Tuesday 24 June 2014

ಲೆಕ್ಕಕ್ಕಿಲ್ಲದ ಯುಜಿಸಿ ನಿಯಮ, ಇಲ್ಲೇಕಿಲ್ಲ ಕ್ರಮ? - ಡಾ.ಲಕ್ಷ್ಮೀ ಜಿ ಪ್ರಸಾದ

                        

ಪ್ರಕಟ:ಕನ್ನಡ ಪ್ರಭ ,ಮಂಗಳವಾರ 24 ಜೂನ್ 2014

http://www.kannadaprabha.com/columns/ಲೆಕ್ಕಕ್ಕಿಲ್ಲದ-ಯುಜಿಸಿ-ನಿಯಮ-ಇಲ್ಲೇಕಿಲ್ಲ-ಕ್ರಮ/223688.html
ಕಳೆದ ಒಂದೆರಡು ವರ್ಷಗಳಿಂದ ವಿಶ್ವವಿದ್ಯಾಲಯಗಳ ಅವ್ಯಹಾರದ ಅಕ್ರಮ ನೇಮಕಗಳ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಎಲ್ಲೆಡೆ ನೇಮಕಾತಿ ಪೂರ್ವ ನಿರ್ಧರಿತವಾಗಿದ್ದು ನಾಮ್‌ಕೆವಾಸ್ಥೆ ಸಂದರ್ಶನ ನಾಟಕ ನಡೆಸಿ ತಮಗೆ ಬೇಕಾದವರನ್ನು ಆಯ್ಕೆ ಮಾಡುತ್ತಿರುವ ಬಗ್ಗೆ ಕೂಗು ಕೇಳಿ ಬರುತ್ತಾ ಇದೆ.ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕರ ಅರ್ಹತೆಯನ್ನು ಗುರುತಿಸಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಒಂದು ಮಾನದಂಡವನ್ನು, ಮಾರ್ಗದರ್ಶಿ ಸೂತ್ರಗಳನ್ನು 2010 ರಲ್ಲಿ ಜಾರಿಗೆ ತಂದಿದೆ.
 
 ವಿಶ್ವ ವಿದ್ಯಾಲಯಗಳಲ್ಲಿ ವಿವಿಧ ಹುದ್ದೆಗಳನ್ನು ತುಂಬುವಾಗ ಅಭ್ಯರ್ಥಿಯ ಆಯ್ಕೆಗೆ ಇದು ಮಾನದಂಡವಾಗಿರುತ್ತದೆ. ಇದನ್ನು ಶೈಕ್ಷಣಿಕ ನಿರ್ವಹಣಾ ಸೂಚ್ಯಂಕ (ಆ್ಛಛಜಜಟ್ಝ್ಛ ಠಜ್ಠಜ್ಟ್ಠಿಟಜಟ್ಛಿಜ ಐಟಿಜ್ಝ್ಛಛಡ್ಟ್ಠಿ) ಆಕಿಐ ಎಂದು ಕರೆದಿದ್ದಾರೆ. ಶೈಕ್ಷಣಿಕ ನಿರ್ವಹಣಾ ಸೂಚ್ಯಂಕಗಳ ಶೇ. 80 ಮತ್ತು ಸಂದರ್ಶನದ ಶೇ. 20 ಅಂಕಗಳನ್ನು ಸೇರಿಸಿ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆ ಮಾಡಬೇಕು ಎಂದು ಯುಜಿಸಿ ಹೇಳುತ್ತದೆ.
 ಪ್ರಕಟಿತ ಸಂಶೋಧನಾ ಕೃತಿಗಳಿಗೆ ಸಂಶೋಧನಾ ಲೇಖನಗಳಿಗೆ, ಸಂಶೋಧನಾ ಪ್ರಬಂಧ ಮಂಡನೆಗೆ, ಸಂಶೋಧನಾ ಪ್ರಾಜೆಕ್ಟ್‌ಗಳಿಗೆ, ಸಂಶೋಧನಾ ಮಾರ್ಗದರ್ಶನಗಳಿಗೆ, ಆಹ್ವಾನಿತ ಉಪನ್ಯಾಸಗಳಿಗೆ, ಪರೀಕ್ಷಾ ಕಾರ್ಯಗಳಿಗೆ, ಪಾಠ ಪ್ರವಚನಗಳಿಗೆ ಬೇರೆ ಬೇರೆ ಸೂಚ್ಯಂಕಗಳು ಇವೆ. ಕೆಲವಕ್ಕೆ ಅಂಕಗಳ ಮಿತಿ ಎಂದರೆ ಗರಿಷ್ಠ ಅಂಕಗಳು ಇವೆ. ಸಂಶೋಧನಾ ಕೃತಿಗಳು, ಲೇಖನಗಳು, ಸಂಪ್ರಬಂಧ ಮಂಡನೆಗಳು, ಸಂಶೋಧನಾ ಪ್ರಾಜೆಕ್ಟ್‌ಗಳು ಮತ್ತು ಮಾರ್ಗದರ್ಶನಗಳಿಗೆ ಗರಿಷ್ಠ ಮಿತಿ ಇರುವುದಿಲ್ಲ.
 ಆದರೆ ವಿಶ್ವವಿದ್ಯಾಲಯಗಳ ಆಯ್ಕೆ ಸಮಿತಿಗಳಿಗೆ ಈ ಮಾನದಂಡವನ್ನು ದಂಡ(ವ್ಯರ್ಥ) ಮಾಡುವ ಕಲೆ ಕರಗತವಾಗಿರುತ್ತದೆ.ಆದ್ದರಿಂದಲೇ ವಿಶ್ವವಿದ್ಯಾಲಯಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ.ಯುಜಿಸಿಯ ನಿಯಮಾವಳಿಗಳು, ಮಾರ್ಗದರ್ಶಕ ಸೂತ್ರಗಳಂತೆ ಮೂರು ಮುಖ್ಯವಾದ ವರ್ಗಗಳು ಇವೆ. ಇವುಗಳಿಗನುಗುಣವಾಗಿ ಯುಜಿಸಿಯು ಅಂಕಗಳನ್ನು ನಿಗದಿ ಪಡಿಸಿದೆ. ಪಾಠ ಮತ್ತು ಮೌಲ್ಯ ಮಾಪನಕ್ಕೆ ಸಂಬಂಧಿಸಿದ ದಕ್ಷತೆ- ಈ ವಿಭಾಗಕ್ಕೆ ಗರಿಷ್ಟ ಅಂಕಮಿತಿ 125. 
 ಈ ಅಂಕಗಳನ್ನು ನಾಲ್ಕು  ಉಪ ವಿಭಾಗಗಳಲ್ಲಿ ಹಂಚಿದೆ. ಉಪನ್ಯಾಸ, ಪ್ರಯೋಗ, ಟುಟೋರಿಯಲ್, ಕಾಂಟ್ಯಾಕ್ಟ್ ಕ್ಲಾಸ್‌ಗಳಿಗೆ ಒಟ್ಟಾರೆಯಾಗಿ ಗರಿಷ್ಠ ಅಂಕಗಳು 50. ಯುಜಿಸಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಕ್ಲಾಸ್‌ಗಳನ್ನು ತೆಗೆದುಕೊಂಡಿದ್ದಲ್ಲಿ ಗಂಟೆಗೆ 2 ಅಂಕಗಳಂತೆ ಗರಿಷ್ಠ 10 ಅಂಕಗಳು. ಜ್ಞಾನ ಪ್ರಸಾರ/ ಹಂಚುವಿಕೆ ಮತ್ತು ವಿಧಾನಗಳು (ಂಜಝ್ಟಿಜ್ಟಟ್ಟ್ಜಣ)ಗೆ ಗರಿಷ್ಟ ಅಂಕಗಳು 20. ಪಾಠ ಮಾಡುವ  ವಿಧಾನಗಳು, ಹೊಸ ಮಾದರಿಗಳ ಆವಿಷ್ಕಾರ ಮತ್ತು ಬಳಕೆ, ಮೊದಲಾದವುಗಳಿಗೆ ಒಂದು ಕೋರ್ಸ್‌ಗೆ 5 ಅಂಕಗಳಂತೆ ಗರಿಷ್ಠ 20 ಅಂಕಗಳು.ಪರೀಕ್ಷಾ ಕಾರ್ಯಗಳಿಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ, ಸ್ಕ್ವಾಡ್, ಮೌಲ್ಯ ಮಾಪನ ಇತ್ಯಾದಿಗಳಿಗೆ ಗರಿಷ್ಠ 25 ಅಂಕಗಳು.ನಂತರದಲ್ಲಿ ಸಹಪಠ್ಯ- ಪೂರಕ ಪಠ್ಯ ಚಟುವಟಿಕೆಗಳಿಗೆ ಈ ಮೇಲಿನಂತೆಯೇ ಮೂರು ಉಪ ವಿಭಾಗಗಳಲ್ಲಿ ಅಂಕ ನೀಡಲಾಗುತ್ತದೆ. ಕ್ಷೇತ್ರಕಾರ್ಯ, ಸಾಂಸ್ಕೃತಿಕ ಕಾರ್ಯ, ಕಾಲೇಜು ಪತ್ರಿಕೆ ಹಾಗೂ ಸಭೆಗಳ ನಿರ್ವಹಣೆ, ರೇಡಿಯೋ ಟಾಕ್‌ಗಳು ಹೀಗೆ ಬಹಳಷ್ಟು ಸಂಗತಿಗಳನ್ನು ಉಪವಿಭಾಗವು ಒಳಗೊಂಡಿದೆ. ಇವೆಲ್ಲ ಒಟ್ಟುಗೂಡಿಸಿ ಈ ವಿಭಾಗದಲ್ಲಿ ಗರಿಷ್ಠ 50 ಅಂಕಗಳ ಮಿತಿ ಇದೆ
 .ಈ ಎರಡು ಮುಖ್ಯ ವಿಭಾಗಗಳಲ್ಲಿ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸುವ ಹೆಚ್ಚಿನವರು ಗರಿಷ್ಠ ಅಂಕಗಳನ್ನು ಗಳಿಸಿರುತ್ತಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಥವಾ ಸರಕಾರೀ ಸಂಸ್ಥೆಗಳಲ್ಲಿ ಉಪನ್ಯಾಸಕರಾಗಿ ಸೇರಿ ಸಾಕಷ್ಟು ಅನುಭವ ಗಳಿಸಿದ ಮೇಲಷ್ಟೇ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸುತ್ತಾರೆ ಹೆಚ್ಚಿನವರು. ಉಪನ್ಯಾಸಕರಾದ ಮೇಲೆ ಪರೀಕ್ಷಾ ಕಾರ್ಯಗಳು, ಪಾಠ ಪ್ರವಚನಗಳು, ಸಹಪಠ್ಯ ಕಾರ್ಯಗಳು, ಃಖಖ ಹೀಗೆಲ್ಲ ತೊಡಗಿಕೊಳ್ಳುವುದು ಅನಿವಾರ್ಯ ಕೂಡಾ. ಹಾಗಾಗಿ ಈ ಅಂಕಗಳು ಹೆಚ್ಚು ಕಡಿಮೆ ಎಲ್ಲರಿಗೂ ಒಂದೇ ತೆರನಾಗಿ ಇರುತ್ತವೆ.ಮೂರನೆಯದಾಗಿ ಸಂಶೋಧನೆ ಹಾಗೂ ಪ್ರಕಟಣೆಗಳು ಮತ್ತು ಶೈಕ್ಷಣಿಕ ಕೊಡುಗೆಗಳನ್ನು ಲೆಕ್ಕ ಹಾಕಲಾಗುತ್ತದೆ. ಐದು ಉಪವಿಭಾಗಗಳಲ್ಲಿ ಲೆಕ್ಕ ಹಾಕುವ ಇಲ್ಲಿನ ಅಂಕಗಳಿಗೆ ಮಿತಿ ಇರುವುದಿಲ್ಲ. ಹೆಚ್ಚು ಸಂಶೋಧನೆ ಮತ್ತು ಪ್ರಕಟಣೆ ಮಾಡಿದವರಿಗೆ ಹೆಚ್ಚು ಅಂಕಗಳು ದೊರೆಯುತ್ತವೆ. 
ಈ ಮೂರನೇ ವರ್ಗದಡಿಯಲ್ಲಿ ಬರುವ ಐದೂ ಉಪವಿಭಾಗಗಳ ಸಂಶೋಧನಾತ್ಮಕ ಚಟುವಟಿಕೆಗಳಿಗೆ ಯಾವುದೇ ಗರಿಷ್ಠ ಮಿತಿಯನ್ನು ಯುಜಿಸಿ ನಿಗದಿ ಪಡಿಸಿಲ್ಲ. ಪ್ರಾಧ್ಯಾಪಕ ಸಹಪ್ರಾಧ್ಯಾಪಕ ಹುದ್ದೆಗಳ ಆಯ್ಕೆಗೆ ಈ ಮೂರೂ ವರ್ಗಗಳಲ್ಲಿ ಕನಿಷ್ಠ ಅಂಕಗಳು ಇರಲೇ ಬೇಕು ಎಂದು ಯುಜಿಸಿ ತಾಕೀತು ಮಾಡಿದೆ. ಮೊದಲ ಎರಡು ವರ್ಗಗಳ ಗರಿಷ್ಠ ಅಂಕ 175.ಸಹಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 400 ಶೈಕ್ಷಣಿಕ ನಿರ್ವಹಣಾ ಸೂಚ್ಯಂಕಗಳನ್ನು ಪಡೆಯಬೇಕಾಗಿದ್ದು, ಅದನ್ನು 30 ಅಂಕಗಳು ಎಂದು ಪರಿಗಣಿಸಿ ಅನಂತರದ ಹೆಚ್ಚಿನ ಪ್ರತಿ ಹದಿನೈದು ಸೂಚ್ಯಂಕಗಳಿಗೆ ಒಂದು ಅಂಕದಂತೆ ಕನಿಷ್ಠ ಮೂವತ್ತು ಅಂಕಗಳಿಗೆ ಸೇರುತ್ತಾ ಹೋಗುತ್ತದೆ. 
ಈ ಅಂಕಗಳು ಅಲ್ಲದೆ ಶೈಕ್ಷಣಿಕ ಸಾಧನೆಗಳಿಗೆ ಬೇರೆಯೇ ಅಂಕಗಳಿವೆ. ಹಾಗಾದರೆ ಈಗ ಯೂನಿವರ್ಸಿಟಿಗಳಲ್ಲಿ ನಡೆಯುವುದೇನು? 2010ಕ್ಕೂ ಮೊದಲು ನೇಮಕದ ವಿಷಯದಲ್ಲಿ ಯುಜಿಸಿಯಿಂದ ಸ್ಪಷ್ಟ ನಿರ್ದೇಶನಗಳು ಇರಲಿಲ್ಲ. ಆದರೂ 2010ರ ನಂತರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ತುಮುಕೂರು ವಿಶ್ವವಿದ್ಯಾಲಯ, ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾಲಯಗಳಲ್ಲಿ ನಡೆದ ನೇಮಕಾತಿಯಲ್ಲಿ ಯುಜಿಸಿ ನಿಗದಿ ಪಡಿಸಿದ ಮಾರ್ಗದರ್ಶಕ ಸೂತ್ರಗಳನ್ನು ಉಲ್ಲಂಘಿಸಿ ಅಕ್ರಮ ನೇಮಕಾತಿ ಮಾಡಿದ್ದಾರೆ.
 
ಉದಾಹರಣೆಗೆ ಮಂಗಳೂರು ವಿವಿಯಲ್ಲಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಸಂದರ್ಶನದಲ್ಲಿ ಪ್ರಕಟಿತ ಸಂಶೋಧನಾ ಕೃತಿಗಳಿಗೆ ಗರಿಷ್ಠ 20 ಅಂಕಗಳನ್ನು ನಿಗದಿಪಡಿಸಿದ್ದರು. ಒಂದು ಸಂಶೋಧನಾ ಕೃತಿಗೆ ಐದು ಅಂಕಗಳಂತೆ ಗರಿಷ್ಠ 20 ಅಂಕಗಳು ದೊರೆಯುತ್ತವೆ. ಕೇವಲ ನಾಲ್ಕು ಕೃತಿ ಬರೆದವರೂ 20 ಅಂಕ ಗಳಿಸುತ್ತಾರೆ. ಇಪ್ಪತ್ತು ಸಂಶೋಧನಾ ಕೃತಿಗಳನ್ನು ಪ್ರಕಟಿಸಿದವರಿಗೂ 20 ಅಂಕಗಳು. ಇದು ಇಲ್ಲಿಗೆ ನಿಲ್ಲುವುದಿಲ್ಲ. ಈ ಅಂಕಗಳು ಕೇವಲ ಸಂಶೋಧನಾ ಕೃತಿಗಳಿಗೆ ಮಾತ್ರ ಸಿಗುತ್ತವೆ. 
ಆದರೆ ಮಂಗಳೂರು ವಿವಿಯಲ್ಲಿ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾಗಿರುವ ಸಾಮಾನ್ಯ ಅಭ್ಯರ್ಥಿಯ ಎರಡು ಸಂಶೋಧನಾ ಕೃತಿಗಳು ಮಾತ್ರ ಪ್ರಕಟವಾಗಿದ್ದು ಅದರಲ್ಲೊಂದು ಪಿಎಚ್‌ಡಿ ಪ್ರಬಂಧವಾಗಿದೆ ಇದಕ್ಕೆ ಶೈಕ್ಷಣಿಕ ವಿಭಾಗದಲ್ಲಿ ಪಿಎಚ್‌ಡಿಗೆ 10 ಅಂಕಗಳು ಕೊಟ್ಟಿದ್ದು ಮತ್ತೊಮ್ಮೆ ಇಲ್ಲಿ ಅದಕ್ಕೆ ಅಂಕಗಳು ಸಿಗುವುದಿಲ್ಲ. ನಿಯಮಾವಳಿ ಪ್ರಕಾರ ಆ ಅಭ್ಯರ್ಥಿಗೆ ಸಂಶೋಧನಾ ವಿಭಾಗದ 20 ಅಂಕಗಳಲ್ಲಿ ಐದು ಅಂಕಗಳು ಮಾತ್ರ ಕೊಡಬೇಕಿತ್ತು. ಆದರೆ ಅವರಿಗೆ ಅಂಕಗಳನ್ನು ನೀಡಿ ಗರಿಷ್ಠ 20 ಅಂಕಗಳನ್ನು ನೀಡಿದ್ದಾರೆ. 
ಇದೇ ವಿಭಾಗದಲ್ಲಿ 1 ಸಿ ವರ್ಗದ ಮೀಸಲಿನ ಅಡಿಯಲ್ಲಿ ಆಯ್ಕೆ ಆದ ಅಭ್ಯರ್ಥಿಯ ಒಂದೇ ಒಂದು ಕೃತಿ ಕೂಡಾ ಪ್ರಕಟವಾಗಿಲ್ಲ. ಆ ಅಭ್ಯರ್ಥಿಗೆ ಸಂಶೋಧನಾ ವಿಭಾಗದ 20 ಅಂಕಗಳಲ್ಲಿ ಸೊನ್ನೆ ಅಂಕ ಬಂದಿರುತ್ತದೆ. ಆದರೂ ಆ ಅಭ್ಯರ್ಥಿಗೆ ಸಂದರ್ಶನದಲ್ಲಿ ಗರಿಷ್ಠ ಅಂಕಗಳನ್ನು ನೀಡಿದ್ದಾರೆ. ಸಂದರ್ಶನದಲ್ಲಿ ಗರಿಷ್ಠ ಅಂಕ ನೀಡಿದ್ದರೂ ಸಂಶೋಧನೆಯಲ್ಲಿ ಸೊನ್ನೆ ಅಂಕ ಇರುವ ಕಾರಣ ಇವರಿಗಿಂತ ಹೆಚ್ಚು ಒಟ್ಟು ಅಂಕಗಳು ಬೇರೆ ಅಭ್ಯರ್ಥಿಗಳಿಗೆ ಬಂದಿದೆ. ಆದರೂ ಕಡಿಮೆ ಅಂಕ ಇದ್ದಾಗಲೂ ಅದೇ ಅಭ್ಯರ್ಥಿಯ ಆಯ್ಕೆ ಆಗಿದೆ. ಬೇರೆ ವಿಭಾಗಳಲ್ಲಿಯೂ ಸಂಶೋಧನಾ ವಿಭಾಗದಲ್ಲಿ ಸಂಶೋಧನಾ ಪ್ರಬಂಧ ಮಂಡನೆ, ಪ್ರಕಟಣೆಗಳು ಇಲ್ಲದೆ ಇದ್ದಾಗಲೂ ಅವರಿಗೆ ಗರಿಷ್ಠ ಅಂಕಗಳನ್ನು ನೀಡಲಾಗಿದೆ. ಸಂದರ್ಶನದಲ್ಲಿಯೂ ಹೆಚ್ಚಿನ ಅಂಕಗಳನ್ನು ನೀಡಿ ತಮಗೆ ಬೇಕಾದವರನ್ನು ಆಯ್ಕೆ ಮಾಡಿದ್ದಾರೆ. 
ಆ ಬಗ್ಗೆ ಕೇಳಿದರೆ ಅಂಕಗಳನ್ನು ನಿರ್ಧರಿಸುವಲ್ಲಿ ಆಯ್ಕೆ ಕಮಿಟಿಯ ತೀರ್ಮಾನವೇ ಅಂತಿಮ ಎನ್ನುವ ಸಿದ್ಧ ಉತ್ತರ ಸಿಗುತ್ತದೆ. ಆಯ್ಕೆ ಕಮಿಟಿಯ ಬೇಕಾಬಿಟ್ಟಿ ಅಂಕಗಳನ್ನು ಕೊಡುವ ಹಾಗಿದ್ದರೆ ಯುಜಿಸಿ ಮಾರ್ಗ ದರ್ಶಕ ಸೂತ್ರಗಳ ಅಗತ್ಯವೇನಿದೆ? 
ಇದೀಗ 2006-07ರಲ್ಲಿ ಮೈಸೂರು ವಿವಿ ಮಾಡಿದ 135 ಬೋಧಕ ಹುದ್ದೆಗಳ ನೇಮಕಾತಿಯನ್ನು ಸರ್ಕಾರ ರದ್ದು ಪಡಿಸಿದ ಆದೇಶ ನೀಡಿ  ತಡವಾಗಿಯಾದರೂ ಒಂದು ದಿಟ್ಟ ಹೆಜ್ಜೆಯನ್ನು ಇಟ್ಟಿದೆ. 
ಅದೇ ರೀತಿ ಮಂಗಳೂರು, ಬೆಳಗಾವಿ ಸೇರಿದಂತೆ 2010 ರಲ್ಲಿ ಯುಜಿಸಿ ಸ್ಪಷ್ಟ ನಿಯಮಾವಳಿಯನ್ನು ತಂದ ನಂತರವೂ ಆದ ಅಕ್ರಮ ನೇಮಕವನ್ನು ರದ್ದುಪಡಿಸಿಬೇಕಲ್ಲದೇ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ ಅಕ್ರಮ ಎಸಗಿದ ಆಯ್ಕೆ ಸಮಿತಿಯ ಸದಸ್ಯರು, ಉಪಕುಲಪತಿ ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತವಾದ ಕ್ರಮ ತೆಗೆದು ಕೊಳ್ಳಬೇಕು. ಹಾಗಾದಾಗ ಮಾತ್ರ ಮುಂದಿನ ನೇಮಕಗಳು ಪಾರದರ್ಶಕವಾಗಲು ಸಾಧ್ಯ. -ಡಾ.ಲಕ್ಷ್ಮೀ ಜಿ ಪ್ರಸಾದ ಕನ್ನಡ ಉಪನ್ಯಾಸಕಿ

Thursday 19 June 2014

ಗುರು ಕಾರ್ನೂರ್ ದೈವದ ಆಕರ್ಷಕ ಕುಣಿತ -ಡಾ.ಲಕ್ಷ್ಮೀ ಜಿ ಪ್ರಸಾದ


                                                           copy rights reserved

ಭೂತಗಳ ತೆರೆಪೊರ್ಪಾಟ(Bhutagala tere porpaata )-ಡಾ.ಲಕ್ಷ್ಮೀ ಜಿ ಪ್ರಸಾದ

                                               copy rights reserved

Friday 13 June 2014

ಅಪರೂಪದ ಚಂದಕ್ಕು ನಲಿಕೆ-ಡಾ.ಲಕ್ಷ್ಮೀ ಜಿ ಪ್ರಸಾದ


copy rights reserved
ದುಡಿ ಕುಣಿತಗಳಲ್ಲಿ ಇದು ಕೂಡ ಒಂದು ,ಇಷ್ಟರ ತನಕ ಜನಪದ ಅಧ್ಯಯನಕಾರರ ಗಮನಕ್ಕೆ ಬಾರದೆ ಇರುವ ಒಂದು ಅಪರೂಪದ ತುಳು ಜನ ಪದ ಕುಣಿತವಿದು.ಬಾಳಿಲ ಮಂಜುನಾಥ ಜನಪದ ಕಲಾ ಸಂಘದವರು ಅಭಿವ್ಯಕ್ತಿಸಿದ ಚಂದಕ್ಕು ನಲಿಕೆ ,ಶ್ರೀ ಬಾಬು ಅಜಲರ ಹಾಡು ಮತ್ತು ಜನಪದ ಕಲಾ ಸಂಘದ ಮಹಿಳಾ ಸದಸ್ಯರ ಜನಪದ ನೃತ್ಯ ಬಹಳ ಸೊಗಸಾಗಿದೆ ನೃತ್ಯದ ಹೆಜ್ಜೆಗಳಲ್ಲಿ ತುಸು ಆಧುನಿಕತೆಯ ಪ್ರಭಾವ ಇದೆ. ಆದರೂ ಮೂಲದ ಕುಣಿತದ ಹೆಜ್ಜೆ ,ಸೊಗಸು ಕೂಡ ಉಳಿದುಕೊಂಡಿದೆ

Vocarchanda baari raadhe gopala paddhana by Smt sharada g bangera ,maninalkur Vocaroo Voice Messageoo Voice Message

Vocaroo Voice Message  pls click here to listen paaddana



 ಚಂದ ಬಾರಿ ರಾಧೆ ಗೋಪಾಲ ಪಾಡ್ದನ -ಹಾಡಿದವರು ಶ್ರೀಮತಿ ಶಾರದ ಜಿ ಬಂಗೇರ ಮಣಿನಾಲ್ಕೂರು ,ಬಂಟ್ವಾಳ
copy rights reserved @Dr Laxmi G  Prasad




 ,,ದಾಸವರೇಣ್ಯರ ನಿಂದಾಸ್ತುತಿ ಗಳಂತೆ ಇದು ಕೂಡ ತುಳು ಜನಪದರ ನಿಂದಾ ಸ್ತುತಿಯ ವಿಶಿಷ್ಟ ಅಭಿವ್ಯಕ್ತಿ ಇರಬಹುದು .

ಮಣಿನಾಲ್ಕೂರು ಅಂಗನವಾಡಿಯ ಸಹಾಯಕರಾಗಿರುವ ಶಾರದಾ ಬಂಗೆರರಿಗೆ ಅನೇಕ ಪಾಡ್ದನಗಳು,
ತುಳು ಜನಪದ ಹಾಡುಗಳು ತಿಳಿದಿದ್ದು ಅವನ್ನು ಸುಮಧುರವಾಗಿ ಹಾಡುತ್ತಾರೆ




Wednesday 4 June 2014

ಸಾವಿರದೊಂದು ಗುರಿಯೆಡೆಗೆ :ತುಳುನಾಡ ದೈವಗಳು-105-106 ಕಾನದ ಕಟದ -ಡಾ.ಲಕ್ಷ್ಮೀ ಜಿ ಪ್ರಸಾದ

                  
               ಕರಂಗೋಲುಕುಣಿತ ಚಿತ್ರ ಕೃಪೆ    :ಕೃಷ್ಣ ಮೋಹನ ಪೆರ್ಲ


                                                  copy rights reserved
ಭತ್ತದ ನೈಸರ್ಗಿಕ ಬೇಸಾಯದ ಒಂದು ಹುಲ್ಲಿನ ಕ್ರಾಂತಿ ಖ್ಯಾತಿಯ ಜಪಾನಿನ ವಿಜ್ಞಾನಿ ಮಸನೋಬ ಪುಕುವೋಕ ಅಜ್ಜನನ್ನು ನೆನಪಿಸುವ ಕಾನದ ಮತ್ತು ಕಟದರು ಘಟ್ಟದ ಮೇಲಿಂದ ಕರಂಗೋಲು/ಭತ್ತದ ಅತಿಕಾರೆ ಬೆಳೆಯನ್ನು ತುಳುನಾಡಿಗೆ ತಂದ ಸಾಂಸ್ಕೃತಿಕ ವೀರರು .ಕರಂಗೋಲು ಕುಣಿತ ಇವರ ನೆನಪಿನಲ್ಲಿ ನಡೆಯುವ ತುಳು ಆರಾಧನಾ ಜನಪದ ಕುಣಿತ .
ಬೊಮ್ಮಿ ಎಂಬ ಒಂದು ಗುತ್ತಿನಲ್ಲಿ ಸುಬ್ಬಿ ಎಂಬ ಹೆಸರಿನ ಹುಡುಗಿ ಇದ್ದಳು.ಅವಳು ಒಂದು ದಿನ ಗುಡ್ಡದಲ್ಲಿ ಸೊಪ್ಪು ಹೆರೆಯುವಾಗ ಅವಳಿಗೆ ಒಂದು ಮಗು ಸಿಗುತ್ತದೆ .ಅದನ್ನು ಮಡಿಲಲ್ಲಿ ಕಟ್ಟಿಕೊಂಡು ಬಂದು ತನ್ನ ಒಡೆಯನಿಗೆ ಅವಳು ತಂದುಕೊಡುತ್ತಾಳೆ.ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿದ್ದ ಆತ ಆ ಮಗುವನ್ನು ಅವಳೇ ಸಾಕುವಂತೆ ವ್ಯವಸ್ಥೆ ಮಾಡುತ್ತಾನೆ.
ಅವಳು ತನ್ನ ಅಣ್ಣಂದಿರಾದ ಪಾಂಬಲಜ್ಜ ಪೂಂಬಲ ಕರಿಯರ ಸಹಾಯದಿಂದ ಆ ಹೆಣ್ಣು ಮಗುವನ್ನು ಸಾಕುತ್ತಾಳೆ .ಬೆಳ್ಳನೆ ಹೊಳೆಯುತ್ತಾ ಇದ್ದ ಆ ಮಗುವಿಗೆ ಬೊಳ್ಳೆ ಎಂದು ಹೆಸರು ಹಿಡಿದು ಕರೆಯುತ್ತಾರೆ.
ಮುಂದೆ ಅವಳನ್ನು  ಕಂಗು ಹಿತ್ತಿಲು ಕಾಂತಣ ಬೈದ್ಯನ ಹೆಂಡತಿ ದೇಯಿ ಸಾಕುತ್ತಾಳೆ.ತುಸು ದೊಡ್ಡವಳಾದ ಮೇಲೆ ಮದುವೆ ಮಾಡುತ್ತಾರೆ .
ಬೊಳ್ಳೆ ಮತ್ತು ದೇಯಿ ಇಬ್ಬರೂ ಒಂದೇ ದಿನ ಋತುಮತಿಯರಾಗುತ್ತಾರೆ.ಇಬ್ಬರೂ ತೊಟ್ಟಿಲ ಕೆರೆಯಲ್ಲಿ ಸ್ನಾನ ಮಾಡುತ್ತಾರೆ .ಪೆರುವೆಲ್ ಮೀನುಗಳಿಗೆ ಬೆಳ್ತಿಗೆ  ಅಕ್ಕಿ ಹಾಕುತ್ತಾರೆ.ಹರಕೆ ಹೇಳುತ್ತಾರೆ.ಇದರಿಂದಾಗಿ ಗರ್ಭವತಿಯರಾಗುತ್ತಾರೆ. ದೇಯಿ ಹೆಣ್ಣು ಮಗು ಹಡೆಯುತ್ತಾಳೆ .ಅವಳೇ ಕೋಟಿ ಚೆನ್ನಯರ ಅಕ್ಕ ಕಿನ್ನಿದಾರು .
ಬೊಳ್ಳೆ ಅವಳಿ ಮಕ್ಕಳನ್ನು ಪ್ರಸವಿಸುತ್ತಾಳೆ.ಅವರಿಗೆ ಕಾನದ ,ಕಟದ ಎಂದು ಹೆಸರಿಡುತ್ತಾರೆ.ಮುಂಡೆ ಇವರು ಬೆಳೆದು ವಿದ್ಯೆ ಕಲಿತು ಅಸಮಾನ್ಯ ವೀರರಾಗುತ್ತಾರೆ.
ಮುಂದೆ ಮುದ್ದ ಕಳಲರನ್ನು ಭೇಟಿಯಾಗುತ್ತಾರೆ .ಅಲ್ಲಿ ಹೋರಾಡಿ ಕಾರಣಿಕ ತೋರುತ್ತಾರೆ.
ಮುಂಡೆ ಘಟ್ಟದ ಮೇಲಿನಿಂದ ಕರಂಗೋಲು .ಅತಿಕಾರೆ ಭತ್ತದ ತಳಿಯನ್ನು ತಂದು ತುಳುನಾಡಿನಲ್ಲಿ ಬೇಸಾಯ ಮಾಡಲು ಹೊರಡುತ್ತಾರೆ.
ಘಟ್ಟದ ಮೇಲಿನಿಂದ ಅತಿಕಾರೆ ಭತ್ತವನ್ನು ತರುವಾಗ ಚಾಮುಂಡಿ ತಡೆಯುತ್ತಾಳೆ.ಅವಳ ಜೊತೆ ಹೋರಾಡಿ ಗೆಲ್ಲುತ್ತಾರೆ.ಅವರ ಶೌರ್ಯಕ್ಕೆ ಮೆಚ್ಚಿ ಚಾಮುಂಡಿ ಅವರಿಗೆ ಯೋಧ ಕತ್ತಿಗಳನ್ನು ನೀಡುತ್ತಾಳೆ,
ಮುಂದೆ ಅವರು ಎನ್ಮೂರಿಗೆ  ಬಂದು ಕೋಟಿ ಚೆನ್ನಯರಲ್ಲಿ ಹೋರಾಡುತ್ತಾರೆ.ಮುಂದೆ ನಾಲ್ವರೂ ಸಾಹಸಿಗಳು ರಾಜಿ ಮಾಡಿ ಕೊಳ್ಳುತ್ತಾರೆ .ಒಟ್ಟಾಗಿ ಸಂಚರಿಸುವಾಗ ಮುದ್ದ ಕಳಲ ರನ್ನೂ ಭೇಟಿ ಮಾಡುತ್ತಾರೆ .ಕಾನದ ಕಟದ ತಮ್ಮ ಸಾಮರ್ಥ್ಯದಿಂದ ಕಲ್ಲಿನ ಸೆಲೆಯಿಂದ ನೀರು ತೆಗೆದು ಕಾರಣಿಕ ತೋರುತ್ತಾರೆ.
ಒಂದು ದಿನ ಕಾನದ ಕಟದ ಹೊಳೆಯಲ್ಲಿ ಮೀನು ಹಿಡಿಯಲು ಹೋಗುತ್ತಾರೆ.ಮೀನು ಹಿಡಿಯುವ ಉತ್ಸಾಹದಲ್ಲಿ ಅಣ್ಣ ನೀರಿಗೆ ಹಾರುತ್ತಾನೆ .ಅಣ್ಣ ಬಾರದೆ ಇರುವುದನ್ನು ಗಮನಿಸಿದ  ತಮ್ಮನೂ ನೀರಿಗೆ ಹಾರುತ್ತಾನೆ .ಇಬ್ಬರೂ ದುರಂತವನ್ನಪ್ಪುತ್ತಾರೆ .ನೀರಿನಿಂದ ಪಂಜುರ್ಲಿ ಭೂತ ಎದ್ದು ಬರುತ್ತದೆ ಪಂಜುರ್ಲಿಯ ಜೊತೆ ಕಾನದ ಕಟದ ಋ ಮಾಯವಾಗುತ್ತಾರೆ .

ದುರಂತ ಮತ್ತು ದೈವತ್ವ ತುಳು ಸಂಸ್ಕೃತಿಯ ಒಂದು ವೈಶಿಷ್ಟ್ಯತೆ .ವೀರಾರಾಧನೆ ತುಳು ನಾಡಿನಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಪ್ರಚಲಿತವಿರುವ ವಿದ್ಯಮಾನ .ಸಾಹಸಿಗಳಾದ ಕಾನದ ಕಟದರ ಆಕಸ್ಮಿಕ ಅಥವಾ ಉದ್ದೇಶ ಪೂರ್ವಕವಾದ ಕುತಂತ್ರದಿಂದಾದ ದುರಂತ ವನ್ನಪ್ಪಿ ಮುಂಡೆ ಜನಮಾನಸದಲ್ಲಿ ನೆಲೆಸಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾರೆ.

ಹಿಂದಿನ ಕಾಲದಲ್ಲಿ ಬೇಸಾಯ ಮಾಡಲು ಎಲ್ಲರಿಗೆ ಅವಕಾಶ ಇರಲಿಲ್ಲ .ಈ ಸಾಹಸಿ ಸಹೋದರರು ಅದಕ್ಕಾಗಿ ಘಟ್ಟದಿಂದ ಭತ್ತದ ಬೀಜವನ್ನು ತಂದು ಕಾಡು ಕಡಿದು ಗದ್ದೆ ಮಾಡಿ ಸಾಹಸದಿಂದ ಬೇಸಾಯ ಮಾಡಿದ್ದಿರಬೇಕು.ಈ ಸಂದರ್ಭದಲ್ಲಿ ಅವರು ಅನೇಕ ಅಡ್ಡಿ ಆತಂಕಗಳನ್ನು ಎದುರಿಸಿರಬೇಕು .ಚಾಮುಂಡಿ ದೈವ ತಡೆಯಿತು ಎಂಬಲ್ಲಿ ಈ ಬಗ್ಗೆ ಸುಳಿವು ಸಿಗುತ್ತದೆ .
ಹಾಗಾಗಿ ಅವರನ್ನು ಉದ್ದೇಶಪೂರ್ವಕವಾಗಿ ಯಾರಾದರೂ ದುರಂತವನ್ನಪ್ಪುವಂತೆ ಮಾಡಿರಬಹುದು .ಅಥವಾ ಹೊಳೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮರಣನ್ನಪ್ಪಿರಬಹುದು.
ಇದಕ್ಕೆ ಮುಂದೆ ಪಂಜುರ್ಲಿ ದೈವದ ಕಾರಣಿಕ ಸೇರಿ ಅವರು ಪಂಜುರ್ಲಿ ದೈವದ ಸೇರಿಗೆಗೆ ಸಂದು ಮಾಯವಾಗಿ ದೈವತ್ವ ಪಡೆದರು ಎಂಬ ಕಥಾನಕ ಸೇರಿರಬಹುದು.
ಅದು ಏನೇ ಇದ್ದರೂ ಅತಿಕಾರೆ ಭತ್ತದ ಬೆಳೆಯನ್ನು ತುಳುನಾಡಿಗೆ ಪರಿಚಯಿಸಿ ತುಳುನಾಡಿನಲ್ಲಿ ಭತ್ತದ ಬೇಸಾಯದ ಪ್ರವರ್ತಕರಾಗಿರುವ ಕಾನದ ಕಟದರು  ಪ್ರಾತಃ ಸ್ಮರಣೀಯರಾಗಿದ್ದಾರೆ ಎಂಬುದಂತೂ ಎಲ್ಲರೂ ಒಪ್ಪಲೇ ಬೇಕಾದ ವಿಚಾರವಾಗಿದೆ .
ಇವರ ನೆನಪಿನಲ್ಲಿಯೇ ಕರಂಗೋಲು ಕುಣಿತ ತುಳುನಾಡಿನಲ್ಲಿ ಬಳಕೆಗೆ ಬಂದಿದೆ.ಕರಂಗೋಲು ಮತ್ತು ಕಂಗೀಲು ಎರಡು ಕೂಡಾ ಸುಗ್ಗಿಯ ಭತ್ತದ ಬೇಸಾಯಕ್ಕೆ ಸಂಬಂಧಿಸಿದ್ದಾಗಿದೆ




           ಕಂಗೀಲು ಕುಣಿತ   ಚಿತ್ರ ಕೃಪೆ :ಪ್ರಚೇತ ಶೆಟ್ಟಿ
  ಆಧಾರ ಗ್ರಂಥ :ಡಾ.ವಾಮನ ನಂದಾವರ -ಕೋಟಿ ಚೆನ್ನಯ -ಒಂದು ಜಾನಪದೀಯ ಅಧ್ಯಯನ (ಪಿಎಚ್.ಡಿ ಸಂಶೋಧನಾ ಮಹಾ ಪ್ರಬಂಧ ).ಕರಂಗೋಲು ಎರಡೂ ಅತಿಕಾರ ಬೆಳೆಯನ್ನು ತುಳುನಾಡಿಗೆ ತಂದ ಕಾನದ ಕಟದರ ನೆನಪಿನಲ್ಲಿ ಭಿನ್ನ ಭಿನ್ನ ಸಮುದಾಯದವರು ಮಾಡುವ ಕುಣಿತ ,ನೆಕ್ಕಿ ಸೊಪ್ಪನ್ನು ಕೈಯಲ್ಲಿ ಹಿಡಿದು ಮೈಗೆ ಬಿ ಳಿ ಚುಕ್ಕೆ ಹಾಕಿ ,x ಗುರುತು ಅಡ್ಡ ಗೆರೆಗೆರೆ ತಲೆಗೆ ಮುಂಡಾಸು ಕಟ್ಟಿ ಕರಂಗೋಲು ನೃತ್ಯವನ್ನು ಮಾಡುವುದು ಸಂಪ್ರದಾಯ .ಈಗ ವೇಷ ಭೂಷಣ ಕುಣಿತ ಹಾಡುಗಳಲ್ಲಿ ಪ್ರಾದೇಶಿಕವಾಗಿ ಅನೇಕ ಭಿನ್ನತೆಗಳಿವೆ ಕರಂಗೋಲು ಚಿತ್ರ ಹಾಕಿದ್ದಕ್ಕೆ ಧನ್ಯವಾದಗಳು Krishnamohan Perla ಈ ಬಗ್ಗೆ ಹೆಚ್ಚಿನ ಮಾಹಿತಿಗೆ http://suddinews.com/sullia/2012/12/18/25702/

Tuesday 3 June 2014

ಸಾವಿರದೊಂದು ಗುರಿಯೆಡೆಗೆ:104 -ಕನ್ನಲಾಯ ಭೂತ © Dr.LAKSHMI G PRASAD

                                              
                                                               ©copy rights reserved
ದಕ್ಷಿಣ ಕನ್ನಡ ಜಿಲ್ಲೆಯ ಅಗರಿಯಲ್ಲಿ  ಕನ್ನಲಾಯ ಭೂತಕ್ಕೆ ಆರಾಧನೆ ಇದೆ .ಅಗರಿಯಲ್ಲಿ ಕನ್ನಲಾಯ/ಕಣ್ಣಲಾಯ/ಕನ್ನಲ್ಲಾಯ/ಕನ್ನೆಲಾಯ ದೈವದ ಗುಡಿಯೂ ಇದೆ .
ಕನ್ನಲ್ಲಾಯಯ ಜುಮಾದಿಯ ಸೇರಿಗೆಗೆ ಸಂದ ದೈವ .ಮೂಲತಃ ಈತ ಘಟ್ಟದ ಮೇಲಿನ ಕನ್ನಡ ಪರಿಸರದ ಕೋಣಗಳ ಮಾರಾಟ ಮಾಡುವ ವ್ಯಾಪಾರಿ .
ಗುರು ಸರೊಪೊಳಿ ನಾಯಕನಿಗೆ ನಾಲ್ಕು ಜನ ಮಕ್ಕಳು .ಅವರು ಚಿಕ್ಕಂದಿನಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ .ನಂತರ ಹಡಗಿನ ಮೂಲಕ ವ್ಯಾಪಾರ ಮಾಡುತ್ತಾರೆ .ಸಂಭಾರ ಜೀನಸು ,ಗೋಧಿ ,ಬೇಳೆ,ಅಕ್ಕಿ,ಸಾಮೆ,ಬಟ್ಟೆ ಮೊದಲಾದ ವಸ್ತುಗಳ ವ್ಯಾಪಾರ ಮಾಡುತ್ತಾರೆ .
ಮುಂದೆ ಅವರು ಕೋಣಗಳನ್ನು ಕೊಂಡು ಕೊಳ್ಳುವುದಕ್ಕಾಗಿ ಘಟ್ಟದ ಮೇಲೆ ಹೋಗುತ್ತಾರೆ.ಅಲ್ಲಿ ಎಲ್ಲಪ್ಪ ಗೌಡ ಎಂಬಾತ ಎತ್ತು ಕೋಣಗಳನ್ನುಸಾಕಿ ಮಾರುತ್ತಾ ಇರುತ್ತಾನೆ.
ಅವನು ಈ ನಾಲ್ಕು ಶೆಟ್ಟಿಗಳ ಪರಿಚಯ ಮಾಡಿಕೊಳ್ಳುತ್ತಾನೆ.ಅವನಿಗೆ ಮುನ್ನೂರು ರುಪಾಯಿಗಳನ್ನು ಕೊಟ್ಟು ಅವನ ಎಲ್ಲ ಎತ್ತು/ಕೋಣಗಳನ್ನೂ ಇವರು ಕೊಂಡುಕೊಳ್ಳುತ್ತಾರೆ.ಆತನನ್ನು ಎತ್ತು/ಕೋಣಗಳ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿ ತಮ್ಮೊಂದಿಗೆ ಕರೆ ತರುತ್ತಾರೆ.
ಮುಂದೆ ಈ ನಾಲ್ಕು ಜನ ಸಹೋದರರಿಗೆ ಸ್ವಾಮಿ ನಂದೇದಿ ಎಂಬ ಹುಡುಗಿಯ ಪರಿಚಯವಾಗುತ್ತದೆ.ಅವಳಲ್ಲಿ ಈ ನಾಲ್ಕು ಜನ ಸಹೋದರರು ಆಕೆಯ ಬಳಿ ಅಡುಗೆ ಮಾಡಿಕೊಳ್ಳಲು ಪಾತ್ರೆಗಳನ್ನು ಕೇಳುತ್ತಾರೆ.ಆಗ ಆಕೆ ತಾನೇ ಅದೀಗೆ ಮಾಡಿ ಕೊಡುವುದಾಗಿ ಹೇಳುತ್ತಾಳೆ.
ಕೊನೆಯಲ್ಲಿ ಅವಳು ಅವರ ನಾಲ್ಕು ಸಾವಿರ ಕೋಣಗಳನ್ನು ನೋಡುವ ಆಸೆ ವ್ಯಕ್ತ ಪಡಿಸುತ್ತಾಳೆ.ಆಕೆ ಸುಂದರವಾದ ಉಡುಗೆ ತೊಟ್ಟು ಚಿಕ್ಕ ಬೆಳ್ಳಿಯ ಚಾಕು ಹಿಡಿದು ತತ್ರ ಹಿಡಿದುಕೊಂಡು ಮೈದಾನಕ್ಕೆ ಬರುತ್ತಾಳೆ.ಅಲ್ಲಿನ ಕೋಣಗಳ ಸೌನ್ದಯಕ್ಕೆ ಮನ ಸೋತು ಒಂದು ಜೊತೆ ಸುಂದರವಾದ ಕೋಣಗಳನ್ನು ಖರೀದಿಸಲು ಬಯಸುತ್ತಾಳೆ.
ಇಲ್ಲಿ ಕೋಣಗಳ ಬೆಲೆಯ ವಿಚಾರದಲ್ಲಿ ಆ ಹುಡುಗಿ ಮತ್ತು ನಾಲ್ಕು ಜನ ಸಹೋದರರ ನಡುವೆ ಭಿನ್ನಾಭಿಪ್ರಾಯ ಉಂಟಾಗುತ್ತದೆ .ಅವರೊಳಗೆ ವಿವಾದ ಉಂಟಾಗುತ್ತದೆ.ಅವಳು ಕೇಳಿದ ಬೆಲೆಗೆ ಅವರು ಕೋಣಗಳನ್ನು ಕೊಡಲು ಒಪ್ಪುವುದಿಲ್ಲ.

ಇದರಿಂದ ನೊಂದು ಕೊಂಡ ಅವಳು ತನ್ನ ಗುತ್ತಿಗೆ ಹಿಂದಿರುಗುವಾಗ ತನ್ನ ಆರಾಧ್ಯ ದೈವ ಜುಮಾದಿಗೆ ಹರಿಕೆ ಹೇಳುತ್ತಾಳೆ.
ಆ ವೇಳೆಗೆ ಕೋಣಗಳನ್ನುನೋಡಿಕೊಳ್ಳುವಾತ ಕೋಣಗಳನ್ನು ನೀರು ಕುಡಿಸುವ ಸಲುವಾಗಿ ಕೆರೆಗೆ ಕರೆತರುತ್ತಾನೆ .ಆಗ ಜುಮಾದಿ ದೈವ ತನ್ನ ಕಾರಣಿಕದಿಂದ  ಆ ಕೋಣಗಳನ್ನು ಕಲ್ಲಾಗಿ ಪರಿವರ್ತಿಸುತ್ತದೆ .
ಆತ ಕೋಣಗಳು ಕಲ್ಲಾದಾಗ ದಿಗ್ಭ್ರಮೆ ಗೊಂಡು ಇನ್ನು ತನಗೇನು ಅಪ್ಪಣೆ ಎಂದು ದೈವ ಜುಮಾದಿಗೆ ಮೊರೆ ಇಡುತ್ತಾನೆ .ಆಗ ಜುಮಾದಿ  ಭೂತ ಆತನನ್ನು ತನ್ನ ಸೇರಿಗೆಯಲ್ಲಿ ಸಂದಾಯ ಮಾಡಿ ಆತನಿಗೆ ಒಂದು ಅಲೌಕಿಕ ನೆಲೆ ಕೊಡುತ್ತದೆ .
ವಾಸ್ತವದಲ್ಲಿ ಕೋಣಗಳ ವ್ಯಾಪಾರದಲ್ಲಿ ಚರ್ಚೆ ಬಂದು ದುರಂತಕ್ಕೀಡಾದ ವ್ಯಾಪಾರಿ ದೈವತ್ವ ಪಡೆದು ಅರಾಧಿಸಲ್ಪಡುತ್ತಿರಬೇಕು .
ಆತನ ದುರಂತ ಅಕಸ್ಮಿಕವಾಗಿಯೂ ಆಗಿರಬಹುದು .ಅಥವಾ ಉಂಟಾದ ವಿವಾದದಿಂದಲೂ  ಆಗಿರಬಹುದು .ದುರಂತಕ್ಕೆ ಜುಮಾದಿ ದೈವದ ಕಾರಣಿಕದ ಕಥಾನಕ ಸೇರಿಕೊಂಡಿರುವ ಸಾಧ್ಯತೆ ಇದೆ .

ಈ ಪಾಡ್ದನದ ಇನ್ನೊಂದು ಪಾಠ ದಲ್ಲಿ ನಾಲ್ಕು ಜನ ಶೆಟ್ಟಿಗಳು ಆಹಾರ ಕೇಳಿದಾಗ ಅವರ ಜಾತಿ ಕೇಳಿ ನೀರು ಕೊಡುತ್ತಾಳೆ.ಆಗ ಕಣ್ಣಲಾಯ ಭೂತ ಆಕೆಯನ್ನು ಮಾಯ ಮಾಡುತ್ತದೆ ಎಂಬ ಕಥೆಯೂ ಇದೆ.
ಆಧಾರ ಗ್ರಂಥಗಳು
1 ಡಾ.ಬಿ ಎ ವಿವೇಕ ರೈ -ತುಳು ಜನಪದ ಸಾಹಿತ್ಯ
2ಡಾ.ಹೈಡ್ರೂನ್ ಬ್ರೂಕ್ನರ್;ಒಳ ಸಂಬಂಧಗಳಿರುವ ಮೌಖಿಕ ಪರಂಪರೆಯಲ್ಲಿ  ಕನ್ನಲ್ಲಾಯ ಪಾಡ್ದನದ