Sunday 10 December 2023

ಕರಾವಳಿಯ ಸಾವಿರದೊಂದು ದೈವಗಳು‌: ಹಿಂದು ಮುಸ್ಲಿಂ ಸಾಮರಸ್ಯ ಬೆಸೆದ ಆಲಿ ಭೂತ- ಡಾ.ಲಕ್ಷ್ಮೀ ಜಿ‌ ಪ್ರಸಾದ್


 ತುಳುನಾಡಿನ ಮುಸ್ಲಿಂ ಮೂಲದ ದೈವಗಳು- 


  ಹಿಂದೂ‌ ಮುಸ್ಲಿಂ ಬಾಂಧವ್ಯ ಬೆಸೆದ ಆಲಿ ಭೂತ 


 ©ಡಾ.ಲಕ್ಷ್ಮೀ ಜಿ‌ ಪ್ರಸಾದ್ 

Jai Prakash Shetty Uppala 


ನನ್ನ ಅಧ್ಯಯನದಲ್ಲಿ ಇಪ್ಪತ್ತೈದು ಮುಸ್ಲಿಂ ಮೂಲದ ದೈವಗಳ ಮಾಹಿತಿ ಸಿಕ್ಕಿದ್ದು ನನ್ನ ಕರಾವಳಿಯ ಸಾವಿರದೊಂದು ದೈವಗಳು ಕೃತಿಯಲ್ಲಿ ಬರೆದಿದ್ದೇನೆ 

1 ಆಲಿ ಭೂತ

2 ಉಮ್ಮಚ್ಚಿ/ ಐಸಮ್ಮ ಮತ್ತು ಯೋಗ್ಯೆರ್ ನಂಬಡಿ

3ಎತ್ತಿನ ಗಾಡಿಯ ಸಾಹೇಬ

4 ಕಲಂದನ್ ಮುಕ್ತಿ 

5 ಕುಂಞಾಲಿ

6 ಕುಂಞಮ್ಮ

7 ತಿಪ್ಪೀ ಸಾಬ್ ದೈವ

8 ಬ್ಯಾರಿ ಭೂತ

9 ಬ್ಯಾರ್ದಿ ಭೂತ

10 ಬೀಬಿ ತೆಯ್ಯಂ

11 ಮಾಪಿಳ್ಳ ತೆಯ್ಯಂ

12 -14ಮಾಪಿಳ್ಳ,ಮಾವಿಲತಿ,ಚೋಟಿಯಾರ್ ಅಂಬು

15 ಮಾಪುಳ್ತಿ ಧೂಮಾವತಿ

16 -19 ಮಾಪುಳೆ ಮಾಪುಲ್ತಿ  ತೊಟ್ಟಿಲ್ದ ಬಾಲೆ ( ಎರಡು   ಜೊತೆ ದೈವಗಳು ಮತ್ತು ಶಿಶು)

20 -21ಮುಕ್ರಿ ಪೋಕ್ಕೆರ್ ಮತ್ತು ಮನದಲಾತ್ ಚಾಮುಂಡಿ 

23-24 ಮುಸ್ಲಿಮರ ಮಕ್ಕಳು

25 ಸಾಹೇಬನ ಗಣ

ಕುಂಬಳೆ ಪರಿಸರದ ಅರಿಕ್ಕಾಡಿಯಲ್ಲಿ ಆರಾಧಿಸಲ್ಪಡುವ ಆಲಿಚಾಮುಂಡಿ ಬಹಳ ಪ್ರಸಿದ್ಧವಾದ ದೈವತ ಆಲಿ ಚಾಮುಂಡಿ ಭೂತ . ಕುಂಬಳೆ ಸಮೀಪದ ಒಂದು ಗುಡ್ಡದಲ್ಲಿ ಪಾರೆ  ಸ್ಥಾನ ಎಂಬ ಕ್ಷೇತ್ರ ಇದೆ.  ಇದು  ಆಲಿ ಭೂತದ  ಮೂಲ ಸ್ಥಾನ .ಆರಿಕ್ಕಾಡಿ ಸಮೀಪದ ಪಾರೆ ಸ್ಥಾನದ  ಪ್ರಧಾನ ದೈವ  ಪಾಡಾಂಗರೆ  ಪೋದಿ(ಪಾಟಾರ್ ಕುಳಂಗದ ಭಗವತಿ ).ಆದರೆ ಈ ಭೂತ ಸ್ಥಾನ ದಲ್ಲಿ  ಆಲಿ ಚಾಮುಂಡಿ ಪ್ರಧಾನ ಭೂತಕ್ಕಿಂತ  ಹೆಚ್ಚು ಪ್ರಸಿದ್ಧಿ ಪಡೆದಿದೆ.ಅಜ್ಜಿ ಭೂತ ,  ಶಿರಾಡಿಭೂತ,ರುದ್ರ ಚಾಮುಂಡಿ ಮೊದಲಾದ ಅನೇಕ ದೈವಗಳು ಇತರ ಪ್ರಧಾನ ದೈವಗಳ ಸೇರಿಗೆ ದೈವಗಳಾಗಿದ್ದರೂ,ಪ್ರಧಾನ ದೈವಗಳಲಿಗಿಂತ ಹೆಚ್ಚು ಮಹತ್ವವನ್ನು ಪಡೆದಿದ್ದಾರೆ .ಇದು ತುಳು ಸಂಸ್ಕೃತಿಯಲ್ಲಿ ಅಲ್ಲಲ್ಲಿ ಕಡು ಬರುವ ವಿಶಿಷ್ಟ ವಿದ್ಯಮಾನ .ಇದು ದುರ್ಬಲರು ಸಬಲರಾಗುತ್ತಿರುವುದರ ಸಂಕೇತವೂ ಇರಬಹುದು .ಏನೇ ಇರಲಿ ಇಲ್ಲಿ ಆಲಿ ಭೂತ ಕೂಡಾ ಪ್ರಧಾನ ದೈವಕ್ಕಿಂತ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿರುವುದು ಗಮನಾರ್ಹ ಅಂಶವಾಗಿದೆ   ಎಲ್ಲ ಜಾತಿ ಧರ್ಮದ ಜನರು ಆಲಿ ಚಾಮುಂಡಿಯನ್ನು ಭಕ್ತಿಯಿಂದ ನಂಬಿ ಆರಾಧಿಸುತ್ತಾರೆ 


ತುಳು ನಾಡಿನಲ್ಲಿ ಯಾರಿಗೆ ಹೇಗೆ ಯಾವಾಗ ದೈವತ್ವ ಪ್ರಾಪ್ತಿಯಾಗುತ್ತದೆ ಹೇಳುವುದಕ್ಕೆ ಒಂದು ಸಿದ್ಧ ಸೂತ್ರವಾಗಲಿ ನಿಯಮವಾಗಲಿ ಏನೂ ಇಲ್ಲ .ದುರಂತವನ್ನಪ್ಪಿದ  ಅಸಹಾಯ ಶೂರರು ಮಾತ್ರ ಭೂತಗಳಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ .ಮನುಷ್ಯ ಮೂಲದಿಂದ ಭೂತ ಸ್ಥಿತಿಗೇರಿದವರು ಎಲ್ಲರೂ ಮೂಲತಃ ಸಾತ್ವಿಕರೂ, ಸದ್ಧರ್ಮಿಗಳೂ, ಸಾಧ್ವಿಗಳೂ, ಶೂರರೂ ಎನ್ನುವಂತಿಲ್ಲ. ಅಂಥಹ ಉದಾತ್ತ ಚರಿತರು ವಿರಳವಾಗಿ ಕೆಲವರಿರಬಹುದು.    ವಿಶೇಷಗುಣಗಳಿಲ್ಲದ ತೀರಾ ಸಾಮಾನ್ಯರೂ ಬೇರೆಬೇರೆ ಕಾರಣಗಳಿಂದ ದೈವತ್ವವನ್ನು ಪಡೆದಿದ್ದಾರೆ. ಆಕಸ್ಮಿಕ ಮರಣಕ್ಕೆ ಗುರಿಯಾದವರು ದೈವಗಳ ಕಾರಣೀಕಗಳು ಸೇರಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾರೆ.ಪ್ರಧಾನ ಭೂತ ಗಳಾದ ಉಲ್ಲಾಕುಳು ಶಿರಾಡಿ ,ಮಲರಾಯಿ ,ಬಬ್ಬರ್ಯ ,ಪಂಜುರ್ಲಿ ,ಮೊದಲಾದ ಭೂತ ಗಳ  ಅನುಗ್ರಹದಿಂದ ಅನೇಕರು ಸೇರಿಗೆ ದೈವಗಳಾಗಿದ್ದಾರೆ.ಅಂತೆಯೇ  ಈ ಭೂತ ಗಳ ಆಗ್ರಹಕ್ಕೆ ತುತ್ತಾಗಿಯೂ ಅನೇಕರಿಗೆ ದೈವತ್ವ ಲಭಿಸಿದೆ.ಹೀಗೆ ಆಲಿ ಚಾಮುಂಡಿ ಕೂಡಾ ಮಂತ್ರ ದೇವತೆಯ   ಆಗ್ರಹಕ್ಕೆ ತುತ್ತಾಗಿ ದುರಂತವನ್ನಪ್ಪಿ ನಂತರ ದೈವತ್ವವನ್ನು ಆರಾಧಿಸಲ್ಪಡುವ ಭೂತ  

ತುಳುವರ ಭೂತಾರಾಧನೆಯಲ್ಲಿ ಯಾವುದೇ ಜಾತಿ ಭೇದ ಅಂತ ಇರುವುದಿಲ್ಲ ಅಂತೆಯೇ ಧರ್ಮದ ಗಡಿ ಕೂಡಾ ಇದಕ್ಕಿಲ್ಲ .ಉಳ್ಳಾಲದಲ್ಲಿ ಭೂತ ಮಸೀದಿಗೆ ಭೇಟಿ ಕೊಡುವ ಸಂಪ್ರದಾಯ ಇದೆ. ಅದೇ ರೀತಿ ಕೆಲವೆಡೆ ಭೂತ ಮುಸ್ಲಿಂ ಕ್ರಿಸ್ಚಿ ಯನ್ ವ್ಯಕ್ತಿಗಳನ್ನು ಉದ್ದೇಶಿಸಿ ಕರೆದು ಗೌರವಿಸುವ ಪದ್ಧತಿ ಇದೆ .ತೋಕ್ಕೊಟು  ಸಮೀಪ ಭೂತ “ಅಂತಂತೋನಿ “ಎಂದು ಕರೆಯುವ ಬಗ್ಗೆ ಭೂತ ಕಟ್ಟುವ ಕಲಾವಿದರಾದ ಅಪ್ಪಣ್ಣ  ಅವರು ತಿಳಿಸಿದ್ದಾರ


 ಅಂತೆಯೇ ತುಳುನಾಡಿನಲ್ಲಿ ದೈವತ್ವವನ್ನು ಪಡೆದವರೆಲ್ಲ ಹಿಂದುಗಳು, ತುಳುನಾಡಿನವರೇ ಆಗಬೇಕಿಲ್ಲ. ಅನೇಕ ಕನ್ನಡ ಮೂಲದ ವ್ಯಕ್ತಿಗಳು. ತುಳುನಾಡಿನಲ್ಲಿ ಭೂತ ಗಳಾಗಿ ಆರಾಧಿಸಲ್ಪಡುತ್ತಿದ್ದಾರೆ   ಕನ್ನಡ ಬೀರ, ಬಚ್ಚನಾಯಕ, ಬೈಸು ನಾಯಕ, ಕರಿಯಣ್ಣ ನಾಯಕ, ಕಚ್ಚೆ ಭಟ್ಟ, ಕನ್ನಡ ಭೂತ, ಕನ್ನಡ ಭೂತ ಯಾನೆ ಪುರುಷ  ಭೂತ,ಕನ್ನಡಿಗ ಭೂತ ಮೊದಲಾದವರು ಮೂಲತಃ ಕನ್ನಡ ಭಾಷಿಗರು ಆಗಿದ್ದವರು   © ಡಾ.ಲಕ್ಷ್ಮೀ ಜಿ ಪ್ರಸಾದ್ 


 .ತುಳುನಾಡಿನಲ್ಲಿ ದೈವತ್ವ ಪಡೆದು ಭೂತ ವಾಗಿ ಆರಾಧಿಸಲ್ಪಡುವುದು ಒಂದು ವಿಶಿಷ್ಟ ಸಂಸ್ಕೃತಿ .ಇಲ್ಲಿ ಭೂತತ್ವವನ್ನು ಪಡೆಯುವುದಕ್ಕೆ ಯಾವುದೇ ಜಾತಿ ಧರ್ಮದ ಮಿತಿ ಇಲ್ಲ. ಇಲ್ಲಿ ಬ್ರಾಹ್ಮಣರೂ ಭೂತವಾಗಿದ್ದಾರೆ.ಚಾಮುಂಡಿ,ಭಟ್ಟಿ ಭೂತ ,ಕಚ್ಚೆ ಭಟ್ಟ  , ನಾರಳತ್ತಾಯ ಮೊದಲಾದ ಭೂತ ಗಳು ಬ್ರಾಹ್ಮಣ ಮೂಲದ ದೈವತಗಳು . ರಾಮ ಶೆಟ್ಟಿ ಎಂಬ ವೀರ ಶೈವ  ಲಿಂಗಾಯತ ವ್ಯಕ್ತಿ ನೆತ್ತರು ಮುಗಳಿ ಎಂಬ ಭೂತವಾಗಿದ್ದಾನೆ .ನೈದಾಲ ಪಾಂಡಿ ಕೂಡ ಮೂಲತಃ ಲಿಂಗಾಯತನಾಗಿ ಪರಿವರ್ತಿತನಾದ ರಾಜ ಕುಮಾರ .  ಅಚ್ಚುಬಂಗೇತಿ, ಅಕ್ಕಚ್ಚು ಭೂತ, ಬೊಟ್ಟಿ ಭೂತಗಳು ಮೂಲತಃ ಜೈನ ಧರ್ಮದವರಾಗಿದ್ದಾರೆ.


 ಕ್ರಿಶ್ಚಿಯನ್ ತೆಯ್ಯಂಗೆ ಆರಾಧನೆ ಇರುವ ಬಗ್ಗೆ ಕೇಳು ಮಾಸ್ತರ್ ಅಗಲ್ಪಾಡಿ ಅವರು ತಿಳಿಸಿದ್ದಾರೆ . ಅಂತೆಯೇ ತುಳುನಾಡಿನ ಅನೇಕ ಮುಸ್ಲಿಂ ಮೂಲದ ವ್ಯಕ್ತಿಗಳು ದೈವತ್ವಕ್ಕೇರಿ ಆರಾಧಿಸಲ್ಪಡುತ್ತಿದ್ದಾರೆ. ಬಬ್ಬರ್ಯ, ,ಬ್ಯಾರ್ದಿ  ಭೂತ, ಬ್ಯಾರಿ ಭೂತ,ಮಾಪುಲೇ ಮಾಪುಳ್ತಿ ಭೂತೊಳು ,ಮಾಪುಳ್ತಿ  ಧೂಮಾವತಿ  ಮೊದಲಾದವರು ಮುಸ್ಲಿಂ ಮೂಲದ ದೈವತಗಳು. ಹೀಗೆ  ಆಲಿ ಭೂತ ಕೂಡಾ ಮುಸ್ಲಿಂ ಮೂಲದ ದೈವ .ಭೂತಗಳಾದ ನಂತರ ಇವರು ಹಿಂದೆ ಯಾರಾಗಿದ್ದರು ಎಂಬ ಪ್ರಶ್ನೆಯೇ ಇರುವುದಿಲ್ಲ .ಎಲ್ಲ ದೈವಗಳೂ ಸಮಾನ .ಎಲ್ಲ ದೈವಗಳಿಗೂ ಒಂದೇ ರೀತಿಯ ಗೌರವ ,ಭಕ್ತಿಯ ನೆಲೆ .ಇದು ತುಳು ನಾಡಿನ ವೈಶಿಷ್ಟ್ಯ©ಡಾ.ಲಕ್ಷ್ಮೀ ಜಿ ಪ್ರಸಾದ್ 


 ಆಲಿ ಭೂತ ಕೂಡಾ  ಮೂಲತಃ ಮುಸ್ಲಿಂ ಮಂತ್ರವಾದಿ . .ಬೇರೆ ಊರಿನಿಂದ ಆಶ್ರಯಕ್ಕಾಗಿ ಅಲೆದಾಡುತ್ತಾ ಬಂದು ಆರಿಕ್ಕಾಡಿ ಯ  ಪಾದೆ ಸ್ಥಾನದ ಬಿಲ್ಲವರಲ್ಲಿ ಆಶ್ರಯ ಬೇಡುತ್ತಾನೆ .ದಯಾಳುಗಳಾದ ಅವರು ಈತನ ದುಷ್ಟತನದ ಹೆಣ್ಣು ಹುಚ್ಚಿನ ಅರಿವಿಲ್ಲದೆ ಆತನಿಗೆ ಆಶ್ರಯ ಕೊಡುತ್ತಾರೆ ಆಲಿಬ್ಯಾರಿ ನೋಡಲು ಕಟ್ಟು ಮಸ್ತಾಗಿ ಸುಂದದರನಾಗಿದ್ದನು .ಇವನಿಗೆ ತುಂಬಾ ,ಹೆಣ್ಣಿನ ಚಪಲ ಇತ್ತು .  

ಈತ   ಮಂತ್ರವಾದಿಯಾಗಿ  ಪ್ರಸಿದ್ಧಿ ಪಡೆದಿದ್ದನು. ತನ್ನ ಮಂತ್ರ ಶಕ್ತಿಯಿಂದ ಜನರಿಗೆ,ಊರ ಹೆಣ್ಣು ಮಕ್ಕಳಿಗೆ ನಾನ ರೀತಿಯ  ಕಿರುಕುಳ ಕೊಡುತ್ತಿದ್ದನು . ತನ್ನ್ನ ಮಂತ್ರ ಶಕ್ತಿಯಿಂದ ಹೆಣ್ಣು ಮಕ್ಕಳನ್ನು ತನ್ನೆಡೆಗೆ ಸೆಳೆದು ಕೊಳ್ಳುತ್ತಿದ್ದನು . ಆತನ ಮಂತ್ರ ಶಕ್ತಿಯ ಕಾರಣದಿಂದಾಗಿ ಹೆಣ್ಣು ಮರುಳನಾದ ಆತನನ್ನು ವಿರೋಧಿಸಲು , ಜನರಿಗೆ ಸಾಧ್ಯವಾಗುತ್ತಿರಲಿಲ್ಲ .ತನ್ನ ಮಂತ್ರ ಶಕ್ತಿಯಿಂದಾಗಿ ಆತ ಅಷ್ಟು ಬಲವಂತನಾಗಿದ್ದನು..ಅವನು ಮಂತ್ರ ಶಕ್ತಿಯಿರುವ ಒಂದು ತಾಯಿತವನ್ನು ಕೊರಳಿಗೆ ಕಟ್ಟಿಕೊಂಡಿದ್ದನು .ಅದು ಅವನ ಮೈ ಮೇಲೆ ಇರುವ ತನಕ ಅವನನ್ನು ಸೋಲಿಸಲು ಯಾರಿಂದಲೂ ಅಸಾಧ್ಯವಾಗಿತ್ತು .ಅವನು ತನಗೆ ಆಶ್ರಯ ಕೊಟ್ಟ ಬಿಲ್ಲವರ ಮನೆಯ ದೇಯಿ ಎಂಬ ಹೆಣ್ಣು ಮಗಳನ್ನು ತನ್ನೆಡೆಗೆ ಸೆಳೆಯಲು ಯತ್ನಿಸಿದನು .ಅವಳು ಇವನೆಡೆಗೆ ಬಾರದೆ ಇದ್ದಾಗ ತನ್ನ ಮಂತ್ರ ಶಕ್ತಿಯಿಂದ ಅವಳನ್ನು ಸೆಳೆದು ಅವಳ ಮೇಲೆ ಅತ್ಯಾಚಾರ ಎಸಗಿ ಅವಳ ಸಾವಿಗೆ ಕಾರಣನಾದನು ©ಡಾ.ಲಕ್ಷ್ಮೀ ಜಿ ಪ್ರಸಾದ್ 


 ಆಗ ಆ ಕುಟುಂಬದವರು ಮಂತ್ರ ದೇವತೆಗೆ ಕೈ ಮುಗಿದು “ಆಲಿ ಬ್ಯಾರಿಯಿಂದ ನಮಗೆ ರಕ್ಷಣೆ ಕೊಡು ನಮ್ಮನ್ನು  ಕಾಪಾಡು”ಎಂದು  ಬೇಡಿ ಕೊಂಡರು .ತನ್ನ ಭಕ್ತರ ಕಷ್ಟವನ್ನು ಅರಿತ ಮಂತ್ರ ದೇವತೆ ಒಂದು ಸುಂದರ ಹೆಣ್ಣಾಗಿ ಆವಿರ್ಭವಿಸಿ ,ತನ್ನ ಒಡನಾಡಿ ಹೆಣ್ಣು ಮಕ್ಕಳೊಂದಿಗೆ ಒಂದು ಕೆರೆಯಲ್ಲಿ/ಹೊಳೆಯಲ್ಲಿ  ಜಲ ಕ್ರೀಡೆಯಾಡುತ್ತದೆ. ಆ ಹೆಣ್ಣಿನ ರೂಪು ಬೆಡಗು ಬಿನ್ನಾಣ ನೋಡಿ ಮರುಳಾದ ಆಲಿ ಬ್ಯಾರಿ ಅವಳಲ್ಲಿ ಮೋಹಗೊಂಡು ಕೆರೆಯ ಬಳಿಗೆ ಬರುತ್ತಾನೆ . ಆಗ ಆ ಹೆಣ್ಣಿನ ಮಾಯಾ ರೂಪು ಅವನಲ್ಲಿ ನೀನು ಬಟ್ಟೆಯನ್ನು ಕಳಚಿ ಕೆರೆಗೆ ಬರಬೇಕು ಎಂದು ಹೇಳುತ್ತದೆ .ಅಂತೆಯೇ ಅವನು ತನ್ನ ಬಟ್ಟೆಯನ್ನು ಬಿಚ್ಚಿ ಕೆರೆಗೆ ಇಳಿಯುತ್ತಾನೆ   © copy rights reserved(c)Dr.Laxmi g Prasad .ಆಗ ಆ ಹೆಣ್ಣು ರೂಪದ ಮಂತ್ರ ದೇವತೆ ಅದು ನಿನ್ನ ಕೊರಳಲ್ಲಿ ಇರುವುದು ಏನು ?ಅದನ್ನು ಅಲ್ಲಿಟ್ಟು ಬಾ “ಎಂದು ಹೇಳಿ ಅವನ ಮಂತ್ರ ಶಕ್ತಿಯಿರುವ ತಾಯಿತವನ್ನು ತೆಗೆಯುವಂತೆ ಹೇಳುತ್ತದೆ . ಹೆಣ್ಣಿ ಮೋಹಕ್ಕೆ ಒಳಗಾದ ಆತ ಹಿಂದೆ ಮುಂದೆ ವಿವೇಚಿಸದೆ ತನ್ನ ಮಂತ್ರ ಶಕ್ತಿಯ ತಾಯಿತವನ್ನು ತೆಗೆದಿಟ್ಟು ಕೆರೆಗೆ ಇಳಿಯುತ್ತಾನೆ 

ಮೋಹಕ್ಕೆ ಒಳಗಾದ ಆತ ಹಿಂದೆ ಮುಂದೆ ವಿವೇಚಿಸದೆ ತನ್ನ ಮಂತ್ರ ಶಕ್ತಿಯ ತಾಯಿತವನ್ನು ತೆಗೆದಿಟ್ಟು ಕೆರೆಗೆ ಇಳಿಯುತ್ತಾನೆ 

.ಮಂತ್ರ ಶಕ್ತಿಯುಳ್ಳ ತಾಯಿತದ ಬಲವಿಲ್ಲದ ಆತನನ್ನು ಸ್ತ್ರೀ ರೂಪಿನ ಮಂತ್ರ ದೇವತೆ ಸಂಹರಿಸುತ್ತದೆ ಎಂಬ ಐತಿಹ್ಯವು ಪ್ರಚಲಿತವಿದೆ . ಆತನನ್ನು ಮಂತ್ರ ದೇವತೆ ತನ್ನ ಸೇರಿಗೆ ದೈವವನ್ನಾಗಿ ಮಾಡುತ್ತದೆ .ಆತ ಮುಂದೆ ಆಲಿ ಭೂತ ,ಆಲಿ ಚಾಮುಂಡಿ ಭೂತವಾಗಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾನೆ

ಇಲ್ಲಿ ಇನ್ನೊಂದು ರೀತಿಯ ಐತಿಹ್ಯವಿದೆ.ಒಮ್ಮೆ ಆಲಿ ಬ್ಯಾರಿ ಹಲಸಿನ ಹಣ್ಣೊಂದನ್ನು ಮನೆಗೆ ತರುವಾಗ ಸ್ನೇಹಿತರು ಸಿಕ್ತಾರೆ ,ಎಲ್ಲರೂ ಹಲಸಿನ ಹಣ್ಣನ್ನು ತಿನ್ನುತ್ತಾರೆ‌ನಂತರ ಮಾತಿನ‌ನಡುವೆ ಅವರಿಗೆ ವಿವಾದ ಆಗುತ್ತದೆ ಆಗ ಆಲಿ ಬ್ಯಾರಿ  ನಾನು ತಂದ ಹಲಸಿನ ಹಣ್ಣು ತಿಂದು ಮಾತಾಡ್ತೀರಿ ಎಂದು ಆಕ್ಷೇಪ ಮಾಡ್ತಾನೆ.ಆಗ ಅವನ ಸ್ನೇಹಿತರು ಹಲಸಿನ ಹಣ್ಣಿನ ಬೆಲೆ ಹೇಳುಕೊಡ್ತೇವೆ ಎನ್ನುತ್ತಾರೆ.ಆಗ ಅವನು ಆ ಹಲಸಿನ ಹಣ್ಣಿನಲ್ಲಿ ಎಷ್ಟು ಮುಳ್ಳು ಇದೆಯೋ ಅಷ್ಟು ರುಪಾಯಿ ಕೊಡಬೇಕೆನ್ನುತ್ತಾನೆ ಹೀಗೆ ಜಗಳವಾಗಿ ಅವನು ದುರಂತವನ್ನಪ್ಪಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾನೆ

ಮತ್ತೊಂದು ಐತಿಹ್ಯದಂತೆ ತನಗೆ ಆಶ್ರಯ ಕೊಟ್ಟ ಬಿಲ್ಲವರ ಮನೆ ಹುಡುಗಿಗೆ ಕಿರುಕುಳ ನೀಡಿದಾಗ ಕಂಬ ದೀಪದಲ್ಲಿ ಚುಚ್ಚಿ ಅವನನ್ನು ಕೊಲ್ಲುತ್ತಾಳೆ ಮುಂದೆ ಅವಳು ದೈವತ್ವ ಪಡೆದು   ಮಂತ್ರ ಮೂರ್ತಿ ಎಂಬ ಹೆಸರಿನಲ್ಲಿ ಆರಾಧನೆ ಪಡೆಯುತ್ತಾಳೆ ,ಆಲಿ ಬ್ಯಾರಿ ಕೂಡ ಸೇರಿಗೆ ದೈವವಾಗಿ ಆಲಿ ಭೂತ ಅಲಿ ಚಾಮುಂಡಿ ಎಂಬ ಹೆಸರಿನಲ್ಲಿ ಆರಾಧನೆ ಪಡೆಯುತ್ತಾನೆ.


ಅಲೌಕಿನ ನೆಲೆ ಪ್ರಶ್ನಾತೀತ .ಅದನ್ನು ನಾನೂ ಇರುವ ಹಾಗೆಯೇ  ಒಪ್ಪುವೆ 


ಆದರೆ ವಾಸ್ತವಿಕ ನೆಲೆಯಲ್ಲಿ ಆಲೋಚಿಸುವುದಾದರೆ ಅಕಸ್ಮಾತ್ ಆಗಿ ಕೆರೆಯಲ್ಲಿ ಮುಳಗಿ ದುರಂತವನ್ನಪ್ಪಿರುವ ಆಲಿ ಬ್ಯಾರಿಯ ಜೊತೆಗೆ ದೈವ ಕಥಾನಕ ಸೇರಿಕೊಂಡಿರುವ ಸಾಧ್ಯತೆ ಇದೆ .ಅಥವಾ ಹೆಣ್ಣಿನ ಮರುಳನಾದ ಆತ ಕೆರೆ /ಹಳ್ಳದಲ್ಲಿ ಸ್ನಾನ ಮಾಡುತ್ತಿರುವ ಸ್ತ್ರೀ ಸಮೀಪಕ್ಕೆ ಹೋಗಲೆತ್ನಿಸಿ ದುರಂತವನ್ನಪ್ಪಿರಬಹುದು ,ಈ ಬಗ್ಗೆ “ಅತಿರೇಕದ ವರ್ತನೆಯ ಮಂತ್ರವಾದಿಯೋಬ್ಬನನ್ನು ಜನರೇ ಸಿಟ್ಟಿಗೆದ್ದು ಗುಪ್ತವಾಗಿ ಮುಗಿಸಿದ ವೃತ್ತಾನ್ತಕ್ಕೆ ಬೇರೊಂದು ಬಣ್ಣ ಬಂದಿರಲೂ ಬಹುದು .ಭೂತ ಮಹಿಮೆಗಳನ್ನು ಪ್ರಚುರ ಗೊಳಿಸಲು ಇಂತ ಕಥೆಗಳು ಅನುಕೂಲ “ಎಂದು ಡಾ. ಅಮೃತ ಸೋಮೆಶ್ವರರು ಅಬಿಪ್ರಾಯ ಪಟ್ಟಿದ್ದಾರೆ .ಇತರ ಭೂತಗಳಂತೆ ಆಲಿ ಭೂತಕ್ಕೆ ಅಣಿ ಜಕ್ಕೆಳಣಿ ಗಳು ಇರುವುದಿಲ್ಲ ಈತನಿಗೆ ಬಣ್ಣ ಬಣ್ಣದ ಲುಂಗಿ ,ಸೊಂಟದ ಪಟ್ಟಿ ,ತಲೆಗೆ ಬಂಗಾರದ /ಬೆಳ್ಳಿಯ ಟೊಪ್ಪಿ ಇರುತ್ತದೆ.ಮೈಗೆ ಗಂಧ ಪೂಸಿ ಮುಖಕ್ಕೆ ಕಪ್ಪು ಬಣ್ಣ ಹಾಕಿದ ಸರಳ  ಅಲಂಕಾರ ಇರುತ್ತದೆ©.Dr.Laxmi g Prasad

ಈ ಭೂತಕ್ಕೆ ತುಂಬಾ ಜನರು ಹರಿಕೆ ಹಾಕುತ್ತಾರೆ.ಅನೇಕ ಮುಸ್ಲಿಂ ಸ್ತ್ರೀ ,ಪುರುಷರೂ ಆಲಿ ಭೂತಕ್ಕೆ ಹರಿಕೆ ಒಪ್ಪಿಸಿತ್ತಾರೆ .”ವೇಶ್ಯಾ ವೃತ್ತಿಯ ಹೆಂಗಳೆಯರೂ ಈತನಿಗೆ ನಡೆದುಕೊಳ್ಳುತ್ತಾರೆ,ಈ ವರ್ಷದ ಬೆಳೆ ಹೇಗಿದೆ ? ಎಂಬ ಸರಸ ಪ್ರಶ್ನೆಯನ್ನು ಈ ರಸಿಕ ದೈವ ಕೇಳುವುದುಂಟು “ಎಂದು ಅಮೃತ ಸೋಮೆಶ್ವರರು ಹೇಳಿದ್ದಾರೆ ,”ಮುಸ್ಲಿಂ ಮೂಲದ ವ್ಯಕ್ತಿಯೊಬ್ಬ ದೈವೀಕರಣಗೊಂಡು ಸಾವಿರಾರು ಜನರ ಆರಾಧ್ಯ ಶಕ್ತಿಯಾಗಿರುವುದು ವಿಶೇಷ  ಮಾತ್ರವಲ್ಲ,ಈ ಆರಾಧನಾ ವಿದ್ಯಮಾನವು ಆರಾಧನಾ ಮಟ್ಟದ ಕೋಮು ಸೌಹಾರ್ದಕ್ಕೆ ಒಂದು ಕೊಡುಗೆಯೂ ಆಗಿದೆ “ಎಂದು ಅಮೃತ ಸೋಮೆಶ್ವರರು ಅಭಿಪ್ರಾಯ ಪಟ್ಟಿದ್ದಾರೆ .  

ಉಳಿದ ಮುಸ್ಲಿಂ ಮೂಲದ ದೈವಗಳ‌ ಮಾಹಿತಿ ನನ್ನ  ಕೃತಿ ಕರಾವಳಿಯ ಸಾವಿರದೊಂದು ದೈವಗಳು ಕೃತಿಯಲ್ಲಿದೆ 

© ಡಾ.ಲಕ್ಷ್ಮೀ ಜಿ‌ ಪ್ರಸಾದ್ 

mobile : 9480516684 

ಕರಾವಳಿಯ ಸಾವಿರದೊಂದು ದೈವಗಳು ಕೃತಿಯ ಆಯ್ದ ಭಾಗ 

ತುಳು ಸಂಸ್ಕೃತಿಯ ಹೊನ್ನ ಕಿರೀಟಕ್ಕೆ ಇಟ್ಟ ನವಿಲು ಗರಿ

-ಡಾ.ಮೊಗಸಾಲೆ ಕಂಡಂತೆ ಕರಾವಳಿಯ ಸಾವಿರದೊಂದು ದೈವಗಳು 

ಡಾ. ಲಕ್ಷ್ಮೀ ಪ್ರಸಾದ್ (ಲಕ್ಷ್ಮೀ ವಾರಣಾಸಿ) ಅವರು ಕಾಸರಗೋಡು ಜಿಲ್ಲೆಯ ಕೋಳ್ಯೂರು ಗ್ರಾಮದ ವಾರಣಾಸಿ ಮೂಲದವರು .ಇವರ ತಂದೆ ವೇದಮೂರ್ತಿ ನಾರಾಯಣ ಭಟ್ಟರು  ವಿದ್ವಾಂಸರೆಂದು ಪ್ರಸಿದ್ಧರು. ತನ್ನ ಮನೆತನವು ವೈದಿಕಾಚರಣೆಯನ್ನೇ ಹೊಂದಿದ್ದರೂ, ಕುಟುಂಬದಲ್ಲಿ ದೈವದ ಆರಾಧನೆಯನ್ನು ಮಾಡುತ್ತಿರುವುದೇಕೆ ಎಂಬ ಕುತೂಹಲವೇ ಡಾ. ಲಕ್ಷ್ಮೀ ಪ್ರಸಾದ್ ಅವರಿಗೆ ಪ್ರೇರಣೆಯಾಗಿ ಅವರು ಈ ಕುರಿತಾದ ಸಂಶೋಧನೆಗೆ ಇಳಿದರು. 


ಇದರಿಂದ ಕರಾವಳಿ ಕರ್ನಾಟಕದ ಅಂದರೆ ಅವಿಭಜಿತ ದ.ಕ.ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ಕೊಡಗನ್ನೂ ಒಳಗೊಂಡಂತೆ ದೈವರಾಧನೆಯ ಆಶಯ ಆಕೃತಿಯನ್ನು ನಿರಂತರ ಸಂಶೋಧಿಸಲು ಅವರು ಮುಂದಾದರು. ಈ ನಿರಂತರತೆ ಇಪ್ಪತ್ತೊಂದು  ವರುಷಗಳ ಕಾಲ ನಡೆದುದರ ಪರಿಣಾಮವಾಗಿ ಈ ಮೇಲಿನ ಪ್ರದೇಶಗಳಲ್ಲಿ ಒಟ್ಟು ಎರಡು ಸಾವಿರದ ಇನ್ನೂರ ಮೂವತ್ತು  ದೈವಗಳು ಆರಾಧಿಸಲ್ಪಡುತ್ತವೆ ಎನ್ನುವ ಸತ್ಯ ಗೋಚರಿಸಿತು.


ಹಿರಿಯ ಜಾನಪದ ತಜ್ಞರೂ ವಿದ್ವಾಂಸರೂ ಆಗಿರುವ ಪ್ರೊ| ಬಿ.ಎ.ವಿವೇಕ ರೈ ಅವರು ತಮ್ಮ ಮಹಾಪ್ರಬಂಧದಲ್ಲಿ (1985) ಇನ್ನೂರ ಅರುವತ್ತೇಳು  ,ಇನ್ನೋರ್ವ ಜಾನಪದ ವಿದ್ವಾಂಸ ಪ್ರೊ| ಚಿನ್ನಪ್ಪಗೌಡರು ಇದನ್ನು ಪರಿಷ್ಕರಿಸಿ  ತಮ್ಮ ಮಹಾಪ್ರಬಂಧದಲ್ಲಿ (1990) ಮುನ್ನೂರು , ಮುಂದೆ ರಘುನಾಥ ವರ್ಕಾಡಿಯವರು ತಮ್ಮ ‘ಕಂಡಂಬಾರು ಮಲರಾಯ’ ಕೃತಿಯಲ್ಲಿ (2011) ನಾಲ್ಕು ನೂರ ಏಳು ದೈವಗಳ ಹೆಸರುಗಳನ್ನು ಪಟ್ಟಿ ಮಾಡಿದ್ದಾರೆ.


ಆಮೇಲೆ ಈ ಬಗ್ಗೆ ಸಂಶೋಧನೆ ನಡೆದದ್ದು ಕಡಿಮೆ ಅಥವಾ ಈ ಅರಿವಿನಲ್ಲೆ ಗಿರಕಿ ಹೊಡೆದದ್ದೇ ಹೆಚ್ಚು. ಆದರೆ ಡಾ. ಲಕ್ಷ್ಮಿ ಪ್ರಸಾದ್ ಅವರ ಆಸಕ್ತಿ ಅಥವಾ ಜಿಜ್ಞಾಸೆಯು ತಾವು ರಚಿಸಿದ ಮಹಾಪ್ರಬಂಧದ ಹೊತ್ತಿಗೆ (2007) ಸಾವಿರದ ನಾಲ್ಕು ನೂರ ಮೂವತ್ತೈದು ದೈವಗಳ ಕ್ಷೇತ್ರ ಕಾರ್ಯದ ತನಕ ಹಬ್ಬಿತು. ಇದೀಗ ಅವರು ಎರಡು ಸಾವಿರದ ಇನ್ನೂರ ಮೂವತ್ತು   ದೈವಗಳನ್ನು ಸಾಕ್ಷಿ ಸಮೇತ ಗುರುತಿಸಿ ನಾಡು ಬೆರಗಾಗುವಂತೆ ಮಾಡಿದ್ದಾರೆ.


ತುಳು ಸಂಸ್ಕೃತಿಯ ಪ್ರಧಾನ ಅಂಗವಾಗಿ ದೈವಾರಾಧನೆ ಇದೆ. ಅದು ಇಲ್ಲದ ತುಳು ಸಂಸ್ಕೃತಿಯೇ ಇಲ್ಲ ಎನ್ನುವುದು ಅದರ ಪಾರಮ್ಯ. ನಂಬಿಕೆಯ ಆಧಾರದ ಮೇಲೆ ನಿಂತಿರುವ ಈ ಆರಾಧನಾ ಪದ್ಧತಿಯು ಶತಮಾನಗಳ ಪರಂಪರೆಯುಳ್ಳದ್ದು. ಇಂಥ ಸಂಸ್ಕೃತಿಯ ಬೇರುಗಳ ಆಳಕ್ಕೆ ಇಳಿದು ಚಿನ್ನವನ್ನು ಅಗೆದು ತೆಗೆದು ಪುಟಕ್ಕಿಡುವ ಹಾಗೆ ಮಾಡುವ ಕೆಲಸವು ಸಂಕೀರ್ಣವೂ, ಸಂಕಷ್ಟದ್ದೂ ಹೌದು, ಹಾಗೆಯೇ ಪುರುಷರಿಗಷ್ಟೇ ಸೀಮಿತ ಎನ್ನುವಂತಿದ್ದ ಈ ಸಂಶೋಧನೆಯನ್ನು  ಮಹಿಳೆಯರು ಮಾಡಬಹುದೆನ್ನುವಂತೆ ಡಾ.ಲಕ್ಷ್ಮೀ ಪ್ರಸಾದರು ಮಾಡಿ ತೋರಿಸಿದ್ದಾರೆ. 


ಇದಕ್ಕೆ ಅವರು ಹುಟ್ಟಿದ ಗಂಡು ಮೆಟ್ಟಿನ ನೆಲದ ಪ್ರಭಾವ ಎಷ್ಟು ಕಾರಣವೋ ಅಷ್ಟೇ ಅವರ ಗಂಡೆದೆಯೂ ಕೂಡಾ! 

ಡಾ. ಲಕ್ಷ್ಮೀ ಪ್ರಸಾದರು ಸಂಸ್ಕೃತ( ಮೊದಲನೆಯ ರ್ಯಾಂಕ್) ಹಿಂದಿ ಮತ್ತು ಕನ್ನಡ( ನಾಲ್ಕನೆಯ ರ್ಯಾಂಕ್), ದಲ್ಲಿ ಸ್ನಾತಕೋತ್ತರ ಪದವೀಧರರು. ಒಂದು  ಎಂ.ಫಿಲ್ ಪದವಿ  ಹಾಗೂ ಎರಡು ಪಿ.ಹೆಚ್.ಡಿ ಪದವಿಗಳ ಗರಿಯೂ ಅವರ ಸಾಧನೆಗೆ ದಕ್ಕಿದೆ. 


ಬದುಕನ್ನು ಅಧ್ಯಯನ ,ಅಧ್ಯಾಪನ ಮತ್ತು ಸಂಶೋಧನೆಗಳಿಗೆ  ಮೀಸಲಿಟ್ಟಿರುವ ಅವರ ಈ ಇಪ್ಪತ್ತಮೂರನೆಯ   ಕೃತಿ ಅವರ ಮಹಾತ್ವಾಕಾಂಕ್ಷೆಯ ಶಿಖರ.


ಸರಕಾರದ ಆಶ್ರಯವಿಲ್ಲದೆ, ಅಕಾಡಮಿಗಳ ಪ್ರೋತ್ಸಾಹವಿಲ್ಲದೆಯೇ  ತನಗೆ ತಾನೇ ಸ್ವಯಂ ಭೂವಾಗಿ ನಡೆಸಿದ ಈ ಕ್ಷೇತ್ರ ಕಾರ್ಯ ಆಧಾರಿತ ಅಧ್ಯಯನ ಅಪರೂಪದಲ್ಲಿ ಅಪರೂಪದ್ದು.


 ಭೂತ ಕಟ್ಟುವ ಜನಾಂಗದವರಿಂದ ಮತ್ತು ಇನ್ನಿತರ ಸಂಸ್ಕೃತಿ ಚಿಂತಕರ ಮೂಲದ ಐತಿಹ್ಯಗಳಿಂದ ಸಂಗ್ರಹಿಸಲ್ಪಟ್ಟು ವಿಶ್ಲೇಷಿಸಲ್ಪಟ್ಟ ಅವರ ಸಂಶೋಧನೆಯ  ಆಯ್ದ ಸಾವಿರದ ಇನ್ನೂರ ಎಂಟು   ದೈವ(1228)ಗಳ ಮಾಹಿತಿಗಳನ್ನು ಈ ಗ್ರಂಥದಲ್ಲಿ ಅವರು ಅನಾವರಣಗೊಳಿಸಿದ್ದಾರೆ. 


ಇದು ತುಳು ಸಂಸ್ಕೃತಿಯ ಹೊನ್ನ ಕಿರೀಟಕ್ಕೆ ಇಟ್ಟ ನವಿಲಗರಿ.


ಇದು ‘ಪಿಂತಿಲ್ಲ ಮುಂತಿಲ್ಲ’ ಎನ್ನುವ ಜಾನಪದ ಸಂಶೋಧನೆಯ ಆಚಾರ್ಯಕೃತಿಯಾಗಿದ್ದು ‘ಅಯ್ಯಯ್ಯ ಎಂಚ ಪೊರ್ಲಾಂಡ್‍ಂದ್ ತುಳುವರು ಮೈಯುಬ್ಬಿ ಹೇಳಬೇಕಣ್ಣ’ ಎನ್ನುವುದನ್ನು ಈ ಕಾಲದಲ್ಲಿ ಅನುರಣಿಸಲು ಕಾರಣವಾಗಿರುವ ವಿಸ್ಮಯ.


ಸ್ಥಳ : ಕಾಂತಾವರ           ಡಾ.ನಾ.ಮೊಗಸಾಲೆ

 ದಿ: 01.08.2021          ಕನ್ನಡ ಸಂಘ, ಕಾಂತಾವರ


https://avadhimag.in/%E0%B2%A8%E0%B2%BE-%E0%B2%AE%E0%B3%8A%E0%B2%97%E0%B2%B8%E0%B2%BE%E0%B2%B2%E0%B3%86-%E0%B2%95%E0%B2%82%E0%B2%A1%E0%B2%82%E0%B2%A4%E0%B3%86-%E0%B2%95%E0%B2%B0%E0%B2%BE%E0%B2%B5%E0%B2%B3%E0%B2%BF/


 ಕರಾವಳಿಯ ಸಾವಿರದೊಂದು ದೈವಗಳು

ಮಾಹಿತಿಗಾಗಿ 9480516684 ಗೆ  ವಾಟ್ಸಪ್ ಮಾಡಬಹುದು 

ಅನುಕ್ರಮಣಿಕೆ 315  ಅಧ್ಯಾಯಗಳು

1 ಅಕ್ಕಚ್ಚು

2- ಅಕ್ಕ ಬೋಳಾರಿಗೆ

3-4ಅಕ್ಕೆರ್ಲು- ಅಂಬೆರ್ಲು

5-6 ಅಚ್ಚು ಮತ್ತು ಮೆಚ್ಚು ಬಂಗೇತಿಯರು

7 ಅಗ್ನಿ ಕೊರತಿ

8-13  ಅಗ್ನಿ ಭೈರವನ್ ಮತ್ತು ಪರಿವಾರ 

13- 15 ಅಜ್ಜ ಬಳಯ  ಮತ್ತು ಮಾಮಿ ಕುಲೆ

15-17 ಅಜ್ಜಮ್ಮ ದೇವರು ಮತ್ತು ಪರಿವಾರ 

18-26 ಅಜ್ಜಿ ಭೂತ , ಕೂಜಿಲು ಮತ್ತು ಇತರ ದೈವಗಳು

27  ಅಜ್ಜಿ ಬೆರೆಂತೊಲು

28-29 ಅಜ್ಜೆರ್ ಭಟ್ರು ಮತ್ತು ಅಜ್ಜೆರ್ ಪರಿವಾರ

30 ಅಡ್ಯಲಾಯ

31   ಅಡ್ಯಂತಾಯ

32-33 ಅಡಿ ಮಣಿತ್ತಾಯ ಮತ್ತು ಅಡಿಮರಾಂಡಿ

34-35  ಅಣ್ಣ ತಮ್ಮ ದೈವಗಳು/ಅತ್ತಾವರದ ದೈವಗಳು

36-37  ಅಣ್ಣೋಡಿ ಕುಮಾರ- ಕಿನ್ಯಂಬು

38  ಗುಟ್ಟು ಬಿಟ್ಟು ಕೊಡದ ಅಬ್ಬೆ ಜಲಾಯ

39 -40 ಅರಬ್ಬಿ ಮತ್ತು ಬ್ರಾಂದಿ 

41-44 ಅರಸು ಬಂಗಾಡಿತ್ತಾಯ ಮತ್ತು ಸೇರಿಗೆ ದೈವಗಳು

45 ಅಸುರಾಳನ್/ ಅಸುಳಾನುಂ ಮಕ್ಕಳು

46-47 ಅಂಗಕ್ಕಾರನ್ ಮರುಟೋಳನ್

48 ಅಂಗಾರ ಬಾಕುಡ

49 ಅಂಮಣ ಬನ್ನಾಯ

50-51 ಅಂಕೆ- ಉಮ್ಮಯ

52  ಆಚಾರಿ ಭೂತ

53 ಆಟಕಾರ್ತಿ

54  ಆಟಿ ಕಳೆಂಜ

55-57 ಆದಿ ವೇಡನ್ ಮತ್ತು ಪರಿವಾರ 

58 ಇಷ್ಟಜಾವದೆ 

59 ಉಗ್ಗೆದಲ್ತಾಯ 

60 ಉಮ್ಮಲ್ತಿ 

61-62 ಉಪ್ರಝಾಸ್ಸಿ ಮತ್ತು ಉಚ್ಚಬಲಿ ತೆಯ್ಯಂ

63-64 ಉರವ ಎರುಬಂಟ

65-88 ಉಳ್ಳಾಕುಲು   ಮತ್ತು ಉಳ್ಳಾಲ್ತಿ ದೈವಗಳು

89-90 ಎರು ಶೆಟ್ಟಿ( ಮಲೆ ಮುದ್ದ)

91-92  ಎಂಬ್ರಾನ್ ದೇವ- ಐಪ್ಪಳ್ಳಿ

93-99 ಏಲುವೆರ್ ಸಿರಿಕುಲು

100 ಒಕ್ಕು ಬಲ್ಲಾಳ

101-102 ಒರುಬಾಣಿಯೆತ್ತಿ ,ನೆಲ್ಲೂರಾಯ 

 103- 105 ಓಣಂ ದೈವಗಳು

106 ಓಟೆಚರಾಯ

107: ಕಟ್ಟು ಎಡ್ತುನ್ ಕುಟ್ಟಿ

108 ಕಟ್ಟದಲ್ತಾಯ

109-110 ಕಡವಿನ ಕುಂಞ ಮತ್ತು ಕಳವಿನ ಚಿಕ್ಕ

111-112 ಕಡಂಬಳಿತ್ತಾಯ,ಕೊಡಂಬಿಲ್ತಾಯ

113-114 ಕನಪಾಡಿತ್ತಾಯ ಮತ್ತು ಮಗ್ರಂದಾಯ

115  ಕನ್ನಡ ಕಲ್ಕುಡ

116  ಕನ್ನಡ ಬೀರ

117 ಕನ್ನಡ ಭೂತ

118-119 ಕನ್ನಲಾಯ ಮತ್ತು ಸ್ವಾಮಿ ನಂದೆದಿ

120 ಕನಿಯತಿ

121  ಕಪ್ಪಣ್ಣಣಿಕ/ ಕಾರ್ಯಸ್ಥನ್ 

 123-124 ಕರಿಯಣ್ಣ ನಾಯಕ ಮತ್ತು ಕೋಟಿ ನಾಯಕ 

125 ಕರಿಯ ಮಲ್ಲಯ್ಯ

  126-133 ಕರಿಂತಿರಿ ನಾಯರ್ ,ಪುಲಿಯೂರ್ ಕಾಳಿ ಮತ್ತು ಪುಲಿ ದೈವಗಳು 

134 -135 ಕರ್ನಗೆ ಮತ್ತು ಮಲಾರ್ ಜುಮಾದಿ

136-137  ಕಲಿಯಾಟ ಅಜ್ಜಪ್ಪ, ಕಾಟಾಳ ಬೊಳ್ತು

138-139 ಅಲಿಖಿತ ಇತಿಹಾಸ ಸಾರುವ ಕಲ್ಕುಡ ಕಲ್ಲುರ್ಟಿ ದೈವಗಳು 

140  ಕಂಡನಾರ ಕೇಳನ್

141  ಕಂರ್ಭಿ ಬೈದ್ಯೆದಿ

142  ಕಾಜಿಗಾರ್ತಿ

143-153  ಕಾಡ್ಯನಾಟದ ದೈವಗಳು 

154- 155  ಕಾಡೆದಿ  ಮತ್ತು ಕಾಡ್ತಿಯಮ್ನ

156-157 ಅತಿಕಾರೆ ಬೆಳೆಯನ್ನು ತಂದ ಕಾನದ ಕಟದರು

158-160 ಕಾನಲ್ತಾಯ ಮತ್ತು ಪರಿವಾರ ದೈವಗಳು

161-162 ಕಾಯರ್ತಾಯ ಮಾದ್ರಿತ್ತಾಯ

163-167 ಕಾರಿ ಕಬಿಲ ದೈವಗಳು 

168 ಕಾಳರಾತ್ರಿ 

169-172 ಧರ್ಮಸ್ಥಳದಲ್ಲಿ ನೆಲೆಸಿದ ದೈವಗಳು ಕಾಳರಾಹು,ಕಳರ್ಕಾಯಿ ,ಕುಮಾರ ಸ್ವಾಮಿ ಕನ್ಯಾಕುಮಾರಿ 

173-178  ಕಾಂತಾ ಬಾರೆ ,ಬೂದಾ ಬಾರೆ , ಅಚು ಬೈದ್ಯೆತಿ ,ಪುಲ್ಲ ಪೆರ್ಗಡ್ತಿ ,ಉಳ್ಳಾಯ ,ಸಾರಮಾನ್ಯ ದೈವಗಳು 

 179 ಕಾಂತು ನೆಕ್ರಿ ಭೂತ

180  ಕಿನ್ನಿದಾರು

181 ಕೀಳು ದೈವ

183-183 ಮದುಮಕ್ಕಳ ರೂಪದಲ್ಲಿ ಕಂಗೊಳಿಸುವ ಕುಕ್ಕೆತ್ತಿ ಬಳ್ಳು ದೈವಗಳು 

184-185 ಕುಜುಂಬ ಕಾಂಜವ ಮತ್ತು ಕಾಚು ಕುಜುಂಬ  ದೈವಗಳು

186-190 ಕುಟ್ಟಿಚ್ಚಾತ್ತನ್ ,ಪಮ್ಮಚ್ಚು ಮತ್ತು ಸೇರಿಗೆ ದೈವಗಳು 

191 ಕುಡಿ ವೀರನ್ 

192 ಕುದುರೆತ್ತಾಯ / ಕುದುರೆ ಮುಖ ದೈವ

 193-194 ಕುರವ ಮತ್ತು ಸತ್ಯಂಗಳದ ಕೊರತಿ

195 ಕುರುವಾಯಿ ದೈವ

196-203 ಕುಲೆ ಭೂತಗಳು - ತುಳುನಾಡಿನ ವಿಶಿಷ್ಟ ದೈವಗಳು

204   ಕುಂಞಮ್ಮ ಆಚಾರ್ದಿ

205  ಕುಂಞಾಳ್ವ ಬಂಟ

206 ಕುಂಞಿ ಭೂತ

207 ಕುಂಞಿ ರಾಮ ಕುರಿಕ್ಕಳ್

208 - 212 ಕುಂಜಿರಾಯ ದೈವಗಳು

213-214 ಕುಂಜಿ ಮತ್ತು ಅಂಗಾರ ದೈವಗಳು 

215  ಕುಂಜೂರಂಗಾರ

216 ಕುಂಟಲ್ದಾಯ

217 ಕುಂಟುಕಾನ ಕೊರವ

218-219 ಕುಂಡ - ಮಲ್ಲು ದೈವಗಳು 

220  ಕುಂಡೋದರ

221-224 ಕೆಂಚಣ್ಣ ಕರಿಯಣ್ಣ ಪಾಪಣ್ಣ ಮತ್ತು ಲಕ್ಷ್ಮೀ ನರಸಿಂಹ

225-226 ಕೇಚ ರಾವುತ ಮತ್ತು ರೇವಂತ 

227   ಕೇತುರ್ಲಾಯ

228-231 ಕೊಡಮಣಿತ್ತಾಯ,ವೈದ್ಯನಾಥ ,ಕುಡುಮದಾಯ ಮತ್ತು ಕುಕ್ಕಿನಂತಾಯ ದೈವಗಳು

 232 ಕೊಟ್ಟೆದಲ್ತಾಯ

233 ಕೊನ್ನೊಟ್ಟು ಕಡ್ತ

234  ತುಳುನಾಡಿನ ಜನಾನುರಾಗಿ ದೈವ ಕೊರಗ ತನಿಯ 

235 ಕೊರತಿ 

236 -237  ಕೊಲ್ಲಿ ಕುಮಾರ ಮತ್ತು ಕೊಲ್ಯತ್ತಾಯ

238-239 ಕೊಂಡಾಣದ ಬಂಟ ಮತ್ತು ತಂಕರು ಮೂಲ್ಯೆದಿ

240 ಅಪ್ರತಿಮ ವೀರ ಕೋಚು ಮಲ್ಲಿ 

241 242 ತುಳುನಾಡು ಬೆಳಗಿದ ಅವಳಿ ವೀರರು : ಕೋಟಿ ಚೆನ್ನಯರು

243-244 ಅಪ್ರತಿಮ ಸಾಹಸಿ ಕೋಟೆದ ಬಬ್ಬು ಮತ್ತು ಕಚ್ಚೂರ ಮಾಲ್ದಿ

245 ಕೋಟ್ರ ಗುತ್ತಿನ ಬಬ್ಬು 

246-247  ಕೋಟೆರಾಯ ಮತ್ತು ಕೋಟೇಶ್ವರ ದೈವಗಳು

248 ಕೋರಚ್ಚನ್ 

249 ಕೋಲು ಭಂಡಾರಿ

250   ಕೋಳೆಯಾರ ಮಾಮ

251ಗಣಪತಿ ಕೋಲ

252  ಗಂಗೆ ನಾಡಿ ಕುಮಾರ ,( ಓಡಿಲ್ತಾಯ)

253-254 ಗಂಡ ಗಣಗಳು ಮತ್ತು ಡೆಂಜಿ ಪುಕ್ಕೆ 

255-256 ಗಂಧರ್ವ ದೈವಗಳು

257   ಗಿಳಿರಾಮ

258  ಗಿಡಿರಾವಂತ

259 -260 ಗಿರಾವು ಮತ್ತು ಕೊಡೆಕಲ್ಲಾಯ

261 ಗುರು ಕಾರ್ನವೆರ್ 

262 ಗುರುನಾಥನ್ 

263-275 ಗುಳಿಗ ಮತ್ತು ಸೇರಿಗೆ  ದೈವಗಳು

( ಒರಿ ಮಾಣಿ ಗುಳಿಗ ,ಮಂತ್ರವಾದಿ ಗುಳಿಗ,ಸನ್ಯಾಸಿ ಗುಳಿಗ ,ತಂರ್ಜಿ ಗುತ್ತಿನ ಗುಳಿಗ ,ಮುಕಾಂಬಿ ಗುಳಿಗ,ಸಂಕೊಲಿಗ ಗುಳಿಗ,ಶಾಂತಿ ಗುಳಿಗ,ಸುಬ್ಬಿಯಮ್ಮ ಗುಳಿಗ,ಕಲಾಲ್ತಾಯ ಗುಳಿಗ ,ಜಾಗೆದ ಖಾವಂದೆರಾವು ಗುಳಿಗ,ಕಲಿಚ್ಚಿ,ಕಾಲನ್ ಗುಳಿಗ ) 

 276-300 ಚಾಮುಂಡಿ ಮತ್ತು ಸೇರಿಗೆದೈವಗಳು 

ಅಗ್ನಿ ಚಾಮುಂಡಿ ಗುಳಿಗ, ಕರಿ ಚಾಮುಂಡಿ,ಕೆರೆ ಚಾಮುಂಡಿ,ಚೌಂಡಿ,ಗುಡ್ಡೆ ಚಾಮುಂಡಿ ಅರದರೆ ಚಾಮುಂಡಿ ,ಅಸಗಲ ಚಾಮುಂಡಿ,ನಾಗ ಚಾಮುಂಡಿ,ಪಾಪೆಲು ಚಾಮುಂಡಿ, ನೆತ್ರಾಂಡಿ ,ಮನದಲಾತ್ ಚಾಮುಂಡಿ,ಮಾಪಿಳ್ಳ ಚಾಮುಂಡಿ ಕೋಮಾರು ಚಾಮುಂಡಿ ಇತ್ಯಾದಿ)

301-302 ಚಾವುಂಡೇಶ್ವರ ಮತ್ತು ಚಂಡಿಕೇಶ್ವರ 

303-314  ಚಿಕ್ಕು/ ಚಿಕ್ಕಮ್ಮ  ಪರಿವಾರ ದೈವಗಳು

 315 ಚಿನಿಕಾರ/ ಚೀನೀ ಬೂತಗಳು

316 ಚೆನ್ನಿಗರಾಯ

317-319 ಚೆಮ್ಮರತಿ,ಪಡುವೀರನ್ ದೈವಗಳು

320 ಚೆಂಬರ್ಪುನ್ನಾಯ

321-322 ಜಟಾಧಾರಿ ಮತ್ತು  ಶಾಂತ ದುರ್ಗೆ 

323 -334'  ಜಟ್ಟಿಗ  ದೈವಗಳು

(ಜೈನ ಜಟ್ಟಿಗ ಕೋಟೆ ಜಟ್ಟಿಗ ನೆತ್ರಾಣಿ ಜಟ್ಟಿಗ ಹೊಗೆವಡ್ಡಿ ಜಟ್ಟಿಗ ಅರಮನೆ ಜಟ್ಟಿಗ ಮಾಣಿ ಬೀರ ಜಟ್ಟಿಗಮಾಣಿಭದ್ರ ಜಟ್ಟಿಗ ಇತ್ಯಾದಿ) 

335-337 ಜಮೆಯ- ಜಮಯತಿ ,ಬಡೆದಿ ದೈವಗಳು

338  ಜಂಗ ಬಂಟ

339-340  ಜಾನು ನಾಯ್ಕ ಮತ್ತು ಬಂಡಿರಾಮ 

341  ಜಾರಂದಾಯ

342  ಜಾಲ ಬೈಕಾಡ್ತಿ

343   ಪನ್ನೆ ಬೀಡಿನ ಜಾಲ್ಸೂರಾಯ

344 ಜೋಕುಲು ದೈವೊಲು

345-346 ಜೈನ ಗುಜ್ಜಾರ್ಲು ಮತ್ತು ಜೈನ ಭೂತ 

347 ತಪ್ಪೇದಿ

348 ತನ್ನಿಮಾಣಿಗ 

 349-351 ತಂತ್ರಿಗಣಗಳು

352 ತಿಮ್ಮಣ್ಣ ನಾಯಕ

353-355 ತೆಕ್ಕನ್ ಕರಿಯಾತನ್, ಕನ್ನಿಕ್ಕೊರುಮಗನ್ ಮತ್ತು ಕೈಕೋಲನ್ ತೆಯ್ಯಂ

356 ತೋಡ ಕುಕ್ಕಿನಾರ್ 

357 ದಾರಮ್ಮ ಬಳ್ಳಾಲ್ತಿ 

358-361 ದಾರು ಕುಂದಯ ದೈವಗಳು 

362   ದೀಪದ ಮಾಣಿ

363   ದುಗ್ಗಲಾಯ ಮತ್ತು ಸುತ್ತು ಕೋಟೆ ಚಾಮುಂಡಿ 

364  ದೂಮ

365 ದೂಧುರ್ಮ / ದೂರ್ದುಮ 

366-367 ದೆಸಿಲು ಮತ್ತು ಕಿಲಮರತ್ತಾಯ

368 ದೇಬೆ ದೈವ,

369-370  ದೇರೆ ಮತ್ತು  ಮಾನಿ ದೈವಗಳು

371ದೇವಾನು ಪಂಬೆದಿಯಮ್ಮ

372 ದೇಯಿ ಬೈದೆತಿ

373-374 ದೇಸಿಂಗ ಉಳ್ಳಾಕುಲು ಮತ್ತು ,ಕೋಟೆದಾರ್

 375-378 ದೈವ ಸಾದಿಗೆ ಒಲಿಪ್ರಾಂಡಿ , ,ದೈವನ ಮುಟ್ನಾಯೆ ,ಅಡ್ಯೊಲ್ತಾಯೆ

379  ದೈವಂತಿ

380-400 ಧೂಮಾವತಿ ಮತ್ತು ಸೇರಿಗೆ ದೈವಗಳು 

ಕಾಂತೇರಿ ಜುಮಾದಿ,ಬಂಟ,ಮರ್ಲು ಜುಮಾದಿ,ಕರ್ಮಲೆ ಜುಮಾದಿ ,ದುರ್ಗಲ್ಲ ಜುಮಾದಿ,ಮಾಪುಳ್ತಿ ಧೂಮಾವತಿ ,ಪಡಿಂಞರೆ ಧೂಮಾವತಿ, ಧೂಮಹಾಸ್ತಿಯಮ್ಮ ,ಮಲಾರ್ ಜುಮಾದಿ ಮತ್ತು ಕರ್ನಗೆ ಇತ್ಯಾದಿ) 

401-404 ನಂದಿ ಹೆಸರಿನ ದೈವಗಳು ( ಹಿರೇ ನಂದಿ ಕಿರರ ನಂದಿ ,ಜೋಗಪ್ಪ ಶೆಟ್ಟಿ ,ನಂದಿಕೇಶ್ವರ ,ನಂದಿ ಗೋಣ) 

405-408  ನರಿ ತೆಯ್ಯಂ,ನರಿ ಪೂದ ಮತ್ತು ಸೇರಿಗೆ ದೈವಗಳು 

409 ನಂದಿಗೆನ್ನಾಯ

410-412  ನಾಗ ಕನ್ನಿಕೆ  ಮತ್ತು ನಾಗರಾಜರು 

413 ನಾಗ ದೈವ/ಭೂತ

414   ನಾಗ ಬ್ರಹ್ಮ 

415   ನಾಗ ಬ್ರಹ್ಮ ಮಂಡಲದ ದೈವಗಳು

416-417 ನಾರಳ್ತಾಯ ಮತ್ತು ಭೂತರಾಜ 

418 ನಾಲ್ಕೈತಾಯ

419-420  ನೀಚ ತನಿಯ ಮತ್ತು ಒಂಟಿ ಕಾಲಿನ ಬಬ್ಬರ್ಯ 

421-422  ನುರ್ಗಿಮದಿಮಾಲ್ ಮತ್ತು ದುರ್ಗಿ ಮದಿಮಾಲ್ 

423-424  ನೆತ್ತರು ಮುಗುಳಿ ಮತ್ತು ಭೈರವ 

425   ನೇರಳತ್ತಾಯ

426 -428  ನೈದಾಲ ಪಾಂಡಿ  ,ಪೂವತ್ತಿಮಾರ್ ಮತ್ತು ಮಹೇಶ್ವರನ್ ದೈವಗಳು

429 ಪಟ್ಟಾರ್ ತೆಯ್ಯಂ

430 ಪಟ್ಟೋರಿತ್ತಾಯ

431 ಪಡೆ ಬೀರ ಕಣ್ಣಂಡ ದೊಡ್ಡಯ್ಯ 

432-433 ಪಡ್ಕಂತಾಯ ಮತ್ತು  ಗೆಂಡಕೇತ್ರಾಯ

434 ಪತ್ತೊಕ್ಕೆಲು ಜನನಂದ ದೈವ

435-436:ಪನಯಾರ್  ಮತ್ತು ಸಂಪ್ರದಾಯ ದೈವ

437:ಪಯ್ಯ ಬೈದ್ಯ

438-443'ಪಯ್ಯಂಬಿಲ್ ಚಂದು ತಚ್ಚೋಳಿ ಒದೆನನ್ನ ಮತ್ತು ಪರಿವಾರ

444-445  ಪರವ  ಮತ್ತು ಪರಿವಾರ ನಾಯಕ

446 ಪಂಜಿ ಭೂತ

 447  -462 ಪಂಜುರ್ಲಿ ಮತ್ತು ಸೇರಿಗೆ ದೈವಗಳು

ಅಂಗಣತ್ತಾಯ ಪಂಜುರ್ಲಿ ಅಟ್ಟೊಡಾಯೆ ಪಂಜುರ್ಲಿ 

ಅಣ್ಣಪ್ಪ ಪಂಜುರ್ಲಿ ಅಲೇರ ಪಂಜುರ್ಲಿ

ಉಂರ್ದರ ಪಂಜುರ್ಲು ,ಒರಿ ಮರ್ಲೆ ಪಂಜುರ್ಲಿ

ಕಟ್ಟದಲ್ತಾಯ ಪಂಜುರ್ಲಿ ,ಕೆಂಪರ್ನ ಪಂಜುರ್ಲಿ ,ಕುಪ್ಪೆ ಪಂಜುರ್ಲಿ,ಕುಪ್ಪೆಟ್ಟು ಪಂಜುರ್ಲಿ

ಗಣಾಮಣಿ ಪಂಜುರ್ಲಿ,ಜುಂಬುರ್ಲಿ ,ತೆಲ್ಲಾರ್  ಪಂಜುರ್ಲಿ ದಾಸಪ್ಪ ಪಂಜುರ್ಲಿ

ದೆಂದೂರ ಪಂಜುರ್ಲಿ

ದೇವರ ಪೂಜಾರಿ ಪಂಜುರ್ಲಿ 

ಪಂಜಣತ್ತಾಯ ಪಂಜುರ್ಲಿ

ಬಗ್ಗು ಪಂಜುರ್ಲಿ,

ಬಗ್ಗು ಮೊಯ್ಲಿದಿ 

ವರ್ಣಾರ ಪಂಜುರ್ಲಿ 

ಸೇಮಿಕಲ್ಲ ಪಂಜುರ್ಲಿ 

468 ಪಾಣರಾಟ

469 ಪಿಲಿ ಭೂತ 

470 -471  ಪುದರ್ ಚಿನ್ನ ಬಂಟ ಮತ್ತು  ಪಿಲೆ ಪೆಲತ್ತಿ ದೈವಗಳು

472  ಪುದ  ಮತ್ತು ಪೋತಾಳ

473- 490 ಪುರಾಣ ದೇವತೆಗಳು ಮತ್ತು ಭೂತ ತೆಯ್ಯಂ ಗಳು

491-500ತುಳುನಾಡಿನ ಪುರುಷ ಭೂತಗಳು 

501  ಪುಲಂದಾಯ ಬಂಟ

502 ಪುಲಿಮರಂಞ ತೊಂಡನ್ 

503 -510  ಪುಲಿಯೂರ್ ಕಾಳಿ  ಪುಳ್ಳಿಕರಂಕಾಳಿ,ಕರಿಂತಿರಿ ನಾಯರ್ ಮತ್ತು ಐವರು ಹುಲಿ ದೈವಗಳು

511  ಪೆರಿಯಾಟ್ ಕಂಡನ್ 

512  ಪೆರುಂಬಳಯಚ್ಚನ್

513  ಪೊಟ್ಟನ್ 

514  520 ಪೊನ್ನಂಗಾಲತಮ್ಮೆ  ಮತ್ತು ಆರು  ಸಹೋದರರು

521 ಪೊನ್ವಾನ್ ತೊಂಡಚ್ಚನ್

522-525:ಪೊಸಮಹರಾಯ ,ಉಳ್ಳಾಲ್ತಿಯರುಮತ್ತು ಮಾಡ್ಲಾಯಿ 

526 -536 ಪೋಲೀಸ್,  ಕಳ್ಳ ,ಶಾನುಭಾಗ,ಪಟೇಲ, ಗುರಿಕ್ಕಾರ,ತಿಗಮಾರೆರ್ ,ಬಲಾಯಿಮಾರೆರ್,ಸೇನವ ,ಕಡೆಂಜು ಬಂಟ, ಸೇನವ ದೈವಗಳು

537 ಪೋಲೀಸ್ ತೆಯ್ಯಂ

 538-539 ಬಚ್ಚನಾಯಕ ಮತ್ತು ಮಂಞಣ ನಾಯಕ

540 -544 5ಬಬ್ಬರ್ಯ ಮತ್ತು ಸೇರಿಗೆ ದೈವಗಳು 

545-548 ಬಲವಾಂಡಿ ,ಕಂಡೆತ್ತಾಯ , ಉಳ್ಳಾಯ ,ಕುರಿಯಾಡಿತ್ತಾಯ

549  ಬಲ್ಲ ಮಂಜತ್ತಾಯ

550-555 ಬಲ್ಲಾಳ ಬಲ್ಲಾಳ್ತಿ ಮತ್ತು ಇತರ ದೈವಗಳು

556 ಬಲೀಂದ್ರ 

557  ಬಸ್ತಿನಾಯಕ

558 ಬಂಕಿ ನಾಯ್ಕ 

559-562 ಬಂಟಜಾವದೆ ಮತ್ತು ಉಳ್ಳಾಲ್ತಿ  ಪಡಿಕಲ್ಲಾಯ

562 ಬಾಕುಡತಿ

563 ಬಾಲೆ ಕನ್ಯಾಪು

564 -605 ಬ್ರಾಹ್ಮಣ ಮೂಲದ ದೈವಗಳು

606 ಬಿರ್ಮಣಾಚಾರಿ 

607 -608  ಬಿಲ್ಲಾರ ಬಿಲ್ಲಾರ್ತಿ ದೈವಗಳು

609 ಕುಂಬಳೆ ಸಿಮೆಯ ಪಟ್ಟದ ದೈವ ಬೀರಣ್ಣಾಳ್ವ

610  ಬೀರ್ನಾಚಾರಿ

611-613 ಬೂಡು ಬೊಮ್ಮಯ್ಯ ಮತ್ತು ಕತ್ತಲೆ ಬೊಮ್ಮಯ್ಯ,ಪಟ್ಟಂತರಸು

 614-616:ಬೆರ್ಮೆರ್,ಕಂಬೆರ್ಲು ಮತ್ತು ಹಕ್ಕೆರ್ಲು 

617-618 ಬೆಲೆಟಂಗರಜ್ಜ ಮತ್ತು ತಂಗಡಿ

619-620 ಬೇಡವ ಮತ್ತು ಬೇಟೆಗಾರ ದೈವಗಳು

621 ಬೊಟ್ಟಿ ಭೂತ

622 -625:ಬೋವ ದೈವಗಳು .

626 ಬೈನಾಟಿ 

627   ಬೈಸು ನಾಯಕ

628-690 ಭಗವತಿ ದೈವಗಳು

 692-694   ಭದ್ರಕಾಳಿ ,ಭದ್ರಕಾಳಿ ಭಗವತಿ ಮತ್ತು ವಣ್ಣಾತಿ ದೈವ

695 - 696  ಭದ್ರಕಾಳಿಮತ್ತು ಬೊಳ್ಳಿ ಬಿಲ್ ಅಯ್ಯಪ್ಪ 

697-698 ಭಂಡಾರಿ ಮತ್ತು ಪಿಲಡ್ಕತ್ತಾಯ

699 ಮಡಿಕತ್ತಾಯ

700-701 ಮದನಕ್ಕೆ ದೈಯಾರ್ ,ಕಳಿಗೋಂಕು ಮಾಬೀರರು

702-703'  ಮದಂಗಲ್ಲಾಯ ಕಡಂಗಲ್ಲಾಯ 

704-705 ಮದಿಮಾಯ ಮದಿಮಾಲ್

706ಮನಕ್ಕಡನ್ ಗುರುಕ್ಕಳ್ 

707 ಮನಕ್ಕೊಟ್ಟ ಅಮ್ಮ

708- 726 ಮನ್ಸರ  ದೈವಗಳು

717 ಮರಾಂಗಣೆ

718;ಮರುತಿಯೋಡನ್ ಕುರಿಕ್ಕಳ್

719-720  ಮಲಯಾಳ ಬ್ರಹ್ಮ ಮತ್ತು ಮಲ್ಯಾಳ ಭಟ್ರು 

721 ಮಲರಾಯ

722  ಮಲೆಕುಡಿಯರ ಅಯ್ಯಪ್ಪ 

723-726: ಮಲೆ ತಮ್ಮಚ್ಚ ಮತ್ತು ಪರಿವಾರ 

727-730 ಮಲೆರಾಯ ಮತ್ತು ಪರಿವಾರ 

 731 ಮಲೆಸಾವಿರ ದೈವ

732-733:ಮಂಗಳೆರ್ ಮತ್ತು  ಗುರು ಮಂಗೞೆರ್ 

734 -736:ಮಂತ್ರ ಗಣ ಮಂತ್ರ ದೇವತೆ ಮಂತ್ರ ಮೂರ್ತಿ ದೈವಗಳು

737 ಮಂದ್ರಾಯ

738-739 ಮಹಾಕಾಳಿ ಮತ್ತು ಮಾಂಕಾಳಿ ದೈವಗಳು

740-745 ಮಾಯಂದಾಲ್ ಮತ್ತು ಪರಿವಾರ  

746-747 ಮಾಯೊಲು ಮಾಯೊಲಜ್ಜಿ.

748-760 ಮಾರಿ ಭೂತಗಳು

761 -763 ಮಾಲಿಂಗ ರಾಯ ದಂಡಪ್ಪ ನಾಯಕ ಮಂಞ ನಾಯಕ ದೈವಗಳು

764 ಮಾಸ್ತಿಯಮ್ಮ 

765-766 ಮಿತ್ತೂರು ನಾಯರ್ ದೈವಗಳು


768-782 ಮುಗೇರ ದೈವಗಳು 

783 ಮುಡದೇರ್ ಕಾಳ ಭೈರವ 

784-786  ಮುತ್ತಪ್ಪನ್ ,ತಿರುವಪ್ಪನ್ ,ಮೂಲಂಪೆತ್ತಮ್ಮ

787  ಮುತ್ತು ಮಾರಿಯಮ್ಮ  

788 ಮುನಿಸ್ವಾಮಿ ದೈವ

789 ಮುವ್ವೆ ಮೂವ,ಮೂವಿಗೆ ವಾತೆ 

790 - 816ಮುಸ್ಲಿಂ ಮೂಲದ ದೈವಗಳು 

817 ಮೂಜಿಲ್ನಾಯ 

818-819 ಮೂಡೊಟ್ನಾರ್,ಪಡುವೆಟ್ನಾರ್ 

820 ಮೂರಿಲು

821 ಮೂರ್ತಿಲ್ಲಾಯ

822- 900 ಮೂಲ ಪುರುಷ ದೈವಗಳು 

901 ಮೆಕ್ಕೆ ಕಟ್ಟಿನ ಉರುಗಳು 

902-903  ಮೇರ ಮೇತಿಯರು

904 ಮೇಲಂಟಾಯ 

905 ಮೈಯೊಂದಿ

906  ಮೈಸಂದಾಯ

907 ಮೋಂದಿ ಕೋಲ

908 ಯಕ್ಷ ಯಕ್ಷಿಯರು ಮತ್ತು ಶ್ರೀಲಂಕಾದ  ಯಕುಮ ಕೋಲ 

909 -910  ರಕ್ತೇಶ್ವರಿ ಮತ್ತು ಬವನೊ

911 ರಾಜನ್ ದೈವಗಳು

912 -914 ವಣ್ಣಾತನ್ ವಯನಾಡು ಕುಲವನ್,ಕಣ್ಣನ್ 

915 ವಡ್ಡಮರಾಯ

916 ವಿದೇಶೀ ಕಾಫ್ರೀ ದೈವಗಳು

917 ವಿಷ್ಣು ಮೂರ್ತಿ ಮತ್ತು ಪಾಲಂದಾಯಿ ಕಣ್ಣನ್

919 - 920 ವೀರಭದ್ರ/ ವೈರಜಾತ್,ವೀರನ್ 

921-924 ವೀರ ವಿಕ್ರಮೆರ್ ಮತ್ತು ಇರ್ವೆರ್ ಬೈದ್ಯೆರ್

925 ವೆಳ್ಳು ಕುರಿಕ್ಕಳ್

926 ವೇಟಕ್ಕೊರುಮಗನ್

927 ವೈದ್ಯಾಚಾರ್ಯ/ ವೈದ್ಯರಾಜನ್ 

928 ಶಗ್ರಿತ್ತಾಯ ದೈವ 

929 ಶಂಕರ ಬಡವಣ

930 -932 ಶಾಸ್ತಾವು,ಕರಿ ಭೂತ,ಕೋಮಾಳಿ

933 ಶಿರಾಡಿ ಭೂತ.

934 ಶಿವರಾಯ 

935 ಶ್ರೀಮಂತಿ ದೈವ

936-937 ಸತ್ಯ ಮಾಗಣ್ತಿ ಮತ್ತು ಕಲ್ಲು ದೈವ 

938 -942 ಬಾಕುಡರ ಸರ್ಪಕೋಲದ ದೈವಗಳು

943 ಸರ್ಪಂಕಳಿ

944 ಸರ್ಪಂತುಳ್ಳಲ್

945 ಸಂನ್ಯಾಸಿ ಮಂತ್ರ ದೇವತೆ

946 ಸಾದಿಕರಾಯ ಮತ್ತು ಹಾದಿಕಾರಾಯ 

947 ಸಾರ ಮಾಂಕಾಳಿ

948 ಸ್ವಾಮಿ ದೈವ 

949-956 ಸೀತಾಯುಂ ಮಕ್ಕಳುಂ,ದೈವತಾರ್ ಮತ್ತು ಪರಿವಾರ

957: ಸುಬ್ಬರಾಯ

958 ಸೋಣದ ಜೋಗಿ

959 ಹನುಮಂತ/ ಸಾರ ಪುಲ್ಲಿದಾರ್ ದೈವ

960 -961ಹಳ್ಳತ್ತಾಯ ಮತ್ತು ಅಲ್ನತ್ತಾಯ 

962 ಹಳೆಯಮ್ಮ

963 -973 ಹಾಯ್ಗುಳಿ ಮತ್ತು ಪರಿವಾರ 

ಮೂಕ ಹಾಯ್ಗುಳಿ,ಕೆಪ್ಪ ಹಾಯ್ಗುಳಿ,ತಾತ್ರಯ್ಯ,ಅಕ್ಸಾಲಿ ,ಮೂಡೂರ್ ಹಾಯ್ಗುಳಿ ,ನೆತ್ರ ಹಾಯ್ಗುಳಿ ಇತ್ಯಾದಿ )

974 -995 ಹಿರಿಯಾಯ ದೈವಗಳು

( ಆನೆ ಬೈದ್ಯ,ಸಿದ್ದ ಮರ್ದ ಬೈದ್ಯ,ಬಗ್ಗ ಪೂಜಾರಿ, ನಾಡು ಬೈದ್ಯ, ಬೊಲ್ಲ ಬೈದ್ಯ,ದೇರೆ ಬೈದ್ಯ ,ಚೆನ್ನಪ್ಪ ಪೂಜಾರಿ ,ಸಿದ್ದ ಬೈದ್ಯ,ಕೊರಗ ಬೈದ್ಯ ಇತ್ಯಾದಿ );

996-997 ಹುಲಿ ಮತ್ತು ಹಸರ ತಿಮ್ಮ 

998 -1000 ಹೊಸಮ್ಮ ,ಹೊಸಳಿಗಮ್ಮ ಮತ್ತು ಕುಲೆ ಮಾಣಿಕೊ

1001 ಹೌಟಲ್ದಾಯ ಮತ್ತು ಮಾಳದ ಕೊರಗ 

ಅಧ್ಯಯನಾತ್ಮಕ ಗ್ರಂಥ   ಸಂಗ್ರಹ-© ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684

No comments:

Post a Comment