Wednesday, 11 February 2026

251 daiva book daiva research book - ನಮ್ಮ ಹೆಮ್ಮೆಯ ಓದುಗರು


 ನಮ್ಮ ಹೆಮ್ಮೆಯ ಓದುಗ ಮಿತ್ರರು..

ಸ್ವತಃ ಲೇಖಕರೂ ಉತ್ತಮ ಗಾಯಕರೂ ಆಗಿರುವ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರರಾದ ರಘುಪತಿ ತಾಮ್ಹನ್ ಕರ್ ಅವರು ಸದಾ ನನ್ನ ಅಧ್ಯಯನ ಮತ್ತು ಬರವಣಿಗೆಗೆ ಪ್ರೋತ್ಸಾಹ ಕೊಡುವವರು.


ಅವರು ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕವನ್ನು ತಗೊಂಡು ಓದಿ ಶುಭ ಹಾರೈಸಿದ್ದಾರೆ 

 ಧನ್ಯವಾದಗಳು ಸರ್ Raghupathi Thamankar  


""ಡಾ. ಶ್ರೀಮತಿ ಲಕ್ಷ್ಮೀ ಪ್ರಸಾದ್ ರವರೆ.. 

ನೀವು ಬರೆದ ಕರಾವಳಿಯ ಸಾವಿರ ದೊಂದು ದೈವಗಳು ಎಂಬ ಬೃಹತ್  ಗ್ರಂಥ ತಲುಪಿದೆ.


.ನಮ್ಮ ಕರಾವಳಿಯ ಐತಿಹಾಸಿಕ ,ಸಾಂಸ್ಕೃತಿಕ ವಿಶ್ಲೇ ಷಣಾ ತ್ಮಕ  ನೋಟವುಳ್ಳ ದೈವಗಳ ಬಗ್ಗೆ  ಇನ್ನೂ  ಚಾಲ್ತಿ ಯಲ್ಲಿ ಇರುವ ಪ್ರಾಚೀನ ಸಂಸ್ಕೃತಿಯ ಅನಾವರಣ ಇಲ್ಲಿ ಇದೆ..ನಿಮ್ಮ ಸಂಶೋಧನಾ ಗ್ರಂಥಗಳ ಪಟ್ಟಿಯೇ ಈಗಲೇ 21 ದಾಟಿದ್ದು ಇನ್ನೂ ಐದು ಗ್ರಂಥಗಳ ರಚನೆಯಲ್ಲಿ 

ತೊಡಗಿದ್ದೀರೆಂದು ತಿಳಿಯಿತು . ಇವುಗಳೆಲ್ಲವನ್ನೂ ಇಂಗ್ಲಿಷ್ ಸಹಿತ ದೇಶದ ಎಲ್ಲಾ ಭಾಷೆ ಗಳಲ್ಲಿ ತರ್ಜುಮೆ ಯಾಗಿ ದೇಶದ ಹಾಗೂ ಪರದೇಶದ ಜನರೂ ಓದುವಂತೆ   ಆಗಲಿ ಎಂದು ಹಾರೈಸುವೆ .ನೀವು ಬರೆದ ಪುಸ್ತಕವನ್ನು ಪ್ರೀತಿಯಿಂದ ಎತ್ತಿಕೊಂಡ ಫೋಟೋ ವನ್ನು ಕಳುಹಿಸಿದ್ದೇನೆ.. 

- ರಘುಪತಿ ತಾಮ್ಹನ್ ಕರ್ ಮೈಸೂರು

No comments:

Post a Comment