಕಾರನಿಕೊಡು ಮೆರೆಪಿನ ದೈವೋ ಸುಬ್ಬಜ್ಜಿ ಭೂತ. ಸುಬ್ಬಜ್ಜಿ, ಸಬ್ಬಜ್ಜಿ, ಸಬ್ಬಕ್ಕ ಇಂಚಿತ್ತಿನ ಬೇತೆ ಬೇತೆ ಪುದರ್‌ಡ್ ಅಜ್ಜಿ ಭೂತೊದ ಆರಾಧನೆ ಮಲ್ಪುವೆರ್.

ಅಜ್ಜಿ ಬೂತೊದ ಕೋಲ ಆಕರ್ಷಕ. ಯಕ್ಷಗಾನದ ಸ್ತ್ರೀ ವೇಷೊಗುಲಾ ಉಂದೆಕ್ಕ್ ಲಾ ಸಾಮ್ಯತೆ ಉಂಡು. ಅಜ್ಜಿ ಬೂತೊದ ಕೋಲೊಡು ಕೋಪ ರೌದ್ರತೆ ಆರ್ಭಟ ಇಜ್ಜಿ. ಮೋಕೆ, ಪ್ರಶಾಂತ ಅಭಿನಯ ಲಕ್ಕ್‌ದ್ ತೋಜುಂಡು. ಈ ದೈವೊದ ಪಾಡ್ದನ ತುಳುಟ್ಟು ಉಂಡು. ಆಂಡ ನುಡಿಗಟ್ಟ್ ಕನ್ನಡ. ಬಹುಷ: ಅಜ್ಜಿ ಬೂತೊದ ಮೂಲ ಪೊಣ್ಣು ಕನ್ನಡತಿ ಆದುಪ್ಪೊಡು.
ಅಜ್ಜಿ ಬೂತೊಲಾ ಉಲ್ಲಾಕುಳು ದೈವೊಲಾ ಒಟ್ಟುಗು ಗಟ್ಟ ಜತ್ತ್‌ದ್ ಬನ್ನಗ ಕೂಜಿಲೆನ್ ಲೆತೊಂದು ದೆಂಜಿ ಪತ್ತ್ಯೆರೆ ಬರ್ಪಲ್ ಪನ್ಪಿನ ನಂಬಿಕೆ ಉಂಡು. ಬಳ್ಪದ ತ್ರಿಶೂಲಿನಿ ದೇವಸ್ಥಾನೊಗು ಸಮ್ಮಂದಪಟ್ಟ್‌ನ ಐತಿಹ್ಯೊಡು ಅಜ್ಜಿ ಬೂತೊದ ಬಗ್ಗೆ ಪನೀತ್ ಮಾಹಿತಿ ಉಂಡು. ಉಲ್ಲಾಕುಳು ದೈವೊ ಬನ್ನಗ ಬಳ್ಪ ದೇವಸ್ಥಾನೊಡು ಒಂಜಿ ಪೊಣ್ಣ ರೂಪೊದ ಬೊಣ್ಚಿ ತೋಜುಂಡು. ಆ ಶಕ್ತಿದ ಒಟ್ಟುಗು ಉಲ್ಲಾಕುಳು ಕುದುರೆಡ್ ಕುಲ್ಲುದು ಪೋನಗ ಜನ ತೆಲಿಪುವೆರ್. ಅಪಗ ನಾಚಿಕೆ ಆದ್ ಒಂಜಿ ಗುಹೆಕ್ ನೂರಿಯೆರ್. ಆ ಪೊಣ್ಣ ಶಕ್ತಿಯೇ ಬೊಕ್ಕ ಅಜ್ಜಿ ಬೂತೊ ಪಂಡ್‌ದ್ ಪುದರಾಪುಂಡು.ಸುಳ್ಯದ ಕಾಯರ್ತೋಡಿ ಜಾಲಾಟೊಡು ಸಬ್ಬಕ್ಕ ಎಡ್ತೆರ್/ಸಬ್ಬಡ್ತೆರ್ ಪನ್ಪಿನ ಒಂಜಿ ದೈವೊಗು ಆರಾಧನೆ ಉಂಡು. ಮೂಲತಃ ಅಂಗಯಿ ಗೌಡೆರೆ ಮಗಲ್ ಸಬ್ಬಕ್ಕ ದೇಂಗೋಡಿ ತರವಾಡ್ ಇ್ಲ್ಗ್ ಮದಿಮೆ ಆದ್ ಬರ್ಪಲ್. ಒಂಜಿ ದಿನ ಇಲ್ಲದ ಪೊಂಜೊವೆಲೆನ ಒಟ್ಟುಗು ತಪ್ಪು ಕನಯೆರೆ ಪೂಮಲೆ ಕಾಡ್‌ಗ್ ಪೋಪಲ್. ತಪ್ಪು ಪಿರೆದ್ ತರೆಟ್ ತುಂಬೊಂದು ಬನ್ನಗ ಸಬ್ಬಕ್ಕ ಅಕೇರಿಗ್ ಒರ್ತಿಯೆ ಒರಿಪಲ್. ಅಪಗ ಏರೋ ಬತ್ತ್‌ದ್ ಆಲೆನ ತರೆಕ್ ತಪ್ಪುದ ಕಟ್ಟ ತುಂಬಾವೆರ್. ಗುಡ್ಡೆದ ಮಿತ್ತ್ ಬಲಾಂದ್ ಲೆಪ್ಪುವೆರ್. ಆ ಪೊರ್ತುಡು ಸಬ್ಬಕ್ಕ ಮಾಯ ಆದ್ ಉಳ್ಳಾಕುಲೆನ ಬಲತ್ತ ಭಾಗೊಡು ಉಂತುವಲ್ ಪನ್ಪಿನ ಕತೆ ಉಂಡು.

ಅಜ್ಜಿ ಬೂತೊದ ಒಟ್ಟುಗು ರಡ್ಡ್ ಕೂಜಿಲ್ ದೈವೊಲೆಗ್ ಆರಾಧನೆ ನಡಪುಂಡು. ಕೂಜಿಲೆನ ಕೋಲ ಆನಗ ಅಲ್ಪ ಕೋಟೆ ಕಟ್ಟುವೆರ್. ಕೋಟೆ ಕಡಿದ್ ಪೋಂಡ ಅಕುಲು ಪಿರ ಬರ್ಪುಜೆರ್ ಪನ್ಪಿನ ನಂಬಿಕೆ ಉಂಡು. ಅಕುಲು ತೋಟೊಗು ಪೋದು ಬಜ್ಜೈ, ಬೊಂಡ ಕನಪಿನ ಕ್ರಮ ಉಂಡು. ಅಕುಲೆನ್ ಗಂಡ ಗಣಕುಲುಂದ್ ಲೆಪ್ಪುವೆರ್. ಉಂದೆನ್ ಮಾತಾ ತೂನಗ ಮೂಲತಃ ಕೂಜಿಲ್ ಲೂಟಿ ಮಲ್ಪೆರೆ ಬತ್ತಿನ ಅರಸುಲೆನ ಸೈನಿಕೆರ್ ಪಂಡ್‌ದ್ ತೆರಿದ್ ಬರ್ಪುಂಡ್. ಸಾರತ್ತೊಂಜಿ ಬೂತೊಲೆಡ್ ಒಂಜಿ ಆದುಪ್ಪುನ 'ಡೆಂಜಿ ಪುಕ್ಕೆ' ಪನ್ಪಿನ ದೈವೊಲ ಕೂಜಿಲ್ ದೈವೊಲೇ ಆದುಪ್ಪು. ದಾಯೆಗ್ ಪಂಡ ಗಂಡ ಗಣಕುಲೆಗ್ ಡೆಂಜಿ ಬೊಕ್ಕ ಕುಡುತ್ತ ಕೊದ್ದೆಲ್ ಮಲ್ತ್‌ದ್ ಬಳಸುನ ಸಂಪ್ರದಾಯ ಕೆಲವು ಕಡೆಟ್ ಉಂಡು. ಅಜ್ಜಿ ಬೂತ ಕೂಜಿಲೆನ ಒಟ್ಟುಗು ಡೆಂಜಿ ಪತ್ತ್ಯೆರೆ ಬರ್ಪುನ ಬಗ್ಗೆ ಪಾಡ್ದನೊಡು ಮಾಹಿತಿ ಉಂಡು.ಅದ್ಯಯನೊದ ಬೊಲ್ಪುಡು
ಅಜ್ಜಿ ದೈವೊದ ಬಗ್ಗೆ ಅಧ್ಯಯನ ನಡಪೊಡು. ಪೂಮಲೆ ಕಾಡ್‌ಡ್ ಸಬ್ಬಕ್ಕನ್ ಮಿತ್ತ್ ಬಲ ಪಂಡ್‌ದ್ ಪಂಡಿನೆ ಏರ್? ಪೊಸ ಮದಿಮಾಲ್ ಸಬ್ಬಕ್ಕನ್ ಇಲ್ಲದಕುಲು ಕಾಡ್‌ಡ್ ಬುಡ್ಡು ಬತ್ತಿನೆ ದಾಯೆಗ್? ಏರೋ ಕಾಡ್‌ಡ್ ಸಬ್ಬಕ್ಕಗ್ ಉಪದ್ರ ಕೊರಿಯೆರಾ? ಅಪಗ ದುರಂತ ಆದ್ ಸಬ್ಬಕ್ಕನೇ ಸುಬ್ಬಜ್ಜಿ ಅಜ್ಜಿ ಬೂತ ಆದ್ ದೈವತ್ವ ಪಡೆಯೆರಾ? ಅತ್ತ್‌ಂಡ ಆ ಊರುದ ಅರಸು ಅತ್ತ್‌ಂಡ ಏರೋ ಬಲಾಡ್ಯೆರ್ ಸಬ್ಬಕ್ಕನ್ ಒಯ್ತಂದು ಪೋಯೆರಾ? ಏರೋ ಮಲ್ತಿನೆನ್, ಉಲ್ಲಾಕುಲು ದೈವೊದ ಮಿತ್ತ್ ಪಾಡ್ದ್ ದೈವೊನೇ ಮಾಯ ಮಲ್ತ್‌ನೆ ಪಂಡೆರಾ? ಈ ಸಮಗ್ರ ವಿಚಾರೊಲೆನ್ ಅಧ್ಯಯನ ಮಲ್ಪೊಡಾಯಿನ ಅಗತ್ಯ ಉಂಡು.

*©ಡಾ*. *ಲಕ್ಚ್ಮೀ ಜಿ. ಪ್ರಸಾದ, ಉಪನ್ಯಾಸೆಕೆರ್*,

ನಾನು ಲಕ್ಷ್ಮೀ ಪೋದ್ದಾರ್ ಆದ ಕಥೆ

ನಾನು ಲಕ್ಷ್ಮೀ ಪೋದ್ದಾರ್ ಆದ ಕತೆ...
ಲಕ್ಷ್ಮೀ ಪೊದ್ದಾರ್ c/o ಲಕ್ಷ್ಮಿ ಪ್ರಸಾದ್ © ಜಿ ಎನ್ ಮೋಹನ್
Posted by Avadhi

ಡಾ ಕೆ ಎನ್ ಗಣೇಶಯ್ಯ ಅವರು ನಿಮಗೆ ಗೊತ್ತು.. ಅವರ ಬರವಣಿಗೆಯ ಶೈಲಿಯೂ ಗೊತ್ತು

ಕನ್ನಡಕ್ಕೆ ಹೊಸದೇ ಆದ ಬರವಣಿಗೆಯ ತಂತ್ರ ಪರಿಚಯಿಸಿದ ಹೆಮ್ಮೆ ಅವರದ್ದು

ನಾಗೇಶ್ ಹೆಗಡೆ ಅವರ ಶಹಭಾಷ್ ಗಿರಿಯಿಂದಾಗಿ ಹೊಸದೇ ಶೈಲಿಯೊಂದನ್ನು ರೂಢಿಸಿಕೊಂಡ ಗಣೇಶಯ್ಯ ಅವರು ಹೇಗೆ ಬರೆಯುತ್ತಾರೆ ಎನ್ನುವುದಕ್ಕೆ ಒಂದು ಉದಾಹರಣೆ ಇಲ್ಲಿದೆ.

ಇತ್ತೀಚಿಗೆ ಹೊರಬಂದ ‘ಬಳ್ಳಿಕಾಳ ಬಳ್ಳಿ’ ಕೃತಿಯಲ್ಲಿ ತುಳು ಸಂಸ್ಕೃತಿಯ ಸಂಶೋಧಕಿ ಡಾ ಲಕ್ಷ್ಮಿ ಜಿ ಪ್ರಸಾದ್ ಅವರ ಪಾತ್ರ ಬದಲಾಗಿರುವ ರೀತಿ ನೋಡಿ.


ಡಾ ಲಕ್ಷ್ಮಿ ಜಿ ಪ್ರಸಾದ್ ಹೇಳುತ್ತಾರೆ-

ನಾನೆಂದೂ ಕಾದಂಬರಿ ಬರೆದಿಲ್ಲ

ಆದರೆ ಖ್ಯಾತ ಸಾಹಿತಿ ಕಾದಂಬರಿಗಾರ ಕೃಷಿ ವಿಜ್ಞಾನಿ ಡಾ.ಗಣೇಶಯ್ಯ ಅವರ ಪತ್ತೆದಾರಿ ಶೈಲಿಯ ಐತಿಹಾಸಿಕ ಕಾದಂಬರಿ “ಬಳ್ಳಿ ಕಾಳ ಬಳ್ಳಿ”ಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಬಂದಿದ್ದೇನೆ

ಇಲ್ಲಿ ನನ್ನ ಪಾತ್ರ ಲಕ್ಷ್ಮೀ ಪೊದ್ದಾರ್ ಎಂಬ ತುಳು ಜಾನಪದ ಸಂಶೋಧಕಿಯದು

ನಾನು ಎಂದಾದರು ಒಂದು ದಿನ ಒಂದು ಕತೆ ಕಾದಂಬರಿಯ ಪಾತ್ರವಾಗಬಹುದು ಕನಸಲ್ಲಿ ಕೂಡ ಊಹಿಸಿರಲಿಲ್ಲ .

ನಾನು ಗಣೇಶಯ್ಯ ಅವರನ್ನು ಭೇಟಿಯಾಗಿದ್ದಾಗ ನನ್ನ ಪಾತ್ರ ಅವರ ಕಾದಂಬರಿಯಲ್ಲಿ ಬರುತ್ತೆ ಎಂದಾಗ ಒಂದೆಡೆ ತುಳುವಿನಿಂದ ಕನ್ನಡಕ್ಕೆ ಒಂದು ಪದ್ಯವನ್ನು ಅನುವಾದ ಮಾಡಿಕೊಡುವ ಚಿಕ್ಕ ಪಾತ್ರ ಇರಬಹುದು ಎಂದುಕೊಂಡಿದ್ದೆ

ಆದರೆ ಇಲ್ಲಿ ಲಕ್ಷ್ಮೀ ಪೋದ್ದಾರ್ ಗೆ ಪ್ರಮುಖ ಪಾತ್ರವಿದೆ

ನಾನು ಭೂತಾರಾಧನೆ ಬಗ್ಗೆ ಹೇಳುವ ವಿಚಾರಗಳನ್ನು ಲಕ್ಷ್ಮಿ ಪೋದ್ದಾರ್ ಮೂಲಕ ಕವಿ ಜನತೆಯ ಎದುರು ಇಟ್ಟಿದ್ದಾರೆ ಭೂತಾರಾಧನೆಯಲ್ಲಿ ಅಡಕವಾಗಿರುವ ಐತಿಹಾಸಿಕ ವಿಚಾರಗಳು ಕೂಡ ಕಾದಂಬರಿಗೆ ಆಕರವಾಗಬಲ್ಲವು ಎಂಬುದನ್ನು ಅವರು ತೋರಿಸಿಕೊಟ್ಟಿದಾರೆ.

ಅದಕ್ಕಾಗಿ ಗಣೇಶಯ್ಯ ಅವರಿಗೆ ಧನ್ಯವಾದಗಳು

ಈ ಹಿಂದೆ ಡಾ .ಅಮೃತ ಸೋಮೇಶ್ವರ ಅವರು ತುಳುವರ ಪಾಡ್ದನ ಹಾಗೂ ಭೂತಾರಾಧನೆ ಕುರಿತು ತಿಳಿಸಲು ನಾಟಕ ಕಾದಂಬರಿ ಕಥೆಗಳನ್ನು ರಚಿಸಿ ಜನರ ಮುಂದಿಡಬೇಕು ಎಂದು ಹೇಳಿದ್ದರು.

ಈಜೋ ಮಂಜೊಟ್ಟಿ ಗೋಣ ಪಾಡ್ದನ ಹಾಗೂ ಉರವ, ಎರಡು ಬಂಟ ದೈವಗಳ ಕಥಾನಕವನ್ನು ಆಧರಿಸಿ ನಾನು ಒಂದು ಸಣ್ಣ ನಾಟಕ ಬರೆದಿದ್ದು ನಮ್ಮ ವಿದ್ಯಾರ್ಥಿಗಳ ಮೂಲಕ ಪ್ರದರ್ಶನ ಮಾಡುವ ಯತ್ನ ಮಾಡಿದ್ದೆ

ಆದರೆ ಇವೆಲ್ಲ ತುಳು ಸಂಸ್ಕೃತಿ ಯ ಅರಿವಿರುವವರಿಗೆ‌ ಮಾತ್ರ ಸ್ಪಷ್ಟವಾಗಿ ಅರ್ಥವಾಗಲು ಸಾಧ್ಯ ಯಾಕೆಂದರೆ ಅಲ್ಲಿ‌ ತುಳುವಿನ ಭೂತ‌ಪದಕ್ಕೆ‌ಇರುವ ಅರ್ಥ ಆರಾಧನಾ ಸ್ವರೂಪದ ಬಗ್ಗೆ ಹೇಳಿಲ್ಲ ಬಹುಶಃ ‌ಮೊದಲ ಬಾರಿಗೆ ತುಳುನಾಡಿನ ಭೂತಾರಾಧನೆ ಬಗ್ಗೆ ಕನ್ನಡ ‌ಕಾದಂಬರಿಯಲ್ಲಿ ಈ ರೀತಿಯ ಮಾಹಿತಿಯನ್ನು ನೀಡಿದವರು ಡಾ. ಗಣೇಶಯ್ಯ ಅವರೇ ಇರಬೇಕು

ಈ ಕಾದಂಬರಿಯಲ್ಲಿ ಚೌಂಡಿ ಮತ್ತು ಜಟ್ಟಿಗ/ ಜತ್ತಿಂಗ ದೈವಗಳ ಕಥಾನದಲ್ಲಿ ಚೆನ್ನ ಭೈರಾದೇವಿಯ ಇತಿಹಾಸದ ಎಳೆಯನ್ನು ಕಂಡುಕೊಂಡದ್ದು ಅವರ ತೀವ್ರ ವಿಚಕ್ಷಣಾ ಗುಣಕ್ಕೆ ಸಾಕ್ಷಿಯಾಗಿದೆ

ಮೆಣಸಿನ ರಾಣಿ ಚೆನ್ನ ಭೈರಾದೇವಿಯ ಕುರಿತಾಗಿ ಸಾಕಷ್ಟು ಇತಿಹಾಸದ ಮಾಹಿತಿ ಇದೆ. ನಿಧಿ ಶೋಧದ ಕಥಾನಕ ಬಿಟ್ಟರೆ ಉಳಿದೆಲ್ಲವೂ ಅದರಲ್ಲಿ ಇರುವುದು ನಡೆದು ಹೋದ ಸತ್ಯ ಘಟನೆಗಳು
http://avadhimag.com/2017/01/04/%e0%b2%b2%e0%b2%95%e0%b3%8d%e0%b2%b7%e0%b3%8d%e0%b2%ae%e0%b3%80-%e0%b2%aa%e0%b3%8a%e0%b2%a6%e0%b3%8d%e0%b2%a6%e0%b2%be%e0%b2%b0%e0%b3%8d-co-%e0%b2%b2%e0%b2%95%e0%b3%8d%e0%b2%b7%e0%b3%8d%e0%b2%ae/

**** ಬಳ್ಳಿಕಾಳ ಬೆಳ್ಳಿ *****

ಚರಿತ್ರಕಾರರೂ, ಚರಿತ್ರೆಯೂ ಮರೆತ ಗೇರುಸೊಪ್ಪೆಯ " ಕಾಳುಮೆಣಸಿನ ರಾಣಿ " ಚೆನ್ನಭೈರಾದೇವಿಯ ಚರಿತೆ.

 ಸತ್ಯ ಸಂಗತಿಗಳ ಜೊತೆ ಡಾ ll ಕೆ. ಎನ್ ಗಣೇಶಯ್ಯನವರ ಅದ್ಭುತ ಕಲ್ಪನಾಲಹರಿಯಲ್ಲಿ ಮೂಡಿಬಂದ ಅತ್ಯುತ್ತಮ ಕಾದಂಬರಿ

ಇತ್ತೀಚಿನ ದಿನಗಳಲ್ಲಿ ನಾನು ಓದಿದಂತಹ ಒಂದು ಅತ್ಯುತ್ತಮ ಸಂಶೋಧನಾತ್ಮಕ ಕೃತಿ.......ಪ್ರಾರಂಭದಿಂದ ಹಿಡಿದು ಕೊನೆಯ ತನಕವೂ ಕುತೂಹಲ ಕೆರಳಿಸುತ್ತಾ, ಜೊತೆಗೆ ಅತ್ಯುಪಯುಕ್ತ ಮಾಹಿತಿಗಳನ್ನುಕೂಡಾ ನೀಡುತ್ತಾ ಸಾಗಿದ ಕಾದಂಬರಿಯನ್ನು ಒಂದೇ ಗುಕ್ಕಿಗೆ ಓದಿ ಮುಗಿಸಿದೆ.

ಸಾಗರ, ಗೇರುಸೊಪ್ಪೆ,ಹೊನ್ನಾವರ, ಭಟ್ಕಳ, ಮುರುಡೇಶ್ವರ, ಗೇರುಸೊಪ್ಪೆಯ ನಗರಬಸದಿಕೇರಿಯ ಚತುರ್ಮುಖ ಬಸದಿ, ಅಳ್ಳಂಕಿಯ ಹೈಗುಂದ, ನೇತ್ರಾಣಿಗುಡ್ಡಗಳನ್ನು ಸುತ್ತಿ ಬಳಸಿಕೊಂಡು ಸಾಗುವ ಕಥೆ , ಗಣೇಶಯ್ಯನವರ ವಿಶಿಷ್ಟ ಶೈಲಿಯಲ್ಲಿ , ಅವರ ಹಿಂದಿನ ಕೃತಿಗಳಾದ " ಕನಕ ಮುಸುಕು" " ಕರಿಸಿರಿಯಾನ " ಕೃತಿಗಳಂತೇ ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಾ,  ನಡುವೆ  ನಾವರಿಯದ ಸಂಶೋಧನಾತ್ಮಕ ವಿವರಗಳನ್ನು ನೀಡುತ್ತಾ, ಓದುಗರನ್ನು ಚಿಂತನೆಗೆ ಹಚ್ಚುತ್ತಾ ಸಾಗುತ್ತದೆ.
ಇದರ ಜೊತೆಗೆ " ಭೂತಗಳ ಅದ್ಭುತ ಜಗತ್ತಿನ" ತುಳುನಾಡ ಭೂತಗಳ ಬಗೆಗೆ ಸಂಶೋಧನೆ ನಡೆಸಿ ಖ್ಯಾತರಾದ ಡಾ.ಲಕ್ಷ್ಮಿ.ಜಿ ಪ್ರಸಾದ ( Lakshmi V ) ಅವರೂ ಕೂಡಾ ಕಥೆಯಲ್ಲಿ ಒಂದು ಪಾತ್ರವೇ ಆಗಿ ಓದುಗರಿಗೆ ಹಲವಾರು ವಿಷಯಗಳ ಬಗೆಗೆ ಪರಿಚಯಿಸುತ್ತಾ ಸಾಗುತ್ತಾರೆ. ಅವರ ಪಾತ್ರ ಚಿತ್ರಣವೂ ಕೂಡಾ ಕಥೆಯಲ್ಲಿ ಹಾಸುಹೊಕ್ಕಾಗಿ ಅದ್ಭುತವಾಗಿ ಮೂಡಿಬಂದಿದೆ.

ನಮ್ಮೂರಿನ ಬಗೆಗೆ ನಾವರಿಯದ ವಿವರಗಳ ವಿಶಿಷ್ಟ ಕೃತಿ... ಮನಸ್ಸಿಗೆ ಮುದ ನೀಡಿತು.

ಗಣೇಶಯ್ಯನವರ ಕೃತಿಗಳ ಬಗೆಗೆ ಹೇಳುವುದಕ್ಕಿಂತ ಅದನ್ನು ಓದಿಯೇ ಆಸ್ವಾದಿಸಬೇಕು.....

ಉತ್ತಮವಾದಂತಹ ಕೃತಿ......ಕೊಂಡು ಓದಿ.... !
- ಗಣೇಶ್ ಭಟ್
https://m.facebook.com/story.php?story_fbid=1356393794395471&id=100000745909480

Thursday 25 January 2018

ಸಾವಿರದೊಂದು ಗುರಿಯೆಡೆಗೆ, ತುಳು ನಾಡ ದೈವಗಳು 421 ಮಾಪ್ಪಿಳ್ಳ ಚಾಮುಂಡಿ © ಡಾ.ಲಕ್ಷ್ಮೀ ಜಿ ಪ್ರಸಾದ



ಚಿತ್ರ ಕೃಪೆ: folkstudioin.blogspot. com

ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 421 ಮಾಪ್ಪಿಳ್ಳ ಚಾಮುಂಡಿ © ಡಾ.ಲಕ್ಷ್ಮೀ ಜಿ ಪ್ರಸಾದ
ಮಾಪ್ಪಿಳ್ಳ ಚಾಮುಂಡಿ ಯನ್ನು ಕೋಲ್ತಾಯಿಲ್ ತರವಾಡು ಕುಟುಂಬದವರು ಕೋಲ ಕಟ್ಟಿಸಿ ಆರಾಧನೆ ಮಾಡುತ್ತಾರೆ.ಹೆಸರೇ ತಿಳಿಸುವಂತೆ ಈ ದೈವ ಮೂಲತಃ ಮುಸ್ಲಿ ಮಹಿಳೆ.
ದೈವಗಳು ಎದ್ದು ನಿಂತಾಗ ಗಮನಿಸದೆ ಗೌರವಿಸದೆ ಅವರಷ್ಟಕ್ಕೆ ಇದ್ದವರನ್ನು ದೈವಗಳು ಮಾಯಮಾಡಿ ತನ್ನ ಸೇರಿಗೆಗೆ ಸಲ್ಲಿಸುವ ವಿಚಾರ ತುಳು ನಾಡಿನ ಅನೇಕ ದೈವಗಳ ವೃತ್ತಾಂತಗಳಲ್ಲಿ ಇದೆ.ಭಾಗಮಂಡಲದಿಂದ ದೈವ ಬರುವಾಗ ದಾರಿಯಲ್ಲಿ ಬತ್ತ ಬಡಿಯುತ್ತಾ ಇದ್ದ ಮುಸ್ಲಿಂ ಮಹಿಳೆಯನ್ನು ತನ್ನ ಸೇರಿಗೆಗೆ ಸೇರಿಸಿಕೊಂಡ ಬಗ್ಗೆ ಮಾಪುಲ್ತಿ ಧೂಮಾವತಿ ದೈವದ ವೃತ್ತಾಂತದಿಂದ ತಿಳಿದು ಬರುತ್ತದೆ.ಅದೇ ರೀತಿಯಲ್ಲಿ ಉಳ್ಳಾಕುಲು ನೇಮವಾಗುವಾಗ ದಾರಿ ಬಿಡದ ತೊಟ್ಟಿಲು ಮಗುವನ್ನು ಕರೆದೊಯ್ಯುತ್ತಿದ್ದ ದಂಪತಿಗಳನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸೇರಿಸಿಕೊಂಡ ಬಗ್ಗೆ ಮಾಪುಲೆ ಮಾಪುಲ್ತಿ ದೈವಗಳ ಬಗೆಗಿನ ಐತಿಹ್ಯದಿಂದ ತಿಳಿದುಬರುತ್ತದೆ.
ಅದೇ ರೀತಿಯ ಐತಿಹ್ಯ ಮಾಪ್ಪಿಳ್ಳ ಚಾಮುಂಡಿ ದೈವದ ಬಗ್ಗೆ ಪ್ರಚಲಿತವಿದೆ.
ಚಾಮುಂಡಿ ದೈವ ಎದ್ದು ನಿಂತು ಆವೇಶಕ್ಕೆ ಒಳಗಾಗಿದ್ದಾಗ ಓರ್ವ ಮುಸ್ಲಿಂ ಮಹಿಳೆ ಪ್ರಾರ್ಥನೆಗೆ ಕರೆ ಕೊಟ್ಟು ನಮಾಜ್ ಮಾಡುತ್ತಾಳೆ
ಆಗ ಅವಳ ಮೇಲೆ ದೃಷ್ಟಿ ಹಾಯಿಸಿದ ದೈವ ಅವಳನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸಂದಾಯ ಮಾಡಿಕೊಳ್ಳುತ್ತದೆ.ಅವಳು ಮುಂದೆ ದೈವತ್ವ  ಪಡೆದು ಮಾಪ್ಪಿಳ್ಳ ಚಾಮುಂಡಿ ಎಂಬ ಹೆಸರಿನಲ್ಲಿ ದೈವವಾಗಿ ಆರಾಧನೆ ಪಡೆಯುತ್ತಾಳೆ.ಈ ದೈವಕ್ಕೆ ಪ್ರತಿವರ್ಷ ತುಲಾಮಾಸದ ಹನ್ನೊಂದನೇ ದಿನ ರಾತ್ರಿ ಕೋಲ ನೀಡಿ ಆರಾಧಿಸುತ್ತಾರೆ
ಮಾಹಿತಿ ಮೂಲ-  ಹಿರಿಯರಾದ ಕುಂಞಿರಾಮನ್,ಎನ್ ಕೃಷ್ಣನ್  ಮತ್ತು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯರು ನೀಡಿದ ಮೌಖಿಕ ಮಾಹಿತಿ  ಹಾಗೂ folkstudioin ಬ್ಲಾಗ್ http://folkstudioin.blogspot.in/2013/11/mappila-theyyam-i-t-is-presence-of.html?m=1

ಸಾವಿರದೊಂದು ಗುರಿಯೆಡೆಗೆ: ತುಳುನಾಡ ದೈವಗಳು 419-420 ಮನದಲಾತ್ ಚಾಮುಂಡಿ ಮತ್ತು ಮುಕ್ರಿ ಪೋಕ್ಕೆರ್ ತೆಯ್ಯಂ© ಡಾ.ಲಕ್ಷ್ಮೀ ಜಿ ಪ್ರಸಾದ

ಚಿತ್ರ ಕೃಪೆ: ಅಂತರ್ಜಾಲ
 ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 419-20 ಚಾಮುಂಡಿ ಮತ್ತು ಮುಕ್ರಿ ಪೋಕ್ಕೆರ್ ತೆಯ್ಯಂ © ಡಾ.ಲಕ್ಷ್ಮೀ ಜಿ ಪ್ರಸಾದ
ಕಾಸರಗೋಡು ಸಮೀಪದ ವೆಲ್ಲಿಕುಂಡ್ತ್ ನಲ್ಲಿ ಮಲ್ಲೊಮ್ ಕೊಲ್ಲೊತ್ ತರವಾಡು ಕುಟುಂಬದವರು ಮುಕ್ರಿ ಪೋಕ್ಕೆರ್ ತೆಯ್ಯಂ ಮತ್ತು ಚಾಮುಂಡಿ ದೈವವನ್ನು ಆರಾಧನೆ ಮಾಡುತ್ತಾರೆ.ಹೆಸರೇ ಸೂಚಿಸುವಂತೆ ಮುಕ್ರಿ ಪೋಕ್ಕೆರ್ ಮುಸ್ಲಿಂ ಮೂಲದ ದೈವತ.
ಸ್ಥಳೀಯ ಐತಿಹ್ಯದ ಪ್ರಕಾರ ಈತ ಒಂದು ನಾಯರ್ ಕುಟುಂಬದ ರಕ್ಷಕನಾಗಿರುವ ವ್ಯಕ್ತಿ. ಈತ ಓರ್ವ ಮಂತ್ರವಾದಿ ಕೂಡ.ಆತನಿಗೂ ಆ ನಾಯರ್ ಕುಟುಂಬದ ಓರ್ವ ಯುವತಿಗೂ ಪ್ರೇಮ ಉಂಟಾಗುತ್ತದೆ.ಇದನ್ನು ತಿಳಿದ ನಾಯರ್ ಕುಟುಂಬದ ಹಿರಿಯ ಈತನಿಗೆ ಗುಂಡಿಕ್ಕುತ್ತಾನೆ.ಆದರೂ ಆತ ಸಾಯುವುದಿಲ್ಲ.ನಂತರ ಆತನನ್ನು ಕತ್ತಿಯಿಂದ ಹೊಡೆಯುತ್ತಾರೆ.ಆಗಲೂ ಆತ ಸಾಯುವುದಿಲ್ಲ.ಆಗ ಆತನೇ ತನ್ನ ಕುತ್ತಿಗೆಯಲ್ಲಿರುವ ತಾಯಿತವನ್ನು ತೆಗೆಯಲು ಹೇಳುತ್ತಾನೆ.ಆ ತಸಯಿತದ ಕಾರಣದಿಂದ ಆತನಿಗೆ ಸಾವು ಬರುವುದಿಲ್ಲ. ಆತನನ್ನು ನೋವಿನಿಂದ ಪಾರು ಮಾಡುವ ಸಲುವಾಗಿ ಆತನ ಕುತ್ತಿಗೆಯಿಂದ ಮಾಂತ್ರಿಕ ಶಕ್ತಿ ಇರುವ ತಾಯಿತವನ್ನು ಬೇರ್ಪಡಿಸುತ್ತಾರೆ. ಆತ ಮರಣವನ್ನಪ್ಪಿ ನಂತರ ದೈವತ್ವವನ್ನು ಪಡೆಯುತ್ತಾನೆ.
ಆತನಿಗೆ ಗುಂಡಿಕ್ಕಿದ ನಾಯರ್ ಗೆ ಮತಿವಭ್ರಮಣೆಯಾಗುತ್ತದೆ.ಮನೆಯಲ್ಲಿ ನಾನಾವಿಧವಾದ ಉಪದ್ರಗಳು ಕಾಣಿಸಿಕೊಳ್ಳುತ್ತದೆ
ಆಗ ಅವರು ಜ್ಯೋತಿಷಿಗಳಲ್ಲಿ ಕೇಳಿದಾಗ ಆ ವ್ಯಕ್ತಿ ಮುಕ್ರಿ ಪೋಕ್ಕೆರ್ ದೈವವಾಗಿ ಉದಿಸಿರುವುದು ಕಂಡುಬರುತ್ತದೆ.ನಂತರ ಆತನಿಗೆ ಕೋಲ ಕೊಟ್ಟು ಆರಾಧನೆ ಮಾಡಿ ಸಂಪ್ರೀತಗೊಳಿಸುತ್ತಾರೆ.ಆತನನ್ನು ಪ್ರೀತಿಸಿದ ಯುವತಿಯನ್ನು ಮನೆಯಿಂದ ಹೊರಗೆ ಹಾಕಿರುತ್ತಾರೆ.ಆಕೆ ಕೂಡ ಮಾಯಕವಾಗಿ ಮುಕ್ರಿ ಪೋಕ್ಕೆರ್ ಜೊತೆಯಲ್ಲಿ ಸೇರಿಕೊಂಡು ದೈವವಾಗಿ ಆರಾಧನೆ ಪಡೆಯುತ್ತಾಳೆ.ಮುಕ್ರಿ ಪೋಕ್ಕೆರ್ ಜೊತೆಗೆ ಆರಾಧನೆ ಪಡೆಯುವ ಚಾಮುಂಡಿ ದೈವ ಈಕೆಯೇ ಎಂಬ ಅಭಿಪ್ರಾಯವಿದೆ.ಮಾಪ್ಪಿಳ್ಳೆ ತೆಯ್ಯಂ ಮತ್ತು ಮುಕ್ರಿ ಪೋಕ್ಕೆರ್ ದೈವ ಎರಡೂ ಒಂದೇ ಎಂಬ ಅಭಿಪ್ರಾಯವನ್ನು ಎನ್ ಕೃಷ್ಣನ್ ಮೊದಲಾದವರು ನೀಡಿದ್ದಾರೆ.
ಈ ದೈವ ಕೋಲದ ಸಂದರ್ಭದಲ್ಲಿ ಪ್ರಾರ್ಥನೆಗೆ ಕರೆ ಕೊಡುವ ( ಆಝಾನ್) ಸಂಪ್ರದಾಯವಿದೆ.ಈ ದೈವ ಬಿಳಿಯ ನಿಲುವಂಗಿ ಮತ್ತು ದಾರಿಯನ್ನು ತೊಟ್ಟು ಮಾನವ ಸಹಜ ಅಲಂಕಾರದಲ್ಲಿ ಇರುತ್ತದೆ.ತಲೆಗೆ ಮುಂಡಾಸು ಮತ್ತು ಮುಖದಲ್ಲಿ ಗಡ್ಡ ಇರುತ್ತದೆ.ಕಾಲಿಗೆ ಗಗ್ಗರ ಧಿರಿಸುತ್ತದೆ.
ಮಾಹಿತಿ ಮೂಲ-  ಹಿರಿಯರಾದ ಕುಂಞಿರಾಮನ್,ಎನ್ ಕೃಷ್ಣನ್  ಮತ್ತು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯರು ನೀಡಿದ ಮೌಖಿಕ ಮಾಹಿತಿ  ಹಾಗೂ folkstudioin ಬ್ಲಾಗ್ http://folkstudioin.blogspot.in/2013/11/mappila-theyyam-i-t-is-presence-of.html?m=1

ಸಾವಿರದೊಂದು ಗುರಿಯೆಡೆಗೆ: ತುಳುನಾಡ ದೈವಗಳು: 418 ಅಗ್ನಿ ಕೊರತಿ © ಡಾ.ಲಕ್ಷ್ಮೀ ಜಿ ಪ್ರಸಾದ


‌ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 418 : ಅಗ್ನಿ ಕೊರತಿ
‌ಒಂದೆರಡು ವರ್ಷಗಳ ಹಿಂದೆ ಅಗ್ನಿ ಕೊರತಿ ದೈವದ ಫೋಟೋ ಕಳಹಿಸಿ ಈ ದೈವದ ಮಾಹಿತಿ ಇದೆಯೇ ಎಂದು ಸ್ನೇಹಿತರಾದ ಸಿಂಚನಾ ಶ್ಯಾಮ್ ಕೇಳಿದ್ದರು.ಅಗ್ನಿ ಕೊರತಿ ಓರ್ವ ಬೆಂಕಿಯಲ್ಲಿ ಆತ್ಮಾಹುತಿ ಮಾಡಿಕೊಂಡ ಸ್ತ್ರೀ ಎಂಬ ಐತಿಹ್ಯ ಸಿಕ್ಕಿತ್ತಾದರೂ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ.ತಿಂಗಳ ಮೊದಲು ಈ ಬಗ್ಗೆ ಅಭಿಲಾಷ್ ಚೌಟ ಅವರು ಸರಿಯಾದ ಮಾಹಿತಿ ನೀಡಿದರು.
‌ಹೆಸರು ಒಂದೇ ಇದ್ದರೂ ದೈವ ಒಂದೇ ಇರಬೇಕಾಗಿಲ್ಲ .ಅಗ್ನಿ ಕೊರತಿ ಕೊರತಿ ದೈವವಲ್ಲ .ಸಸಿಹಿತ್ತಿಲಿನಲ್ಲಿ ಗುಳಿಗನ ಜೊತೆ ಸೇರಿರುವ ದೈವವಿದು.ಗುಳಿಗನ ಜೊತೆ ಸೇರಿದ ಕಾರಣ ಅಗ್ನಿ ಗುಳಿಗನೆಂದು ಕೂಡ ಕರೆಯುತ್ತಾರೆ.
‌ಈ ದೈವದ ಹಿನ್ನೆಲೆಯಲ್ಲಿ ವರ್ಗ ಸಂಘರ್ಷದ ಸೂಚನೆ ಇರುವ ಕಥಾನಕ ಇದೆ
‌ಪೂಲ ಪೊಂಜೋವು ಮತ್ತು  ಗಾಳಿಭದ್ರ ದೇವರಿಗೆ ಸತ್ಯಭಾರಿ ಎಂಬ ಹೆಸರಿನ ಮಗಳಾಗಿ ಹುಟ್ಟುತ್ತಾಳೆ.ಹುಡುಗಿ ಹೋಗಿ ದೊಡ್ಡವಳಾದ ಶುದ್ಧ ನೀರಿಗಾಗಿ ಕಾಂತೇಶ್ವರ ದೇವಾಲಯಕ್ಕೆ ಬರುತ್ತಾಳೆ.ಅಲ್ಲಿ ಇಬ್ಬರು ಬ್ರಾಹ್ಮಣ ಬ್ರಹ್ಮಚಾರಿಗಳು ಅವಳನ್ನು ಅಟ್ಟಿಸಿಕೊಂಡು ಹಿಂಬಾಲಿಸಿ ಕೊಂಡು ಬರುತ್ತಾರೆ.ಆಗ ಅವಳು ಬೆಂಕಿಗೆ ಪ್ರವೇಶ ಮಾಡಿ ಆತ್ಮಾಹುತಿ ಮಾಡಿಕೊಳ್ಳುತ್ತಾಳೆ.ನಂತರ ದೈವವಾಗಿ ಎದ್ದು ನಿಂತು ಮುಳಿಹಿತ್ತಿಲಿಗೆ ಹೋಗಿ ಭಗವತಿ ಸಾನ್ನಿಧ್ಯದಲ್ಲಿ ಅಗ್ನಿ ಕೊರತಿ/ ಅಗ್ನಿ ಗುಳಿಗನಾಗಿ ಆರಾಧನೆ ಪಡೆಯುತ್ತಾಳೆ. ಅಲ್ಲಿಂದ ಭಗವತಿಯೊಡನೆ ಬೇರೆಡೆಗೆ ಪ್ರಸರಣಗೊಳ್ಳುತ್ತಾಳೆ.
‌ಕುಂದಣ್ಣ ಉರೊಲಿ  ಎಂಬವರು ಅಗ್ನಿ ಕೊರತಿಯ ಉಪಾಸನೆ ಮಾಡಿತ್ತಾರೆ.ನಂತರ ಒಂದು ಗುತ್ತಿನ ಮನೆಯವರು ಕಳ್ಳ ಕಾಕರಿಂದ ರಕ್ಷಣೆ ಪಡೆಯುವ ಸಲುವಾಗಿ ಅಗ್ನಿ ಕೊರತಿಯನ್ನು ಕೇಳಿ ಕರೆದುಕೊಂಡು ಹೋಗಿ ಆರಾಧನೆ ಮಾಡುತ್ತಾರೆ.

‌ಅಲೌಕಿಕ ನೆಲೆಯನ್ನು ಬಿಟ್ಟು ವಾಸ್ತವವಾಗಿ ಹೇಳುವುದಾದರೆ ಕೊರತಿ ಎಂಬ ಹೆಸರು ಜಾತಿ ಸೂಚಕವಾಗಿದ್ದು ಆಕೆ ಮೂಲತಃ ಕೊರಗ ಸಮುದಾಯಕ್ಕೆ ಸೇರಿದವಳು ಎಂಬುದನ್ನು ಸೂಚಿಸುತ್ತದೆ.
‌ವಿಧಿ ನಿಷೇಧ ಗಳು ಆದಿ ಮಾನವನ ಅಲಿಖಿತ ಶಾಸನಗಳಾಗಿದ್ದವು.
‌ಅಂತೆಯೇ ಕೊರಗ ಸಮುದಾಯದ ಹೆಣ್ಣು ಮಗಳು ಒಬ್ಬಳು ಶುದ್ಧವಾಗಲು ದೇವಾಲಯಕ್ಕೆ ಬರುವುದನ್ನು ಒಪ್ಪುವುದಿಲ್ಲ .ಹಾಗಾಗಿ ಅವಳನ್ನು ಅಲ್ಲಿ ಅಟ್ಟಿಸಿಕೊಂಡು ಹೋದಾಗ ಅವಳು ಅಗ್ನಿ ಪ್ರವೇಶಿಸಿ ದುರಂತವನ್ನಪ್ಪಿರಬಹುದು.ದುರಂತ ಮತ್ತು ದೈವತ್ವ ಒಟ್ಟೊಟ್ಟಿಗೆ ಸಾಗುವಂತೆ ಅವಳು ದೈವತ್ವ ಪಡೆದು ಆರಾಧನೆ ಹೊಂದಿರಬಹುದು.© ಡಾ.ಲಕ್ಷ್ಮೀ ಜಿ ಪ್ರಸಾದ
‌ಅಗ್ನಿಕೊರತಿ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಪ್ರೇರಣೆ ನೀಡಿದ  ಸಿಂಚನಾ ಶ್ಯಾಮ್ ಮತ್ತು ಮಾಹಿತಿ ನೀಡಿದ ಅಭಿಲಾಷ್ ಚೌಟರಿಗೆ ಕೃತಜ್ಣತೆಗಳು
‌ಚಿತ್ರ ಕೃಪೆ: ಧರ್ಮ ದೈವ

Tuesday 23 January 2018

ಸಾವಿರದೊಂದು ಗುರಿಯೆಡೆಗೆ 417 ಮಾಪ್ಪಿಳ್ಳೆ ತೆಯ್ಯಂ© ಡಾ.ಲಕ್ಷ್ಮೀ ಜಿ ಪ್ರಸಾದ




ಚಿತ್ರ ಕೃಪೆ : ಅಂತರ್ಜಾಲದ

ಸಾವಿರದೊಂದು ಗುರಿಯೆಡೆಗೆ 417
ಮಾಪ್ಫಿಳ್ಳೆ ತೆಯ್ಯಂ© ಡಾ.ಲಕ್ಷ್ಮೀ ಜಿ ಪ್ರಸಾದ
ಕಳೆದ ಒಂದು ವಾರದಿಂದ ವಾಟ್ಸಪ್ ಹಾಗೂ ಪೇಸ್ ಬುಕ್ ಗಳಲ್ಲಿ  ಒಂದು ದೈವ ಇಬ್ಬರು ಮುಸ್ಲಿಂ ವೇಷಭೂಷಣ ಧರಿಸಿದ ಪಾತ್ರಿಗಳ ಜೊತೆ ಕೋಲಾಟವನ್ನು ಹೋಲುವ ಆಟ ಆಡುವ ವೀಡಿಯೋ ಹರಿದಾಡುತ್ತಾ ಇತ್ತು.ಇದು ಯಾವ ದೈವ ಎಂದು ಕೆಲವರು ನನ್ನಲ್ಲಿ ಕೇಳಿದ್ದರು.ಅದು ಮುಸ್ಲಿಂ ಮೂಲದ ದೈವ ಎಂದು ಊಹಿಸಿದ್ದೆನಾದರೂ ಯಾವ ದೈವ ಎಂದು ತಿಳಿದಿರಲಿಲ್ಲ. ಕೆಲವರು ಅದನ್ನು ಆಲಿ ಚಾಮುಂಡಿ ಎಂದಿದ್ದು ಅದು ಆಲಿ ಚಾಮುಂಡಿ ಅಲ್ಲ ಮುಕ್ರಿ ಪೋಕ್ಕನ್ನಾರ್/ ಪೋಕ್ಕೆರ್ ದೈವ ಇರಬಹುದು ಎಂದು ಊಹಿಸಿ ಹೇಳಿದ್ದೆ .ವಾಟ್ಸಪ್ ಗ್ರೂಪೊಂದರಲ್ಲಿ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹಾಗೂ ತುಳುವೆರೆಂಕುಲು ಸಂಘದ ಗತ  ಕಾರ್ಯದರ್ಶಿ ಗಳಾದ ಚಂದ್ರಹಾಸ ಶೆಟ್ಟಿಯವರು ಅದನ್ನು ಮಾಪಿಲ್ಳೆ ತೆಯ್ಯಂ ಎಂದು ಹೆಸರಿಸಿದ್ದರು.ಆ ನಿಟ್ಟಿನಲ್ಲಿ ನಾನು ಮಾಹಿತಿ ಸಂಗ್ರಹಕ್ಕೆ ಶುರು ಮಾಡಿದೆ .ಆಗ ಕುಂಞಿ ರಾಮನ್ ಅವರು ಕೆಲ ಮಾಹಿತಿ ನೀಡಿದರುಅಂತರ್ಜಾಲದಲ್ಲೂ ಸ್ವಲ್ಪ  ಮಾಹಿತಿ ದೊರೆಯಿತು

ತುಳು ನಾಡಿನಲ್ಲಿ ಯಾರಿಗೆ ಹೇಗೆ ಯಾವಾಗ ದೈವತ್ವ ಪ್ರಾಪ್ತಿಯಾಗುತ್ತದೆ ಹೇಳುವುದಕ್ಕೆ ಒಂದು ಸಿದ್ಧ ಸೂತ್ರವಾಗಲಿ ನಿಯಮವಾಗಲಿ ಏನೂ ಇಲ್ಲ .ದುರಂತವನ್ನಪ್ಪಿದ ಅಸಹಾಯ ಶೂರರು ಮಾತ್ರ ಭೂತಗಳಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ .ಮನುಷ್ಯ ಮೂಲದಿಂದ ಭೂತ ಸ್ಥಿತಿಗೇರಿದವರು ಎಲ್ಲರೂ ಮೂಲತಃ ಸಾತ್ವಿಕರೂ,ಸದ್ಧರ್ಮಿಗಳೂ, ಸಾಧ್ವಿಗಳೂ, ಶೂರರೂ ಎನ್ನುವಂತಿಲ್ಲ. ಅಂಥಹ ಉದಾತ್ತ ಚರಿತರು ವಿರಳವಾಗಿ ಕೆಲವರಿರಬಹುದ ವಿಶೇಷಗುಣಗಳಿಲ್ಲದ ತೀರಾ ಸಾಮಾನ್ಯರೂ ಬೇರೆಬೇರೆ ಕಾರಣಗಳಿಂದ ದೈವತ್ವವನ್ನು ಪಡೆದಿದ್ದಾರೆ. ಆಕಸ್ಮಿಕ ಮರಣಕ್ಕೆ ಗುರಿಯಾದವರು ದೈವಗಳ ಕಾರಣೀಕಗಳು ಸೇರಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾರೆ.ಪ್ರಧಾನ ಭೂತ ಗಳಾದ ಉಲ್ಲಾಕುಳು ಶಿರಾಡಿ ,ಮಲರಾಯಿ ,ಬಬ್ಬರ್ಯ ,ಪಂಜುರ್ಲಿ ,ಮೊದಲಾದ ಭೂತ ಗಳ  ಅನುಗ್ರಹದಿಂದ ಅನೇಕರು ಸೇರಿಗೆ ದೈವಗಳಾಗಿದ್ದಾರೆ.ಅಂತೆಯೇ  ಈ ಭೂತ ಗಳ ಆಗ್ರಹಕ್ಕೆ ತುತ್ತಾಗಿಯೂ ಅನೇಕರಿಗೆ ದೈವತ್ವ ಲಭಿಸಿದೆ.ಹೀಗೆ ಆಲಿ ಚಾಮುಂಡಿ ಕೂಡಾ ಮಂತ್ರ ದೇವತೆಯ   ಆಗ್ರಹಕ್ಕೆ ತುತ್ತಾಗಿ ದುರಂತವನ್ನಪ್ಪಿ ನಂತರ ದೈವತ್ವವನ್ನು ಆರಾಧಿಸಲ್ಪಡುವ ಭೂತ    



ತುಳುವರ ಭೂತಾರಾಧನೆಯಲ್ಲಿ ಯಾವುದೇ ಜಾತಿ ಭೇದ ಅಂತ ಇರುವುದಿಲ್ಲ ಅಂತೆಯೇ ಧರ್ಮದ ಗಡಿ ಕೂಡಾ ಇದಕ್ಕಿಲ್ಲ .ಉಲ್ಲಾಳದಲ್ಲಿ ಭೂತ ಮಸೀದಿಗೆ ಭೇಟಿ ಕೊಡುವ ಸಂಪ್ರದಾಯ ಇದೆ. ಅದೇ ರೀತಿ ಕೆಲವೆಡೆ ಭೂತ ಮುಸ್ಲಿಂ ಕ್ರಿಸ್ಚಿ ಯನ್ ವ್ಯಕ್ತಿಗಳನ್ನು ಉದ್ದೇಶಿಸಿ ಕರೆದು ಗೌರವಿಸುವ ಪದ್ಧತಿ ಇದೆ .ತೋಕ್ಕೊಟು  ಸಮೀಪ ಭೂತ “ಅಂತಂತೋನಿ “ಎಂದು ಕರೆಯುವ ಬಗ್ಗೆ ಭೂತ ಕಟ್ಟುವ ಕಲಾವಿದರಾದ ಅಪ್ಪಣ್ಣ  ಅವರು ತಿಳಿಸಿದ್ದಾರ


 ಅಂತೆಯೇ ತುಳುನಾಡಿನಲ್ಲಿ ದೈವತ್ವವನ್ನು ಪಡೆದವರೆಲ್ಲ ಹಿಂದುಗಳು, ತುಳುನಾಡಿನವರೇ ಆಗಬೇಕಿಲ್ಲ. ಅನೇಕ ಕನ್ನಡ ಮೂಲದ ವ್ಯಕ್ತಿಗಳು. ತುಳುನಾಡಿನಲ್ಲಿ ಭೂತ ಗಳಾಗಿ ಆರಾಧಿಸಲ್ಪಡುತ್ತಿದ್ದಾರೆ   ಕನ್ನಡ ಬೀರ, ಬಚ್ಚನಾಯಕ, ಬೈಸು ನಾಯಕ, ಕರಿಯಣ್ಣ ನಾಯಕ, ಕಚ್ಚೆ ಭಟ್ಟ, ಕನ್ನಡ ಭೂತ, ಕನ್ನಡ ಭೂತ ಯಾನೆ ಪುರುಷ  ಭೂತ,ಕನ್ನಡಿಗ ಭೂತ ಮೊದಲಾದವರು ಮೂಲತಃ ಕನ್ನಡ ಭಾಷಿಗರು ಆಗಿದ್ದವರು      © copy rights reserved(c)Dr.Laxmi g Prasad

 .ತುಳುನಾಡಿನಲ್ಲಿ ದೈವತ್ವ ಪಡೆದು ಭೂತ ವಾಗಿ ಆರಾಧಿಸಲ್ಪಡುವುದು ಒಂದು ವಿಶಿಷ್ಟ ಸಂಸ್ಕೃತಿ .ಇಲ್ಲಿ ಭೂತತ್ವವನ್ನು ಪಡೆಯುವುದಕ್ಕೆ ಯಾವುದೇ ಜಾತಿ ಧರ್ಮದ ಮಿತಿ ಇಲ್ಲ. ಇಲ್ಲಿ ಬ್ರಾಹ್ಮಣರೂ ಭೂತವಾಗಿದ್ದಾರೆ.ಚಾಮುಂಡಿ,ಭಟ್ಟಿ ಭೂತ ,ಕಚ್ಚೆ ಭಟ್ಟ  ,ನಾರಳತ್ತಾಯ ಮೊದಲಾದ ಭೂತ ಗಳು ಬ್ರಾಹ್ಮಣ ಮೂಲದ ದೈವತಗಳು . ರಾಮ ಶೆಟ್ಟಿ ಎಂಬ ವೀರ ಶೈವ  ಲಿಂಗಾಯತ ವ್ಯಕ್ತಿ ನೆತ್ತರು ಮುಗಳಿ ಎಂಬ ಭೂತವಾಗಿದ್ದಾನೆ .ನೈದಾಲ ಪಾಂಡಿ ಕೂಡ ಮೂಲತಃ ಲಿಂಗಾಯತನಾಗಿ ಪರಿವರ್ತಿತನಾದ ರಾಜ ಕುಮಾರ . . ಅಚ್ಚುಬಂಗೇತಿ,ಅಕ್ಕಚ್ಚು ಭೂತ, ಬೊಟ್ಟಿ ಭೂತಗಳು ಮೂಲತಃ ಜೈನ ಧರ್ಮದವರಾಗಿದ್ದಾರೆ.   © copy rights reserved(c)Dr.Laxmi g Prasad

 ಕ್ರಿಶ್ಚಿಯನ್ ತೆಯ್ಯಂಗೆ ಆರಾಧನೆ ಇರುವ ಬಗ್ಗೆ ಕೇಳು ಮಾಸ್ತರ್ ಅಗಲ್ಪಾಡಿ ಅವರು ತಿಳಿಸಿದ್ದಾರೆ . ಅಂತೆಯೇ ತುಳುನಾಡಿನ ಅನೇಕ ಮುಸ್ಲಿಂ ಮೂಲದ ವ್ಯಕ್ತಿಗಳು ದೈವತ್ವಕ್ಕೇರಿ ಆರಾಧಿಸಲ್ಪಡುತ್ತಿದ್ದಾರೆ. ಬಬ್ಬರ್ಯ, ,ಬ್ಯಾರ್ದಿ ಭೂತ, ಬ್ಯಾರಿ ಭೂತ,ಮಾಪುಲೇ ಮಾಪುಳ್ತಿ ಭೂತೊಳು,ಮಾಪುಳ್ತಿ  ಧೂಮಾವತಿ  ಮೊದಲಾದವರು ಮುಸ್ಲಿಂ ಮೂಲದ ದೈವತಗಳು. ಹೀಗೆ  ಆಲಿ ಭೂತ ಕೂಡಾ ಮುಸ್ಲಿಂ ಮೂಲದ ದೈವ .ಭೂತಗಳಾದ ನಂತರ ಇವರು ಹಿಂದೆ ಯಾರಾಗಿದ್ದರು ಎಂಬ ಪ್ರಶ್ನೆಯೇ ಇರುವುದಿಲ್ಲ .ಎಲ್ಲ ದೈವಗಳೂ ಸಮಾನ .ಎಲ್ಲ ದೈವಗಳಿಗೂ ಒಂದೇ ರೀತಿಯ ಗೌರವ ,ಭಕ್ತಿಯ ನೆಲೆ .ಇದು ತುಳು ನಾಡಿನ ವೈಶಿಷ್ಟ್ಯ .

   ©
ಮಾಪ್ಪಿಳ್ಳೆ ದೈವ ಕೂಡ ಜಾತ ಧರ್ಮ ಮತಗಳನ್ನು ಮೀರಿದ ಶಕ್ತಿ


ಹೆಸರೇ ಸೂಚಿಸುವಂತೆ ಮಾಪ್ಫಿಳ್ಳೆ ದೈವ ಮುಸ್ಲಿಂ ಮೂಲದ ದೈವತ.ಕಾಸರಗೋಡು ಸುತ್ತ ಮುತ್ತ ಈ ದೈವಕ್ಕೆ ಆರಾಧನೆ ಇದೆ. ಮಾವಿಲ‌ ಸಮುದಾಯದವರು ಈ ದೈವವನ್ನು ಕಟ್ಟುತ್ತಾರೆ.
ಈ ದೈವ ಮೂಲತಃ ಕೋಯಿ ಮೊಹಮ್ಮದ್ ಎಂಬ ಮುಸ್ಲಿಂ ಸಮುದಾಯದ ಪರಿಸರ ಪ್ರೇಮಿ.ಅಲ್ಲಿ ಒಮ್ಮೆ ಮಲೆ ಚಾಮುಂಡಿ ಕೋಲವನ್ನು ಏರ್ಪಡಿಸುವ ಸಲುವಾಗಿ‌ ಮರವನ್ನು ಕಡಿಯಲು ಸಿದ್ಧತೆ ಮಾಡುತ್ತಾರೆ. ಆಗ ಕೋಯಿ ಮೊಹಮ್ಮದ್ ಮರ ಕಡಿಯದಂತೆ ತಡೆಯುತ್ತಾನೆ.ಆಗ ಆತ ಮಲೆ ಚಾಮುಂಡಿ ದೈವದ ಕೋಪಕ್ಕೆ ಪಾತ್ರನಾಗುತ್ತಾನೆ.ಅದರ ಪರಿಣಾಮವಾಗಿ ಆತನ ಮೇಲೆ‌ ಮರ ಬಿದ್ದು ಆತ ಮರಣವನ್ನಪ್ಪುತ್ತಾನೆ.ದೈವಗಳ ಅನುಗ್ರಹಕ್ಕೆ ಪಾತ್ರ ರಾದವರು ಅದೇ ದೈವದ ಸೇರಿಗೆಗೆ ಸಂದು ದೈವತ್ವ ಪಡೆದು ಆರಾಧನೆ ಪಡೆಯುತ್ತಾರೆ.ಅಂತೆಯೇ ದೈವಗಳ ಆಗ್ರಹಕ್ಕೆ ತುತ್ತಾದವರು ಕೂಡ ಅದೇ ದೈವದ ಸೇರಿಗೆಗೆ ಸಂದು ದೈವತ್ವ ಪಡೆದು ಆರಾಧನೆ ಪಡೆಯುವ ವಿದ್ಯಮಾನ ತುಳುನಾಡಿನ ಹಲವೆಡೆ ಕಾಣಿಸುತ್ತದೆ.ಆಲಿ ಭೂತ, ಅರಬ್ಬಿ ಭೂತ, ಜತ್ತಿಂಗ ಮೊದಲಾದವರು ಪ್ರಧಾನ ದೈವಗಳ ಕೋಪಕ್ಕೆ ಈಡಾಗಿ ಮಾಯಕವಾಗಿ ದೈವತ್ವ ಪಡೆದು ದೈವಗಳಾಗಿ ಆರಾಧನೆ ಪಡೆಯುತ್ತಿದ್ದಾರೆ.ಹಾಗೆಯೇ ಕೋಯಿ ಮೊಹಮ್ಮದ್ ಕೂಡ ಮಲೆ ಚಾಮುಂಡಿ ದೈವದ ಸೇರಿಗೆ ದೈವವಾಗಿ ಮಾಪ್ಪಿಳ್ಳೆ ದೈವ ಎಂಬ ಹೆಸರಿನಲ್ಲಿ ಆರಾಧನೆ ಪಡೆಯುತ್ತಾನೆ.
ಅಲೌಕಿನ ನೆಲೆಯನ್ನು ಬಿಟ್ಟು ವಾಸ್ತವಿಕವಾಗಿ ಆಲೋಚಿಸುವಾಗ ಈತನಿಗೆ ಮತ್ತು ಮರ ಕಡಿಯುವವರ ನಡುವೆ ಸಂಘರ್ಷ ಉಂಟಾಗಿ ದುರಂತ‌ಮರಣಕ್ಕೀಡಾಗಿರಬಹುದು.ಅದಕ್ಕೆ ದೈವದ ಕಾರಣಿಕ ಸೇರಿರಬಹುದು, ದುರಂತ ಮತ್ತು ದೈವತ್ವ ತುಳು ಸಂಸ್ಕೃತಿಯ ವಿಶಿಷ್ಟತೆ ಆಗಿದೆ.ಅಂತೆಯೇ ದುರಂತವನ್ನಪ್ಪಿದ ಕೋಯಿ ಮೊಹಮ್ಮದ್ ದೈವತ್ವ ಪಡೆದು ಆರಾಧನೆ ಪಡೆಯುತ್ತಾನೆ. ಆತ ಮುಸ್ಲಿಂ ಸಮುದಾಯದ ವ್ಯಕ್ತಿ ಆಗಿದ್ದಾನೆ‌ .ಕಾಸರಗೋಡು ಪರಿಸರದ‌‌ ಮುಸ್ಲಿಮರನ್ನು ಮಾಪ್ಪಿಳ್ಳೆ ಎಂದು ಕರೆಯುತ್ತಾರೆ. ಆದ್ದರಿಂದ ಕೋಯಿ ಮುಹಮ್ಮದ್ ಮಾಪ್ಪಿಳ್ಳೆ ಎಂಬ ಹೆಸರಿನ ದೈವ ಆಗಿ ಆರಾಧನೆ ಪಡೆಯುತ್ತಾನೆ.ಈ ದೈವ ಮುಸ್ಲಿಮರಂತೆ ವೇಷಭೂಷಣ ಧರಿಸಿದ ದೈವ ಪಾತ್ರಿಗಳ ಜೊತೆಗೆ ಮಾಪಿಳ್ಳೆ ಕಳಿ ಎಂಬ ವಿಶಿಷ್ಟ ನೃತ್ಯವನ್ನು ಮಾಡುತ್ತದೆ
ಈ ಮಾಪಿಳ್ಳೆ ದೈವ ಮತ್ತು ಮುಕ್ರಿ ಪೋಕ್ಕರ್ ದೈವ ಎರಡೂ ಒಂದೇ ಎಂಬ ಅಭಿಪ್ರಾಯ ಇದೆ.ಆದರೆ ವೇಷ ಭೂಷಣ, ಕಥಾನಕ ,ಆರಾಧನೆಯ ತಾಣ ಎಲ್ಲವನ್ನೂ ಗಮನಿಸಿದಾಗ ಇವೆರಡೂ ಬೇರೆ ಬೇರೆ ದೈವಗಳು ಎಂದು ತಿಳಿದು ಬರುತ್ತದೆ
© ಡಾ.ಲಕ್ಷ್ಮೀ ಜಿ ಪ್ರಸಾದ
ಮಾಹಿತಿ -  ಹಿರಿಯರಾದ ಕುಂಞಿರಾಮನ್ ಮತ್ತು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯರು ನೀಡಿದ ಮೌಖಿಕ ಮಾಹಿತಿ  ಹಾಗೂ folkstudioin ಬ್ಲಾಗ್ http://folkstudioin.blogspot.in/2013/11/mappila-theyyam-i-t-is-presence-of.html?m=1

Sunday 21 January 2018

ಸಾವಿರದೊಂದು ಗುರಿಯೆಡೆಗೆ: ತುಳುನಾಡ ದೈವಗಳು 416 ಪುರುಷರಾಯ© ಡಾ.ಲಕ್ಷ್ಮೀ ಜಿ ಪ್ರಸಾದ


ಸಾವಿರದೊಂದು ಗುರಿಯೆಡೆಗೆ: ತುಳುನಾಡ ದೈವಗಳು 416 ಪುರುಷರಾಯ© ಡಾ.ಲಕ್ಷ್ಮೀ ಜಿ ಪ್ರಸಾದ

ಪುರುಷ ಎಂಬ ಹೆಸರಿನಲ್ಲಿ ಕಾಂಬೋಡಿದ ಪುರ್ಸ ಭೂತ,ಜೋಗಿ ಪುರುಷ,ಕನ್ನಡ ಯಾನೆ ಪುರುಷ ಭೂತ, ಗರೋಡಿಯ ಪುರುಷರಾಯ ಎಂಬ ನಾಲ್ಕು ದೈವಗಳ ಆರಾಧನೆ ಇರುವ ಬಗ್ಗೆ ನಾನು ಈಗಾಗಲೇ ಬ್ಲಾಗ್ ನಲ್ಲಿ ಬರೆದಿದ್ದೇನೆ.copy rights reserved© Dr Lakshmi g prasad
ಬರಾಯ ಅರಮನೆಗೆ ಸಂಬಂಧಿಸಿದ ಒಂದು ಪುರುಷರಾಯ ಎಂಬ ದೈವದ ಬಗ್ಗೆ ವೇಣೂರು ಅಳದಂಗಡಿಯ ತಿಮ್ಮಣ್ಣ ಅಜಿಲ ಅರಸುಗಳ 24 ನೇ ವಾರಸುದಾರರಾಗಿರುವ ತಿಮ್ಮಣ್ಣಾಜಿಲ ಅರಸು ( ಡಾ.ಪದ್ಮ ಪ್ರಸಾದ್ ) ಅವರು ಮಾಹಿತಿ ನೀಡಿದ್ದಾರೆ.
ವೇಣೂರು  ತಿಮ್ಮಣ್ಣಾಜಿಲ ಅರಸುಗಳ ನಾಲ್ಕು ಅರಮನೆಗಳಲ್ಲಿ ಬರಾಯ ಕೂಡ ಒಂದು.
ಈ ಬರಾಯ ಅರಮನೆಯಲ್ಲಿ ಹಿಂದೆ ಓರ್ವ ದೈವ ಭಕ್ತರಾದ ರಾಣಿ ಇದ್ದರು.ಒಂದು ದಿನ ಅರಮನೆಗೆ ಒಬ್ಬ ಸನ್ಯಾಸಿ ಬಂದು ಭಿಕ್ಷೆ ಕೇಳುತ್ತಾನೆ. ಆಗ ರಾಣಿ ಒಂದು ಸೇರು ಅಕ್ಕಿ, ಒಂದು ತೆಂಗಿನಕಾಯಿ, ಒಂದು ಸೌತೆಕಾಯಿ ಯನ್ನು ಭಿಕ್ಷೆಯಾಗಿ ನೀಡುತ್ತಾರೆ. ಇಷ್ಟು ದೊಡ್ಡ ಅರಮನೆಯವರು ಇದನ್ನು ದಾನ ನೀಡುವುದಾ ಎಂದು ಆತ ಕೋಪದಿಂದ ಅದನ್ನು ಒದೆದು ಬಿಸಾಡಿ ಹೋಗುತ್ತಾನೆ.ಆಗ ರಾಣಿ ಇದು ನಂಬಿದ ಸತ್ಯಗಳಿಗೆ ಒಪ್ಪಿಗೆ ಆಗುವುದಾದರೆ ಆಗಲಿ ಎಂದು ಹೇಳುತ್ತಾರೆ.
ಆ ಸನ್ಯಾಸಿ ಅರಮನೆಯಿಂದ ಹೋಗುವ ದಾರಿಯಲ್ಲಿ ಒಂದು ಕಲ್ಲಿನ ಸಂಕ ದಾಟುವಾಗ ,ಸಂಕ ಮುರಿದು ಕೆಳಗೆ ಬಿದ್ದು ,ಸೊಂಟ ಮುರಿಯುತ್ತದೆ.© ಡಾ.ಲಕ್ಷ್ಮೀ ಜಿ ಪ್ರಸಾದ
ಅರಮನೆಗೆ ಬಟ್ಟೆ ತಂದು ಕೊಡಲು ಬರುವಾಗ ಅರಮನೆಯ ಮಡಿವಾಳ ಇವನನ್ನು ನೋಡುತ್ತಾನೆ.ಬಟ್ಟೆಗಳನ್ನು ಕೊಟ್ಟು ಹಿಂದೆ ಹೋಗುವಾಗ ಈ ಸನ್ಯಾಸಿ ಯನ್ನು  ತನ್ನ ಮನೆಗೆ ಕರೆದುಕೊಂಡು ಹೋಗಿ ಸುಶ್ರೂಶೆ ಮಾಡುತ್ತಾನೆ.ಆದರೆ ಅವನಿಗೆ ತುಂಬಾ ಏಟಾಗಿರುತ್ತದೆ.ಅವನು ಸಾಯುವ ಹಂತಕ್ಕೆ ಬಂದಾಗ ಇದು ಸತ್ಯದ ಮಣ್ಣು, ನಾನು ಸತ್ತು ಇಲ್ಲಿ ದೈವವಾಗಿ ಎದ್ದು ನಿಲ್ಲುತ್ತೇನೆ.ಆದರೆ ನಾನು ಆವಾರ ಸ್ವೀಕರಿಸುವ ಮೊದಲು ನೀನು ಆಹಾರ ಸ್ವೀಕರಿಸಬೇಕು ಹೇಳಿ ಸಾಯುತ್ತಾನೆ.ನಂತರ ಪುರುಷರಾಯ ದೈವವಾಗಿ ಅಲ್ಲಿ ಆರಾಧನೆ ಪಡೆಯುತ್ತಾನೆ.ಈಗ ಕೂಡ. ಈ ದೈವಕ್ಕೆ ಆವಾರ ಕೊಡುವ ಮೊದಲಿಗೆ ಆ ಮಡಿವಾಳನ ವಂಶದ ಒಬ್ಬನಿಗೆ ಬದಿಯಲ್ಲಿ ಒಂದು ಬಟ್ಟೆ ಹಾಸಿ‌ ಕುಳ್ಳಿರಿಸಿ ಆಹಾರ ನೀಡುವ ಪದ್ದತಿ ಇದೆ.
ಈ ದೈವಕ್ಕೆ ಮುಖಕ್ಕೆ ಕೆಂಪುಬಣ್ಣವನ್ನು ಹಚ್ಚುತ್ತಾರೆ. ತಲೆಗೆ ಒಂದು ಚವರಿ ಇರುತ್ತದೆ.ತೆಂಗಿನ ತಿರಿಯ ಅಲಂಕಾರವಿರುವುದಿಲ್ಲ .ಗಗ್ಗರ ಕಟ್ಟುತ್ತಾರೆ. ಉಳಿದಂತೆ ಮಾನವ ಸಹಜ ಅಲಂಕಾರ ಇರುತ್ತದೆ.ಈತನಿಗೆ‌ ಒಂದು ಬೆತ್ತ ಆಯುಧವಾಗಿದೆ.ಇದನ್ನು ಅರಸರು ಚಾವಡಿ ನಾಯಕರ ಕೈಗೆ ಕೊಟ್ಟಿರುತ್ತಾರೆ. ಅದನ್ನು ಅವರು ತಂದು ಪುರುಷರಾಯ ದೈವಕ್ಕೆ ನೀಡುತ್ತಾರೆ.© ಡಾ.ಲಕ್ಷ್ಮೀ ಜಿ ಪ್ರಸಾದ
ಮಾಹಿತಿ ನೀಡಿದ ತಿಮ್ಮಣ್ಣಾಜಿಲ ಅರಸರಿಗೆ( ಡಾ.ಪದ್ಮಪ್ರಸಾದ) ಹೃತ್ಪೂರ್ವಕ ಕೃತಜ್ಞತೆಗಳು

Thursday 18 January 2018

ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಮತ್ತು ಇದು ತುಳು ಭಾಷೆಯ ಸ್ವಂತ ಲಿಪಿಯಲ್ಲ‌© ಡಾ.ಲಕ್ಷ್ಮೀ ಜಿ ಪ್ರಸಾದ

ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ, ಬೇರೆ ಬೇರೆಯಲ್ಲ ಮತ್ತು ಇದು ತುಳು ಭಾಷೆಯ ಸ್ವಂತ ಲಿಪಿ ಅಲ್ಲ©   ಡಾ.ಲಕ್ಷ್ಮೀ ಜಿ ಪ್ರಸಾದ

ತಮಿಳರು ಸಂಸ್ಕೃತ ಬರೆಯಲು ತಮಿಳು ಲಿಪಿಯನ್ನು ಪರಿಷ್ಕರಿಸಿ ಬಳಕೆಗೆ ತಂದ ತಿಗಳಾರ್ಯ ಎಳತ್ತು/ ತಿಗಳಾರಿ ಲಿಪಿಯನ್ನು ತುಳು ಭಾಷೆಯ ಸ್ವಂತ ಲಿಪಿ ಎಂದು ಸುಳ್ಳು ಹೇಳಿ ಸತ್ಯದ ಮಣ್ಣು ಎಂಬ ಹೆಮ್ಮೆಯ ತುಳುನಾಡಿಗೆ ಕಳಂಕ ತರಬೇಡಿ ,ಹೊರಜಗತ್ತು ತುಳುವರನ್ನು ನೋಡಿ ಅಪಹಾಸ್ಯ ಮಾಡಿ ನಗುವಂತೆ ಮಾಡಬೇಡಿ,ತುಳು ಅಕಾಡೆಮಿ ವೆಬ್ ನಲ್ಲಿಯೇ ತುಳು ಭಾಷೆಗೆ ಸ್ವಂತ ಲಿಪಿಯಿಲ್ಲ ,ಪ್ರಾಚೀನ ಕಾಲದಲ್ಲಿ ತುಳು ಭಾಷೆ ಬರೆಯಲು ತಿಗಳಾರಿ ಲಿಪಿ ಬಳಸುತ್ತಿದ್ದರು ಎಂದು ಸ್ಪಷ್ಟವಾಗಿ ತಿಳಿಸಿದ್ದರೂ ಕೂಡ ತಿಗಳಾರಿ ಲಿಪಿಯನ್ನು ತುಳು ಭಾಷೆಯ ಸ್ವಂತ ಲಿಪಿ ಎಂದು ಸುಳ್ಳು ಹೇಳುವುದು ತುಳುನಾಡಿಗೆ ಕಳಂಕದ ವಿಚಾರವಾಗಿದೆ ,ಡಾ.ವೆಂಕಟ್ರಾಜ ಪುಣಿಚಿತ್ತಾಯ,ಡಾ.ವಿಘ್ನರಾಜ ಭಟ್ ,ಡಾ.ಪದ್ಮನಾಭ ಕೇಕುಣ್ಣಾಯ ಮೊದಲಾದ ತುಳು ವಿದ್ವಾಂಸರು ಕೂಡ. ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ ,
ತುಳು ಅಕಾಡೆಮಿ ವೆಬ್ ನಲ್ಲಿ ಕೂಡ ತುಳು ಭಾಷೆಗೆ ಸ್ವಂತ ಲಿಪಿ ಇಲ್ಲ ,ತುಳು ಭಾಷೆ ಬರವಣಿಗೆಗೆ ತಿಗಳಾರಿ ಲಿಪಿಯನ್ನು ಬಳಸುತ್ತಿದ್ದರು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ

ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಹೊರತು ಬೇರೆ ಬೇರೆಯಲ್ಲ © ಡಾ ಲಕ್ಷ್ಮೀ ಜಿ ಪ್ರಸಾದ

ಅನೇಕರು ತಿಗಳಾರಿ/ ತುಳು ಲಿಪಿ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಮೆಸೆಂಜರ್ ಮೂಲಕ ,ಫೋನ್ ಮೂಲಕ ವಾಟ್ಸಪ್ ಕೇಳುವ ಎಲ್ಲರಿಗೆ ಉತ್ತರಿಸಲು ಸಮಯದ ಸಮಸ್ಯೆ ಉಂಟಾಗಿದೆ ಅಲ್ಲದೆ  ಹೆಚ್ಚಿನವರಿಗೆ ಬ್ಲಾಗ್ ಲಿಂಕ್ ಓಪನ್ ಅಗುತ್ತಿಲ್ಲವಂತೆ .ಹಾಗಾಗಿ ಬ್ಲಾಗ್ ಬರಹವನ್ನು  ಪೂರ್ಣವಾಗಿ ಕಾಪಿ ಮಾಡಿ ಹಾಕಿರುವೆ ,ಓದಿ ಇಷ್ಟವಾದರೆ ಬೇರೆಡೆ ಹಂಚಿರಿ

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ?

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ವೆಬ್ ನಲ್ಲಿ ತುಳು ವರ್ಣ ಮಾಲೆಯಲ್ಲಿಯೇ ದೋಷಗಳು ಇವೆ.
ಇಲ್ಲಿ ಇದು ತಿಗಳಾರಿ ಲಿಪಿ ಎಂದು ಹೊರಗಡೆ ಪ್ರಸಿದ್ಧವಾಗಿದೆ ತುಳುನಾಡಿನ ಕೆಲವೆಡೆ ತುಳು ಲಿಪಿ ಎಂದು ಕರೆಯುತ್ತಾರೆ ,ಇದು ಮೂಲತಃ ತಮಿಳು ಬ್ರಾಹ್ಮಣರು ಸಂಸ್ಕೃತ ಬರೆಯಲು ಬಳಕೆಗೆ ತಂದ ಲಿಪಿ  ಎಂಬ ಸತ್ಯವನ್ನು  ಮುಚ್ಚಿಟ್ಟು  ತುಳು ಲಿಪಿ ಎಂದು ಮಾತ್ರ ಹೇಳಲಾಗಿದೆ  .

ಅದಿರಲಿ ತಿಗಳಾರಿ ಅಥವಾ ತುಳು ವರ್ಣಮಾಲೆಯಲ್ಲಿ ಹ್ರಸ್ವ ಎ ಒ ಸ್ವರಗಳಿಲ್ಲ ಇಲ್ಲಿ ತಿಗಳಾರಿ / ತುಳು ಲಿಪಿ ಯಲ್ಲಿ ರುವ ದೀರ್ಘ ಏ ಓ ಗಳನ್ನು ಬರೆದು ಅದರ ಕೆಳಗಡೆ ಹ್ರಸ್ವ ಎ ಒ ಎಂದು ಕನ್ನಡ ದಲ್ಲಿ ಬರೆದಿದ್ದಾರೆ ಕಳೆದ ವರ್ಷ ಏಳೆಂಟು ಲಿಪಿ ತಜ್ಞರು ಬಂದು ಏನೋ ವಿಚಾರ ಮಾಡಿದ್ದಾರಂತೆ ಆದರೂ ತುಳು ಅಕಾಡೆಮಿ ವೆಬ್ ನಲ್ಲಿ ಆದ ಇಷ್ಟು ದೊಡ್ಡ ಪ್ರಮಾದವನ್ನೇ ತಿದ್ದಿಲ್ಲ ,ತುಳು ಲಿಪಿ/ ತಿಗಳಾರಿ ಲಿಪಿ ಬಗ್ಗೆ ಒಂದು ಸಾಲಿನ ಮಾಹಿತಿ ಕೂಡಾ ಇಲ್ಲ ಇರುವ ವರ್ಣಮಾಲೆಯಲ್ಲಿ ಇಷ್ಟು ದೊಡ್ಡ ತಪ್ಪು ಯಾರಿಗೆ ಹೇಳೋಣ ? ರಿಜಿಸ್ಟ್ರಾರ್ ಗೆ ಈ ಬಗ್ಗೆ ಪೋನ್ ಮಾಡಿದರೆ ಬರೆದು ತಿಳಿಸಿ ಎಂಬ ಉತ್ತರ ಸಿಕ್ಕಿದೆ.
ಆದರೆ ತುಳು ಅಕಾಡೆಮಿ ವೆಬ್ ನಲ್ಲಿಯೇ ತುಳು ಬರೆಯಲು ತಿಗಳಾರಿ ಲಿಪಿ ಯನ್ನು ಬಳಸುತ್ತಿದ್ದರು ಎಂಬ ಮಾಹಿತಿ ಇದೆ.
ಹಾಗಾಗಿ ಈ ಲಿಪಿ ಬಗ್ಗೆ ಮಾಹಿತಿಗೆ ಇಲ್ಲಿ ಓದಿ

ತುಳು ಭಾಷೆಯನ್ನು ಅಪಭ್ರಂಶಗೊಳಿಸಿ ವಿರೂಪ ಗೊಳಿಸಬೇಡಿ

ಭಾಷೆಯೊಂದಕ್ಕೆ ಲಿಪಿ ಇರಲೇ ಬೇಕೆಂದೇನೂ ಇಲ್ಲ ಜಗತ್ತಿನ ಹೆಚ್ಚಿನ ಭಾಷೆಗಳಿಗೆ ಸ್ವಂತ ಲಿಪಿಯಿಲ್ಲ ನಮ್ಮ ರಾಷ್ಟ್ರೀಯ ಭಾಷೆ ಹಿಂದಿ ಪ್ರಾಚೀನ ಭಾಷೆ ಸಂಸ್ಕೃತ ಜನಪ್ರಿಯ ಭಾಷೆ ಇಂಗ್ಲಿಷ್ ಗೂ ಸ್ವಂತ ‌ಲಿಪಿಯಿಲ್ಲ ಹಿಂದಿ ಸಂಸ್ಕೃತ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಷೆಗಳಿಗೆ ನಾಗರಿ ಲಿಪಿಯನ್ನು ಬಳಸುತ್ತಾರೆ ಇಂಗ್ಲಿಷ್ ಗೆ ರೋಮ್ ಲಿಪಿ ಬಳಸುತ್ತಾರೆ
ಈ ಹಿಂದೆ ಸಂಸ್ಕೃತ ಬರೆಯಲು ತಿಗಳಾರಿ ಲಿಪಿಯನ್ನು ಬಳಕೆ ಮಾಡುತ್ತಿದ್ದು ಅದನ್ನು  ತುಳುನಾಡಿನಲ್ಲಿ ಯೂ ಸಂಸ್ಕೃತ ದ ವೇದ ಮಂತ್ರಗಳನ್ನು ಬರೆಯಲು  ತುಳುನಾಡಿನ ಹವ್ಯಕ ,ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬಳಕೆ ಮಾಡಿದ್ದಾರೆ  ಜೊತೆಗೆ ಉತ್ತರ ಕನ್ನಡದ ಶಿವಮೊಗ್ಗ ಕೆಳದಿ ತಮಿಳುನಾಡಿನ ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ತುಳು ಬ್ರಾಹ್ಮಣರು ಸಂಸ್ಕೃತ ವೇದ ಮಂತ್ರಗಳನ್ನು ಬರೆಯಲು ಬಳಸಿದ್ದಾರೆ ಇದಕ್ಕೆ ಮೊದಲಿನಿಂದಲೂ ತಿಗಳಾರಿ ಲಿಪಿ ಎಂದು ಕರೆಯುತ್ತಾ ಇದ್ದರು ತುಳು ಲಿಪಿ ಎಂಬ ಹೆಸರೂ ಕೆಲವರು ಬಳಸಿದ್ದಾರೆ   ಆದರೆ  ಇದು ಪ್ರಸ್ತುತ ತುಳು ಭಾಷೆಯ ಬರವಣಿಗೆಗೆ ಸೂಕ್ತವಾಗಿಲ್ಲ ಇದರಲ್ಲಿ ತುಳು ಭಾಷೆಯಲ್ಲಿರುವ ಹ್ರಸ್ವ. ಎಒಗಳು ಇಲ್ಲ ಆದ್ದರಿಂದಾಗಿ  ಈ ಲಿಪಿಯಲ್ಲಿ ತುಳು ಭಾಷೆ ಎಂದು ಬರೆಯಲು ಸಾಧ್ಯವೇ ಇಲ್ಲ ಬದಲಿಗೆ ತುಳು ಭಾಷೇ ಎಂದು ಬರೆಯಬೇಕಾಗುತ್ತದೆ ಎಣ್ಣೆ ಬದಲು ಏಣ್ಣೆ ಪೊಣ್ಣು ಬದಲು ಪೋಣ್ಣು ಡೆನ್ನಾನ ಬದಲು ಡೇನ್ನಾನ ಎಡ್ಡೆ ಬದಲು ಏಡ್ಡೆ ತೆನೆ ಬದಲು ತೇನೆ ಕೊರಳು ಬದಲು ಕೋರಳು ಕೊಪ್ಪ ಬದಲು ಕೋಪ್ಪ ಕೊರಗಜ್ಜ ಬದಲು ಕೋರಗಜ್ಜ ಕೆರೆ ಬದಲು ಕೇರೆ  ಬರೆಯಬೇಕಾಗುತ್ತದೆ ಕೆರೆ ಕೇರೆಯಾದಾಗ ಕೆಬಿ ಕೇಬಿಯಾಗಿ,ಕೆಪ್ಪೆ ಕೇಪ್ಪೆಯಾಗಿ ಕೊಡಿ ಕೋಡಿಯಾಗಿ ,ಎರು ಏರು ಅಗಿ ,ಎರ್ಮ್ಮೆ ಏರ್ಮ್ಮೆಯಾಗಿ ಎಣ್ಮೆ ಏಣ್ಮೆಯಾಗಿ ಕೆಸರ್ ಕೇಸರ್ ಆಗಿ ರಾಮೆ ರಾಮೇ ಆಗಿ ಕೃಷ್ಷಪ್ಪೆ ಕೃಷ್ಣಪ್ಪೇ ಆಗಿ , ಪೊಸತು ಪೋಸತು ಪೊರ್ಲು ಬದಲು‌ ಪೋರ್ಲು ಆಗಿ ,ಬೆರ್ಮರ್ ಬೇರ್ಮರ್ ಆಗಿ ,ಪೊಡಿ ಬದಲು ಪೋಡಿಯಾಗಿ ಬೊಂಡ ಬದಲು ಬೋಂಡ ಅಗಿ ಕೊಡೆ ಕೋಡೆಯಾಗಿ ಬೆಲೆ ಬೇಲೆಯಾಗಿ ,ಕೆದು ಕೇದುವಾಗಿ ,ಕೆಮ್ಮು ಕೇಮ್ಮುವಾಗಿ ,ಎಡೆ ಏಡೆಯಾಗಿ ಅರ್ಥ ಅನರ್ಥವಾಗಿಬಿಡುತ್ತದೆ  ಯಾಕೆಂದರೆ ಈ ಲಿಪಿಯಲ್ಲಿ ಹ್ರಸ್ವ ಎ ಒ ಗಳು ಇಲ್ಲ‌ ಹೀಗೆ ಬಳಸಿದರೆ  ತುಳು ಭಾಷೆ ತನ್ನ ಮೂಲ ರೂಪವನ್ನು ಕಳೆದುಕೊಂಡು ಅಪಭ್ರಂಶ ಗೊಳ್ಳುತ್ತದೆ ಹಾಗಾಗಿ ಈಗ ಸಂಸ್ಕೃತ ವೇದ ಮಂತ್ರಗಳ ಬಳಕೆಗಾಗಿ ರೂಪುಗೊಂಡ ತಿಗಳಾರಿ ಲಿಪಿ/ ತುಳುಲಿಪಿ ಯನ್ನು ಪರಿಷ್ಕರಿಸಿ ಕಲಿಸುವ ಬಳಸುವ ಅಗತ್ಯವಿದೆ

ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಮಾತ್ರ ಬಳಕೆಗೆ ತಂದದ್ದಲ್ಲ ಹವ್ಯಕ ಚಿತ್ಪಾವನ ಕರಾಡ ಕೋಟ ಬ್ರಾಹ್ಮಣರು ಉತ್ತರ ಕನ್ನಡ ಶಿವಮೊಗ್ಗ ಕೆಳದಿಯ ಕನ್ನಡ ಬ್ರಾಹ್ಮಣರು,ಮೈಸೂರಿನ ಬೆಂಗಳೂರಿನ‌ಕೆಲವು ಬ್ರಾಹ್ಮಣ ಸಮುದಾಯಗಳು  ತಂಜಾವೂರು ಕಂಚಿಯ  ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ಧರ್ಮಸ್ಥಳ ದಲ್ಲಿ ಸಂಗ್ರಹವಾಗಿರುವ ಒಂದೂವರೆ ಸಾವಿರದಷ್ಟು ತಿಗಳಾರಿ / ತುಳು ಲಿಪಿ ಹಸ್ತಪ್ರತಿ ಗಳಲ್ಲಿ ಅನೇಕ ಹವ್ಯಕ ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬರೆದ ಅವರುಗಳ ಮನೆಯಲ್ಲಿ ಸಿಕ್ಕ ಹಸ್ತಪ್ರತಿ ಗಳಿವೆ ನಮ್ಮ ( ನಾವು ಹವ್ಯಕ ರು) ಮನೆಯಲ್ಲಿಯೂ ಅನೇಕ ತಿಗಳಾರಿ ಲಿಪಿ ಯ ಹಸ್ತಪ್ರತಿ ಗ್ರಂಥಳಿದ್ದು ಇವರಲ್ಲವು ಮಂತ್ರ ಪ್ರಯೋಗಗಳಾಗಿವೆ ಹವ್ಯಕರಲ್ಲಿ ಈ ಲಿಪಿಯಲ್ಲಿ ಹವ್ಯಕ ಭಾಷೆಯಲ್ಲಿ ಪತ್ರ ವ್ಯವಹಾರ ಕಡತ ನಿರ್ವಹಣೆಗಳಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಈ ಲಿಪಿಯಲ್ಲಿ ಬರೆದ ಹವ್ಯಕ ಕನ್ನಡ ದ ಪತ್ರಗಳು ನೂರಕ್ಕಿಂತ ಹೆಚ್ಚು ಇವೆ.ಇಲ್ಲೆಲ್ಲ ಈ ಲಿಪಿಯನ್ನು ತಿಗಳಾರಿ ಲಿಪಿ ಎಂದೇ ಕರೆಯುತ್ತಾರೆ.
ಇನ್ನು ಅದು ಬ್ರಾಹ್ಮಣರು ಬಳಕೆಗೆ ತಂದ ಲಿಪಿ ಎಂಬುದಕ್ಕೆ ಅದರಲ್ಲಿ ಸಿಕ್ಕ ಎಲ್ಲಾ ಕೃತಿಗಳನ್ನು ಬ್ರಾಹ್ಮಣರು ಬರೆದಿದ್ದು ಒಂದೇ ಒಂದು ಕೃತಿ ಬೇರೆಯವರು ಬರೆಯದಿರುವವುದು ಈಗಲೂ ಅದನ್ನು ಹೇಳಿಕೊಟ್ಟವರು ಬ್ರಾಹ್ಮಣರು ಎಂಬ ಆಧಾರವೇ ಸಾಕು
ಲಿಪಿ ರೂಪಿಸಲು ಎಷ್ಟು ಜನ ಇದ್ದಾರೆ ಎಂಬುದು ಮುಖ್ಯವಲ್ಲ ಅದನ್ನು ಯಾರು ಯಾಕೆ ಬಳಸಿದ್ದಾರೆ ಎಂಬುದು ಮುಖ್ಯ
ಇದರಲ್ಲಿ ತುಳು ಭಾಷೆಯ ಹ್ರಸ್ವ ಎಒ  ಅಕ್ಷರಗಳು ಇಲ್ಲ ಮತ್ತು ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ
ಅಲ್ಲದೆ ತುಳು ಭಾಷೆಯಾರು  ಕೃತಿಗಳು ಮಾತ್ರ ಆ ಲಿಪಿ ಯಲ್ಲಿ ಇರುವುದು ಅದರಲ್ಲಿ ಯೂ ಹ್ರಸ್ವ ಎ ಒ ಗಳು ಇಲ್ಲದ ಕಾರಣ ತುಂಬಾ ದೋಷಗಳಿವೆ ತುಳು ಕರ್ಣ ಪರ್ವ ವನ್ನು ಪುಣಿಚಿತ್ತಾಯ ರು ಈ ಹಿಂದೆ ನನಗೆ ಗೌರವ ಪ್ರತಿ ನೀಡಿದ್ದು ಅದರಲ್ಲಿ ಈ ದೋಷಗಳಿರುವುದನ್ನು ಅವರೂ ಹೇಳಿದ್ದಾರೆ
ಲಿಪಿಯೊಂದು ಇದ್ದಕ್ಕಿದ್ದಂತೆ ರೂಪು ಗೊಳ್ಳುವುದಿಲ್ಕ ಇದು ತಮಿಳಿನ ಗ್ರಂಥ ಲಿಪಿಯನ್ನು ಹೋಲುತ್ತಿದ್ದು ಅದರಿಂದ ರೂಪುಗೊಂಡಿದೆ ಗ್ರಂಥ ಲಿಪಿ ತುಳುನಾಡಿನಲ್ಲಿ ಇರಲಿಲ್ಲ ದಕ್ಷಿಣ ಭಾರತದ ್ಲ್ಲಿ ವೇದಾಧ್ಯಯನ ಕೇಂದ್ರ ಇದ್ದದ್ದು ತಮಿಳುನಾಡಿನ ತಂಜಾವೂರು ಮತ್ತು ಕಂಚಿಗಳಲ್ಲಿ
ಅಲ್ಲಿನ ತಮಿಳು ಲಿಪಿಯಲ್ಲಿ ಮುವತ್ತಾರು ಅಕ್ಷರಗಳು ಮಾತ್ರ ಇದ್ದು ಅದು ಸಂಸ್ಕೃತ ವೇದಾ ಮಂತ್ರಗಳ ಬರವಣಿಗೆಗೆ ಸೂಕ್ತ ವಾಗಿರಲಿಲ್ಲ ಹಾಗಾಗಿ ಅವರು ತಮಿಳು ಲಿಪಿ ಯನ್ನು ಪರಿಷ್ಕರಿಸಿ ಸಂಸ್ಕೃತ ಕ್ಕೆ ಸೂಕ್ತ ವಾದ ಗ್ರಂಥ ಲಿಪಿ ರೂಪಿಸಿದರು ಅಲ್ಲಿ ನಾಗರಿ ಲಿಪಿ ಪರಿಚಿತವಾಗಿರಲಿಲ್ಲಅಲ್ಲಿಗೆ ವೇದಾಧ್ಯಯನ ಮಾಡಲು ಹೋದ ದಕ್ಷಿಣ ಕನ್ನಡ ಉತ್ತರ ಕನ್ನಡ ದ  ಬ್ರಾಹ್ಮಣ ರು ಅಲ್ಲಿನ ಗುರುಗಳಿಂದ ಗ್ರಂತ ಲಿಪಿ ಕಲಿತು ವೇದ ಮಂತ್ರಗಳ ನ್ನು ಅದರಲ್ಲಿ ಬರೆದರು ನಂತರ ಕಾಲಾಂತರದಲ್ಲಿ ಅದು ಬದಲಾಗುತ್ತಾ ತಿಗಳಾರಿ ಲಿಪಿ ಆಯಿತು ಹಾಗಾಗಿ ಅದನ್ನು ತಿಗಳರ ಎಂದರೆ ತಮಿಳರ ಆರ್ಯ ಎಂದರೆ ಸಂಸ್ಕೃತ ಲಿಪಿ ಎಂದು ಕರೆದರು ಅದು ಹ್ರಸ್ವ ಗೊಂಡು ತಿಗಳಾರಿ ಅಯಿತು ಇದನ್ನು ಬಳಕೆ ಮಾಡಿದವರಲ್ಲಿ ಕೋಟ ಹವ್ಯಕ ಚಿತ್ಪಾವನ ತುಳು  ಕರಾಡ ಬ್ರಾಹ್ಮಣರು ಶಿವಮೊಗ್ಗ ಕೆಳದಿ ಉತ್ತರ ಕನ್ನಡ ದ ಕನ್ನಡ ಬ್ರಾಹ್ಮಣರು ತಂಜಾವೂರು ಕಂಚಿಯ ಬ್ರಾಹ್ಮಣರು  ಸೇರಿದ್ದಾರೆ ಇವರಲ್ಲಿ ತುಳು ಬ್ರಾಹ್ಮಣರು ಕೇರಳಕ್ಕೆ ದೇವಸ್ಥಾನ ಗಳ ಪೂಜೆಗೆ ಹೋದಾಗ ತಿಗಳಾರಿ ಲಿಪಿ ಅಲ್ಲಿ ಹರಡಿ ಅಲ್ಲಿ ನವರು ಅದನ್ನು ಮಲೆಯಾಳ ಭಾಷೆಗೆ ಸೂಕ್ತ ವಾಗುವಂತೆ ಪರಿಷ್ಕರಿಸಿ ಬಳಸಿದರು ಅವರು ಆರಂಭದಲ್ಲಿ ಅದನ್ನು ತುಲುವನತ್ತಿಲ್ ಎಂದರೆ ತುಲುವರ ಲಿಪಿ ಎಂದು ಕರೆದಿದ್ದು ಅವರು ರೂಪಿಸಿದ ಲಿಪಿ ಯನ್ನು ತುಲು ಮಲೆಯಾಳ ಲಿಪಿ ಎಂದು ಕರೆದು ಕಾಲಾಂತರದಲ್ಲಿ ಮಲೆಯಾಳ ಲಿಪಿ ಎಂದು ಮಾತ್ರ ಹೆಸರು ಉಳಿಯಿತು

ಸಂಸ್ಕೃತ ಭಾಷೆಗೆ ಸ್ವಂತ ಲಿಪಿ ಇಲ್ಲ ಉತ್ತರದಲ್ಲಿ ನಾಗರಿ ಲಿಪಿ ತಮಿಳುನಾಡಿನಲ್ಲಿ ಗ್ರಂಥ ಲಿಪಿ ತೆಲುಗರು ತೆಲುಗು ಲಿಪಿ ಯನ್ನು ಸಂಸ್ಕೃತ ಕ್ಕೆ ಬಳಸುತ್ತಾ ಇದ್ದರು
ಅಕಾಡೆಮಿ ಗೆ ಹೇಳಿ ಲಿಪಿ ಯ ಇತಿಹಾಸವನ್ನು ತಿಳಿಸಿ ಪರಿಷ್ಕರಿಸಿ ಬಳಕೆಗೆ ತರುವ ಕೆಲಸ ಆಗಬೇಕಿದೆ ಅಕಾಡೆಮಿ ವೆಬ್ ಹಾಕಿದ ತುಳು ವರ್ಣ ಮಾಲೆ ಚಾರ್ಟ್ ನಲ್ಲಿ ತಪ್ಪಿದೆ ಹಾಗೆ ನೋಡಿದರೆ ವಿದ್ಯಾ ಶ್ರೀ ಅವರು ಪ್ರಕಟಿಸಿದ ವರ್ಣಮಾಲೆ ಸರಿ ಇದೆ .ತಪ್ಪನ್ನು ತಿದ್ದಿ ಪರಿಷ್ಕರಿಸದೆ ಬಳಸಿದರೆ ತುಳು ಭಾಷೆ ಅಪಭ್ರಂಶ ಗೊಂಡು ವಿರೂಪ ಗೊಳ್ಳುತ್ತದೆ

1 ತುಳುನಾಡಿನ ವ್ಯಾಪ್ತಿ ಉಡುಪಿ ಕಾಸರಗೋಡು ದ.ಕ ಜಿಲ್ಲೆ ತಿಗಳಾರಿ ಲಿಪಿ ತಮಿಳುನಾಡಿನ ತಂಜಾವೂರು ಕಂಚಿ ಧರ್ಮ ಪುರ ಕೃಷ್ಣ ಪುರ ಗಳಲ್ಲಿ ಬಳಕೆಇದೆ ಕರ್ನಾಟಕ ದಲ್ಲಿ ಉತ್ತರ ಕನ್ನಡ ಶಿವಮೊಗ್ಗ ಮಲೆನಾಡಿನಲ್ಲಿ ಬಳಕೆ ಇತ್ತು ತುಳು ಭಾಷೆ ಮತ್ತು  ತುಳುವರು ಇಲ್ಲದ ಕಡೆಯೂ ಬಳಕೆಯಲ್ಲಿತ್ತು

2 ಈ ಲಿಪಿ ಯಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚಿನ ಕೃತಿಗಳು ಸಿಕ್ಕಿದ್ದು ಅವೆಲ್ಲವೂ ಸಂಸ್ಕೃತ ವೇದ ಮಂತ್ರಗಳು ಆಗಿವೆ,ಕೇವಲ ಏಳು‌ ತುಳು ಕೃತಿಗಳು ಮಾತ್ರ ಈ ಲಿಪಿಯಲ್ಲಿ ಇವೆ

3 ಇದು ತುಳು ಭಾಷೆಗೆ ಸೂಕ್ತ ವಾಗಿಲ್ಲ ಇದರಲ್ಲಿ ತತುಳುವಿನ ಎಲ್ಲ ಅಕ್ಷಗಳು‌ಇಲ್ಲ  ಇದರಲ್ಲಿ ತುಳುವಿನಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ತುಳುವಿನಲ್ಲಿ ಇಲ್ಲದೆ ಇರುವ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ

4 ಇದು ಸಂಸ್ಕೃತ ವನ್ನು ಬರೆಯಲು ರೂಪುಗೊಂಡ ಲಿಪಿಯಾಗಿದ್ದು ಸಂಸ್ಕೃತ ದ ಎಲ್ಲ ಅಕ್ಷರಗಳು ಇವೆ ಉದಾ ಸಂಸ್ಕೃತ ದಲ್ಲಿ ದೀರ್ಘ ಋ ಇದೆ ಇದರಲ್ಲೂ ಇದೆ ಲೃ ಅನ್ನುವ ವಿಶಿಷ್ಠವಾದ ಅಕ್ಷರ ಸಂಸ್ಕೃತ ದಲ್ಲಿದೆ ಇದರಲ್ಲೂ ಅದು ಇದೆ ಸಂಸ್ಕೃತ ದಲ್ಲಿ ಹ್ರಸ್ವ ಎ ಒ ಗಳು ಇಲ್ಲ ಹಾಗಾಗಿ ಇದರಲ್ಲೂ ಇಲ್ಲ

5 ಇದರಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಂಸ್ಕೃತ ದಲ್ಲಿವೆ ಅವುಗಳಲ್ಲಿ 99 .9% ಶೇಕಡ ವೇದ ಮಂತ್ರಗಳು

6 ಒಂದು ಲಿಪಿ ತನ್ನಿಂದ ತಾನೇ ಸೃಷ್ಟಿ ಯಾಗುವುದಿಲ್ಲ ಬಳಕೆಯಲ್ಲಿರುವ ಒಂದು ಲಿಪಿ ಬದಲಾಗುತ್ತಾ ಕಾಲಾಂತರದಲ್ಲಿ ಇನ್ನೊಂದು ಲಿಪಿ ಯಾಗುತ್ತದೆ ಮೂಲ ಲಿಪಿಗೂ ಹೊಸ ಲಿಪಿಗೂ 50- 60% ವ್ಯತ್ಯಾಸ ಉಂಟಾದಾಗ ಅದನ್ನು ಇನ್ನೊಂದು ಲಿಪಿಯಾಗಿ ಗುರುತಿಸುತ್ತಾರೆ ಆ ಲಿಪಿ ಬೆಳೆದ ಪರಿಸರದಲ್ಲಿ ಅದಕ್ಕೆ ಮೂಲವಾಗಿರುವ ಲಿಪಿ ಇರಲೇ ಬೇಕು ತಿಗಳಾರಿ ಲಿಪಿ ಗೆ ಮೂಲವಾದ ಆರ್ಯ ಎಳತ್ತು /ಗ್ರಂಥ ಲಿಪಿ ತಮಿಳುನಾಡಿನ ಪರಿಸರದಲ್ಲಿ ಪ್ರಚಲಿತವಿದೆ ತುಳುನಾಡಿನಲ್ಲಿ ಇಲ್ಲ

7 ತುಳು ಲಿಪಿಯನ್ನು ವಿದ್ಯಾ ಶ್ರೀ ಅವರಿಗೆ ಹೇಳಿಕೊಟ್ಟ ಲಿಪಿ ತಜ್ಞ ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ, ಬೇರೆ ಬೇರೆಯಲ್ಲ ತಿಗಳಾರಿ ಎಂದು ಬರೆದುಬ್ರಾಕೆಟ್ ಒಳಗೆ ತುಳು ಲಿಪಿ ಎಂದು ಅಥವಾ ತುಳು ಲಿಪಿ ಎಂದು ಬರೆದು ಬ್ರಾಕೆಟ್ ಒಳಗೆ ತಿಗಳಾರಿ ಲಿಪಿ ಎಂದು ಬರೆಯಬೇಕು ಎಂದು ತಿಳಿಸಿದ್ದಾರೆ. (ಅವರು ಹೀಗೆ ಹೇಳಿದ ಬಗ್ಗೆ ದಾಖಲೆ ಇದೆ)ಆದರೆ ಇವರಿಂದ ಲಿಪಿ ಕಲಿತು ಪ್ರಚಾರ ಮಾಡುವ ತರಗತಿ ಮಾಡುವ ವಿದ್ಯಾ ಅವರು‌ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ತಪ್ಪು ಮಾಹಿತಿ ಹರಡುತ್ತಿದ್ದಾರೆ ಜೊತೆಗೆ ಬ್ರಾಹ್ಮಣರು ತುಳು ಲಿಪಿಯನ್ನು ತಿಗಳಾರಿ ಎಂದು ಕರೆದು ಅಡಗಿಸಿ ಇಟ್ಟು ತುಳುವರಿಗೆ ಸಿಗದ ಹಾಗೆ ಮಾಡಿದರು ಎಂದು ಹೇಳುತ್ತಾ ಜನರಲ್ಲಿ ಬ್ರಾಹ್ಮಣ ದ್ವೇಷ ಬಿತ್ತಿ ಸಾಮಾಜಿಕ ಸ್ವಾಸ್ಥ್ಯ ವನ್ನು ಹಾಳುಗೆಡವುತ್ತಾ ಇದ್ದಾರೆ
8 ಲಿಪಿ ತಜ್ಞರಾದ ಡಾ .ಪದ್ಮನಾಭ ಕೇಕುಣ್ಣಾಯ ಅವರು ತುಳುವಿಗೆ ಲಿಪಿ ಇರುವುದಾದರೂ ಅದು ಮೂಲತ ತಿಗಳಾರಿ ಲಿಪಿ ಹೊರಗಡೆ ಅದು ತಿಗಳಾರಿ ಎಂದು ಪ್ರಸಿದ್ದಿ ಪಡೆದಿದೆ ಹಾಗಾಗಿ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ಹೇಳುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ತುಳು ಲಿಪಿ ಎಂದು ಮೊದಲಿಗೆ ಗುರುತಿಸಿದ ಡಾ.ವೆಂಕಟ್ರಟಜ ಪುಣಿಚಿತ್ತಾಯರು ಕೂಡ ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ ಎಂದು ಅವರಿಗೆ ಆತ್ಮೀಯ ರಾಗಿದ್ದ ಡಾ.ಪದ್ಮನಾಭ ಕೇಕುಣ್ಣಾಯ ತಿಳಿಸಿದ್ದಾರೆ.
9 ಲಿಪಿ ತಜ್ಞರಾದ ಡಾ.ಗೀತಾಚಾರ್ಯ ತುಳುವಿಗೆ ಲಿಪಿ ಇರಲಿಲ್ಲ, ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಯನ್ನು ತುಸು ಮಾರ್ಪಡಿಸಿ ತುಳು ಲಿಪಿ ರೂಪಿಸಿದರು ಎಂದು ಹೇಳಿದ್ದಾರೆ
10 ಲಿಪಿ ತಜ್ಞರಾದ ಡಾ.ಗುಂಡಾ ಜೋಯಿಸ್ ಕೆಳದಿ ವೆಂಕಟೇಶ ಜೋಯಿಸ್ ಡಾ.ಪಿವಿ ಕೃಷ್ಣ ಮೂರ್ತಿ ಮೊದಲಾದವರು ಅದು ತಿಗಳಾರಿ ಲಿಪಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ
11 ಇದರಲ್ಲಿ ತುಳು ಭಾಷೆಯ ಹ್ರಸ್ವ ಎ ಒ ಗಳಿಗೆ ಅಕ್ಷರ ಇಲ್ಲ ಮತ್ತು ಸಂಸ್ಕೃತ ದಲ್ಲಿ ಮಾತ್ರ ಇರುವ ದೀರ್ಘ ಋ ಇದೆ ಅಲ್ಲದೆ ತುಳುವಿನ ವಿಶಿಷ್ಟ ಉಚ್ಚಾರಣೆಗಳಿಗೆ ರೇಖಾ ಸಂಕೇತ ಅಥವಾ ಅಕ್ಷರಗಳು ಇಲ್ಲ
12 ಪ್ರಸ್ತುತ ತಿಗಳಾರಿ ಲಿಪಿಯ ಸುಮಾರು ಹತ್ತು  ಸಾವಿರದ ಹಸ್ತ ಪ್ರತಿಗಳು ಸಿಕ್ಕಿದ್ದು ಇವುಗಳು ತಮಿಳುನಾಡಿನ  ತಂಜಾವೂರು, ಕಂಚಿ ,ಧರ್ಮಪುರಿ,ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ,,ಕಾಸರಗೋಡು ಉಡುಪಿ ದಕ್ಷಿಣ ಕನ್ನಡ ಜಿಲ್ಲೆ, ಕೆಳದಿ ಮೊದಲಾದ ಕಡೆ ಸಿಕ್ಕಿದವುಗಳಾಗಿವೆ ಇವುಗಳಲ್ಲಿ ಏನಿದೆ ಎಂದು ತಿಗಳಾರಿ ಬಲ್ಲವರು ಓದಿದ್ದು .ಇವೆಲ್ಲವೂ ಸಂಸ್ಕೃತ ಭಾಷೆಯಲ್ಲಿಬರೆದ ವೇದ ಮಂತ್ರ ಪುರಾಣ ಕೃತಿಗಳು ಆಗಿವೆ ಎಂದು ತಿಳಿಸಿದ್ದಾರೆ
13 ತುಳುನಾಡಿನಲ್ಲಿ ಸಿಕ್ಕ ಹಸ್ತ ಪ್ರತಿಗಳು ಸುಮಾರು ಒಂದೂವರೆ ಸಾವಿರ ಇವುಗಳನ್ನು ಕೂಡ ತೆರೆದು ಓದಿದ್ದು ಇವುಗಳಲ್ಲಿ ಆರು ತುಳು ಭಾಷೆಯ ಕೃತಿಗಳು ,ಒಂದು ಕನ್ನಡ ಭಾಷೆಯ ಜನಪದ ಹಾಡುಗಳು ಬಿಟ್ಟರೆ ಉಳಿದವುಗಳೆಲ್ಲ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಎಂದು ಧರ್ಮಸ್ಥಳದ ಹಸ್ತ ಪ್ರತಿ ಅಧ್ಯಯನ ಕೇಂದ್ರದ ಮುಖ್ಯಸ್ಥ ರಾದ ಡಾ ವಿಘ್ನರಾಜ ಭಟ್ ತಿಳಿಸಿದ್ದಾರೆ
15 ತಿಗಳಾರಿ ಲಿಪಿ ತೀರ ಇತ್ತೀಚಿನ ವರೆಗೂ ಬಳಕೆಯಲ್ಲಿತ್ತು ಹಾಗಾಗಿ ಅದರಲ್ಲಿನ ಹತ್ತು ಸಾವಿರಕ್ಕಿಂತ ಹೆಚ್ಚಿನ ಸಂಸ್ಕೃತ ಹಸ್ತಪ್ರತಿ ಗಳು ಲಭ್ಯವಾಗಿವೆ ಆದರೆ ತುಳು ಭಾಷೆಯ ಕೃತಿಗಳು ಲಭಿಸಿದ್ದು ಕೇವಲ ಆರು
16 ತುಳುನಾಡಿನಲ್ಲಿ ಈ ಲಿಪಿಯ ಒಂದೂವರೆ ಸಾವಿರದಷ್ಟು ಸಂಸ್ಕೃತ ಹಸ್ತಪ್ರತಿ ಗ್ರಂಥಗಳು ಸಿಕ್ಕಿದೆ ಆದರೆ ತುಳುವಿನದ್ದು ಸಿಕ್ಕಿದ್ದು ಆರು ಮಾತ್ರ ಒಂದೊಮ್ಮೆ ಇದುರಲ್ಲಿ ತುಳು ಭಾಷೆಯ  ಬರವಣಿಗೆ ಇರುತ್ತಿದ್ದರೆ ಕೊನೆಯ ಪಕ್ಷ ತುಳುನಾಡಿನಲ್ಲಿ ಸಿಕ್ಕ ಹಸ್ತಪ್ರತಿ ಗಳಲ್ಲಿಯಾದರೂ ಹೆಚ್ಚಿನ ಕೃತಿಗಳು ತುಳುಭಾಷೆಯದು ಆಗಿರುತ್ತಿತ್ತು ,ತಿಗಳಾರಿ ಇತ್ತೀಚಿನ ವರೆಗೂ ಬಳಕೆಯಲ್ಲಿದ್ದ ಕಾರಣ ತುಳುವಿನ  ಎಲ್ಲಾ ಹಸ್ತಪ್ರತಿ ಗಳು ಕಳೆದು ಹೋಗಿರುವ ಸಾಧ್ಯತೆ ಇಲ್ಲ ಹಾಗೆ ಕಳೆದು ಹೋಗುತ್ತಿದ್ದರೆ ಇದೇ ಲಿಪಿಯ ಲ್ಲಿ ಬರೆದ ಸಂಸ್ಕೃತ ವೇದ ಮಂತ್ರಗಳ ಹಸ್ತ ಪ್ರತಿಗಳು  ಕೂಡ ಉಳಿಯುತ್ತಿರಲಿಲ್ಲ ಹಾಗಾಗಿ ತುಳುಭಾಷೆಯಲ್ಲಿ ಲಿಖಿತ ಸಾಹಿತ್ಯ ರಚನೆ ಆದದ್ದು ತೀರಾ ತೀರಾ ಕಡಿಮೆ ಬರವಣಿಗೆ ಇಲ್ಲದೆ ಇದ್ದಾಗ ಲಿಪಿ ಇರುವ ಸಾಧ್ಯತೆ ಇಲ್ಲವೇ ಇಲ್ಲ .ಬನ್ನಂಜೆ ಗೋವಿಂದ ಆಚಾರ್ಯರು ತೌಳವ ಬ್ರಾಹ್ಮಣರು ಇದನ್ನು ಬಳಕೆಗೆ ತಂದ ಕಾರಣ ಇದಕ್ಕೆ  ತುಳು ಲಿಪಿ ಎಂದು ಹೆಸರು ಇದನ್ನು ಬೇರೆಕಡೆ ತಿಗಳಾರಿ ಎಂದು ಕರೆಯುತ್ತಾರೆ. ಇದು ತುಳು ಭಾಷೆಯ ಸ್ವಂತ  ಲಿಪಿ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

17 ಈ ಎಲ್ಲಾ ಆಧಾರಗಳು  ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಬೇರೆ ಬೇರೆಯಲ್ಲ  ಎಂದು ಪ್ರೂವ್ ಮಾಡುತ್ತವೆ ಇದು ಮೂಲತ ತಿಗಳಾರಿ ಲಿಪಿ ತುಳುನಾಡಿನ ಕೆಲವೆಡೆ ಮಾತ್ರ ಇದನ್ನು ತುಳು ಲಿಪಿ ಎಂದು ಕರೆದಿದ್ದಾರೆ
18 "ತಿಗಳಾರಿ ಲಿಪಿ ಯನ್ನು ತಮಿಳು ನಾಡಿನ ತಂಜಾವೂರು ಕಂಚಿಗಳಲ್ಲಿ ವೇದಾಧ್ಯಯನ ‌ಮಾಡಲು ಹೋದ ತುಳುನಾಡು ಹಾಗೂ ಮಲೆನಾಡಿನ ಬ್ರಾಹ್ಮಣರು ಕಲಿತು ಬಳಕೆಗೆ ತಂದ ಕಾರಣ ಅದು ತುಳು ನಾಡು ಮಲೆನಾಡಿನ ಪರಿಸರದಲ್ಲಿಯೂ ಹರಡಿತು ,ತುಳುನಾಡಿನ ಕೆಲವೆಡೆ ಅದನ್ನು ತುಳು ಲಿಪಿ ಎಂದು ಕರೆದಿದ್ದಾರೆ "ಎಂದು ಡಾ ವಿಘ್ನರಾಜ ಭಟ್ ಡಾ ವೆಂಕಟೇಶ ಜೋಯಿಸ್ ಡಾ ಗುಂಡಾ ಜೋಯಿಸ್ ಡಾ ದೇವರ ಕೊಂಡಾ ರೆಡ್ಡಿ ಡಾ ಪದ್ಮನಾಭ ಕೇಕುಣ್ಣಾಯ ಡಾ ವೆಂಕಟ್ರಾಜ ಪುಣಿಚಿತ್ತಾಯ ,ಡಾ ಬನ್ನಂಜೆ ಗೋವಿಂದಾಚಾರ್ಯರ ಮೊದಲಾದ ಲಿಪಿ ತಜ್ಞರು, ವಿದ್ವಾಂಸರು ಅಭಿಪ್ರಾಯಪಡುತ್ತಾರೆ
19 ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದದ್ದು ಅಲ್ಲ ತುಳುನಾಡ ಹವ್ಯಕ ಬ್ರಾಹ್ಮಣರು ಕೋಟ ಕರಾಡ ಚಿತ್ಪಾವನ ಬ್ರಾಹ್ಮಣರು, ಶಿವಮೊಗ್ಗ ಉತ್ತರ ಕೆಳದಿ ಯ ಬ್ರಾಹ್ಮಣರು ಈ ಲಿಪಿಯನ್ನು ಬಳಕೆ ಮಾಡುತ್ತಿದ್ದರು ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆ ಮಾಡುತ್ತಿದ್ದರು ತುಳುನಾಡಿನಲ್ಲಿ ಸುಮಾರು ಒಂದೂವರೆ ಸಾವಿರ ಸಂಸ್ಕೃತ ಹಸ್ತ ಪ್ರತಿ ಗಳು ಈ ಲಿಪಿಯಲ್ಲಿ ಸಿಕ್ಕಿದ್ದು ಅದರಲ್ಲಿ ಹವ್ಯಕ ಕೋಟ ಚಿತ್ಪಾವನ ಕರಾಡ ಮರಾಠಿ ಬ್ರಾಹ್ಮಣರು ಬರೆದ ಕೃತಿಗಳು ಇವೆ ಇವುಗಳಲ್ಲಿ ತುಳುಭಾಷೆಯಲ್ಲಿ ಇರುವ ಕೃತಿಗಳು ಕೇವಲ ಏಳು ಮಾತ್ರ .ಈ ಲಿಪಿಯ ಹತ್ತ ಸಾವಿರಕ್ಕಿಂತ ಹೆಚ್ಚು ಹಸ್ತಪ್ರತಿ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಸಿಕ್ಕಿದ್ದು ಇವು ಶಿವಮೊಗ್ಗ ಕೆಳದಿ ರಾಮಚಂದ್ರಾಪುರ ಉತ್ತರ ಕರ್ನಾಟಕ ದ ತುಳುವೇತರ ಬ್ರಾಹ್ಮಣ ರ ಮನೆಗಳಲ್ಲೂ ಸಿಕ್ಕಿವೆ ತುಳು ಬ್ರಾಹ್ಮಣರ ಬರೆದವುಗಳೂ ಇವೆ  ಮೈಸೂರು ನಲ್ಲೂ ಬೆಂಗಳೂರಿನಲ್ಲಿ ತಮಿಳುನಾಡಿನ ತಂಜಾವೂರು  ಕಂಚಿ ಯ ತುಳುವರಲ್ಲದ ಇತರ ಬ್ರಾಹ್ಮಣರ ಮನೆಗಳು ಬರೆದಿರುವುದು ಸಿಕ್ಕಿವೆ. ಹವ್ಯಕ ಬ್ರಾಹ್ಮಣರು ಹವ್ಯಕರ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡುತ್ತಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಇಂಥಹ ನೂರಕ್ಕಿಂತ ಹೆಚ್ಚಿನ ಪತ್ರಗಳಿವೆ ಹಾಗಾಗಿ ಇದನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದರು ಎನ್ನುವುದು ಸರಿಯಲ್ಲ

20 ವಿದ್ಯಾ ಶ್ರೀ ಯವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಬೇರೆ ಬೇರೆ ಎಂಬುದಕ್ಕೆ ಆಧಾರವಾಗಿ ದೇವರಾಜ ಸ್ವಾಮಿ ಅವರ ಕೃತಿಯಲ್ಲಿನ ತಿಗಳಾರಿ ಮತ್ತು ತುಳು ವರ್ಣಮಾಲೆ ಚಿತ್ರ ಚಿತ್ರವನ್ನು ಪೇಸ್ ಬುಕ್ ನಲ್ಲಿ ಹಾಕಿದ್ದು ಅದರಲ್ಲಿನ ತಿಗಳಾರಿ ಲಿಪಿಯನ್ನು ವಿದ್ಯಾ ಶ್ರೀ ಅವರು ಹೇಳಿಕೊಡುವ ಲಿಪಿ ಹೋಲುತ್ತದೆ ಹೊರತು ತುಳು ವರ್ಣ ಮಾಲೆಯಲ್ಲಿ ಇರುವ ಹಾಗೆ ಇಲ್ಲ ಅವರು ಅವರು ಹಾಕಿದ ತಿಗಳಾರಿ ಲಿಪಿ ಚಿತ್ರ ದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ   ದೀರ್ಘ ಋ ಇದೆ ವಿದ್ಯಾ ಅವರು ಹೇಳಿಕೊಡುವ ಲಿಪಿ ಯಲ್ಲೂ ಇದೆ ಅವರು ಪ್ರೂಫ್ ಗಾಗಿ ಹಾಕಿದ ತುಳು ವರ್ಣಮಾಲೆಯ ಲ್ಲಿ ದೀರ್ಘ ಋ ಇಲ್ಲ ಅದೇ ರೀತಿಯಲ್ಲಿ ವಿದ್ಯಾ ಶ್ರೀ ಹೇಳಿಕೊಡುವ ಎಲ್ಲಾ ಅಕ್ಷರಗಳು ಅವರೇ ಪ್ರೂಫ್ ಗಾಗಿ ನೀಡಿದ ತಿಗಳಾರಿ ಮತ್ತು ತುಳು ವರ್ಣಮಾಲೆ ಗಳಲ್ಲಿ ತಿಗಳಾರಿ ಲಿಪಿ ಯನ್ನು ಹೋಲುತ್ತವೆ ಇದನ್ನು ಕೇಳಿದಾಗ ನಮ್ಮ ಗುರುಗಳು ತುಳು ಎಂದು ಹೇಳಿದ್ದಾರೆ ಎನ್ನುತ್ತಾರೆ. ಅವರ ಗುರುಗಳಾದ ವಿಘ್ನರಾಜ ಭಟ್ ತಿಗಳಾರಿ ಲಿಪಿ ಮತ್ತು ತುಳು ಎರಡೂ ಒಂದು ಎಂದು ಹೇಳಿದ್ದಾರೆ ಆದರೆ ಇವರು ತಿಗಳಾರಿ ಮತ್ತು ತುಳು ಬೇರೆ ಎಂದು ಹೇಳುತ್ತಿದ್ದಾರೆ
ಇವರು ಹೇಳಿಕೊಡುವ ಲಿಪಿ ತುಳ ವರ್ಣಮಾಲೆ ಬದಲಿಗೆ ತಿಗಳಾರಿ ಲಿಪಿ ಯಂತೆ ಇದೆ ಎಂದಾಗ ಗುರುಗಳು ಹೇಳಿದ್ದಾರೆ ಎಂದು ಹೇಳಿದ್ದಾರೆ
ಯಾವುದೇ ಲಿಪಿಯನ್ನು ಯಾರು ಕೂಡ ಬಳಕೆ ಮಾಡಬಹುದು.
ಆದರೆ  ಅದು ತಿಗಳಾರಿ ಲಿಪಿ ಎಂಬ ಸತ್ಯವನ್ನು ಮುಚ್ಚಿಟ್ಟು ಅದು ತುಳು ಭಾಷೆಯ ಸ್ವಂತ ಲಿಪಿ ಎಂದು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ ಮತ್ತು ಅದನ್ನು ತುಳು ಭಾಷೆಗೆ ಸೂಕ್ತ ವಾಗುವಂತೆ ಪರಿಷ್ಕರಿಸದೆ ಇದ್ದ ಹಾಗೆ ಬಳಸಿ ತುಲು ಭಾಷೆಯನ್ನು ಅಪಭ್ರಂಶ ಗೊಳಿಸುವುದು ಸರಿಯಲ್ಲ  ©ಡಾ.ಲಕ್ಷ್ಮೀ ಜಿ ಪ್ರಸಾದ
21 ಯಾವುದೇ ಲಿಪಿ ಇದ್ದಕ್ಕಿದ್ದಂತೆ ಸೃಷ್ಟಿ ಆಗುವುದಿಲ್ಲ. ಅದಕ್ಕೆ ಹಿನ್ನೆಲೆಯಾಗಿ ಇನ್ನೊಂದು ಲಿಪಿ ಇರುತ್ತದೆ. ತಮಿಳು ಲಿಪಿಯಲ್ಲಿ ಮೂವತ್ತಾರು ಅಕ್ಷರಗಳು‌ ಮಾತ್ರ ಇರುವುದರಿಂದ ಅದರಲ್ಲಿ 52 ಸ್ವರ ವ್ಯಂಜನ ಗಳಿರುವ ಸಂಸ್ಕೃತ ಬರೆಯಲು ಸಾಧ್ಯವಾಗದ ಕಾರಣ ಅದನ್ನು ಪರಿಷ್ಕರಿಸಿ ತಮಿಳರು ಸಂಸ್ಕೃತ ಬರೆಯಲು ಆರ್ಯ ಎಳತ್ತು ಅನ್ನು ರೂಪಿಸಿದರು.ಅಲ್ಲಿ ವೇದಾಧ್ಯಯನ ಮಾಡಲು ಹೋದ ತುಳು ನಾಡು ಮಲೆನಾಡಿನ ಬ್ರಾಹ್ಮಣರು ಅದನ್ನು ಅಲ್ಲಿ ಕಲಿತು ಇತರೆಡೆ ಹರಡಿದರು.ಒಂದೊಮ್ಮೆ ಇದು ತುಳು ಭಾಷೆಯ ಸ್ವಂತ ಲಿಪಿ ಆಗಿದ್ದರೆ ಅದು ಯಾವುದರಿಂದ ಸೃಷ್ಟಿ ಅಯಿತು? ತಮಿಳು ಲಿಪಿ ,ಗ್ರಂಥ ಲಿಪಿಗೂ ಇದಕ್ಕೂ ಸಾಮ್ಯತೆ ಇರಲು ಕಾರಣವೇನು ? ವ್ಯಾಪಕ ಬರವಣಿಗೆ ಇಲ್ಲದೆ ಇದ್ದಾಗ ತುಳು ಭಾಷೆಗೆ ಲಿಪಿ ಹುಟ್ಟಲು ಹೇಗೆ ಸಾಧ್ಯ ? ಅದನ್ನು ಸಂಸ್ಕೃತ ಬರೆಯಲು‌ಮಾತ್ರ ಯಾಕೆ ಬಳಕೆ ಮಾಡಿದರು ? ಅದು ತಂಜಾವೂರು, ಕುಂಭಕೋಣಂ,ಕಂಚಿ,ಶಿವಮೊಗ್ಗ, ಮಲೆನಾಡು ಕೆಳದಿ ಉತ್ತರ ಕನ್ನಡದಲ್ಲಿ ಯೂ ಇರಲು ಹೇಗೆ ಸಾಧ್ಯ ? ಅಲ್ಲೆಲ್ಲ ಅದನ್ನು ತಿಗಳಾರಿ ಎಂದೇ ಯಾಕೆ ಕರೆದರು ? ಅದು ತುಳು ಲಿಪಿ ಅಗಿದ್ದರೆ ತುಳು ಲಿಪಿ ಎಂದೇ ಕರೆಯುತ್ತಿರಲಿಲ್ಲವೇ ?
22  ಮೈಸೂರಿನಲ್ಲಿ ಹನ್ನೆರಡನೇ ಶತಮಾನದ ಶಾಸನವೊಂದರಲ್ಲಿ  ಅಲ್ಲಿ ವೇದಾಧ್ಯಯನ ಕೇಂದ್ರದಲ್ಲಿ ತಿಗಳಾರಿ ಲಿಪಿ ಕಲಿಸುತ್ತಿದ್ದರು ಎಂದು ಇದೆ.
ವೆಂಕಟ್ರಾಜ ಪುಣಿಚಿತ್ತಾಯರು ಇದು ಆರ್ಯ ಎಳತ್ತು ಎಂದು ಹೇಳಿದ್ದಾರೆ.ಆರ್ಯ ( ಸಂಸ್ಕೃತ) ಎಳತ್ತು ಎಂಬ ಹೆಸರಿನಲ್ಲಿಯೇ ಅದು ಸಂಸ್ಕೃತ ಭಾಷೆ ಬರೆಯಲು ಬಳಕೆಗೆ ಬಂದ ಲಿಪಿ ಎಂದು ಸ್ಪಷ್ಟವಾಗಿ ಕಾಣುತ್ತದೆ .ಡಾ.ವಿಘ್ನರಾಜ ಭಟ್ ,ಡಾ.ಪದ್ಮನಾಭ ಕೇಕುಣ್ಣಾಯ,ಡಾ.ರಾಧಾಕೃಷ್ಣ ಬೆಳ್ಳೂರು ಮೊದಲಾದ ತುಳು  ವಿದ್ವಾಂಸರು ತುಳು ಮತ್ತು ತಿಗಳಾರಿ ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ. ತುಳು ಅಕಾಡೆಮಿ ವೆಬ್ ನಲ್ಲಿ ತುಳು ಭಾಷೆಗೆ ಸ್ವಂತ ಲಿಪಿ ಇಲ್ಲ ,ಪ್ರಾಚೀನ ಕಾಲದಲ್ಲಿ ತುಳು ಭಾಷೆಯನ್ನು ಬರೆಯಲು ತಿಗಳಾರಿ ಲಿಪಿ ಬಳಸಿದ್ದಾರೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ .ಹಾಗಿದ್ದರೂ ಕೂಡ ಕೆಲವರು  ತಿಗಳಾರಿ ಲಿಪಿಯನ್ನು ತುಳು ಲಿಪಿ ಎಂದು ಕಲಿಸುತ್ತಾ,ಅದರ ಬಗ್ಗೆ ಸತ್ಯವನ್ನು ಮುಚ್ಚಿಟ್ಟು ತುಳು  ಭಾಷೆಗೆ ಸ್ವಂತ ಲಿಪಿ ಇದೆ ಎಂದು ಸುಳ್ಳು ಹೇಳಿ ತಯಳುವರನ್ನು ಮಂಗ ಮಾಡುತ್ತಿದ್ದಾರೆ.
(ಲಿಪಿ ತಜ್ಞರಾದ ಜಮದಗ್ನಿ ಅಗ್ನಿ ಹೋತ್ರಿಯವರು ಇದು ತಿಗಳಾರಿ ಲಿಪಿ ಎಂದು ತಿಳಿಸಿ ,ವಿದ್ಯಾ ಅವರು ಹೇಳಿಕೊಡುತ್ತಾ ಇರುವ ತಿಗಳಾರಿ (ತುಳು) ಲಿಪಿಯಲ್ಲಿ ಅನೇಕ ದೋಷಗಳು ಇರುವುದನ್ನು ಗಮನಿಸಿ ಪೇಸ್ ಬುಕ್ ಮೂಲಕ  ವಿದ್ಯಾ ಅವರಿಗೆ  ನೀಡಿದ ಸೂಚನೆಗಳು--
Vidya Shree S Shetty ನಾವು ದಕ್ಷಿಣ ಕನ್ನಡದವರಲ್ಲ ,ತುಳು ಬರುವುದಿಲ್ಲ .ಲಿಪಿಯ ದೃಷ್ಟಿಯಿಂದ ಸಲಹೆಗಳನ್ನು ಕೊಡಬಲ್ಲೆ. ನೀವು ಪ್ರಸ್ತುತ ಹೇಗೆ ಕಲಿಸುತ್ತಿದ್ದೀರೋ ನನಗೆ ತಿಳಿಯದು. ನೀವು ಕಲಿಸುವ chart ಕೊಟ್ಟರೆ ಸಲಹೆ ನೀಡಬಲ್ಲೆ.ಉಕಾರ,ಉಕಾರದ ಕಾಗುಣಿತಕ್ಕೆ special forms ಇದೆ.ಕು,ಗು,ಜು ಇತ್ಯಾದಿಗಳಿಗೆ circle ಕೆಳಗೆ ಬರೆಯಬಾರದು. ಕೆಲವು ಅಕ್ಷರಗಳಾದ ಐ,ಖ,ಙ,ಞ,ಛ,ಟ,ಝ ಇತ್ಯಾದಿಯಲ್ಲಿ ಮಾರ್ಪಾಡು ಬೇಕು. ಇಲ್ಲಿ ಸಂಯುಕ್ತಾಕ್ಷರ ಕನ್ನಡದಂತೆ ಬರೆಯುವುದಿಲ್ಲ. ಎರಡೂ ಒಂದೇ size ಇರಬೇಕು,ಚಿಕ್ಕದು ದೊಡ್ಡದು ಇರಬಾರದು.ಯ,ರ,ಲ,ವ,ಮ ಇವುಗಳಿಗೆ ಸ್ಪೇಸಿಯಲ್ ರೂಪಗಳು ಇವೆ, ವ್ಯಂಜನಕ್ಕೆ ಜೋಡಿಸಿ ಬರೆಯಬೇಕು ಬಿಡಿಸಿ ಬರೆಯಬಾರದು,ಸಾಮಾನ್ಯದ ತರಹ ಬರೆಯಬಾರದು. ವ್ಯಂಜನದ ಹಿಂದೆ ಅನುಸ್ವಾರ ಬಳಸುವುದಿಲ್ಲ,ಮಲಯಾಳದಂತೆ ಅಂದ ಬದಲು ಅನ್ದ ಎಂದೇ ಬರೆಯುತ್ತಾರೆ. ನನಗೆ ತಿಳಿದಿರುವ ಮಟ್ಟಿಗೆ ಪ್ರತ್ಯೇಕ ಅಂಕಿಗಳು ಇಲ್ಲ,ಕನ್ನಡ ಸಂಖ್ಯೆಗಳನ್ನೇ ಬಳಸುತ್ತಾರೆ. ಪ್ರತ್ಯೇಕ ಸಂಖ್ಯೆ ಎನ್ನುವ ಹಸ್ತಪ್ರತಿಗಳ ಲಿಪಿ ಮಲಯಾಳ ಲಿಪಿ. ವ್ಯಂಜನಗಳ ಸಂಯುಕ್ತಾಕ್ಷರ ಬಹಳ ಕ್ಲಿಷ್ಟ ಕನ್ನಡದಂತೆ ಸುಲಭವಲ್ಲ.ಕ್ಕ,ತ್ತ,ತ್ಕ,ದ್ಧ,ತ್ಮ,ಕ್ಷ ,ರ್ಯ,ರ್ವ,ಸ್ಥetc ಗಳಲ್ಲಿ ಎರಡು ಅಕ್ಷರಗಳನ್ನು ಹೊಂದಿಸಿ ಅಕ್ಷರ ಬರೆಯುತ್ತಾರೆ, ಕೆಳಗೆ ಸಾಮಾನ್ಯವಾಗಿ ಬರೆಯುವುದಿಲ್ಲ.ಇ ,ಈ,ಉ ಸ್ವಲ್ಪ ಬೇರೆ ತರಹ ಬರೆಯುತ್ತಾರೆ.ಟ್ ,ತ್ ,ಕ್ ,ನ್ ಇವುಗಳು ವಿಶಿಷ್ಟವಾಗಿ ಬರೆಯುತ್ತಾರೆ,ಹಲಂತವನ್ನು ಸಾಮನ್ಯವಾಗಿ ಹಾಕುವುದಿಲ್ಲ.ಹೀಗೆ ಅನೇಕ ಕಲಿಕೆಯಲ್ಲಿ ಬದಲಾವಣೆಗಳು ಆವಶ್ಯಕ.ನಿಮ್ಮ ಪತ್ರಿಕೆಯ font ನಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಾಲ್ಕೈದು ಹಸ್ತಪ್ರತಿಗಳನ್ನು ಗಮನಿಸಿದರೆ ಸರಿಯಾದ ರೂಪಗಳು ರೂಪಗಳು ಯಾವುವು ಎಂದು ನಮಗೆ ಗೊತ್ತಾಗುವುದು.ನಮ್ಮ ಉದ್ದೇಶ ಇಷ್ಟೇ ಜನರು ಸರಿಯಾಗಿ ಕಲಿಯಲಿ.)

ಹೆಚ್ಚಿನ ಮಾಹಿತಿಗಾಗಿ
http://laxmipras.blogspot.in/2017/04/blog-post.html?m=1

Share