Saturday 31 August 2013

ತುಳು ಜನಪದರ ಸಿರಿ ಕೃಷ್ಣ


                ತುಳುನಾಡು ವಿಶಿಷ್ಟ ಸಂಸ್ಕೃತಿಯ ನೆಲೆವೀಡು. ಪಾಡ್ದನಗಳು ಇಲ್ಲಿನ ಸಂಸ್ಕೃತಿಯ ಅಭಿವ್ಯಕ್ತಿ ಮಾಧ್ಯಮದ ಕಾರ್ಯವನ್ನು ನಿರ್ವಹಿಸುತ್ತವೆ. ತುಳುವರ ನಂಬಿಕೆ ಆಗುಹೋಗುಗಳು ನೋವು ನಲಿವುಗಳು ಪಾಡ್ದನಗಳ ಮೂಲಕ ಹೊರಹೊಮ್ಮುತ್ತವೆ. ಕೊರಗ ತನಿಯ ಕೋಟೆದ ಬಬ್ಬು ಬಬ್ಬರ್ಯ, ಗುಳಿಗ ಮೊದಲಾದ ಭೂತಗಳು ತುಳುವರ ಆರಾಧ್ಯ ದೈವಗಳು. ಆದರೆ ಇಲ್ಲಿ ವೈದಿಕ ದೇವರುಗಳಾದ ರಾಮ ,ಕೃಷ್ಣ,ಈಶ್ವರ ,ಗಣಪತಿ,ಲಕ್ಷ್ಮಿ ಪಾರ್ವತಿ  ಮೊದಲಾದವರ  ಆರಾಧನೆ ಕೂಡಾ ಇದೆ .ಈ ವೈದಿಕ  ದೇವರುಗಳ ಕುರಿತಾಗಿ ಪಾಡ್ದನಗಳು ಕೂಡಾ ಇವೆ ,ಭೂತಗಳ ಕುರಿತಾದ ಐತಿಹ್ಯಗಳು ,ಕಥಾನಕಗಳು ಸಿಕ್ಕಿವೆ . ಇದರಲ್ಲಿ ವೈದಿ ಕ ದೇವರುಗಳ ಕುರಿತಾದ ಕಥಾನಕಗಳಲ್ಲಿ  ಬಹಳ ವೈಶಿಷ್ಟ್ಯಗಳಿವೆ.
ತುಳು ಜನಪದ ಸಾಹಿತ್ಯದಲ್ಲಿ ಅದರಲ್ಲಿಯೂ ವಿಶೇಷವಾಗಿ ಪಾಡ್ದನಗಳಲ್ಲಿ ಈಶ್ವರ, ಕೃಷ್ಣ ಮೊದಲಾದ ದೇವರುಗಳ ಉಲ್ಲೇಖವಿದೆ. ಇಲ್ಲಿ ದೇವರುಗಳು ಪುರಾಣದ ಕಲ್ಪನೆಗಿಂತ ಭಿನ್ನವಾಗಿ ಚಿತ್ರಿಸಲ್ಪಟ್ಟಿದ್ದಾರೆ.ನನ್ನ ಕ್ಷೇತ್ರ ಕಾರ್ಯದ ಸಂದರ್ಭದಲ್ಲಿ ನನಗೆ ಸಿಕ್ಕ ಪಾಡ್ದನಗಳಲ್ಲೇ ಅತ್ಯಂತ ಅಪೂರ್ವವಾದುದು ,ವಿಶಿಷ್ಟ ವಾದುದು ಚಂದಬಾರಿ ರಾಧೇ ಗೋಪಾಲ ಪಾಡ್ದನ .ಬಂಟ್ವಾಳದ ಮಣಿನಾಲ್ಕುರಿನ ಶ್ರೀಮತಿ ಶಾರದಾ ಜಿ ಬಂಗೇರರು ಈ ಪಾಡ್ದನವನ್ನು ಹಾಡಲು ತಿಳಿದಿದ್ದು, ನನ್ನ ವಿನಂತಿಯ ಮೇರೆಗೆ ಇದನ್ನು ಹಾಡಿದ್ದು, ನಾನು ರೆಕಾರ್ಡ್ ಮಾಡಿ ಲಿಪ್ಯಂತರ ಗೊಳಿಸಿ ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದೇನೆ ಕೂಡಾ. ಚಂದಬಾರಿ ರಾಧೆ ಸಿರಿಕೃಷ್ಣ ಪಾಡ್ದನದಲ್ಲಿ ಶ್ರೀಕೃಷ್ಣ ಪ್ರಧಾನ ಪಾತ್ರವಾಗಿದ್ದಾನೆ. ನಾಗಸಿರಿ ಕನ್ನಗೆ ಪಾಡ್ದನದಲ್ಲಿ ಕೂಡ ಕೃಷ್ಣನ ಪ್ರಸ್ತಾಪವಿದೆ. ಇಲ್ಲೆಲ್ಲ ಶ್ರೀಕೃಷ್ಣನನ್ನು ಮಹಾತ್ಮನನ್ನಾಗಿ ಚಿತ್ರಿಸಿಲ್ಲ. ಈ ಪಾಡ್ದನಗಳಲ್ಲಿ ಶ್ರೀಕೃಷ್ಣನನ್ನು ಸ್ತ್ರೀಲೋಲನಾಗಿ, ವಿಷಯಲಂಪಟನಂತೆ, ಕಳ್ಳರ ಕಳ್ಳನಂತೆ ಚಿತ್ರಿಸಲಾಗಿದೆ.
ಪುರಾಣದ ಪರಿಕಲ್ಪನೆಯಲ್ಲಿ ಶ್ರೀಕೃಷ್ಣ-ರಾಧೆಯರು ರಾಧೆಯರು ಅನುಪಮ ಪ್ರೇಮಿಗಳು. ಕೃಷ್ಣನಿಗೆ ಒಲಿದ ರಾಧೆ ತಾನಾಗಿಯೇ ಕೃಷ್ಣನೆಡೆಗೆ ಬಂದಂತೆ ಪುರಾಣಗಳಲ್ಲಿದೆ. ಆದರೆ ಚಂದಬಾರಿ ರಾಧೆ ಸಿರಿಕೃಷ್ಣ ಪಾಡ್ದನದಲ್ಲಿ ಶ್ರೀಕೃಷ್ಣನು ರಾಧೆಯನ್ನು ಮೋಸದಿಂದ ವಶಪಡಿಸಿಕೊಂಡ ಕಥಾನಕವಿದೆ. ಚಂದಬಾರಿಯನ್ನು ಶ್ರೀಕೃಷ್ಣನಿಗೆ ಕೊಟ್ಟು ಮದುವೆ ಮಾಡಿರುತ್ತಾರೆ. ಚಂದಬಾರಿ, ರಾಧೆಯರನ್ನು ಬಾಲ್ಯದಲ್ಲಿಯೇ ಮದುವೆ ಮಾಡಿಕೊಟ್ಟಿರುವುದರಿಂದ ರಾಧೆಗೆ ತನಗೋರ್ವ ಅಕ್ಕ ಇರುವುದು ತಿಳಿದಿರುವುದಿಲ್ಲ. ಒಂದು ದಿನ ರಾಧೆ ತನ್ನ ಪತಿ ಗೋಪಾಲನಲ್ಲಿ ನನಗೆ ಯಾರು ಸಂಬಂಧಿಕರು ಇಲ್ಲವೇ? ಎಂದು ಪ್ರಶ್ನಿಸುತ್ತಾಳೆ.
ಕುಟುಂಬ ಸಂಸಾರ ಇಜ್ಜೀಯ ಗೋಪಾಲ
ಬಂಧುಲ ಬಳಗೆಂಕ್ ಇಜ್ಜೀಯೆ ಗೋಪಾಲ
ಒರಿ ಅಪ್ಪೆಗ್ ಒರ್ತಿಯೇ ಮಗುಳುಯೇ ಗೋಪಾಲ
ಲೆಂದುದು ನನ ಬೇಕ ಕೇಂಡಾಳು ರಾಧೆ ಆಳ್
ಕನ್ನಡ ರೂಪ :
ಕುಟುಂಬ ಸಂಸಾರ ನನಗಿಲ್ಲವೇ ಗೋಪಾಲ
ಬಂಧು ಬಳಗವು ನನಗಿಲ್ಲವೇ ಗೋಪಾಲ
ಒಬಳು ತಾಯಿಗೆ ಒಬ್ಬಳೇ ಮಗಳೇ ಗೋಪಾಲ
ಎಂದು ಇನ್ನು ಬೇಗ ಕೇಳಿದಳು ರಾಧೆ ಅವಳು 

ಚಂದ್ರಾವಳಿ , ಶ್ರೀ ಕೃಷ್ಣ ,ಮತ್ತು ರಾಧೆ –ಚಂದ್ರಾವಳಿ ವಿಲಾಸ ಆಗ ಗೋಪಾಲನು ‘ನಿನಗೆ ಚಂದಬಾರಿ ಎಂಬ ಅಕ್ಕ ಇದ್ದಾಳೆ. ಅವಳಿಗೆ ಮೇಲಿನ ಮಿರಿಲೋಕದ ಶ್ರೀಕೃಷ್ಣನೊಂದಿಗೆ ಮದುವೆಯಾಗಿದೆ’   ಎಂದು ಹೇಳುತ್ತಾನೆ.
ಏರ್ಯ ರಾಧೆಯೆ  ಕೇಂಡಾ
ನಿನ್ನಡ ಪಳಿಂದು ಪಂಡುಂಡ ಉಳ್ಳಾಲು ಚಂದಬಾರಿ
ಮಿತ್ತುಲ ಮಿರಿಬಾರಿ ಲೋಕೊಡು ಸಿರಿಕೃಷ್ಣ ದೇವರೆಗು
ಕಂಡನಿ ಅಡತ್ತಾಳು ಲೆಂದುದು ಪಂಡೆರು ಗೋಪಾಲ
ಕನ್ನಡ ರೂಪ :
ಏನೇ ರಾಧೆ ಕೇಳಿದೆಯ
ನಿನ್ನ ಅಕ್ಕ ಎಂದು ಹೇಳಿದರೆ ಇದ್ದಾಳೆ ಚಂದ ಬಾರಿ
ಮೇಲಿನ ಮೀರಿ ಭಾರಿ ಲೋಕದಲ್ಲಿ ಶ್ರೀ ಕೃಷ್ಣ ದೇವರನ್ನು
ಗಂಡನಾಗಿ ಪಡೆದು ಎಂದು ಹೇಳಿದರು ಗೋಪಾಲ

ತನಗೆ ಅಕ್ಕ ಇದ್ದಾಳೆಂದು ತಿಳಿದಾಗ ಸಂತಸಗೊಂಡ ರಾಧೆ, ಆಕೆಯನ್ನು ನೋಡಬೇಕು ಎಂದು ಹಠ ಮಾಡುತ್ತಾಳೆ. ಆಗ ಗೋಪಾಲ, ನಿನ್ನ ಭಾವ ಶ್ರೀಕೃಷ್ಣನಿಗೆ ಒಳ್ಳೆಯ ಗುಣಗಳಿಲ್ಲ, ಹೋಗಬೇಡ ಎನ್ನುತ್ತಾನೆ.
ಆಯೇ ಉಳ್ಳೇಗೆ ರಾಧೆಯೇ ಕೇಂಡಾನ
ಅಂಗಡಿ ಅಂಗಡಿ ಪೋಪೇಗೆ ಪಂರ್ದುದ ಚೋಲಿ
ಪೆಜ್ಯೇಲ ಪಂರ್ದು ಕಂಡುದು ಕೈಲುಡ್
ಪೆಟ್ಟುಲ ತಿನ್ಪೇಂದು ಪಣ್ಪೇರು
ಪೋವಡ ರಾಧೆಯಿ ಪೋವಡ ರಾಧೆಯೇ
ಕಾಂಡೆನೆ ತೂಯಿನೆನು ಬಯ್ಯೊಗು ಬುಡಯೆಗೆ ರಾಧೆ
ಪೊಣ್ಣುದ ಮರ್ಲೆಗೆ ಕೋರಿದ ಜೀರೆಗೆÀ
 


ಕಳುವರೆ ಕಳುವೆ ಕೃಷ್ಣೇಂದ್ ಪಣ್ಪೇರು ಗೋಪಾಲೆ
ಕನ್ನಡ ರೂಪ :
ಅವನು ಇದ್ದಾನಂತೆ ರಾಧೆ ಕೇಳಿದೆಯ
ಅಂಗಡಿ ಅಂಗಡಿ ಹೋಗುತ್ತಾನಂತೆ ,ಹಣ್ಣಿನ ಸಿಪ್ಪೆ
ಹೆಕ್ಕುವವನು ಹಣ್ಣು ಕದ್ದು ಬಾಲೆ ಗೊನೆಯಲ್ಲಿ
ಪೆಟ್ಟು ಕೂಡ ತಿನ್ನುತ್ತಾನೆಂದು ಹೇಳುತ್ತಾರೆ
ಹೋಗ ಬೇಡ ರಾಧೆ ಹೋಗ ಬೇಡ ರಾಧೆಯೇ
ಬೆಳಿಗ್ಗೆ ನೋಡಿದ್ದನ್ನು ಸಂಜೆಗೆ  ಬಿಡನಂತೆ ರಾಧೆ
ಹೆಣ್ಣಿನ ಮರ್ಲ ಕೋಳಿಯ ಹುಚ್ಚಿನವನು
ಚಂದ್ರಾವಳಿ  ವಿಲಾಸ ಯಕ್ಷಗಾನದಲ್ಲಿ  ರಾಧೆಯ ರೂಪು ತಳೆದ ಶ್ರೀ ಕೃಷ್ಣ, ಳ್ಳರ ಕಳ್ಳ ಕೃಷ್ಣ ಎಂದು ಹೇಳುತ್ತಾರೆ ಗೋಪಾಲ

ಆದರೆ ರಾಧೆ ಹಠ ಮಾಡಿ, ಊಟ ತಿಂಡಿ ಸ್ನಾನಾದಿಗಳನ್ನು ತ್ಯಜಿಸುತ್ತಾಳೆ. ಆಗ ಮನ ಕರಗಿದ ಗೋಪಾಲ ದಂಡಿಗೆ ಸಿದ್ದಪಡಿಸಿ ಕಳಹಿಸಿ ಕೊಡುತ್ತಾನೆ.
ಮೇಲು ಮಿರಿಲೋಕದಲ್ಲಿ ಕಂಬಳ ಗದ್ದೆಯ ಕಟ್ಟಹುಣಿಯಲ್ಲಿ ದಂಡಿಗೆ ಬರುವುದನ್ನು ನೋಡಿದ ಶ್ರೀಕೃಷ್ಣ ದಂಡಿಗೆ ಬರುತ್ತಿರುವ ಬಗ್ಗೆ ಹೇಳಿದಾಗ ಚಂದಬಾರಿಗೆ ಬರುತ್ತಿರುವುದು ತನ್ನ ತಂಗಿ ರಾಧೆ ಎಂದು ತಿಳಿಯುತ್ತದೆ. ಆಗ ಅವಳು ``ಅವಳು ನನ್ನ ತಂಗಿ ರಾಧೆ. ಅವಳು ಬರಲಿ, ಅವಳ ತಂಟೆಗೆ ಹೋಗಬೇಡಿ’’ ಎಂದು ಕೇಳಿಕೊಳ್ಳುತ್ತಾಳೆ.

ರಾಧೆಯನ್ನು ಪ್ರೀತಿಯಿಂದ ಬರಮಾಡಿಕೊಂಡ ಚಂದಬಾರಿ ಕೈಕಾಲು ತೊಳೆಯಲು ಮುತ್ತಿನ ಕೆರೆಗೆ ಕಳುಹಿಸುತ್ತಾಳೆ. ಅಲ್ಲಿ ಶ್ರೀಕೃಷ್ಣ ತಾವರೆ ಹೂವಾಗಿ ಬಂದು ರಾಧೆಯ ಮಡಿಲಿಗೆ ಬಿದ್ದು ತನ್ನ ನಿಜರೂಪ ತೋರಿದಾಗ, ಕೃಷ್ಣನ ಕುರಿತು ಮೊದಲೇ ತಿಳಿದಿದ್ದ ರಾಧೆ ಅವನನ್ನು ಬೈದು, ಅವನಿಂದ ತಪ್ಪಿಸಿಕೊಂಡು ಅಕ್ಕನಿರುವಲ್ಲಿಗೆ ಬರುತ್ತಾಳೆ.
ಅಕ್ಕ-ತಂಗಿ ಅಕ್ಕಪಕ್ಕ ಕುಳಿತು ಆತ್ಮೀಯತೆಯಿಂದ ಮಾತನಾಡಿ ಬೇಸರ ಕಳೆಯುತ್ತಾರೆ. ಸಂಜೆಯಾಗುತ್ತಲೇ ತಂಗಿ ರಾಧೆಯು ಅಕ್ಕನನ್ನು ತನ್ನ ಮನೆಗೆ ಬರುವಂತೆ ಆಹ್ವಾನಿಸಿ ತನ್ನ ಮನೆಗೆ ಹಿಂದಿರುಗುತ್ತಾಳೆ.
ಇತ್ತ ಶ್ರೀಕೃಷ್ಣ ಚಂದಬಾರಿಯ ಒಂದು ಸೀರೆಯನ್ನು ಉಟ್ಟು ಚಂದಬಾರಿಯ ವೇಷವನ್ನು ಧರಿಸುತ್ತಾನೆ.
ಸಾವಿರ ಸಾರತ್ತೋಂಜಿ ಕೈಕಂಜಿ ಗೋವಳೆನು ಸೇರೊಂದು
ಯಾನೊಂಜಿ ಪೊಣ್ಣನ ವೇಷನು ಪಾಡುವೆಯ ಜೋಕುಳೆ
ಚಂದಬಾರಿನ ಒಂಜಿಲ ಸೀರೆನು ಕೊಣತ್ತುದು
ಚಂದಬಾರಿನ ಒಂಜಿಲ ಸೀರೆನು ಕೊಣತ್ತುದು
ದುತ್ತುಲ ಐತೊನು ಮಣ್ತೊಂಡು ಪಿದಾಡುವೆರು ಸಿರಿಕೃಷ್ಣಲ
ಕನ್ನಡ ರೂಪ
ಸಾವಿರ ಸಾವಿರದೊಂದು ಹಸುಗಳನ್ನು ಗೋಪಾಲಕರನ್ನು ಸೇರಿಸಿಕೊಂಡು
ನಾನೊಂದು ಹೆಣ್ಣಿನ ವೇಷ ಹಾಕುವೆ ಮಕ್ಕಳೇ
ಚಂದ ಬಾರಿಯ ಒಂದು ಸೀರೆ ತಂದು
ಚಂದ ಬಾರಿಯ ಒಂದು ಸೀರೆ ತಂದು
ಉಟ್ಟುಕೊಂಡು ಅಲಂಕಾರ ಮಾಡಿಕೊಂಡು ಹೊರಡುವರು ಶ್ರೀ ಕೃಷ್ಣ

ಅಕ್ಕನ ದಾರಿಯನ್ನು ಕಾಯುತ್ತಿದ್ದ ರಾಧೆ ಚಂದಬಾರಿ ರೂಪದಲ್ಲಿ ಬಂದ ಶ್ರೀಕೃಷ್ಣನನ್ನು ಅಕ್ಕನೆಂದೇ ಭಾವಿಸಿ ಸ್ವಾಗತಿಸಿ ಸತ್ಕಾರ ಮಾಡುತ್ತಾಳೆ. ರಾತ್ರಿ ಊಟ ಮಾಡಿ ಏಳು ಮಾಳಿಗೆಯ ಉಪ್ಪರಿಗೆಯ ಮೇಲೆ ಹೋಗಿ ರಾಧೆ ಮತ್ತು ಚಂದಬಾರಿ ರೂಪದಲ್ಲಿರುವ ಶ್ರೀಕೃಷ್ಣ ಮಲಗಲು ಹೋಗುತ್ತಾರೆ. ತಂಗಿ ರಾಧೆ ಅಕ್ಕನಲ್ಲಿ ಕಥೆ ಹೇಳೆಂದು ಹೇಳುವಾಗ ನನಗೆ ಕಥೆಗಿತೆ ತಿಳಿದಿಲ್ಲ. ನಾನು ನನ್ನ ದೇವರು ಶ್ರೀಕೃಷ್ಣ ನಾಮಸ್ಮರಣೆ ಮಾತ್ರ ಮಾಡುವುದು ಎಂದು ಚಂದಬಾರಿ ರೂಪ ಧರಿಸಿದ ಶ್ರೀಕೃಷ್ಣ ಹೇಳುತ್ತಾನೆ. ಹಾಗಾದರೆ ಅದನ್ನೇ ಹೇಳು ಎಂದು ರಾಧೆ ಹೇಳುತ್ತಾಳೆ. ಆಗ ನಾನು ಹೇಳುವುದಿಲ್ಲ, ನಾನು ಹೇಳಿದರೆ ನಿನ್ನ ಭಾವ ಇಲ್ಲಿ ಪ್ರತ್ಯಕ್ಷವಾಗುತ್ತಾನೆ ಎಂದು ಚಂದಬಾರಿ ರೂಪದ ಶ್ರೀಕೃಷ್ಣ ಹೇಳುತ್ತಾನೆ. ತೊಂದರೆ ಇಲ್ಲ ಅದನ್ನೇ ಹೇಳು ಎಂದು ರಾಧೆ ಹೇಳಿದಾಗ ಚಂದಬಾರಿ ರೂಪದ ಶ್ರೀಕೃಷ್ಣ ಶ್ರೀಕೃಷ್ಣನ ನಾಮಸ್ಮರಣೆ ಮಾಡುತ್ತಾನೆ. ಕೂಡಲೇ ತನ್ನ ನಿಜ ರೂಪವನ್ನು ತೋರುತ್ತಾನೆ. ಆ ಬಳಿಕ ಏಳು ರಾತ್ರಿ, ಏಳುಹಗಲು ರಾಧೆ ಮತ್ತು ಕೃಷ್ಣ ಜೊತೆಯಾಗಿ ಇರುತ್ತಾರೆ. ಇತ್ತ ಚಂದಬಾರಿ ತನ್ನ ಪತಿ ಶ್ರೀಕೃಷ್ಣ ಎಲ್ಲಿಗೆ ಹೋದನೆಂದು ಹುಡುಕುತ್ತಾ ರಾಧೆಯ ಮನೆಗೆ ಬರುತ್ತಾಳೆ. ಗೋಪಾಲನೂ ಮೇಲು ಮಾಳಿಗೆಯಲ್ಲಿ ಅಕ್ಕ ತಂಗಿ ಏಳು ರಾತ್ರಿ ಏಳು ಹಗಲು ಏನು ಮಾಡುತ್ತಿದ್ದಾರೆ ಎಂದು ಸಂಶಯ ತಾಳುತ್ತಾನೆ.
ಆಗ ರಾಧೆ ಮತ್ತು ಶ್ರೀಕೃಷ್ಣ ದೇವರು ಮಾಳಿಗೆ ಇಳಿದು ಬರುತ್ತಾರೆ. ಗೋಪಾಲನಲ್ಲಿ ಶ್ರೀಕೃಷ್ಣ ದೇವರು ರಾಧೆ ಎಂಜಲಾಗಿದ್ದಾಳೆ. ಅವಳು ನಿನಗೆ ಬೇಕೇ? ನಾನುಕೊಂಡು ಹೋಗಲೇ? ಎಂದು ಕೇಳುತ್ತಾನೆ. ಗೋಪಾಲ, ರಾಧೆ ತನಗೆ ಬೇಡ. ನೀನೇ ಕರಕೊಂಡು ಹೋಗು ಎನ್ನುತ್ತಾನೆ.
ನಾಯಿ ಮುಟ್ಟಿಮಡೆ ಉಂಡು ಬಿಸಲೆ ಉಂಡು ಗೋಪಾಲ
ನಿಕ್ಕು ಬೋಡಾ ಯಾನಾಂಡ ಕೊಂಡೋವೊಡ
ಪಂಡೇರ ಸಿರಿಕೃಷ್ಣನುಲಾ ದೇವೇರ
ಏರ‍್ಯೆ ಅಣ್ಣಯೆ ಕೃಷ್ಣಕೇಂಡಾನ
ಎಂಕುಲ ಬೋಡ್ಚಿ ಬೋಡ್ಚಿ ಕೊಂಡೋದು
ಪೋಲಾಂದು ಪಂಡೇರು ಗೋಪಾಲೆ
ಕನ್ನಡ ರೂಪ :
ನಾಯಿ ಮುಟ್ಟದ ಎಂಜಲು ಉಂಟು ಮಡಿಕೆ ಉಂಟು ಗೋಪಾಲ
ನಿನಗೆ ಬೇಕಾ ನಾನಾದರೂ ಕೊಂಡು ಹೋಗ ಬೇಕ
ಹೇಳಿದರು ಶ್ರೀ ಕೃಷ್ಣ ಕೂಡ ದೇವರೆಯೇ
ಯಾರಯ್ಯ ಅಣ್ಣ ಕೃಷ್ಣ ಕೇಳಿದೆಯ
ನನಗೆ ಬೇಡ ಬೇಡ ಕೊಂಡು ಹೋಗು
ಎಂದು ಹೇಳಿದರು ಗೋಪಾಲ

ಮುಂದೆ ಚಂದಬಾರಿ ಹಾಗೂ ರಾಧೆಯರನ್ನು ಕರೆದುಕೊಂಡು ಶ್ರೀಕೃಷ್ಣ ಮೇಲಿನ ಮಿರಿಲೋಕಕ್ಕೆ ಬರುತ್ತಾನೆ. ಅಲ್ಲಿ ರಾಧೆ, ಚಂದಬಾರಿ ಹಾಗೂ ಶ್ರೀಕೃಷ್ಣ ಸಂಸಾರ ನಡೆಸುತ್ತಾ ಇರುತ್ತಾರೆ ಎಂದು ಶ್ರೀಮತಿ ಶಾರದಾ ಜಿ. ಬಂಗೇರ ಅವರು ಹೇಳಿದ ಚಂದಬಾರಿ ರಾಧೆ ಸಿರಿಕೃಷ್ಣ ಪಾಡ್ದನದಲ್ಲಿ ಹೇಳಿದೆ.
ದಾಸರ ನಿಂದಾ ಸ್ತುತಿಗಳಂತೆ ಇದು ತುಳುವರ ನಿಂದಾ ಸ್ತುತಿ ಇರಬಹುದು .ಅಥವಾ ತಮಗೆ ಕಿರುಕುಳ ಕೊಡುತ್ತಿರುವ ಒಡೆಯ ಜಮೀನ್ದಾರ ರಾಜ ಹೀಗೆ ಯಾರನ್ನೋ ಕೃಷ್ಣನನ್ನು ನೆಪವಾಗಿಸಿಕೊಂಡು ತೆಗೆಳಿ  ತಮ್ಮ ಪ್ರತಿಭಟನೆಯನ್ನು ತೋರಿರಬಹುದು ತುಳುವ ಪಾದ್ದನಗಾರ್ತಿಯರು.ನಾಗ ಸಿರಿ ಕನ್ಯಗೆ ಪಾದ್ದನದಲ್ಲಿ ಕೂಡ ಶ್ರೀ ಕೃಷ್ಣನನ್ನು ತಮ್ಮನ ಮಡದಿ, ಸುಂದರಿಯಾದ ನಾಗ ಕನ್ಯಗೆ ಯನ್ನು ತಮ್ಮ ರೂಪದಲ್ಲಿ ಬಂದು ವಶಪಡಿಸಿಕೊಳ್ಳಲು ಯತ್ನಿಸುವ ,ಹಾವಾಗಿ ,ಹಲ್ಲಿಯಾಗಿ ನಾನಾ ರೂಪ ಧರಿಸಿ ಅವಳನ್ನು ಕಾಡಿ ,ವಶ ಪಡಿಸಿಕೊಳ್ಳಲು ಸಾಧ್ಯವಾಗದೆ ಇದ್ದಾಗ ಅವಳ ಮೇಲೆ ವೃಥಾ ಕಳಂಕ ಹೊರಿಸಿ ಅವಳು ಸತ್ಯ ಪ್ರಮಾಣ ಮಾಡುವಂತೆ ಮಾಡುವ ಕೆಟ್ಟ ವ್ಯಕ್ತಿಯಂತೆ  ಚಿತ್ರಿಸಿದೆ.
ಅನೇಕ ಹೆಂಡತಿಯರನ್ನು ಹೊಂದಿರುವ ,ಸೆರೆ ಸಿಕ್ಕ ರಾಜರ ಮನೆಯ ಹೆಣ್ಣು ಮಕ್ಕಳನ್ನು ಬಲಾತ್ಕಾರವಾಗಿ ಕೊಂಡೊಯ್ಯುವ ರಾಜರ ಕುರಿತಾದ ತಮ್ಮ ಪ್ರತಿರೋಧವನ್ನು ತುಳು ಜಾನಪದರು ಈ ರೀತಿ ತೋರಿರುವ ಸಾಧ್ಯತೆ ಇದೆ .ಶ್ರೀ ಕೃಷ್ಣನ ಹೆಸರನ್ನೇ ಹೊಂದಿರುವ ತುಳು ವಂಶದ ಅರಸ ಶ್ರೀ ಕೃಷ್ಣ ದೇವರಾಯನಿಗೂ ಎರಡು ಹೆಂಡಿರು ಇದ್ದರು !ಈತನ ಕುರಿತೆನಾದರೂ ತುಳು ಜನಪದರಿಗೆ ಅಸಮಧಾನವಿತ್ತೆ ?!ಕೃಷ್ಣನನ್ನು ನೆಪವಾಗಿತ್ತು ಕೊಂಡು ಈತನನ್ನೆನಾದರೂ  ಆಕ್ಷೇಪಿಸಿದರೆ ತುಳುವರು ?ಅಥವಾ ದಾಸವರೇಣ್ಯರ ನಿಂದಾ ಸ್ತುತಿಗಳಂತೆ ಇದು ತುಳು ಜನಪದರ ನಿಂದಾ ಸ್ತುತಿಯ ವೈಖರಿಯೇ ?ಈ ಬಗ್ಗೆ ಸಮಗ್ರ ಅಧ್ಯಯನ ನಡೆದರೆ ತುಳುವರಲ್ಲೇಕೆ ಶ್ರೀ ಕೃಷ್ಣನಿಗೆ ಈ ರೀತಿಯ ಚಿತ್ರಣವಿದೆ ಎಂದು ತಿಳಿಯಬಹುದು.
ಲೇಖಕಿಯ ಜೊತೆ ಶಾರದಾ ಜಿ. ಬಂಗೇರ ಚಂದ್ರಾವಳಿ  ವಿಲಾಸ ಎಂಬ ಯಕ್ಷಗಾನ ಪ್ರಸಂಗದ ಕಥೆಯು ಈ ಪಾಡ್ದನದ ಕಥೆಯನ್ನು ಹೋಲುತ್ತದೆ. ಅದರಲ್ಲಿ ರಾಧೆ ಕೃಷ್ಣನ ಮಡದಿ ಚಂದ್ರಾವಳಿ  ರಾಧೆಯ ಅಕ್ಕ .ಅವಳನ್ನು ರಾಧೆಯ ರೂಪ ಧರಿಸಿ ಇದೇ ರೀತಿ ವಶ ಪಡಿಸಿಕೊಳ್ಳುತ್ತಾನೆ ಶ್ರೀ ಕೃಷ್ಣ .ಈ ಯಕ್ಷಗಾನ ಪ್ರಸಂಗದ ಕಥೆಗೆ ಯಾವುದೇ ಪುರಾಣದಲ್ಲಿ ಅಧಾರ ಸಿಗುವುದಿಲ್ಲ .ಬಹುಷ ಪಾಡ್ದನದ ಈ ಕಥೆಯೇ ಆ ಯಕ್ಷಗಾನ ಪ್ರಸಂಗಕ್ಕೆ ಮೂಲ ವಾಗಿರುವ ಸಾಧ್ಯತೆ ಇದೆ .ರಾಧಾ ಕೃಷ್ಣರ ಪವಿತ್ರ ಪ್ರೇಮದ ಸಾಂಪ್ರದಾಯಿಕ ಪರಿಕಲ್ಪನೆಗೆ ಧಕ್ಕೆ ಯಾಗದಂತೆ ರಾಧೆಯ ಬದಲು ಚಂದ್ರಾವಳಿಯನ್ನು ವಶಪಡಿಸಿಕೊಂಡಂತೆ ಮೂಲ ಕಥೆಯಲ್ಲಿ ತುಸು ಬದಲಾವಣೆ ಮಾಡಿ ಕೊಂಡು ಚಂದ್ರಾವಳಿ ವಿಲಾಸ ಪ್ರಸಂಗವನ್ನುರಚಿಸಿರುವ ಸಾಧ್ಯತೆ ಇದೆ. ಧ್ವಜಪುರ ನಾಗಪ್ಪಯ್ಯನವರು ಏನೇ ಆದರು ಈ ಪಾಡ್ದನದ ಬಗ್ಗೆ  ಅಧ್ಯಯನ ನಡೆದರೆ ಹೆಚ್ಚಿನ ಮಾಹಿತಿ ತಿಳಿಯಬಹುದು(ಚಂದ್ರಾವಳಿ ವಿಲಾಸ ಯಕ್ಷಗಾನದ ಫೋಟೋಗಳನ್ನು ನೀಡಿದ ರಾಧಾ ಕೃಷ್ಣ ಭಟ್ k ಇವರಿಗೆ ಧನ್ಯವಾದಗಳು )

Sunday 25 August 2013

ಗಿಳಿ ಬಾಗಿಲು(ಹವ್ಯಕ ಬ್ಲಾಗ್ ) -ಪೊಡುಂಬು

ಗಿಳಿ ಬಾಗಿಲು(ಹವ್ಯಕ ಬ್ಲಾಗ್ ) -ಪೊಡುಂಬು

ಅವ ಬರೀ ಪೊಡುಂಬು ,ಎಲ್ಲಾ ಬಾಯಿಲಿ ಅಷ್ಟೇ ,ಒಳಂದ ಎಂತದೂ ಇಲ್ಲೆ ,ಈ ಮಾತಿನ ಸಣ್ಣಾ ದಿಪ್ಪಗಂದ ಸುಮಾರು ಸರ್ತಿ ಕೇಳಿದ್ದೆ . ಎಂಗಳ ಕಡೆಯ ಹವ್ಯಕ ಭಾಷೆಲಿ ಈ ಪದದ ಬಳಕೆ ಇದ್ದು.  ಅವಂದು ಬರೀ ಪೊಡುಮ್ಬುತನ/ಪೊಡುಂಬು ಬುದ್ಧಿ  ಹೇಳಿದರೆ ಅವಂಗೆ ಬುದ್ಧಿವಂತಿಕೆ ಏನೂ ಇಲ್ಲೆ ,ಬುದ್ಧಿವಂತಿಕೆ ಸಾಲ ಹೇಳಿ ಅರ್ಥ .ಆದರೆ ಈ ಶಬ್ದದ ಮೂಲ ಎಂತ ಹೇಳಿ ಆಲೋಚನೆ ಮಾಡ್ತಾ ಇತ್ತಿದೆ .ಬೆಂಗಳೂರಿಲಿ ಎಂಗಳ ಮನೆ ಎದುರು ಒಂದು ಮರ ಕೆಲಸದ ಅಂಗಡಿ ಇದ್ದು .ನಿನ್ನೆ ಹೊತ್ತಪ್ಪಗ ಆನು ಮನೆ  ಟೆರೆಸ್ ಹತ್ತಿ ಸುಮ್ಮನೆ ಆಕಡೆ ಈ ಕಡೆ ನೋಡ್ತಾ ಇತ್ತಿದೆ .ಅಂಬಗ ಎದುರಿನ ಅಂಗಡಿಯ ಕೆಲಸದೋರು ಒಂದು ದೊಡ್ಡ ಮರದ ತುಂಡಿಂದ ಸುಮಾರು ಭಾಗವ ಗೀಸಿ ಗೀಸಿ ತೆಗೆತ್ತಾ ಇತ್ತಿದವು. ಸಣ್ಣಾದಿಪ್ಪಗ ಎಂಗಳ ಮನೆ ಕೆಲಸಕ್ಕೆ ಬಂದ ಆಚಾರಿಗಳುದೆ ಹೀಂಗೆ ಮರದ ತುಂಡಿಂದ ಸುಮಾರು ಭಾಗವ ತೆಗೆತ್ತಾ ಇತ್ತಿದವು .ಅಂಬಗ ಹೀಂಗೆ ಎಂತಕೆ ಮಾಡುದು ಹೇಳಿ ಕೇಳಿಪ್ಪಗ "ಅದು ಬೊಳುಂಬು ಇಪ್ಪ ಜಾಗೆ ,ಅದು ಎಳತ್ತು ಜಾಗೆ ,ಅದರ ಹಾಂಗೆ ಬಿಟ್ರೆ ಆ ಜಾಗೆ ಕುಮ್ಬಾಗಿ ಮಂಚ ಕುರ್ಚಿ ಹಾಳಾವುತ್ತು ,ಅದಕ್ಕೆ ಆ ಜಾಗೆಯ ತೆಗದು ಹಾಕುತ್ತವು "ಹೇಳಿ ಎನ್ನ  ಅಜ್ಜ ಹೇಳಿತ್ತಿದವು. ಈಗ ಈ ಅಂಗಡಿಯೋರುದೆ ಹಾಂಗೆ ಬೋಳುಮ್ಬಿನ ತೆಗೆತ್ತಾ ಇಪ್ಪದು ಆದಿಕ್ಕು ಹೇಳಿ ಅನ್ಸಿತ್ತು ಎನಗೆ .ಎಂತಕೋ ಏನೋ ಎನಗೆ ಅಂಬಗ ಬೊಳುಂಬು ಹೇಳುದೆ ಕಾಲಾಂತರಲ್ಲಿ   ಪೊಡುಂಬು ಹೇಳಿ ಬದಲಾಗಿ ಈಗ ಎಳಸು /ಕಡಮೆ ಬುದ್ಧಿ ಹೇಳುವ ಅರ್ಥಲ್ಲಿ ಬಳಕೆಗೆ  ಬಂದಿಕ್ಕಾ  ಏನೋ ಹೇಳಿ ಅನ್ಸಿತ್ತು ,ನಿಂಗ  ಎಲ್ಲ  ಎಂತ ಹೇಳ್ತೀರಿ ?ನಿಂಗಳ ಅಭಿಪ್ರಾಯವ ತಿಳುಸಿ
ಇನ್ನೊಂದರಿ ಕಾಂಬ
ನಮಸ್ಕಾರ
     ಡಾ. ಲಕ್ಷ್ಮೀ ಜಿ ಪ್ರಸಾದ

Saturday 17 August 2013

ಪೆರುವಾಜೆಯಲ್ಲಿ ಪತ್ತೆಯಾದ ಬುದ್ದನ ಅಪರೂಪದ ವಿಗ್ರಹ ಮತ್ತು ಬೌದ್ಧಾರಾಧನೆಯ ಕುರುಹುಗಳು(ಇತಿಹಾಸಜ್ಞರ ಗಮನಕ್ಕೆ )




ಫೆಬ್ರುವರಿ ೧ ೬  ,೨೦೧೨  ನೆಯ ದಿನ ನನ್ನ ಪಾಲಿಗೆ   ಒಂದು ಅವಿಸ್ಮರಣೀಯ ದಿನ! ಪೆರುವಾಜೆಯಲ್ಲಿ (ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ) ನೇರವಾಗಿ ಬುದ್ಧನದೆಂದೇ ಸ್ಪಷ್ಟವಾಗಿ ಗುರುತಿಸಬಹುದಾದ ಅಪರೂಪದ ಬುದ್ಧನ ಮೂರ್ತಿಯೊಂದನ್ನು ನಾನು ನೋಡಿದೆ  ! .ಇದರಿಂದ  ಕರ್ನಾಟಕದ  ಇತಿಹಾಸ ಶೋಧನೆಗೆ ಮಹತ್ವದ ದಾಖಲೆಯೊಂದು ಸಿಕ್ಕಿತೆಂದು ನಾನು ಭಾವಿಸಿದ್ದೇನೆ   . ಕರಾವಳಿ ಕರ್ನಾಟಕದಲ್ಲಿ ಬೌದ್ಧಾರಾಧನೆಗೆ ಇದ್ದುದಕ್ಕೆ  ಪ್ರತ್ಯಕ್ಷ ಸಾಕ್ಷಿ ದೊರಕಿತು .
 ೨೦೧೨  ರ ಫೆಬ್ರುವರಿ ತಿಂಗಳ  ಮೊದಲವಾರದಲ್ಲಿ .ಪೆರುವಾಜೆ ಕಾಲೇಜಿನ  ವಿದ್ಯಾರ್ಥಿ    ನನಗೆ ಪರಿಚಿತರಾಗಿದ್ದ ಉತ್ಸಾಹಿ  ತರುಣ  ರಜನೀಶ್ ಫೋನ್ ಮಾಡಿ  "ಇಲ್ಲಿ ಪೆರುವಾಜೆ ದೇವಸ್ಥಾನದ ಹತ್ತಿರ ಗುಡ್ಡದಲ್ಲಿ  ಕೆಲವು ಭೂತದ ವಿಗ್ರಹಗಳಿವೆ ನೋಡ್ತೀರಾ?ಎಂದು ಫೋನ್ ಮಾಡಿ  ಕೇಳಿದರು .ಫೆಬ್ರುವರಿ   ೧ ೬ ರಂದು  ಭೂತಾರಾಧನೆಯ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಇದ್ದ ನಾನು ಅದನ್ನು ನೋಡಲು ಹೋದೆ . ಅಲ್ಲಿ ಮರದ ಬುಡದಲ್ಲಿ ನಂದಿ ಸೇರಿದಂತೆ ಅನೇಕ ವಿಗ್ರಹಗಳಿದ್ದವು .ಒಂದೆರಡು  ವಿಗ್ರಹಗಳು ಮಣ್ಣಿನ ಅಡಿಯಲ್ಲಿದ್ದು  ತುಸು ಮಾತ್ರ ಕಾಣುತ್ತಿದ್ದವು . ಅವುಗಳನ್ನು  ನಾನು ಮತ್ತು ನನ್ನ ಮಗ ಅರವಿಂದ ಸೇರಿ   ಕಷ್ಟ ಪಟ್ಟು  ಮೇಲಕ್ಕೆ ಎಳೆದು ತಂದೆವು . ಅದರಲ್ಲೊಂದು   ನೇರವಾಗಿ ಯಾರು ಕೂಡಾ ಸ್ಪಷ್ಟವಾಗಿ ಗುರುತಿಸ ಬಹುದಾದ ಅಪರೂಪದ ಬುದ್ಧನ  ವಿಗ್ರಹ  ಇತ್ತು.!    ಶಾಸನ ಹಾಗು  ಇತರ ಅನೇಕ ಆಧಾರಗಳ ಮೇಲೆ  ಡಾ .ಬಿ ಎ  ಸಾಲೆತೂರ್ ,ಡಾ . ಗುರುರಾಜ ಭಟ್ ,ಗೋವಿಂದ ಪೈ ,ಡಾ. ರಮೇಶ್  ಕೆ ವಿ  ,ಡಾ . ವಸಂತಕುಮಾರ್ ತಾಳ್ತಜೆ  ಮೊದಲಾದವರು  ಕರ್ನಾಟಕದಲ್ಲಿ ಬೌದ್ಧಾರಾಧನೆ  ಇತ್ತು ಎನ್ನುವುದನ್ನು ಈ ಹಿಂದೆಯೇ ತೋರಿಸಿ ಕೊಟ್ಟಿದ್ದಾರೆ . ಆದರೆ ನೇರವಾಗಿ ಬುದ್ಧನದೆಂದು ಗುರುತಿಸ ಬಹುದಾದ  ಬುದ್ದನ  ವಿಗ್ರಹ  ಈ ತನಕ   ಕರ್ನಾಟಕದಲ್ಲಿ  ಎಲ್ಲೂ ಪತ್ತೆಯಾಗಿರಲಿಲ್ಲ . ಮಂಗಳೂರಿನ  ಕದ್ರಿಯ ಮಂಜುನಾಥೇಶ್ವರ ದೇವಾಲಯ ದಲ್ಲಿರುವ  ಮೂರು ಮುಖದ ಲೋಕೇಶ್ವರ ಮೂರ್ತಿ(ಇದನ್ನು ಬ್ರಹ್ಮ ಎಂದು  ಭಾವಿಸಿದ್ದರು )ಯನ್ನು   ಅದರ ಕೆಳಗಿನ  ಶಾಸನ  ಹಾಗು ಇತರ ಕೆಲವು ಆಧಾರಗಳಿಂದ  ಬುದ್ಧನ ಇನ್ನೊಂದು ಸ್ವರೂಪ  ಆವಲೋಕಿತೇಶ್ವರ  ಎಂದು ಗುರುತಿಸಿ  ಕದ್ರಿ ಬೌದ್ಧ  ವಿಹಾರವಾಗಿತ್ತು ಎಂದು ವಿದ್ವಾಂಸರು  ಸ್ಪಷ್ಟ ಪಡಿಸಿದ್ದಾರೆ . ಕದ್ರಿ ಬಿಟ್ಟರೆ  ಮಂಗಳೂರು, ಸುಳ್ಯ,ಬಂಟ್ವಾಳ, ಬೆಳ್ತಂಗಡಿ  ,ಪುತ್ತೂರು ,ಕಾಸರಗೋಡು ತಾಲೂಕುಗಳಲ್ಲಿ ಎಲ್ಲಿಯೂ  ಬೌದ್ಧಾರಾಧನೆ  ಇದ್ದುದಕ್ಕೆ  ಯಾವುದೊಂದೂ   ಆಧಾರ  ಈ ತನಕ ಸಿಕ್ಕಿರಲಿಲ್ಲ .
     ಈ ಎರಡು  ಕಾರಣಗಳಿಂದ  ಸುಳ್ಯ ತಾಲೂಕಿನ ಬೆಳ್ಳಾರೆ - ಸವಣೂರು  ಮಾರ್ಗದಲ್ಲಿ  ಬೆಳ್ಳಾರೆ ಸಮೀಪದಲ್ಲಿರುವ  ಪೆರುವಾಜೆಯ ದೇವಸ್ಥಾನದ ಸಮೀಪದ ಇಳಿಜಾರಾದ ಗುಡ್ಡದಲ್ಲಿ ಪತ್ತೆಯಾದ ಬುದ್ಧನ ವಿಗ್ರಹ ಬಹಳ ಮುಖ್ಯವಾದ  ದಾಖಲೆಯಾಗಿದೆ.  ಇಲ್ಲಿ  ಒಂದು ಮುಖದ ಭಾಗ ವಿರೂಪ ಗೊಂಡಿದ್ದರೂ ಎಡ ಬಲ ಭಾಗದ ಬುದ್ಧನ ಉದ್ದನೆಯ ವಿಶಿಷ್ಟ  ಕಿವಿಗಳು , ಮೇಲೆ ಎತ್ತಿ ಕಟ್ಟಿದ ಉಶ್ಣೀಶ (ಜಟೆ) ಗಳಿಂದ ಸ್ಪಷ್ಟವಾಗಿ ಬುದ್ದನದೆಂದು ಗುರುತಿಸ ಬಹುದಾದ  ಬುದ್ಧನ ತಲೆ ಸಿಕ್ಕಿದೆ. ಬುದ್ಧನ ಮುಖದ ಭಾಗ ಜಜ್ಜಿ ಹೋದಂತಿದೆ . ಮುಖವನ್ನು   ಉದ್ದೇಶ ಪೂರ್ವಕ ವಿಕೃತ ಗೊಳಿಸಿರುವಂತೆ ಕಾಣಿಸುತ್ತಿದ್ದು ಇಲ್ಲಿ ಸಂಘರ್ಷ ನಡೆದಿರುವ ಸಾಧ್ಯತೆಯನ್ನು ತೋರುತ್ತದೆ.  ಇನ್ನೊಂದು  ಸ್ಪಷ್ಟವಾಗಿ ಕಾಣುವ ಮಾನವ ರೂಪಿನ  ಮುಖ ಸಿಕ್ಕಿದೆ . ಇದನ್ನು ಡಾ. ಮುರುಗೇಶಿ ಅವರು ಅಮಿತಾಬ ಬುದ್ಧ  ,ಬೋಧಿಸತ್ವ ಇಲ್ಲವೇ ಯಕ್ಷ ಇರಬಹುದೆಂದು ತಿಳಿಸಿದ್ದಾರೆ .  ಉಬ್ಬಿದ ಕಣ್ಣುಗಳು ಇರುವ  ನಂದಿಯ ಮುಖ  ಹಾಗೂ ಎರಡು ಮುಖವಿಲ್ಲದ ದೇಹ ಮಾತ್ರ ಇರುವ ನಂದಿಯ  ವಿಗ್ರಹಗಳಿವೆ. ಒಂದು ಪೂರ್ಣ ವಿಗ್ರಹ ಇದ್ದು ಮೇಲ್ನೋಟಕ್ಕೆ ಹುಲಿಯನ್ನು ಹೋಲುತ್ತದೆ . ಒಂದು ಮಾನವನ ಕಾಲು ಮಾತ್ರ ಸಿಕ್ಕಿದೆ  .ಈ ಕಾಲಿನಲ್ಲಿ ಕಾಲುಂಗುರ ಇರುವುದರಿಂದ ಇದು ಸ್ತ್ರೀ ವಿಗ್ರಹದ ಅವಶೇಷ ಎಂದು ಹೇಳಬಹುದು .೧೦ *೧೦  ವಿಸ್ತಾರ ಹಾಗು ಒಂದಡಿ ಎತ್ತರದ ಮುರಕಲ್ಲಿನಲ್ಲಿ ಕಟ್ಟಿದ ಕಟ್ಟಿದ  ಅಡಿಪಾಯ ಕೂಡಾ  ಇತ್ತು .  ಇಲ್ಲಿ  ನಾನು ಪತ್ತೆ ಹಚ್ಚಿದ ಬುದ್ದನ ವಿಗ್ರಹ ಹಾಗು ಇತರ ವಿಗ್ರಹಗಳ  ಮಹತ್ವವನ್ನು ಮನಗಂಡ ನಾನು ಈ ಬಗ್ಗೆ ಲೇಖನ ಸಿದ್ದ ಪಡಿಸಿ ಪ್ರಜಾವಾಣಿ ಪತ್ರಿಕೆಗೆ ಕಳುಹಿಸಿದೆ.
          ಪೆರುವಾಜೆಯಲ್ಲಿ ಬುದ್ಧನ ಅಪರೂಪದ ಮೂರ್ತಿ ಪತ್ತೆ ಎಂಬ ನನ್ನ ಲೇಖನ  ೨೦೧೨  ರ ಮಾರ್ಚ್ ೩೦ ರಂದು  ಪ್ರಜಾವಾಣಿಯ ಕರ್ನಾಟಕ ದರ್ಶನ ಪುರವಣಿಯಲ್ಲಿ ಪ್ರಕಟವಾಯಿತು . ಇಲ್ಲಿ ಹೆಚ್ಚಿನ ಅಧ್ಯಯನ ನಡೆಯ ಬೇಕೆಂಬ ಉದ್ದೀಶದಿಂದ  ಸಂಶೋಧಕರ ಗಮನಕ್ಕೆ  ತರುವುದಕ್ಕಾಗಿಯೇ ಈ ಲೇಖನ ಬರೆದಿದ್ದೆ. ಆ ಉದ್ದೇಶ ಈಡೇರಿತು ! ಪ್ರಜಾವಾಣಿಯಲ್ಲಿ ಬಂದ  ನನ್ನ ಲೇಖನ ಓದಿದ ಡಾ॥  ಮುರುಗೇಶಿ  ಅವರು ಅವರ ಪರಿಚಿತರ ಮೂಲಕ ನನ್ನ ಫೋನ್ ನಂಬರ್ ಪಡೆದು ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ಕೇಳಿ ಏಪ್ರಿಲ್ ೧ ನೆಯ(೦೧ -೦ ೪ -೨೦೧೨ ) ತಾರೀಕಿನಂದು ನಾನು ಬರುತ್ತೇನೆ ಆ ಜಾಗವನ್ನು ತೋರಿಸಿಎಂದು ಕೇಳಿಕೊಂಡರು ಆ ಹೊತ್ತಿಗಾಗುವಾಗ ಆ ವಿಗ್ರಹ ಹಾಗು ಜಾಗಕ್ಕೆ ಸಂಬಂಧಿಸಿದಂತೆ  ಅನುಜ್ಞಾ  ಕಲಶ ಆಗಿದ್ದು ಅದನ್ನು  ಒಂದು ಅಟ್ಟೆ ನಿರ್ಮಿಸಿ ಕಟ್ಟಿ ಮುಚ್ಚಿಟ್ಟು  ಬಿಟ್ಟಿದ್ದರು . ಅದನ್ನು ಮತ್ತೆ  ನೋಡ ಬೇಕಿದ್ದರೆ ಆ ಜಾಗಕ್ಕೆ ಸಂಬಂಧಿಸಿದವರ ಒಪ್ಪಿಗೆ ಬೇಕಿತ್ತು . ಸ್ಥಳೀಯರು ಭೂತಗಳದ್ದೆಂದು  ನಂಬಿದ್ದ ವಿಗ್ರಹವನ್ನು  ನಾನು ಬುದ್ಧನದೆಂದು ಹೇಳಿದ್ದು  ಸ್ಥಳೀಯರಿಗೆ  ಅಸಮಧಾನ ಉಂಟುಮಾಡಿತ್ತು. ಆದ್ದರಿಂದ ಡಾ ॥   ಮುರುಗೇಶಿ ಅವರನ್ನು ಏಕಾ ಏಕಿ ಕರೆದುಕೊಂಡು ಹೋದರೆ  ವಿವಾದ  ಉಂಟಾಗುವ ಸಾಧ್ಯತೆ ಇತ್ತು .ನಾನು ಒಮ್ಮೆ ಫೋಟ ತೆಗೆದು ನಂತರ ಪುನಃ ಒಮ್ಮೆ ನೋಡಲು ಇಚ್ಚಿಸಿದ್ದೆ . ಆದರೆ ಸ್ಥಳೀಯರು ಒಪ್ಪಿರಲಿಲ್ಲ . ಆದ್ದರಿಂದ ನಾನ ನನಗೆ ಆತ್ಮೀಯರಾಗಿದ್ದ  ಉಡುಪಿ  ಎಂ ಜಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ  ಸಂಶೋಧಕರೂ ಆಗಿದ್ದ ಕಾನಕುದೇಲು  ಗಣಪತ್ತಿ ಭಟ್ಟರ ಸಹಾಯ ಕೇಳಿದೆ ಅವರು ಅವರ ಆತ್ಮೀಯರಾದ ಆ ಜಾಗದ ಬಗ್ಗೆ ಪ್ರಶ್ನೆ ಇಟ್ಟು  ಧಾರ್ಮಿಕ ವಿಧಿಗಳಿಗೆ ನಿರ್ದೇಶನ ನೀಡಿದ್ದ  ಖ್ಯಾತ ಜ್ಯೋತಿಷಿ ರಾಜೇಂದ್ರ ಪ್ರಸಾದರನ್ನು ಸಂಪರ್ಕಿಸಿ  ಅಲ್ಲಿ ಮುಂದಿನ ಸಂಶೋಧನೆಗೆ ಅನುವು ಮಾಡಿ ಕೊಟ್ಟರು .
     ನನಗು ಸಂಶೋಧನೆ ಆಸಕ್ತಿ ಇದ್ದ ಕಾರಣ ಮುರುಗೇಶಿ   ಅವರು ಬಂದಾಗ ಆ ವಿಗ್ರಹಗಳನ್ನು ತೋರಿಸಿದೆ . ನಾನು ಮೊದಲು ಲೇಖನದಲ್ಲಿ ಬರೆದ ವಿಚಾರಗಳನ್ನು ಧೃಢ  ಪಡಿಸಿದ್ದಲ್ಲದೆ ಅಲ್ಲಿ ಪ್ರಾಗೈತಿಹಾಸಿಕ ಕಾಲದ  ಕುರುಹುಗಳನ್ನು ತೋರಿಸಿದ್ದಾರೆ ಇಲ್ಲಿ ಸಿಕ್ಕಿದ ನಂದಿಯ ವಿಗ್ರಹಗಳು ಶಾತವಾಹನರ ಕಾಲದ್ದೆಂದು ಗುರುತಿಸಿ ಇದರ ಕಾಲ ಸುಮಾರು ಕ್ರಿ ಶ  ಎರಡನೇ ಶತಮಾನ ಎಂದು ತಿಳಿಸಿದ್ದಾರೆ. ಇಲ್ಲಿನ ಜಲ ದುರ್ಗಾ  ದೇವಿ ದೇವಾಲಯ  ಹಿಂದೆ ಬೌದ್ಧ ವಿಹಾರವಾಗಿದ್ದು  ಈಗ ಲಿಂಗ ರೂಪಿ ಮೂರ್ತಿಯ ಬದಲು ಮಾನವ ರೂಪಿನ ವಿಗ್ರಹ ಇದ್ದಿರುವ  ಸಾಧ್ಯತೆಯನ್ನು ಹೇಳಿದ್ದಾರೆ ಈ ಬುದ್ಧನ ಮೂರ್ತಿಯ ಫೋಟೋ ಅನ್ನು ನಾನ ಖ್ಯಾತ ಸಂಶೋಧರಾದ ಡಾ||ಸುಂದರ ಅವರಿಗೆ ತೋರಿಸಿದಾಗ ಅವರು "ಈ ವಿಗ್ರಹದ ತಲೆಯ ಮೇಲೆ ಗಂಟಿನ ತರಾ ಉಬ್ಬು ಇದೆ ಇದನ್ನು ಉಷ್ನೀಶ ಎನ್ನುತ್ತೇವೆ . ಇದು ಇರುವುದರಿಂದ ಮತ್ತು ಕಿವಿ ತುಂಬಾ ಅಗಲವಾಗಿ ಇರುವುದರಿಂದ ಇದೊಂದು ವಿಶಿಷ್ಟ  ಮಾನವನ ಮೂರ್ತಿ ಎನ್ನಬಹುದು ಬಹು ಶ್ರುತಃ ಎಂದರೆ ಜ್ಞಾನಿ ಯಾದ ಮನುಷ್ಯನ ವಿಗ್ರಹ ಎನ್ನಬಹುದು .ಯಾರು ಜ್ಞಾನವನ್ನು ಪಡೆದು ಕೊಂಡಿರುತ್ತಾರೆ , ಆತ್ಮ ಸಾಕ್ಷಾತ್ಕಾರವನ್ನು ಪಡೆದು ಕೊಂಡಿರುತ್ತಾರೆ ಅವರಿಗೆ ತಲೆ ಮೇಲೆ ಈ ರೀತಿಯ ಉಬ್ಬು ಇರುತ್ತದೆ ಅದಕ್ಕೆ ನಾವು ಉಷ್ನೀಶ ಎಂದು ಕರೆಯುತ್ತಾರೆ ಇಲ್ಲಿ ಉಷ್ನೀಶ ಇರುವುದರಿಂದ ಇದರ ಆಕಾರವು ಬುದ್ಧನನ್ನು ಹೋಲುತ್ತಿರುವುದರಿಂದ ಇದನ್ನು ಬುದ್ಧನ ಮೂರ್ತಿ ಎನ್ನ ಬಹುದು "ಎಂದು ಅಭಿಪ್ರಾಯ ಪಟ್ಟಿದ್ದಾರೆ ಮಡಿಕೇರಿ ಪರಿಸರದಲ್ಲಿ ಬುದ್ಧಾರಾಧನೆ ಇದ್ದುದಕ್ಕೆ ಅನೇಕ ಆಧಾರಗಳು ಸಿಕ್ಕಿವೆ.  ಪೆರುವಾಜೆ  ಮಡಿಕೇರಿ ನಡುವೆ  ತುಂಬಾ ಅಂತರ ಇಲ್ಲ ಆದ್ದರಿಂದ ಇಲ್ಲಿ ಬುದ್ಧನ ಆರಾಧನೆ ಇದ್ದಿರುವ ಸಾಧ್ಯತೆ ಇದೆ ಎಂದು  ಖ್ಯಾತ ಸಂಶೋಧಕರಾದ ಡಾ||ಎಂ ಜಿ ನಾಗರಾಜ್ ಅವರು ಅಭಿಪ್ರಾಯ ಪಟ್ಟಿದ್ದಾರೆ .ಇಲ್ಲಿ ಇನ್ನು ಕೂಡಾ ಹೆಚ್ಚಿನಾಧ್ಯಯನಕ್ಕೆ ಅವಕಾಶವಿದೆ

ಇಲ್ಲಿ ಈ ವಿಗ್ರಹಗಳನ್ನು ಸ್ಥಳೀಯರು ಹರಿಕೆಯಾಗಿ ಬಂದ ಭೂತ ಸಂಬಂಧಿ ವಿಗ್ರಹಗಳೆಂದು ಭಾವಿಸಿದ್ದು, ಭೂತದ ಗುಡಿಯಲ್ಲಿ ಪ್ರತಿಷ್ಟಾಪನೆ ಮೊದಲಾದ ವೈದಿಕ ವಿಧಿಗಳು ಮುಗಿದ ನಂತರ  ಜಲ ವಿಸರ್ಜನೆ ಮಾಡುತ್ತಾರೆ .ಅನಂತ ಈ ವಿಗ್ರಹಗಳು ಎಲ್ಲೋ ಜಲ ಸಮಾಧಿಯಾಗಿ ಬಿಡುತ್ತವೆ .ಆದ್ದರಿಂದ  ಈ ವಿಗ್ರಹಗಳನ್ನು ಅವರ ಕೈಯಿಂದ ಪಡೆದು ರಕ್ಷಿಸುವ ಕಾರ್ಯ ಜರೂರಾಗಿ ಆಗಬೇಕಾಗಿದೆ .ಇಲ್ಲವಾದರೆ ಈ  ಅಪರೂಪದ ದಾಖಲೆ ನಾಶವಾಗಿ ಬಿಡ ಬಹುದು
                                                   
ಡಾ || ಲಕ್ಷ್ಮಿ ಜಿ ಪ್ರಸಾದ ಕನ್ನಡ ಉಪನ್ಯಾಸಕರು  ಸರ್ಕಾರಿ ಪದವಿಪೂರ್ವ ಕಾಲೇಜು ಬೆಳ್ಳಾರೆ  ಸುಳ್ಯ ದ.ಕ ಜಿಲ್ಲೆ




Friday 16 August 2013

ಪೆರುವಾಜೆಯಲ್ಲಿ ಪತ್ತೆಯಾದ ಬುದ್ದನ ಅಪರೂಪದ ವಿಗ್ರಹ ಮತ್ತು ಬೌದ್ಧಾರಾಧನೆಯ ಕುರುಹುಗಳು(ಇತಿಹಾಸಜ್ಞರ ಗಮನಕ್ಕೆ )


ಫೆಬ್ರುವರಿ ೧ ೬  ,೨೦೧೨  ನೆಯ ದಿನ ನನ್ನ ಪಾಲಿಗೆ   ಒಂದು ಅವಿಸ್ಮರಣೀಯ ದಿನ! ಪೆರುವಾಜೆಯಲ್ಲಿ (ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ) ನೇರವಾಗಿ ಬುದ್ಧನದೆಂದೇ ಸ್ಪಷ್ಟವಾಗಿ ಗುರುತಿಸಬಹುದಾದ ಅಪರೂಪದ ಬುದ್ಧನ ಮೂರ್ತಿಯೊಂದನ್ನು ನಾನು ಪತ್ತೆ ಹಚ್ಚಿದೆ   ! .ಇದರಿಂದ  ಕರ್ನಾಟಕದ  ಇತಿಹಾಸ ಶೋಧನೆಗೆ ಮಹತ್ವದ ದಾಖಲೆಯೊಂದು ಸಿಕ್ಕಿತೆಂದು ನಾನು ಭಾವಿಸಿದ್ದೇನೆ   . ಕರಾವಳಿ ಕರ್ನಾಟಕದಲ್ಲಿ ಬೌದ್ಧಾರಾಧನೆಗೆ ಇದ್ದುದಕ್ಕೆ  ಪ್ರತ್ಯಕ್ಷ ಸಾಕ್ಷಿ ದೊರಕಿತು .
 ೨೦೧೨  ರ ಫೆಬ್ರುವರಿ ತಿಂಗಳ  ಮೊದಲವಾರದಲ್ಲಿ .ಪೆರುವಾಜೆ ಕಾಲೇಜಿನ  ವಿದ್ಯಾರ್ಥಿ    ನನಗೆ ಪರಿಚಿತರಾಗಿದ್ದ ಉತ್ಸಾಹಿ  ತರುಣ  ರಜನೀಶ್ ಫೋನ್ ಮಾಡಿ  "ಇಲ್ಲಿ ಪೆರುವಾಜೆ ದೇವಸ್ಥಾನದ ಹತ್ತಿರ ಗುಡ್ಡದಲ್ಲಿ  ಕೆಲವು ಭೂತದ ವಿಗ್ರಹಗಳಿವೆ ನೋಡ್ತೀರಾ?ಎಂದು ಫೋನ್ ಮಾಡಿ  ಕೇಳಿದರು 

.ಫೆಬ್ರುವರಿ   ೧ ೬ ರಂದು  ಭೂತಾರಾಧನೆಯ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಇದ್ದ ನಾನು ಅದನ್ನು ನೋಡಲು ಹೋದೆ . ಅಲ್ಲಿ ಮರದ ಬುಡದಲ್ಲಿ ನಂದಿ ಸೇರಿದಂತೆ ಅನೇಕ ವಿಗ್ರಹಗಳಿದ್ದವು .ಒಂದೆರಡು  ವಿಗ್ರಹಗಳು ಮಣ್ಣಿನ ಅಡಿಯಲ್ಲಿದ್ದು  ತುಸು ಮಾತ್ರ ಕಾಣುತ್ತಿದ್ದವು . ಅವುಗಳನ್ನು  ನಾನು ಮತ್ತು ನನ್ನ ಮಗ ಅರವಿಂದ ಸೇರಿ   ಕಷ್ಟ ಪಟ್ಟು  ಮೇಲಕ್ಕೆ ಎಳೆದು ತಂದೆವು . ಅದರಲ್ಲೊಂದು   ನೇರವಾಗಿ ಯಾರು ಕೂಡಾ ಸ್ಪಷ್ಟವಾಗಿ ಗುರುತಿಸ ಬಹುದಾದ ಅಪರೂಪದ ಬುದ್ಧನ  ವಿಗ್ರಹ  ಇತ್ತು.!    ಶಾಸನ ಹಾಗು  ಇತರ ಅನೇಕ ಆಧಾರಗಳ ಮೇಲೆ  ಡಾ .ಬಿ ಎ  ಸಾಲೆತೂರ್ ,ಡಾ . ಗುರುರಾಜ ಭಟ್ ,ಗೋವಿಂದ ಪೈ ,ಡಾ. ರಮೇಶ್  ಕೆ ವಿ  ,ಡಾ . ವಸಂತಕುಮಾರ್ ತಾಳ್ತಜೆ  ಮೊದಲಾದವರು  ಕರ್ನಾಟಕದಲ್ಲಿ ಬೌದ್ಧಾರಾಧನೆ  ಇತ್ತು ಎನ್ನುವುದನ್ನು ಈ ಹಿಂದೆಯೇ ತೋರಿಸಿ ಕೊಟ್ಟಿದ್ದಾರೆ . ಆದರೆ ನೇರವಾಗಿ ಬುದ್ಧನದೆಂದು ಗುರುತಿಸ ಬಹುದಾದ  ಬುದ್ದನ  ವಿಗ್ರಹ  ಈ ತನಕ   ಕರ್ನಾಟಕದಲ್ಲಿ  ಎಲ್ಲೂ ಪತ್ತೆಯಾಗಿರಲಿಲ್ಲ . ಮಂಗಳೂರಿನ  ಕದ್ರಿಯ ಮಂಜುನಾಥೇಶ್ವರ ದೇವಾಲಯ ದಲ್ಲಿರುವ  ಮೂರು ಮುಖದ ಲೋಕೇಶ್ವರ ಮೂರ್ತಿ(ಇದನ್ನು ಬ್ರಹ್ಮ ಎಂದು  ಭಾವಿಸಿದ್ದರು )ಯನ್ನು   ಅದರ ಕೆಳಗಿನ  ಶಾಸನ  ಹಾಗು ಇತರ ಕೆಲವು ಆಧಾರಗಳಿಂದ  ಬುದ್ಧನ ಇನ್ನೊಂದು ಸ್ವರೂಪ  ಆವಲೋಕಿತೇಶ್ವರ  ಎಂದು ಗುರುತಿಸಿ  ಕದ್ರಿ ಬೌದ್ಧ  ವಿಹಾರವಾಗಿತ್ತು ಎಂದು ವಿದ್ವಾಂಸರು  ಸ್ಪಷ್ಟ ಪಡಿಸಿದ್ದಾರೆ . ಕದ್ರಿ ಬಿಟ್ಟರೆ  ಮಂಗಳೂರು, ಸುಳ್ಯ,ಬಂಟ್ವಾಳ, ಬೆಳ್ತಂಗಡಿ  ,ಪುತ್ತೂರು ,ಕಾಸರಗೋಡು ತಾಲೂಕುಗಳಲ್ಲಿ ಎಲ್ಲಿಯೂ  ಬೌದ್ಧಾರಾಧನೆ  ಇದ್ದುದಕ್ಕೆ  ಯಾವುದೊಂದೂ   ಆಧಾರ  ಈ ತನಕ ಸಿಕ್ಕಿರಲಿಲ್ಲ .
 
    ಈ ಎರಡು  ಕಾರಣಗಳಿಂದ  ಸುಳ್ಯ ತಾಲೂಕಿನ ಬೆಳ್ಳಾರೆ - ಸವಣೂರು  ಮಾರ್ಗದಲ್ಲಿ  ಬೆಳ್ಳಾರೆ ಸಮೀಪದಲ್ಲಿರುವ  ಪೆರುವಾಜೆಯ ದೇವಸ್ಥಾನದ ಸಮೀಪದ ಇಳಿಜಾರಾದ ಗುಡ್ಡದಲ್ಲಿ ಪತ್ತೆಯಾದ ಬುದ್ಧನ ವಿಗ್ರಹ ಬಹಳ ಮುಖ್ಯವಾದ  ದಾಖಲೆಯಾಗಿದೆ.  ಇಲ್ಲಿ  ಒಂದು ಮುಖದ ಭಾಗ ವಿರೂಪ ಗೊಂಡಿದ್ದರೂ ಎಡ ಬಲ ಭಾಗದ ಬುದ್ಧನ ಉದ್ದನೆಯ ವಿಶಿಷ್ಟ  ಕಿವಿಗಳು , ಮೇಲೆ ಎತ್ತಿ ಕಟ್ಟಿದ ಉಶ್ಣೀಶ (ಜಟೆ) ಗಳಿಂದ ಸ್ಪಷ್ಟವಾಗಿ ಬುದ್ದನದೆಂದು ಗುರುತಿಸ ಬಹುದಾದ  ಬುದ್ಧನ ತಲೆ ಸಿಕ್ಕಿದೆ. ಬುದ್ಧನ ಮುಖದ ಭಾಗ ಜಜ್ಜಿ ಹೋದಂತಿದೆ . ಮುಖವನ್ನು   ಉದ್ದೇಶ ಪೂರ್ವಕ ವಿಕೃತ ಗೊಳಿಸಿರುವಂತೆ ಕಾಣಿಸುತ್ತಿದ್ದು ಇಲ್ಲಿ ಸಂಘರ್ಷ ನಡೆದಿರುವ ಸಾಧ್ಯತೆಯನ್ನು ತೋರುತ್ತದೆ.  ಇನ್ನೊಂದು  ಸ್ಪಷ್ಟವಾಗಿ ಕಾಣುವ ಮಾನವ ರೂಪಿನ  ಮುಖ ಸಿಕ್ಕಿದೆ . ಇದನ್ನು ಡಾ. ಮುರುಗೇಶಿ ಅವರು ಅಮಿತಾಬ ಬುದ್ಧ  ,ಬೋಧಿಸತ್ವ ಇಲ್ಲವೇ ಯಕ್ಷ ಇರಬಹುದೆಂದು ತಿಳಿಸಿದ್ದಾರೆ .  ಉಬ್ಬಿದ ಕಣ್ಣುಗಳು ಇರುವ  ನಂದಿಯ ಮುಖ  ಹಾಗೂ ಎರಡು ಮುಖವಿಲ್ಲದ ದೇಹ ಮಾತ್ರ ಇರುವ ನಂದಿಯ  ವಿಗ್ರಹಗಳಿವೆ. ಒಂದು ಪೂರ್ಣ ವಿಗ್ರಹ ಇದ್ದು ಮೇಲ್ನೋಟಕ್ಕೆ ಹುಲಿಯನ್ನು ಹೋಲುತ್ತದೆ . ಒಂದು ಮಾನವನ ಕಾಲು ಮಾತ್ರ ಸಿಕ್ಕಿದೆ  .ಈ ಕಾಲಿನಲ್ಲಿ ಕಾಲುಂಗುರ ಇರುವುದರಿಂದ ಇದು ಸ್ತ್ರೀ ವಿಗ್ರಹದ ಅವಶೇಷ ಎಂದು ಹೇಳಬಹುದು .೧೦ *೧೦  ವಿಸ್ತಾರ ಹಾಗು ಒಂದಡಿ ಎತ್ತರದ ಮುರಕಲ್ಲಿನಲ್ಲಿ ಕಟ್ಟಿದ ಕಟ್ಟಿದ  ಅಡಿಪಾಯ ಕೂಡಾ  ಇತ್ತು .  ಇಲ್ಲಿ  ನಾನು ಪತ್ತೆ ಹಚ್ಚಿದ ಬುದ್ದನ ವಿಗ್ರಹ ಹಾಗು ಇತರ ವಿಗ್ರಹಗಳ  ಮಹತ್ವವನ್ನು ಮನಗಂಡ ನಾನು ಈ ಬಗ್ಗೆ ಲೇಖನ ಸಿದ್ದ ಪಡಿಸಿ ಪ್ರಜಾವಾಣಿ ಪತ್ರಿಕೆಗೆ ಕಳುಹಿಸಿದೆ.
          ಪೆರುವಾಜೆಯಲ್ಲಿ ಬುದ್ಧನ ಅಪರೂಪದ ಮೂರ್ತಿ ಪತ್ತೆ ಎಂಬ ನನ್ನ ಲೇಖನ  ೨೦೧೨  ರ ಮಾರ್ಚ್ ೩೦ ರಂದು  ಪ್ರಜಾವಾಣಿಯ ಕರ್ನಾಟಕ ದರ್ಶನ ಪುರವಣಿಯಲ್ಲಿ ಪ್ರಕಟವಾಯಿತು . ಇಲ್ಲಿ ಹೆಚ್ಚಿನ ಅಧ್ಯಯನ ನಡೆಯ ಬೇಕೆಂಬ ಉದ್ದೀಶದಿಂದ  ಸಂಶೋಧಕರ ಗಮನಕ್ಕೆ  ತರುವುದಕ್ಕಾಗಿಯೇ ಈ ಲೇಖನ ಬರೆದಿದ್ದೆ. ಆ ಉದ್ದೇಶ ಈಡೇರಿತು ! 

ಪ್ರಜಾವಾಣಿಯಲ್ಲಿ ಬಂದ  ನನ್ನ ಲೇಖನ ಓದಿದ ಡಾ॥  ಮುರುಗೇಶಿ  ಅವರು ಅವರ ಪರಿಚಿತರ ಮೂಲಕ ನನ್ನ ಫೋನ್ ನಂಬರ್ ಪಡೆದು ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ಕೇಳಿ ಏಪ್ರಿಲ್ ೧ ನೆಯ(೦೧ -೦ ೪ -೨೦೧೨ ) ತಾರೀಕಿನಂದು ನಾನು ಬರುತ್ತೇನೆ ಆ ಜಾಗವನ್ನು ತೋರಿಸಿಎಂದು ಕೇಳಿಕೊಂಡರು ಆ ಹೊತ್ತಿಗಾಗುವಾಗ ಆ ವಿಗ್ರಹ ಹಾಗು ಜಾಗಕ್ಕೆ ಸಂಬಂಧಿಸಿದಂತೆ  ಅನುಜ್ಞಾ  ಕಲಶ ಆಗಿದ್ದು ಅದನ್ನು  ಒಂದು ಅಟ್ಟೆ ನಿರ್ಮಿಸಿ ಕಟ್ಟಿ ಮುಚ್ಚಿಟ್ಟು  ಬಿಟ್ಟಿದ್ದರು . ಅದನ್ನು ಮತ್ತೆ  ನೋಡ ಬೇಕಿದ್ದರೆ ಆ ಜಾಗಕ್ಕೆ ಸಂಬಂಧಿಸಿದವರ ಒಪ್ಪಿಗೆ ಬೇಕಿತ್ತು . ಸ್ಥಳೀಯರು ಭೂತಗಳದ್ದೆಂದು  ನಂಬಿದ್ದ ವಿಗ್ರಹವನ್ನು  ನಾನು ಬುದ್ಧನದೆಂದು ಹೇಳಿದ್ದು  ಸ್ಥಳೀಯರಿಗೆ  ಅಸಮಧಾನ ಉಂಟುಮಾಡಿತ್ತು. 

ಆದ್ದರಿಂದ ಡಾ ॥   ಮುರುಗೇಶಿ ಅವರನ್ನು ಏಕಾ ಏಕಿ ಕರೆದುಕೊಂಡು ಹೋದರೆ  ವಿವಾದ  ಉಂಟಾಗುವ ಸಾಧ್ಯತೆ ಇತ್ತು .ನಾನು ಒಮ್ಮೆ ಫೋಟ ತೆಗೆದು ನಂತರ ಪುನಃ ಒಮ್ಮೆ ನೋಡಲು ಇಚ್ಚಿಸಿದ್ದೆ . ಆದರೆ ಸ್ಥಳೀಯರು ಒಪ್ಪಿರಲಿಲ್ಲ . ಆದ್ದರಿಂದ ನಾನ ನನಗೆ ಆತ್ಮೀಯರಾಗಿದ್ದ  ಉಡುಪಿ  ಎಂ ಜಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ  ಸಂಶೋಧಕರೂ ಆಗಿದ್ದ ಕಾನಕುದೇಲು  ಗಣಪತ್ತಿ ಭಟ್ಟರ ಸಹಾಯ ಕೇಳಿದೆ ಅವರು ಅವರ ಆತ್ಮೀಯರಾದ ಆ ಜಾಗದ ಬಗ್ಗೆ ಪ್ರಶ್ನೆ ಇಟ್ಟು  ಧಾರ್ಮಿಕ ವಿಧಿಗಳಿಗೆ ನಿರ್ದೇಶನ ನೀಡಿದ್ದ  ಖ್ಯಾತ ಜ್ಯೋತಿಷಿ ರಾಜೇಂದ್ರ ಪ್ರಸಾದರನ್ನು ಸಂಪರ್ಕಿಸಿ  ಅಲ್ಲಿ ಮುಂದಿನ ಸಂಶೋಧನೆಗೆ ಅನುವು ಮಾಡಿ ಕೊಟ್ಟರು .
     ನನಗು ಸಂಶೋಧನೆ ಆಸಕ್ತಿ ಇದ್ದ ಕಾರಣ ಮುರುಗೇಶಿ   ಅವರು ಬಂದಾಗ ಆ ವಿಗ್ರಹಗಳನ್ನು ತೋರಿಸಿದೆ . ನಾನು ಮೊದಲು ಲೇಖನದಲ್ಲಿ ಬರೆದ ವಿಚಾರಗಳನ್ನು ಧೃಢ  ಪಡಿಸಿದ್ದಲ್ಲದೆ ಅಲ್ಲಿ ಪ್ರಾಗೈತಿಹಾಸಿಕ ಕಾಲದ  ಕುರುಹುಗಳನ್ನು ತೋರಿಸಿದ್ದಾರೆ ಇಲ್ಲಿ ಸಿಕ್ಕಿದ ನಂದಿಯ ವಿಗ್ರಹಗಳು ಶಾತವಾಹನರ ಕಾಲದ್ದೆಂದು ಗುರುತಿಸಿ ಇದರ ಕಾಲ ಸುಮಾರು ಕ್ರಿ ಶ  ಎರಡನೇ ಶತಮಾನ ಎಂದು ತಿಳಿಸಿದ್ದಾರೆ. ಇಲ್ಲಿನ ಜಲ ದುರ್ಗಾ  ದೇವಿ ದೇವಾಲಯ  ಹಿಂದೆ ಬೌದ್ಧ ವಿಹಾರವಾಗಿದ್ದು  ಈಗ ಲಿಂಗ ರೂಪಿ ಮೂರ್ತಿಯ ಬದಲು ಮಾನವ ರೂಪಿನ ವಿಗ್ರಹ ಇದ್ದಿರುವ  ಸಾಧ್ಯತೆಯನ್ನು ಹೇಳಿದ್ದಾರೆ

 ಈ ಬುದ್ಧನ ಮೂರ್ತಿಯ ಫೋಟೋ ಅನ್ನು ನಾನ ಖ್ಯಾತ ಸಂಶೋಧರಾದ ಡಾ||ಸುಂದರ ಅವರಿಗೆ ತೋರಿಸಿದಾಗ ಅವರು "ಈ ವಿಗ್ರಹದ ತಲೆಯ ಮೇಲೆ ಗಂಟಿನ ತರಾ ಉಬ್ಬು ಇದೆ ಇದನ್ನು ಉಷ್ನೀಶ ಎನ್ನುತ್ತೇವೆ . ಇದು ಇರುವುದರಿಂದ ಮತ್ತು ಕಿವಿ ತುಂಬಾ ಅಗಲವಾಗಿ ಇರುವುದರಿಂದ ಇದೊಂದು ವಿಶಿಷ್ಟ  ಮಾನವನ ಮೂರ್ತಿ ಎನ್ನಬಹುದು ಬಹು ಶ್ರುತಃ ಎಂದರೆ ಜ್ಞಾನಿ ಯಾದ ಮನುಷ್ಯನ ವಿಗ್ರಹ ಎನ್ನಬಹುದು .ಯಾರು ಜ್ಞಾನವನ್ನು ಪಡೆದು ಕೊಂಡಿರುತ್ತಾರೆ , ಆತ್ಮ ಸಾಕ್ಷಾತ್ಕಾರವನ್ನು ಪಡೆದು ಕೊಂಡಿರುತ್ತಾರೆ ಅವರಿಗೆ ತಲೆ ಮೇಲೆ ಈ ರೀತಿಯ ಉಬ್ಬು ಇರುತ್ತದೆ ಅದಕ್ಕೆ ನಾವು ಉಷ್ನೀಶ ಎಂದು ಕರೆಯುತ್ತಾರೆ ಇಲ್ಲಿ ಉಷ್ನೀಶ ಇರುವುದರಿಂದ ಇದರ ಆಕಾರವು ಬುದ್ಧನನ್ನು ಹೋಲುತ್ತಿರುವುದರಿಂದ ಇದನ್ನು ಬುದ್ಧನ ಮೂರ್ತಿ ಎನ್ನ ಬಹುದು "ಎಂದು ಅಭಿಪ್ರಾಯ ಪಟ್ಟಿದ್ದಾರೆ ಮಡಿಕೇರಿ ಪರಿಸರದಲ್ಲಿ ಬುದ್ಧಾರಾಧನೆ ಇದ್ದುದಕ್ಕೆ ಅನೇಕ ಆಧಾರಗಳು ಸಿಕ್ಕಿವೆ.  ಪೆರುವಾಜೆ  ಮಡಿಕೇರಿ ನಡುವೆ  ತುಂಬಾ ಅಂತರ ಇಲ್ಲ ಆದ್ದರಿಂದ ಇಲ್ಲಿ ಬುದ್ಧನ ಆರಾಧನೆ ಇದ್ದಿರುವ ಸಾಧ್ಯತೆ ಇದೆ ಎಂದು  ಖ್ಯಾತ ಸಂಶೋಧಕರಾದ ಡಾ||ಎಂ ಜಿ ನಾಗರಾಜ್ ಅವರು ಅಭಿಪ್ರಾಯ ಪಟ್ಟಿದ್ದಾರೆ .ಇಲ್ಲಿ ಇನ್ನು ಕೂಡಾ ಹೆಚ್ಚಿನಾಧ್ಯಯನಕ್ಕೆ ಅವಕಾಶವಿದೆ
ಇಲ್ಲಿ ಈ ವಿಗ್ರಹಗಳನ್ನು ಸ್ಥಳೀಯರು ಹರಿಕೆಯಾಗಿ ಬಂದ ಭೂತ ಸಂಬಂಧಿ ವಿಗ್ರಹಗಳೆಂದು ಭಾವಿಸಿದ್ದು, ಭೂತದ ಗುಡಿಯಲ್ಲಿ ಪ್ರತಿಷ್ಟಾಪನೆ ಮೊದಲಾದ ವೈದಿಕ ವಿಧಿಗಳು ಮುಗಿದ ನಂತರ  ಜಲ ವಿಸರ್ಜನೆ ಮಾಡುತ್ತಾರೆ .ಅನಂತ ಈ ವಿಗ್ರಹಗಳು ಎಲ್ಲೋ ಜಲ ಸಮಾಧಿಯಾಗಿ ಬಿಡುತ್ತವೆ .ಆದ್ದರಿಂದ  ಈ ವಿಗ್ರಹಗಳನ್ನು ಅವರ ಕೈಯಿಂದ ಪಡೆದು ರಕ್ಷಿಸುವ ಕಾರ್ಯ ಜರೂರಾಗಿ ಆಗಬೇಕಾಗಿದೆ .ಇಲ್ಲವಾದರೆ ಈ  ಅಪರೂಪದ ದಾಖಲೆ ನಾಶವಾಗಿ ಬಿಡ ಬಹುದು
                                                   
ಡಾ || ಲಕ್ಷ್ಮಿ ಜಿ ಪ್ರಸಾದ ಕನ್ನಡ ಉಪನ್ಯಾಸಕರು  ಸರ್ಕಾರಿ ಪದವಿಪೂರ್ವ ಕಾಲೇಜು ಬೆಳ್ಳಾರೆ  ಸುಳ್ಯ ದ.ಕ ಜಿಲ್ಲೆ