Sunday 12 November 2023

ಪಾಡ್ದನದ ಕಥೆಗಳು

 ರೂಪದ ಶ್ರೀಕೃಷ್ಣ.ಶ್ರೀಕೃಷ್ಣನ ನಾಮಸ್ಮರಣೆ ಮಾಡುತ್ತಾನೆ. ಕೂಡಲೇ ತನ್ನ ನಿಜ ರೂಪವನ್ನು ತೋರುತ್ತಾನೆ. ಆ ಬಳಿಕ ಏಳು ರಾತ್ರಿ ಏಳು ಹಗಲು ರಾಧೆ ಮತ್ತು ಕೃಷ್ಣ ಜೊತೆಯಾಗಿ ಇರುತ್ತಾರೆ. ಇತ್ತ ಚಂದಬಾರಿ ತನ್ನ ಪತಿ ಶ್ರೀಕೃಷ್ಣ ಎಲ್ಲಿಗೆ ಹೋದನೆಂದು ಹುಡುಕುತ್ತಾ ರಾಧೆಯ ಮನೆಗೆ ಬರುತ್ತಾಳೆ. ಗೋಪಾಲನೂ ಮೇಲು ಮಾಳಿಗೆಯಲ್ಲಿ ಅಕ್ಕ ತಂಗಿ ಏಳು ರಾತ್ರಿ ಏಳು ಹಗಲು ಏನು ಮಾಡುತ್ತಿದ್ದಾರೆ ಎಂದು ಸಂಶಯ ತಾಳುತ್ತಾನೆ.©ಡಾ. ಲಕ್ಷ್ಮೀ ಜಿ ಪ್ರಸಾದ್ 


ಆಗರಾಧೆ ಮತ್ತು ಶ್ರೀಕೃಷ್ಣ ದೇವರು ಮಾಳಿಗೆ ಇಳಿದು ಬರುತ್ತಾರೆ. ಗೋಪಾಲನಲ್ಲಿ ಶ್ರೀಕೃಷ್ಣ ದೇವರು ರಾಧೆ ಎಂಜಲಾಗಿದ್ದಾಳೆ. ಅವಳು ನಿನಗೆ ಬೇಕೆ? ನಾನು ಕೊಂಡು ಹೋಗಲೇ? ಎಂದು ಕೇಳುತ್ತಾನೆ. ಗೋಪಾಲ, ರಾಧೆ ತನಗೆ ಬೇಡ, ನೀನೇ ಕರಕೊಂಡು ಹೋಗು ಎನ್ನುತ್ತಾನೆ.

©ಡಾ. ಲಕ್ಷ್ಮೀ ಜಿ ಪ್ರಸಾದ್ 

ಮುಂದೆ ಚಂದಬಾರಿ ಹಾಗೂ ರಾಧೆಯರನ್ನು ಕರೆದುಕೊಂಡು ಶ್ರೀಕೃಷ್ಣ ಮೇಲಿನ ಮಿರಿಲೋಕಕ್ಕೆ ಬರುತ್ತಾನೆ. ಅಲ್ಲಿ ರಾಧೆ, ಚಂದಬಾರಿ ಹಾಗೂ ಶ್ರೀಕೃಷ್ಣ ಸಂಸಾರ ನಡೆಸುತ್ತಾ ಇರುತ್ತಾರೆ. ಎಂದುಶ್ರೀಮತಿ ಶಾರದಾ ಜಿ. ಬಂಗೇರ ಅವರು ಹೇಳಿದ ಚಂದಬಾರಿ ರಾಧೆ ಸಿರಿಕೃಷ್ಣ ಪಾಡ್ದನದಲ್ಲಿ ಹೇಳಿದೆ.


ಇದೇ ರೀತಿನಾಗಸಿರಿ ಕನ್ನಗೆ ಪಾಡ್ದನದಲ್ಲಿ ಕೂಡ ಶ್ರೀಕೃಷ್ಣನನ್ನು ಸ್ತ್ರೀಲೋಲುಪನಂತೆ ಚಿತ್ರಿಸಲಾಗಿದೆ. ತುಳು ಜನಪದ ಸಾಹಿತ್ಯವಾದ ಪಾಡ್ದನಗಳಲ್ಲಿ ಶ್ರೀಕೃಷ್ಣನ ಪರಿಕಲ್ಪನೆ ವಿಶಿಷ್ಟವಾಗಿ ಮೂಡಿ ಬಂದಿದೆ. ದಾಸವರೇಣ್ಯರ ನಿಂದಾಸ್ತುತಿಗಳಂತೆ ಇವು ಕೂಡ ತುಳು ಜನಪದರ ನಿಂದಾಸ್ತುತಿಗಳೇ ಇರಬಹುದು.

©ಡಾ. ಲಕ್ಷ್ಮೀ ಜಿ ಪ್ರಸಾದ್ 

ಆಧಾರ : ಚಂದ ಬಾರಿ ರಾಧೆ ಗೋಪಾಲ ಪಾಡ್ದನ, ಹೇಳಿದವರು ಶಾರದಾ ಜಿ ಬಂಗೇರ 

No comments:

Post a Comment