Thursday 27 July 2017

ತುಳುನಾಡಿನ ಮುಸ್ಲಿಂ ಭೂತಗಳು ©ಡಾ ಲಕ್ಷ್ಮೀ ಜಿ ಪ್ರಸಾದ

 ಅರಬ್ಬಿ  , ಚೀನೀ ಮತ್ತು ಮುಸ್ಲಿಂ  ಭೂತಗಳು© ಡಾ ಲಕ್ಷ್ಮೀ ಜಿ ಪ್ರಸಾದ ಕನ್ನಡ ಉಪನ್ಯಾಸಕಿ ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ
ಅಣಿ ಅರದಲ ಸಿರಿ ಸಿಂಗಾರ ಗ್ರಂಥ ದಲ್ಲಿ ಪ್ರಕಟಿತ ಬರಹ










ತುಳುವರ ಭೂತಾರಾಧನೆಯಲ್ಲಿ ಯಾವುದೇ ಜಾತಿ ಭೇದ ಅಂತ ಇರುವುದಿಲ್ಲ ಅಂತೆಯೇ ಧರ್ಮದ ಗಡಿ ಕೂಡಾ ಇದಕ್ಕಿಲ್ಲ .ಉಲ್ಲಾಳದಲ್ಲಿ ಭೂತ ಮಸೀದಿಗೆ ಭೇಟಿ ಕೊಡುವ ಸಂಪ್ರದಾಯ ಇದೆ. ಅದೇ ರೀತಿ ಕೆಲವೆಡೆ ಭೂತ ಮುಸ್ಲಿಂ ಕ್ರಿಸ್ಚಿ ಯನ್ ವ್ಯಕ್ತಿಗಳನ್ನು ಉದ್ದೇಶಿಸಿ ಕರೆದು ಗೌರವಿಸುವ ಪದ್ಧತಿ ಇದೆ .ತೋಕ್ಕೊಟು  ಸಮೀಪ ಭೂತ “ಅಂತಂತೋನಿ “ಎಂದು ಕರೆಯುವ ಬಗ್ಗೆ ಭೂತ ಕಟ್ಟುವ ಕಲಾವಿದರಾದ ಅಪ್ಪಣ್ಣ  ಅವರು ತಿಳಿಸಿದ್ದಾರ

 ಅಂತೆಯೇ ತುಳುನಾಡಿನಲ್ಲಿ ದೈವತ್ವವನ್ನು ಪಡೆದವರೆಲ್ಲ ಹಿಂದುಗಳು, ತುಳುನಾಡಿನವರೇ ಆಗಬೇಕಿಲ್ಲ. ಅನೇಕ ಕನ್ನಡ ಮೂಲದ ವ್ಯಕ್ತಿಗಳು. ತುಳುನಾಡಿನಲ್ಲಿ ಭೂತ ಗಳಾಗಿ ಆರಾಧಿಸಲ್ಪಡುತ್ತಿದ್ದಾರೆ   ಕನ್ನಡ ಬೀರ, ಬಚ್ಚನಾಯಕ, ಬೈಸು ನಾಯಕ, ಕರಿಯಣ್ಣ ನಾಯಕ, ಕಚ್ಚೆ ಭಟ್ಟ, ಕನ್ನಡ ಭೂತ, ಕನ್ನಡ ಭೂತ ಯಾನೆ ಪುರುಷ  ಭೂತ,ಕನ್ನಡಿಗ ಭೂತ ಮೊದಲಾದವರು ಮೂಲತಃ ಕನ್ನಡ ಭಾಷಿಗರು ಆಗಿದ್ದವರು   .ತುಳುನಾಡಿನಲ್ಲಿ ದೈವತ್ವ ಪಡೆದು ಭೂತ ವಾಗಿ ಆರಾಧಿಸಲ್ಪಡುವುದು ಒಂದು ವಿಶಿಷ್ಟ ಸಂಸ್ಕೃತಿ .ಇಲ್ಲಿ ಭೂತತ್ವವನ್ನು ಪಡೆಯುವುದಕ್ಕೆ ಯಾವುದೇ ಜಾತಿ ಧರ್ಮದ ಮಿತಿ ಇಲ್ಲ. ಇಲ್ಲಿ ಬ್ರಾಹ್ಮಣರೂ ಭೂತವಾಗಿದ್ದಾರೆ.ಚಾಮುಂಡಿ,ಭಟ್ಟಿ ಭೂತ ,ಕಚ್ಚೆ ಭಟ್ಟ  , ನಾರಳತ್ತಾಯ ಮೊದಲಾದ ಭೂತ ಗಳು ಬ್ರಾಹ್ಮಣ ಮೂಲದ ದೈವತಗಳು . ರಾಮ ಶೆಟ್ಟಿ ಎಂಬ ವೀರ ಶೈವ  ಲಿಂಗಾಯತ ವ್ಯಕ್ತಿ ನೆತ್ತರು ಮುಗಳಿ ಎಂಬ ಭೂತವಾಗಿದ್ದಾನೆ .ನೈದಾಲ ಪಾಂಡಿ ಕೂಡ ಮೂಲತಃ ಲಿಂಗಾಯತನಾಗಿ ಪರಿವರ್ತಿತನಾದ ರಾಜ ಕುಮಾರ . . ಅಚ್ಚುಬಂಗೇತಿ, ಅಕ್ಕಚ್ಚು ಭೂತ, ಬೊಟ್ಟಿ ಭೂತಗಳು ಮೂಲತಃ ಜೈನ ಧರ್ಮದವರಾಗಿದ್ದಾರೆ. ಕ್ರಿಶ್ಚಿಯನ್ ತೆಯ್ಯಂಗೆ ಆರಾಧನೆ ಇರುವ ಬಗ್ಗೆ ಕೇಳು ಮಾಸ್ತರ್ ಅಗಲ್ಪಾಡಿ ಅವರು ತಿಳಿಸಿದ್ದಾರೆ . ಅಂತೆಯೇ ತುಳುನಾಡಿನ ಅನೇಕ ಮುಸ್ಲಿಂ ಮೂಲದ ವ್ಯಕ್ತಿಗಳು ದೈವತ್ವಕ್ಕೇರಿ ಆರಾಧಿಸಲ್ಪಡುತ್ತಿದ್ದಾರೆ. ಬಬ್ಬರ್ಯ, ಆಲಿ ಭೂತ ,ಬ್ಯಾರ್ದಿ  ಭೂತ, ಬ್ಯಾರಿ ಭೂತ,ಮಾಪುಲೇ ಮಾಪುಳ್ತಿ ಭೂತೊಳು ,ಮಾಪುಳ್ತಿ  ಧೂಮಾವತಿ  ಮೊದಲಾದವರು ಮುಸ್ಲಿಂ ಮೂಲದ ದೈವತಗಳು. ಇದೇ ರೀತಿ ಕೆಲವು ಹೊರದೇಶದ ಜನರೂ ಇಲ್ಲಿ ಬಂದು ದುರಂತವನ್ನಪ್ಪಿ ದೈವತ್ವಕ್ಕೇರಿ ಆರಾಧಿಸಲ್ಪಡುತ್ತಿದ್ದಾರೆ. ಅರಬ್ಬಿ ಭೂತ ಮತ್ತು ಚೀನೀ ಭೂತಗಳು ಅನ್ಯದೇಶೀಯ ಮೂಲದ ದೈವಗಳಾಗಿವೆ. . ಹೀಗೆ ನಾನಾ ಕಾರಣಗಳಿಂದ ದೈವತ್ವವನ್ನು ಪಡೆದ ವ್ಯಕ್ತಿಗಳು ಹಿಂದುಗಳೇ ಆಗಬೇಕಿಲ್ಲ. ಜೈನರು, ಮುಸ್ಲೀಮರು, ಕ್ರಿಶ್ಚಿಯನ್ನರು, ಅರಬಿಗಳು, ಚೀನಿ ವ್ಯಕ್ತಿಗಳು ಕೂಡ ದೈವತ್ವವನ್ನು ಪಡೆದಿದ್ದಾರೆ

 ಭೂತಗಳಾದ ನಂತರ ಇವರು ಮೂಲತಃ ಯಾರಾಗಿದ್ದರು ಹೇಳುವ ವಿಚಾರ ಇಲ್ಲಿ ಬರುವುದೇ ಇಲ್ಲ! ಭೂತವಾದ ನಂತರ ಅವರು ನಮ್ಮನ್ನು ಕಾಯುವ ಶಕ್ತಿಗಳು. ಎಲ್ಲ ಭೂತಗಳು ಸಮಾನರು !.ಎಲ್ಲ ಭೂತಗಳಿಗೂ ಒಂದೇ ರೀತಿಯ ಭಕ್ತಿಯ ನೆಲೆಯಲ್ಲಿ ಆರಾಧನೆ ಇದೆ. ಇದು ನಮ್ಮ ತುಳು ಸಂಸ್ಕೃತಿಯ ವೈಶಿಷ್ಟ್ಯ ,

೧ ಅರಬ್ಬಿ ಭೂತ

ತುಳು ನಾಡಿನಲ್ಲಿ ಯಾರಿಗೆ ಹೇಗೆ ಯಾವಾಗ ದೈವತ್ವ ಪ್ರಾಪ್ತಿಯಾಗುತ್ತದೆ ಹೇಳುವುದಕ್ಕೆ ಒಂದು ಸಿದ್ಧ ಸೂತ್ರವಾಗಲಿ ನಿಯಮವಾಗಲಿ ಏನೂ ಇಲ್ಲ .ದುರಂತವನ್ನಪ್ಪಿದ  ಅಸಹಾಯ ಶೂರರು ಮಾತ್ರ ಭೂತಗಳಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ .ಮನುಷ್ಯ ಮೂಲದಿಂದ ಭೂತ ಸ್ಥಿತಿಗೇರಿದವರು ಎಲ್ಲರೂ ಮೂಲತಃ ಸಾತ್ವಿಕರೂ, ಸದ್ಧರ್ಮಿಗಳೂ, ಸಾಧ್ವಿಗಳೂ, ಶೂರರೂ ಎನ್ನುವಂತಿಲ್ಲ. ಅಂಥಹ ಉದಾತ್ತ ಚರಿತರು ವಿರಳವಾಗಿ ಕೆಲವರಿರಬಹುದು. ವಿಶೇಷಗುಣಗಳಿಲ್ಲದ ತೀರಾ ಸಾಮಾನ್ಯರೂ ಬೇರೆಬೇರೆ ಕಾರಣಗಳಿಂದ ದೈವತ್ವವನ್ನು ಪಡೆದಿದ್ದಾರೆ. ಆಕಸ್ಮಿಕ ಮರಣಕ್ಕೆ ಗುರಿಯಾದವರು ದೈವಗಳ ಕಾರಣೀಕಗಳು ಸೇರಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾರೆ.ಪ್ರಧಾನ ಭೂತ ಗಳಾದ ಉಲ್ಲಾಕುಳು ಶಿರಾಡಿ ,ಮಲರಾಯಿ ,ಬಬ್ಬರ್ಯ ,ಪಂಜುರ್ಲಿ ,ಮೊದಲಾದ ಭೂತ ಗಳ  ಅನುಗ್ರಹದಿಂದ ಅನೇಕರು ಸೇರಿಗೆ ದೈವಗಳಾಗಿದ್ದಾರೆ.ಅಂತೆಯೇ  ಈ ಭೂತ ಗಳ ಆಗ್ರಹಕ್ಕೆ ತುತ್ತಾಗಿಯೂ ಅನೇಕರಿಗೆ ದೈವತ್ವ ಲಭಿಸಿದೆ .ಮಲರಾಯಿ ದೈವದ ಕೋಪಕ್ಕೆ ತುತ್ತಾಗಿ ದೈವತ್ವ ಹೊಂದಿದ ಭೂತ ಅರಬ್ಬಿ ಭೂತ .

ಕಾದಂಬರೀ ರಸಜ್ಞಾಂ ಆಹಾರೋಪಿ ನ ರೋಚತೇ (ಬಾಣ ಭಟ್ಟನ ಕಾದಂಬರಿ <ಮದ್ಯ >ಯಾ ರುಚಿಯನ್ನು ಸವಿದವನಿಗೆ ಆಹಾರ ಕೂಡಾ ರುಚಿಸುವುದಿಲ್ಲ ಎಂಬ ಮಾತಿದೆ .ಅಂತೆಯೇ ತುಳು ಜಾನಪದ ಸಾಹಿತ್ಯ ,ಭೂತಾರಾಧನೆಗಳು ಅದರ ಒಳ ಹೊಕ್ಕವನನ್ನು ಸೆಳೆದು ಬಿಡುತ್ತದೆ .ನಾನು ಇಂತಹ ಸೆಳೆತಕ್ಕೆ ಒಳಗಾಗಿದ್ದೇನೆ !ನನ್ನ ವಿದ್ಯಾರ್ಥಿಗಳಿಗೂ ಸಮಯ ಸಿಕ್ಕಾಗೆಲ್ಲ ಹೇಳುತ್ತಾ ಇರುತ್ತೇನೆ .ಇದರಿಂದ ಆಸಕ್ತರಾದ ವಿದ್ಯಾರ್ಥಿಗಳು ನನ್ನಲ್ಲಿರುವ ತುಳು ಜನಪದ ,ಭೂತಾರಾದನೆಗಳ  ಕುರಿತು ಇರುವ ಪುಸ್ತಕಗಳನ್ನು ಕೊಂಡು ಹೋಗಿ ಓದಿ ತಂದು ಕೊಡುತ್ತಿದ್ದರು .ಒಂದು ದಿನ ಅಮೃತ ಸೋಮೆಶ್ವರರು ಅವರ ಕೃತಿಯಲ್ಲಿ ಅರಬ್ ಮತ್ತು ಚೀನಿ ಭೂತಗಳ ಬಗ್ಗೆ ಉಲ್ಲೇಖಿಸಿದ್ದನ್ನು ಓದಿದ ನನ್ನ ವಿದ್ಯಾರ್ಥಿನಿ ಕೃಪಾ ಬಂದು ಅರಬ್ ಭೂತಕ್ಕೆ ಎಲ್ಲಿ ಕೋಲ ಉಂಟು ?ಅರಬ್ ಭೂತ   ಮತ್ತು ಚೀನಿ ಭೂತಗಳ ಕಥೆ  ನಮಗೆ ಹೇಳಿ ಮೇಡಂ ಎಂದು ಕೇಳಿದಳು . ಆ ಪುಸ್ತಕದಲ್ಲಿ ಅರಬ್ ಮತ್ತು ಚೀನಿ ಭೂತ ಗಳನ್ನು  ಉಲ್ಲೇಖಿಸಿದ್ದನ್ನು ನಾನು ಕೂಡ  ಓದಿದ್ದೆ .ಅದರಲ್ಲಿ ಆ ಭೂತಗಳ ಬಗ್ಗೆ ಮಾಹಿತಿ  ಇರಲಿಲ್ಲ .

ನನಗೂ ಆ ಬಗ್ಗೆ ತಿಳಿಯಲು ಕುತೂಹಲ ಇತ್ತು ! ತುಳು ಜಾನಪದ ವಿದ್ವಾಂಸರಾದ ಡಾ . ಅಮೃತ ಸೋಮೆಶ್ವರರು ಬಹಳ ಸಹೃದಯಿಗಳು .ನಾವು ಫೋನ್ ಮಾಡಿ ಕೇಳಿದರೂ ಕೂಡ ಯಾವುದೇ ಬೇಸರವಿಲ್ಲದೆ ನಮಗೆ ಗೊತ್ತಿಲ್ಲದ ವಿಚಾರವನ್ನು ತಿಳಿಸುತ್ತಿದ್ದರು .ನಾನು ಈ ಹಿಂದೆ ಕೂಡಾ ಅವರಿಗೆ ಅನೇಕ ಬಾರಿ ಫೋನ್ ಮಾಡಿದ್ದೆ ಕೂಡಾ .ಆದ್ದರಿಂದ ಅರಬ್ ಮತ್ತು ಚೀನಿ ಭೂತಗಳ  ಮಾಹಿತಿ ಪಡೆವ ಸಲುವಾಗಿ  ಅದೇ ದಿನ ರಾತ್ರಿ ಡಾ . ಅಮೃತ ಸೋಮೆಶ್ವರರಿಗೆ ಫೋನ್ ಮಾಡಿ ಕೇಳಿದೆ . ಮಂಗಳೂರಿನ ಚಿಲಿಮ್ಬಿಯಲ್ಲಿ ಅರಬ್ ಮೂಲದ ಭೂತಕ್ಕೆ ಆರಾಧನೆ ಇರುವ ಬಗ್ಗೆ ಯಾರೋ ಒಬ್ಬರು ಅವರಿಗೆ ತಿಳಿಸಿದ್ದನ್ನು ಅವರು ನನಗೆ ಹೇಳಿದರು .ಅವರು “ಆ ಅರಬ್ ಭೂತಕ್ಕೆ ಆರಾಧನೆ ಚಿಲಿಮ್ಬಿಯಲ್ಲಿ ಎಲ್ಲಿ ನಡೆಯುತ್ತಿದೆ ಎಂದು ತಿಳಿಯಲು ಸಾಕಷ್ಟು ಪ್ರಯತ್ನಿಸಿದ್ದರೂ ಆ ಬಗ್ಗೆ ಗೊತ್ತಾಗಲಿಲ್ಲ” ಎಂದು ಹೇಳಿದರು .ಚೀನಿ ಭೂತಗಳ ಬಗ್ಗೆ ಮಾಹಿತಿಗೆ ಕನರಾಡಿ ವಾದಿ ರಾಜ ಭಟ್ಟರನ್ನು ಸಂಪರ್ಕಿಸಲು ತಿಳಿಸಿದರು .ಅಲ್ಲಿಂದ ಅರಬ್ ಭೂತಕ್ಕೆ ಆರಾಧನೆ ಇರುವ ಚಿಲಿಂಬಿ ಎಲ್ಲಿದೆ ? ಆ ಭೂತ ಸ್ಥಾನ ಯಾವುದೆಂದು ಮಂಗಳೂರಿನಲ್ಲಿರುವ ಎಲ್ಲ ಸ್ನೇಹಿತರಲ್ಲಿ ಕೇಳುತ್ತಾ ಇದ್ದೆ .ಚಿಲಿಂಬಿ ಊರ್ವ ಸ್ಟೋರ್ ಹತ್ತಿರ ಇದೆ ಅಂತ ಗೊತ್ತಾಯಿತು .ಆದರೆ ಅರಬ್ ಭೂತದ ನೆಲೆ ಗೊತ್ತಾಗಲಿಲ್ಲ .copy rights reserved(c)ಡಾ.ಲಕ್ಷ್ಮೀ ಜಿ ಪ್ರಸಾದ

೨೦೧೦ ನೆ ಇಸವಿ ಏಪ್ರಿಲ್ ತಿಂಗಳಿನಲ್ಲಿ ನನಗೆ ಮಲೇರಿಯ ಜ್ವರ ಬಂದು ಮಂಗಳೂರಿನ ಮಂಗಳ ಹಾಸ್ಪಿಟಲ್ ಗೆ ಅಡ್ಮಿಟ್ ಆಗಿದ್ದೆ .ನಾನಿದ್ದ ಪಕ್ಕದ ಕೋಣೆಯಲ್ಲಿ ಅಡ್ಮಿಟ್ ಆಗಿದ್ದ ರೋಗಿಯನ್ನು ನೋಡಿಕೊಳ್ಳಲು ಅಜ್ಜಿ ಒಬ್ಬರು  ಇದ್ದರು .ಆಗಾಗ ನನ್ನಲ್ಲಿಗು ಬಂದು ವಿಚಾರಿಸಿ ಹೋಗುತ್ತಾ ಇದ್ದರು .ಹೀಗೆ ಮಾತನಾಡುವಾಗ ಅವರ ಮನೆ ಚಿಲಿಮ್ಬಿಯಲ್ಲಿದೆ ಎಂದು ಹೇಳಿದರು . ಆಗ ನಾನು ಕೂಡಲೇ ಅವರಲ್ಲಿ ಅರಬ್ ಭೂತಕ್ಕೆ ಅಲ್ಲಿ ಕೋಲ ಆಗುತ್ತದೆ ಎಂದು ಕೇಳಿದೆ .ಭೂತ ಕಟ್ಟುವ ಕಲಾವಿದರ ಕುಟುಂಬದ ಆ ಮಹಿಳೆ ತಮ್ಮ ಮಕ್ಕಳಲ್ಲಿ ವಿಚಾರಿಸಿ ಚಿಲಿಮ್ಬಿಯ ಮಲರಾಯಿ ಧೂಮಾವತಿ ಭೂತ ಸ್ಥಾನದಲ್ಲಿ ಅರಬ್  ಭೂತಕ್ಕೆ ಆರಾಧನೆ ಇರುವುದನ್ನು ತಿಳಿಸಿ ಅಲ್ಲಿಗೆ ಹೋಗುವ ದಾರಿಯನ್ನು ತಿಳಿಸಿದರು

ನಾನು ಆಸ್ಪತ್ರೆಯಿಂದ ಹೊರ ಬಂದ ನಂತರ  ಆ ಮಲರಾಯಿ ಧೂಮಾವತಿ ಸ್ಥಾನಕ್ಕೆ ಹೋಗಿ ಅರಬ್ ಭೂತದ ಬಗ್ಗೆ ಮಾಹಿತಿ ಸಂಗ್ರಹಿಸಿದೆ

 ಮಂಗಳೂರಿನ ಉರ್ವ ಚಿಲಿಂಬಿಯ ಮಲರಾಯಿ ಧೂಮವತಿ ದೈವಸ್ಥಾನದಲ್ಲಿ ಪ್ರಧಾನ ದೈವ ಮಲರಾಯಿಯ ಸೇರಿಗೆಯ ದೈವವಾಗಿ ‘ಅರಬ್ಬಿ ಭೂತ’ ಆರಾಧನೆ ಪಡೆಯುತ್ತಿದೆ . ಹೆಸರೇ ಸೂಚಿಸುವಂತೆ ಈ ದೈವತದ ಮೂಲ ಒಬ್ಬ ಅರಬ್ ವ್ಯಕ್ತಿ. ಈತನೊಬ್ಬ ಖರ್ಜೂರ ವ್ಯಾಪಾರಿ. ಒಂದು ದಿನ ಖರ್ಜೂರ ಮಾರಾಟ ಮಾಡಿಕೊಂಡು ಚಿಲಿಂಬಿಯ ಬಳಿಗೆ ಬರುತ್ತಾನೆ. ಅಲ್ಲಿ ಒಂದು ನೀರಿನ ಕಟ್ಟ ಇರುತ್ತದೆ. ಅಳಕೆ ಮೇಲ್ಮನೆಗೆ ಸೇರಿದ ಅವಿವಾಹಿತ ಹೆಣ್ಣು ಮಗಳು ತಿಂಗಳ ಸೂತಕ ಸ್ನಾನಕ್ಕೆ ಬಂದವಳು ಕಟ್ಟದ ನೀರಿಗಿಳಿದು ಸ್ನಾನ ಮಾಡುತ್ತಿರುತ್ತಾಳೆ. ಅವಳನ್ನು ನೋಡಿದ ಆ ಅರಬ್ ದೇಶದ ಖರ್ಜೂರ ವ್ಯಾಪಾರಿಯು ಅವಳಲ್ಲಿ ವ್ಯಾಮೋಹಗೊಂಡು ಅವಳ ಮೇಲೆ ಅತ್ಯಾಚಾರಕ್ಕೆ ಮಾಡಲು ಹೋಗುತ್ತಾನೆ. ಆಗ ಅವಳು ತನ್ನ ಕುಲದೈವ ಮಲರಾಯಿ ಧೂಮಾವತಿಯಲ್ಲಿ ಮಾನರಕ್ಷಣೆ ಮಾಡುವಂತೆ ಕೇಳಿಕೊಳ್ಳುತ್ತಾಳೆ. ಆಗ ಮಲಾರಾಯಿ ಧೂಮಾವತಿ ದೈವ ಅವಳನ್ನು ಮಾಯ ಮಾಡಿ ಅವಳ ಮಾನರಕ್ಷಣೆ ಮಾಡಿದ್ದಲ್ಲದೆ ತನ್ನ ಸೇರಿಗೆ ದೈವವಾಗಿಸಿ ಆರಾಧನೆ ಹೊಂದುವಂತೆ ಮಾಡುತ್ತದೆ.ಅವಳು ಬ್ರಾಂದಿ (ಬ್ರಾಹ್ಮಣತಿ)ಭೂತವಾಗಿ ಅಲ್ಲಿ ಆರಾಧನೆ ಪಡೆಯುತ್ತಾಳೆ .ಆ ಆರಬ್ ವ್ಯಾಪಾರಿಯನ್ನು ಶಿಕ್ಷಿಸುವ ಸಲುವಾಗಿ ಆತನನ್ನು ಮಾಯ ಮಾಡುತ್ತದೆ ಮಲರಾಯಿ ದೈವ . ದೈವದ ಆಗ್ರಹಕ್ಕೆ ತುತ್ತಾಗಿ ಮಾಯವಾದರೂ ದೈವದ ಸೇರಿಗೆಗೆ ಸೇರಿ ದೈವತ್ತ್ವ ಪಡೆಯುವುದು ತುಳುನಾಡಿನಲ್ಲಿ ಸಾಮಾನ್ಯವಾದ ವಿಚಾರವಾಗಿದೆ. ಅಂತೆಯೇ ಈ ಅರಬ್ ವ್ಯಾಪಾರಿ ಕೂಡ ದೈವತ್ತ್ವವನ್ನು ಪಡೆದು ಅರಬ್ಬಿ ಭೂತ ಎಂಬ ಹೆಸರಿನಲ್ಲಿ ಆರಾಧನೆ ಪಡೆಯುತ್ತಾನೆ. ಮಲರಾಯಿ ಧೂಮಾವತಿ ದೈವಸ್ಥಾನದಲ್ಲಿ ಅರಬ್ಬಿ ಭೂತದ ಕಲ್ಲು ಇದೆ. ಆ ಬ್ರಾಹ್ಮಣ ಹುಡುಗಿ ಸ್ನಾನ ಮಾಡಿದ ನೀರಿನ ಕಟ್ಟ ಈಗ ಕೂಡ ಅಲ್ಲ್ಲಿದೆ ಅವಳ ನೇವಳಡ ಗುರುತು ಎಂಬ ಒಂದು ಗೆರೆ ಅಲ್ಲಿನ ಪಾದೆಕಲ್ಲಿನ ಮೇಲೆ ಇದೆ .ಆ ಅರಬ್ ವ್ಯಾಪಾರಿಯ ಪಾದದ ಗುರುತು ಎಂದು ನಮ್ದಲಾಗುವ ಸಣ್ಣ ಸಣ್ಣ ಗುರುತುಗಳನ್ನ್ನು ಅಲ್ಲಿನ ಸ್ಥಳಿಯರು ತೋರುತ್ತಾರೆ .ವಾಸ್ತವಿಕ ನೆಲೆಯಿಂದ ಆಲೋಚಿಸುವುದಾದರೆ ಆ ಅರಬ್ ವ್ಯಾಪಾರಿಯಿಂದ ತಪ್ಪಿಸಿ ಕೊಳ್ಳುವುದಕ್ಕಾಗಿ ನೀರಿನಲ್ಲಿ ಮುಂದೆ ಮುಂದೆ ಸಾಗಿದ ಆ ಕನ್ಯೆ ದುರಂತವನ್ನಪ್ಪಿರಬಹುದು .ಅವಳನ್ನು ಹಿಂಬಾಲಿಸಿದ ಆ ಅರಬ್ ಖರ್ಜೂರ ವ್ಯಾಪಾರಿ ಕೂಡ ದುರಂತವನ್ನಪ್ಪ್ಪಿರಬಹುದು ಅಥವಾ ಆ ಹುಡುಗಿಯ ದುರಂತಕ್ಕೆ ಕಾರಣನಾದ ಅರಬ್ ವ್ಯಾಪಾರಿಯನ್ನು ಊರ ಜನರು ಸೇರಿ ಶಿಕ್ಷಿಸಿರಬಹುದು  .ಆಗ ಆತ ದುರಂತವನ್ನಪ್ಪಿರಬಹುದು .ಕಾಲಾಂತರದಲ್ಲಿ ಅವರಿಬ್ಬರೂ ದೈವತ್ವವನ್ನು ಪಡೆದು ಆರಾಧಿಸಲ್ಪಟ್ಟಿರಬೇಕು

ಅರಬ್ಬಿ ಭೂತಕ್ಕೆ ಒಂದು ಕಲ್ಲು ಹಾಕಿ ಆರಾಧಿಸುತ್ತಾರೆ .ಬ್ರಾಹ್ಮಣತಿ (ಬ್ರಾಂದಿ )ಭೂತಕ್ಕೆ ಒಂದು ಕಟ್ಟೆ  ಇದೆ.ಆ ಕಟ್ಟೆ ಯ ಹತ್ತಿರ  ಈ ಭೂತಕ್ಕೆ ಕೋಲ ನೀಡಿ ಆರಾಧಿಸುತ್ತಾರೆ .

ಮಲರಾಯಿ ಧೂಮಾವತಿ ದೈವದ ನೇಮಕ್ಕೆ ಮೊದಲು ಬ್ರಾಹ್ಮಣ ಕನ್ಯೆ(ಬ್ರಾಂದಿ ಭೂತ) ಮತ್ತು ಅರಬ್ಬಿ ಭೂತಕ್ಕೆ ನೇಮ ನೀಡುತ್ತಾರೆ. ಅರಬ್ಬಿ ಭೂತವನ್ನು ಬಂಧಿಸಿ ಶಿಕ್ಷಿಸಿ ಮಾಯ ಮಾಡಿದ್ದರ ಸೂಚಕವಾಗಿ ಆತನಿಗೊಂದು ಬೆಳ್ಳಿಯ ಸರಿಗೆಯ

ಬಂಧನ ಇರುತ್ತದೆ. ಅರಬ್ಬಿ ಭೂತಕ್ಕೆ ಒಂದು ಅರಬರ ಟೊಪ್ಪಿಗೆಯನ್ನು ಹೋಲುವ ಟೊಪ್ಪಿಗೆಯ(ಮುಂಡಾಸು ) ಅಲಂಕಾರ ಇರುತ್ತದೆ.


೨  ಚೀನೀ ಭೂತಗಳು :

ಚೀನಿ ಭೂತಗಳ ಬಗ್ಗೆ ಪ್ರೊ |ಕನರಾಡಿ ವಾದಿರಾಜ  ಭಟ್ಟರು ಮಾಹಿತಿ ನೀಡಿದ್ದಾರೆ  ಉಡುಪಿ ಜಿಲ್ಲೆಯ ಬಸ್ರೂರಿನಲ್ಲಿರುವ ಗರೊಡಿಯಲ್ಲಿ ಐದು ಚೀನೀ ಭೂತಗಳಿಗೆ ಆರಾಧನೆ ಇದೆ. ಇವರ ಮರದ ಉರುಗಳು ಕೂಡ ಇಲ್ಲಿ ಇವೆ. ಆಷಾಡ ತಿಂಗಳಿನಲ್ಲಿ ಒಂದು ದಿನ ಒಂದು ಚೀನೀ ಹಡಗು ಬರುತ್ತದೆ. ಅದರಲ್ಲಿದ್ದ ಐದು ಜನ ಚೀನೀ ವ್ಯಕ್ತಿಗಳು ಗರೊಡಿಯಲ್ಲಿ ಆರಾಧಿಸಲ್ಪಡುವ ಪಂಜುರ್ಲಿ ದೈವವನ್ನು ಅಪಹಾಸ್ಯ ಮಾಡಿ ನಗಾಡುತ್ತಾರೆ. ಆಗ ಕೋಪಗೊಂಡ ದೈವ ಪಂಜುರ್ಲಿ ಅವರನ್ನು ಮಾಯಮಾಡಿ ತನ್ನ ಸೇರಿಗೆಗೆ ಸಂದಾಯ ಮಾಡುತ್ತದೆ ಎಂಬ ಐತಿಹ್ಯ ಇಲ್ಲಿ ಪ್ರಚಲಿತ ಇದೆ. ಚೀನೀ ವ್ಯಕ್ತಿಗಳ ಹಾಗೂ ಸ್ಥಳೀಯರ ನಡುವೆ ಸಂಘರ್ಷ ನಡೆದು ಚೀನೀ ವ್ಯಕ್ತಿಗಳು ದುರಂತಕ್ಕೊಳಗಾಗಿ ಕಾಲಾಂತರದಲ್ಲಿ ದೈವತ್ವಕ್ಕೇರಿ ಆರಾಧನೆಯನ್ನು ಹೊಂದಿರುವ ಸಾಧ್ಯತೆ ಇದೆ. ಈ ಬಗ್ಗೆ ಅಧ್ಯಯನವಾಗ ಬೇಕಾಗಿದೆ.




೩ ಮುಸ್ಲಿಂ  ಭೂತಗಳು

ಬ್ಯಾರಿ ಭೂತ :

ತುಳುನಾಡಿನಲ್ಲಿ‌  ಅನೇಕ ಮುಸ್ಲಿ ಭೂತ ಗಳಿಗೆ  ಆರಾಧನೆ ಇದೆ .ತುಳುನಾಡಿನ ಅತ್ಯಂತ ಪ್ರಸಿದ್ಧ ಕಾರಣಿಕದ ದೈವ ಬಬ್ಬರ್ಯ ಮುಸ್ಲಿಂ ಮೂಲದ ದೈವ .ಬ್ಯಾರ್ದಿ  ಭೂತ ,ಬ್ಯಾರಿ ಭೂತ ,ಮಾಪುಳ್ತಿ ಧೂಮಾವತಿ ,ಮಾಪುಲೇ ಮಾಪುಳ್ತಿ ಭೂತೊಳು, ಅಲಿ ಭೂತ ,ಮುಸ್ಲಿಮರ ಮಕ್ಕಳು ಮೊದಲಾದ ಅನೇಕ ಮುಸ್ಲಿಂ ಭೂತ ಗಳಿಗೆ ತುಳುನಾಡಿನಲ್ಲಿ ಆರಾಧನೆ ಇದೆ

 ಪುತ್ತೂರು ಉಪ್ಪಿನಂಗಡಿ ಬಳಿಯ ಆಲಂಗಾರಿನಲ್ಲಿ ಬ್ಯಾರಿ ಭೂತಕ್ಕೆ ಆರಾಧನೆ ಇರುವ ಬಗ್ಗೆ ಭೂತ ಅಕ್ತ್ತುವ ಕಲಾವಿದರೊಬ್ಬರು ತಿಳಿಸಿದ್ದಾರೆ .ಅಲ್ಲಿ ಉಲ್ಲಾಕುಳು ಪ್ರಧಾನ ದೈವ .ಉಲ್ಲಾಕುಳು ಎದ್ದು ನಿಲ್ಲುವಾಗ ಯಾರು ಎದುರು ಬರಬಾರದೆಂಬ ನಿಯಮ ಇದೆ .ಒಂದು ವರ್ಷ ಉಲ್ಲಾಕುಳು ನೇಮದ ಸಂದರ್ಭದಲ್ಲ್ಲಿ ಮೀನು ಮಾರಾಟ ಮಾಡುವ ಮುಸ್ಲಿಂ ವ್ಯಾಪಾರಿ ಭೂತ ನೇಮ ಆಗುತ್ತಿದ್ದುದು ಗೊತ್ತಾಗದೆ ಅಲ್ಲಿಗೆ ಬರುತ್ತಾರೆ ಆಗ ದೈವ ಆತನನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸಂದಾಯಮಾದಿಕೊಳ್ಳುತ್ತದೆ .ಮುಂದೆ ಆತ ಬ್ಯಾರಿ ಭೂತವಾಗಿ ಆರಾಧನೆ ಪಡೆಯುತ್ತಾನೆ

 ತುಳುನಾಡಿನಲ್ಲಿಬ್ಯಾರಿ ಭೂತ : ಪುತ್ತೂರು ಉಪ್ಪಿನಂಗಡಿ ಬಳಿಯ ಆಲಂಗಾರಿನಲ್ಲಿ ಬ್ಯಾರಿ ಭೂತಕ್ಕೆ ಆರಾಧನೆ ಇರುವ ಬಗ್ಗೆ ಭೂತ ಅಕ್ತ್ತುವ ಕಲಾವಿದರೊಬ್ಬರು ತಿಳಿಸಿದ್ದಾರೆ .ಅಲ್ಲಿ ಉಲ್ಲಾಕುಳು ಪ್ರಧಾನ ದೈವ .ಉಲ್ಲಾಕುಳು ಎದ್ದು ನಿಲ್ಲುವಾಗ ಯಾರು ಎದುರು ಬರಬಾರದೆಂಬ ನಿಯಮ ಇದೆ .ಒಂದು ವರ್ಷ ಉಲ್ಲಾಕುಳು ನೇಮದ ಸಂದರ್ಭದಲ್ಲ್ಲಿ ಮೀನು ಮಾರಾಟ ಮಾಡುವ ಮುಸ್ಲಿಂ ವ್ಯಾಪಾರಿ ಭೂತ ನೇಮ ಆಗುತ್ತಿದ್ದುದು ಗೊತ್ತಾಗದೆ ಅಲ್ಲಿಗೆ ಬರುತ್ತಾರೆ ಆಗ ದೈವ ಆತನನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸಂದಾಯಮಾದಿಕೊಳ್ಳುತ್ತದೆ .ಮುಂದೆ ಆತ ಬ್ಯಾರಿ ಭೂತವಾಗಿ ಆರಾಧನೆ ಪಡೆಯುತ್ತಾನೆ

 
ಬ್ಯಾರಿ ಭೂತ :

ತುಳುನಾಡಿನಲ್ಲಿ‌  ಅನೇಕ ಮುಸ್ಲಿ ಭೂತ ಗಳಿಗೆ  ಆರಾಧನೆ ಇದೆ .ತುಳುನಾಡಿನ ಅತ್ಯಂತ ಪ್ರಸಿದ್ಧ ಕಾರಣಿಕದ ದೈವ ಬಬ್ಬರ್ಯ ಮುಸ್ಲಿಂ ಮೂಲದ ದೈವ .ಬ್ಯಾರ್ದಿ  ಭೂತ ,ಬ್ಯಾರಿ ಭೂತ ,ಮಾಪುಳ್ತಿ ಧೂಮಾವತಿ ,ಮಾಪುಲೇ ಮಾಪುಳ್ತಿ ಭೂತೊಳು, ಅಲಿ ಭೂತ ,ಮುಸ್ಲಿಮರ ಮಕ್ಕಳು ಮೊದಲಾದ ಅನೇಕ ಮುಸ್ಲಿಂ ಭೂತ ಗಳಿಗೆ ತುಳುನಾಡಿನಲ್ಲಿ ಆರಾಧನೆ ಇದೆ

 ಪುತ್ತೂರು ಉಪ್ಪಿನಂಗಡಿ ಬಳಿಯ ಆಲಂಗಾರಿನಲ್ಲಿ ಬ್ಯಾರಿ ಭೂತಕ್ಕೆ ಆರಾಧನೆ ಇರುವ ಬಗ್ಗೆ ಭೂತ ಅಕ್ತ್ತುವ ಕಲಾವಿದರೊಬ್ಬರು ತಿಳಿಸಿದ್ದಾರೆ .ಅಲ್ಲಿ ಉಲ್ಲಾಕುಳು ಪ್ರಧಾನ ದೈವ .ಉಲ್ಲಾಕುಳು ಎದ್ದು ನಿಲ್ಲುವಾಗ ಯಾರು ಎದುರು ಬರಬಾರದೆಂಬ ನಿಯಮ ಇದೆ .ಒಂದು ವರ್ಷ ಉಲ್ಲಾಕುಳು ನೇಮದ ಸಂದರ್ಭದಲ್ಲ್ಲಿ ಮೀನು ಮಾರಾಟ ಮಾಡುವ ಮುಸ್ಲಿಂ ವ್ಯಾಪಾರಿ ಭೂತ ನೇಮ ಆಗುತ್ತಿದ್ದುದು ಗೊತ್ತಾಗದೆ ಅಲ್ಲಿಗೆ ಬರುತ್ತಾರೆ ಆಗ ದೈವ ಆತನನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸಂದಾಯಮಾದಿಕೊಳ್ಳುತ್ತದೆ .ಮುಂದೆ ಆತ ಬ್ಯಾರಿ ಭೂತವಾಗಿ ಆರಾಧನೆ ಪಡೆಯುತ್ತಾನೆ


 ಬ್ಯಾರ್ದಿ ಭೂತ : ಕಾಸರಗೋಡು ಪರಿಸರದ ಮುಸ್ಲಿಂ ಮಹಿಳೆಯರನ್ನು ಬ್ಯಾರ್ದಿ ಎಂದು ಹೇಳುತ್ತಾರೆ. ಮುಸ್ಲಿಂ ಮಹಿಳೆಯೊಬ್ಬಳು ದೈವತ್ವಕ್ಕೇರಿ  ದೈವವೇ ಬ್ಯಾರ್ದಿ ಭೂತ. ಬಬ್ಬರ್ಯ ಭೂತದ ನೇಮವನ್ನು ಸ್ತ್ರೀಯರು ನೋಡಬಾರದೆಂಬ ನಿಷೇಧ ಇತ್ತು. ಓರ್ವ ಮುಸ್ಲಿಂ ಮಹಿಳೆ ಇದನ್ನು ಕದ್ದು ನೋಡುತ್ತಾಳೆ. ಆಗ ಬಬ್ಬರ್ಯ ಕೋಪಿಸಿಕೊಂಡು ಮಾಯ ಮಾಡುತ್ತಾನೆ. ಮಾಯವಾದ ಮುಸ್ಲಿಂ ಮಹಿಳೆ ಬ್ಯಾರ್ದಿ ಭೂತ ಎಂಬ ಹೆಸರನ್ನು ಪಡೆದು ಬೊಬ್ಬರ್ಯನ ಸೇರಿಗೆಗೆ ಸಂದು ಹೋಗಿ ಆರಾಧಿಸಲ್ಪಡುತ್ತಾಳೆ. ಬ್ಯಾರ್ದಿ ಭೂತವು ಬಬ್ಬರ್ಯನ ಆದೇಶದಂತೆ ಪಾಟು ಹೇಳುತ್ತಾಳೆ. ಇಲ್ಲಿ ಕೂಡ ಹಾಸ್ಯದ ಅಭಿವ್ಯಕ್ತಿ ಇದೆ. ಬ್ಯಾರ್ದಿ ಭೂತಕ್ಕೆ ವಿಶೇಷವಾದ ವೇಷ ಭೂಷಣಗಳೇನೂ ಇಲ್ಲ. ಪಂಚೆ ಉಟ್ಟಿರುವ ಓರ್ವ ವ್ಯಕ್ತಿ ತಲೆಗೊಂದು ಶಾಲು ಹೊದೆದುಕೊಂಡು ಬ್ಯಾರ್ದಿ ಭೂತವಾಗಿ ಅಭಿನಯಿಸುತ್ತಾನೆ. ಬ್ಯಾರ್ದಿ ಭೂತವು ಮಲೆಯಾಳದಲ್ಲಿ ಸಂಭಾಷಣೆ ನಡೆಸುತ್ತದೆ.ಕಾಸರಗೋಡಿಗೆ ಸೇರಿದ ಇಚಲಂಗೋದು ,ನಡಿಬೈಲು ಮೊದಲಾದೆಡೆಗಳಲ್ಲಿ ಈ ಭೂತಕ್ಕೆ ಆರಾಧನೆ ಇದೆ .ನಡಿ  ಬೈಲಿನಲ್ಲಿ ಒಂಜಿ ಕಮ್ಮಿ ನಲ್ಪ ಭೂತಗಳ ನೇಮ ಎಂಬ ಸಮೂಹ ಭೂತಾರಾಧನೆಯಲ್ಲಿ ಬ್ಯಾರ್ದಿ ಭೂತಕ್ಕೆ ಆರಾಧನೆ ಇರುವುದು ಗೊತ್ತಾದರೂ ಈ ಭೂತದ ಕುರಿತು ಮಾಹಿತಿ ದೊರೆತಿರಲಿಲ್ಲ .ಮುಂದೆ ಇಚಲನ್ಗೊಡಿನಲ್ಲಿ ಈ ಬಗ್ಗೆ ತುಸು  ಮಾಹಿತಿ ದೊರೆಯಿತು




೨ . ಆಲಿಚಾಮುಂಡಿ : ಕುಂಬಳೆ ಪರಿಸರದ ಅರಿಕ್ಕಾಡಿಯಲ್ಲಿ ಆರಾಧಿಸಲ್ಪಡುವ ಆಲಿಚಾಮುಂಡಿ ಬಹಳ ಪ್ರಸಿದ್ಧವಾದ ದೈವ. ಮುಸ್ಲಿಂ ಮೂಲವನ್ನು ಹೊಂದಿರುವ ದೈವತವಿದು. ಇಬ್ಬರು ಮಹಿಳೆಯರಿಗೆ ಆಲಿ ಎಂಬಾತ ಕಿರುಕುಳ ನೀಡಿದಾಗ ಮುನಿದ ದೈವ ಚಾಮುಂಡಿಯು ಆತನನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸೇರಿಸಿಕೊಳ್ಳುತ್ತದೆ. ಆತನೇ ಮುಂದೆ ಆಲಿಚಾಮುಂಡಿ ಎಂಬ ಹೆಸರಿನಿಂದ ದೈವತ್ವವನ್ನು ಪಡೆದು ಆರಾಧಿಸಲ್ಪಡುತ್ತಾನೆ.ಕುಂಬಳೆ ಸಮೀಪದ ಒಂದು ಗುಡ್ಡದಲ್ಲಿ ಪಾದೆ ಸ್ಥಾನ ಎಂಬ ಕ್ಷೆತ್ರ ಇದೆ.  ಇದು  ಆಲಿ ಭೂತದ  ಮೂಲ ಸ್ಥಾನ .ಇಲ್ಲಿನ ಪ್ರಧಾನ ದೇವತೆ ಪಾಡಾಂಗರೆ  ಪೋದಿ(ಪಾಟಾರ್ ಕುಳಂಗದ ಭಗವತಿ ).ಆದರೆ ಇದು ಆಲಿ ಚಾಮುಂಡಿ ಭುತದಿಂದಾಗಿ ಹೆಚ್ಚು ಪ್ರಸಿದ್ಧಿ ಪಡೆದಿದೆ.




 copy rights reserved(c)ಡಾ.ಲಕ್ಷ್ಮೀ ಜಿ ಪ್ರಸಾದ




 ಆಲಿ ಮೂಲತಃ ಮುಸ್ಲಿಂ ಮಂತ್ರವಾದಿ .ಚೆಲುವನೂ ಸೊಗಸುಗಾರನೂ,ಹೆಣ್ಣಿನ ಚಪಲ ಉಳ್ಳವನೂ  ಆದ ಆಲಿಬ್ಯಾರಿ  ಮಂತ್ರವಾದಿಯಾಗಿದ್ದನು.ತನ್ನ ಮಂತ್ರ ಶಕ್ತಿಯಿಂದ ಜನರಿಗೆ ತೊಂದರೆ ಕೊಡುತ್ತಿದ್ದನು . ತನ್ನ್ನ ಮಂತ್ರ ಶಕ್ತಿಯಿಂದ ಹೆಣ್ಣು ಮಕ್ಕಳನ್ನು ತನ್ನೆಡೆಗೆ ಸೆಳೆದು ಕೊಳ್ಳುತ್ತಿದ್ದನು .ಹೆಣ್ಣು ಮರುಳನಾದ ಆತನನ್ನು ಪ್ರತಿಭಟಿಸಲು ಜನರಿಗೆ ಸಾಧ್ಯವಾಗುತ್ತಿರಲಿಲ್ಲ .ತನ್ನ ಮಂತ್ರ ಶಕ್ತಿಯಿಂದಾಗಿ ಆತ ಅಷ್ಟು ಬಲವಂತನಾಗಿದ್ದನು. ಅದಕ್ಕೆ ಅವನ ಮಂತ್ರ ಶಕ್ತಿಯೇ ಕಾರಣವಾಗಿತ್ತು .ಅವನು ಮಂತ್ರ ಶಕ್ತಿಯಿರುವ ಒಂದು ತಾಯಿತವನ್ನು ಕೊರಳಿಗೆ ಕಟ್ಟಿಕೊಂಡಿದ್ದನು .ಅದು ಅವನ ಮೈ ಮೇಲೆ ಇರುವ ತನಕ ಅವನನ್ನು ಸೋಲಿಸಲು ಯಾರಿಂದಲೂ ಅಸಾಧ್ಯವಾಗಿತ್ತು .ಆದ್ದರಿಂದ ಜನರು ಮಂತ್ರ ದೇವತೆಗೆ ಶರಣಾಗಿ ಆಲಿ ಬ್ಯಾರಿಯಿಂದ ನಮ್ಮನ್ನು ಕಾಪಾಡುವಂತೆ ಪ್ರಾರ್ಥಿಸಿದರು .ಆಗ ಮಂತ್ರ ದೇವತೆ ಒಂದು ಸುಂದರ ಹೆಣ್ಣಾಗಿ ಆವಿರ್ಭವಿಸಿ ,ತನ್ನ ಒಡನಾಡಿ ಹೆಣ್ಣು ಮಕ್ಕಳೊಂದಿಗೆ ಒಂದು ಕೆರೆಯಲ್ಲಿ ಜಲ ಕ್ರೀಡೆಯಾಡುತ್ತದೆ. ಆ ಹೆಣ್ಣಿನ ರೂಪು ಬೆಡಗು ಬಿನ್ನಾಣ ನೋಡಿ ಮರುಳಾದ ಆಲಿ ಬ್ಯಾರಿ ಅವಳಲ್ಲಿ ಮೋಹಗೊಂಡು ಕೆರೆಯ ಬಳಿಗೆ ಬರುತ್ತಾನೆ . ಆಗ ಆ ಹೆಣ್ಣಿನ ಮಾಯಾ ರೂಪು ಅವನಲ್ಲಿ ನೀನು ಬಟ್ಟೆಯನ್ನು ಕಳಚಿ ಕೆರೆಗೆ ಬರಬೇಕು ಎಂದು ಹೇಳುತ್ತದೆ .ಅಂತೆಯೇ ಅವನು ತನ್ನ ಬಟ್ಟೆಯನ್ನು ಬಿಚ್ಚಿ ಕೆರೆಗೆ ಇಳಿಯುತ್ತಾನೆ .ಆಗ ಆ ಹೆಣ್ಣು ರೂಪದ ಮಂತ್ರ ದೇವತೆ ಅದು ನಿನ್ನ ಕೊರಳಲ್ಲಿ ಇರುವುದು ಏನು ?ಅದನ್ನು ಅಲ್ಲಿಟ್ಟು ಬಾ “ಎಂದು ಹೇಳಿ ಅವನ ಮಂತ್ರ ಶಕ್ತಿಯಿರುವ ತಾಯಿತವನ್ನು ತೆಗೆಯುವಂತೆ ಹೇಳುತ್ತದೆ . ಹೆಣ್ಣಿ ಮೋಹಕ್ಕೆ ಒಳಗಾದ ಆತ ಹಿಂದೆ ಮುಂದೆ ವಿವೇಚಿಸದೆ ತನ್ನ ಮಂತ್ರ ಶಕ್ತಿಯ ತಾಯಿತವನ್ನು ತೆಗೆದಿಟ್ಟು ಕೆರೆಗೆ ಇಳಿಯುತ್ತಾನೆ .ತಾಯಿತದ ಬಲವಿಲ್ಲದ ಆತನನ್ನು ಸ್ತ್ರೀ ರೂಪಿನ ಮಂತ್ರ ದೇವತೆ ಸಂಹರಿಸುತ್ತದೆ ಎಂಬ ಐತಿಹ್ಯವು ಪ್ರಚಲಿತವಿದೆ . ಆತನನ್ನು ಮಂತ್ರ ದೇವತೆ ತನ್ನ ಸೇರಿಗೆ ದೈವವನ್ನಾಗಿ ಮಾಡುತ್ತದೆ .ಆತ ಮುಂದೆ ಆಲಿ ಭೂತ ,ಆಲಿ ಚಾಮುಂಡಿ ಭೂತವಾಗಿ ದೈವತ್ವ ಪಡೆದು ಆರಾಧಿಸಲ್ಪಡುತ್ತಾನೆ

ವಾಸ್ತವಿಕ ನೆಲೆಯಲ್ಲಿ ಆಲೋಚಿಸುವುದಾದರೆ ಅಕಸ್ಮಾತ್ ಆಗಿ ಕೆರೆಯಲ್ಲಿ ಮುಳಗಿ ದುರಂತವನ್ನಪ್ಪಿರುವ ಆಲಿ ಬ್ಯಾರಿಯ ಜೊತೆಗೆ ದೈವ ಕಥಾನಕ ಸೇರಿಕೊಂಡಿರುವ ಸಾಧ್ಯತೆ ಇದೆ .ಅಥವಾ ಹೆಣ್ಣಿನ ಮರುಳನಾದ ಆತ ಕೆರೆ /ಹಳ್ಳದಲ್ಲಿ ಸ್ನಾನ ಮಾಡುತ್ತಿರುವ ಸ್ತ್ರೀ ಸಮೀಪಕ್ಕೆ ಹೋಗಲೆತ್ನಿಸಿ ದುರಂತವನ್ನಪ್ಪಿರಬಹುದು ,ಈ ಬಗ್ಗೆ “ಅತಿರೇಕದ ವರ್ತನೆಯ ಮಂತ್ರವಾದಿಯೋಬ್ಬನನ್ನು ಜನರೇ ಸಿಟ್ಟಿಗೆದ್ದು ಗುಪ್ತವಾಗಿ ಮುಗಿಸಿದ ವೃತ್ತಾನ್ತಕ್ಕೆ ಬೇರೊಂದು ಬಣ್ಣ ಬಂದಿರಲೂ ಬಹುದು .ಭೂತ ಮಹಿಮೆಗಳನ್ನು ಪ್ರಚುರ ಗೊಳಿಸಲು ಇಂತ ಕಥೆಗಳು ಅನುಕೂಲ “ಎಂದು ಡಾ. ಅಮೃತ ಸೋಮೆಶ್ವರರು ಅಬಿಪ್ರಾಯ ಪಟ್ಟಿದ್ದಾರೆ .ಇತರ ಭೂತಗಳಂತೆ ಆಲಿ ಭೂತಕ್ಕೆ ಅಣಿ ಜಕ್ಕೆಳಣಿ ಗಳು ಇರುವುದಿಲ್ಲ ಈತನಿಗೆ ಬಣ್ಣ ಬಣ್ಣದ ಲುಂಗಿ ,ಸೊಂಟದ ಪಟ್ಟಿ ,ತಲೆಗೆ ಬಂಗಾರದ /ಬೆಳ್ಳಿಯ ಟೊಪ್ಪಿ ಇರುತ್ತದೆ.ಮೈಗೆ ಗಂಧ ಪೂಸಿ ಮುಖಕ್ಕೆ ಕಪ್ಪು ಬಣ್ಣ ಹಾಕಿದ ಸರಳ  ಅಲಂಕಾರ ಇರುತ್ತದೆ.

ಈ ಭೂತಕ್ಕೆ ತುಂಬಾ ಜನರು ಹರಿಕೆ ಹಾಕುತ್ತಾರೆ.ಅನೇಕ ಮುಸ್ಲಿಂ ಸ್ತ್ರೀ ,ಪುರುಷರೂ ಆಲಿ ಭೂತಕ್ಕೆ ಹರಿಕೆ ಒಪ್ಪಿಸಿತ್ತಾರೆ .”ವೇಶ್ಯಾ ವೃತ್ತಿಯ ಹೆಂಗಳೆಯರೂ ಈತನಿಗೆ ನಡೆದುಕೊಳ್ಳುತ್ತಾರೆ,ಈ ವರ್ಷದ ಬೆಳೆ ಹೇಗಿದೆ ? ಎಂಬ ಸರಸ ಪ್ರಶ್ನೆಯನ್ನು ಈ ರಸಿಕ ದೈವ ಕೇಳುವುದುಂಟು “ಎಂದು ಅಮೃತ ಸೋಮೆಶ್ವರರು ಹೇಳಿದ್ದಾರೆ ,”ಮುಸ್ಲಿಂ ಮೂಲದ ವ್ಯಕ್ತಿಯೊಬ್ಬ ದೈವೀಕರಣಗೊಂಡು ಸಾವಿರಾರು ಜನರ ಆರಾಧ್ಯ ಶಕ್ತಿಯಾಗಿರುವುದು ವಿಶೇಷ  ಮಾತ್ರವಲ್ಲ,ಈ ಆರಾಧನಾ ವಿದ್ಯಮಾನವು ಆರಾಧನಾ ಮಟ್ಟದ ಕೋಮು ಸೌಹಾರ್ದಕ್ಕೆ ಒಂದು ಕೊಡುಗೆಯೂ ಆಗಿದೆ “ಎಂದು ಅಮೃತ ಸೋಮೆಶ್ವರರು ಅಭಿಪ್ರಾಯ ಪಟ್ಟಿದ್ದಾರೆ .    

೩ . ಮಾಪುಳ್ತಿ ಧೂಮಾವತಿ : ತುಳುನಾಡಿನ ದೈವಗಳಲ್ಲಿ ಹೆಚ್ಚಿನವರು ಹುಟ್ಟಿನಿಂದ ಮನುಷ್ಯರಾಗಿದ್ದು ಅಸಾಮಾನ್ಯ ಸಾಹಸ ಮೆರೆದು ಅಸಹಜ ಮರಣಕ್ಕೆ ತುತ್ತಾಗಿ ದೈವತ್ವವನ್ನು ಪಡೆದವರಾಗಿದ್ದಾರೆ. ಕೋಟೆದ ಬಬ್ಬು, ಬಬ್ಬರ್ಯ, ಕೊರಗ-ತನಿಯ ಮೊದಲಾದವರು ಈ ರೀತಿ ದೈವತ್ವವನ್ನು ಪಡೆದವರು. ಇನ್ನು ಕೆಲವರು ಪ್ರಧಾನ ದೈವಗಳಾದ ರಕ್ತೇಶ್ವರಿ, ಚಾಮುಂಡಿ ಮೊದಲಾದವರ ಅನುಗ್ರಹಕ್ಕೆ ಪಾತ್ರರಾಗಿ ದೈವತ್ವವನ್ನು ಪಡೆದಿದ್ದಾರೆ. ಅಕ್ಕಚ್ಚು, ಅಚ್ಚುಬಂಗೇತಿ ಮೊದಲಾದ ದೈವಗಳು ಈ ವರ್ಗದಲ್ಲಿ ಸೇರುತ್ತಾರೆ. ದೈವದ ಆಗ್ರಹಕ್ಕೆ ತುತ್ತಾಗಿಯೂ ದೈವತ್ವವನ್ನು ಪಡೆದವರಿದ್ದಾರೆ. ಭಟ್ಟಿಭೂತ, ಅರಬ್ಬಿ ಭೂತ, ಮರ್ಲುಮಾಣಿ ಮೊದಲಾದ ದೈವಗಳು ಈ ರೀತಿ ದೈವತ್ವವನ್ನು ಪಡೆದ ಭೂತಗಳಾಗಿವೆ. ಕಾರಣವೇ ಇಲ್ಲದೆ ದೈವಗಳ ಸನ್ನಿಧಿಗೆ ಸೇರಿ ದೈವತ್ವವನ್ನು ಪಡೆದವರಿದ್ದಾರೆ. ಕುಂಞÂಭೂತ, ದಾರು-ಕುಂದಯ, ಸಬ್ಬೆಡ್ತೆರ್ ಮೊದಲಾದ ದೈವಗಳು ವಿನಾಕಾರಣ ದೈವಗಳ ದೃಷ್ಟಿಗೆ ಸಿಲುಕಿ ದೈವತ್ವವನ್ನು ಪಡೆದ ಭೂತಗಳಾಗಿವೆ.ಮಾಪುಳ್ತಿ ಭೂತ ಕೂಡ ಧೂ ಮಾವತಿ ದೈವದ ಸಿಲುಕಿ ದೈವತ್ವವನ್ನು ಪಡೆದ ದೈವತ.

ನಾನು ಅರೆಕಲ್ಲಿನಲ್ಲಿರುವ ನೈದಾಲ ಪಾಂಡಿ ಭೂತದ ಮ್ಕುರಿತು ಮಾಹಿತಿ ಸಂಗ್ರಹಿಸಿ ರೆಕಾರ್ಡ್ ಮಾಡಲೆಂದು ಸಂಪಾಜೆಯಿಂದ ಜೀಪ್ ಮೂಲಕ ಅರೆಕಲ್ಲಿಗೆ ಹೋಗುವಾಗ ಬಾಬು ಪಾಟಾಳಿ ಎಂಬವರ ಪರಿಚಯವಾಯಿತು . ಮಾತಿನ ನಡುವೆ ಅವರು ಅಜ್ಜಾವರ  ಸಮೀಪ ಮಾಪುಳ್ತಿ ಧೂಮಾವತಿ ಎಂಬ ಭೂತ ಇರುವುದನ್ನು ತಿಳಿಸಿದರು.ಅಲ್ಲಿಂದ ಈ ಭೂತದ ಸ್ಥಾನ ಎಲ್ಲಿದೆ ಎಂದು ತಿಳಿಯಲು ಯತ್ನಿಸುತ್ತಾ ಇದ್ದೆ .ನನ್ನ ಸಹೋದ್ಯೋಗಿ ಮಿತ್ರರಾದ ಸತ್ಯವತಿ ಅವರು ಅಜ್ಜಾವರ  ಪದ್ದಮ್ಬೈಲಿನ ಪರಿಚಯ ಇರುವ ಶಾರದಾ ಕಾಲೇಜ್ ನ ಸುಮಲತಾ ಮೇಡಂ ಅವರನ್ನು ಸಂಪರ್ಕಿಸಲು ತಿಳಿಸಿದರು .ಅವರು ಅವರ ಸಹೋದರ ಅರುಣ್ ಕುಮಾರರನ್ನು ಸಂಪರ್ಕಿಸಲು ತಿಳಿಸಿದರು . ಅರುಣ್ ಕುಮಾರ ಸುಳ್ಯದ ಗಾಂಧಿ ನಗರ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದ್ದಾರೆ .ಅವರು ಅವರ ಮನೆಯಲ್ಲಿ ಆರಾಧನೆಗೊಳ್ಳುವ ಮಾಪುಳ್ತಿ ಭೂತದ ಕುರಿತು ಮಾಹಿತಿ ನೀಡಿದ್ದಾರೆ .

 ಸುಳ್ಯ ತಾಲ್ಲೂಕಿನ ಅಜ್ಜಾವರ ಸಮೀಪದ ಪಡ್ಡಂಬೈಲಿನಲ್ಲಿ ಪ್ರಧಾನ ದೈವ ಧೂಮಾವತಿ. ಧೂಮಾವತಿ ದೈವವು ಭಾಗಮಂಡಲದಿಂದ ಪಡ್ದಂಬೈಲಿಗೆ ಬರುವಾಗ,ಪಡ್ಡಂಬೈಲಿಗೆ ಸಮೀಪದ ಪೇರಡ್ಕದಲ್ಲಿ ಭತ್ತದ ಕೃಷಿ ಕಾರ್ಯ ನಡೆಯುತ್ತಾ ಇತ್ತು. ಭೂತ ಎದ್ದು ನಿಲ್ಲುವ ಸಮಯದಲ್ಲಿ ಪೇರಡ್ಕದಲ್ಲಿ ಓರ್ವ ಮುಸ್ಸಿಂ ಮಹಿಳೆ ಭತ್ತ ಬಡಿಯುತ್ತಾ ಇರುತ್ತಾಳೆ. ಅವಳನ್ನು ಮಾಯ ಮಾಡಿದ ಧೂಮಾವತಿ ದೈವವು ಅವಳನ್ನು ತನ್ನ ಸೇರಿಗೆಗೆ ಸೇರಿಸಿಕೊಳ್ಳುತ್ತದೆ. ಧೂಮಾವತಿ ಸೇರಿಗೆಗೆ ಸಂದ ಆ ಮುಸ್ಲಿಂ ಮಹಿಳೆ ಮಾಪುಳ್ತಿ ದೈವವಾಗಿ ಆರಾಧನೆಯನ್ನು ಪಡೆಯುತ್ತಾಳೆ.ನಂತರ  ಪಡ್ಡಂಬೈಲಿಗೆ ಬಂದು ನೆಲೆಯಾಗುತ್ತದೆ. ಧೂಮಾವತಿಗೆ ನೇಮ ಕೊಡುವ ಮೊದಲು ಮಾಪುಳ್ತಿ ಭೂತಕ್ಕೆ ಕೋಲ ನೀಡಿ ಆರಾಧಿಸುತ್ತಾರೆ.ಈ ದೈವ ಮಾಪುಳ್ತಿ ಧೂಮಾವತಿ ಎಂದೇ ಪ್ರಸಿದ್ಧಿಯನ್ನು ಪಡೆದಿದೆ copy rights reserved(c)ಡಾ.ಲಕ್ಷ್ಮೀ ಜಿ ಪ್ರಸಾದ

೪ . ಮಾಪುಳೆ-ಮಾಪುಳ್ತಿ ಭೂತಗಳು : ೨೦೧೦ ರಲ್ಲ್ಲಿ ನಮ್ಮ ಕಾಲೇಜ್ ನ  ಎನ್ ಎಸ್ ಎಸ್ ಕ್ಯಾಂಪ್ ಅನ್ನು ನಾವು ಇವರನಾಡಿನ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದೆವು .ಸಹ ಘಟಕಾಧಿಕಾರಿಯಾಗಿದ್ದ ನನಗೆ ಅಲ್ಲಿನ ಎಸ್ ಡಿ ಎಂ ಸಿ ಸದಸ್ಯರ ಪರಿಚಯವಾಯಿತು .ನನಗೆ ಅಲ್ಲಿ ಕೃಷ್ಣಪ್ಪ ಗೌಡ ಎಂಬ ಸಹೃದಯಿ ಹಿರಿಯರು ಮಾತಿಗೆ ಸಿಕ್ಕಿದರು .ಮಾತನಾಡುತ್ತಾ ಭೂತಾರಾಧನೆಯ ಕುರಿತಾದ ನನ್ನ ಆಸಕ್ತಿಯನ್ನು ತಿಳಿದು ಅಲ್ಲಿ ಸುತ್ತ ಮುತ್ತಲಿನ ಭೂತಗಳ ಕುರಿತು ಅವರಿಗೆ ತಿಳಿದ ವಿಚಾರ ತಿಳಿಸಿದರು .ಅದೇ ರೀತಿ  ಕುಂಬಳ ಚ್ಚೇರಿಯಲ್ಲಿ ಆರಾಧನೆಗೊಳ್ಳುವ ಎರಡು ವಿಶಿಷ್ಟ ಭೂತಗಳಿವೆ .ಮಾಪುಳೆ ಮಾಪುಳ್ತಿ ಅಂತ ಎರಡು ಮುಸ್ಲಿಂ ಭೂತಗಳಿಗೆ ಅಲ್ಲಿ ಆರಾಧನೆ ಇದೆ ಎಂದು ತಿಳಿಸಿದರು ಅಲ್ಲಿ ಈ ಭೂತಗಳಿಗೆ ಆರಾಧನೆ ನಡೆಯುವ ಸಮಯವನ್ನು ತಿಳಿಸಿ ,ಆ ಪರಿಸರದ ಕೆಲವರ ವಿಲಾಸ ಮತ್ತು ಫೋನ್ ನಂಬರ್ ನೀಡಿದರು .ನಂತರ ನಾನು ಈ ಬಗ್ಗೆ ವಿಚಾರಿಸಿ ಏಪ್ರಿಲ್ ತಿಂಗಳ ೨೩ ನೆ ತಾರೀಕಿನಂದು ಅಲ್ಲಿ ರೆಕಾರ್ಡಿಂಗ್ ಗೆ ಹೋದೆ .ಆದರೆ ನನ್ನ ದುರದೃಷ್ಟಕ್ಕೆ ಆ ವರ್ಷ ಮಾಪುಲೇ ಮಾಪುಳ್ತಿ ಭೂತಗಳಿಗೆ ನೇಮ ಇರಲಿಲ್ಲ .ಅಲ್ಲಿ ಎರಡು ವರ್ಷಗಳಿಗೊಮ್ಮೆ ಈ ಭೂತಗಳಿಗೆ ಆರಾಧನೆ ಎಂದು ತಿಳಿಯಿತು .ಭೂತದ ಕೋಲ ರೆಕಾರ್ಡ್ ಮಾಡಲು ಸಿಗದಿದ್ದರೂ ಈ ಭೂತಗಳ ಕುರಿತು ಮಾಹಿತಿ ದೊರೆಯಿತು

 ದೈವದ ಆಗ್ರಹಕ್ಕೆ ತುತ್ತಾಗಿ ಮಾಯವಾಗುವ ಸಾಮಾನ್ಯ ಜನರು ಆ ದೈವದ ಸೇರಿಗೆಯಲ್ಲಿ ಸರಿದು ಹೋಗಿ ದೈವತ್ವಕ್ಕೇರಿ ಆರಾಧನೆ ಹೊಂದುವುದು ತುಳುನಾಡಿನಲ್ಲಿ ಸಾಮಾನ್ಯವಾದ ವಿಚಾರವೇ ಆಗಿದೆ. ಉತ್ತರ ಕೊಡಗು ತಾಲೂಕಿನ ಕುಂಬಳ ಚ್ಚೇರಿಯಲ್ಲಿ ಶಿರಾಡಿ ದೈವಕ್ಕೆ ಆರಾಧನೆ ಇದೆ. ಶಿರಾಡಿ ದೈವದ ವಾಲಸರಿ ಆಗುವಾಗ ದೈವದ ಎದುರಿಗೆ ಯಾರೂ ಬರಬಾರದು ಎಂಬ ನಿಯಮವಿದೆ. ಸುಮಾರು ವರ್ಷಗಳ ಹಿಂದೆ ಶಿರಾಡಿ ದೈವ ಬರುವಾಗ ಗದ್ದೆಯ ಬದುವಿನಲ್ಲಿ ತೊಟ್ಟಿಲ ಮಗುವನ್ನು ಹಿಡಿದುಕೊಂಡು ಮುಸ್ಲಿಂ ದಂಪತಿಗಳು ಹೋಗುತ್ತಾರೆ. ಆಗ ಕೋಪಗೊಂಡ ದೈವ ತೊಟ್ಟಿಲ ಮಗುವನ್ನು ಮಾಯ ಮಾಡುತ್ತದೆ. ಆಗ ಆ ಮುಸ್ಲಿಂ ದಂಪತಿಗಳು ದೈವದ ಹತ್ತಿರ ಕ್ಷಮೆ ಕೇಳುತ್ತಾರೆ. ಆಗ ದಯೆ ತೋರಿದ ಶಿರಾಡಿ ದೈವ ಆ ಮುಸ್ಲಿಂ ದಂಪತಿಗಳನ್ನು ತನ್ನ ಸೇರಿಗೆಯಲ್ಲಿ ಸೇರಿಸಿಕೊಳ್ಳುತ್ತದೆ. ಕುಂಬಳ ಚ್ಚೇರಿಯಲ್ಲಿ ಶಿರಾಡಿ ದೈವಕ್ಕೆ ನೇಮಕೊಡುವಾಗ ಈ ದೈವತ್ವಕ್ಕೇರಿದ ಮುಸ್ಲಿಂ ದಂಪತಿಗಳನ್ನು ಮಾಪುಳೆ-ಮಾಪುಳ್ತಿ ಭೂತೊಳು ಎಂಬ ಹೆಸರಿನಲ್ಲಿ ನೇಮ ಕೊಟ್ಟು ಆರಾಧಿಸುತ್ತಾರೆ. ಇಲ್ಲಿ ಮಾಪುಳೆ-ಮಾಪುಳ್ತಿ ದೈವಗಳ ವೇಷ ಭೂಷಣಗಳು ಸರಳವಾಗಿದ್ದು ಮುಸ್ಲಿಂ ಪುರುಷ ಹಾಗೂ ಮಹಿಳೆಯನ್ನು ಹೋಲುತ್ತದೆ. ಮಾಪುಳೆ ದೈವದ ಬಳಿ ಪಂಚೆ ಹಾಗೂ ತಲೆಗೆ ಟೊಪ್ಪಿ ಅಥವಾ ಮುಂಡಾಸು ಹಾಕಿರುತ್ತಾನೆ. ಮಾಪುಳ್ತಿ ಭೂತ ತಲೆಗೆ ಸೆರಗನ್ನು ಹೊದ್ದಿರುತ್ತಾಳೆ.

೫ .ಬ್ಯಾರಿ ಭೂತ : ಪುತ್ತೂರು ಉಪ್ಪಿನಂಗಡಿ ಬಳಿಯ ಆಲಂಗಾರಿನಲ್ಲಿ ಬ್ಯಾರಿ ಭೂತಕ್ಕೆ ಆರಾಧನೆ ಇರುವ ಬಗ್ಗೆ ಭೂತ ಅಕ್ತ್ತುವ ಕಲಾವಿದರೊಬ್ಬರು ತಿಳಿಸಿದ್ದಾರೆ .ಅಲ್ಲಿ ಉಲ್ಲಾಕುಳು ಪ್ರಧಾನ ದೈವ .ಉಲ್ಲಾಕುಳು ಎದ್ದು ನಿಲ್ಲುವಾಗ ಯಾರು ಎದುರು ಬರಬಾರದೆಂಬ ನಿಯಮ ಇದೆ .ಒಂದು ವರ್ಷ ಉಲ್ಲಾಕುಳು ನೇಮದ ಸಂದರ್ಭದಲ್ಲ್ಲಿ ಮೀನು ಮಾರಾಟ ಮಾಡುವ ಮುಸ್ಲಿಂ ವ್ಯಾಪಾರಿ ಭೂತ ನೇಮ ಆಗುತ್ತಿದ್ದುದು ಗೊತ್ತಾಗದೆ ಅಲ್ಲಿಗೆ ಬರುತ್ತಾರೆ ಆಗ ದೈವ ಆತನನ್ನು ಮಾಯ ಮಾಡಿ ತನ್ನ ಸೇರಿಗೆಗೆ ಸಂದಾಯಮಾದಿಕೊಳ್ಳುತ್ತದೆ .ಮುಂದೆ ಆತ ಬ್ಯಾರಿ ಭೂತವಾಗಿ ಆರಾಧನೆ ಪಡೆಯುತ್ತಾನೆ

೬.ಮುಸ್ಲಿಮರ  ಮಕ್ಕಳು :ಕೆಲವು ಗರೋಡಿಗಳಲ್ಲಿ ಮುಸ್ಲಿಮರ ಮಕ್ಕಳು ಎಂಬ ಎರಡು ದೈಗಳಿಗೆ ಆರಾಧನೆ ಇದೆ .ಕೆಲವು ಗರೋಡಿಗಳಲ್ಲಿ ಮುಸ್ಲಿಮರ ಮಕ್ಕಳ ಎರಡು ಮರದ ಉರುಗಳು (ಮರದ ವಿಗ್ರಹಗಳು ) ಇವೆ . ಈ ಎರಡು ಶಕ್ತಿಗಳ ಕುರಿತು ಎರಡು ರೀತಿಯ ಐತಿಹ್ಯಗಳು ಪ್ರಚಲಿತವಿವೆ . ಕೋಟಿಚೆನ್ನಯರು ಎನ್ಮೂರಿಗೆ ಬರುವ ದಾರಿಯಲ್ಲಿ ಎರಡು ಮುಸ್ಲಿಂ ಮಕ್ಕಳು ಆಟವಾಡಿ ಕೊಂಡು ಇರುತ್ತಾರೆ .ಅವರಲ್ಲಿ ಕ್ತಿ ಚೆನ್ನಯರು ಕಿನ್ನಿದಾರುವಿನ ಮನೆಯ ದಾರಿಯನ್ನು ಕೇಳುತ್ತಾರೆ . ಆಗ ಆ ಮಕ್ಕಳು ಬೇಕೆಂದೇ ತಪ್ಪು ದಾರಿ ಹೇಳಿ ಇವರನ್ನು ಅಲೆದಾಡಿಸಿದರಂತೆ .ಆಗ ಕೋಪ ಗೊಂಡ ಕೋಟಿ ಚೆನ್ನಯರು ಇವರನ್ನು ಮಾಯಾ ಮಾಡಿದರು .ಮುಂದೆ ಗರೋದಿಯಲ್ಲಿ ತಮ್ಮ ಸೇರಿಗೆ ದೈವಾಗಿ ಸೇರಿಸಿ ಕೊಂಡು ತಾವು ಮಾಯಕ ಮಾಡಿದ ಎರಡು ಮಕ್ಕಳಿಗೆ ದೈವತ್ವ ನೀಡಿ ನೆಲೆ ನೀಡಿದರು ಎಂಬ ಐತಿಹ್ಯ ಎಡ ಮಂಗಲದ ಸುತ್ತಮುತ್ತ ಹರಡಿದೆ .ಇನ್ನೊಂದು ಐತಿಹ್ಯ ಪ್ರಕಾರ ಎರಡು ಮುಸ್ಲಿಂ ಮಕ್ಕಳು ಕೋಟಿ ಚೆನ್ನಯರ ನೇಮವನ್ನು ನೋಡುತ್ತಾರೆ .ಅದರಲ್ಲಿ ದರ್ಶನ ಪಾತ್ರಿಗಳು ಹೊಟ್ಟೆಗೆ ಸುರಿಯ ಹಾಕಿಕೊಳ್ಳುವುದನ್ನು ನೋಡುತ್ತಾರೆ , ಮನೆಗೆ ಹೋಗಿ ಅದೇ ರೀತಿ ಸುರಿಯ ಹಾಕಿಕೊಂಡು ದುರಂತವನ್ನಪ್ಪುತ್ತಾರೆ . ಹೀಗೆ ದುರಂತವನ್ನಪ್ಪಿದ ಮುಸ್ಲಿಂ ಮಕ್ಕಳು ಕೋಟಿ ಚೆನ್ನಯರ ಸೇರಿಗೆಗೆ ಸಂದು ಹೋಗಿ ಮುಸ್ಲಿಮರ ಮಕ್ಕಳು ಎಂಬ ಹೆಸ ನಲ್ಲಿ ಆರಾಧಿಸಲ್ಪಡುತ್ತಾರೆ ಎಂಬ ಐತಿಹ್ಯವೂ ಪ್ರಚಲಿತವಿದೆ. ಇವರಿಗೆ ಸಮೂಹ ಭೂತಾರಾಧನೆಯಲ್ಲಿ ಕೇವಲ ಹೆಸರು ಹೇಳಿ ಮುಖ್ಯ ಭೂತದ ವೇಷ ಭೂಷಣದಲ್ಲಿಯೇ ಸಾಂಕೇತಿಕವಾಗಿ ಕೋಲ ನೀಡಿ ಆರಾಧಿಸುತ್ತಾರೆ

೭  . ಬಬ್ಬರ್ಯ   .ಈತ ತುಳುನಾಡಿನ ಅತ್ಯಂತ ಕಾರಣಿಕದ ಪ್ರಸಿದ್ಧ ಭೂತ. ಈ ಬಗ್ಗೆ ಪ್ರತ್ಯೇಕ ಲೇಖನ ಇದೆ

 

ಭೂತಗಳ ಅದ್ಭುತ ಜಗತ್ತು


ಜೈನ ಮುಸ್ಲಿಂ ಬಾಂಧವ್ಯ ಬೆಸೆದ ಬಬ್ಬರ್ಯ ಭೂತ-ಡಾ.ಲಕ್ಷ್ಮೀ ಜಿ ಪ್ರಸಾದ



                       

ತುಳು ನಾಡಿನ ಪ್ರಸಿದ್ಧ ಭೂತ ಬಬ್ಬರ್ಯ ಮೂಲತ ಮುಸ್ಲಿಂ ಮೂಲದ ದೈವತ .ಈತನ ತಂದೆ  ಮಾದವ ಸುಲಿಕಲ್ಲ ಬ್ಯಾರಿ ಸಮುದ್ರ ತೀರದಲ್ಲಿ ಉಪ್ಪು ಮೆಣಸಿನ ಅಂಗಡಿ ಹಾಕಿ ವ್ಯಾಪಾರ ಮಾಡುತ್ತಿದ್ದ ಈತನ ತಾಯಿ ಜೈನರ ಹುಡುಗಿ

 ಮುಹಮ್ಮದ್ >ಮೊಮ್ಮದ್ >ಮಾದವ ಆಗಿರಬೇಕೆಂದು ಡಾ.ಅಮೃತ ಸೋಮೇಶ್ವರರು ಅಭಿಪ್ರಾಯ ಪಟ್ಟಿದ್ದಾರೆ


  .ಒಂದು ದಿನ ಕಡಲು ಉಕ್ಕ್ಕಿ ಮಾದವ ಸುಲಿಕಾಲ ಬ್ಯಾರಿಯ   ಅಂಗಡಿ ಮುಗ್ಗಟ್ಟು ಎಲ್ಲ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗುತ್ತದೆ .ಆಗ ಅವನು ತಲೆಯಲ್ಲಿ ಮೆಣಸು ಬೆಲ್ಲ ಕಟ್ಟು ಹೊತ್ತುಕೊಂಡು ಊರೂರು ತಿರುಗುತ್ತ ವ್ಯಾಪಾರ ಮಾಡುತ್ತಾ ಇದ್ದ .

ಹೀಗೆ ವ್ಯಾಪಾರ ಮಾಡುತ್ತಾ ಮಲಯ ದೇಶಕ್ಕೆ ಬರುತ್ತ್ತಾನೆ ಅಲ್ಲಿ ಮುತ್ತು ಸೆಟ್ಟಿ ,ರತನ್ ಸೆಟ್ಟಿ ಮೊದಲಾದ ಏಳು ಜನ ಜೈನ ಸಹೋದರರು ಇದ್ದರು .ಆ  ಜೈನ ಮಡಸ್ತಾನದ ಏಳು ಜನ ಅಣ್ಣಂದಿರಿಗೆ ಒಬ್ಬಳು ತಂಗಿ. ಅವಳನ್ನು ಮದುವೆಯಾದವರೆಲ್ಲ ಅದೇ ರಾತ್ರಿ ಸಾಯುತ್ತಾರೆ. ಇರುವ ಒಬ್ಬ ತಂಗಿಯ ಬದುಕು ಹೀಗಾಯ್ತಲ್ಲ? ಎಂಬ ಚಿಂತೆಯಲ್ಲಿರುವಾಗ ವ್ಯಾಪಾರಕ್ಕೆಂದು ಬಂದ  ಈ ಮುಸ್ಲಿಂ ಹುಡುಗ ಸುಲಿಕಲ್ಲ ಮಾಧವ ಬ್ಯಾರಿ ಇವರ ದುಃಖದ ಕಾರಣವನ್ನು ಕೇಳುತ್ತಾನೆ. “ನಮ್ಮ ತಂಗಿಯನ್ನು ಮದುವೆಯಾದವರಿಗೆ ಅರ್ಧರಾಜ್ಯ ಕೊಡುತ್ತೇವೆ” ಎಂದು ಅಣ್ಣಂದಿರು ಹೇಳುತ್ತಾರೆ.


ಮಾಧವ ಬ್ಯಾರಿ ನಾನು ಪ್ರಯತ್ನ ಮಾಡುತ್ತೇನೆ ಎಂದ. ಒಂದು ದೊಡ್ಡ ಮನುಷ್ಯರೂಪವನ್ನು ಅಕ್ಕಿಯಲ್ಲಿ ಕಡೆದು ಮಾಡುತ್ತಾರೆ. ಆ ಅಕ್ಕಿಯ ಮನುಷ್ಯ ರೂಪವನ್ನು ರಾತ್ರಿ ಮಲಗುವಾಗ ಅವಳ ಜೊತೆಯಲ್ಲಿ ಮಲಗಿಸಿದರು. ಮಧ್ಯರಾತ್ರಿಯ ಹೊತ್ತು ಅವಳ ಮೂಗಿನಿಂದ ಎರಡು ಸರ್ಪಗಳು ಹೊರಬಂದು ಮಲಗಿದ್ದ ಬೊಂಬೆಯನ್ನು ಕಚ್ಚುತ್ತವೆ. ಆಗ ಬದಿಯಲ್ಲೇ ಅಡಗಿ ನಿಂತಿದ್ದ ಬ್ಯಾರಿ ತನ್ನ ಕತ್ತಿಯಿಂದ ಸರ್ಪಗಳನ್ನು ತುಂಡರಿಸುತ್ತಾನೆ. ಮೊದಲು ಕೊಟ್ಟ ಮಾತಿನಂತೆ ಅವನಿಗೆ ಅರ್ಧ ರಾಜ್ಯ ಹಾಗೂ ತಂಗಿಯನ್ನು ಕೊಡುತ್ತಾರೆ. (C).ಡಾ.ಲಕ್ಷ್ಮೀ ಜಿ ಪ್ರಸಾದ


ಆದರೆ ಆತ ಮದುವೆಗೆ ಒಪ್ಪುವುದಿಲ್ಲ. ಅವಳು ಚಂದ್ರನಾಥ ದೇವರ ಕೆರೆಗೆ ಸ್ನಾನಕ್ಕೆ ಹೋಗುತ್ತಾಳೆ. ಕೆರೆಯಿಂದ ಮೇಲೆ ಬರುವಾಗ ಮಾಯದ ಬಸಿರನ್ನು ಪಡೆಯುತ್ತಾಳೆ. ಬಬ್ಬರ್ಯನನ್ನು ಹೆರುತ್ತಾಳೆ. ಅವನಿಗೆ ಮಸೀದಿಯಲ್ಲಿ ಬಪ್ಪ ಎಂದು ಹೆಸರಿಡುತ್ತಾರೆ  ಆಗ ಜೈನರಿಗೂ ಮುಸ್ಲಿಮರಿಗೂ ವಿವಾದ ಉಂಟಾಗಿ ಅವರು ಊರು ಬಿಟ್ಟು ಹೋಗುವ ಕಾಲ ಬರುತ್ತದೆ. “ಅಮಾವಾಸ್ಯೆಯ ದಿನ ಚಂದ್ರನನ್ನು ಕಂಡರೆ ಊರು ಬಿಟ್ಟು ಹೋಗುತ್ತೇವೆ ಎಂದು ಜೈನರು ಹೇಳುತ್ತಾರೆ. ನಾವು ಚಂದ್ರನನ್ನು ಕಂಡರೆ ಚಂದ್ರನನ್ನು ನಂಬುತ್ತೇವೆ ಎನ್ನುತ್ತಾರೆ ಮುಸ್ಲಿಮರು. ಚಂದ್ರ ಕಾಣಿಸಿದ್ದರಿಂದ ಜೈನರು ಚಂದ್ರನನ್ನು ತುಳಿದು ಊರುಬಿಟ್ಟು ಹೋಗುತ್ತಾರೆ. ಮುಸ್ಲಿಮರು ಚಂದ್ರನನ್ನು ನಂಬಿದರು.


 “ಬಬ್ಬರ್ಯ ನೀನು ಏನು ಮಾಡುತ್ತಿ? ಎಂದು ಕೇಳಿದಾಗ ಬಬ್ಬರ್ಯ ‘ನೀವು ಮುಂದಿನಿಂದ ಹೋಗಿ, ನಾನು ಹಿಂದಿನಿಂದ ಬರುತ್ತೇನೆ ಎಂದು ಹೇಳುತ್ತಾನೆ. ದೇವರ ವರ ಪಡೆದು ಬರುತ್ತೇನೆ ಎಂದು ಹೇಳುತ್ತಾನೆ. ಮುಂದೆ ಹಡಗು ಕಟ್ಟಿಸಿ ಸಮುದ್ರಕ್ಕೆ ಇಳಿಸಿ ದುರಂತವನ್ನಪ್ಪುತ್ತಾನೆ

 ಬಬ್ಬರ್ಯ ಭೂತದ ಪಾಡ್ದನದ ಇನ್ನೊಂದು ಪಾಠದ ಪ್ರಕಾರ ಆ ಹುಡುಗಿಯನ್ನು ಮದುವೆಯಾಗಿ ಮಸೀದಿಗೆ ಕರೆ ತಂದು ಬೊಲ್ಯ ಬೀಬಿ ಫಾತಿಮಾ ಎಂದು ಹೆಸರಿಸುತ್ತಾನೆ .ನಂತರ ಅವಳು ಗರ್ಭ ಧರಿಸುತ್ತಾಳೆ .ಒಂಬತ್ತು ತಿಂಗಳಾಗುವಾಗ  ಆ ಮಗು ಬಂಗಾರದ ದುಂಬಿಯಾಗಿ ತಾಯಿಯ ಬಲದ ಮೊಲೆಯನ್ನು ಒಡೆದು ಹೊರ ಬರುತ್ತಾನೆ .


ಅಂತು ಅವಳು ಹೇಗೋ ಒಂದು ಗಂಡು ಮಗುವಿಗೆ ಜನ್ಮ ಕೊಡುತ್ತಾಳೆ  ಮುಂದೆ.ಸಾಹಸಿಯಾದ ಆ ಹುಡುಗ ಬಪ್ಪ ತನ್ನ ಓರಗೆ ಹುಡುಗರನ್ನು ಆಟದಲ್ಲಿ ಸೋಲಿಸುತ್ತಾನೆ .ಆಗ ಸೋತ ಹುಡುಗರು ಹಾದರಕ್ಕೆ “ಹುಟ್ಟಿದ ಮಗು ಒಳ್ಳೆಯದು ತುಳುವ ಹಲಸಿನ ಹಣ್ಣಿನ ಬೀಜ ಒಳ್ಳೆಯದು “ಎಂದು ಇವನನ್ನು ಗೇಲಿ ಮಾಡಿ ನಗುತ್ತಾರೆ

ಆಗ ಅಲ್ಲಿಂದ ಬಂದು ಅವನು ಒಂದು ಕೋಟೆ ಕಟ್ಟಿ ಅದನ್ನು ಮಾಯ ಮಾಡುತ್ತಾನೆ. . ಬಬ್ಬರ್ಯ  ವ್ಯಾಪಾರ ಮಾಡುವ ಮತ್ತು ಹಡಗು ಕಟ್ಟಿಸುವ ವಿಚಾರ ಪಾಡ್ದನದಲ್ಲಿದೆ.

                “ನನ ಇಂಚ ಕುಲ್ಲುಂಡ ಜೈತ್ ಬರಾಂದ್

                ಅಂಗಾಡಿ ದಿಡೋಡು ಯಾಪಾರ ಮಲ್ಪೊಡುಂದೆ

                ಕಡಲ ಬರಿಟ್ ಮಡಲ್‍ದ ಅಂಗಾಡಿ ಕಟ್ಯೆ

                ಯಾಪಾರ ಮಲ್ತೊಂಡೆ

                ಪಣವು ಎಚ್ಚೊಂಡು ಬತ್ತ್‍ಂಡ್‍ಯೆ

                ಅಪಗಾಂಡ ಪಣ್ಪೆ ಬಬ್ಬರಿಯೆ

                ಎಂಕ್ ಪಡಾವುದ ಬೇಲೆ ಪತ್ತೊಡು

                ಪಡಾವುದ ಯಾಪಾರ ಮಲ್ಪೊಡು”

ಕನ್ನಡ ರೂಪ :

                ಇನ್ನು ಹೀಗೆ ಕುಳಿತರ ಏನೂ ಬರದು

                ಅಂಗಡಿ ಇಡಬೇಕು ವ್ಯಾಪಾರ ಮಾಡಬೇಕೆಂದ

                ಕಡಲಿನ ಬದಿಯಲ್ಲಿ ತೆಂಗಿನ ಗರಿಯಿಂದ ಅಂಗಡಿ ಕಟ್ಟಿದ

         ವ್ಯಾಪಾರ ಮಾಡಿದ

       ದುಡ್ಡು ತುಂಬಿಕೊಂಡು ಬಂದಿತು

       ನನಗೆ ಹಡಗಿನ ಕೆಲಸ ಹಿಡಿಯಬೇಕು

        ಹಡಗಿನ ವ್ಯಾಪಾರ ಮಾಡಬೇಕು



ಅಲ್ಲಿಂದ ಮಲಯ ದೇಶಕ್ಕೆ ಬರುತ್ತಾನೆ ಅಲ್ಲಿ ಒಂದು ಬಿಳಿಯ ಬಣ್ಣದ ಶಾಂತಿ ಮರ ಕಾಣಿಸುತ್ತದೆ ಅದನ್ನು ನೋಡಿ ಇದರಿಂದ ಹಡಗು ಕಟ್ಟಿಸಬೇಕೆಂದು ಕೊಳ್ಳು ತ್ತಾನೆ  ಅದಕಾಗಿ ಆಚಾರಿಗಳನ್ನು ಕರೆಸುತ್ತಾನೆ

     “ಆ ವೊಂಜಿ ಮರನು ಕಡ್ಪೊಡಾಂಡೆ

                ಮರೊನು ಕಡ್ಪೆರೆ ಮಲೆನಾಡ್ ತಚ್ಚವೆ

                ತುಳುನಾಡ ಆಚಾರ್ಲೆನು ಲೆಪ್ಪುಡಾಯೆರ್

                ಮರತ್ತಡೆ ಪೋದು ತೂಪೆರ್ ಆಚಾರಿಳ್

                ನೆಲಪೂಜಿಯೆರ್ ದೇಬೆರೆಗ್ ದಿಡ್ಯೆರ್

                ಆನೆ ಬಾರಸದ ಗಡಿ ಪಾಡ್ಯೆರ್”79

                ಆ ಒಂದು ಮರವನ್ನು ಕಡಿಯಬೇಕೆಂದ

                ಮರವನ್ನು ಕಡಿಯಲು ಮಲೆನಾಡ ತಚ್ಚವೆ

                ತುಳುನಾಡ ಆಚಾರಿಗಳನ್ನು ಕರೆಸಿದರು

                ಮರದ ಹತ್ತಿರಕ್ಕೆ ಹೋಗಿ ನೋಡುತ್ತಾರೆ ಬಡಗಿಗಳು

                ಆನೆ ಗಾತ್ರದ ಗಾಯ ಮಾಡುತ್ತಾರೆ

ನಂತರ ಬಡಗಿಗಳು ಹಡಗನ್ನು ನಿರ್ಮಿಸಿದರು ಎಂದು ಪಾಡ್ದನದಲ್ಲಿ ಹೇಳಿದೆ. ಕೆಲವೆಡೆ ಹಡಗು ತಯಾರಿಯ ಮರ ಕಡಿಯಲು ಮರಕಾಲರನ್ನು ಬರಹೇಳಿದರೆಂದು ಹೇಳಿದೆ. ಮುಗೇರರು, ಮರಕಾಲರು ಹಾಗೂ ಮೊಗವೀರರು ಒಂದೇ ವರ್ಗದವರು ಎಂದು ವಿವೇಕ ರೈ ಅಭಿಪ್ರಾಯಪಟ್ಟಿದ್ದಾರೆ.(C).ಡಾ.ಲಕ್ಷ್ಮೀ ಜಿ ಪ್ರಸಾದ


     ಇನ್ನೊಂದು ಪಾದ್ದನದಲ್ಲಿ      ‘ತ್ರೇತಾಯುಗದ ರಾಮದೇವರ ಕಿರೀಟ, ಕೃಷ್ಣನ ಚಕ್ರ, ಜಗದೀಶ್ವರನ ತ್ರಿಶೂಲ, ದೇವೇಂದ್ರನ ವಜ್ರಾಯುಧ ಹಿಡಿದುಕೊಂಡು ಮಾಯಕದ ಹಡಗನ್ನು ಬ್ರಹ್ಮರು ನಿರ್ಮಾಣ ಮಾಡಿದರು ಎಂದು ಹೇಳಿದೆ

  ಆ ಹಡಗು ನೀರಿಗಿಳಿಯುವ ಮುನ್ನ  ಬಪ್ಪ ತನ್ನ ತಂದೆತಾಯಿರನ್ನು ಕಂಡು “ಇಂದಿನ ತನಕ ನಾನು ಜೋಗದಲ್ಲಿ ನಿಮ್ಮ ಮಗನಾಗಿದ್ದೆ .ಇಂದು ಜೋಗ ಬಿಟ್ಟು ಮಾಯಕಕ್ಕೆ ಸಂದು  ಬಿಡುತ್ತೇನೆ ಎಂದು ಹೇಳುತ್ತಾನೆ. ಆ ಹಡಗಿನಲ್ಲಿ ಕುಳಿತು ಮೂಳೂರ ಕರಿಯಕ್ಕೆ ಬರುವಾಗ ಬಿರುಗಾಳಿ ಏಳುತ್ತದೆ. ಹಡಗಿನಲ್ಲಿದ್ದ ಹಾಯಿ ಹರಿಯುತ್ತದೆ. ಕೊಂಬು ತುಂಡಾಗುತ್ತದೆ. ಹಡಗು ಬದಿಗೆ ಬರುವಾಗ ಮುಳೂರಿನ ಮುನ್ನೂರು ಜನ, ಕಾಪುವಿನ ಸಾವಿರ ಜನ ಕೂಡಿ ಹತ್ತಿರ ಹೋಗುವಾಗ, ಕಣ್ಣಿಗೆ ಕಂಡರೂ ಕೈಗೆ ಸಿಗುವುದಿಲ್ಲ. ಬಬ್ಬರ್ಯ ಹಡಗನ್ನು ಪಡುಗಂಗೆಗೆ ಕಳುಹಿಸುತ್ತಾನೆ. ಮಾಯದಲ್ಲಿ ಬಂದು ಮೂಳೂರು ಉಳ್ಳಂಗಾಯ ಕಟ್ಟೆಯಲ್ಲಿ ಜೋಗದಲ್ಲಿ ಆಗುತ್ತಾನೆ. ಸೊಲ್ಮೆ ಸಂದಾಯ ಮಾಡುತ್ತಾನೆ. ನೀನು ಯಾರಿಗೆ ಸೊಲ್ಮೆ ಸಂದಾಯ ಮಾಡುವುದು ಎಂದು ಕೇಳಲು ನನ್ನನ್ನು ಬಿಟ್ಟು ಉಳ್ಳಾಯ ರಾಯಭಾರಿ ಇದ್ದಾನೆ. ಅವನಿಗೆ ನಾನು ರಾಜ್ಯಭಾರಿ ನಾನು ನಿಮ್ಮನ್ನು ಅನುಗ್ರಹ ಮಾಡಲು ಬಂದ ಶಕ್ತಿ ಎನ್ನುತ್ತಾನೆ. ಪೊಂಗ ಬೈದ್ಯನಿಗೆ ಅಭಯ ಕೊಟ್ಟು ಒಂದು ತೊಟ್ಟು ಕಳ್ಳು ಬೀಳುವಲ್ಲಿ ಸಾವಿರ ತೊಟ್ಟು ಬೀಳುವ ಹಾಗೆ ಮಾಡುತ್ತಾನೆ.


 ಈ ಗುಟ್ಟನ್ನು ಅವನು ಅವನ ಹೆಂಡತಿಗೆ ಹೇಳಿದ ನಂತರ ಒಂದು ತೊಟ್ಟು ಕೂಡ ಬೀಳುವುದಿಲ್ಲ. ಕೊನೆಗೆ ಪೊಂಗ ಬೈದ್ಯನನ್ನು ನೀರಿನಲ್ಲಿ ಮುಳುಗಿಸುತ್ತಾನೆ. ಅವನ ಹೆಂಡತಿ ಮೂಳೂರಿನ ಮುನ್ನೂರು ಒಕ್ಕಲು, ಕಾಪುವಿನ ಸಾವಿರ ಒಕ್ಕಲು ಕೂಡಿಸಿ ದೇವರಾದರೆ ದೇವಸ್ಥಾನ, ಬ್ರಹ್ಮರಾದರೆ ಬ್ರಹ್ಮಸ್ಥಾನ, ಭೂತಗಳಾದರೆ, ಭೂತಸ್ಥಾನ ಕಟ್ಟಿಸುತ್ತೇನೆ. ನನ್ನ ಗಂಡನನ್ನು ಉಳಿಸಿಕೊಡಬೇಕು ಎಂದು ಪ್ರಾರ್ಥನೆ ಮಾಡುತ್ತಾಳೆ. ಆಗ ಪೊಂಗ ಬೈದ್ಯ ನೀರಿನಿಂದ ಎದ್ದು ಬರುತ್ತಾನೆ. ಪ್ರಾರ್ಥನೆ ಪ್ರಕಾರ ಬ್ರಹ್ಮಗುಂಡ ಮತ್ತು ಕೊಂಬಿನ ಮರ ಸ್ಥಾಪನೆ ಮಾಡುತ್ತಾರೆ.


ಊರಿನ ಜನ ಸೇರಿ ಧ್ವಜಸ್ತಂಭ ಮಾಡಿಸುತ್ತಾರೆ. ಆಗ ಬಬ್ಬರ್ಯ ಜೋಗ ಬರುತ್ತಾನೆ. ನಾನು ದೇವರಾಗಿ ನಿಮಗೆ ಅನುಗ್ರಹ ಮಾಡುತ್ತೇನೆ ಎನ್ನುತ್ತಾನೆ. ನಾಗಬ್ರಹ್ಮ ಉಳ್ಳಾಯ ಬಬ್ಬರ್ಯ ನಾನು. ಅಂಕೋಲಕ್ಕೆ ಹೋಗಿ ಲಿಂಗರೂಪದಿಂದ ಮೂಡಿ ಬರುತ್ತೇನೆ. ಅಲ್ಲಿ ಆದಿನಾಥ ಎಂದು ಕರೆಸಿಕೊಂಡು ನೀಲೇಶ್ವರಕ್ಕೆ ಹೋಗಿ ನೀಲಕಂಠನೆಂದು ಕರೆಸಿಕೊಂಡಿದ್ದೇನೆ” ಎಂದು ಹೇಳುತ್ತಾನೆ.

ಜೈನರಿಗೆ ಬಬ್ಬರ್ಯ ಮನೆದೈವ. ಕರಾವಳಿಯಲ್ಲಿ ಬಬ್ಬರ್ಯ ಕುಲದೈವ. ಬಬ್ಬರ್ಯ ಬೆರ್ಮರಂತೆ ಸಸ್ಯಾಹಾರಿ. ಮಾಂಸಾಹಾರ ಇಲ್ಲ. ಹಾಲು ಮತ್ತು ಸೀಯಾಳ ಆತನ ಆಹಾರ. ದೇವಸ್ಥಾನದಲ್ಲಿ ಬಬ್ಬರ್ಯ ಕ್ಷೇತ್ರಪಾಲನೆಂದು ಪಾಡ್ದನ ತಿಳಿಸುತ್ತದೆ. ಇಲ್ಲಿ ಬಬ್ಬರ್ಯ ಮತ್ತು ಬೆರ್ಮರ್ ಒಬ್ಬನೇ ಎಂಬಂತೆ ವರ್ಣಿಸಲಾಗಿದೆ.

ವಾಸ್ತವದಲ್ಲಿ ಆತ  ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಹಡಗು ಮುರಿದು ದುರಂತಕ್ಕೀದಾಗಿರ ಬಹುದು ಅಥವಾ ಕಡಲು ಗಳ್ಳರ ದಾಳಿಗೆ ಸಿಲುಕಿ ದುರಂತವನ್ನಪ್ಪಿರಬಹುದು .ದುರನತವನ್ನಪ್ಪಿದ ಅಸಾಮಾನ್ಯ ಶೂರರು ಭೂತಗಳಾಗಿ ಆರಾಧಿಸಲ್ಪಡುವುದು ತುಳು ಸಂಸ್ಕೃತಿಯಲ್ಲಿ ಸಾಮಾನ್ಯವಾದ ವಿಚಾರವಾಗಿದೆ .ಅಂತೆಯೇ ಬಪ್ಪ ಬ್ಯಾರಿ  ಬಬ್ಬರಿ ಭೂತ ವಾಗಿ ಆರಾಧಿಸಲ್ಪಟ್ಟಿರ ಬಹುದು (C).ಡಾ.ಲಕ್ಷ್ಮೀ ಜಿ ಪ್ರಸಾದ



ಈತನನ್ನು ಎಲ್ಯ ಬಬ್ಬರ್ಯ, ಮಲ್ಲ ಬಬ್ಬರ್ಯ ,ಬಾಕಿಲು ಬಬ್ಬರ್ಯ ಇತ್ಯಾದಿ ಹೆಸರಿನಿಂದ ಕೋಲ ನೀಡಿ ಆರಾಧಿಸುತ್ತಾರೆ ಬಬ್ಬರ್ಯ ಮುಸ್ಲಿಂ ಮೂಲವನ್ನು ಹೊಂದಿದ್ದರೂ ಆತನ ಆರಾಧನೆಯಲ್ಲಿ ಮಾಂಸಾಹಾರ ನಿಷಿದ್ಧ . ಬಬ್ಬರ್ಯನಿಗೆ ಸಪ್ಪೆ ಹಾಗು ಬೆಲ್ಲದ ಕಡುಬನ್ನು ಆಹಾರವಾಗಿ ನೀಡುತ್ತಾರೆ .ಬಹುಶ ಆತನ ತಾಯಿ ಜೈನ ಸ್ತ್ರೀಯಾಗಿದ್ದರಿಂದ ಬಪ್ಪ ಕೂಡ ಜೈನರಂತೆ ಸಸ್ಯಾಹಾರಿಯಾಗಿದ್ದಿರ ಬಹುದು. ಅಥವಾ ಈತನ ಆರಾಧನೆಯನ್ನು ಆತನ ತಾಯಿಯ ಕಡೆಯವರು ಆರಂಭಿಸಿರಬಹುದು .ತುಳುನಾಡಿನಲ್ಲಿ ಭೂತಾರಾಧನೆಯ ಬೆಳವಣಿಗೆಯಲ್ಲಿ ಜೈನರ ಪ್ರೋತ್ಸಾಹ ಗಣನೀಯವಾದದ್ದು ಎಂಬುದನ್ನು ಗಮನಿಸಿದರೆ ಈ ಊಹೆಗೆ ಬಲ ಸಿಗುತ್ತದೆ . ಏನೇ ಆದರು ಬಬ್ಬರ್ಯನ ಆರಾಧನೆ ಜೈನರನ್ನು ಮತ್ತು ಮುಸ್ಲಿಮರನ್ನು ಬೆಸೆದು ಸಾಮರಸ್ಯಕ್ಕೆ ಭದ್ರ ಬುನಾದಿ ಹಾಕಿದೆ ಎಂಬುದರಲ್ಲಿ ಎರಡು ಮಾತಿಲ್ಲ

ಆಧಾರ ಗ್ರಂಥಗಳು

1 ಡಾ.ಅಮೃತ ಸೋಮೇಶ್ವರ –ತುಳು ಪಾಡ್ದನ ಸಂಪುಟ

2 ಡಾ.ಚಿನ್ನಪ್ಪ ಗೌಡ –ಭೂತಾರಾಧನೆ –ಒಂದು ಜಾನಪದೀಯ ಅಧ್ಯಯನ

3 ಡಾ.ಬಿ ಎ ವಿವೇಕ ರೈ-ತುಳು ಜನಪದ ಸಾಹಿತ್ಯ

4 ಡಾ.ಲಕ್ಷ್ಮೀ ಜಿ ಪ್ರಸಾದ –ಭೂತಗಳ ಅದ್ಭುತ ಜಗತ್ತು




 ಡಾ.ಲಕ್ಷ್ಮೀ ಜಿ ಪ್ರಸಾದ

ಕನ್ನಡ ಉಪನ್ಯಾಸಕರು

laxmi prasad at 09:39



ABOUT ME ಡಾ.ಲಕ್ಷ್ಮೀ ಜಿ ಪ್ರಸಾದ ,ಕನ್ನಡ ಉಪನ್ಯಾಸಕಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ,ನೆಲಮಂಗಲ


                         



Friday 30 June 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 403-409 ಪೊನ್ನಂಗಾಲತಮ್ಮೆ ಮತ್ತು ಆರು ಸಹೋದರರು © ಡಾ ಲಕ್ಷ್ಮೀ ಜಿ ಪ್ರಸಾದ

ಕೊಡಗಿನಲ್ಲಿ ಪೊನ್ನಂಗಾಲತಮ್ಮೆ ಮತ್ತು ಆರು ಸಹೋದರ ದೈವಗಳ ಆರಾಧನೆ ಇದೆ .
ಕೇರಳದಲ್ಲಿ ಆರು ಜನ ಸಹೋದರರು ಮತ್ತು ಒಬ್ಬ ತಂಗಿ ಚಿನ್ನದ ಶಂಖದಲ್ಲಿ ಹುಟ್ಟುತ್ತಾರೆ. ಹಿರಿಯವನು ಕಾಂಞರಾಟಪ್ಪ  ಎರಡನೆಯವನು ತಿರುಚಂಬರಪ್ಪ ,ಮೂರನೆಯವನು ಬೇಂದ್ರು ಕೋಲಪ್ಪ ಎಂದೂ, ನಾಲ್ಕನೆಯವನು ಇಗ್ಗುತಪ್ಪ , ಐದನೆಯವನು ಪಾಲೂರಪ್ಪ  ಆರನೆಯವನು ತಿರುನೆಲ್ಲಿ ಪೆಮ್ಮಯ್ಯ ಎಇವರ ತಂಗಿ ತಂಗಮ್ಮ.ಇವರು ಬೇರೆ ಬೇರೆ ನಾಡಿಗೆ ಹೋಗುತ್ತಾ ಕೊಡಗಿಗೆ ಬರ್ತಾರೆ .ಪ್ರಯಾಣದ ವೇಳೆ ಒಂದು ಮಧ್ಯಾಹ್ನ ಎಲ್ಲರಿಗೂ ಹಸಿವೆಯಾಗುತ್ತದೆ.ಆಗ ತಂಗೆಮ್ಮ " ನಾನು ಬೆಂಕಿ ಇಲ್ಲದೆ ಅಡುಗೆ ಮಾಡುತ್ತೇನೆ.ನೀವೆಲ್ಲರೂ ಉಪ್ಪಿಲ್ಲದ ಅಡುಗೆ ಊಟ ಮಾಡಬೇಕು ಎಂದು ಹೇಳುತ್ತಾಳೆ.ಅಂತೆಯೇ ಅವಳು ತನ್ನ ಶಕ್ತಿಯಿಂದ ಬೆಂಕಿ ಇಲ್ಲದೆ ಅಡುಗೆ ಮಾಡುತ್ತಾಳೆ.ಆದರೆ ಅವಳ ಅಣ್ಣ ಪಾಲೂರಪ್ಪನಿಗೆ ಉಪ್ಪಿಲ್ಲದೆ ಊಟ ಮಾಡಲು ಸಾಧ್ಯವಾಗುವುದಿಲ್ಲ. ಅವನು " ಮಳೆಬರುವಾಗ ಹೀಗೆ ಆಲಿ ಕಲ್ಲು ಬೀಳುತ್ತದೆ" ಎಂದು ಹೇಳಿ ಅನ್ನವನ್ನು ಮೇಲೆ ಎಸೆಯುತ್ತಾನೆ.ಆಗ ಕೋಪಿಸಿಕೊಂಡ ತಂಗೆಮ್ಮ ತಾನು ಹಿಡಿದಿದ್ದ ಸೌಟಿನಲ್ಲಿ   ಪಾಲೂರಪ್ಪನ ಕೆನ್ನೆಗೆ ಹೊಡೆಯುತ್ತಾಳೆ.
ಇದರಿಂದ ಕೋಪಗೊಂಡ ಪಾಲೂರಪ್ಪ ಉಪಾಯವಾಗಿ ಅವಳನ್ನು ಸೋಲಿಸಬೇಕೆಂದು ಆಲೋಚಿಸಿ ಒಂದು ವ್ಯೂಹವನ್ನು ಹೆಣೆಯುತ್ತಾನೆ.
ಊಟದ ನಂತರ ಎಲ್ಲರೂ ಎಲೆ ಅಡಕೆ ಹಾಕುತ್ತಾರೆ. ಆಗ ಪಾಲೂರಪ್ಪ ಯಾರದು ಹೆಚ್ಚು ಕೆಂಪಾಗಿದೆ ನೋಡೋಣ ಎಂದು ಕೈಗೆ ಉಗಿದು ಹಿಂದೆ ಎಸೆದು ಮತ್ತೆ ನುಂಗಿದಂತೆ ಅಭಿನಯ ಮಾಡುತ್ತಾನೆ. ಇವನ ಕುಟಿಲವರಿಯದ ತಂಗೆಮ್ಮ ವೀಳ್ಯದೆಲೆ ಯನ್ನು ಕೈಗೆ ಉಗಿದು ಮತ್ತೆ ಅದನ್ನು ಬಾಯಿಗೆ ಹಾಕಿ ನುಂಗುತ್ತಾಳೆ.ಆಗ ಪಾಲೂರಪ್ಪ " ಇವಳು ಎಂಜೆಲು ತಿಂದಿದ್ದಾಳೆ.ಹಾಗೆ ಜಾತಿ ಭ್ರಷ್ಟಳಾದಳು.ಇವಳು ಮುಂದಕ್ಕೆ ನಮ್ಮ ಜೊತೆ ಬರಬಾರದು ಎಂದು ಹೇಳುತ್ತಾನೆ.ಇದರಿಂದ ನೊಂದ ಇಗ್ಗುತಪ್ಪ ತಂಗಿ ತನಗೆ ಕಾಣುವಂತೆ ಇರಲಿ ಎಂದು ಒಂದು ಬಾಣ ಬಿಡುತ್ತಾನೆ .ಅದು ಪೊನ್ನಂಗಾಲ ನದಿಯ ದಡದ ಕಾಡಿನಲ್ಲಿ ಒಂದು ಮಾವಿನ ಮರದ ಮೇಲೆ ಬೀಳುತ್ತದೆ.ತಂಗೆಮ್ಮ ಒಂದು ಕೊಕ್ಕರೆಯ ರೂಪು ತಳೆದು ಅಲ್ಲಿಗೆ ಸಮೀಪದ ಕರ್ತಂಡ ಕುಟುಂಬಕ್ಕೆ ಸೇರಿದ ಗದ್ದೆಯಲ್ಲಿ ಕುಳಿತುಕೊಳ್ಳುತ್ತಾಳೆ.ಅಲ್ಲಿಗೆ ಬಂದಕರ್ತಂಡ ಕುಟುಂಬದ ಹಿರಿಯರೊಬ್ಬರು ಕೊಕ್ಕರೆ ಯ ಮೇಲೆ ತಮ್ಮ ಕೈಯಲ್ಲಿರುವ ಬುಟ್ಟಿಯನ್ನು ಕವುಚಿ ಹಾಕುತ್ತಾರೆ. ಆಗ ಅದು ಕಲ್ಲಾಗಿ ಬದಲಾಗತ್ತದೆ.ಅತನ ಮೇಲೆ ತಂಗೆಮ್ಮ ದೈವ ಬಂದು ನುಡಿ ಕೊಡುತ್ತದೆ. ಪೊನ್ನಂಗಾಲದಲ್ಲಿ ನೆಲೆಸಿದ ಕಾರಣ ಅವಳು ಪೊನ್ನಂಗಾಲತಮ್ಮೆ ಎಂದು ಹೆಸರು ಪಡೆದು ಆರಾಧನೆ ಪಡೆಯುತ್ತಾಳೆ .ಅವಳ ಸಹೋದರರು ಕೂಡ ದೈವಿಕ ಶಕ್ತಿ ಪಡೆದು ಆರಾಧನೆ ಪಡೆಯುತ್ತಾರೆ.

Wednesday 28 June 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ಭೂತಗಳು 401-402ಕಲಿಯಾಟ ಅಜ್ಜಪ್ಪ,ಕಾಟಾಳ ಬೊಲ್ತು,

ಕೊಡವರು ಕೂಡ ಅನೇಕ ಭೂತಗಳ ಆರಾಧನೆಯನ್ನು ಮಾಡುತ್ತಾರೆ.ಕೊಡವರು ಪೊನ್ನಂಗಾಲತಮ್ಮೆ,ಕಲಿಯಾಟ ಅಜ್ಜಪ್ಪ,ಕಾಟಾಳ ಬೊಲ್ತು ಮೊದಲಾದ ದೈವಗಳಿಗೆ ಕೋಲ ಕೊಟ್ಟು ಆರಾಧನೆ ಮಾಡುತ್ತಾರೆ.ದುರಂತ ಮತ್ತು ದೈವತ್ವ ಭೂತಾರಾಧನೆಯಲ್ಲಿ ಕಂಡುಬರುವ ವಿಶಿಷ್ಟ ವಿದ್ಯಮಾನ.
ಕಲಿಯಾಟ ಅಜ್ಜಪ್ಪ ಕೂಡ ಮಾನವ ಮೂಲದ ದೈವವಾಗಿದ್ದು ದುರಂತವನ್ನಪ್ಪ ನಂತರ ದೈವವಾಗಿ ಆರಾಧನೆ ಪಡೆಯುವ ಶಕ್ತಿಯಾಗಿದೆ.
ಈತನ ಮೂಲ ಹೆಸರು ಕಲಿಯಾಟ ಪೊನ್ನಪ್ಪ. ಈತ ಕೊಡವರ ಆರಾಧ್ಯ ದೈವ ಇಗ್ಗುತಪ್ಪನ ಅನುಗ್ರಹದಿಂದ ಜನ್ಮ ಪಡೆದವನು.ಈತನ ತಾಯಿಗೆ ಕನಸಿನಲ್ಲಿ ಇಗ್ಗುತಪ್ಪ ಕಾಣಿಸಿಕೊಂಡು ದೈವಿಕ ಶಕ್ತಿ ಇರುವ ಮಗು ಜನಿಸುತ್ತದೆ ಎಂದು ಅಭಯ ನೀಡಿತೆಂದು ಕಲಿಯಾಟ ಅಜ್ಜಪ್ಪ ಭೂತದ ಹಾಡಿನಲ್ಲಿ ಹೇಳಿದೆ.
ಕಲಿಯಾಟ ಪೊನ್ನಪ್ಪ ಐದು ವರ್ಷ ದ ಮಗುವಾಗಿದ್ದಾಗಲೇ ಹರೆಯದ ವಯಸ್ಸಿನ ಬೆಳವಣಿಗೆ ಹೊಂದಿದ್ದನು ಹತ್ತು ವರ್ಷ ವಾಗುವಾಗುವಷ್ಟರಲ್ಲಿ ಪೂರ್ಣ ಬೆಳವಣಿಗೆ ಹೊಂದುತ್ತಾನೆ.ಅವನು ಹತ್ತು ವಿಶಿಷ್ಟ ಶಕ್ತಿಗಳನ್ನು ಒಲಿಸಿಕೊಂಡಿದ್ದು ಮಾಂತ್ರಿಕ ಶಕ್ತಿಯನ್ನು ಪಡೆದಿದ್ದನು.ಅವನಂತೆಯೇ ಮಾಂತ್ರಿ ಶಕ್ತಿ ಹೊಂದಿದ್ದ ಕಾಟಾಳ ಬೊಲ್ತು ಎಂಬ ಯುವಕನ ಸ್ನೇಹ ಹೊಂದಿದ್ದನು.ಇವರಿಬ್ಬರು ಎಲ್ಲೆಡೆ ಸಂಚರಿಸಿ ತಮ್ಮ ಶಕ್ತಿಯಿಂದ ಜನರ ಮೆಚ್ಚುಗೆ ಪಡೆದಿದ್ದರು.ಇದು ಕಲಿಯಾಟ ಪೊನ್ನಪ್ಪ ನ ತಂದೆಗೆ ಇಷ್ಟವಾಗಲಿಲ್ಲ ಹಾಗಾಗಿ ಇವರು ಮನೆ ಬಿಟ್ಟು ಹೊರಟರು.ಬೇರಡ ಬೇರೆ ಊರು ಸುತ್ತಿ ಕೊನೆಗೆ ಕಾವೇರಿಯಮ್ಮನ ಮಡಿಲಾದ ಕೊಡಗಿನಲ್ಲಿ ನೆಲೆಸುತ್ತಾರೆ.ಒಬ್ಬ ತುಂಡರಸ ಇವರ ಸ್ನೇಹವನ್ನು ಬಯಸಿ ಚಿನ್ನದ ಕಡಗವನ್ನು ಕಳುಹಿಸಿ ಕೊಡುತ್ತಾನೆ. ಕಲಿಯಾಟ ಅಜ್ಜಪ್ಪ ಅವನ ಸ್ನೇಹವನ್ನು ಸ್ವೀಕರಿಸದೆ ಕಡಗವನ್ನು ಹಿಂದೆ ಕಳುಹಿಸುತ್ತಾನೆ. ಇದರಿಂದ ಕೋಪಗೊಂಡ ಅರಸ ತನ್ನ ಸೈನಿಕರ ಮೂಲಕ ಇವರ ಮೇಲೆ ಆಕ್ರಮಣ ಮಾಡಿತ್ತಾನೆ.ಆಗ ಕೊಡಗಿನ ಹಾಲೇರಿ ವಂಶದ ಅರಸ ಕುಟ್ಟಪಾಲೆ ಮಾಯಿಲ ಎಂಬ ಸೇನಾನಾಯಕನ ನೇತೃತ್ವದಲ್ಲಿ ಕಲಿಯಾಟ ಪೊನ್ನಪ್ಪ ನಿಗೆ ಸಹಾಯ ಮಾಡುತ್ತಾನೆ ಜೊತೆಗೆ ತಮ್ಮ ಮಾಂತ್ರಿ ಶಕ್ತಿಯಿಂದ ಇವರು ಪಾರಾಗುತ್ತಾರೆ.
ಮುಂದೆ ಒಂದು ದಿನ ಕುಟ್ಟಿರಿಂಜೆತ್ತಿ ಮೂಲ/ ತರವಾಡು ಮನೆಗೆ ಕಲಿಯಾಟ ಪೊನ್ನಪ್ಪ ಬರುತ್ತಾನೆ. ಆಗ ಆ ತುಂಡರಸ ಕಿಕಾಂಡ ಮನೆಯ ವೃದ್ದ ಮಹಿಳೆಗೆ ಹೇಳಿ ಕೊಟ್ಟು ವಿಷಪ್ರಾಶನ ಮಾಡಿಸುತ್ತಾನೆ.ಇದೇ ಸಮಯದಲ್ಲಿ ಆ ಮಹಿಳೆ ತುಂಡರಸನ ಸೈನಿಕರಿಗೆ ಮಾಹಿತಿ ಕೊಡುತ್ತಾಳೆ. ಅವರು ಪೊನ್ನಪ್ಪ ನ ತಲೆ ಕಡಿಯುತ್ತಾರೆ.ಇದು ತಿಳಿದ ಆತನ ಒಡನಾಡಿ ಕಾಟಾಳ ಬೊಲ್ತು ಕೂಡ ಪ್ರಾಣ ತ್ಯಜಿಸುತ್ತಾನೆ.ಇವರಿಬ್ಬರೂ ದೈವಿಕ ಶಕ್ತಿ ಪಡೆದು ಭೂತಗಳಾಗುತ್ತಾರೆ .ಅ ತುಂಡರಸ ಇವರನ್ನು ಮತ್ರವಾದಿಗಳ ಸಹಾಯದಿಂದ ಒಂದು ಕಲ್ಲಿನಲ್ಲಿ ಕಟ್ಟಿ ಹಾಕುತ್ತಾರೆ ಆಗ ಕುಟ್ಟ ಪಾಲೆ ಮಾಯಿಲ ಅವರನ್ನು ದಿಗ್ಭಂಧನದಿಂದ ಬಿಡಿಸುತ್ತಾನೆ.ಮುಂದೆ ಪೊನ್ನಪ್ಪ ಕಲಿಯಾಟ ಅಜ್ಜಪ್ಪ ಎಂಬ ಹೆಸರಿನ ದೈವವಾಗಿ ಆರಾಧನೆ ಪಡೆಯುತ್ತಾನೆ ಅವನ ಜೊತೆಗೆ ಕಾಟಾಳ ಬೊಲ್ತು ವಿಗೂ ಕೋಲ ನೀಡಿ ಆರಾಧನೆ ಮಾಡುತ್ತಾರೆ.© ಡಾ ಲಕ್ಷ್ಮೀ ಜಿ ಪ್ರಸಾದ
ಮಾಹಿತಿ ಮೂಲ
 ,ವಿಜಯ ಕರ್ನಾಟಕ ಕೊಡಗು ಎಡಿಷನ್ ನಲ್ಲಿ ಪ್ರಕಟವಾದ ಕೊಡವ ಭಾಷೆಯ ಬರಹ ಮತ್ತು ಸ್ನೇಹಿತೆ ವಿದ್ಯಾ ಬಾಯ್ದೆರೆಯಾಗಿ ನೀಡಿದ ಮಾಹಿತಿ

Sunday 4 June 2017

ಸೂಕ್ತವಲ್ಲದ ಲಿಪಿ ಬಳಸಿ ತುಳುಭಾಷೆಯನ್ನು ಹಾಳುಗೆಡವದಿರಿ © ಡಾ ಲಕ್ಷ್ಮೀ ಜಿ ಪ್ರಸಾದ

ಸೂಕ್ತವಲ್ಲದ ಲಿಪಿ ಬಳಸಿ ತುಳುಭಾಷೆಯನ್ನು ಹಾಳುಗೆಡವದಿರಿ © ಡಾ ಲಕ್ಷ್ಮೀ ಜಿ ಪ್ರಸಾದ

ಅನೇಕರು ತಿಗಳಾರಿ/ ತುಳು ಲಿಪಿ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಮೆಸೆಂಜರ್ ಮೂಲಕ ಹೆಚ್ಚಿನ ವರಿಗೆ ಬ್ಲಾಗ್ ಲಿಂಕ್ ಓಪನ್ ಅಗುತ್ತಿಲ್ಲವಂತೆ ಹಾಗಾಗಿ ಬ್ಲಾಗ್ ಬರಹವನ್ನು ಕಾಪಿ ಮಾಡಿ ಹಾಕಿರುವೆ

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ?

ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಹೊರತು ಬೇರೆ ಬೇರೆಯಲ್ಲ © ಡಾ ಲಕ್ಷ್ಮೀ ಜಿ ಪ್ರಸಾದ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ವೆಬ್ ನಲ್ಲಿ ತುಳು ವರ್ಣ ಮಾಲೆಯಲ್ಲಿಯೇ ದೋಷಗಳು ಇಲ್ಲಿ ಇದು ತಿಗಳಾರಿ ಲಿಪಿ ಎಂದು ಹೊರಗಡೆ ಪ್ರಸಿದ್ಧವಾಗಿದೆ ತುಳುನಾಡಿನ ಕೆಲವೆಡೆ ತುಳು ಲಿಪಿ ಎಂದು ಕರೆಯುತ್ತಾರೆ ಎಂಬ ಸತ್ಯವನ್ನು  ಮುಚ್ಚಿಟ್ಡು ತುಳು ಲಿಪಿ ಎಂದು ಮಾತ್ರ ಹೇಳಲಾಗಿದೆ  .

ಅದಿರಲಿ ತಿಗಳಾರಿ ಅಥವಾ ತುಳು ವರ್ಣಮಾಲೆಯಲ್ಲಿ ಹ್ರಸ್ವ ಎ ಒ ಸ್ವರಗಳಿಲ್ಲ ಇಲ್ಲಿ ತಿಗಳಾರಿ / ತುಳು ಲಿಪಿ ಯಲ್ಲಿ ರುವ ದೀರ್ಘ ಏ ಓ ಗಳನ್ನು ಬರೆದು ಅದರ ಕೆಳಗಡೆ ಹ್ರಸ್ವ ಎ ಒ ಎಂದು ಕನ್ನಡ ದಲ್ಲಿ ಬರೆದಿದ್ದಾರೆ ಕಳೆದ ವರ್ಷ ಏಳೆಂಟು ಲಿಪಿ ತಜ್ಞರು ಬಂದು ಏನೋ ವಿಚಾರ ಮಾಡಿದ್ದಾರಂತೆ ಆದರೂ ತುಳು ಅಕಾಡೆಮಿ ವೆಬ್ ನಲ್ಲಿ ಆದ ಇಷ್ಟು ದೊಡ್ಡ ಪ್ರಮಾದವನ್ನೇ ತಿದ್ದಿಲ್ಲ ,ತುಳು ಲಿಪಿ/ ತಿಗಳಾರಿ ಲಿಪಿ ಬಗ್ಗೆ ಒಂದು ಸಾಲಿನ ಮಾಹಿತಿ ಕೂಡಾ ಇಲ್ಲ ಇರುವ ವರ್ಣಮಾಲೆಯಲ್ಲಿ ಇಷ್ಟು ದೊಡ್ಡ ತಪ್ಪು ಯಾರಿಗೆ ಹೇಳೋಣ ? ರಿಜಿಸ್ಟ್ರಾರ್ ಗೆ ಈ ಬಗ್ಗೆ ಪೋನ್ ಮಾಡಿದರೆ ಬರೆದು ತಿಳಿಸಿ ಎಂಬ ಉತ್ತರ ಸಿಕ್ಕಿದೆ.
ಹಾಗಾಗಿ ಈ ಲಿಪಿ ಬಗ್ಗೆ ಮಾಹಿತಿ ಗೆ ಇಲ್ಲಿ ಓದಿ

ತುಳು ಭಾಷೆಯನ್ನು ಅಪಭ್ರಂಶಗೊಳಿಸಿ ವಿರೂಪ ಗೊಳಿಸಬೇಡಿ

ಭಾಷೆಯೊಂದಕ್ಕೆ ಲಿಪಿ ಇರಲೇ ಬೇಕೆಂದೇನೂ ಇಲ್ಲ ಜಗತ್ತಿನ ಹೆಚ್ಚಿನ ಭಾಷೆಗಳಿಗೆ ಸ್ವಂತ ಲಿಪಿಯಿಲ್ಲ ನಮ್ಮ ರಾಷ್ಟ್ರೀಯ ಭಾಷೆ ಹಿಂದಿ ಪ್ರಾಚೀನ ಭಾಷೆ ಸಂಸ್ಕೃತ ಜನಪ್ರಿಯ ಭಾಷೆ ಇಂಗ್ಲಿಷ್ ಗೂ ಸ್ವಂತ ‌ಲಿಪಿಯಿಲ್ಲ ಹಿಂದಿ ಸಂಸ್ಕೃತ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಷೆಗಳಿಗೆ ನಾಗರಿ ಲಿಪಿಯನ್ನು ಬಳಸುತ್ತಾರೆ ಇಂಗ್ಲಿಷ್ ಗೆ ರೋಮ್ ಲಿಪಿ ಬಳಸುತ್ತಾರೆ
ಈ ಹಿಂದೆ ಸಂಸ್ಕೃತ ಬರೆಯಲು ತಿಗಳಾರಿ ಲಿಪಿಯನ್ನು ಬಳಕೆ ಮಾಡುತ್ತಿದ್ದು ಅದನ್ನು  ತುಳುನಾಡಿನಲ್ಲಿ ಯೂ ಸಂಸ್ಕೃತ ದ ವೇದ ಮಂತ್ರಗಳನ್ನು ಬರೆಯಲು  ತುಳುನಾಡಿನ ಹವ್ಯಕ ,ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬಳಕೆ ಮಾಡಿದ್ದಾರೆ  ಜೊತೆಗೆ ಉತ್ತರ ಕನ್ನಡದ ಶಿವಮೊಗ್ಗ ಕೆಳದಿ ತಮಿಳುನಾಡಿನ ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ತುಳು ಬ್ರಾಹ್ಮಣರು ಸಂಸ್ಕೃತ ವೇದ ಮಂತ್ರಗಳನ್ನು ಬರೆಯಲು ಬಳಸಿದ್ದಾರೆ ಇದಕ್ಕೆ ಮೊದಲಿನಿಂದಲೂ ತಿಗಳಾರಿ ಲಿಪಿ ಎಂದು ಕರೆಯುತ್ತಾ ಇದ್ದರು ತುಳು ಲಿಪಿ ಎಂಬ ಹೆಸರೂ ಕೆಲವರು ಬಳಸಿದ್ದಾರೆ   ಆದರೆ ಪ್ರಸ್ತುತ  ತುಳು ಭಾಷೆಯ ಬರವಣಿಗೆಗೆ ಸೂಕ್ತವಾಗಿಲ್ಲ  ಯಾಕೆಂದರೆ ಇದರಲ್ಲಿ ತುಳು ಭಾಷೆಯಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ಇದರಿಂದಾಗಿ ಈ ಲಿಪಿಯಲ್ಲಿ ತುಳು ಭಾಷೆ ಎಂದು ಬರೆಯಲು ಸಾಧ್ಯವೇ ಇಲ್ಲ ಬದಲಿಗೆ ತುಳು ಭಾಷೇ ಎಂದು ಬರೆಯಬೇಕಾಗುತ್ತದೆ ಎಣ್ಣೆ ಬದಲು ಏಣ್ಣೆ ಪೊಣ್ಣು ಬದಲು ಪೋಣ್ಣು ಡೆನ್ನಾನ ಬದಲು ಡೇನ್ನಾನ ಎಡ್ಡೆ ಬದಲು ಏಡ್ಡೆ ತೆನೆ ಬದಲು ತೇನೆ ಕೊರಳು ಬದಲು ಕೋರಳು ಕೊಪ್ಪ ಬದಲು ಕೋಪ್ಪ ಕೊರಗಜ್ಜ ಬದಲು ಕೋರಗಜ್ಜ ಕೆರೆ ಬದಲು ಕೇರೆ  ಬರೆಯಬೇಕಾಗುತ್ತದೆ ಕೆರೆ ಕೇರೆಯಾದಾಗ ಕೆಬಿ ಕೇಬಿಯಾಗಿ,ಕೆಪ್ಪೆ ಕೇಪ್ಪೆಯಾಗಿ ಕೊಡಿ ಕೋಡಿಯಾಗಿ ,ಎರು ಏರು ಅಗಿ ,ಎರ್ಮ್ಮೆ ಏರ್ಮ್ಮೆಯಾಗಿ ಎಣ್ಮೆ ಏಣ್ಮೆಯಾಗಿ ಕೆಸರ್ ಕೇಸರ್ ಆಗಿ ರಾಮೆ ರಾಮೇ ಆಗಿ ಕೃಷ್ಷಪ್ಪೆ ಕೃಷ್ಣಪ್ಪೇ ಆಗಿ , ಪೊಸತು ಪೋಸತು ಪೊರ್ಲು ಬದಲು‌ ಪೋರ್ಲು ಆಗಿ ,ಬೆರ್ಮರ್ ಬೇರ್ಮರ್ ಆಗಿ ,ಪೊಡಿ ಬದಲು ಪೋಡಿಯಾಗಿ ಬೊಂಡ ಬದಲು ಬೋಂಡ ಅಗಿ ಕೊಡೆ ಕೋಡೆಯಾಗಿ ಬೆಲೆ ಬೇಲೆಯಾಗಿ ,ಕೆದು ಕೇದುವಾಗಿ ,ಕೆಮ್ಮು ಕೇಮ್ಮುವಾಗಿ ,ಎಡೆ ಏಡೆಯಾಗಿ ಅರ್ಥ ಅನರ್ಥವಾಗಿಬಿಡುತ್ತದೆ  ಯಾಕೆಂದರೆ ಈ ಲಿಪಿಯಲ್ಲಿ ಹ್ರಸ್ವ ಎ ಒ ಗಳು ಇಲ್ಲ‌ ಹೀಗೆ ಬಳಸಿದರೆ  ತುಳು ಭಾಷೆ ತನ್ನ ಮೂಲ ರೂಪವನ್ನು ಕಳೆದುಕೊಂಡು ಅಪಭ್ರಂಶ ಗೊಳ್ಳುತ್ತದೆ ಹಾಗಾಗಿ ಈಗ ಸಂಸ್ಕೃತ ವೇದ ಮಂತ್ರಗಳ ಬಳಕೆಗಾಗಿ ರೂಪುಗೊಂಡ ತಿಗಳಾರಿ ಲಿಪಿ/ ತುಳುಲಿಪಿ ಯನ್ನು ಪರಿಷ್ಕರಿಸಿ ಕಲಿಸುವ ಬಳಸುವ ಅಗತ್ಯವಿದೆ

ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಮಾತ್ರ ಬಳಕೆಗೆ ತಂದದ್ದಲ್ಲ ಹವ್ಯಕ ಚಿತ್ಪಾವನ ಕರಾಡ ಕೋಟ ಬ್ರಾಹ್ಮಣರು ಉತ್ತರ ಕನ್ನಡ ಶಿವಮೊಗ್ಗ ಕೆಳದಿಯ ಕನ್ನಡ ಬ್ರಾಹ್ಮಣರು,ಮೈಸೂರಿನ ಬೆಂಗಳೂರಿನ‌ಕೆಲವು ಬ್ರಾಹ್ಮಣ ಸಮುದಾಯಗಳು  ತಂಜಾವೂರು ಕಂಚಿಯ  ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ಧರ್ಮಸ್ಥಳ ದಲ್ಲಿ ಸಂಗ್ರಹವಾಗಿರುವ ಒಂದೂವರೆ ಸಾವಿರದಷ್ಟು ತಿಗಳಾರಿ / ತುಳು ಲಿಪಿ ಹಸ್ತಪ್ರತಿ ಗಳಲ್ಲಿ ಅನೇಕ ಹವ್ಯಕ ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬರೆದ ಅವರುಗಳ ಮನೆಯಲ್ಲಿ ಸಿಕ್ಕ ಹಸ್ತಪ್ರತಿ ಗಳಿವೆ ನಮ್ಮ ( ನಾವು ಹವ್ಯಕ ರು) ಮನೆಯಲ್ಲಿಯೂ ಅನೇಕ ತಿಗಳಾರಿ ಲಿಪಿ ಯ ಹಸ್ತಪ್ರತಿ ಗ್ರಂಥಳಿದ್ದು ಇವರಲ್ಲವು ಮಂತ್ರ ಪ್ರಯೋಗಗಳಾಗಿವೆ ಹವ್ಯಕರಲ್ಲಿ ಈ ಲಿಪಿಯಲ್ಲಿ ಹವ್ಯಕ ಭಾಷೆಯಲ್ಲಿ ಪತ್ರ ವ್ಯವಹಾರ ಕಡತ ನಿರ್ವಹಣೆಗಳಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಈ ಲಿಪಿಯಲ್ಲಿ ಬರೆದ ಹವ್ಯಕ ಕನ್ನಡ ದ ಪತ್ರಗಳು ನೂರಕ್ಕಿಂತ ಹೆಚ್ಚು ಇವೆ
ಇನ್ನು ಅದು ಬ್ರಾಹ್ಮಣರು ಬಳಕೆಗೆ ತಂದ ಲಿಪಿ ಎಂಬುದಕ್ಕೆ ಅದರಲ್ಲಿ ಸಿಕ್ಕ ಎಲ್ಲಾ ಕೃತಿಗಳನ್ನು ಬ್ರಾಹ್ಮಣರು ಬರೆದಿದ್ದು ಒಂದೇ ಒಂದು ಕೃತಿ ಬೇರೆಯವರು ಬರೆಯದಿರುವವುದು ಈಗಲೂ ಅದನ್ನು ಹೇಳಿಕೊಟ್ಟವರು ಬ್ರಾಹ್ಮಣರು ಎಂಬ ಆಧಾರವೇ ಸಾಕು
ಲಿಪಿ ರೂಪಿಸಲು ಎಷ್ಟು ಜನ ಇದ್ದಾರೆ ಎಂಬುದು ಮುಖ್ಯವಲ್ಲ ಅದನ್ನು ಯಾರು ಯಾಕೆ ಬಳಸಿದ್ದಾರೆ ಎಂಬುದು ಮುಖ್ಯ ವಾಗುತ್ತದೆ
ಇದರಲ್ಲಿ ತುಳು ಭಾಷೆಯ ಹ್ರಸ್ವ ಎಒ  ಇಲ್ಲ ಇದರಲ್ಲಿ  ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ
ಅಲ್ಲದೆ ತುಳು ಭಾಷೆಯ ಏಳು ಕೃತಿಗಳು ಮಾತ್ರ ಆ ಲಿಪಿ ಯಲ್ಲಿ ಇರುವುದು ಅದರಲ್ಲಿ ಯೂ ಹ್ರಸ್ವ ಎ ಒ ಗಳು ಇಲ್ಲದ ಕಾರಣ ತುಂಬಾ ದೋಷಗಳಿವೆ ತುಳು ಕರ್ಣ ಪರ್ವ ವನ್ನು ಪುಣಿಚಿತ್ತಾಯ ರು ಈ ಹಿಂದೆ ನನಗೆ ಗೌರವ ಪ್ರತಿ ನೀಡಿದ್ದು ಅದರಲ್ಲಿ ಈ ದೋಷಗಳಿರುವುದನ್ನು ಅವರೂ ಹೇಳಿದ್ದಾರೆ
ಲಿಪಿಯೊಂದು ಇದ್ದಕ್ಕಿದ್ದಂತೆ ರೂಪು ಗೊಳ್ಳುವುದಿಲ್ಕ ಇದು ತಮಿಳಿನ ಗ್ರಂಥ ಲಿಪಿಯನ್ನು ಹೋಲುತ್ತಿದ್ದು ಅದರಿಂದ ರೂಪುಗೊಂಡಿದೆ ಗ್ರಂಥ ಲಿಪಿ ತುಳುನಾಡಿನಲ್ಲಿ ಇರಲಿಲ್ಲ ದಕ್ಷಿಣ ಭಾರತದ ್ಲ್ಲಿ ವೇದಾಧ್ಯಯನ ಕೇಂದ್ರ ಇದ್ದದ್ದು ತಮಿಳುನಾಡಿನ ತಂಜಾವೂರು ಮತ್ತು ಕಂಚಿಗಳಲ್ಲಿ
ಅಲ್ಲಿನ ತಮಿಳು ಲಿಪಿಯಲ್ಲಿ ಮುವತ್ತಾರು ಅಕ್ಷರಗಳು ಮಾತ್ರ ಇದ್ದು ಅದು ಸಂಸ್ಕೃತ ವೇದಾ ಮಂತ್ರಗಳ ಬರವಣಿಗೆಗೆ ಸೂಕ್ತ ವಾಗಿರಲಿಲ್ಲ ಹಾಗಾಗಿ ಅವರು ತಮಿಳು ಲಿಪಿ ಯನ್ನು ಪರಿಷ್ಕರಿಸಿ ಸಂಸ್ಕೃತ ಕ್ಕೆ ಸೂಕ್ತ ವಾದ ಗ್ರಂಥ ಲಿಪಿ ರೂಪಿಸಿದರು ಅಲ್ಲಿ ನಾಗರಿ ಲಿಪಿ ಪರಿಚಿತವಾಗಿರಲಿಲ್ಲಅಲ್ಲಿಗೆ ವೇದಾಧ್ಯಯನ ಮಾಡಲು ಹೋದ ದಕ್ಷಿಣ ಕನ್ನಡ ಉತ್ತರ ಕನ್ನಡ ದ  ಬ್ರಾಹ್ಮಣ ರು ಅಲ್ಲಿನ ಗುರುಗಳಿಂದ ಗ್ರಂತ ಲಿಪಿ ಕಲಿತು ವೇದ ಮಂತ್ರಗಳ ನ್ನು ಅದರಲ್ಲಿ ಬರೆದರು ನಂತರ ಕಾಲಾಂತರದಲ್ಲಿ ಅದು ಬದಲಾಗುತ್ತಾ ತಿಗಳಾರಿ ಲಿಪಿ ಆಯಿತು ಹಾಗಾಗಿ ಅದನ್ನು ತಿಗಳರ ಎಂದರೆ ತಮಿಳರ ಆರ್ಯ ಎಂದರೆ ಸಂಸ್ಕೃತ ಲಿಪಿ ಎಂದು ಕರೆದರು ಅದು ಹ್ರಸ್ವ ಗೊಂಡು ತಿಗಳಾರಿ ಅಯಿತು ಇದನ್ನು ಬಳಕೆ ಮಾಡಿದವರಲ್ಲಿ ಕೋಟ ಹವ್ಯಕ ಚಿತ್ಪಾವನ ತುಳು  ಕರಾಡ ಬ್ರಾಹ್ಮಣರು ಶಿವಮೊಗ್ಗ ಕೆಳದಿ ಉತ್ತರ ಕನ್ನಡ ದ ಕನ್ನಡ ಬ್ರಾಹ್ಮಣರು ತಂಜಾವೂರು ಕಂಚಿಯ ಬ್ರಾಹ್ಮಣರು  ಸೇರಿದ್ದಾರೆ ಇವರಲ್ಲಿ ತುಳು ಬ್ರಾಹ್ಮಣರು ಕೇರಳಕ್ಕೆ ದೇವಸ್ಥಾನ ಗಳ ಪೂಜೆಗೆ ಹೋದಾಗ ತಿಗಳಾರಿ ಲಿಪಿ ಅಲ್ಲಿ ಹರಡಿ ಅಲ್ಲಿ ನವರು ಅದನ್ನು ಮಲೆಯಾಳ ಭಾಷೆಗೆ ಸೂಕ್ತ ವಾಗುವಂತೆ ಪರಿಷ್ಕರಿಸಿ ಬಳಸಿದರು ಅವರು ಆರಂಭದಲ್ಲಿ ಅದನ್ನು ತುಲುವನತ್ತಿಲ್ ಎಂದರೆ ತುಲುವರ ಲಿಪಿ ಎಂದು ಕರೆದಿದ್ದು ಅವರು ರೂಪಿಸಿದ ಲಿಪಿ ಯನ್ನು ತುಲು ಮಲೆಯಾಳ ಲಿಪಿ ಎಂದು ಕರೆದು ಕಾಲಾಂತರದಲ್ಲಿ ಮಲೆಯಾಳ ಲಿಪಿ ಎಂದು ಮಾತ್ರ ಹೆಸರು ಉಳಿಯಿತು
ಆದರೆ ಇದು ತುಲು ಭಾಷೆಯ ಲಿಪಿ ಅಲ್ಲ
ಸಂಸ್ಕೃತ ಭಾಷೆಗೆ ಸ್ವಂತ ಲಿಪಿ ಇಲ್ಲ ಉತ್ತರದಲ್ಲಿ ನಾಗರಿ ಲಿಪಿ ತಮಿಳುನಾಡಿನಲ್ಲಿ ಗ್ರಂಥ ಲಿಪಿ ತೆಲುಗರು ತೆಲುಗು ಲಿಪಿ ಯನ್ನು ಸಂಸ್ಕೃತ ಕ್ಕೆ ಬಳಸುತ್ತಾ ಇದ್ದರು
ಅಕಾಡೆಮಿ ಗೆ ಹೇಳಿ ಲಿಪಿ ಯ ಇತಿಹಾಸವನ್ನು ತಿಳಿಸಿ ಪರಿಷ್ಕರಿಸಿ ಬಳಕೆಗೆ ತರುವ ಕೆಲಸ ಆಗಬೇಕಿದೆ ಅಕಾಡೆಮಿ ವೆಬ್ ಹಾಕಿದ ತುಳು ವರ್ಣ ಮಾಲೆ ಚಾರ್ಟ್ ನಲ್ಲಿ ತಪ್ಪಿದೆ ಹಾಗೆ ನೋಡಿದರೆ ವಿದ್ಯಾ ಶ್ರೀ ಅವರು ಪ್ರಕಟಿಸಿದ ವರ್ಣಮಾಲೆ ಸರಿ ಇದೆ .ತಪ್ಪನ್ನು ತಿದ್ದಿ ಪರಿಷ್ಕರಿಸದೆ ಬಳಸಿದರೆ ತುಳು ಭಾಷೆ ಅಪಭ್ರಂಶ ಗೊಂಡು ವಿರೂಪ ಗೊಳ್ಳುತ್ತದೆ

1 ತುಳುನಾಡಿನ ವ್ಯಾಪ್ತಿ ಉಡುಪಿ ಕಾಸರಗೋಡು ದ.ಕ ಜಿಲ್ಲೆ ತಿಗಳಾರಿ ಲಿಪಿ ತಮಿಳುನಾಡಿನ ತಂಜಾವೂರು ಕಂಚಿ ಧರ್ಮ ಪುರ ಕೃಷ್ಣ ಪುರ ಗಳಲ್ಲಿ ಬಳಕೆಇದೆ ಕರ್ನಾಟಕ ದಲ್ಲಿ ಉತ್ತರ ಕನ್ನಡ ಶಿವಮೊಗ್ಗ ಮಲೆನಾಡಿನಲ್ಲಿ ಬಳಕೆ ಇತ್ತು ತುಳು ಭಾಷೆ ಮತ್ತು  ತುಳುವರು ಇಲ್ಲದ ಕಡೆಯೂ ಬಳಕೆಯಲ್ಲಿತ್ತು

2, ಈ ಲಿಪಿಯಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಿಕ್ಕಿದ್ದು ಅವೆಲ್ಲವೂ ಸಂಸ್ಕೃತ ವೇದ ಮಂತ್ರಗಳಾಗಿವೆ  ಕೇವಲ ಏಳು‌ ತುಳು ಕೃತಿಗಳು ಮಾತ್ರ ಈ ಲಿಪಿಯಲ್ಲಿ ಇವೆ

3 ಇದು ತುಳು ಭಾಷೆಗೆ ಸೂಕ್ತ ವಾಗಿಲ್ಲ ಇದರಲ್ಲಿ  ತುಳುವಿನ ಎಲ್ಲ ಅಕ್ಷರಗಳು ಇಲ್ಲ ಇದರಲ್ಲಿ ತುಳುವಿನಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ತುಳುವಿನಲ್ಲಿ ಇಲ್ಲದೆ ಇರುವ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ

4 ಇದು ಸಂಸ್ಕೃತ ವನ್ನು ಬರೆಯಲು ರೂಪುಗೊಂಡ ಲಿಪಿಯಾಗಿದ್ದು ಸಂಸ್ಕೃತ ದ ಎಲ್ಲ ಅಕ್ಷರಗಳು ಇವೆ ಉದಾ ಸಂಸ್ಕೃತ ದಲ್ಲಿ ದೀರ್ಘ ಋ ಇದೆ ಇದರಲ್ಲೂ ಇದೆ ಲೃ ಅನ್ನುವ ವಿಶಿಷ್ಠವಾದ ಅಕ್ಷರ ಸಂಸ್ಕೃತ ದಲ್ಲಿದೆ ಇದರಲ್ಲೂ ಅದು ಇದೆ ಸಂಸ್ಕೃತ ದಲ್ಲಿ ಹ್ರಸ್ವ ಎ ಒ ಗಳು ಇಲ್ಲ ಹಾಗಾಗಿ ಇದರಲ್ಲೂ ಇಲ್ಲ

5 ಇದರಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಂಸ್ಕೃತ ದಲ್ಲಿವೆ ಅವುಗಳಲ್ಲಿ 99 .9% ಶೇಕಡ ವೇದ ಮಂತ್ರಗಳು

6 ಒಂದು ಲಿಪಿ ತನ್ನಿಂದ ತಾನೇ ಸೃಷ್ಟಿ ಯಾಗುವುದಿಲ್ಲ ಬಳಕೆಯಲ್ಲಿರುವ ಒಂದು ಲಿಪಿ ಬದಲಾಗುತ್ತಾ ಕಾಲಾಂತರದಲ್ಲಿ ಇನ್ನೊಂದು ಲಿಪಿ ಯಾಗುತ್ತದೆ ಮೂಲ ಲಿಪಿಗೂ ಹೊಸ ಲಿಪಿಗೂ 50- 60% ವ್ಯತ್ಯಾಸ ಉಂಟಾದಾಗ ಅದನ್ನು ಇನ್ನೊಂದು ಲಿಪಿಯಾಗಿ ಗುರುತಿಸುತ್ತಾರೆ ಆ ಲಿಪಿ ಬೆಳೆದ ಪರಿಸರದಲ್ಲಿ ಅದಕ್ಕೆ ಮೂಲವಾಗಿರುವ ಲಿಪಿ ಇರಲೇ ಬೇಕು ತಿಗಳಾರಿ ಲಿಪಿ ಗೆ ಮೂಲವಾದ ಆರ್ಯ ಎಳತ್ತು /ಗ್ರಂಥ ಲಿಪಿ ತಮಿಳುನಾಡಿನ ಪರಿಸರದಲ್ಲಿ ಪ್ರಚಲಿತವಿದೆ ತುಳುನಾಡಿನಲ್ಲಿ ಇಲ್ಲ

7 ತುಳು ಲಿಪಿಯನ್ನು ವಿದ್ಯಾ ಶ್ರೀ ಅವರಿಗೆ ಹೇಳಿಕೊಟ್ಟ ಲಿಪಿ ತಜ್ಞ ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ, ಬೇರೆ ಬೇರೆಯಲ್ಲ ತಿಗಳಾರಿ ಎಂದು ಬರೆದುಬ್ರಾಕೆಟ್ ಒಳಗೆ ತುಳು ಲಿಪಿ ಎಂದು ಅಥವಾ ತುಳು ಲಿಪಿ ಎಂದು ಬರೆದು ಬ್ರಾಕೆಟ್ ಒಳಗೆ ತಿಗಳಾರಿ ಲಿಪಿ ಎಂದು ಬರೆಯಬೇಕು ಎಂದು ತಿಳಿಸಿದ್ದಾರೆ. (ಅವರು ಹೀಗೆ ಹೇಳಿದ ಬಗ್ಗೆ ದಾಖಲೆ ಇದೆ)ಆದರೆ ಇವರಿಂದ ಲಿಪಿ ಕಲಿತು ಪ್ರಚಾರ ಮಾಡುವ ತರಗತಿ ಮಾಡುವ ವಿದ್ಯಾ ಅವರು‌ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ತಪ್ಪು ಮಾಹಿತಿ ಹರಡುತ್ತಿದ್ದಾರೆ ಜೊತೆಗೆ ಬ್ರಾಹ್ಮಣರು ತುಳು ಲಿಪಿಯನ್ನು ತಿಗಳಾರಿ ಎಂದು ಕರೆದು ಅಡಗಿಸಿ ಇಟ್ಟು ತುಳುವರಿಗೆ ಸಿಗದ ಹಾಗೆ ಮಾಡಿದರು ಎಂದು ಹೇಳುತ್ತಾ ಜನರಲ್ಲಿ ಬ್ರಾಹ್ಮಣ ದ್ವೇಷ ಬಿತ್ತಿ ಸಾಮಾಜಿಕ ಸ್ವಾಸ್ಥ್ಯ ವನ್ನು ಹಾಳುಗೆಡವುತ್ತಾ ಇದ್ದಾರೆ
8 ಲಿಪಿ ತಜ್ಞರಾದ ಡಾ .ಪದ್ಮನಾಭ ಕೇಕುಣ್ಣಾಯ ಅವರು ತುಳುವಿಗೆ ಲಿಪಿ ಇರುವುದಾದರೂ ಅದು ಮೂಲತ ತಿಗಳಾರಿ ಲಿಪಿ ಹೊರಗಡೆ ಅದು ತಿಗಳಾರಿ ಎಂದು ಪ್ರಸಿದ್ದಿ ಪಡೆದಿದೆ ಹಾಗಾಗಿ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ಹೇಳುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ತುಳು ಲಿಪಿ ಎಂದು ಮೊದಲಿಗೆ ಗುರುತಿಸಿದ ಡಾ.ವೆಂಕಟ್ರಟಜ ಪುಣಿಚಿತ್ತಾಯರು ಕೂಡ ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ ಎಂದು ಅವರಿಗೆ ಆತ್ಮೀಯ ರಾಗಿದ್ದ ಡಾ.ಪದ್ಮನಾಭ ಕೇಕುಣ್ಣಾಯ ತಿಳಿಸಿದ್ದಾರೆ.
9 ಲಿಪಿ ತಜ್ಞರಾದ ಡಾ.ಗೀತಾಚಾರ್ಯ ತುಳುವಿಗೆ ಲಿಪಿ ಇರಲಿಲ್ಲ, ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಯನ್ನು ತುಸು ಮಾರ್ಪಡಿಸಿ ತುಳು ಲಿಪಿ ರೂಪಿಸಿದರು ಎಂದು ಹೇಳಿದ್ದಾರೆ
10 ಲಿಪಿ ತಜ್ಞರಾದ ಡಾ.ಗುಂಡಾ ಜೋಯಿಸ್ ಕೆಳದಿ ವೆಂಕಟೇಶ ಜೋಯಿಸ್ ಡಾ.ಪಿವಿ ಕೃಷ್ಣ ಮೂರ್ತಿ ಮೊದಲಾದವರು ಅದು ತಿಗಳಾರಿ ಲಿಪಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ
11  ಇದರಲ್ಲಿ  ಉಳು ಭಾಷೆಯ ಹ್ರಸ್ವ ಎ ಒ ಗಳಿಗೆ ಅಕ್ಷರ ಇಲ್ಲ   ಸಂಸ್ಕೃತ ದಲ್ಲಿ ಮಾತ್ರ ಇರುವ ದೀರ್ಘ ಋ ಇದೆ ಅಲ್ಲದೆ ತುಳುವಿನ ವಿಶಿಷ್ಟ ಉಚ್ಚಾರಣೆ ಗಳಿಗೆ ರೇಖಾ ಸಂಕೇತ ಅಥವಾ ಅಕ್ಷರಗಳು ಇಲ್ಲ
12 ಪ್ರಸ್ತುತ ತಿಗಳಾರಿ ಲಿಪಿಯ ಸುಮಾರು ಹತ್ತು  ಸಾವಿರದ ಹಸ್ತ ಪ್ರತಿಗಳು ಸಿಕ್ಕಿದ್ದು ಇವುಗಳು ತಮಿಳುನಾಡಿನ  ತಂಜಾವೂರು, ಕಂಚಿ ,ಧರ್ಮಪುರಿ,ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ,,ಕಾಸರಗೋಡು ಉಡುಪಿ ದಕ್ಷಿಣ ಕನ್ನಡ ಜಿಲ್ಲೆ, ಕೆಳದಿ ಮೊದಲಾದ ಕಡೆ ಸಿಕ್ಕಿದವುಗಳಾಗಿವೆ ಇವುಗಳಲ್ಲಿ ಏನಿದೆ ಎಂದು ತಿಗಳಾರಿ ಬಲ್ಲವರು ಓದಿದ್ದು .ಇವೆಲ್ಲವೂ ಸಂಸ್ಕೃತ ಭಾಷೆಯಲ್ಲಿಬರೆದ ವೇದ ಮಂತ್ರ ಪುರಾಣ ಕೃತಿಗಳು ಆಗಿವೆ ಎಂದು ತಿಳಿಸಿದ್ದಾರೆ
 13 ತುಳುನಾಡಿನಲ್ಲಿ ಸಿಕ್ಕ ಹಸ್ತ ಪ್ರತಿಗಳು ಸುಮಾರು ಒಂದೂವರೆ ಸಾವಿರ ಇವುಗಳನ್ನು ಕೂಡ ತೆರೆದು ಓದಿದ್ದು ಇವುಗಳಲ್ಲಿ ಏಳು ತುಳು ಭಾಷೆಯ ಕೃತಿಗಳು ,ಒಂದು ಕನ್ನಡ ಭಾಷೆಯ ಜನಪದ ಹಾಡುಗಳು ಬಿಟ್ಟರೆ ಉಳಿದವುಗಳೆಲ್ಲ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಎಂದು ಧರ್ಮಸ್ಥಳದ ಹಸ್ತ ಪ್ರತಿ ಅಧ್ಯಯನ ಕೇಂದ್ರದ ಮುಖ್ಯಸ್ಥ ರಾದ ಡಾ ವಿಘ್ನರಾಜ ಭಟ್ ತಿಳಿಸಿದ್ದಾರೆ
15 ತಿಗಳಾರಿ ಲಿಪಿ ತೀರ ಇತ್ತೀಚಿನ ವರೆಗೂ ಬಳಕೆಯಲ್ಲಿತ್ತು ಹಾಗಾಗಿ ಅದರಲ್ಲಿನ ಹತ್ತು ಸಾವಿರಕ್ಕಿಂತ ಹೆಚ್ಚಿನ ಸಂಸ್ಕೃತ ಹಸ್ತಪ್ರತಿ ಗಳು ಲಭ್ಯವಾಗಿವೆ ಆದರೆ ತುಳು ಭಾಷೆಯ ಕೃತಿಗಳು ಲಭಿಸಿದ್ದು ಕೇವಲ ಏಳು
16 ತುಳುನಾಡಿನಲ್ಲಿ ಈ ಲಿಪಿಯ ಒಂದೂವರೆ ಸಾವಿರದಷ್ಟು ಸಂಸ್ಕೃತ ಹಸ್ತಪ್ರತಿ ಗ್ರಂಥಗಳು ಸಿಕ್ಕಿದೆ ಆದರೆ ತುಳುವಿನದ್ದು ಸಿಕ್ಕಿದ್ದು ಏಳು ಮಾತ್ರ ಒಂದೊಮ್ಮೆ ಇದು ತುಳು ಭಾಷೆ ಬರೆಯಲು ಬಳಕೆಗೆ ಇದ್ದಿದ್ದರೆ  ಲಿಪಿ ಆಗಿರುತ್ತಿದ್ದರೆ ಕೊನೆಯ ಪಕ್ಷ ತುಳುನಾಡಿನಲ್ಲಿ ಸಿಕ್ಕ ಹಸ್ತಪ್ರತಿ ಗಳಲ್ಲಿಯಾದರೂ ಹೆಚ್ಚಿನ ಕೃತಿಗಳು ತುಳುಭಾಷೆಯದು ಆಗಿರುತ್ತಿತ್ತು ,ತಿಗಳಾರಿ ಇತ್ತೀಚಿನ ವರೆಗೂ ಬಳಕೆಯಲ್ಲಿದ್ದ ಕಾರಣ ತುಳುವಿನ  ಎಲ್ಲಾ ಹಸ್ತಪ್ರತಿ ಗಳು ಕಳೆದು ಹೋಗಿರುವ ಸಾಧ್ಯತೆ ಇಲ್ಲ ಹಾಗೆ ಕಳೆದು ಹೋಗುತ್ತಿದ್ದರೆ ಇದೇ ಲಿಪಿಯ ಲ್ಲಿ ಬರೆದ ಸಂಸ್ಕೃತ ವೇದ ಮಂತ್ರಗಳ ಹಸ್ತ ಪ್ರತಿಗಳು  ಕೂಡ ಉಳಿಯುತ್ತಿರಲಿಲ್ಲ ಹಾಗಾಗಿ  ಈ ಲಿಪಿಯಲ್ತುಲಿ ಳುಭಾಷೆಯಲ್ಲಿ ಲಿಖಿತ ಸಾಹಿತ್ಯ ರಚನೆ ಆದದ್ದು ತೀರಾ ತೀರಾ ಕಡಿಮೆ  ಎಂದು ಹೇಳಬಹುದು .ಬನ್ನಂಜೆ ಗೋವಿಂದ ಆಚಾರ್ಯರು ತೌಳವ ಬ್ರಾಹ್ಮಣರು ಇದನ್ನು ಬಳಕೆಗೆ ತಂದ ಕಾರಣ ಇದಕ್ಕೆ  ತುಳು ಲಿಪಿ ಎಂದು ಹೆಸರು ಇದನ್ನು ಬೇರೆಕಡೆ ತಿಗಳಾರಿ ಎಂದು ಕರೆಯುತ್ತಾರೆ. ಇದು ತುಳು ಭಾಷೆಯ ಲಿಪಿ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

17 ಈ ಎಲ್ಲಾ ಆಧಾರಗಳು  ತಿಗಳಾರಿ ಮತ್ತು ತುಲು ಲಿಪಿ ಎರಡೂ ಒಂದೇ ಬೇರೆ ಬೇರೆಯಲ್ಲ  ಎಂದು ಪ್ರೂವ್ ಮಾಡುತ್ತವೆ ಇದು ಮೂಲತ ತಿಗಳಾರಿ ಲಿಪಿ ತುಳುನಾಡಿನ ಕೆಲವೆಡೆ ಮಾತ್ರ ಇದನ್ನು ತುಳು ಲಿಪಿ ಎಂದು ಕರೆದಿದ್ದಾರೆ
18 "ತಿಗಳಾರಿ ಲಿಪಿ ಯನ್ನು ತಮಿಳು ನಾಡಿನ ತಂಜಾವೂರು ಕಂಚಿಗಳಲ್ಲಿ ವೇದಾಧ್ಯಯನ ‌ಮಾಡಲು ಹೋದ ತುಳುನಾಡು ಹಾಗೂ ಮಲೆನಾಡಿನ ಬ್ರಾಹ್ಮಣರು ಕಲಿತು ಬಳಕೆಗೆ ತಂದ ಕಾರಣ ಅದು ತುಳು ನಾಡು ಮಲೆನಾಡಿನ ಪರಿಸರದಲ್ಲಿಯೂ ಹರಡಿತು ,ತುಳುನಾಡಿನ ಕೆಲವೆಡೆ ಅದನ್ನು ತುಳು ಲಿಪಿ ಎಂದು ಕರೆದಿದ್ದಾರೆ "ಎಂದು ಡಾ ವಿಘ್ನರಾಜ ಭಟ್ ಡಾ ವೆಂಕಟೇಶ ಜೋಯಿಸ್ ಡಾ ಗುಂಡಾ ಜೋಯಿಸ್ ಡಾ ದೇವರ ಕೊಂಡಾ ರೆಡ್ಡಿ ಡಾ ಪದ್ಮನಾಭ ಕೇಕುಣ್ಣಾಯ ಡಾ ವೆಂಕಟ್ರಾಜ ಪುಣಿಚಿತ್ತಾಯ ,ಡಾ ಬನ್ನಂಜೆ ಗೋವಿಂದಾಚಾರ್ಯರ ಮೊದಲಾದ ಲಿಪಿ ತಜ್ಞರು, ವಿದ್ವಾಂಸರು ಅಭಿಪ್ರಾಯಪಡುತ್ತಾರೆ
19 ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದದ್ದು ಅಲ್ಲ ತುಳುನಾಡ ಹವ್ಯಕ ಬ್ರಾಹ್ಮಣರು ಕೋಟ ಕರಾಡ ಚಿತ್ಪಾವನ ಬ್ರಾಹ್ಮಣರು, ಶಿವಮೊಗ್ಗ ಉತ್ತರ ಕೆಳದಿ ಯ ಬ್ರಾಹ್ಮಣರು ಈ ಲಿಪಿಯನ್ನು ಬಳಕೆ ಮಾಡುತ್ತಿದ್ದರು ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆ ಮಾಡುತ್ತಿದ್ದರು ತುಳುನಾಡಿನಲ್ಲಿ ಸುಮಾರು ಒಂದೂವರೆ ಸಾವಿರ ಸಂಸ್ಕೃತ ಹಸ್ತ ಪ್ರತಿ ಗಳು ಈ ಲಿಪಿಯಲ್ಲಿ ಸಿಕ್ಕಿದ್ದು ಅದರಲ್ಲಿ ಹವ್ಯಕ ಕೋಟ ಚಿತ್ಪಾವನ ಕರಾಡ ಮರಾಠಿ ಬ್ರಾಹ್ಮಣರು ಬರೆದ ಕೃತಿಗಳು ಇವೆ ಇವುಗಳಲ್ಲಿ ತುಳುಭಾಷೆಯಲ್ಲಿ ಇರುವ ಕೃತಿಗಳು ಕೇವಲ ಏಳು ಮಾತ್ರ .ಈ ಲಿಪಿಯ ಹತ್ತ ಸಾವಿರಕ್ಕಿಂತ ಹೆಚ್ಚು ಹಸ್ತಪ್ರತಿ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಸಿಕ್ಕಿದ್ದು ಇವು ಶಿವಮೊಗ್ಗ ಕೆಳದಿ ರಾಮಚಂದ್ರಾಪುರ ಉತ್ತರ ಕರ್ನಾಟಕ ದ ತುಳುವೇತರ ಬ್ರಾಹ್ಮಣ ರ ಮನೆಯಲ್ಲಿ ಸಿಕ್ಕಿವೆ ಮೈಸೂರು ನಲ್ಲೂ ಬೆಂಗಳೂರಿನಲ್ಲಿ ತಮಿಳುನಾಡಿನ ತಂಜಾವೂರು  ಕಂಚಿ ಯ ತುಳುವರಲ್ಲದ ಇತರ ಬ್ರಾಹ್ಮಣರ ಮನೆಗಳು ಬರೆದಿರುವುದು ಸಿಕ್ಕಿವೆ. ಹವ್ಯಕ ಬ್ರಾಹ್ಮಣರು ಹವ್ಯಕರ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡುತ್ತಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಇಂಥಹ ನೂರಕ್ಕಿಂತ ಹೆಚ್ಚಿನ ಪತ್ರಗಳಿವೆ ಹಾಗಾಗಿ ಇದನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದರು ಎನ್ನುವುದು ಸರಿಯಲ್ಲ

20 ವಿದ್ಯಾ ಶ್ರೀ ಯವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಬೇರೆ ಬೇರೆ ಎಂಬುದಕ್ಕೆ ಆಧಾರವಾಗಿ ದೇವರಾಜ ಸ್ವಾಮಿ ಅವರ ಕೃತಿಯಲ್ಲಿನ ತಿಗಳಾರಿ ಮತ್ತು ತುಳು ವರ್ಣಮಾಲೆ ಚಿತ್ರ ಚಿತ್ರವನ್ನು ಪೇಸ್ ಬುಕ್ ನಲ್ಲಿ ಹಾಕಿದ್ದು ಅದರಲ್ಲಿನ ತಿಗಳಾರಿ ಲಿಪಿಯನ್ನು ವಿದ್ಯಾ ಶ್ರೀ ಅವರು ಹೇಳಿಕೊಡುವ ಲಿಪಿ ಹೋಲುತ್ತದೆ ಹೊರತು ತುಳು ವರ್ಣ ಮಾಲೆಯಲ್ಲಿ ಇರುವ ಹಾಗೆ ಇಲ್ಲ ಅವರು ಅವರು ಹಾಕಿದ ತಿಗಳಾರಿ ಲಿಪಿ ಚಿತ್ರ ದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ   ದೀರ್ಘ ಋ ಇದೆ ವಿದ್ಯಾ ಅವರು ಹೇಳಿಕೊಡುವ ಲಿಪಿ ಯಲ್ಲೂ ಇದೆ ಅವರು ಪ್ರೂಫ್ ಗಾಗಿ ಹಾಕಿದ ತುಳು ವರ್ಣಮಾಲೆಯ ಲ್ಲಿ ದೀರ್ಘ ಋ ಇಲ್ಲ ಅದೇ ರೀತಿಯಲ್ಲಿ ವಿದ್ಯಾ ಶ್ರೀ ಹೇಳಿಕೊಡುವ ಎಲ್ಲಾ ಅಕ್ಷರಗಳು ಅವರೇ ಪ್ರೂಫ್ ಗಾಗಿ ನೀಡಿದ ತಿಗಳಾರಿ ಮತ್ತು ತುಳು ವರ್ಣಮಾಲೆ ಗಳಲ್ಲಿ ತಿಗಳಾರಿ ಲಿಪಿ ಯನ್ನು ಹೋಲುತ್ತವೆ ಇದನ್ನು ಕೇಳಿದಾಗ ನಮ್ಮ ಗುರುಗಳು ತುಳು ಎಂದು ಹೇಳಿದ್ದಾರೆ ಎನ್ನುತ್ತಾರೆ. ಅವರ ಗುರುಗಳಾದ ವಿಘ್ನರಾಜ ಭಟ್ ತಿಗಳಾರಿ ಲಿಪಿ ಮತ್ತು ತುಳು ಎರಡೂ ಒಂದು ಎಂದು ಹೇಳಿದ್ದಾರೆ ಆದರೆ ಇವರು ತಿಗಳಾರಿ ಮತ್ತು ತುಳು ಬೇರೆ ಎಂದು ಹೇಳುತ್ತಿದ್ದಾರೆ
ಇವರು ಹೇಳಿಕೊಡುವ ಲಿಪಿ ತುಳ ವರ್ಣಮಾಲೆ ಬದಲಿಗೆ ತಿಗಳಾರಿ ಲಿಪಿ ಯಂತೆ ಇದೆ ಎಂದಾಗ ಗುರುಗಳು ಹೇಳಿದ್ದಾರೆ ಎಂದು ಹೇಳಿದ್ದಾರೆ
ಯಾವುದೇ ಲಿಪಿಯನ್ನು ಯಾರು ಕೂಡ ಬಳಕೆ ಮಾಡಬಹುದು ಆದರೆ  ಅದು ತಿಗಳಾರಿ ಲಿಪಿ ಎಂಬ ಸತ್ಯವನ್ನು ಮುಚ್ಚಿಟ್ಟು ಅದು ತುಳು ಭಾಷೆಯ ಸ್ವಂತ ಲಿಪಿ ಎಂದು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ ಮತ್ತು ಅದನ್ನು ತುಳು ಭಾಷೆಗೆ ಸೂಕ್ತ ವಾ್ಉವಂತೆ ಪರಿಷ್ಕರಿಸದೆ ಇದ್ದ ಹಾಗೆ ಬಳಸಿ ತುಳು ಭಾಷೆಯನ್ನು ಅಪಭ್ರಂಶ ಗೊಳಿಸುವುದು ಸರಿಯಲ್ಲ  ©ಡಾ.ಲಕ್ಷ್ಮೀ ಜಿ ಪ್ರಸಾದ,ಕನ್ನಡ ಉಪನ್ಯಾಸಕಿ ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆ

(ಲಿಪಿ ತಜ್ಞರಾದ ಜಮದಗ್ನಿ ಅಗ್ನಿ ಹೋತ್ರಿಯವರು ಇದು ತಿಗಳಾರಿ ಲಿಪಿ ಎಂದು ತಿಳಿಸಿ ,ವಿದ್ಯಾ ಅವರು ಹೇಳಿಕೊಡುತ್ತಾ ಇರುವ ತಿಗಳಾರಿ (ತುಳು) ಲಿಪಿಯಲ್ಲಿ ಅನೇಕ ದೋಷಗಳು ಇರುವುದನ್ನು ಗಮನಿಸಿ ಪೇಸ್ ಬುಕ್ ಮೂಲಕ  ವಿದ್ಯಾ ಅವರಿಗೆ  ನೀಡಿದ ಸೂಚನೆಗಳು--
Vidya Shree S Shetty ನಾವು ದಕ್ಷಿಣ ಕನ್ನಡದವರಲ್ಲ ,ತುಳು ಬರುವುದಿಲ್ಲ .ಲಿಪಿಯ ದೃಷ್ಟಿಯಿಂದ ಸಲಹೆಗಳನ್ನು ಕೊಡಬಲ್ಲೆ. ನೀವು ಪ್ರಸ್ತುತ ಹೇಗೆ ಕಲಿಸುತ್ತಿದ್ದೀರೋ ನನಗೆ ತಿಳಿಯದು. ನೀವು ಕಲಿಸುವ chart ಕೊಟ್ಟರೆ ಸಲಹೆ ನೀಡಬಲ್ಲೆ.ಉಕಾರ,ಉಕಾರದ ಕಾಗುಣಿತಕ್ಕೆ special forms ಇದೆ.ಕು,ಗು,ಜು ಇತ್ಯಾದಿಗಳಿಗೆ circle ಕೆಳಗೆ ಬರೆಯಬಾರದು. ಕೆಲವು ಅಕ್ಷರಗಳಾದ ಐ,ಖ,ಙ,ಞ,ಛ,ಟ,ಝ ಇತ್ಯಾದಿಯಲ್ಲಿ ಮಾರ್ಪಾಡು ಬೇಕು. ಇಲ್ಲಿ ಸಂಯುಕ್ತಾಕ್ಷರ ಕನ್ನಡದಂತೆ ಬರೆಯುವುದಿಲ್ಲ. ಎರಡೂ ಒಂದೇ size ಇರಬೇಕು,ಚಿಕ್ಕದು ದೊಡ್ಡದು ಇರಬಾರದು.ಯ,ರ,ಲ,ವ,ಮ ಇವುಗಳಿಗೆ ಸ್ಪೇಸಿಯಲ್ ರೂಪಗಳು ಇವೆ, ವ್ಯಂಜನಕ್ಕೆ ಜೋಡಿಸಿ ಬರೆಯಬೇಕು ಬಿಡಿಸಿ ಬರೆಯಬಾರದು,ಸಾಮಾನ್ಯದ ತರಹ ಬರೆಯಬಾರದು. ವ್ಯಂಜನದ ಹಿಂದೆ ಅನುಸ್ವಾರ ಬಳಸುವುದಿಲ್ಲ,ಮಲಯಾಳದಂತೆ ಅಂದ ಬದಲು ಅನ್ದ ಎಂದೇ ಬರೆಯುತ್ತಾರೆ. ನನಗೆ ತಿಳಿದಿರುವ ಮಟ್ಟಿಗೆ ಪ್ರತ್ಯೇಕ ಅಂಕಿಗಳು ಇಲ್ಲ,ಕನ್ನಡ ಸಂಖ್ಯೆಗಳನ್ನೇ ಬಳಸುತ್ತಾರೆ. ಪ್ರತ್ಯೇಕ ಸಂಖ್ಯೆ ಎನ್ನುವ ಹಸ್ತಪ್ರತಿಗಳ ಲಿಪಿ ಮಲಯಾಳ ಲಿಪಿ. ವ್ಯಂಜನಗಳ ಸಂಯುಕ್ತಾಕ್ಷರ ಬಹಳ ಕ್ಲಿಷ್ಟ ಕನ್ನಡದಂತೆ ಸುಲಭವಲ್ಲ.ಕ್ಕ,ತ್ತ,ತ್ಕ,ದ್ಧ,ತ್ಮ,ಕ್ಷ ,ರ್ಯ,ರ್ವ,ಸ್ಥetc ಗಳಲ್ಲಿ ಎರಡು ಅಕ್ಷರಗಳನ್ನು ಹೊಂದಿಸಿ ಅಕ್ಷರ ಬರೆಯುತ್ತಾರೆ, ಕೆಳಗೆ ಸಾಮಾನ್ಯವಾಗಿ ಬರೆಯುವುದಿಲ್ಲ.ಇ ,ಈ,ಉ ಸ್ವಲ್ಪ ಬೇರೆ ತರಹ ಬರೆಯುತ್ತಾರೆ.ಟ್ ,ತ್ ,ಕ್ ,ನ್ ಇವುಗಳು ವಿಶಿಷ್ಟವಾಗಿ ಬರೆಯುತ್ತಾರೆ,ಹಲಂತವನ್ನು ಸಾಮನ್ಯವಾಗಿ ಹಾಕುವುದಿಲ್ಲ.ಹೀಗೆ ಅನೇಕ ಕಲಿಕೆಯಲ್ಲಿ ಬದಲಾವಣೆಗಳು ಆವಶ್ಯಕ.ನಿಮ್ಮ ಪತ್ರಿಕೆಯ font ನಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಾಲ್ಕೈದು ಹಸ್ತಪ್ರತಿಗಳನ್ನು ಗಮನಿಸಿದರೆ ಸರಿಯಾದ ರೂಪಗಳು ರೂಪಗಳು ಯಾವುವು ಎಂದು ನಮಗೆ ಗೊತ್ತಾಗುವುದು.ನಮ್ಮ ಉದ್ದೇಶ ಇಷ್ಟೇ ಜನರು ಸರಿಯಾಗಿ ಕಲಿಯಲಿ.)

Wednesday 31 May 2017

ಸಾವಿರದೊಂದು ಗುರಿಯೆಡೆಗೆ ತುಳುನಾಡ ದೈವಗಳು 377-384 ಪೂಂಕಣಿ ಭಗವತಿ ಬಪ್ಪಿರಿಯನ್,ಮತ್ತು ಆರು ಸಹೋದರ ದೈವಗಳು © ಡಾ ಲಕ್ಷ್ಮೀ ಜಿ ಪ್ರಸಾದ್

ಪೂಂಕಣಿ ಭಗವತಿ ಮತ್ತು ಆರು ಜನ ಸಹೋದರ ತೆಯ್ಯಂ ಗಳು ಮೂಲತಃ ಬ್ರಾಹ್ಮಣರ ಮಕ್ಕಳು.
ಈ ದೈವದ ಕಥಾನಕವನ್ನು ಕೇಳು ಮಾಸ್ತರ್ ಅಗಲ್ಪಾಡಿ ಅವರು ಹೀಗೆ ನೀಡಿದ್ದಾರೆ.
ಸಪ್ತ ಮಾತೃಕೆಯರಲ್ಲಿ ಒಬ್ಬಳಾದ ಕುಮಾರಿಯು ಕೋಲತ್ತುನಾಡಿನ ದಕ್ಷಿಣ ಭಾಗದ ಗಡಿ ಭಾಗದಲ್ಲಿ ಅರಿಯಾಂಕರ ಎಂಬಲ್ಲಿ ಪ್ರತಿಷ್ಠಿತ ಬ್ರಾಹ್ಮಣ ದಂಪತಿಗಳ ಮಗಳಾಗಿ ಜನಿಸಿದಳು. ಇವಳಿಗೆ ಪೂಂಕಣಿ ಎಂದು ಹೆಸರಿಟ್ಟು ಮುದ್ದಿನಿಂದ ಸಾಕಿದರು .ಇವಳಿಗೆ ಆರು ಜನ ಅಣ್ಣಂದಿರು ಇದ್ದರು.ಪೂಂಕಣಿಗೆ ವಿವಾಹ ವಯಸ್ಸಾಗಲು ವಿವಾಹ ಪ್ರಸ್ತಾಪಗಳು ಬರತೊಡಗಿದವು.ಆಗ ಪೂಂಕಣಿಗೆ ಕೊರಳಿಗೆ ಧರಿಸಲು ಸಾಕಷ್ಟು ಮುತ್ತುಗಳು ಇರಲಿಲ್ಲ. ಹಾಗಾಗಿ ಅವಳು ಮತ್ತು ಆರು ಮಂದಿ ಅಣ್ಣಂದಿರು ಹಡಗಿನಲ್ಲಿ ಮುತ್ತು ತರಲು ಸಮುದ್ರಕ್ಕೆ ಹೋದರು.ಬಿರುಗಾಳಿಗೆ ಸಿಕ್ಕು ಹಳೆಯ ಹಡಗು‌ಮುರಿದು ಹಡಗಿನ ತುಂಡೊಂದನ್ನು ಹಿಡಿದು ತೇಲಿಕೊಂಡು ದಡ ಸೇರಿದರು.ಆಗ ಪೂಂಕಣಿ ಮತ್ತು ಸಹೋದರರು ಬೇರೆ ಬೇರೆಯಾದರು.ಅಣ್ಣಂದಿರನ್ನು ಹುಡುಕುತ್ತಾ ಅಲೆಯುವಾಗ ದೂರದಲ್ಲಿ ಒಂದು ಹಡಗು ಕಾಣಿಸಿತು.ಅದು ಬಪ್ಪಿರಿಯನ್ ಬ್ಯಾರಿಯ ಹಡಗಾಗಿತ್ತು.ತನ್ನ ಸಹೋದರರನ್ನು ಹುಡುಕಲು ಅವನ ಸಹಾಯ ಯಾಚಿಸಿದಳು.ಅವನು ಅದಕ್ಕೆ ಒಪ್ಪದ
 ಅವಳನ್ನು ಹೀಯಾಳಿಸಿದನು .ಆಗ ಅವಳು ಗಂಗಾ ಮಾತೆಯನ್ನು ಪ್ರಾರ್ಥನೆ ಮಾಡಿದಾಗ ತೆರೆಗಳು ಸರಿದು ದಾರಿ ಮಾಡಿಕೊಟ್ಟವು.ಬಪ್ಪಿರಿಯನ್ ನ ಹಡಗು ತಲುಪಿದಾಗ ಅಲ್ಲಿ ತನಕವೂ ದಾರಿ ಆಯಿತು.ಆಗ ಅವಳ ಕಾರಣಿಕ ತಿಳಿದ ಬಪ್ಪಿರಿಯನ್ ಅವಳ ಸಗೋದರರನ್ನು ಹುಡುಕಲು ಸಹಾಯ‌ಮಾಡಿದನು.ಅವರು ಸಿಕ್ಕಿದರಾದರೂ ಅವರೆಲ್ಲರೂ ಸತ್ತು ಹೋಗಿ ಶವಗಳು ಮಾತ್ರ ಸಿಕ್ಕವು.ಪೂಂಕಣಿ ಯು ತನಗನ ಮಂತ್ರ ಶಕ್ತಿ ಯಿಂದ ಅವರನ್ನು ಅಲ್ಲ‌ನೆಲೆಗೊಳಿಸಿದಳು.ಅ ಆರು‌ಮಂದಿ ಅಣ್ಣಂದಿರು ದೈವಗಳಾಗಿ ಅಲ್ಲಿ ನೆಲೆನಿಂತರು.ಹಡಗಿನಲ್ಲಿ ‌ಮುಂದುವರಿದ ಬಪ್ಪಿರಿಯನ್ ಮತ್ತು ಅವನ ಸಂಗಡಿಗರನ್ನು ಕಡಲ್ಗಳ್ಳರು ಕೊಂದು ಹಾಕಿದರು.ಆಗ ಬಪ್ಪಿರಿಯನ್ ಆತ್ಮವನ್ನು ಅವಾಹಿಇಸಿ ಅವನಿಗೆ ಒಂದು ನೆಲೆ ನೀಡಿದಳು.ತನಗನ ಆಪ್ತನನ್ನಾಗಿಸಿದಳು.
ಅವಳು ಮುಂದೆ ಕುಡಲ್ ಕುನ್ನು ಎಂಬ ಬ್ರಾಹ್ಮಣ ರಿಗಿದ್ದ ತೊಂದರೆಗಳನ್ನು ನಿವಾರಿಸಿ ಅಲ್ಲಿ ನೆಲೆಯಾಗಿ ಅವರಿಂದ ಆರಾಧನೆ ಯನ್ನು ಪಡೆದಳು.
ಇಲ್ಲಿ ಬರುವ ಬಪ್ಪಿರಿಯನ್ ‌ಮತ್ತು ಬಬ್ಬರ್ಯ ದೈವ ಒಂದೇ ಇರಬೇಕು ಕಥಾನಕದಲ್ಲಿ ಸಾಮ್ಯತೆ ಇದೆ
ಆದಾರ ಗ್ರಂಥ - ಕೇರಳ ತೆಯ್ಯಂ ಲೇಖಕರು ಕೇಳು ಮಾಸ್ತರ್ ಅಗಲ್ಪಾಡಿ

Monday 8 May 2017

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ? ©©ಡಾ ಲಕ್ಷ್ಮೀ ಜಿ ಪ್ರಸಾದ

ತಿಗಳಾರಿ ಮತ್ತು ತುಳು ಲಿಪಿ ಎರಡೂ ಒಂದೇ ಹೊರತು ಬೇರೆ ಬೇರೆಯಲ್ಲ © ಡಾ ಲಕ್ಷ್ಮೀ ಜಿ ಪ್ರಸಾದ

ಅನೇಕರು ತಿಗಳಾರಿ/ ತುಳು ಲಿಪಿ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಮೆಸೆಂಜರ್ ಮೂಲಕ ಹೆಚ್ಚಿನ ವರಿಗೆ ಬ್ಲಾಗ್ ಲಿಂಕ್ ಓಪನ್ ಅಗುತ್ತಿಲ್ಲವಂತೆ ಹಾಗಾಗಿ ಬ್ಲಾಗ್ ಬರಹವನ್ನು ಕಾಪಿ ಮಾಡಿ ಹಾಕಿರುವೆ

ಎಂಥ ಅವಸ್ಥೆ .ಯಾರಿಗೆ ಹೇಳೋಣ .ಕೇಳೋರು ಯಾರು ?

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಯ ವೆಬ್ ನಲ್ಲಿ ತುಳು ವರ್ಣ ಮಾಲೆಯಲ್ಲಿಯೇ ದೋಷಗಳು ಇಲ್ಲಿ ಇದು ತಿಗಳಾರಿ ಲಿಪಿ ಎಂದು ಹೊರಗಡೆ ಪ್ರಸಿದ್ಧವಾಗಿದೆ ತುಳುನಾಡಿನ ಕೆಲವೆಡೆ ತುಳು ಲಿಪಿ ಎಂದು ಕರೆಯುತ್ತಾರೆ ಎಂಬ ಸತ್ಯವನ್ನು  ಮುಚ್ಚಿಟ್ಡು ತುಳು ಲಿಪಿ ಎಂದು ಮಾತ್ರ ಹೇಳಲಾಗಿದೆ  .

ಅದಿರಲಿ ತಿಗಳಾರಿ ಅಥವಾ ತುಳು ವರ್ಣಮಾಲೆಯಲ್ಲಿ ಹ್ರಸ್ವ ಎ ಒ ಸ್ವರಗಳಿಲ್ಲ ಇಲ್ಲಿ ತಿಗಳಾರಿ / ತುಳು ಲಿಪಿ ಯಲ್ಲಿ ರುವ ದೀರ್ಘ ಏ ಓ ಗಳನ್ನು ಬರೆದು ಅದರ ಕೆಳಗಡೆ ಹ್ರಸ್ವ ಎ ಒ ಎಂದು ಕನ್ನಡ ದಲ್ಲಿ ಬರೆದಿದ್ದಾರೆ ಕಳೆದ ವರ್ಷ ಏಳೆಂಟು ಲಿಪಿ ತಜ್ಞರು ಬಂದು ಏನೋ ವಿಚಾರ ಮಾಡಿದ್ದಾರಂತೆ ಆದರೂ ತುಳು ಅಕಾಡೆಮಿ ವೆಬ್ ನಲ್ಲಿ ಆದ ಇಷ್ಟು ದೊಡ್ಡ ಪ್ರಮಾದವನ್ನೇ ತಿದ್ದಿಲ್ಲ ,ತುಳು ಲಿಪಿ/ ತಿಗಳಾರಿ ಲಿಪಿ ಬಗ್ಗೆ ಒಂದು ಸಾಲಿನ ಮಾಹಿತಿ ಕೂಡಾ ಇಲ್ಲ ಇರುವ ವರ್ಣಮಾಲೆಯಲ್ಲಿ ಇಷ್ಟು ದೊಡ್ಡ ತಪ್ಪು ಯಾರಿಗೆ ಹೇಳೋಣ ? ರಿಜಿಸ್ಟ್ರಾರ್ ಗೆ ಈ ಬಗ್ಗೆ ಪೋನ್ ಮಾಡಿದರೆ ಬರೆದು ತಿಳಿಸಿ ಎಂಬ ಉತ್ತರ ಸಿಕ್ಕಿದೆ.
ಹಾಗಾಗಿ ಈ ಲಿಪಿ ಬಗ್ಗೆ ಮಾಹಿತಿ ಗೆ ಇಲ್ಲಿ ಓದಿ

ತುಳು ಭಾಷೆಯನ್ನು ಅಪಭ್ರಂಶಗೊಳಿಸಿ ವಿರೂಪ ಗೊಳಿಸಬೇಡಿ

ಭಾಷೆಯೊಂದಕ್ಕೆ ಲಿಪಿ ಇರಲೇ ಬೇಕೆಂದೇನೂ ಇಲ್ಲ ಜಗತ್ತಿನ ಹೆಚ್ಚಿನ ಭಾಷೆಗಳಿಗೆ ಸ್ವಂತ ಲಿಪಿಯಿಲ್ಲ ನಮ್ಮ ರಾಷ್ಟ್ರೀಯ ಭಾಷೆ ಹಿಂದಿ ಪ್ರಾಚೀನ ಭಾಷೆ ಸಂಸ್ಕೃತ ಜನಪ್ರಿಯ ಭಾಷೆ ಇಂಗ್ಲಿಷ್ ಗೂ ಸ್ವಂತ ‌ಲಿಪಿಯಿಲ್ಲ ಹಿಂದಿ ಸಂಸ್ಕೃತ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಷೆಗಳಿಗೆ ನಾಗರಿ ಲಿಪಿಯನ್ನು ಬಳಸುತ್ತಾರೆ ಇಂಗ್ಲಿಷ್ ಗೆ ರೋಮ್ ಲಿಪಿ ಬಳಸುತ್ತಾರೆ
ಈ ಹಿಂದೆ ಸಂಸ್ಕೃತ ಬರೆಯಲು ತಿಗಳಾರಿ ಲಿಪಿಯನ್ನು ಬಳಕೆ ಮಾಡುತ್ತಿದ್ದು ಅದನ್ನು  ತುಳುನಾಡಿನಲ್ಲಿ ಯೂ ಸಂಸ್ಕೃತ ದ ವೇದ ಮಂತ್ರಗಳನ್ನು ಬರೆಯಲು  ತುಳುನಾಡಿನ ಹವ್ಯಕ ,ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬಳಕೆ ಮಾಡಿದ್ದಾರೆ  ಜೊತೆಗೆ ಉತ್ತರ ಕನ್ನಡದ ಶಿವಮೊಗ್ಗ ಕೆಳದಿ ತಮಿಳುನಾಡಿನ ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ತುಳು ಬ್ರಾಹ್ಮಣರು ಸಂಸ್ಕೃತ ವೇದ ಮಂತ್ರಗಳನ್ನು ಬರೆಯಲು ಬಳಸಿದ್ದಾರೆ ಇದಕ್ಕೆ ಮೊದಲಿನಿಂದಲೂ ತಿಗಳಾರಿ ಲಿಪಿ ಎಂದು ಕರೆಯುತ್ತಾ ಇದ್ದರು ತುಳು ಲಿಪಿ ಎಂಬ ಹೆಸರೂ ಕೆಲವರು ಬಳಸಿದ್ದಾರೆ   ಆದರೆ ಪ್ರಸ್ತುತ  ತುಳು ಭಾಷೆಯ ಬರವಣಿಗೆಗೆ ಸೂಕ್ತವಾಗಿಲ್ಲ  ಯಾಕೆಂದರೆ ಇದರಲ್ಲಿ ತುಳು ಭಾಷೆಯಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ಇದರಿಂದಾಗಿ ಈ ಲಿಪಿಯಲ್ಲಿ ತುಳು ಭಾಷೆ ಎಂದು ಬರೆಯಲು ಸಾಧ್ಯವೇ ಇಲ್ಲ ಬದಲಿಗೆ ತುಳು ಭಾಷೇ ಎಂದು ಬರೆಯಬೇಕಾಗುತ್ತದೆ ಎಣ್ಣೆ ಬದಲು ಏಣ್ಣೆ ಪೊಣ್ಣು ಬದಲು ಪೋಣ್ಣು ಡೆನ್ನಾನ ಬದಲು ಡೇನ್ನಾನ ಎಡ್ಡೆ ಬದಲು ಏಡ್ಡೆ ತೆನೆ ಬದಲು ತೇನೆ ಕೊರಳು ಬದಲು ಕೋರಳು ಕೊಪ್ಪ ಬದಲು ಕೋಪ್ಪ ಕೊರಗಜ್ಜ ಬದಲು ಕೋರಗಜ್ಜ ಕೆರೆ ಬದಲು ಕೇರೆ  ಬರೆಯಬೇಕಾಗುತ್ತದೆ ಕೆರೆ ಕೇರೆಯಾದಾಗ ಕೆಬಿ ಕೇಬಿಯಾಗಿ,ಕೆಪ್ಪೆ ಕೇಪ್ಪೆಯಾಗಿ ಕೊಡಿ ಕೋಡಿಯಾಗಿ ,ಎರು ಏರು ಅಗಿ ,ಎರ್ಮ್ಮೆ ಏರ್ಮ್ಮೆಯಾಗಿ ಎಣ್ಮೆ ಏಣ್ಮೆಯಾಗಿ ಕೆಸರ್ ಕೇಸರ್ ಆಗಿ ರಾಮೆ ರಾಮೇ ಆಗಿ ಕೃಷ್ಷಪ್ಪೆ ಕೃಷ್ಣಪ್ಪೇ ಆಗಿ , ಪೊಸತು ಪೋಸತು ಪೊರ್ಲು ಬದಲು‌ ಪೋರ್ಲು ಆಗಿ ,ಬೆರ್ಮರ್ ಬೇರ್ಮರ್ ಆಗಿ ,ಪೊಡಿ ಬದಲು ಪೋಡಿಯಾಗಿ ಬೊಂಡ ಬದಲು ಬೋಂಡ ಅಗಿ ಕೊಡೆ ಕೋಡೆಯಾಗಿ ಬೆಲೆ ಬೇಲೆಯಾಗಿ ,ಕೆದು ಕೇದುವಾಗಿ ,ಕೆಮ್ಮು ಕೇಮ್ಮುವಾಗಿ ,ಎಡೆ ಏಡೆಯಾಗಿ ಅರ್ಥ ಅನರ್ಥವಾಗಿಬಿಡುತ್ತದೆ  ಯಾಕೆಂದರೆ ಈ ಲಿಪಿಯಲ್ಲಿ ಹ್ರಸ್ವ ಎ ಒ ಗಳು ಇಲ್ಲ‌ ಹೀಗೆ ಬಳಸಿದರೆ  ತುಳು ಭಾಷೆ ತನ್ನ ಮೂಲ ರೂಪವನ್ನು ಕಳೆದುಕೊಂಡು ಅಪಭ್ರಂಶ ಗೊಳ್ಳುತ್ತದೆ ಹಾಗಾಗಿ ಈಗ ಸಂಸ್ಕೃತ ವೇದ ಮಂತ್ರಗಳ ಬಳಕೆಗಾಗಿ ರೂಪುಗೊಂಡ ತಿಗಳಾರಿ ಲಿಪಿ/ ತುಳುಲಿಪಿ ಯನ್ನು ಪರಿಷ್ಕರಿಸಿ ಕಲಿಸುವ ಬಳಸುವ ಅಗತ್ಯವಿದೆ

ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಮಾತ್ರ ಬಳಕೆಗೆ ತಂದದ್ದಲ್ಲ ಹವ್ಯಕ ಚಿತ್ಪಾವನ ಕರಾಡ ಕೋಟ ಬ್ರಾಹ್ಮಣರು ಉತ್ತರ ಕನ್ನಡ ಶಿವಮೊಗ್ಗ ಕೆಳದಿಯ ಕನ್ನಡ ಬ್ರಾಹ್ಮಣರು,ಮೈಸೂರಿನ ಬೆಂಗಳೂರಿನ‌ಕೆಲವು ಬ್ರಾಹ್ಮಣ ಸಮುದಾಯಗಳು  ತಂಜಾವೂರು ಕಂಚಿಯ  ಬ್ರಾಹ್ಮಣರು ಬಳಕೆಗೆ ತಂದಿದ್ದಾರೆ ಧರ್ಮಸ್ಥಳ ದಲ್ಲಿ ಸಂಗ್ರಹವಾಗಿರುವ ಒಂದೂವರೆ ಸಾವಿರದಷ್ಟು ತಿಗಳಾರಿ / ತುಳು ಲಿಪಿ ಹಸ್ತಪ್ರತಿ ಗಳಲ್ಲಿ ಅನೇಕ ಹವ್ಯಕ ಕೋಟ ಚಿತ್ಪಾವನ ಕರಾಡ ಬ್ರಾಹ್ಮಣರು ಬರೆದ ಅವರುಗಳ ಮನೆಯಲ್ಲಿ ಸಿಕ್ಕ ಹಸ್ತಪ್ರತಿ ಗಳಿವೆ ನಮ್ಮ ( ನಾವು ಹವ್ಯಕ ರು) ಮನೆಯಲ್ಲಿಯೂ ಅನೇಕ ತಿಗಳಾರಿ ಲಿಪಿ ಯ ಹಸ್ತಪ್ರತಿ ಗ್ರಂಥಳಿದ್ದು ಇವರಲ್ಲವು ಮಂತ್ರ ಪ್ರಯೋಗಗಳಾಗಿವೆ ಹವ್ಯಕರಲ್ಲಿ ಈ ಲಿಪಿಯಲ್ಲಿ ಹವ್ಯಕ ಭಾಷೆಯಲ್ಲಿ ಪತ್ರ ವ್ಯವಹಾರ ಕಡತ ನಿರ್ವಹಣೆಗಳಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಈ ಲಿಪಿಯಲ್ಲಿ ಬರೆದ ಹವ್ಯಕ ಕನ್ನಡ ದ ಪತ್ರಗಳು ನೂರಕ್ಕಿಂತ ಹೆಚ್ಚು ಇವೆ
ಇನ್ನು ಅದು ಬ್ರಾಹ್ಮಣರು ಬಳಕೆಗೆ ತಂದ ಲಿಪಿ ಎಂಬುದಕ್ಕೆ ಅದರಲ್ಲಿ ಸಿಕ್ಕ ಎಲ್ಲಾ ಕೃತಿಗಳನ್ನು ಬ್ರಾಹ್ಮಣರು ಬರೆದಿದ್ದು ಒಂದೇ ಒಂದು ಕೃತಿ ಬೇರೆಯವರು ಬರೆಯದಿರುವವುದು ಈಗಲೂ ಅದನ್ನು ಹೇಳಿಕೊಟ್ಟವರು ಬ್ರಾಹ್ಮಣರು ಎಂಬ ಆಧಾರವೇ ಸಾಕು
ಲಿಪಿ ರೂಪಿಸಲು ಎಷ್ಟು ಜನ ಇದ್ದಾರೆ ಎಂಬುದು ಮುಖ್ಯವಲ್ಲ ಅದನ್ನು ಯಾರು ಯಾಕೆ ಬಳಸಿದ್ದಾರೆ ಎಂಬುದು ಮುಖ್ಯ ವಾಗುತ್ತದೆ
ಇದರಲ್ಲಿ ತುಳು ಭಾಷೆಯ ಹ್ರಸ್ವ ಎಒ  ಇಲ್ಲ ಇದರಲ್ಲಿ  ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ
ಅಲ್ಲದೆ ತುಳು ಭಾಷೆಯ ಏಳು ಕೃತಿಗಳು ಮಾತ್ರ ಆ ಲಿಪಿ ಯಲ್ಲಿ ಇರುವುದು ಅದರಲ್ಲಿ ಯೂ ಹ್ರಸ್ವ ಎ ಒ ಗಳು ಇಲ್ಲದ ಕಾರಣ ತುಂಬಾ ದೋಷಗಳಿವೆ ತುಳು ಕರ್ಣ ಪರ್ವ ವನ್ನು ಪುಣಿಚಿತ್ತಾಯ ರು ಈ ಹಿಂದೆ ನನಗೆ ಗೌರವ ಪ್ರತಿ ನೀಡಿದ್ದು ಅದರಲ್ಲಿ ಈ ದೋಷಗಳಿರುವುದನ್ನು ಅವರೂ ಹೇಳಿದ್ದಾರೆ
ಲಿಪಿಯೊಂದು ಇದ್ದಕ್ಕಿದ್ದಂತೆ ರೂಪು ಗೊಳ್ಳುವುದಿಲ್ಕ ಇದು ತಮಿಳಿನ ಗ್ರಂಥ ಲಿಪಿಯನ್ನು ಹೋಲುತ್ತಿದ್ದು ಅದರಿಂದ ರೂಪುಗೊಂಡಿದೆ ಗ್ರಂಥ ಲಿಪಿ ತುಳುನಾಡಿನಲ್ಲಿ ಇರಲಿಲ್ಲ ದಕ್ಷಿಣ ಭಾರತದ ್ಲ್ಲಿ ವೇದಾಧ್ಯಯನ ಕೇಂದ್ರ ಇದ್ದದ್ದು ತಮಿಳುನಾಡಿನ ತಂಜಾವೂರು ಮತ್ತು ಕಂಚಿಗಳಲ್ಲಿ
ಅಲ್ಲಿನ ತಮಿಳು ಲಿಪಿಯಲ್ಲಿ ಮುವತ್ತಾರು ಅಕ್ಷರಗಳು ಮಾತ್ರ ಇದ್ದು ಅದು ಸಂಸ್ಕೃತ ವೇದಾ ಮಂತ್ರಗಳ ಬರವಣಿಗೆಗೆ ಸೂಕ್ತ ವಾಗಿರಲಿಲ್ಲ ಹಾಗಾಗಿ ಅವರು ತಮಿಳು ಲಿಪಿ ಯನ್ನು ಪರಿಷ್ಕರಿಸಿ ಸಂಸ್ಕೃತ ಕ್ಕೆ ಸೂಕ್ತ ವಾದ ಗ್ರಂಥ ಲಿಪಿ ರೂಪಿಸಿದರು ಅಲ್ಲಿ ನಾಗರಿ ಲಿಪಿ ಪರಿಚಿತವಾಗಿರಲಿಲ್ಲಅಲ್ಲಿಗೆ ವೇದಾಧ್ಯಯನ ಮಾಡಲು ಹೋದ ದಕ್ಷಿಣ ಕನ್ನಡ ಉತ್ತರ ಕನ್ನಡ ದ  ಬ್ರಾಹ್ಮಣ ರು ಅಲ್ಲಿನ ಗುರುಗಳಿಂದ ಗ್ರಂತ ಲಿಪಿ ಕಲಿತು ವೇದ ಮಂತ್ರಗಳ ನ್ನು ಅದರಲ್ಲಿ ಬರೆದರು ನಂತರ ಕಾಲಾಂತರದಲ್ಲಿ ಅದು ಬದಲಾಗುತ್ತಾ ತಿಗಳಾರಿ ಲಿಪಿ ಆಯಿತು ಹಾಗಾಗಿ ಅದನ್ನು ತಿಗಳರ ಎಂದರೆ ತಮಿಳರ ಆರ್ಯ ಎಂದರೆ ಸಂಸ್ಕೃತ ಲಿಪಿ ಎಂದು ಕರೆದರು ಅದು ಹ್ರಸ್ವ ಗೊಂಡು ತಿಗಳಾರಿ ಅಯಿತು ಇದನ್ನು ಬಳಕೆ ಮಾಡಿದವರಲ್ಲಿ ಕೋಟ ಹವ್ಯಕ ಚಿತ್ಪಾವನ ತುಳು  ಕರಾಡ ಬ್ರಾಹ್ಮಣರು ಶಿವಮೊಗ್ಗ ಕೆಳದಿ ಉತ್ತರ ಕನ್ನಡ ದ ಕನ್ನಡ ಬ್ರಾಹ್ಮಣರು ತಂಜಾವೂರು ಕಂಚಿಯ ಬ್ರಾಹ್ಮಣರು  ಸೇರಿದ್ದಾರೆ ಇವರಲ್ಲಿ ತುಳು ಬ್ರಾಹ್ಮಣರು ಕೇರಳಕ್ಕೆ ದೇವಸ್ಥಾನ ಗಳ ಪೂಜೆಗೆ ಹೋದಾಗ ತಿಗಳಾರಿ ಲಿಪಿ ಅಲ್ಲಿ ಹರಡಿ ಅಲ್ಲಿ ನವರು ಅದನ್ನು ಮಲೆಯಾಳ ಭಾಷೆಗೆ ಸೂಕ್ತ ವಾಗುವಂತೆ ಪರಿಷ್ಕರಿಸಿ ಬಳಸಿದರು ಅವರು ಆರಂಭದಲ್ಲಿ ಅದನ್ನು ತುಲುವನತ್ತಿಲ್ ಎಂದರೆ ತುಲುವರ ಲಿಪಿ ಎಂದು ಕರೆದಿದ್ದು ಅವರು ರೂಪಿಸಿದ ಲಿಪಿ ಯನ್ನು ತುಲು ಮಲೆಯಾಳ ಲಿಪಿ ಎಂದು ಕರೆದು ಕಾಲಾಂತರದಲ್ಲಿ ಮಲೆಯಾಳ ಲಿಪಿ ಎಂದು ಮಾತ್ರ ಹೆಸರು ಉಳಿಯಿತು
ಆದರೆ ಇದು ತುಲು ಭಾಷೆಯ ಲಿಪಿ ಅಲ್ಲ
ಸಂಸ್ಕೃತ ಭಾಷೆಗೆ ಸ್ವಂತ ಲಿಪಿ ಇಲ್ಲ ಉತ್ತರದಲ್ಲಿ ನಾಗರಿ ಲಿಪಿ ತಮಿಳುನಾಡಿನಲ್ಲಿ ಗ್ರಂಥ ಲಿಪಿ ತೆಲುಗರು ತೆಲುಗು ಲಿಪಿ ಯನ್ನು ಸಂಸ್ಕೃತ ಕ್ಕೆ ಬಳಸುತ್ತಾ ಇದ್ದರು
ಅಕಾಡೆಮಿ ಗೆ ಹೇಳಿ ಲಿಪಿ ಯ ಇತಿಹಾಸವನ್ನು ತಿಳಿಸಿ ಪರಿಷ್ಕರಿಸಿ ಬಳಕೆಗೆ ತರುವ ಕೆಲಸ ಆಗಬೇಕಿದೆ ಅಕಾಡೆಮಿ ವೆಬ್ ಹಾಕಿದ ತುಳು ವರ್ಣ ಮಾಲೆ ಚಾರ್ಟ್ ನಲ್ಲಿ ತಪ್ಪಿದೆ ಹಾಗೆ ನೋಡಿದರೆ ವಿದ್ಯಾ ಶ್ರೀ ಅವರು ಪ್ರಕಟಿಸಿದ ವರ್ಣಮಾಲೆ ಸರಿ ಇದೆ .ತಪ್ಪನ್ನು ತಿದ್ದಿ ಪರಿಷ್ಕರಿಸದೆ ಬಳಸಿದರೆ ತುಳು ಭಾಷೆ ಅಪಭ್ರಂಶ ಗೊಂಡು ವಿರೂಪ ಗೊಳ್ಳುತ್ತದೆ

1 ತುಳುನಾಡಿನ ವ್ಯಾಪ್ತಿ ಉಡುಪಿ ಕಾಸರಗೋಡು ದ.ಕ ಜಿಲ್ಲೆ ತಿಗಳಾರಿ ಲಿಪಿ ತಮಿಳುನಾಡಿನ ತಂಜಾವೂರು ಕಂಚಿ ಧರ್ಮ ಪುರ ಕೃಷ್ಣ ಪುರ ಗಳಲ್ಲಿ ಬಳಕೆಇದೆ ಕರ್ನಾಟಕ ದಲ್ಲಿ ಉತ್ತರ ಕನ್ನಡ ಶಿವಮೊಗ್ಗ ಮಲೆನಾಡಿನಲ್ಲಿ ಬಳಕೆ ಇತ್ತು ತುಳು ಭಾಷೆ ಮತ್ತು  ತುಳುವರು ಇಲ್ಲದ ಕಡೆಯೂ ಬಳಕೆಯಲ್ಲಿತ್ತು
2 ಈ ಲಿಪಿಯಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಿಕ್ಕಿದ್ದು ಅವೆಲ್ಲವೂ ಸಂಸ್ಕೃತ ವೇದ ಮಂತ್ರಗಳು ಆಗಿವೆ  ಆದರೆ ಕೇವಲ ಏಳು‌ ತುಳು ಕೃತಿಗಳು ಮಾತ್ರ ಈ ಲಿಪಿಯಲ್ಲಿ ಇವೆ
3 ಇದು ತುಳು ಭಾಷೆಗೆ ಸೂಕ್ತ ವಾಗಿಲ್ಲ ಇದರಲ್ಲಿ  ತುಳುವಿನ ಎಲ್ಲ ಅಕ್ಷರಗಳು ಇಲ್ಲ ಇದರಲ್ಲಿ ತುಳುವಿನಲ್ಲಿ ಇರುವ ಹ್ರಸ್ವ ಎ ಒ ಗಳು ಇಲ್ಲ ತುಳುವಿನಲ್ಲಿ ಇಲ್ಲದೆ ಇರುವ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ ದೀರ್ಘ ಋ ಇದೆ

4 ಇದು ಸಂಸ್ಕೃತ ವನ್ನು ಬರೆಯಲು ರೂಪುಗೊಂಡ ಲಿಪಿಯಾಗಿದ್ದು ಸಂಸ್ಕೃತ ದ ಎಲ್ಲ ಅಕ್ಷರಗಳು ಇವೆ ಉದಾ ಸಂಸ್ಕೃತ ದಲ್ಲಿ ದೀರ್ಘ ಋ ಇದೆ ಇದರಲ್ಲೂ ಇದೆ ಲೃ ಅನ್ನುವ ವಿಶಿಷ್ಠವಾದ ಅಕ್ಷರ ಸಂಸ್ಕೃತ ದಲ್ಲಿದೆ ಇದರಲ್ಲೂ ಅದು ಇದೆ ಸಂಸ್ಕೃತ ದಲ್ಲಿ ಹ್ರಸ್ವ ಎ ಒ ಗಳು ಇಲ್ಲ ಹಾಗಾಗಿ ಇದರಲ್ಲೂ ಇಲ್ಲ

5 ಇದರಲ್ಲಿ ಹತ್ತು ಸಾವಿರಕ್ಕಿಂತ ಹೆಚ್ಚು ಕೃತಿಗಳು ಸಂಸ್ಕೃತ ದಲ್ಲಿವೆ ಅವುಗಳಲ್ಲಿ 99 .9% ಶೇಕಡ ವೇದ ಮಂತ್ರಗಳು

6 ಒಂದು ಲಿಪಿ ತನ್ನಿಂದ ತಾನೇ ಸೃಷ್ಟಿ ಯಾಗುವುದಿಲ್ಲ ಬಳಕೆಯಲ್ಲಿರುವ ಒಂದು ಲಿಪಿ ಬದಲಾಗುತ್ತಾ ಕಾಲಾಂತರದಲ್ಲಿ ಇನ್ನೊಂದು ಲಿಪಿ ಯಾಗುತ್ತದೆ ಮೂಲ ಲಿಪಿಗೂ ಹೊಸ ಲಿಪಿಗೂ 50- 60% ವ್ಯತ್ಯಾಸ ಉಂಟಾದಾಗ ಅದನ್ನು ಇನ್ನೊಂದು ಲಿಪಿಯಾಗಿ ಗುರುತಿಸುತ್ತಾರೆ ಆ ಲಿಪಿ ಬೆಳೆದ ಪರಿಸರದಲ್ಲಿ ಅದಕ್ಕೆ ಮೂಲವಾಗಿರುವ ಲಿಪಿ ಇರಲೇ ಬೇಕು ತಿಗಳಾರಿ ಲಿಪಿ ಗೆ ಮೂಲವಾದ ಆರ್ಯ ಎಳತ್ತು /ಗ್ರಂಥ ಲಿಪಿ ತಮಿಳುನಾಡಿನ ಪರಿಸರದಲ್ಲಿ ಪ್ರಚಲಿತವಿದೆ ತುಳುನಾಡಿನಲ್ಲಿ ಇಲ್ಲ

7 ತುಳು ಲಿಪಿಯನ್ನು ವಿದ್ಯಾ ಶ್ರೀ ಅವರಿಗೆ ಹೇಳಿಕೊಟ್ಟ ಲಿಪಿ ತಜ್ಞ ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ, ಬೇರೆ ಬೇರೆಯಲ್ಲ ತಿಗಳಾರಿ ಎಂದು ಬರೆದುಬ್ರಾಕೆಟ್ ಒಳಗೆ ತುಳು ಲಿಪಿ ಎಂದು ಅಥವಾ ತುಳು ಲಿಪಿ ಎಂದು ಬರೆದು ಬ್ರಾಕೆಟ್ ಒಳಗೆ ತಿಗಳಾರಿ ಲಿಪಿ ಎಂದು ಬರೆಯಬೇಕು ಎಂದು ತಿಳಿಸಿದ್ದಾರೆ. (ಅವರು ಹೀಗೆ ಹೇಳಿದ ಬಗ್ಗೆ ದಾಖಲೆ ಇದೆ)ಆದರೆ ಇವರಿಂದ ಲಿಪಿ ಕಲಿತು ಪ್ರಚಾರ ಮಾಡುವ ತರಗತಿ ಮಾಡುವ ವಿದ್ಯಾ ಅವರು‌ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ತಪ್ಪು ಮಾಹಿತಿ ಹರಡುತ್ತಿದ್ದಾರೆ ಜೊತೆಗೆ ಬ್ರಾಹ್ಮಣರು ತುಳು ಲಿಪಿಯನ್ನು ತಿಗಳಾರಿ ಎಂದು ಕರೆದು ಅಡಗಿಸಿ ಇಟ್ಟು ತುಳುವರಿಗೆ ಸಿಗದ ಹಾಗೆ ಮಾಡಿದರು ಎಂದು ಹೇಳುತ್ತಾ ಜನರಲ್ಲಿ ಬ್ರಾಹ್ಮಣ ದ್ವೇಷ ಬಿತ್ತಿ ಸಾಮಾಜಿಕ ಸ್ವಾಸ್ಥ್ಯ ವನ್ನು ಹಾಳುಗೆಡವುತ್ತಾ ಇದ್ದಾರೆ
8 ಲಿಪಿ ತಜ್ಞರಾದ ಡಾ .ಪದ್ಮನಾಭ ಕೇಕುಣ್ಣಾಯ ಅವರು ತುಳುವಿಗೆ ಲಿಪಿ ಇರುವುದಾದರೂ ಅದು ಮೂಲತ ತಿಗಳಾರಿ ಲಿಪಿ ಹೊರಗಡೆ ಅದು ತಿಗಳಾರಿ ಎಂದು ಪ್ರಸಿದ್ದಿ ಪಡೆದಿದೆ ಹಾಗಾಗಿ ತುಳು ಮತ್ತು ತಿಗಳಾರಿ ಲಿಪಿ ಬೇರೆ ಎಂದು ಹೇಳುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ತುಳು ಲಿಪಿ ಎಂದು ಮೊದಲಿಗೆ ಗುರುತಿಸಿದ ಡಾ.ವೆಂಕಟ್ರಟಜ ಪುಣಿಚಿತ್ತಾಯರು ಕೂಡ ತಿಗಳಾರಿ ಲಿಪಿ ಮತ್ತು ತುಳು ಲಿಪಿ ಎರಡೂ ಒಂದೇ ಎಂದು ಹೇಳಿದ್ದಾರೆ ಎಂದು ಅವರಿಗೆ ಆತ್ಮೀಯ ರಾಗಿದ್ದ ಡಾ.ಪದ್ಮನಾಭ ಕೇಕುಣ್ಣಾಯ ತಿಳಿಸಿದ್ದಾರೆ.
9 ಲಿಪಿ ತಜ್ಞರಾದ ಡಾ.ಗೀತಾಚಾರ್ಯ ತುಳುವಿಗೆ ಲಿಪಿ ಇರಲಿಲ್ಲ, ಡಾ.ವಿಘ್ನರಾಜ ಭಟ್ ಅವರು ತಿಗಳಾರಿ ಲಿಪಿ ಯನ್ನು ತುಸು ಮಾರ್ಪಡಿಸಿ ತುಳು ಲಿಪಿ ರೂಪಿಸಿದರು ಎಂದು ಹೇಳಿದ್ದಾರೆ
10 ಲಿಪಿ ತಜ್ಞರಾದ ಡಾ.ಗುಂಡಾ ಜೋಯಿಸ್ ಕೆಳದಿ ವೆಂಕಟೇಶ ಜೋಯಿಸ್ ಡಾ.ಪಿವಿ ಕೃಷ್ಣ ಮೂರ್ತಿ ಮೊದಲಾದವರು ಅದು ತಿಗಳಾರಿ ಲಿಪಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ
11  ಇದರಲ್ಲಿ  ತುಳು ಭಾಷೆಯ ಹ್ರಸ್ವ ಎ ಒ ಗಳಿಗೆ ಅಕ್ಷರ ಇಲ್ಲ   ಸಂಸ್ಕೃತ ದಲ್ಲಿ ಮಾತ್ರ ಇರುವ ದೀರ್ಘ ಋ ಇದೆ ಅಲ್ಲದೆ ತುಳುವಿನ ವಿಶಿಷ್ಟ ಉಚ್ಚಾರಣೆ ಗಳಿಗೆ ರೇಖಾ ಸಂಕೇತ ಅಥವಾ ಅಕ್ಷರಗಳು ಇಲ್ಲ
12 ಪ್ರಸ್ತುತ ತಿಗಳಾರಿ ಲಿಪಿಯ ಸುಮಾರು ಹತ್ತು  ಸಾವಿರದ ಹಸ್ತ ಪ್ರತಿಗಳು ಸಿಕ್ಕಿದ್ದು ಇವುಗಳು ತಮಿಳುನಾಡಿನ  ತಂಜಾವೂರು, ಕಂಚಿ ,ಧರ್ಮಪುರಿ,ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ,,ಕಾಸರಗೋಡು ಉಡುಪಿ ದಕ್ಷಿಣ ಕನ್ನಡ ಜಿಲ್ಲೆ, ಕೆಳದಿ ಮೊದಲಾದ ಕಡೆ ಸಿಕ್ಕಿದವುಗಳಾಗಿವೆ ಇವುಗಳಲ್ಲಿ ಏನಿದೆ ಎಂದು ತಿಗಳಾರಿ ಬಲ್ಲವರು ಓದಿದ್ದು .ಇವೆಲ್ಲವೂ ಸಂಸ್ಕೃತ ಭಾಷೆಯಲ್ಲಿಬರೆದ ವೇದ ಮಂತ್ರ ಪುರಾಣ ಕೃತಿಗಳು ಆಗಿವೆ ಎಂದು ತಿಳಿಸಿದ್ದಾರೆ
 13 ತುಳುನಾಡಿನಲ್ಲಿ ಸಿಕ್ಕ ಹಸ್ತ ಪ್ರತಿಗಳು ಸುಮಾರು ಒಂದೂವರೆ ಸಾವಿರ ಇವುಗಳನ್ನು ಕೂಡ ತೆರೆದು ಓದಿದ್ದು ಇವುಗಳಲ್ಲಿ ಏಳು ತುಳು ಭಾಷೆಯ ಕೃತಿಗಳು ,ಒಂದು ಕನ್ನಡ ಭಾಷೆಯ ಜನಪದ ಹಾಡುಗಳು ಬಿಟ್ಟರೆ ಉಳಿದವುಗಳೆಲ್ಲ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಎಂದು ಧರ್ಮಸ್ಥಳದ ಹಸ್ತ ಪ್ರತಿ ಅಧ್ಯಯನ ಕೇಂದ್ರದ ಮುಖ್ಯಸ್ಥ ರಾದ ಡಾ ವಿಘ್ನರಾಜ ಭಟ್ ತಿಳಿಸಿದ್ದಾರೆ
15 ತಿಗಳಾರಿ ಲಿಪಿ ತೀರ ಇತ್ತೀಚಿನ ವರೆಗೂ ಬಳಕೆಯಲ್ಲಿತ್ತು ಹಾಗಾಗಿ ಅದರಲ್ಲಿನ ಹತ್ತು ಸಾವಿರಕ್ಕಿಂತ ಹೆಚ್ಚಿನ ಸಂಸ್ಕೃತ ಹಸ್ತಪ್ರತಿ ಗಳು ಲಭ್ಯವಾಗಿವೆ ಆದರೆ ತುಳು ಭಾಷೆಯ ಕೃತಿಗಳು ಲಭಿಸಿದ್ದು ಕೇವಲ ಏಳು
16 ತುಳುನಾಡಿನಲ್ಲಿ ಈ ಲಿಪಿಯ ಒಂದೂವರೆ ಸಾವಿರದಷ್ಟು ಸಂಸ್ಕೃತ ಹಸ್ತಪ್ರತಿ ಗ್ರಂಥಗಳು ಸಿಕ್ಕಿದೆ ಆದರೆ ತುಳುವಿನದ್ದು ಸಿಕ್ಕಿದ್ದು ಏಳು ಮಾತ್ರ ಒಂದೊಮ್ಮೆ ಇದು ತುಳು ಭಾಷೆ ಬರೆಯಲು ಬಳಕೆಗೆ ಇದ್ದಿದ್ದರೆ ಲಿಪಿ ಆಗಿರುತ್ತಿದ್ದರೆ ಕೊನೆಯ ಪಕ್ಷ ತುಳುನಾಡಿನಲ್ಲಿ ಸಿಕ್ಕ ಹಸ್ತಪ್ರತಿ ಗಳಲ್ಲಿಯಾದರೂ ಹೆಚ್ಚಿನ ಕೃತಿಗಳು ತುಳುಭಾಷೆಯದು ಆಗಿರುತ್ತಿತ್ತು ,ತಿಗಳಾರಿ ಇತ್ತೀಚಿನ ವರೆಗೂ ಬಳಕೆಯಲ್ಲಿದ್ದ ಕಾರಣ ತುಳುವಿನ  ಎಲ್ಲಾ ಹಸ್ತಪ್ರತಿ ಗಳು ಕಳೆದು ಹೋಗಿರುವ ಸಾಧ್ಯತೆ ಇಲ್ಲ ಹಾಗೆ ಕಳೆದು ಹೋಗುತ್ತಿದ್ದರೆ ಇದೇ ಲಿಪಿಯ ಲ್ಲಿ ಬರೆದ ಸಂಸ್ಕೃತ ವೇದ ಮಂತ್ರಗಳ ಹಸ್ತ ಪ್ರತಿಗಳು  ಕೂಡ ಉಳಿಯುತ್ತಿರಲಿಲ್ಲ ಹಾಗಾಗಿ  ಈ ಲಿಪಿಯಲ್ತುಲಿ ಳುಭಾಷೆಯಲ್ಲಿ ಲಿಖಿತ ಸಾಹಿತ್ಯ ರಚನೆ ಆದದ್ದು ತೀರಾ ತೀರಾ ಕಡಿಮೆ  ಎಂದು ಹೇಳಬಹುದು .ಬನ್ನಂಜೆ ಗೋವಿಂದ ಆಚಾರ್ಯರು ತೌಳವ ಬ್ರಾಹ್ಮಣರು ಇದನ್ನು ಬಳಕೆಗೆ ತಂದ ಕಾರಣ ಇದಕ್ಕೆ  ತುಳು ಲಿಪಿ ಎಂದು ಹೆಸರು ಇದನ್ನು ಬೇರೆಕಡೆ ತಿಗಳಾರಿ ಎಂದು ಕರೆಯುತ್ತಾರೆ. ಇದು ತುಳು ಭಾಷೆಯ ಲಿಪಿ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

17 ಈ ಎಲ್ಲಾ ಆಧಾರಗಳು  ತಿಗಳಾರಿ ಮತ್ತು ತುಲು ಲಿಪಿ ಎರಡೂ ಒಂದೇ ಬೇರೆ ಬೇರೆಯಲ್ಲ  ಎಂದು ಪ್ರೂವ್ ಮಾಡುತ್ತವೆ ಇದು ಮೂಲತ ತಿಗಳಾರಿ ಲಿಪಿ ತುಳುನಾಡಿನ ಕೆಲವೆಡೆ ಮಾತ್ರ ಇದನ್ನು ತುಳು ಲಿಪಿ ಎಂದು ಕರೆದಿದ್ದಾರೆ
18 "ತಿಗಳಾರಿ ಲಿಪಿ ಯನ್ನು ತಮಿಳು ನಾಡಿನ ತಂಜಾವೂರು ಕಂಚಿಗಳಲ್ಲಿ ವೇದಾಧ್ಯಯನ ‌ಮಾಡಲು ಹೋದ ತುಳುನಾಡು ಹಾಗೂ ಮಲೆನಾಡಿನ ಬ್ರಾಹ್ಮಣರು ಕಲಿತು ಬಳಕೆಗೆ ತಂದ ಕಾರಣ ಅದು ತುಳು ನಾಡು ಮಲೆನಾಡಿನ ಪರಿಸರದಲ್ಲಿಯೂ ಹರಡಿತು ,ತುಳುನಾಡಿನ ಕೆಲವೆಡೆ ಅದನ್ನು ತುಳು ಲಿಪಿ ಎಂದು ಕರೆದಿದ್ದಾರೆ "ಎಂದು ಡಾ ವಿಘ್ನರಾಜ ಭಟ್ ಡಾ ವೆಂಕಟೇಶ ಜೋಯಿಸ್ ಡಾ ಗುಂಡಾ ಜೋಯಿಸ್ ಡಾ ದೇವರ ಕೊಂಡಾ ರೆಡ್ಡಿ ಡಾ ಪದ್ಮನಾಭ ಕೇಕುಣ್ಣಾಯ ಡಾ ವೆಂಕಟ್ರಾಜ ಪುಣಿಚಿತ್ತಾಯ ,ಡಾ ಬನ್ನಂಜೆ ಗೋವಿಂದಾಚಾರ್ಯರ ಮೊದಲಾದ ಲಿಪಿ ತಜ್ಞರು, ವಿದ್ವಾಂಸರು ಅಭಿಪ್ರಾಯಪಡುತ್ತಾರೆ
19 ಈ ಲಿಪಿಯನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದದ್ದು ಅಲ್ಲ ತುಳುನಾಡ ಹವ್ಯಕ ಬ್ರಾಹ್ಮಣರು ಕೋಟ ಕರಾಡ ಚಿತ್ಪಾವನ ಬ್ರಾಹ್ಮಣರು, ಶಿವಮೊಗ್ಗ ಉತ್ತರ ಕೆಳದಿ ಯ ಬ್ರಾಹ್ಮಣರು ಈ ಲಿಪಿಯನ್ನು ಬಳಕೆ ಮಾಡುತ್ತಿದ್ದರು ತಂಜಾವೂರು ಕಂಚಿಯ ಬ್ರಾಹ್ಮಣರು ಬಳಕೆ ಮಾಡುತ್ತಿದ್ದರು ತುಳುನಾಡಿನಲ್ಲಿ ಸುಮಾರು ಒಂದೂವರೆ ಸಾವಿರ ಸಂಸ್ಕೃತ ಹಸ್ತ ಪ್ರತಿ ಗಳು ಈ ಲಿಪಿಯಲ್ಲಿ ಸಿಕ್ಕಿದ್ದು ಅದರಲ್ಲಿ ಹವ್ಯಕ ಕೋಟ ಚಿತ್ಪಾವನ ಕರಾಡ ಮರಾಠಿ ಬ್ರಾಹ್ಮಣರು ಬರೆದ ಕೃತಿಗಳು ಇವೆ ಇವುಗಳಲ್ಲಿ ತುಳುಭಾಷೆಯಲ್ಲಿ ಇರುವ ಕೃತಿಗಳು ಕೇವಲ ಏಳು ಮಾತ್ರ .ಈ ಲಿಪಿಯ ಹತ್ತ ಸಾವಿರಕ್ಕಿಂತ ಹೆಚ್ಚು ಹಸ್ತಪ್ರತಿ ಸಂಸ್ಕೃತ ವೇದ ಮಂತ್ರಗಳ ಕೃತಿಗಳು ಸಿಕ್ಕಿದ್ದು ಇವು ಶಿವಮೊಗ್ಗ ಕೆಳದಿ ರಾಮಚಂದ್ರಾಪುರ ಉತ್ತರ ಕರ್ನಾಟಕ ದ ತುಳುವೇತರ ಬ್ರಾಹ್ಮಣ ರ ಮನೆಯಲ್ಲಿ ಸಿಕ್ಕಿವೆ ಮೈಸೂರು ನಲ್ಲೂ ಬೆಂಗಳೂರಿನಲ್ಲಿ ತಮಿಳುನಾಡಿನ ತಂಜಾವೂರು  ಕಂಚಿ ಯ ತುಳುವರಲ್ಲದ ಇತರ ಬ್ರಾಹ್ಮಣರ ಮನೆಗಳು ಬರೆದಿರುವುದು ಸಿಕ್ಕಿವೆ. ಹವ್ಯಕ ಬ್ರಾಹ್ಮಣರು ಹವ್ಯಕರ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡುತ್ತಿದ್ದು ಹವ್ಯಕರ ರಾಮಚಂದ್ರಾಪುರ ಮಠದಲ್ಲಿ ಇಂಥಹ ನೂರಕ್ಕಿಂತ ಹೆಚ್ಚಿನ ಪತ್ರಗಳಿವೆ ಹಾಗಾಗಿ ಇದನ್ನು ಕೇವಲ ತುಳು ಬ್ರಾಹ್ಮಣರು ಬಳಕೆಗೆ ತಂದರು ಎನ್ನುವುದು ಸರಿಯಲ್ಲ

20 ವಿದ್ಯಾ ಶ್ರೀ ಯವರು ತಿಗಳಾರಿ ಲಿಪಿ ಮತ್ತು ತುಳು ಲಿಪಿ ಬೇರೆ ಬೇರೆ ಎಂಬುದಕ್ಕೆ ಆಧಾರವಾಗಿ ದೇವರಾಜ ಸ್ವಾಮಿ ಅವರ ಕೃತಿಯಲ್ಲಿನ ತಿಗಳಾರಿ ಮತ್ತು ತುಳು ವರ್ಣಮಾಲೆ ಚಿತ್ರ ಚಿತ್ರವನ್ನು ಪೇಸ್ ಬುಕ್ ನಲ್ಲಿ ಹಾಕಿದ್ದು ಅದರಲ್ಲಿನ ತಿಗಳಾರಿ ಲಿಪಿಯನ್ನು ವಿದ್ಯಾ ಶ್ರೀ ಅವರು ಹೇಳಿಕೊಡುವ ಲಿಪಿ ಹೋಲುತ್ತದೆ ಹೊರತು ತುಳು ವರ್ಣ ಮಾಲೆಯಲ್ಲಿ ಇರುವ ಹಾಗೆ ಇಲ್ಲ ಅವರು ಅವರು ಹಾಕಿದ ತಿಗಳಾರಿ ಲಿಪಿ ಚಿತ್ರ ದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತ್ರ ಇರುವ   ದೀರ್ಘ ಋ ಇದೆ ವಿದ್ಯಾ ಅವರು ಹೇಳಿಕೊಡುವ ಲಿಪಿ ಯಲ್ಲೂ ಇದೆ ಅವರು ಪ್ರೂಫ್ ಗಾಗಿ ಹಾಕಿದ ತುಳು ವರ್ಣಮಾಲೆಯ ಲ್ಲಿ ದೀರ್ಘ ಋ ಇಲ್ಲ ಅದೇ ರೀತಿಯಲ್ಲಿ ವಿದ್ಯಾ ಶ್ರೀ ಹೇಳಿಕೊಡುವ ಎಲ್ಲಾ ಅಕ್ಷರಗಳು ಅವರೇ ಪ್ರೂಫ್ ಗಾಗಿ ನೀಡಿದ ತಿಗಳಾರಿ ಮತ್ತು ತುಳು ವರ್ಣಮಾಲೆ ಗಳಲ್ಲಿ ತಿಗಳಾರಿ ಲಿಪಿ ಯನ್ನು ಹೋಲುತ್ತವೆ ಇದನ್ನು ಕೇಳಿದಾಗ ನಮ್ಮ ಗುರುಗಳು ತುಳು ಎಂದು ಹೇಳಿದ್ದಾರೆ ಎನ್ನುತ್ತಾರೆ. ಅವರ ಗುರುಗಳಾದ ವಿಘ್ನರಾಜ ಭಟ್ ತಿಗಳಾರಿ ಲಿಪಿ ಮತ್ತು ತುಳು ಎರಡೂ ಒಂದು ಎಂದು ಹೇಳಿದ್ದಾರೆ ಆದರೆ ಇವರು ತಿಗಳಾರಿ ಮತ್ತು ತುಳು ಬೇರೆ ಎಂದು ಹೇಳುತ್ತಿದ್ದಾರೆ
ಇವರು ಹೇಳಿಕೊಡುವ ಲಿಪಿ ತುಳ ವರ್ಣಮಾಲೆ ಬದಲಿಗೆ ತಿಗಳಾರಿ ಲಿಪಿ ಯಂತೆ ಇದೆ ಎಂದಾಗ ಗುರುಗಳು ಹೇಳಿದ್ದಾರೆ ಎಂದು ಹೇಳಿದ್ದಾರೆ
ಯಾವುದೇ ಲಿಪಿಯನ್ನು ಯಾರು ಕೂಡ ಬಳಕೆ ಮಾಡಬಹುದು ಆದರೆ ಸತ್ಯವನ್ನು ಮುಚ್ಚಿಟ್ಟು ಅದು ತುಳು ಭಾಷೆಯ ಸ್ವಂತ ಲಿಪಿ ಎಂದು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ ©ಡಾ.ಲಕ್ಷ್ಮೀ ಜಿ ಪ್ರಸಾದ

(ಲಿಪಿ ತಜ್ಞರಾದ ಜಮದಗ್ನಿ ಅಗ್ನಿ ಹೋತ್ರಿಯವರು ಇದು ತಿಗಳಾರಿ ಲಿಪಿ ಎಂದು ತಿಳಿಸಿ ,ವಿದ್ಯಾ ಅವರು ಹೇಳಿಕೊಡುತ್ತಾ ಇರುವ ತಿಗಳಾರಿ (ತುಳು) ಲಿಪಿಯಲ್ಲಿ ಅನೇಕ ದೋಷಗಳು ಇರುವುದನ್ನು ಗಮನಿಸಿ ಪೇಸ್ ಬುಕ್ ಮೂಲಕ  ವಿದ್ಯಾ ಅವರಿಗೆ  ನೀಡಿದ ಸೂಚನೆಗಳು--
Vidya Shree S Shetty ನಾವು ದಕ್ಷಿಣ ಕನ್ನಡದವರಲ್ಲ ,ತುಳು ಬರುವುದಿಲ್ಲ .ಲಿಪಿಯ ದೃಷ್ಟಿಯಿಂದ ಸಲಹೆಗಳನ್ನು ಕೊಡಬಲ್ಲೆ. ನೀವು ಪ್ರಸ್ತುತ ಹೇಗೆ ಕಲಿಸುತ್ತಿದ್ದೀರೋ ನನಗೆ ತಿಳಿಯದು. ನೀವು ಕಲಿಸುವ chart ಕೊಟ್ಟರೆ ಸಲಹೆ ನೀಡಬಲ್ಲೆ.ಉಕಾರ,ಉಕಾರದ ಕಾಗುಣಿತಕ್ಕೆ special forms ಇದೆ.ಕು,ಗು,ಜು ಇತ್ಯಾದಿಗಳಿಗೆ circle ಕೆಳಗೆ ಬರೆಯಬಾರದು. ಕೆಲವು ಅಕ್ಷರಗಳಾದ ಐ,ಖ,ಙ,ಞ,ಛ,ಟ,ಝ ಇತ್ಯಾದಿಯಲ್ಲಿ ಮಾರ್ಪಾಡು ಬೇಕು. ಇಲ್ಲಿ ಸಂಯುಕ್ತಾಕ್ಷರ ಕನ್ನಡದಂತೆ ಬರೆಯುವುದಿಲ್ಲ. ಎರಡೂ ಒಂದೇ size ಇರಬೇಕು,ಚಿಕ್ಕದು ದೊಡ್ಡದು ಇರಬಾರದು.ಯ,ರ,ಲ,ವ,ಮ ಇವುಗಳಿಗೆ ಸ್ಪೇಸಿಯಲ್ ರೂಪಗಳು ಇವೆ, ವ್ಯಂಜನಕ್ಕೆ ಜೋಡಿಸಿ ಬರೆಯಬೇಕು ಬಿಡಿಸಿ ಬರೆಯಬಾರದು,ಸಾಮಾನ್ಯದ ತರಹ ಬರೆಯಬಾರದು. ವ್ಯಂಜನದ ಹಿಂದೆ ಅನುಸ್ವಾರ ಬಳಸುವುದಿಲ್ಲ,ಮಲಯಾಳದಂತೆ ಅಂದ ಬದಲು ಅನ್ದ ಎಂದೇ ಬರೆಯುತ್ತಾರೆ. ನನಗೆ ತಿಳಿದಿರುವ ಮಟ್ಟಿಗೆ ಪ್ರತ್ಯೇಕ ಅಂಕಿಗಳು ಇಲ್ಲ,ಕನ್ನಡ ಸಂಖ್ಯೆಗಳನ್ನೇ ಬಳಸುತ್ತಾರೆ. ಪ್ರತ್ಯೇಕ ಸಂಖ್ಯೆ ಎನ್ನುವ ಹಸ್ತಪ್ರತಿಗಳ ಲಿಪಿ ಮಲಯಾಳ ಲಿಪಿ. ವ್ಯಂಜನಗಳ ಸಂಯುಕ್ತಾಕ್ಷರ ಬಹಳ ಕ್ಲಿಷ್ಟ ಕನ್ನಡದಂತೆ ಸುಲಭವಲ್ಲ.ಕ್ಕ,ತ್ತ,ತ್ಕ,ದ್ಧ,ತ್ಮ,ಕ್ಷ ,ರ್ಯ,ರ್ವ,ಸ್ಥetc ಗಳಲ್ಲಿ ಎರಡು ಅಕ್ಷರಗಳನ್ನು ಹೊಂದಿಸಿ ಅಕ್ಷರ ಬರೆಯುತ್ತಾರೆ, ಕೆಳಗೆ ಸಾಮಾನ್ಯವಾಗಿ ಬರೆಯುವುದಿಲ್ಲ.ಇ ,ಈ,ಉ ಸ್ವಲ್ಪ ಬೇರೆ ತರಹ ಬರೆಯುತ್ತಾರೆ.ಟ್ ,ತ್ ,ಕ್ ,ನ್ ಇವುಗಳು ವಿಶಿಷ್ಟವಾಗಿ ಬರೆಯುತ್ತಾರೆ,ಹಲಂತವನ್ನು ಸಾಮನ್ಯವಾಗಿ ಹಾಕುವುದಿಲ್ಲ.ಹೀಗೆ ಅನೇಕ ಕಲಿಕೆಯಲ್ಲಿ ಬದಲಾವಣೆಗಳು ಆವಶ್ಯಕ.ನಿಮ್ಮ ಪತ್ರಿಕೆಯ font ನಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಾಲ್ಕೈದು ಹಸ್ತಪ್ರತಿಗಳನ್ನು ಗಮನಿಸಿದರೆ ಸರಿಯಾದ ರೂಪಗಳು ರೂಪಗಳು ಯಾವುವು ಎಂದು ನಮಗೆ ಗೊತ್ತಾಗುವುದು.ನಮ್ಮ ಉದ್ದೇಶ ಇಷ್ಟೇ ಜನರು ಸರಿಯಾಗಿ ಕಲಿಯಲಿ.)




Friday 5 May 2017

ನನ್ನ ಪ್ರಿಯ ವಾದ ಭೂತಾರಾಧನೆಯ ಅಧ್ಯಯನ ವನ್ನು ಬಿಟ್ಟು ಬಿಡಲೇ ©ಡಾ ಲಕ್ಷ್ಮೀ ಜಿ ಪ್ರಸಾದ

ನನ್ನ ಪ್ರಿಯವಾದ ಭೂತಾರಾಧನಾ ಕ್ಷೇತ್ರವನ್ನು ಬಿಟ್ಟು ಬಿಡಲೇ ?

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಹಾಡು ಹಗಲಿನ ಹೊತ್ತಿನಲ್ಲಿ ಸಸೌಮಾ ಭಟ್ ಎಂಬ ಮುಗ್ಧ ಕಾಲೇಜ್ ಹುಡುಗಿಯನ್ನು ಪುತ್ತೂರು ಕಬಕ ಬಳಿ ದಾರುಣವಾಗಿ ಕೊಚ್ಚಿ ಕೊಲ್ಲಲಾಗಿತ್ತು! ಅದು ನನ್ನನ್ನು ದಿಗಿಲಿಗೀಡು ಮಾಡಿದ ಮೊದಲ ಪ್ರಕರಣ ,(ಆಗಷ್ಟೇ ನಮ್ಮ ಊರಿನಲ್ಲಿ ಹೆಣ್ಣು ಮಕ್ಕಳನ್ನು ಕಾಲೇಜ್ ಗೆ ಕಳುಹಿಸಲು ಆರಂಭ ಮಾಡಿದ್ದರು ,ಈ ಪ್ರಕರಣ ಹೆತ್ತವರನು ತಲ್ಲಣಕ್ಕೆ ಒಳಮಾಡಿತ್ತು ಈ ಪ್ರಕರಣದ ನಂತರ ಅನೇಕ ಹೆತ್ತವರು ತಮ್ಮ ಹೆಣ್ಣು ಮಕ್ಕಳನ್ನು ಹೊರಗೆ ಕಳುಹಿಸಲು ಹಿಂಜರಿದರು ,ಓದನ್ನು ನಿಲ್ಲಿಸಿ ಮದುವೆ ಮಾಡಿದರು!)

ಅಲ್ಲಿಂದ ನಂತರ ಅನೇಕ ಪ್ರಕರಣಗಳು ಇಂಥದ್ದು ನಡೆದವು ,ಉಜಿರೆಯ ಸೌಜನ್ಯ ,ಉಡುಪಿಯ ಕ್ಷಮಾ .ಶಿವಮೊಗ್ಗದ ಹುಡುಗಿ (ಹೆಸರು ನೆನಪಾಗುತ್ತಿಲ್ಲ )ದೆಹಲಿಯ ಹುಡುಗಿ ನಿರ್ಭಯ ,ಮೊನ್ನೆ ಮೊನ್ನಿನ ಕೇರಳದ ಹುಡುಗಿ ಜಿಷಾ ..ಹೀಗೆ ಈ ಪಟ್ಟಿ ಹನುಮಂತನ ಬಾಲದ ಹಾಗೆ ಬೆಳೆಯುತ್ತಲೇ ಹೋಗುತ್ತದೆ .

ಇವರೆಲ್ಲ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾದವರು ,ಇನ್ನು ಅದೃಷ್ಟವಶಾತ್ ಸಾಯದೆ ಉಳಿದ ಅನೇಕರು ಇದ್ದಾರೆ.ಇನ್ನು ಅತ್ಯಾಚಾರ ಯತ್ನ ಕ್ಕೆ ಒಳಗಾದವರು ಲೈಂಗಿಕ ಕಿರುಕುಳಕ್ಕೆ ಒಳಗಾದವರು ಅಸಂಖ್ಯಾತ ಮಂದಿ ಇದ್ದಾರೆ ,

ಅತ್ಯಾಚಾರ ಮಾಡಿ ಕೊಂದವರಿಗೆ ಶಿಕ್ಷೆ ಆಗುದಿಲ್ಲ ಇನ್ನು ಉಳಿದವರಿಗೆ ಏನು ಶಿಕ್ಷೆ ಆಗುತ್ತದೆ ?
ಮೊನ್ನೆ ಬೆಂಗಳೂರಿನಲ್ಲಿ ಅತ್ಯಾಚಾರ ಯತ್ನಿಸಿದ ಒಬ್ಬನ ಮೇಲೆ ಪೋಲಿಸ್ ರು ದುಡ್ಡಿನ ಆಮಿಷಕ್ಕೆ ಒಳಗಾಗಿ ಕೇಸ್ ದಾಖಲಿಸಲಿಲ್ಲ ,ಪಿಜಿ ಮಾಲೀಕ ತನ್ನ ಪಿಜಿ ಹೆಸರು ಹಾಳಾಗುತ್ತದೆ ಎಂಬ ಕಾರಣಕ್ಕೆ ಕೇಸ್ ದಾಖಲಿಸದಂತೆ ಲಂಚ ನೀಡಿದ್ದ !
ಕೇವಲ ಐದು ಸಾವಿರ ಕೊಟ್ಟರೆ ದೂರು ದಾಖಲು ಮಾಡುವುದಿಲ್ಲ ಹಾಗಾದರೆ ಐವತ್ತು ಸಾವಿರ ಕೊಟ್ಟರೆ ದೂರು ದಾಖಲು ಆಗಿದ್ದರೂ ಬಿ ರಿಪೋರ್ಟ್ ಕೊಡಲಾರರೆ?ಆರೋಪಿ ಬಚಾವಾಗಲು ಎಷ್ಟು ಬೇಕಾದರೂ ದುಡ್ಡು ಕೊಡುತ್ತಾನೆ !ದೂರು ಕೊಟ್ಟವರ ಕಡೆಯಿಂದ ದುಡ್ಡು ಬರುವುದಿಲ್ಲ !

ಇತ್ತೀಚಿಗೆ ಈ ರೀತಿಯ ಪ್ರಕರಣಗಳಲ್ಲಿ 42 % ಸುಳ್ಳು ದೂರು ಗಳು ಎಂದು ಓದಿದೆ .ಕೇವಲ ಐದು ಸಾವಿರ ರುಪಾಯಿಗೆ ದೂರು ದಾಖಲು ಮಾಡದೇ ಇರುವಾಗ ಕೊಟ್ಟ ದೂರನ್ನು ಸುಳ್ಳು ಮಾಡುವುದು ಏನು ಕಷ್ಟದ ವಿಚಾರ !
ಹೆಚ್ಚಿನ ಪ್ರಕರಣಗಳಲ್ಲಿ ದೂರು ಕೊಡುವುದೇ ಇಲ್ಲ ಮರ್ಯಾದೆ ಗೆ ಅಂಜಿ !ದೂರು ಕೊಟ್ಟರೂ ಅದನ್ನು ಸುಳ್ಳು ಎಂದು ಹೇಳಲು ಏನೂ ಕಷ್ಟವಿಲ್ಲ ,ಯಾರೂ ಇಲ್ಲದೆ ಹೊತ್ತು ನೋಡಿಕೊಂಡೆ ಇಂಥದ್ದು ಮಾಡುತ್ತಾರೆ ಒಂದೊಮ್ಮೆ ಸಾಕ್ಷಿಗಳು ಇದ್ದರೂ ಸಾಕ್ಷ್ಯ ನುಡಿಯುದಿಲ್ಲ ತಮಗೇಕೆ ಎಂದು !
ಅದಕ್ಕೆ ಸರಿಯಾಗಿ ತಪ್ಪೆಸಗಿದಾತ ಪಾರಾಗುವ ಸಲುವಾಗಿ ದುಡ್ಡನ್ನು ನೀರಿನಂತೆ ಚೆಲ್ಲಲು ಸಿದ್ಧವಾಗಿರುತ್ತಾನೆ !
ಮತ್ತೆ ಅಲ್ಲ್ಲಿ ಬಿ ರಿಪೋರ್ಟ್ ಕೊಟ್ಟು ಸುಳ್ಳು ದೂರು ಎಂದು ಹೇಳಲು ಅಡ್ಡಿ ಏನಿದೆ ?ಶಿಕ್ಷೆಯ ಭಯವೇ ಇಲ್ಲದಿರುವಾಗ ಇಂಥ ಪ್ರಕರಣಗಳು ನಿರಂತರ ನಡೆಯುತ್ತಲೇ ಇರುತ್ತವೆ !ರಾಜಕೀಯ ಪಕ್ಷಗಳು ಇಲ್ಲೆಲ್ಲಾ ರಾಜಕೀಯ ಮಾಡುತ್ತಾ ವೋಟು ರಾಜಕಾರಣ ಮಾಡುತ್ತವೆ ಹೊರತು ಈ ಪಿಡುಗನ್ನು ಸಮೂಲ ಕಿತ್ತು ಹಾಕಬೇಕೆಂಬ ದೃಢತೆ ಯಾರಿಗೂ ಇಲ್ಲ ಯಾಕೆಂದರೆ ಅತ್ಯಾಚಾರಕ್ಕೆ ಒಳಗಾಗುವವರು ,ಕಿರುಕುಳಕ್ಕೆ ಒಳಗಾಗುವವರು ಅವರ ಮಕ್ಕಳಲ್ಲವಲ್ಲ !ಯಾರೋ ಹೆತ್ತವರು ಸಾಕಿದ ಹೆಣ್ಣು ಮಕ್ಕಳಿಗೆ ಏನಾದರೇನಂತೆ !ತಮಗೆ ವೋಟು ಬಂದರೆ ಸಾಕು !ಅಷ್ಟೇ !

ಅದು ಏನೇ ಇರಲಿ !ದೆಹಲಿಯ ನಿರ್ಭಯ ಪ್ರಕರಣ ನಡೆದಾಗಲೇ ನಾನು ಅಂದುಕೊಂಡಿದ್ದೆ ಇನ್ನು ಮುಂದೆ ಭೂತ ಕೋಲ ರೆಕಾರ್ಡ್ ಗಾಗಿ ಎಲ್ಲೆಂದರಲ್ಲಿ ರಾತ್ರಿ ಹಗಲು ಸುತ್ತುವುದನ್ನು ಬಿಡಬೇಕು ಎಂದು ,ಹಾಗಾಗಿ ರಾತ್ರಿ ರೆಕಾರ್ಡಿಂಗ್ ಗೆ ಹೋಗುದನ್ನು ಹೆಚ್ಚುಕಡಿಮೆ ನಿಲ್ಲಿಸಿದ್ದೇನೆ ,ಇನ್ನು ಹಗಲಿನ ಹೊತ್ತಿನಲ್ಲಿ ಹೋಗುವ ಬಗೆಯೂ ಇನ್ನೊಮ್ಮೆ ಆಲೋಚಿಸುವ ಹಾಗೆ ಆಗುತ್ತಿದೆ !

ಕ್ಷೇತ್ರ ಕಾರ್ಯ ಆಧಾರಿತ ತುಳು ಶೋಧನೆಯ ಹಾದಿ ಬಿಟ್ಟು ಬಿಡಲೇ ?ಇಷ್ಟಕ್ಕೂ ನಾನು ಮಾಡಿದ್ದೇನು ಮಹಾ ಇದೆ !ಮಾಡಿದ್ದಕ್ಕೂ ಸಿಕ್ಕ ಮನ್ನಣೆ ಅಷ್ಟರಲ್ಲೇ ಇದೆ !

  ಕಥೆ ಹಾಗೂ ಲೇಖನ ಬರೆಯುವ ಹವ್ಯಾಸ ನನಗೂ ಇತ್ತು .ಆದರೆ ತುಳು ಶೋಧನೆಯಲ್ಲಿ ಮುಳುಗಿ ಇವೆರಡನ್ನು ನಾನು ನಿರ್ಲಕ್ಷಿಸಿದೆ ಬಹುಶ ಇದನ್ನೇ ನಾನು ಮುಂದುವರಿಸಿದ್ದರೆ ಒಳ್ಳೆಯದಿತ್ತೋ ಏನೋ ಎಂದು ನನಗೆ ಇತ್ತೀಚಿಗೆ ಅನಿಸತೊಡಗಿದೆ !ಯಾಕೆಂದರೆ ಕಥೆ ಲೇಖನಗಳನ್ನು ಮನೆಯೊಳಗೇ  ಫ್ಯಾನ್ ಅಡಿಯಲ್ಲಿ ಆರಾಮ ಕೂತು ಬರೆಯಬಹುದು.ಅದಕ್ಕೆ ಖರ್ಚು ಕೂಡ ಇಲ್ಲ ಮೆದುಳನ್ನು ಸ್ವಲ್ಪ ಖರ್ಚು ಮಾಡಿದರೆ ಸಾಕು ! .ಒಂದಷ್ಟು ಮಾಹಿತಿ ಸಂಗ್ರಹಕ್ಕೆ ಗ್ರಂಥಾಲಯಗಳಿಗೆ ಹೋಗಬೇಕಾಗುತ್ತದೆ ಆದರೆ ಅದನು ಹಗಲಿನ ವೇಳೆಯೇ ಮಾಡಬಹುದು !

   ಆದರೆ ಭೂತಾರಾಧನೆ ಕುರಿತಾದ ಕ್ಷೇತ್ರ ಕಾರ್ಯ ಆಧಾರಿತ ಕೆಲಸಕ್ಕೆ ತುಂಬಾ ಖರ್ಚು ಕೂಡ ಇದೆ ಇದು ಸಾಕಷ್ಟು ಪರಿಶ್ರಮವನ್ನು ಕೂಡ ಬೇಡುತ್ತದೆ .ಜೊತೆಗೆ ರಾತ್ರಿ ಹಗಲೆನ್ನದೆ ಅಪರಿಚಿತ ಪ್ರದೇಶಗಳಲ್ಲಿ ಏಕಾಂಗಿಯಾಗಿ ಓಡಾಡುದು ಇಂದಿನ ದಿನಗಳಲ್ಲಿ ಅಪಾಯಕಾರಿಯಾಗಿದೆ .
ಹಾಗಾಗಿ ಅನೇಕ ಬರಿ ಯೋಚಿಸಿದ್ದೇನೆ ಈ ಕ್ಷೇತ್ರವನ್ನು ಬಿಟ್ಟು ಬಿಡಬೇಕು ಎಂದು !ಆದರೂ ಇದು ಒಂದು ಮಾಯೆಯಾಗಿ ಕಾಡುತ್ತಿದೆ ನನ್ನ !ಬಿಡಬೇಕೆಂದರೂ ಬಿಡಲು ಸಾಧ್ಯವಾಗುತ್ತಿಲ್ಲ !
ಒಂದು ಹೊಸ ಭೂತದ ಹೆಸರು ಕೇಳಿದ ತಕ್ಷಣ ಅದರ ಬಗ್ಗೆ ಪೂರ್ಣ ಮಾಹಿತಿ ಸಂಗ್ರಹ ಆಗುವ ತನಕ ಮನಸು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ !

ಇಷ್ಟರ ತನಕ ನಿರಂತರವಾಗಿ ಕೆಲಸ ಮಾಡಿದ ನನಗೆ ಏನೂ ಮಾಡದೇ ಇರಲು ನನ್ನಿಂದ ಸಾಧ್ಯವಾಗಲಾರದು ಅದಕ್ಕಾಗಿ ಕ್ಷೇತ್ರವನ್ನು ಬದಲಾಯಿಸಬೇಕೆನ್ದುಕೊಂಡಿದ್ದೇನೆ
ಮೊನ್ನೆ ಮೇ ಒಂದರಂದು ತಿಗಳಾರಿ -ತುಳು ಲಿಪಿ ಕಲಿಯುವಾಗಲೂ ನನ್ನ ಮನಸಿನಲ್ಲಿ ಇದೇ ವಿಚಾರ ಕೊರೆಯುತ್ತಿತ್ತು .ಇದನ್ನೇ ಸರಿಯಾಗಿ ಕಲಿತು ತಿಗಳಾರಿ -ತುಳು ಲಿಪಿಯಲ್ಲಿರುವ ಕೃತಿಗಳನ್ನು ಲಿಪ್ಯಂತರ ಮಾಡುವ ಹವ್ಯಾಸವನ್ನು ಮಾಡಿಕೊಳ್ಳಲೇ ಎಂದು ಆಲೋಚಿಸುತ್ತ ಇದ್ದೇನೆ
ಒಟ್ಟಿನಲ್ಲಿ ಇಂಥ ಒಂದೊಂದೇ  ಪ್ರಕರಣವನ್ನು ಕೇಳುವಾಗಲೂ ಆತಂಕ ಹೆಚ್ಚಾಗುತ್ತಲೇ ಇದೆ.ನನ್ನ ಪ್ರಿಯವಾದ ಭೂತಾರಾಧನ ಕ್ಷೇತ್ರವನ್ನು ಬಿಟ್ಟು ಬಿಡಲೇ ?ಬಿಟ್ಟು ನಾನು ನೆಮ್ಮದಿಯಿಂದ ಸಂತಸದಿಂದ ಇರಬಲ್ಲನೆ ?ಗೊತ್ತಿಲ್ಲ ಕಾಲಾಯ ತಸ್ಮೈ ನಮಃ
ಇಷ್ಟಕ್ಕೂ ಕ್ಷೇತ್ರಕಾರ್ಯಕ್ಕೆ ಹೋಗದ ಮಾತ್ರಕ್ಕೆ ನಮಗೆ ಭದ್ರತೆ ಇದೆಯಾ ?ಮನೆಯೊಳಗೇ ಬಂದು ಅತ್ಯಾಚಾರ ಮಡಿದ ಪ್ರಕರಣಗಳ ಬಗ್ಗೆ ಕೂಡ ಓದಿದ್ದೇನೆ !ಹಾಗಂತ ತಲೆ ಗಟ್ಟಿ ಇದೆ ಅಂತ ಬಂಡೆಕಲ್ಲಿಗೆ ಹೊಡೆದು ಕೊಳ್ಳುವುದು ಅಪಾಯವಲ್ಲವೇ ?
ನಾನು ಸ್ವಾಭಾವಿಕವಾಗಿಯೇ ಚಿಕ್ಕಂದಿನಿಂದಲೂ ಧೈರ್ಯಸ್ಥೆ ,ಸಾಮನ್ಯಕ್ಕೆಲ್ಲ ಹೆದರುವವಳು ಅಲ್ಲವೇ ಅಲ್ಲ ,ಆದರೂ ಈ ವಿಚಾರದಲ್ಲಿ ಮನಸು ಆತಂಕಕ್ಕೆ ಒಳಗಾಗುತ್ತಿದೆ ಆರು ತಿಂಗಳ ಹಸುಳೆಯಿಂದ ಹಿಡಿದು 80 ವರ್ಷದ ಅಜ್ಜಿ ತನಕದ ಎಲ್ಲ ವಯೋಮಾನದ ಹೆಂಗಸರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಇದಕ್ಕೆಲ್ಲ ಕೊನೆ ಎಂದು ?
ನನ್ನ ಅಧ್ಯಯನದಲ್ಲಿ ಸಿಕ್ಕ ಮಾಹಿತಿಯನ್ನು ನನ್ನ ಬ್ಲಾಗ್ ನಲ್ಲಿ ಹಾಕಿದ್ದೇನೆ ದಯವಿಟ್ಟು ಓದಿ ನಿಮ್ಮ ಅಭಿಪ್ರಾಯ ತಿಳಿಸಿ ನನಗೆ ಅದುವೇ ಭಾಗ್ಯ
http://laxmipras.blogspot.com