ಕರಿಚಾಮುಂಡಿ :
ಕರಿಚಾಮುಂಡಿ ದೈವವನ್ನು ಕರಿಚಾಂಡಿ ಎಂದೂ ಕರೆಯುತ್ತಾರೆ. ಕರಿಚಾಮುಂಡಿ ಯಾರೆಂಬ ಬಗ್ಗೆ ಸೂಕ್ತ ಮಾಹಿತಿ ಸಿಕ್ಕಿಲ್ಲ. ಆದರೆ ಮಡಪ್ಪಾಡಿಯಲ್ಲಿ ಕರಿಚಾಮುಂಡಿ ಭೂತಕ್ಕೆ ನೇಮ ಆಗುವಾಗ ಹೇಳಿದ ಪಾಡ್ದನದ ಕೆಲವು ಸಾಲುಗಳಲ್ಲಿ ಕರಿಚಾಮುಂಡಿಯ ತಂದೆ ಕಾನಕಲ್ಲಟೆ ದೇವರೆಂದೂ, ಗಾಳಿಭದ್ರ ರಾಯನೆಂದೂತಾಯಿ ನೆಲವುಲ್ಲ ಸಂಖ್ಯೆಎಂದೂ ಹೇಳಿದೆ© ಡಾ.ಲಕ್ಷ್ಮೀ ಜಿಬ ಕೊರಗ ತನಿಯ ತಾಯಿ ಮೈರೆಯ ತಂದೆ ತಾಯಿಯನ್ನು ಕಾನಕಲ್ಲಟೆ ದೇವರು, ನೆಲವುಲ್ಲ ಸಂಖ್ಯೆ ಎಂದು ಕೊರಗ ತನಿಯ ಪಾಡ್ದನದಲ್ಲಿ ಹೇಳಿದೆ.© ಡಾ.ಲಕ್ಷ್ಮೀ ಜಿ ಪ್ರಸಾದ್ ಕಾಸರಗೋಡು, ಬಂಟ್ವಾಳ ಪರಿಸರದಲ್ಲಿ ಒಂಜಿ ಕುಂದ ನಲ್ಪ ದೈವೊಳ ನೇಮದಲ್ಲಿ ಪುದ ಎಂಬ ಭೂತಕ್ಕೆ ಆರಾಧನೆ ಇದೆ. ಕೊರಗ ತನಿಯನ ತಾಯಿ ಮೊದಲು ಪಾರಿವಾಳವಾಗಿದ್ದು ನಂತರ ಹೆಣ್ಣಾದವಳು ಎಂದು ಒಂದು ಪಾಡ್ದನದಲ್ಲಿ ಹೇಳಿರುವ ಬಗೆ ಡಾ. ಅಮೃತ ಸೋಮೇಶ್ವರರು ತಿಳಿಸಿದ್ದಾರೆ. ಆದ್ದರಿಂದ ಕೊರಗ ತನಿಯನ ತಾಯಿ ಮೈರೆಯೇ ಪುದ ಎಂದೂ, ಕರಿಚಾಮುಂಡಿ ಎಂದೂ ಆರಾಧನೆ ಹೊಂದಿರುವ ಸಾಧ್ಯತೆ ಇದೆ
ಹೆಚ್ಚಿನ ಮಾಹಿತಿಗೆ ನನ್ನ ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು ಗ್ರಂಥ ವನ್ನು ಓದಬಹುದು .© ಡಾ.ಲಕ್ಷ್ಮೀ ಜಿ ಪ್ರಸಾದ್,9480516684

No comments:
Post a Comment